ಮಡಿಕೇರಿ ಜೂ.26 NEWS DESK : ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ.ಜ಼ಮೀರ್ ಅಹಮದ್ ಅವರಿಗೆ 2025ನೇ ಸಾಲಿನ ‘ನಾಡೋಜ ಕರೀಂ ಖಾನ್ ರಾಜ್ಯ ಪ್ರಶಸ್ತಿ’ ಲಭಿಸಿದೆ. ಡಾ.ಜ಼ಮೀರ್ ಅಹಮದ್ ಕರ್ನಾಟಕ ಜಾನಪದ ಕಲೆ, ಸಾಹಿತ್ಯದ ಸಂರಕ್ಷಣೆಗಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಬೆಂಗಳೂರು ಕನ್ನಡ ಜಾನಪದ ಪರಿಷತ್ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಥಮ ಕನ್ನಡ ಜಾನಪದ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಕನ್ನಡ ಸಾಹಿತ್ಯ ವಿದ್ಯಾರ್ಥಿಯಾಗಿರುವ ಜಮೀರ್ ಅಹಮದ್ ಅವರು ಶ್ರೀ ಕುವೆಂಪು ಅವರ ವಿಶ್ವಮಾನವ ಸಂದೇಶವನ್ನು ಬದುಕಿನುದ್ದಕ್ಕೂ ಮೈಗೂಡಿಸಿಕೊಂಡು ಸರ್ವ ಜನಾಂಗದ ಪ್ರೀತಿಗೆ ಪಾತ್ರರಾಗಿದ್ದಾರೆ. ಭಾಷೆ ನನ್ನ ಅಂತರಂಗದ ಮೃದಂಗ ಎಂಬ ಕನ್ನಡ ಪ್ರೇಮಿ ‘ಕಾಳಜಿಯ ಕನ್ನಡಿಗ’ ಎಂದೇ ಚಿರಪರಿಚಿತರು. ಕನ್ನಡ ಉಪನ್ಯಾಸಕರಾಗಿ ಮತ್ತು ಪತ್ರಕರ್ತರಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಜೀವನದಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಆರ್ಥಿಕವಾಗಿ ದುರ್ಬಲವಾಗಿರುವ ರೋಗಿಗಳಿಗೆ ಅದರಲ್ಲೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಸಾಮಾಜಿಕ ಜಾಲತಾಣದ ಮತ್ತು…
ಲೇಖಕ: admin
ಮಡಿಕೇರಿ ಜೂ.26 NEWS DESK : ಕಾಡಾನೆಯೊಂದು ಅಸಹಜ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ಊರುಗುಪ್ಪೆ ಪೈಸಾರಿಯಲ್ಲಿ ನಡೆದಿದೆ. ಸುಮಾರು 18 ವರ್ಷದ ಹೆಣ್ಣಾನೆಯ ಕಳೇಬರ ತೋಟವೊಂದರಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಕಾಡಾನೆಗಳ ನಡುವಿನ ಕಾದಾಟದಲ್ಲಿ ಹೆಣ್ಣಾನೆ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಘಟನೆ ನಡೆದು ಒಂದು ದಿನ ಕಳೆದಿದೆ ಎಂದು ಹೇಳಲಾಗಿದೆ. ಮಡಿಕೇರಿ ಡಿಸಿಎಫ್ ಹರ್ಷವರ್ಧನ, ಕುಶಾಲನಗರ ಎಸಿಎಫ್ ಗೋಪಾಲ್, ಆರ್.