ಲೇಖಕ: admin

ಕುಶಾಲನಗರ NEWS DESK ಜೂ.28 : ಕುಶಾಲನಗರದ ಸೋಮೇಶ್ವರ ಬಡಾವಣೆ ನಿವಾಸಿ ಬಿ.ಎ.ನಾಗೇಗೌಡ (47) ಅವರು ಹೃದಯಾಘಾತದಿಂದ ಶನಿವಾರ ನಿಧನರಾದರು. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತ ನಾಗೇಗೌಡರು ಕರ್ನಾಟಕ ರಕ್ಷಣಾ ವೇದಿಕೆಯ ಗೌರವಾಧ್ಯಕ್ಷರಾಗಿದ್ದರು. ಜೇಸೀ ಕುಶಾಲನಗರ ಕಾವೇರಿಯ ಅಧ್ಯಕ್ಷರಾಗಿ, ಜೇಸೀ ಅಲ್ಯೂಮಿನಿ ಸಂಸ್ಥೆಯ ವಲಯ 14ರ ಉಪಾಧ್ಯಕ್ಷರಾಗಿ ಸಕ್ರಿಯರಾಗಿದ್ದರು. ಕುಶಾಲನಗರದ ನಾಢಪ್ರಭು ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕರು ಹಾಗೂ ತಾಲ್ಲೂಕು ಒಕ್ಕಲಿಗ ಸಂಘದ ಕಾರ್ಯದರ್ಶಿಯೂ ಆಗಿದ್ದರು. ಮೃತರ ನಿಧನಕ್ಕೆ ಕುಶಾಲನಗರದ ಹಲವು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

Read More

ಕುಶಾಲನಗರ ಜೂ.28 NEWS DESK : ಅತ್ಯಾಧುನಿಕ ತಂತ್ರಜ್ಞಾನಗಳ ಅರಿವು, ತರಬೇತಿ ಹೊಂದುವ ಮೂಲಕ ಸೌಂದರ್ಯ ತಜ್ಞರು ಗ್ರಾಹಕರ ಅಗತ್ಯಗಳಿಗೆ ತಕ್ಕಂತೆ  ಉತ್ತಮ ಗುಣಮಟ್ಟದ ಸೇವೆಗಳನ್ನು ಒದಗಿಸುವಂತಾಗಬೇಕೆಂದು ಸೋಮು ಹಾಸನ್ ಹೇರ್ ಅಂಡ್ ಮೇಕಪ್ ಅಕಾಡೆಮಿ ಮಾಲೀಕರು ಹಾಗೂ ಅಂತರಾಷ್ಟ್ರೀಯ ಮಟ್ಟದ ಮೇಕಪ್ ತರಬೇತುದಾರರಾದ ಸೋಮಶೇಖರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.  ಕುಶಾಲನಗರ ಸಮೀಪ ಕೊಪ್ಪ ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಮೇಕ್ ಓವರ್ ಸ್ಟುಡಿಯೋ ಉದ್ಘಾಟಿಸಿ ಮಾತನಾಡಿದರು.  ನಿರಂತರ ಅನುಭವದೊಂದಿಗೆ ಸೌಂದರ್ಯ ತಜ್ಞರು ತಮ್ಮ ಗ್ರಾಹಕರಿಗೆ  ಅತ್ಯುತ್ತಮ  ಗುಣಮಟ್ಟದ ಸೇವೆಗಳನ್ನು ನೀಡುವ ಮೂಲಕ ಖ್ಯಾತಿಗಳಿಸಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ಲೀಲಾವತಿ ಮಾತನಾಡಿ, ಯುವತಿಯರು ಹಾಗೂ ಮಹಿಳೆಯರು ಸೌಂದರ್ಯ ತಜ್ಞರಾಗಿ ತಮ್ಮ ಗ್ರಾಹಕರ ಬಾಹ್ಯ ಸೌಂದರ್ಯವನ್ನು ಹೆಚ್ಚಿಸುವ ಕಾಯಕದಲ್ಲಿ ತೊಡಗಿಸಿಕೊಳ್ಳುವುದು ನಿಜಕ್ಕೂ ಮೆಚ್ಚುಗೆಯ ವಿಚಾರವಾಗಿದೆ.  ಆಧುನಿಕ ತಂತ್ರಜ್ಞಾನದ ತರಬೇತಿ  ಹೊಂದುವ  ಮೂಲಕ ಆರಂಭಗೊಂಡಿರುವ ನೂತನ ಸಂಸ್ಥೆಗೆ ಅವರು ಶುಭ ಕೋರಿದರು.  ಈ ಸಂದರ್ಭ…

