ಕುಶಾಲನಗರ ಜು.25 NEWS DESK : ಕುಶಾಲನಗರ ಮಾಜಿ ಸೈನಿಕರ ಸಂಘ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಹಾಗೂ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಜು.26 ರಂದು “ಕಾರ್ಗಿಲ್ ವಿಜಯೋತ್ಸವ” ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಮುಳ್ಳುಸೋಗೆಯ ಮಾಜಿ ಸೈನಿಕರ ಸಂಘದ ಕಛೇರಿಯ ಆವರಣದಲ್ಲಿ ವಿಜಯೋತ್ಸವದಲ್ಲಿ ವೀರ ಮರಣ ಹೊಂದಿದ ಸೈನಿಕರ ಸೇವೆಯನ್ನು ಸ್ಮರಿಸಿ ಗೌರವ ನಮನ ಸಲ್ಲಿಸಲಾಗುವುದು. ಸಂಘದ ಅಧ್ಯಕ್ಷ ಕ್ಯಾಪ್ಟನ್ ಡಿ.ಕೆ. ಚಿಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಸುಬೇದಾರ್ ಮೇಜರ್ ಎಸ್.ಆರ್.ಮಾದಪ್ಪ, ಕೋಶಾಧಿಕಾರಿ ಹವಾಲ್ದಾರ್ ಎನ್.ಎಸ್.ನರೇಶ್, ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಮತ್ತು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ. ಇದೇ ವೇಳೆಯಲ್ಲಿ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಲಾಗಿದೆ.
ಲೇಖಕ: admin
ಮಡಿಕೇರಿ ಜು.26 NEWS DESK : ಕರ್ನಾಟಕ ನಾಟಕ ಅಕಾಡೆಮಿಯ 2025-26ನೇ ಸಾಲಿನ ಎಚ್. ವಿ.ವೆಂಕಟಸುಬ್ಬಯ್ಯ ದತ್ತಿ ಪುರಸ್ಕಾರವು ಕೊಡಗು ಜಿಲ್ಲೆಯ ಮಾಲ್ದಾರೆ ಗ್ರಾಮದ ಪಿ.ಎ.ಮಂಜಪ್ಪ (ಮಂಜು ಕೊಡಗು) ಅವರಿಗೆ ಲಭಿಸಿದೆ. ಐತಪ್ಪ ಮತ್ತು ಲೀಲಾ ಅವರ ಪುತ್ರರಾದ ಇವರು 1994-95ರಲ್ಲಿ ನೀನಾಸಂನ ರಂಗಶಿಕ್ಷಣ ಕೇಂದ್ರದಲ್ಲಿ ತರಬೇತಿ ಪಡೆದರು. ಬಳಿಕ, ನೀನಾಸಂ ತಿರುಗಾಟದಲ್ಲಿ 2 ವರ್ಷ ನಟರಾಗಿ, ತಂತ್ರಜ್ಞರಾಗಿ ಕೆಲಸ ಮಾಡಿದರು. ಬೆಂಗಳೂರಿನ ಸಮುದಾಯ ತಂಡದಲ್ಲಿ, ಚಿತ್ರದುರ್ಗದ ಕಲಾಶಾಲೆ ಜಮುರಾ ಕಲಾವೇದಿಕೆಯಲ್ಲಿ ಅಧ್ಯಾಪಕರಾಗಿಯೂ ಕೆಲಸ ಮಾಡಿದ್ದ ಇವರು ಏಕಲವ್ಯ, ವಿಕಾಸ ಗ್ರಾಮೀಣಾಭಿವೃದ್ಧಿ ಸಂಸ್ಥೆ ಇನ್ನೂ ಮೊದಲಾದ ಸ್ವಯಂಸೇವಾ ಸಂಸ್ಥೆಗಳಲ್ಲಿ ಸುಮಾರು 5 ವರ್ಷಗಳ ಕಾಲ ತರಬೇತುದಾರರಾಗಿ ಕೆಲಸ ಮಾಡಿದ್ದಾರೆ. 2002ರಿಂದ ಹೆಗ್ಗೋಡಿನ ನೀನಾಸಂ ರಂಗಶಿಕ್ಷಣ ಕೇಂದ್ರದಲ್ಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಂಜು ಕೊಡಗು ವಿನ್ಯಾಸಕ್ಕೆ ಸಂಬಂಧಿಸಿದಂತೆ ಇವರು ಬರೆದಿರುವ ‘ಆಹಾರ್ಯ-ಅಭಿನಯ’ ಪುಸ್ತಕವು ಹಂಪಿ ವಿಶ್ವವಿದ್ಯಾನಿಲಯದಿಂದ ಪ್ರಕಟಗೊಂಡು ಅಲ್ಲಿನ ಮತ್ತು ಇತರ ರಂಗಶಿಕ್ಷಣ ಕೇಂದ್ರಗಳಿಗೆ ಪಠ್ಯವಾಗಿರುವುದು ವಿಶೇಷ. ಒಟ್ಟು 37 ನಾಟಕಗಳನ್ನು ಅವರು…