ಎಫ್.ಒ ರತನ್ ಹಾಗೂ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿದರು. ಹೆಣ್ಣಾನೆಯ ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಡಿಕೇರಿ ಜೂ.26 NEWS DESK : ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿ.ಎ(HEP, HPK, HEK), ಬಿ.ಕಾಂ(General), ಬಿ.ಕಾಂ (AEDP), ಬಿ.ಬಿ.ಎ ಪದವಿ ತರಗತಿಗಳಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಕಾಲೇಜು ನ್ಯಾಕ್ನಿಂದ ‘ಬಿ’ ಮರು ಮಾನ್ಯತೆ ಪಡೆದಿದ್ದು, ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಹೊಂದಿರುವ ಸುಸಜ್ಜಿತವಾದ ತರಗತಿ ಕೊಠಡಿಗಳು ಮತ್ತು ನುರಿತ ಬೋಧಕರನ್ನು ಒಳಗೊಂಡಿದೆ. ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಅವಶ್ಯಕವಿರುವ ಸುಮಾರು 14,000 ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯ, ಇ-ಗ್ರಂಥಾಲಯ, ಸ್ಮಾರ್ಟ್ಕ್ಲಾಸ್ ಸೌಲಭ್ಯ, ವೈಫೈ ಸೌಲಭ್ಯ, ಸಿ.ಸಿ.ಕ್ಯಾಮೆರಾ ಕಣ್ಗಾವಲಿನಲ್ಲಿರುವ ಸುಸಜ್ಜಿತ ಕಟ್ಟಡ, ಮಹಿಳಾ ದೌರ್ಜನ್ಯ ನಿರ್ಮೂಲನಾ ಸಮಿತಿ, ಮಾದಕ ವಸ್ತು ನಿರ್ಮೂಲನಾ ಸಮಿತಿ, ಸುಸಜ್ಜಿತ ಕಂಪ್ಯೂಟರ್ ಲ್ಯಾಬ್, ಆಧುನಿಕ ರೀತಿಯ ಬೋಧನ ಕ್ರಮ, ಉದ್ಯೋಗ ಮಾರ್ಗದರ್ಶನ ಕೇಂದ್ರ, ವಿದ್ಯಾರ್ಥಿ ನಿಲಯ, ಕ್ಯಾಂಟೀನ್ ವ್ಯವಸ್ಥೆ, ಇಕೋ ಕ್ಲಬ್, ವಿದ್ಯಾರ್ಥಿ ಭ್ರಾತೃತ್ವ ವೇದಿಕೆ, ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ಸಂಘ, ಅಂತರಕಾಲೇಜು ವಿದ್ಯಾರ್ಥಿಗಳ ಕಲಿಕಾ ವಿನಿಮಯ ಕಾರ್ಯಕ್ರಮಗಳು, ಪಠ್ಯದ ಜೊತೆಗೆ ಪಠ್ಯೇತರ…
