ಲೇಖಕ: admin

ಮಡಿಕೇರಿ ಮೇ 28 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ವೈದ್ಯಕೀಯ ವಿಜ್ಞಾನಗಳ ಬೋಧಕ ಆಸ್ಪತ್ರೆ, ಸ್ನೇಹ ಕ್ಲೀನಿಕ್ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲ್ಲೂಕಿನ ಶಿಶು ಕಲ್ಯಾಣ ಸಂಸ್ಥೆಯಲ್ಲಿ “ಋತು ಸ್ರಾವ ನೈರ್ಮಲ್ಯ ನಿರ್ವಹಣೆ ದಿನ” ಆಚರಿಸಲಾಯಿತು. ಸ್ನೇಹ ಕ್ಲಿನಿಕ್‍ನ ಆಪ್ತ ಸಮಲೋಚಕರಾದ ಪ್ರಮೀಳ ಮಕ್ಕಳಿಗೆ ಋತು ನೈರ್ಮಲ್ಯದ ಕುರಿತು ಮಾಹಿತಿ ನೀಡಿದರು. ಋತು ಸ್ರಾವದ ಸಮಯದಲ್ಲಿ ಮಕ್ಕಳ ದೇಹದಲ್ಲಿ ಬದಲಾವಣೆಗಳು ಉಂಟಾಗುತ್ತವೆ. ಪ್ರತಿ ಹೆಣ್ಣು ಮಗುವು ಹುಟ್ಟುವಾಗಲೇ ಅಂಡಾಶಯದಲ್ಲಿ ನಿರ್ದಿಷ್ಟ ಸಂಖ್ಯೆಯ ಮೂಲ ಜೀವ ಕೋಶಗಳನ್ನು ಹೊಂದಿರುತ್ತದೆ. ಸಾಮಾನ್ಯವಾಗಿ ಮೊದಲ ಋತುಕಾಲವು ಹನ್ನೆರಡು ಮತ್ತು ಹದಿನೈದು ವಯಸ್ಸಿನ ನಡುವೆ ಆರಂಭವಾಗುತ್ತದೆ ಎಂದರು. ನರವ್ಯೂಹದ ಮತ್ತು ಭಾವನಾತ್ಮಕ ಬದಲಾವಣೆಗಳು, ಹೃದಯ ಸಂಬಂಧಿ ಬದಲಾವಣೆಗಳು, ಮಕ್ಕಳು ಈ ಸಮಯದಲ್ಲಿ ಸ್ವಚ್ಚತೆಯಿಂದ ಇರಬೇಕು. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಋತು ಸ್ರಾವದ ಸಮಯದಲ್ಲಿ ಸಮಸ್ಯೆ, ಗೊಂದಲಗಳಿದ್ದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಸ್ನೇಹ…

Read More

ಬೆಂಗಳೂರು ಮೇ 28 NEWS DESK : ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಇಂದು 17.21 ಕೋಟಿ ರೂ.ಗಳ ಸಾಮಾನ್ಯ ಡಿವಿಡೆಂಡ್, 68.69 ಕೋಟಿ ರೂ.ಗಳ ವಿಶೇಷ ಡಿವಿಡೆಂಡ್ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 3 ಕೋಟಿ ರೂ.ಗಳ ಮೊತ್ತದ ಚೆಕ್ ನ್ನು ಕೈಗಾರಿಕಾ ಸಚಿವರು ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರ ಮಾಡಿದರು. ಇಂಧನ ಸಚಿವ ಕೆ.ಜೆ.ಜಾರ್ಜ್, ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಎನ್ .ಮಂಜುಳಾ, ಖುಷ್ಬೂ ಗೋಯಲ್ ಚೌಧರಿ ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಮಡಿಕೇರಿ ಮೇ 28 NEWS DESK : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಕೊಟ್ಟೂರು ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದಲ್ಲಿ 619 ಅಂಕಗಳಿಸಿ ತೃತೀಯ ಸ್ಥಾನಗಳಿಸಿದ ವಿದ್ಯಾರ್ಥಿನಿ ಕೂರನ ಇಂಚರ ಕಿಶೋರ್, ಶಾಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಕೇಕಡ ಮೋಕ್ಷ ಬೋಪಣ್ಣ ಹಾಗೂ ತೃತೀಯ ಸ್ಥಾನ ಪಡೆದ ಮಚ್ಚಾಂಡ ಚಕ್ಷ ಕಾವೇರಮ್ಮ ಅವರನ್ನು ಸನ್ಮಾನಿಸಲಾಯಿತು. ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪಕರಾದ ನಾಟೊಳಂಡ ವಿಜು, ಮುಖ್ಯ ಶಿಕ್ಷಕರಾದ ಕುದುಪಜೆ ಕವನ್ ಹಾಗೂ ಇತರ ಶಿಕ್ಷಕ ವೃಂದದವರು ಹಾಜರಿದ್ದರು.

