ಲೇಖಕ: admin

ಮಡಿಕೇರಿ ಮೇ 28 NEWS DESK : ಜಿಲ್ಲೆಯಲ್ಲಿ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 62.67 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.05 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 589.33 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 325.90 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 65.83 ಮಿ.ಮೀ. ಕಳೆದ ವರ್ಷ ಇದೇ ದಿನ 0.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 806.21 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 447.77 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 34.30 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 613.80 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 246.10 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 42.27 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…

Read More

ಮೈಸೂರು, ಮೇ 28 NEWS DESK : ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಸದಾ ಬದ್ಧನಾಗಿದ್ದೇನೆ. ಕಡಿಮೆ‌ ಪ್ರಮಾಣ ಬೆಳೆಯುವ ರೈತರ ಮೇಲೆ ಯಾವುದೇ ದಂಡ ವಿಧಿಸದಂತೆ ತಂಬಾಕು‌ ಮಂಡಳಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ‌ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.  ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ಯದುವೀರ್, ಈ ವಿಷಯದ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಎಂದು ವಿವರಿಸಿದ್ದಾರೆ. ತಂಬಾಕು ಮಂಡಳಿಯ ಕಾರ್ಯಕಾರಿ ನಿರ್ದೇಶಕರ ಜೊತೆ ಮಾತನಾಡಿದ್ದು, ಪರವಾನಗಿ ಪಡೆದ ರೈತರು ಒಂದು ವೇಳೆ ಕಡಿಮೆ ಪ್ರಮಾಣದಲ್ಲಿ ಬೆಳೆದರೆ ಅಂತಹವರ ಮೇಲೆ ದಂಡ ವಿಧಿಸಬಾರದು ಎಂದು ತಿಳಿಸಲಾಗಿದೆ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಪರಿಶೀಲನೆ ಮಾಡಿ ಸೂಕ್ತ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ನಮ್ಮ ಕ್ಷೇತ್ರದಲ್ಲಿ ತಂಬಾಕು ಬೆಳೆಗಾರರ ಸಂಖ್ಯೆ ಹೆಚ್ಚಾಗಿದೆ. ಇವರ ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದ ಕೂಡಲೇ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದೇನೆ…

Read More

ಸುಂಟಿಕೊಪ್ಪ ಮೇ 28 NEWS DESK : ಸುಂಟಿಕೊಪ್ಪ ಸೇರಿದಂತೆ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಧಾರಾಕಾರ ಮಳೆ ಸುರಿದು ಅಲ್ಲಲ್ಲಿ ಮರಗಳು ಧರೆಗುರುಳಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.  ವಾಯುಭಾರ ಕುಸಿತ ಮತ್ತು ಮುಂಗಾರು ಮಳೆಯಿಂದ ಈ ಭಾಗದ ಹಲವೆಡೆ ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದು ಹಾನಿಯಾದ ಹಿನ್ನಲೆ ಕೆಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲದೇ ಕತ್ತಲೆಯಲ್ಲಿ ಕಾಲ ಕಳೆಯುವಂತಾಯಿತು‌‌. ಸಮೀಪದ ಮಾದಾಪುರ ರಸ್ತೆಯ ಸ್ವಸ್ಥ ವಿಶೇಷ ಶಾಲೆಯ ಬಳಿ ಬೃಹದಾರಕಾರದ ಮರ ಬಿದ್ದು ವಾಹನ ಹಾಗೂ ಜನಸಂಚಾರಕ್ಕೆಕೆಲಕಾಲ ಅಡ್ಡಿಯಾಗಿತ್ತು‌. ಸಮೀಪದ ನಾಕೂರು ಶಿರಂಗಾಲ ಗ್ರಾಮದಲ್ಲೂ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ಜನ ಸಂಕಷ್ಠ ಎದುರಿಸಬೇಕಾಯಿತು. ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಕಡೆಗಳಲ್ಲಿ ಮರ ಹಾಗೂ ವಿದ್ಯುತ್ ಕಂಬಗಳು ನೆಲಕ್ಕಪ್ಪಳಿಸಿ ಆ ಭಾಗದಲ್ಲಿ ಬೆಳಿಗ್ಗೆಯಿಂದಲೂ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಸಮೀಪದ ಮಾದಾಪುರ- ಕುಂಬೂರು ಮಾರ್ಗ ಮದ್ಯೆ ಅಲ್ಲಲ್ಲಿ ಮರಗಳು ಬಿದ್ದು ಬಹಳಷ್ಟು ತೊಂದರೆ ಅನುಭವಿಸುವಂತಾಯಿತು. ಸಮೀಪದ ಕೆದಕಲ್ ಗ್ರಾಮದ ಹೊರೂರು ಗ್ರಾಮದಲ್ಲಿ…

