ಲೇಖಕ: admin

ಮಡಿಕೇರಿ ಜು.25 NEWS DESK : ನಗರ ದಸರಾ ಸಮಿತಿಯ 2024ನೇ ಸಾಲಿನ ಜಮಾ ಖರ್ಚು ಮಂಡನೆ ಹಾಗೂ 2025 ರ ಅಕ್ಟೋಬರ್ ಮಾಹೆಯಲ್ಲಿ ಜರುಗುವ ಮಡಿಕೇರಿ ದಸರಾ ಆಚರಣೆಯ ಪೂರ್ವ ಸಿದ್ಧತೆ ಬಗ್ಗೆ ಜು.26 ರಂದು ಸಂಜೆ 4 ಗಂಟೆಗೆ ನಗರ ದಸರಾ ಸಮಿತಿಯ ಅಧ್ಯಕ್ಷರು ಹಾಗೂ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ನಗರದ ಹೋಟೆಲ್ ರಾಜ್ ದರ್ಶನ್‍ನಲ್ಲಿ ದಸರಾ ಆಚರಣೆಯ ಪೂರ್ವಭಾವಿ ಸಭೆ ನಡೆಯಲಿದೆ. ಸಂಪ್ರದಾಯದಂತೆ ಜು.26 ರಂದು ಮಧ್ಯಾಹ್ನ 3 ಗಂಟೆಗೆ ಪೇಟೆ ಶ್ರೀರಾಮಮಂದಿರ ದೇವಾಲಯದಲ್ಲಿ ಪ್ರಥಮ ಪೂಜೆ ನಡೆಯಲಿದೆ ಎಂದು ನಗರಸಭೆ ಹಾಗೂ ನಗರ ದಸರಾ ಸಮಿತಿ ಅಧ್ಯಕ್ಷರಾದ ಪಿ.ಕಲಾವತಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜು.25 NEWS DESK : ಸೆಪ್ಟೆಂಬರ್ 1 ರಿಂದ ತಿಂಗಳಾವಧಿಗೆ ಜರುಗಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭಕ್ಕೆ ಲಿಂಗಾಯಿತ ಮಠದಿಪತಿಗಳ ಒಕ್ಕೂಟದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಯಿತು. ಅಕ್ಟೋಬರ್ 5 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರ ನೇತೃತ್ವದಲ್ಲಿ ಸುಮಾರು ಹತ್ತಕ್ಕೂ ಅಧಿಕ ಪೀಠಾಧಿಪತಿಗಳು ಮುಖ್ಯಮಂತ್ರಿಗಳನ್ನು ಭೇಟಿಯಾದರು. ಇದೇ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್ ಪೊನ್ನಣ್ಣ ಅವರನ್ನು ಆಹ್ವಾನಿಸಲಾಯಿತು.