ಮಡಿಕೇರಿ ಜೂ.26 NEWS DESK : ‘ಸಿಂಗಲ್ ಆರ್ಟಿಸಿ’ ನಿಯಮಾವಳಿಯಿಂದ ಕೊಡಗು ಜಿಲ್ಲೆಯ ಸಣ್ಣ ಮತ್ತು ಮಧ್ಯಮ ವರ್ಗದ ರೈತರು ಸರ್ಕಾರದ ‘ಶೂನ್ಯ ಬಡ್ಡಿ ದರದ ಸಾಲ’ ಯೋಜನೆಯ ಲಾಭ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಸಮಸ್ಯೆ ಬಗೆಹರಿಸಲು ಸರ್ಕಾರ ತಕ್ಷಣ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೊಡಗು ಏಕೀಕರಣ ರಂಗ ಆಗ್ರಹಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಏಕೀಕರಣ ರಂಗದ ಕಾರ್ಯದರ್ಶಿ ತೇಲಪಂಡ ಎಂ.ಸೋಮಯ್ಯ ಅವರು ಸಹಕಾರ ಸಂಘಗಳ ಮೂಲಕ ವಿತರಿಸುವ ಶೂನ್ಯ ಬಡ್ಡಿ ದರದ ಸಾಲದ ಪ್ರಯೋಜನ ಪಡೆಯಲು ಕೃಷಿಕರು ‘ಸಿಂಗಲ್ ಆರ್ಟಿಸಿ’ಯನ್ನು ನೀಡಬೇಕು, ಇಲ್ಲವೆ ಕುಟುಂಬದ ಇತರರ ಹೆಸರು ಇದ್ದಲ್ಲಿ, ಪಾಲು ಪಾರಿಕತ್ತು ಮಾಡಿಕೊಂಡು ಸಿಂಗಲ್ ಆರ್ಟಿಸಿ ಹೊಂದಬೇಕೆನ್ನುವ ನಿಯಮವನ್ನು ಸರ್ಕಾರ ರೂಪಿಸಿ ಕಡ್ಡಾಯಗೊಳಿಸಿದೆ. ಇದು ಕೃಷಿಕರು ಸಾಲ ಸೌಲಭ್ಯ ಪಡೆಯಲು ತೊಡಕನ್ನುಂಟುಮಾಡುತ್ತಿದೆ ಎಂದರು. ವಿಶಿಷ್ಟ ಭೂಹಿಡುವಳಿಗಳನ್ನು ಕೊಡಗು ಜಿಲ್ಲೆ ಹೊಂದಿದೆ. ಬಹಳಷ್ಟು ರೈತರು ಭೂಮಿಯನ್ನು ಹೊಂದಿದ್ದಾರಾದರು, ಅವರ ಆರ್ಟಿಸಿಯಲ್ಲಿ ಕುಟುಂಬದ ಹಲವರ ಹೆಸರು ದಾಖಲಾಗಿದೆ. ಮತ್ತೆ ಹಲವಷ್ಟು ಜಾಗಗಳಲ್ಲಿ ಕೃಷಿ…
ಮಡಿಕೇರಿ ಜೂ.26 NEWS DESK : ಮಹಿಳಾ ಸಾಂಸ್ಕೃತಿಕ ಸಂಘದ ಕಟ್ಟಡಕ್ಕೆ ಪಂಚಾಯತಿಯಲ್ಲಿ ಲಭ್ಯವಿರುವ ಹಣದಲ್ಲಿ ಕೆ.ಬಾಡಗ ಗ್ರಾಮ ಪಂಚಾಯತಿ ಕಚೇರಿಗೆ ಕಟ್ಟಡವನ್ನು ಖರೀದಿಸಲು ಅನುಮತಿ ನೀಡುವಂತೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮೀಣ ಅಭಿವೃದ್ಧಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಸಂದರ್ಭ ಕೆ.ಬಾಡಗ ಪಂಚಾಯಿತಿ ಅಧ್ಯಕ್ಷ ರೀತಿಶ್ ಬಿದ್ದಪ್ಪ, ಪಂಚಾಯಿತಿ ಸದಸ್ಯ ಸಿ.ಡಿ.ಬೋಪಣ್ಣ ಹಾಜರಿದ್ದರು.