Read More

ಸೋಮವಾರಪೇಟೆ ಮೇ 28 NEWS DESK : ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಕಳೆದ ನಾಲ್ಕು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವೆಡೆ ಮರಗಳು ಧರೆಗುರುಳಿದ್ದು, ವಿದ್ಯುತ್ ಕಂಬಗಳು ಮುರಿದು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಅನೇಕ ಗ್ರಾಮಗಳು ಕತ್ತಲೆಯಲ್ಲಿವೆ. ತಾಲೂಕಿನ ಮಾದಾಪುರ, ಕುಂಬೂರು ಗ್ರಾಮಗಳಲ್ಲಿ ಮನೆ ಮೇಲೆ ಮರ ಉರುಳಿ ಭಾಗಶಃ ಹಾನಿಯಾಗಿರುವ ಕುರಿತು ವರದಿಯಾಗಿದೆ. ನಿಡ್ತ ಗ್ರಾಮದಲ್ಲಿ ಮರವೊಂದು ಉರುಳಿ ಕೆಲಕಾಲ ರಸ್ತೆ ಸಂಚಾರಕ್ಕೆ ತೊಡಕುಂಟಾಗಿತ್ತು. ಪಂಚಾಯಿತಿ ಹಾಗು ಅರಣ್ಯ ಇಲಾಖೆಯ ಸಿಬ್ಬಂದಿಗಳು ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಚನ್ನಾಪುರ ಗ್ರಾಮದಲ್ಲಿ ವಿದ್ಯುತ್ ಮಾರ್ಗದ ಮೇಲೆ ಮರ ಬಿದ್ದು ಹಾನಿಯಾಗಿದೆ. ಸೆಸ್ಕ್ ಸಿಬ್ಬಂದಿಗಳು ಮಾರ್ಗ ಸರಿಪಡಿಸಿದರು. ಕೋವರ್‍ಕೊಲ್ಲಿಯಿಂದ ಐಗೂರು, ಹೊಸತೋಟ, ಕುಂಬೂರು, ಮಾದಾಪುರದವರೆಗೆ ಹಲವು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಗ್ರಾಮೀಣ ಪ್ರದೇಶದಲ್ಲಿ ಅ ಕತ್ತಲೆ ಆವರಿಸಿದೆ. ಸೆಸ್ಕ್ ಸಿಬ್ಬಂದಿಗಳು ಸಮರೋಪಾದಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪರಿಸ್ಥಿತಿ ನಿಭಾಯಿಸಲು ಹರಸಾಹಸ ಪಡುತ್ತಿದ್ದಾರೆ. ತಲ್ತರೆಶೆಟ್ಟಳ್ಳಿಯ ಬೋಪಯ್ಯ ಎಂಬುವರ ಮನೆ ಮೇಲೆ ಮರ…