Read More

ಮಡಿಕೇರಿ ಜು.25 NEWS DESK : 2025-26 ನೇ ಸಾಲಿನ ಕಾರ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾರ್ಯಾಧ್ಯಕ್ಷರಾಗಿ ಕೋಟೆಮಾರಿಯಮ್ಮ ದೇವಾಲಯದ ಅರುಣ್ ಕುಮಾರ್ ಆಯ್ಕೆಯಾಗಿದ್ದಾರೆ. ಮಡಿಕೇರಿ  ದಸರಾ ಸಮಿತಿಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ  ಚುನಾವಣಾ ಪ್ರಕ್ರಿಯೆಯು  ಮಡಿಕೇರಿಯ ರಾಜ್ ದರ್ಶನ್ ಸಭಾಂಗಣದಲ್ಲಿ ನಡೆಯಿತು. ಬಹಳ ಕುತುಹಲ ಕೆರಳಿಸಿದ್ದ ಕಾರ್ಯಧ್ಯಕ್ಷ ಸ್ಥಾನಕ್ಕೆ ತೆರೆಬಿದ್ದಿದ್ದು, ಮುಂದಿನ ಎರಡು ವರ್ಷ  ಬಿ.ಕೆ.ಅರುಣ್ ಕುಮಾರ್  ಅಧಿಕಾರ ವಹಿಸಲಿದ್ದಾರೆ. ಈ ಒಂದು ಸ್ಥಾನಕ್ಕೆ ನಾಲ್ಕು ಜನರ ನಡುವೆ ಬಹಳ ಪೈಪೋಟಿ ನಡೆದಿದ್ದು, ಚುನಾವಣೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಿತು.  ಇದರಲ್ಲಿ ಕೋಟೆಮಾರಿಯಮ್ಮ ದೇವಾಲಯದ ಜಿ‌.ಸಿ.ಜಗದೀಶ್, ಕೋದಂಡ ರಾಮ ದೇವಾಲಯದ ಜಯಂತಿ ಶೆಟ್ಟಿ ರೈ, ಕೋಟೆ ಮಾರಿಯಮ್ಮ  ದೇವಾಲಯದ ಅರುಣ್ ಕುಮಾರ್ ಹಾಗೂ ದೇಚೂರು ಶ್ರೀ ರಾಮಮಂದಿರ  ದೇವಾಲಯದ ಟಿ.ಎಂ.ಅಯ್ಯಪ್ಪ ಅವರುಗಳ ನಡುವೆ ಪೈಪೋಟಿ ನಡೆಯಿತು. ಚುನಾವಣೆಯಲ್ಲಿ  ಕೋಟೆ ಮಾರಿಯಮ್ಮ  ದೇವಾಲಯದ ಅರುಣ್ ಕುಮಾರ್ 6 ಮತಗಳನ್ನ ಪಡೆಯುವ ಮೂಲಕ ಮುಂದಿನ ಎರಡು ವರ್ಷ ಅಧಿಕಾರ ಹಿಡಿದಿದ್ದಾರೆ. ಇದರ ಜೊತೆಗೆ ಉಪಾಧ್ಯಕ್ಷರಾಗಿ ಪೇಟೆ…

Read More

ಮಡಿಕೇರಿ ಜು.25 NEWS DESK : ಪೊನ್ನಂಪೇಟೆ ತಾಲ್ಲೂಕು ತಹಶೀಲ್ದಾರರ ಕಚೇರಿಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಮಾಹಿತಿ ಪಡೆದರು. ಈ ಸಂದರ್ಭ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಹಶಿಲ್ದಾರ್ ಮೋಹನ್ ಕುಮಾರ್ ಇತರರು ಇದ್ದರು. 

Read More

ವಿರಾಜಪೇಟೆ ಜು.25 NEWS DESK : ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಪಂಜರಪೇಟೆಯಲ್ಲಿರುವ ಸರ್ವೋದಯ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಕಳೆದ 50 ವರ್ಷಗಳಿಂದ ನಾಡಿನ ಯುವಜನತೆಗೆ ವಿದ್ಯಾರ್ಜನೆ ಮಾಡುತ್ತಾ ಯಶಸ್ಸು ಕಂಡಿರುವ ಈ ವಿದ್ಯಾಸಂಸ್ಥೆಯು ಮುಂದಿನ ದಿನಗಳಲ್ಲಿ ಮತ್ತಷ್ಟು ಯಶಸ್ಸನ್ನು ಕಾಣುತ್ತಾ ನಾಡಿನ ಯುವಕ ಯುವತಿಯರಿಗೆ ಉತ್ತಮ ಶಿಕ್ಷಣ ನೀಡುವಂಥಾಗಲಿ ಎಂದು ಶುಭ ಹಾರೈಸಿದರು. ಕಲಿಕೆಯೇ ದೇಶದ ಅಭಿವೃದ್ಧಿಗೆ ಮೂಲ ಮಂತ್ರವಾಗಿದ್ದು, ಕಾಲೇಜು ಹಂತದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಮುಂದಿನ ಗುರಿ ಸಾಧನೆ ತಮ್ಮ ಗಮನವನ್ನು ಕೇಂದ್ರೀಕರಿಸಲು ಈ ಹಂತದ ವಿದ್ಯಾಭ್ಯಾಸ ಪ್ರಮುಖವಾಗಿರುತ್ತದೆ ಎಂಬ ಕಿವಿ ಮಾತನ್ನು ಹೇಳಿದರು. ಕಾರ್ಯಕ್ರಮದಲ್ಲಿ ಶಾಸಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕುಲ ಸಚಿವರಾದ ಪ್ರೊ ಅಶೋಕ ಸಂಗಪ್ಪ ಆಲೂರ, ಶಕ್ತಿ ದಿನ ಪತ್ರಿಕೆ ಸಂಪಾದಕ  ಚಿದ್ವಿಲಾಸ್ ಜಿ, ಪುರಸಭೆ ಅಧ್ಯಕ್ಷೆ…

