ಲೇಖಕ: admin

ನಾಸಾ ಜೂ.25 NEWS DESK : ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಹೊತ್ತ ಆಕ್ಸಿಯಮ್-4 ಮಿಷನ್ (Axiom-4) ಕೊನೆಗೂ ಇಂದು ಬುಧವಾರ ಭಾರತೀಯ ಕಾಮಾನ ಮಧ್ಯಾಹ್ನ 12.01ಕ್ಕೆ ಅಮೆರಿಕದ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಡೆಗೆ ಯಶಸ್ವಿಯಾಗಿ ಚಿಮ್ಮಿದೆ. ಇಂದು ಮಧ್ಯಾಹ್ನದಿಂದ 28 ಗಂಟೆಗಳ ಪ್ರಯಾಣದ ನಂತರ, ಬಾಹ್ಯಾಕಾಶ ನೌಕೆ ನಾಳೆ (ಜೂ.26) ಗುರುವಾರ ಸಂಜೆ 4:30 (IST) ಸುಮಾರಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ನೊಂದಿಗೆ ಡಾಕ್ ಆಗುವ ನಿರೀಕ್ಷೆಯಿದೆ. ಗಗನಯಾತ್ರಿಗಳು ಬಾಹ್ಯಾಕಾಶ ನೌಕೆ ನಿಲ್ದಾಣದಲ್ಲಿ ಸುಮಾರು 14 ದಿನಗಳನ್ನು ಕಳೆಯಲಿದ್ದಾರೆ. ನಾಸಾದ ಮಾಜಿ ಗಗನಯಾತ್ರಿ ಮತ್ತು ಆಕ್ಸಿಯಮ್ ಸ್ಪೇಸ್‌ನಲ್ಲಿ ಮಾನವ ಬಾಹ್ಯಾಕಾಶ ಹಾರಾಟದ ನಿರ್ದೇಶಕಿ ಪೆಗ್ಗಿ ವಿಟ್ಸನ್ ಈ ವಾಣಿಜ್ಯ ಕಾರ್ಯಾಚರಣೆಯನ್ನು ಮುನ್ನಡೆಸಿದ್ದಾರೆ. ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಗಗನಯಾತ್ರಿ ಶುಭಾನ್ಶು ಶುಕ್ಲಾ ಪೈಲಟ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇಬ್ಬರು ಮಿಷನ್ ತಜ್ಞರು ಪೋಲೆಂಡ್‌ನ ಇಎಸ್‌ಎ (ಯುರೋಪಿಯನ್ ಬಾಹ್ಯಾಕಾಶ…

Read More

ಸುಂಟಿಕೊಪ್ಪ ಜೂ.25 NEWS DESK : ಹಿಂದಿನ ಕಾಲದಲ್ಲಿ ನಾವುಗಳು ವನ್ಯಪ್ರಾಣಿಗಳನ್ನು ಪ್ರಾಣಿ ಸಂಗ್ರಹಾಲಯ, ಸರ್ಕಸ್, ಸಿನಿಮಾ ಅಥವಾ ಅರಣ್ಯಕ್ಕೆ ತೆರಳಿ ನೋಡಬೇಕಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ವನ್ಯಪ್ರಾಣಿಗಳು ನಾಡಿನಲ್ಲೇ ಕಾಣುವಂತಾಗಿದೆ ಎಂದು ಯೋಜನಾಧಿಕಾರಿ ಪುರೋಷತ್ತಮ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಕಾರ್ಯಕ್ಷೇತ್ರದ ವತಿಯಿಂದ ಕಾನ್‍ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಪರಿಸರ ದಿನಚಾರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಅವರು ಮಾತನಾಡಿದರು. ಪರಿಸರವನ್ನು ಉಳಿಸಿ ಬೆಳೆಸಬೇಕಾದ ನಾವುಗಳು ಆಧುನಿಕತೆಯ ಭರಾಟೆಯಲ್ಲಿ ನಿತ್ಯ ಪರಿಸರವನ್ನು ನಾಶಗೊಳಿಸಲಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಹವಾಮಾನ ವೈಪರೀತ್ಯ ಸೇರಿದಂತೆ ಕಾಡು ಪ್ರಾಣಿಗಳು ಆಹಾರ ಅರಸಿ ನಾಡಿನತ್ತ ಮುಖ ಮಾಡುತ್ತಿರುವುದು ಸರ್ವೆ ಸಾಮಾನ್ಯವಾಗಿದೆ. ಆದುದ್ದರಿಂದ ನಮ್ಮ ಸುತ್ತ ಮುತ್ತಲಿನಲ್ಲಿರುವ ಪಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯಕ್ಕೆ ಪ್ರತಿಯೊಬ್ಬರು ಮುಂದಾಗಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂದೋಡಿ ಜಗನ್ನಾಥ್, ಪರಿಸರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿ…

Read More

ನವದೆಹಲಿ ಜೂ.25 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ  ಹಲವು ಸಂಗತಿಗಳ ಕುರಿತು ಚರ್ಚಿಸಿದರು. 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಯವನ್ನು 16ನೇ ಹಣಕಾಸು ಆಯೋಗದಲ್ಲಿ ಸರಿದೂಗಿಸುವ ಜೊತೆಗೆ ರಾಜ್ಯದ ಪಾಲನ್ನು ಒದಗಿಸುವುದೂ ಸೇರಿದಂತೆ ಹಲವು ಸಂಗತಿಗಳ ಕುರಿತು ಚರ್ಚಿಸಿ ರಾಜ್ಯದ ಪರವಾಗಿ ಮನವಿ ಸಲ್ಲಿಸಿದರು.