Read More

ಸೋಮವಾರಪೇಟೆ ಮೇ 28 NEWS DESK : ಸಮಾಜ ಕಟ್ಟುವ ಕಾರ್ಯದಲ್ಲಿ ಮಾಧ್ಯಮಗಳ ಪಾತ್ರ ಶ್ಲಾಘನೀಯ ಎಂದು ಹಿರಿಯ ವಕೀಲ ಹಾಗೂ ನೋಟರಿ ಈಶ್ವರಚಂದ್ರ ವಿದ್ಯಾಸಾಗರ್ ಅಭಿಪ್ರಾಯಪಟ್ಟರು. ಸೋಮವಾರಪೇಟೆ ತಾಲ್ಲೂಕು ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕಾ ಮಾಧ್ಯಮದವರು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ದೃಶ್ಯ ಮಾಧ್ಯಮದಲ್ಲಿ ಅಪರಾಧ ಸುದ್ದಿಗಳನ್ನು ಅತೀ ಹೆಚ್ಚು ವೈಭಕರೀಸುವುದಕ್ಕೆ ಕಡಿವಾಣ ಹಾಕಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಪ್ರಸ್ತುತ ದಿನಗಳಲ್ಲಿ ಮೊಬೈಲ್ ಬಳಕೆ ಮಾಡುವ ಮೂಲಕ ಸಮಯವನ್ನು ವ್ಯರ್ಥಮಾಡುತ್ತಿದ್ದಾರೆ. ಆ ಚಟದಿಂದ ಹೊರಬಂದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಟಿ.ಅನಿಲ್ ಮಾತನಾಡಿ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡುವ ಮೂಲಕ ಅವರ ಭವಿಷ್ಯಕ್ಕೆ ಉತ್ತಮ ಮುನ್ನುಡಿ ಬರೆಯಲಾಗಿದೆ. ಇಂತಹ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಂಡು ಮುಂದುವರೆಯಬೇಕು ಎಂದು ಹೇಳಿದರು. ಪತ್ರಕರ್ತರ ಮಕ್ಕಳನ್ನು ಈ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು. ಸ್ಪರ್ಧಾ…

Read More

ಮಡಿಕೇರಿ NEWS DESK ಮೇ 27 : ಇಂದು ದುಲ್ ಹಜ್ಜ್ ತಿಂಗಳ ಚಂದ್ರ ದರ್ಷನವಾಗದ ಹಿನ್ನೆಲೆಯಲ್ಲಿ ಮೇ 29 ಗುರುವಾರ ದುಲ್ ಹಜ್ಜ್ 1 ಹಾಗೂ ಜೂನ್ 6 ರಂದು ಅರಫ ದಿನ ಮತ್ತು ಜೂನ್ 7 ರಂದು ಬಖ್ರೀದ್ ಆಗಿರುತ್ತದೆ ಎಂದು ಕೊಡಗು ಜಿಲ್ಲೆಯ ಸಂಯುಕ್ತ ಖಾಝಿಗಳಾದ ಸುಲ್ತಾನುಲ್ ಉಲಮಾ ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಮೇ 27 : ಗಾಂಜಾ ಸರಬರಾಜು ಮಾಡುತ್ತಿದ್ದ ಅಸ್ಸಾಂ ಮೂಲದ ಆರೋಪಿಯನ್ನು ಶನಿವಾರಸಂತೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ರಾಜ್ಯ ಮೂಲದ ಅಪ್ಪಶೆಟ್ಟಳ್ಳಿ ಗ್ರಾಮದ ನಿವಾಸಿ ಮೈನುಲ್ ಹಕ್ (30) ಬಂಧಿತ ಆರೋಪಿಯಾಗಿದ್ದು, 1 ಕೆ.ಜಿ 20 ಗ್ರಾಂ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಶನಿವಾರಸಂತೆಯ ಮಾರುಕಟ್ಟೆ ಬಳಿ ಅಕ್ರಮವಾಗಿ ಗಾಂಜಾ ಸರಬರಾಜು ಮಾಡುತ್ತಿದ್ದಾಗ ಪೊಲೀಸರು ದಾಳಿ ಮಾಡಿದರು. ಸೋಮವಾರಪೇಟೆ ಡಿವೈಎಸ್‌ಪಿ ಪಿ.ಚಂದ್ರಶೇಖರ್, ಶನಿವಾರಸಂತೆ ಠಾಣೆ ಪಿಐ ಕೃಷ್ಣರಾಜು, ಪಿಎಸ್‌ಐ ಚಂದ್ರು ಹೆಚ್.ವೈ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.