Read More

ಮಡಿಕೇರಿ ಜು.25 NEWS DESK : ವಿರಾಜಪೇಟೆಯ ಪುರಸಭೆ ಕಾಮಗಾರಿಗಳಿಗೆ ನೂತನವಾಗಿ ಖರೀದಿಸಿದ ಬ್ಯಾಕ್ ಹೋಲ್ ಲೋಡರ್ ಯಂತ್ರಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಪುರಸಭೆ ಕಚೇರಿ ಆವರಣದಲ್ಲಿ ವಾಹನ ಚಲಾಯಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಶಾಸಕರು, ತೀವ್ರ ಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ವಿರಾಜಪೇಟೆ ಪುರಸಭೆಗೆ ಈ ಯಂತ್ರದ ಅವಶ್ಯಕತೆ ಇದ್ದು, ಇದರ ಸೇರ್ಪಡೆಯೊಂದಿಗೆ ಪುರಸಭೆಯ ಕಾಮಗಾರಿಗಳು ಮತ್ತಷ್ಟು ವೇಗ ಪಡೆಯಲು ಸಹಕಾರಿಯಾಗಲಿದೆ. ಇದರ ಸದುಪಯೋಗವನ್ನು ಪುರಸಭೆಯ ಅಧಿಕಾರಿಗಳು ಉಪಯೋಗಿಸಿಕೊಳ್ಳಬೇಕೆಂದು ಕರೆ ನೀಡಿದರು.  ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದ ಮಾನ್ಯ ಶಾಸಕರು, ಜನಸಾಮಾನ್ಯರಿಗೆ ಅನುಕೂಲ ಆಗುವಂತೆ ಕಾರ್ಯನಿರ್ವಹಿಸಬೇಕೆಂದರು.  ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಉಪಾಧ್ಯಕ್ಷೆ  ಫಜಿಯ ತಬಸಂ, ಮುಖ್ಯ ಅಧಿಕಾರಿ ನಾಚಪ್ಪ, ಪುರಸಭೆ ಸದಸ್ಯರುಗಳು, ನಾಮನಿರ್ದೇಶಿತ ಸದಸ್ಯರು, ಸಿಬ್ಬಂದಿ ವರ್ಗದವರು, ಪುರಸಭೆ ಕಾರ್ಮಿಕರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಜು.25 NEWS DESK : 2025 -26ನೇ ಸಾಲಿನ ದಸರ ದಶಮಂಟಪ ಸಮಿತಿಯ ಮೊದಲ ಸಭೆಯು ಕೋಟೆಮಹಾಗಣಪತಿ ದೇವಾಲಯದ ಸಮಿತಿಯ ನೇತೃತ್ವದಲ್ಲಿ  ಮಡಿಕೇರಿಯ ರಾಜ್ ದರ್ಶನ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನ ದೀಪ ಬೆಳಗುವ ಮೂಲಕ ಗಣ್ಯ ಅಥಿಗಳು ಉದ್ಘಾಟಿಸಿದರು. ಸಭೆಯಲ್ಲಿ ಕರಗೋತ್ಸವ ವ್ಯವಸ್ಥೆಯಲ್ಲಿ ಆಗಬೇಕಾದ ಬದಲಣೆಯ ಕುರಿತು ಚರ್ಚೆ ನಡೆದಿದ್ದು,  ಇದರಲ್ಲಿ ರಸ್ತೆಗಳ ಅಭಿವೃದ್ಧಿ, ಲೈಟಿಂಗ್ ವ್ಯವಸ್ಥೆ, ಸಮಯಕ್ಕೆ ಸರಿಯಾಗಿ ಬಹುಮಾನ ವಿತರಣೆ, ಕರಗಳ ಮುಂದೆ ಕುಣಿವುದನ್ನ ತಡೆಯಬೇಕು, ಬಹುಮಾನ ತೀರ್ಪನ್ನು ಗೌಪ್ಯವಾಗಿಟ್ಟು ಪ್ರಕಟಿಸಬೇಕು, ಕರಗ ಕಟ್ಟುವ ಸ್ಥಳದ ಶುದ್ಧತೆಯನ್ನ ಕಾಪಾಡುವ ನಿಟ್ಟಿನಲ್ಲಿ ದಶಮಂಟಪ ಸಮಿತಿ ಎಚ್ಚರ ವಹಿಸಬೇಕು. ಕರಗಗೋತ್ಸವ ಆರಂಭವಾದ ದಿನದಿಂದ ದಸರಾ ಕೊನೆಯ ದಿನದವರೆಗೆ ಲೈಟಿಂಗ್ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಬೇಕು, ಹೆಚ್ಚು ಅನುದಾನತರುವಲ್ಲಿ ಸಮಿತಿ ಪ್ರಮುಖ್ಯತೆ ವಹಿಸಬೇಕು ಸೇರಿದಂತೆ ಹಲವು ಬದಲಾವಣೆಗಳ ಕುರಿತು ಚರ್ಚೆ ನಡೆಸಲಾಯಿತು. ಕೋಟೆ ಮಹಾಗಣಪತಿ ದೇವಾಲಯದ ಗೌರವ ಅಧ್ಯಕ್ಷರಾದ ಬಿ.