Read More

ಗೋಣಿಕೊಪ್ಪಲು ಜೂ.28 NEWS DESK : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿರಾಜಪೇಟೆ ನಾಟ್ಯಮಯೂರಿ ನೃತ್ಯ ಟ್ರಸ್ಟ್ ನೀಡುವ ಕರುನಾಡ ಕಲ್ಪವೃಕ್ಷ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಗೋಣಿಕೊಪ್ಪಲು ಭರತನಾಟ್ಯ ಕಲಾವಿದೆ ಪಿ.ಎಂ.ಲಿದಿನಾ ಪಡೆದುಕೊಂಡರು. ಬೆಂಗಳೂರಿನ ಕನ್ನಡ ಭವನದ ರವೀಂದ್ರ ಕಲಾಕ್ಷೇತ್ರದ ನಯನಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಕಲಾವಿದ ಶಶಿಧರ್ ಕೋಟೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ನಾಟ್ಯ ಮಯೂರಿ ನೃತ್ಯ ಸಂಸ್ಥೆಯ ಪ್ರೇಮಾಂಜಲಿ ಸಾಹಿತಿ ಡಾ. ಕೆಂಚನೂರು ಶಂಕರ ಇದ್ದರು.

Read More

ಕುಶಾಲನಗರ ಜೂ.28 NEWS DESK :  ಕುಶಾಲನಗರ ರೋಟರಿ ಸಂಸ್ಥೆ  ರೈತ ಭವನದಲ್ಲಿ ಏರ್ಪಡಿಸಿದ್ದ ಪದಗ್ರಹಣ ಸಮಾರಂಭ ಹಾಗೂ ರೋಟರಿ ಸಂಸ್ಥೆಗೆ 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಹಸಿದವರಿಗೆ ಅನ್ನ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕುಶಾಲನಗರ ರೋಟರಿ ಸಂಸ್ಥೆ ಹಾಗೂ ಸ್ಥಳೀಯ ನಿಸರ್ಗ ಹೊಟೇಲ್ ಸಹಯೋಗದೊಂದಿಗೆ ಹಸಿದವರಿಗೆ ಅನ್ನ ಎಂಬ ವಿನೂತನ ಯೋಜನೆಯ ಅನುಷ್ಠಾನಕ್ಕೆ ಹಿರಿಯ ರೋಟರಿ ಸದಸ್ಯ ಎಸ್.ಕೆ.ಸತೀಶ್ ಚಾಲನೆ ನೀಡಿದರು. ಜಿಲ್ಲಾ ರೋಟರಿ ಮಾಜಿ ರಾಜ್ಯಪಾಲರು ಆದ ಪದಗ್ರಹಣ ಅಧಿಕಾರಿ ಎಂ.ರಂಗನಾಥ್ ಭಟ್ ಅವರು 2025-26ನೇ ಸಾಲಿನ‌ ಕುಶಾಲನಗರ ರೋಟರಿ ಸಂಸ್ಥೆಯ ನೂತನ ಅಧ್ಯಕ್ಷ ಮನು ಪೆಮ್ಮಯ್ಯ ಹಾಗೂ ಕಾರ್ಯದರ್ಶಿ ಎಚ್.ಪಿ.ಮಂಜುನಾಥ್ ಹಾಗೂ ಪದಾಧಿಕಾರಿಗಳಿಗೆ ಪ್ರತಿಜ್ಞೆ ವಿಧಿ ಬೋಧಿಸಿದರು.  ಈ ಸಂದರ್ಭ ಮಾತನಾಡಿದ ಅವರು, ಪ್ರತಿಯೊಬ್ಬ ರೋಟರಿ ಸದಸ್ಯರು ಸಾಮಾಜಿಕ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು. ನಾನು, ನನ್ನ ಏಳಿಗೆ ಆದರೆ ಸಾಲದು. ಸಮುದಾಯದ ಅಭಿವೃದ್ಧಿ ಕೂಡ ಆಗಬೇಕು ಎಂಬುದೇ…