Read More

ಮಡಿಕೇರಿ NEWS DESK ಮೇ 27 : ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಆರಂಭವಾಗಿದ್ದು, ಜಿಲ್ಲಾಡಳಿತದಿಂದ ಸಹಾಯವಾಣಿ ಸಂಖ್ಯೆ 08272-221077 ಆರಂಭಿಸಿದೆ. ಜೊತೆಗೆ 8550001077 ವಾಟ್ಸ್ಆಪ್ ಸಂಖ್ಯೆಯನ್ನು ಸಹ ಆರಂಭಿಸಿದ್ದು, ಅತಿವೃಷ್ಟಿಯಿಂದ ಉಂಟಾಗುವ ವಿಪತ್ತಿನ ಬಗ್ಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ತಿಳಿಸಿದ್ದಾರೆ.  ಮುಂಗಾರು ಆರಂಭ ಹಿನ್ನೆಲೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಮಂಗಳವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ಮಡಿಕೇರಿ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ 08272-228396, ವಿರಾಜಪೇಟೆ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08274-257328, ಸೋಮವಾರಪೇಟೆ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08276-282045, ಕುಶಾಲನಗರ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08276-200198 ಹಾಗೂ ಪೊನ್ನಂಪೇಟೆ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08274-249700 ಸಹಾಯವಾಣಿ ಕೇಂದ್ರ ಆರಂಭಿಸಿಲಾಗಿದೆ ಎಂದರು.

Read More

ಬೆಂಗಳೂರು NEWS DESK ಮೇ 27 : ಕನ್ನಡ ಸೇರಿದಂತೆ ವಿವಿಧ ಭಾಷೆಗಳ ಚಲನಚಿತ್ರ ಮತ್ತು ರಂಗಭೂಮಿಯಲ್ಲಿ ಅಭಿನಯಿಸಿರುವ ಖ್ಯಾತ ನಟ ಅನಂತ್ ನಾಗ್ ಅವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದರು. ಅನಂತ್ ನಾಗ್ ಅವರು 300 ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದು, ಪದ್ಮಭೂಷಣ ಪ್ರಶಸ್ತಿ ದೊರೆತ ಬಗ್ಗೆ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ ಮೇ 27 NEWS DESK : ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಆರಂಭವಾಗಿದ್ದು, ಜಿಲ್ಲಾಡಳಿತದಿಂದ ಸಹಾಯವಾಣಿ ಸಂಖ್ಯೆ 08272-221077 ಆರಂಭಿಸಿದೆ. ಜೊತೆಗೆ 8550001077 ವಾಟ್ಸ್‍ಆಪ್ ಸಂಖ್ಯೆಯನ್ನು ಸಹ ಆರಂಭಿಸಿದ್ದು, ಅತಿವೃಷ್ಟಿಯಿಂದ ಉಂಟಾಗುವ ವಿಪತ್ತಿನ ಬಗ್ಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ತಿಳಿಸಿದ್ದಾರೆ. ಮುಂಗಾರು ಆರಂಭ ಹಿನ್ನೆಲೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ಮಡಿಕೇರಿ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ 08272-228396, ವಿರಾಜಪೇಟೆ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08274-257328, ಸೋಮವಾರಪೇಟೆ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08276-282045, ಕುಶಾಲನಗರ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08276-200198 ಹಾಗೂ ಪೊನ್ನಂಪೇಟೆ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08274-249700 ಸಹಾಯವಾಣಿ ಕೇಂದ್ರ ಆರಂಭಿಸಿಲಾಗಿದೆ ಎಂದರು. ಮಳೆಯಿಂದ ಉಂಟಾಗುವ ಹಾನಿ ಸಂಬಂಧ ಜಿಲ್ಲಾಡಳಿತದಿಂದ ಆರಂಭಿಸಿರುವ ವಾಟ್ಸ್‍ಆಪ್ ಗುಂಪಿಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಛಾಯಾಚಿತ್ರ ಹಾಗೂ ವಾಯ್ಸ್ ರೆಕಾರ್ಡ್…

Read More