Read More

ಮಡಿಕೇರಿ ಮೇ 28 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ವಾರ್ಷಿಕ ಮಹಾಸಭೆಯು ವಿರಾಜಪೇಟೆಯ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಕಿವುಡರ ಸಂಘದ ಅಧ್ಯಕ್ಷೆ ಗೌರು ಸೋಮಣ್ಣ, ಕೊಡಗು ಕಿವುಡರ ಸಂಘವು ಏಳು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಮುಂದೆಯೂ ಸಂಘದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು. ಭವಿಷ್ಯದಲ್ಲಿ ಹೆಚ್ಚಿನ ಸದಸ್ಯರನ್ನು ಒಂದೇ ವೇದಿಕೆಯಲ್ಲಿ ಸೇರುವಂತೆ ಮಾಡಬೇಕು. ಕೊಡಗಿನಲ್ಲಿ ಕಿವುಡರ ಶಾಲೆಯನ್ನು ತೆರೆಯಲು ಪ್ರಯತ್ನ ಮಾಡಬೇಕಾಗಿದೆ. ಮಾತ್ರವಲ್ಲದೆ ವಿರಾಜಪೇಟೆಯಲ್ಲಿ ಒಂದು ಕಚೇರಿಯ ಅವಶ್ಯಕತೆ ಇದ್ದು, ಸ್ಥಳೀಯ ಪುರಸಭೆಗೆ ಈ ಕುರಿತು ಮನವಿ ಸಲ್ಲಿಸಬೇಕಾಗಿದೆ ಎಂದರು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜೋಸೆಫ್ ಸ್ಯಾಮ್, ಚಾರ್ಟೆಡ್ ಅಕೌಂಟೆಂಟ್ ಈಶ್ವರ್ ಭಟ್, ಸಂಘದ ಕ್ರೀಡಾ ಪರಿಷತ್ ಅಧ್ಯಕ್ಷ ವಿ.ಕುಮಾರ್, ರಾಜೇಶ್, ಚಂದನ್ ಹಾಜರಿದ್ದರು. ಭಾನು ನಿರೂಪಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ರಂಜಿತ್ ಪುದಿಯತಂಡ ವಾರ್ಷಿಕ ವರದಿಯನ್ನು ಮಂಡಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ,…

Read More

ಮಡಿಕೇರಿ ಮೇ 28 NEWS DESK : ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕುಶಾಲನಗರ ತಾಲೂಕಿನ ದುಬಾರೆ ಸಾಕಾನೆ ಶಿಬಿರಕ್ಕೆ ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಪ್ರವಾಸಿಗರನ್ನು ನಿರ್ಬಂಧಿಸಿದೆ. ದುಬಾರೆ ಸಾಕಾನೆ ಶಿಬಿರದಲ್ಲಿ ಹರಿಯುತ್ತಿರುವ ಕಾವೇರಿ ನದಿ ನೀರಿನ ಮಟ್ಟವು  ದಿನೇ ದಿನೇ ಹೆಚ್ಚಾಗುತ್ತಿದ್ದು, ಪ್ರವಾಸಿಗರನ್ನು ಸಾಕಾನೆ ಶಿಬಿರಕ್ಕೆ  ದೋಣಿ ಮುಖಾಂತರ ನದಿ ದಾಟಿಸುವುದು ತುಂಬಾ ಕಷ್ಟಕರ ಹಾಗೂ ಅಪಾಯಕಾರಿಯಾಗಿರುತ್ತದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ದುಬಾರೆ ಸಾಕಾನೆ ಶಿಬಿರಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಪ್ರವಾಸಿಗರನ್ನು ನಿರ್ಬಂಧಿಸಿ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