Read More

ಮಡಿಕೇರಿ ಜೂ.25 NEWS DESK : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 60.92 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 22.50 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1234.91 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 582.32 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 57.18 ಮಿ.ಮೀ. ಕಳೆದ ವರ್ಷ ಇದೇ ದಿನ 22.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1800.20 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 833.65 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 49.95 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 44.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1230.30 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 537.75 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 73.52 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…

Read More

ಮಡಿಕೇರಿ ಜೂ.25 NEWS DESK :  ಕೊಡಗಿನಲ್ಲಿ ಕೊಡಗಿನಲ್ಲಿ ಗಾಳಿ ಸಹಿತ ಮಳೆಯಾಗುತ್ತಿದ್ದು, ಹವಮಾನ ಇಲಾಖೆ ಜೂ.26 ರ ಬೆಳಿಗ್ಗೆ 8.30 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ.

Read More

ನವದೆಹಲಿ ಜೂ.25 NEWS DESK : ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ  ಏಳು ಬಿಲ್ಲುಗಳನ್ನು  ಬಗ್ಗೆ ರಾಷ್ಟ್ರಪತಿಗಳನ್ನು ಇಂದು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು  ತಿಳಿಸಿದ್ದು, ಅವುಗಳನ್ನು  ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ,  ವಾರದ ಹಿಂದೆ 16 ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿ ಮಾಡಿದ್ದು, ಎರಡನೇ ಹೆಚ್ಚುವರಿ ಮನವಿಯನ್ನು ಕೊಟ್ಟು, 14 ನೇ ಹಣಕಾಸು ಆಯೋಗದಲ್ಲಿ 4.7% ಅಡ್ಡವಾಗಿ  ತೆರಿಗೆ ಹಂಚಿಕೆಯಾಗಿತ್ತು. 15 ನೇ ಹಣಕಾಸು ಆಯೋಗದಲ್ಲಿ  3.6% ಆಗಿದೆ. ಶೇಕಡಾ  1.1% ಕಡಿಮೆಯಾಗಿದ್ದು, ಇದು ಒಟ್ಟಾರೆ  ಅನುದಾನ ಹಂಚಿಕೆಯಲ್ಲಿ ಶೇ. 23% ಗಿಂತಲೂ ಕಡಿಮೆಯಾಗಿದೆ. 5 ವರ್ಷಗಳಲ್ಲಿ ಒಟ್ಟು 80000 ಕೋಟಿ ಕಡಿಮೆಯಾಗಿದೆ ಎಂದರು. :: ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ ::  ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ …

Read More

ಮಡಿಕೇರಿ ಜೂ.25 NEWS DESK :  ಕೊಡಗು ಪತ್ರಕತ೯ರ ಸಂಘ ವತಿಯಿಂದ ಜು.1 ರಂದು  ಮಡಿಕೇರಿಯ ಪತ್ರಿಕಾಭವನದಲ್ಲಿ ಪತ್ರಿಕಾ ದಿನಾಚರಣೆ ಮತ್ತು ವಾಷಿ೯ಕ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನ ಟ್ರಸ್ಟ್ ಸಭಾಂಗಣದಲ್ಲಿ ಮಂಗಳವಾರ ಬೆಳಗ್ಗೆ 10.30 ಗಂಟೆಗೆ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಅಧ್ಯಕ್ಷತೆಯಲ್ಲಿ ಆಯೋಜಿತ ಪತ್ರಿಕಾ ದಿನಾಚರಣೆ ಸಮಾರಂಭವನ್ನು ಸಮಾಜಸೇವಕ ತೇಲಪಂಡ ಶಿವಕುಮಾರ್ ನಾಣಯ್ಯ ಉದ್ಧಾಟಿಸಲಿದ್ದಾರೆ. ಕೊಡಗು ಜಿಲ್ಲಾ ವಾತಾ೯ ಮತ್ತು ಸಾವ೯ಜನಿಕ ಸಂಪಕ೯ ಇಲಾಖೆಯ ಸಹಾಯಕ ನಿದೇ೯ಶಕ ಚಿನ್ನಸ್ವಾಮಿ, ಹೊಸ ದಿಗಂತ ಪತ್ರಿಕೆಯ ಜಿಲ್ಲಾ ವರದಿಗಾರ ಕೆ. ತಿಮ್ಮಪ್ಪ, ಕೊಡಗು ಪತ್ರಕತ೯ರ ಸಂಘದ ಸ್ಥಾಪಕ ಅಧ್ಯಕ್ಷ ಎಸ್.ಎ. ಮುರಳೀಧರ್, ಸಂಘದ ಕ್ಷೇಮಾಭಿವೖದ್ದಿ ಸಮಿತಿಯ ಅಧ್ಯಕ್ಷ ಜಿ.ವಿ. ರವಿಕುಮಾರ್ ಕಾಯ೯ಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ಕಾಯ೯ಕ್ರಮದಲ್ಲಿ ಕೊಡಗು ಪತ್ರಕತ೯ರ ಸಂಘದ 2024 ನೇ ಸಾಲಿನ ವಾಷಿ೯ಕ ದತ್ತಿ ನಿಧಿ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಗುತ್ತದೆ. ಅಂತೆಯೇ ಸಂಘದ ಸದಸ್ಯರಿಗೆ ಗುರುತಿನ…