ಮಡಿಕೇರಿ NEWS DESK ಜು.25 : ದೇವರಕೊಲ್ಲಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಗೋಣಿಕೊಪ್ಪಲಿನ ಮಾರುಕಟ್ಟೆ ರಸ್ತೆಯ ನಿವಾಸಿಗಳಾದ ನಿಹಾದ್, ರಿಸ್ವಾನ್, ರಾಕಿಬ್ ಹಾಗೂ ರೀಶು ಮೃತ ದುರ್ದೈವಿಗಳು. ಮೃತದೇಹಗಳನ್ನು ಸುಳ್ಯದ ಆಸ್ಪತ್ರೆಯಲ್ಲಿ ಇಡಲಾಗಿದೆ. ಮಧ್ಯಾಹ್ನ 12.50 ಗಂಟೆ ಸುಮಾರಿನಲ್ಲಿ ಮಡಿಕೇರಿಯಿಂದ ಸುಳ್ಯದ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಹಾಗೂ ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಲಾರಿಯ ನಡುವೆ ಡಿಕ್ಕಿ ಸಂಭವಿಸಿದೆ. ಸಂಪಾಜೆಯ ಶರತ್ ಕೀಲಾರು, ತಾಜುದ್ದೀನ್ ಸೇರಿದಂತೆ ಯುವಕರ ತಂಡ ನಾಲ್ಕು ಆಂಬ್ಯುಲೆನ್ಸ್ ನಲ್ಲಿ ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಿದರಾದರೂ ಅಷ್ಟೊತ್ತಿಗಾಗಲೇ ನಾಲ್ವರೂ ಮೃತಪಟ್ಟಿರುವುದು ದೃಡಪಟ್ಟಿದೆ.
ಮಡಿಕೇರಿ ಜು 25 NEWS DESK : ಕಾಗಿ೯ಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ಜು.26 ರಂದು ಕೊಡಗು ಪತ್ರಕತ೯ರ ಸಂಘ (ರಿ) ಮತ್ತು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಕಾಗಿ೯ಲ್ ಹುತಾತ್ಮರಿಗೆ ಗೌರವ ನಮನ ಕಾಯ೯ಕ್ರಮ ದೀಪನಮನ, ಗಾನ ನಮನ ಮತ್ತು ಪುಪ್ಪ ನಮನ ಆಯೋಜಿಸಲಾಗಿದೆ. ನಗರದ ಗೌಡ ಸಮಾಜದಲ್ಲಿ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಆಯೋಜಿತ ಕಾಯ೯ಕ್ರಮದಲ್ಲಿ ಜಿಲ್ಲೆಯಾದ್ಯಂತಲಿನ 85 ಸಂಘಸಂಸ್ಥೆಗಳು ಪಾಲ್ಗೊಳ್ಳುತ್ತಿವೆ ಎಂದು ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ಮಾಹಿತಿ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮೈಸೂರಿನ ಪಾವನ ಇವೆಂಟ್ಸ್ ನಿಂದ ದೇಶಭಕ್ತಿ ಗೀತೆ ಕಾಯ೯ಕ್ರಮ ಇದೇ ಸಂದಭ೯ಆಯೋಜಿತವಾಗಿದ್ದು ಕಾಗಿ೯ಲ್ ವಿಜಯ್ ದಿವಸ್ ಕಾಯ೯ಕ್ರಮಕ್ಕೆ ಶಕ್ತಿ ಪ್ರತಿಷ್ಟಾನ, ಪತ್ರಿಕಾಭವನ ಟ್ರಸ್ಟ್, ಕೊಡಗು ಔಷಧಿ ವ್ಯಾಪಾರಸ್ಥರ ಸಂಘ, ಭಾರತೀಯ ಮೆಡಿಕಲ್ ಅಸೋಸಿಯೇಷನ್ ನ ಕೊಡಗು ಘಟಕ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು,…
ಮಡಿಕೇರಿ NEWS DESK ಜು.25 : ದೇವರಕೊಲ್ಲಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಗೋಣಿಕೊಪ್ಪಲಿನ ಮಾರುಕಟ್ಟೆ ರಸ್ತೆಯ ನಿವಾಸಿಗಳಾದ ನಿಹಾದ್, ರಿಸ್ವಾನ್, ರಾಕಿಬ್ ಹಾಗೂ ರೀಶು ಮೃತ ದುರ್ದೈವಿಗಳು. ಮೃತದೇಹಗಳನ್ನು ಸುಳ್ಯದ ಆಸ್ಪತ್ರೆಯಲ್ಲಿ ಇಡಲಾಗಿದೆ.