Read More

ಮಡಿಕೇರಿ ಮೇ 28 NEWS DESK : ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರ 93ನೇ ಜನ್ಮದಿನದ ಪ್ರಯುಕ್ತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ಬೆಂಗಳೂರಿನಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ ನಡೆಯಿತು. ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಹೆಚ್.ಎಂ.ರಮೇಶ್ ಗೌಡ  ನೇತೃತ್ವದಲ್ಲಿ ಜಯನಗರ 9ನೇ ಬ್ಲಾಕ್ ಬನ್ನಿ ಬೇಕರಿ ಸರ್ಕಲ್ ನಿಂದ ಜಯನಗರ 4ನೇ ಬ್ಲಾಕ್ ಕಾಂಪ್ಲೆಕ್ಸ್ ಮಾರ್ಗವಾಗಿ ಸೌತ್ ಎಂಡ್ ಸರ್ಕಲ್ ನಲ್ಲಿರುವ ಗುಣಶೀಲ ಆಸ್ಪತ್ರೆಯವರೆಗೆ ಸುಮಾರು 6 ಕಿ.ಮೀ ಜಾಥಾ ನಡೆಸಿದ ಜೆಡಿಎಸ್ ಕಾರ್ಯಕರ್ತರು ಕ್ಯಾನ್ಸರ್ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಕುರಿತು ಅರಿವು ಮೂಡಿಸಿದರು.  ಹೋಟೆಲ್ ಗಳಲ್ಲಿ ಕಲರ್ ಮತ್ತು ಕೆಮಿಕಲ್ ಬಳಸಿ ಆಹಾರವನ್ನು ತಯಾರಿಸಿ ಮಾರಾಟ ಮಾಡದಂತೆ ವಿವಿಧ ಸಲಹೆ ಸೂಚನೆಗಳನ್ನೊಳಂಗಡ ಕರಪತ್ರವನ್ನು ಹೊಟೇಲ್, ಅಂಗಡಿ ಮುಂಗಟ್ಟುಗಳಿಗೆ ಹಾಗೂ ಸಾರ್ವಜನಿಕರಿಗೆ ವಿತರಿಸಲಾಯಿತು.  ಕ್ಷೇತ್ರದ ಅಧ್ಯಕ್ಷ  ಟಿ.ಆರ್ ತುಳಸಿರಾಮ್ …

Read More

ಮಡಿಕೇರಿ ಮೇ 28 NEWS DESK : ಮುಂಬರುವ ಚುನಾವಣೆಯ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ವಲಯಗಳಲ್ಲಿ ಪಕ್ಷ ಸಂಘಟನೆ ಮತ್ತು ಬಲವರ್ಧನೆಗೆ ಕೆಪಿಸಿಸಿಯ ಆದೇಶದ ಮೇರೆಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ಸಮಿತಿ ವ್ಯಾಪ್ತಿಗೆ ಡಿಸಿಸಿಯಿಂದ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.  ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ಆದೇಶದ ಮೇರೆಗೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಗೆ ಕೆಪಿಸಿಸಿ ಸದಸ್ಯ ಹೆಚ್.ಎಂ.ನಂದಕುಮಾರ್, ಡಿಸಿಸಿ ಉಪಾಧ್ಯಕ್ಷ ಸಾಜು ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್, ವಿ.ಪಿ.ಸುರೇಶ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್‍ದಾಸ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್ ಕಾರ್ಯನ್ಮಖರಾಗಿದ್ದಾರೆ. ಉಸ್ತುವಾರಿಗಳು ಆಯ ವಲಯಗಳಿಗೆ ಭೇಟಿ ನೀಡಿ ಪಕ್ಷದ ಹಿರಿಯ ಹಾಗೂ ಪ್ರಾಮಾಣಿಕ ಕಾರ್ಯಕರ್ತರನ್ನು ಗುರುತಿಸಿ ವಲಯ ಸಮಿತಿಗಳನ್ನು ರಚಿಸುವುದು ಅಥವಾ ಹಾಲಿ ಇರುವ ಅಧ್ಯಕ್ಷರುಗಳನ್ನು ನೇಮಿಸುವಲ್ಲಿ ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಲು ಧರ್ಮಜ ಉತ್ತಪ್ಪ ಸೂಚನೆ ನೀಡಿದ್ದಾರೆ. ಮಡಿಕೇರಿ ಬ್ಲಾಕ್…