ಎಂ.ರಾಜೇಶ್ ಮಾತನಾಡಿ, ಈ ಬಾರಿ ದಸರಾವನ್ನ ಬಹಳ ಅಚ್ಚುಕಟ್ಟಾಗಿ ಮಾಡುವ…

Read More

ಮಡಿಕೇರಿ ಜು.25 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ವತಿಯಿಂದ 2025 ರ ಅಕ್ಟೋಬರ್, 01 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ/ ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಈ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುವುದು. ಆದ್ದರಿಂದ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಡಿಕೇರಿ ಇಲ್ಲಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಎಲ್ಲಾ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ದಿನಾಂಕ:…

Read More

ಮಡಿಕೇರಿ ಜು.25 NEWS DESK : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆ.5 ರಿಂದ 30 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸೆಲ್ ಫೋನ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾμÉ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಆಗಸ್ಟ್, 05 ರಂದು ಬೆಳಗ್ಗೆ 9 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ,…

Read More

ಮಡಿಕೇರಿ ಜು.25 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ, ಸಮೀಕ್ಷೆಯ ರೂಪುರೇಷೆಗಳನ್ನು ಸುದೀರ್ಘವಾಗಿ ಚರ್ಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಪ್ರಮುಖ ಸೂಚನೆ ನೀಡಿದರು. ಹಿಂದುಳಿದ ವರ್ಗಗಳ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂಧನ ಆರ್ ನಾಯ್ಕ್, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ||ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Read More