ಜಲವಾರ್ ಜು.25 NEWS DESK : ಇಂದು ಬೆಳಗ್ಗೆ ರಾಜಸ್ಥಾನದ ಜಲವಾರ್ ಜಿಲ್ಲೆಯ ಮನೋಹರ್ಥನಾ ಬ್ಲಾಕ್ನ ಪೀಪ್ಲೋಡಿ ಗ್ರಾಮದಲ್ಲಿ ಸರ್ಕಾರಿ ಶಾಲಾ ಕಟ್ಟಡ ಕುಸಿದು ಅವಶೇಷಗಳಡಿಯಲ್ಲಿ ಸಿಲುಕಿ ಮೃತಪಟ್ಟ ವಿದ್ಯಾರ್ಥಿಗಳ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. 30ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದು, ದುರಂತ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಟ್ಟಡ ಕುಸಿದಾಗ ದೊಡ್ಡ ಅಪಘಾತದ ಶಬ್ದ ಕೇಳಿ ಗ್ರಾಮಸ್ಥರು ಮತ್ತು ಶಾಲಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಯಿತು, ಸ್ಥಳೀಯರು ಮತ್ತು ತುರ್ತು ರಕ್ಷಣಾ ಸಿಬ್ಬಂದಿ ಮಕ್ಕಳನ್ನು ಅವಶೇಷಗಳಿಂದ ಹೊರತೆಗೆದರು. ಎಲ್ಲಾ ಗಾಯಗೊಂಡ ವಿದ್ಯಾರ್ಥಿಗಳನ್ನು ಮೊದಲು ಮನೋಹರ್ಥನಾ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಮಡಿಕೇರಿ ಜು.25 NEWS DESK : 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕುಶಾಲನಗರ ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ರೈತರು ಮುಸುಕಿನ ಜೋಳ ಬೆಳೆಯನ್ನು ಬೆಳೆದಿದ್ದು ಪ್ರಸ್ತುತ ಅಲ್ಲಲ್ಲಿ ಮುಸುಕಿನ ಜೋಳ ಬೆಳೆಗೆ ಸುಳಿ ಎಲೆ ಬಿಳಿ ರೋಗ ಅಥವಾ ಕೇದಿಗೆ ರೋಗ ಅಥವಾ Downey mildew ರೋಗದ ಬಾಧೆ ಕಂಡು ಬಂದಿರುತ್ತದೆ. ಈ ರೋಗವನ್ನು ಹತೋಟಿ ಮಾಡಲು ರೈತರು ಈ ಕ್ರಮಗಳನ್ನು ಅನುಸರಿಸಲು ಕೋರಿದೆ. ಮುಸುಕಿನ ಜೋಳ ಬೆಳೆಯ ಹೊಲದಲ್ಲಿರುವ ಕಳೆಗಳನ್ನು ಕಿತ್ತುಹಾಕುವುದು ಹಾಗೂ ಬದುಗಳು ಸಹ ಕಳೆಯಿಂದ ಮುಕ್ತವಾಗಿರುವಂತೆ ನೋಡಿಕೊಳ್ಳುವುದು. ಮುಸುಕಿನ ಜೋಳ ಬಿತ್ತನೆ ಸಂದರ್ಭದಲ್ಲಿ ಪೊಟ್ಯಾಶ್ ರಸಗೊಬ್ಬರ ಕೊಡದೆ ಇರುವ ರೈತರು ತುರ್ತಾಗಿ 25 ಕೆಜಿ ಪೊಟ್ಯಾಶ್ ಗೊಬ್ಬರವನ್ನು ಪ್ರತಿ ಎಕರೆಗೆ ನೀಡತಕ್ಕದ್ದು. ರಾಸಾಯನಿಕ ನಿಯಂತ್ರಣವಾಗಿ 1.0 ಎಂಎಲ್ ಟೆಬುಕೋನೊಜೋಲ್ ಅಥವಾ 2 ಗ್ರಾಂ ಮೆಟಲಾಕ್ಸಿಲ್+ ಮ್ಯಾನ್ಕೋಜೆಬ್ ಶಿಲೀಂದ್ರ ನಾಶಕವನ್ನು ಪ್ರತಿ ಲೀಟರ್ ನೀರಿಗೆ ಅಂಟು ದ್ರಾವಣದೊಂದಿಗೆ ಬೆರೆಸಿ ಮುಸುಕಿನ ಜೋಳದ ಬೆಳೆಯ ಎಲ್ಲಾ…
ಮಡಿಕೇರಿ ಜು.25 NEWS DESK : ಕಂದಾಯ ಸಚಿವರು ಬಲ್ಯಮಂಡೂರು ಬಳಿಯ ಸೇತುವೆಯನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಪರಿಶೀಲಿಸಿದರು.