Read More

ಭಾಗಮಂಡಲ NEWS DESK ಜೂ.27 : ಯಡತೊರೆ ಶ್ರೀ ಯೋಗಾನಂದೇಶ್ವರ ಮಠದ  ಶ್ರೀ ಶ್ರೀ ಶಂಕರ ಭಾರತಿ ಮಹಾಸ್ವಾಮಿಗಳು ಇಂದು ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಹಾಗೂ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿದರು. ಕಾವೇರಿ ನದಿಗೆ ಪೂಜೆ ಸಲ್ಲಿಸಿ ದೇಶದಲ್ಲಿ ಶಾಂತಿ ನೆಲೆಗೊಂಡು ಸುಭಿಕ್ಷವಾಗಲಿ ಎಂದು  ಪ್ರಾರ್ಥಿಸಿದರು. ಪ್ರಮುಖರಾದ ಈಶ್ವರ್ ಭಟ್, ರಮೇಶ್ ಹೊಳ್ಳ, ಸಂಪತ್ ಕುಮಾರ್,  ಸುಬ್ರಮಣ್ಯ ಹೊಳ್ಳ, ನಾಗರಾಜ್ ಭಟ್ ಪಿ. ಎ, ಶ್ರೀಧರ್ ರೈ, ದೇವಾಲಯದ ಅರ್ಚಕರು ಮತ್ತಿತರರು ಸ್ವಾಮೀಜಿಯನ್ನು ಸ್ವಾಗತಿದರು.

Read More

ಮಡಿಕೇರಿ NEWS DESK ಜೂ.27 : ಕುಶಾಲನಗರದಲ್ಲಿ ಕೊಡಗು ಜಿಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಂಘದ ಪದಾಧಿಕಾರಿಗಳು ಶುಕ್ರವಾರ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರನ್ನು ಭೇಟಿ ಮಾಡಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಮಸ್ಯೆ ಕುರಿತು ಮನವಿ ಸಲ್ಲಿಸಿದರು.

Read More

ಮಡಿಕೇರಿ NEWS DESK ಜೂ.27 : ಕೊಡಗು ಜಿಲ್ಲೆಯಲ್ಲಿ ತೀವ್ರಗೊಂಡಿರುವ ವನ್ಯಜೀವಿ ಹಾಗೂ ಮಾನವ ಸಂಘರ್ಷ ತಡೆಗೆ ಅರಣ್ಯ ಅಧಿಕಾರಿಗಳು ಅಗತ್ಯ ಕಾರ್ಯಯೋಜನೆ ರೂಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿ.ಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು. ಕಾಡು ಪ್ರಾಣಿಗಳ ಹಾವಳಿ ನಿರಂತರವಾಗಿ ಇದ್ದು, ಇವುಗಳನ್ನು ತಡೆಯಲು ಅರಣ್ಯ ಇಲಾಖೆ ಅಧಿಕಾರಿಗಳು ಇನ್ನಷ್ಟು ಪರಿಣಾಮಕಾರಿ ಕಾರ್ಯಕ್ರಮ ರೂಪಿಸಬೇಕು ಎಂದು ಸೂಚಿಸಿದರು. ಇದೇ ಸಂದರ್ಭದಲ್ಲಿ ಅರಣ್ಯ ಸಚಿವರ ಜೊತೆ ದೂರವಾಣಿ ಮೂಲಕ ಸಂಪರ್ಕಿಸಿದ ಸಚಿವರು ಕೊಡಗು ಜಿಲ್ಲೆಯಲ್ಲಿ ಅರಣ್ಯಕ್ಕೆ ಸಂಬ0ಧಿಸಿದ0ತೆ ಸಾಕಷ್ಟು ಸಮಸ್ಯೆಗಳಿದ್ದು, ಬೆಂಗಳೂರಿನಲ್ಲಿ ಅರಣ್ಯ ಸಚಿವರು, ಕೊಡಗು ಜಿಲ್ಲೆಯ ಶಾಸಕರು, ಅರಣ್ಯ ಇಲಾಖೆ ಉನ್ನತ ಮಟ್ಟದ ಅಧಿಕಾರಿಗಳು ಸೇರಿದಂತೆ ಸಭೆ ನಡೆಸುವ ಬಗ್ಗೆ ಚರ್ಚಿಸಿದರು. ಕೊಡಗು ವೃತ್ತ ಮುಖ್ಯ ಅರಣ್ಯ…