ಮಡಿಕೇರಿ ಜೂ.26 NEWS DESK : ಸಾಹಿತ್ಯ ಲೋಕದ ಪ್ರತಿಷ್ಟಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಪಡೆದ ಕೊಡಗಿನ ಹೆಮ್ಮೆಯ ಲೇಖಕಿ ಮಡಿಕೇರಿಯ ದೀಪಾಭಾಸ್ತಿಯವರಿಗೆ ಕೊಡಗು ಪತ್ರಕತ೯ರ ಸಂಘದ ಆಶ್ರಯದಲ್ಲಿ ಜೂ.29 ರಂದು ಭಾನುವಾರ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಭಾನುವಾರ ಸಂಜೆ 5 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಅಧ್ಯಕ್ಷತೆಯಲ್ಲಿ ಆಯೋಜಿತ ದೀಪಾ ಹೆಸರಿನ ಅಭಿನಂದನಾ ಕಾಯ೯ಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್.ಪೊನ್ನಣ್ಣ ನೆರವೇರಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾಕುಶಾಲಪ್ಪ, ಮಡಿಕೇರಿ ನಗರಸಭೆ ಅಧ್ಯಕ್ಷೆ ಕಲಾವತಿ, ಜಿಲ್ಲಾಧಿಕಾರಿ ವೆಂಕಟರಾಜಾ, ಹೆಚ್ಚುವರಿ ಜಿಲ್ಲಾದಿಕಾರಿ ಆರ್. ಐಶ್ವಯ೯, ಕೊಡವ ಸಾಹಿತ್ಯ ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಅರೆಭಾಷಾ ಸಾಹಿತ್ಯ, ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ಪಾಲ್ಗೊಳ್ಳಲಿದ್ದಾರೆ ಸಂಸ್ಕೃತಿ ಅನಿಲ್ ಮಾಹಿತಿ…
ಮಡಿಕೇರಿ ಜೂ.26 NEWS DESK : ಪೊನ್ನಂಪೇಟೆ ತಾಲ್ಲೂಕು ನಿಟ್ಟೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಣ್ಣನ ಹಾಡಿಯ ನೂತನ ಸೇತುವೆಯ ಬಳಿ ಮಣ್ಣು ಕುಸಿಯುತ್ತಿದೆ. ಕಳೆದ ಸಾಲಿನಲ್ಲಿ ಸುರಿದ ಧಾರಾಕಾರ ಮಳೆಗೆ ಇಲ್ಲಿನ ಹಳೆಯ ಸೇತುವೆ ಕೊಚ್ಚಿ ಹೋಗಿತ್ತು. ಸ್ಥಳೀಯರ ಒತ್ತಾಯದ ಹಿನ್ನೆಲೆ ಇತ್ತೀಚೆಗೆ ನೂತನ ಸೇತುವೆಯನ್ನು ನಿರ್ಮಿಸಲಾಯಿತು. ಆದರೆ ಈ ಸೇತುವೆಯ ಬಳಿ ತಡೆಗೋಡೆ ನಿರ್ಮಿಸದೆ ಇರುವುದರಿಂದ ಇದೀಗ ಮಣ್ಣು ಕುಸಿಯುತ್ತಿದೆ. ಇದರಿಂದ ಸೇತುವೆಗೆ ಮತ್ತು ರಸ್ತೆಗೆ ಹಾನಿಯಾಗಬಹುದೆಂದು ಹಾಡಿ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ವೈಜ್ಞಾನಿಕ ರೂಪದಲ್ಲಿ ತಡೆಗೋಡೆ ನಿರ್ಮಿಸಿದರೆ ಸಮಸ್ಯೆ ಬಗೆಹರಿಯಲಿದೆ ಎಂದು ಹಾಡಿ ಮುಖಂಡ ಮಾರ ಅಭಿಪ್ರಾಯಪಟ್ಟಿದ್ದಾರೆ.
ಸೋಮವಾರಪೇಟೆ NEWS DESK ಜೂ.26 : ಬೆಂಗಳೂರು ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದಿಂದ ಕೆಂಪೇಗೌಡರ 516ನೇ ಜನ್ಮದಿನೋತ್ಸವ ಅಂಗವಾಗಿ ಕೊಡುವ ಸಾಧಕ ಪುರಸ್ಕಾರಕ್ಕೆ ಕೊಡಗು ಜಿಲ್ಲೆಯಿಂದ ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ತಾಕೇರಿ ಗ್ರಾಮದ ಎ.ಆರ್.ಮುತ್ತಣ್ಣ ಆಯ್ಕೆಯಾಗಿದ್ದಾರೆ. ಜೂ.27ರ ಶುಕ್ರವಾರದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಜೆ 4 ಗಂಟೆಗೆ ನಡೆಯುವ ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಲಾಗುತ್ತದೆ. ಎ.ಆರ್.ಮುತ್ತಣ್ಣ ಅವರು ಒಕ್ಕಲಿಗರ ಸಂಘದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಅಧ್ಯಕ್ಷರಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಸಂಘದ ವತಿಯಿಂದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಎಲ್ಕೆಜಿಯಿಂದ ಪಿಯುಸಿ ತನಕ 800 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶೇ.99ರಷ್ಟು ಗ್ರಾಮೀಣ ವಿದ್ಯಾರ್ಥಿಗಳು ಕುವೆಂಪು ವಿದ್ಯಾಸಂಸ್ಥೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ಕಲಿಯುತ್ತಿದ್ದಾರೆ.