ಮಡಿಕೇರಿ NEWS DESK ಜು.25 : ವಿದ್ಯಾರ್ಥಿಗಳಲ್ಲಿ ನಿರ್ದಿಷ್ಟ ಗುರಿ,ಸಾದಿಸುವ ಛಲ ಇದ್ದಲ್ಲಿ ಜೀವನದಲ್ಲಿ ಏನನ್ನು ಬೇಕಾದರೂ ಸಾದಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವಯ೯ ಹೇಳಿದ್ದಾರೆ. ಮಾದಾಪುರದ ಶ್ರೀಮತಿ ಡಿ. ಚೆನ್ಮಮ್ಮ ಪದವಿ ಪೂವ೯ ಕಾಲೇಜಿನಲ್ಲಿ ವಿದ್ಯಾಥಿ೯ ಸಂಘ ಉದ್ಘಾಟಿಸಿ ಅವರು ಮಾತನಾಡಿದರು. ಎಂತಹುದ್ದೇ ಕಠಿಣ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಎದೆಗುಂದದೆ ಸೋಲು ಗೆಲವುಗಳನ್ನು ಸ್ಥಿತಪ್ರಜ್ಞ ರಾಗಿ ಸ್ವೀಕರಿಸುವಂತೆ ವಿದ್ಯಾರ್ಥಿಗಳಿಗೆ ಅವುರು ಕರೆನೀಡಿದರು. ಗರಗಂದೂರು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪಾರ್ವತಿ ಮಾತನಾಡಿ ,ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳು ಉತ್ತಮ ನಾಯಕತ್ವ ಗುಣ ಗಳನ್ನು ಮೈಗೂಡಿಸಿಕೊಳ್ಳುವoತೆ ಕಿವಿಮಾತು ಹೇಳಿದರು. ಶ್ರೀಮತಿ ಡಿ. ಚೆನ್ನಮ್ಮ ವಿದ್ಯಾಸಂಸ್ಥೆಯ ಅಧ್ಯಕ್ಷ ಕರ್ನಲ್ ಬಿ ಜಿ ವಿ ಕುಮಾರ್, ಕಾರ್ಯದರ್ಶಿ ಮಧು ಬೋಪಣ್ಣ, ಪ್ರಾಂಶುಪಾಲ ಮಂದಪ್ಪ, ಆಡಳಿತ ಮಂಡಳಿ ಸದಸ್ಯರಾದ ಟಿ.ಪಿ.ಸಂದೇಶ್ ಮುಖ್ಯ ಶಿಕ್ಷಕಿ ರೀಟಾ ವೇದಿಕೆಯಲ್ಲಿದ್ದರು. ದೈಹಿಕ ಶಿಕ್ಷಕ ಪಾಲಾಕ್ಷ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಕಿ ಪವಿತಾ ವಂದಿಸಿದರು. ಕಾಯ೯ಕ್ರಮವನ್ನು ಉಪನ್ಯಾಸಕಿ ಪ್ರಮೀಳಾ…
ಮಡಿಕೇರಿ NEWS DESK ಜು.25 : ಆಶಾ ಕಾರ್ಯಕರ್ತೆಯರಿಗೆ ಈಗಾಗಲೇ ಘೋಷಿಸಿರುವ 10 ಸಾವಿರ ರೂ. ಗೌರವ ಧನವನ್ನು ನೀಡದಿರುವ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕೊಡಗು ಜಿಲ್ಲಾ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಉಪಾಧ್ಯಕ್ಷೆ ಎಂ.ಉಮಾದೇವಿ ಹಾಗೂ ಕೊಡಗು ಜಿಲ್ಲಾಧ್ಯಕ್ಷೆ ತೆಕ್ಕಡೆ ಬಿ.ಪೂರ್ಣಿಮಾ ಅವರ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಜಿಲ್ಲಾ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸಂಘದ ಉಪಾಧ್ಯಕ್ಷೆ ಉಮಾದೇವಿ ಎಂ.ಅವರು ಮಾತನಾಡಿ, ಕಳೆದ ಜನವರಿಯಲ್ಲಿ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ಪ್ರೋತ್ಸಾಹ ಧನ ಸೇರಿಸಿ ಕನಿಷ್ಟ 10 ಸಾವಿರ ಗೌರವ ಧನವನ್ನು ನೀಡುವುದಾಗಿ ಭರವಸೆ ನೀಡಿದ್ದರು. ಅಲ್ಲದೆ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಇನ್ಸೆಂಟಿವ್ನ್ನು ಶೀಘ್ರ…