Read More

ಮಡಿಕೇರಿ ಜೂ.27 NEWS DESK : ಇಡೀ ದಕ್ಷಿಣ ಭಾರತದಲ್ಲಿ ಉತ್ತಮ ನಗರ ನಿರ್ಮಾಣ ಮಾಡುವಲ್ಲಿ ಆದರ್ಶ ಆಡಳಿತಗಾರ ಕೆಂಪೇಗೌಡರ ನಿಷ್ಠೆ ಮತ್ತು ಪರಿಶ್ರಮವನ್ನು ಸದಾ ಸ್ಮರಿಸುವಂತಾಗಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶುಕ್ರವಾರ ನಗರದ ಗಾಂಧಿ ಭವನದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬೆಂಗಳೂರು ನಿರ್ಮಾಣದಲ್ಲಿ ಕೆಂಪೇಗೌಡರ ಕೊಡುಗೆ ಅಪಾರವಾಗಿದೆ. ಅವರ ಬದ್ಧತೆಯನ್ನು ಸ್ಮರಿಸುವಂತಾಗಬೇಕು ಎಂದು ಸಚಿವರು ತಿಳಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಮಾತನಾಡಿ, ಕೆಂಪೇಗೌಡರು ನಾಡುಕಂಡಂತಹ ಆದರ್ಶ ಆಡಳಿತಗಾರರಾಗಿ ಬೆಂಗಳೂರು ನಿರ್ಮಾಣಕ್ಕೆ ಅಗಾಧ ಪ್ರಮಾಣದಲ್ಲಿ ಕೊಡುಗೆ ನೀಡಿದ್ದಾರೆ. ಅವರ ದೂರದೃಷ್ಟಿ ಮತ್ತು ಪರಿಕಲ್ಪನೆಯನ್ನು ಪ್ರತಿಯೊಬ್ಬರೂ ಸ್ಮರಿಸಬೇಕಿದೆ ಎಂದರು. ಕೆಂಪೇಗೌಡರ ಆಡಳಿತ ಅವಧಿಯಲ್ಲಿ 13 ರಿಂದ 14 ಸಾವಿರ ಕೆರೆಗಳನ್ನು ನಿರ್ಮಿಸಿ ಸಮೃದ್ಧ ನಗರ ನಿರ್ಮಾಣಕ್ಕೆ ಶ್ರಮಿಸಿದ್ದರು. ಈಗ…

Read More

ಮಡಿಕೇರಿ ಜೂ.27 NEWS DESK : ‘ಜಯ ಭಾರತ ಜನನಿಯ ತನುಜಾತೆ’ ನಾಡಗೀತೆಯ ಕೆಲವು ಸಾಲುಗಳನ್ನು ಕತ್ತರಿಸಿ ಕೊಡಗು ಜಿಲ್ಲಾ ಕೆಡಿಪಿ ಸಭೆಯಲ್ಲಿ ಧ್ವನಿ ಮುದ್ರಣವನ್ನು ಬಿತ್ತರಿಸಿದ ಕಾರಣಕ್ಕಾಗಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ಕೊಡಗು ಜಿ.ಪಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೆಡಿಪಿ ಸಭೆಯ ಆರಂಭದಲ್ಲಿ ನಾಡಗೀತೆಯನ್ನು ಹಾಕಲಾಯಿತು. ಧ್ವನಿ ಮುದ್ರಣದಲ್ಲಿ ‘ಸರ್ವ ಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ….’ ಸಾಲುಗಳು ಇಲ್ಲದೆ ಇರುವುದನ್ನು ಗಮನಿಸಿದ ಎಸ್.ಎಲ್.ಭೋಜೇಗೌಡ ಅವರು ಇದಕ್ಕೆ ಕಾರಣಕರ್ತರಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು. ಈ ರೀತಿ ನಾಡಗೀತೆಯನ್ನು ಧ್ವನಿ ಮುದ್ರಣದ ಮೂಲಕ ಹಾಕುವ ಮತ್ತು ಕೆಲವು ಸಾಲುಗಳನ್ನು ಕತ್ತರಿಸುವ ಅಗತ್ಯವೇನಿತ್ತು. ಧ್ವನಿ ಮುದ್ರಣದ ಬದಲು ಶಾಲಾ ಮಕ್ಕಳಿಂದ ಹಾಡಿಸಬಹುದಿತ್ತಲ್ಲ, ನಾಡಗೀತೆಗೆ ತನ್ನದೇ ಆದ ಗೌರವವಿದೆ, ಸಂಪೂರ್ಣ ನಾಡಗೀತೆಯನ್ನು ಪ್ರಸಾರ ಮಾಡಬೇಕಾಗಿತ್ತು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ…

Read More

ಮಡಿಕೇರಿ ಜೂ.27 NEWS DESK : ಮೈಸೂರಿನ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ 14 ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ನೀಡುವ ಪುರಸ್ಕಾರಕ್ಕೆ ಗೋಣಿಕೊಪ್ಪಲಿನ ಕಾಪ್ಸ್ ಶಾಲೆಯ ಶಿಕ್ಷಕಿ ಹಾಗೂ ಸಾಹಿತಿ ಜಯಲಕ್ಷ್ಮಿ ಎಂ.ಬಿ ಆಯ್ಕೆಯಾಗಿದ್ದಾರೆ. ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ಇವರಿಗೆ ಸೇವಾ ಭೂಷಣ ಪ್ರಶಸ್ತಿ ನೀಡಲಾಗುತ್ತಿದೆ. ಜೂ.28 ರಂದು ಮೈಸೂರು ಕಲಾಮಂದಿರದ ಆವರಣದ ಕಿರು ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

Read More