ಕುಶಾಲನಗರ ಜೂ.26 NEWS DESK : ಕಾವೇರಿ ನದಿ ಹರಿಯುವ ಕಣಿವೆ ತೂಗುಸೇತುವೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಪರಿಶೀಲಿಸಿದರು. ನಂತರ ರಂಗಸಮುದ್ರ ಬಳಿ ಸೇತುವೆಯ ಪಕ್ಕದಲ್ಲಿ ಮಳೆಯಿಂದ ಕುಸಿತವಾದ ಸ್ಥಳವನ್ನು ಪರಿವೀಕ್ಷಿಸಿ ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಲೋಕೋಪಯೋಗಿ, ನೀರಾವರಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಸೋಮವಾರಪೇಟೆ NEWS DESK ಜೂ.26 : ರೋಟರಿ ಹಿಲ್ಸ್ ಸೋಮವಾರಪೇಟೆ ನೂತನ ಅಧ್ಯಕ್ಷರಾಗಿ ವೀಣಾ ಮನೋಹರ್ ಹಾಗೂ ಕಾರ್ಯದರ್ಶಿಯಾಗಿ ಡಿ.ಪಿ.ರಮೇಶ್ ಆಯ್ಕೆಯಾದರು. ರೋಟರಿ ಭವನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ 3181 ರೋಟರಿ ನಿಯೋಜಿತ ಜಿಲ್ಲಾ ರಾಜ್ಯಪಾಲ ಸತೀಶ್ ಬೋಳಾರ್ ನೂತನ ಆಡಳಿತ ಮಂಡಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಶಾಸಕ ಡಾ.ಮಂತರ್ಗೌಡ ಮಾತನಾಡಿ, ಸರ್ಕಾರ ಮಾಡಬೇಕಾದ ಕೆಲಸಗಳನ್ನು ರೋಟರಿ ಸಂಸ್ಥೆ ಮಾಡುತ್ತಿದೆ. ಸಮಾಜಸೇವೆಯಲ್ಲಿ ರೋಟರಿ ಸದಸ್ಯರ ನಿಸ್ವಾರ್ಥ ಸೇವೆ ಶ್ಲಾಘನೀಯವಾದುದು. ಸಮಾಜಸೇವಕರು ಈ ದೇಶದ ಸಂಪತ್ತಾಗಿದ್ದು ಸಮಾಜವೂ ಅವರನ್ನು ಗೌರವಿಸುತ್ತದೆ ಎಂದು ಹೇಳಿದರು. ಪ್ರಮಪಂಚದಲ್ಲಿ ಪೊಲೀಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯ ಕೊಡುಗೆ ಅಪಾರವಾದುದು ಎಂದು ಹೇಳಿದರು. ರೋಟರಿ ಮಾಜಿ ಅಧ್ಯಕ್ಷ ಜೆ.ಕೆ.ಪೊನ್ನಪ್ಪ, ಕಾರ್ಯದರ್ಶಿ ಬಿದ್ದಪ್ಪ, ಸಹಾಯಕ ರಾಜ್ಯಪಾಲರಾದ ಹರಿ ಎ ಶೆಟ್ಟಿ, ಉಲ್ಲಾಸ್ ಕೃಷ್ಣ, ವಲಯ ಸೇನಾನಿಗಳಾದ ಪ್ರಕಾಶ್ ಕುಮಾರ್, ಡಾ.ರಾಕೇಶ್ ಪಟೇಲ್ ಇದ್ದರು.