Read More

ಮಡಿಕೇರಿ ಮೇ 28 NEWS DESK : ಮರ ಬಿದ್ದು ಸಾವನ್ನಪ್ಪಿದ ಬಾಡಗ ಬಾಣಂಗಾಲ ಗ್ರಾಮದ ಪಿ.ಸಿ.ವಿಷ್ಣು ಬೆಳ್ಳಿಯಪ್ಪ ಅವರ ಕುಟುಂಬಕ್ಕೆ ಜಿಲ್ಲಾಧಿಕಾರಿಗಳು ರೂ.5 ಲಕ್ಷ ಪರಿಹಾರದ ಆದೇಶ ಪ್ರತಿಯನ್ನು ಹಸ್ತಾಂತರಿಸಿದರು.

Read More

ಮಡಿಕೇರಿ ಮೇ 28 NEWS DESK : ತಿತಿಮತಿ ಗ್ರಾಮ ಪಂಚಾಯತಿನ ಒಂದು ವಾರ್ಡಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪಿ.ಕೆ.ಗಣೇಶ್  ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಬಿಜೆಪಿ ಬೆಂಬಲಿತ ಶಂಕರ್ ವಿರುದ್ಧ 308 ಮತ ಗಳಿಸಿ ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗೆ 113 ಮತ ಬಂದಿದ್ದು, 13 ಮತ ತಿರಸ್ಕೃತಗೊಂಡಿದೆ.  ಗೆಲುವಿನ ಬಳಿಕ ಮಾತನಾಡಿದ ಪಿ.ಕೆ.ಗಣೇಶ, ತನ್ನ ಗೆಲುವಿಗಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷ ನವೀನ್ ಕುಮಾರ್ ಮತ್ತು ಪಕ್ಷದ ಪ್ರಮುಖರು, ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದರು. ಈ ಸಂದರ್ಭದಲ್ಲಿ ದೇವರಪುರ ವಲಯ ಅಧ್ಯಕ್ಷ ಭಸಂತ್ ಕುಮಾರ್, ವಿನಯ್, ಸತೀಶ್, ಪ್ರಕಾಶ್ ಹಾಗೂ ಕಾರ್ಯಕರ್ತರು ಹಾಜರಿದ್ದರು.

Read More

ಮಡಿಕೇರಿ ಮೇ 28 NEWS DESK : ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವದೆಹಲಿ ಹಾಗೂ ಅದರ ವಿವಿಧ ಅಂಗ ಸಂಸ್ಥೆಗಳ ಸಂಶೋಧನ ಕೇಂದ್ರಗಳು, ದೇಶದ ಕೃಷಿ ವಿಜ್ಞಾನ ಕೇಂದ್ರಗಳು, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಮತ್ತು ಇತರ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಈ ಮುಂಗಾರು ಹಂಗಾಮಿನಲ್ಲಿ ಕೃಷಿಕರಿಗೆ ತಾಂತ್ರಿಕತೆಗಳ ಲಭ್ಯವಾಗುವಂತೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಮೇ 29 ರಿಂದ ಜೂನ್ 12 ರವರೆಗೆ ಹಮ್ಮಿಕೊಳ್ಳಲಾಗಿದೆ. ಮೇ 29 ರಂದು ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪಲು ಮತ್ತು ವಿರಾಜಪೇಟೆಯಲ್ಲಿ ನಡೆಯಲಿದೆ. ಮೇ 30 ರಂದು ಬೆಳಗ್ಗೆ 10 ಗಂಟೆಗೆ ಹುದಿಕೇರಿ ಮತ್ತು ನಾಪೋಕ್ಲು, ಮೇ 31 ರಂದು ಬೆಳಗ್ಗೆ 10 ಗಂಟೆಗೆ ಕೊಡ್ಲಿಪೇಟೆ ಮತ್ತು ಅಮ್ಮತ್ತಿ, ಜೂ. 2 ರಂದು ಬೆಳಗ್ಗೆ 10 ಗಂಟೆಗೆ ಭಾಗಮಂಡಲ ಮತ್ತು ಶ್ರೀಮಂಗಲ, ಜೂ. 3 ರಂದು ಬೆಳಗ್ಗೆ 10 ಗಂಟೆಗೆ ಕುಶಾಲನಗರ ಮತ್ತು ಮಡಿಕೇರಿ, ಜೂ. 4 ರಂದು ಬೆಳಗ್ಗೆ 10…

Read More