Read More

ಕುಶಾಲನಗರ ಜೂ.25 NEWS DESK :  ಕುಶಾಲನಗರ ರೋಟರಿ ನೂತನ ಅಧ್ಯಕ್ಷರಾಗಿ ಮನು ಪೆಮ್ಮಯ್ಯ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಹೆಚ್.ಪಿ.ಮಂಜುನಾಥ ನೇಮಕಗೊಂಡಿದ್ದಾರೆ. ಕುಶಾಲನಗರ ರೋಟರಿ 50ನೇ ವರ್ಷಕ್ಕೆ ಕಾಲಿಡುತ್ತಿದ್ದು, ಕುಶಾಲನಗರ ರೈತ ಭವನದಲ್ಲಿ ಇಂದು (ಜೂ.25) ರಂದು ನಡೆಯುವ ಸಮಾರಂಭದಲ್ಲಿ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಜಿಲ್ಲಾ ಮಾಜಿ ರಾಜ್ಯಪಾಲರಾದ ರಂಗನಾಥ ಭಟ್ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

Read More

ನಾಪೋಕ್ಲು ಜೂ.25 NEWS DESK : ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ ಬಿರುಸುಗೊಂಡಿದ್ದು ನದಿ, ತೋಡುಗಳು ತುಂಬಿ ಹರಿಯುತ್ತಿವೆ. ಬಿರುಸಿನ ಮಳೆಯೊಂದಿಗೆ ಗಾಳಿಯೂ ಬೀಸಿ ಜನಜೀವನ ಅಸ್ತವ್ಯಸ್ತಗೊಂಡಿತು. ರಭಸದ ಗಾಳಿಯಿಂದ ಹಲವೆಡೆ ಮನೆ, ಶೆಡ್‍ಗಳಿಗೆ ಹಾನಿಯಾಗಿದೆ. ಮನೆಗೆ ಹಾಸಿದ್ದ ಶೀಟ್‍ಗಳು ಹಾರಿಹೋಗಿ ನಷ್ಟ ಸಂಭವಿಸಿದೆ. ಕರಡ ಗ್ರಾಮದ ಟಿ.ಡಿ.ಚಿಣ್ಣಪ್ಪ ಎಂಬವರ ವಾಸದ ಮನೆಯ ಪಕ್ಕದಲ್ಲಿದ್ದ ಶೌಚಾಲಯ ಕುಸಿದು ಬಿದ್ದು, ನಷ್ಟ ಸಂಭವಿಸಿದೆ. ಕೊಳಕೇರಿ ಗ್ರಾಮದ ತಟ್ಟಂಡ ವಿಮಲಾ ಅವರ ವಾಸದ ಮನೆಯ ಮೇಲ್ಛಾವಣಿ ಮಳೆಯಿಂದ ಹಾನಿಯಾಗಿದೆ. ಬಾವಲಿ ಗ್ರಾಮದ ಪಾಂಡಾಂಡ ಕುಟುಂಬಸ್ಥರ ಐನ್ ಮನೆಗೆ ಕುಸಿದು ಬಿದ್ದು ಪೂರ್ಣ ಹಾನಿಯಾಗಿರುತ್ತದೆ. ಐನ್ ಮನೆಯಲ್ಲಿ ಯಾರು ವಾಸ ಇಲ್ಲದೇ ಇದ್ದುದರಿಂದ ಸಮಸ್ಯೆ ಉಂಟಾಗಿಲ್ಲ. ಸ್ಥಳಕ್ಕೆ ಕಂದಾಯ ಪರಿವೀಕ್ಷಕ ರವಿಕುಮಾರ್ ಹಾಗೂ ಗ್ರಾಮಲೆಕ್ಕಿಗರು, ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದರು. ಎರಡು ದಿನಗಳಿಂದ ಬಿರುಸುಗೊಂಡ ಮಳೆಯಿಂದಾಗಿ ಕಾವೇರಿ ನದಿ, ತೊರೆಗಳು ತುಂಬಿ ಹರಿಯುತ್ತಿದೆ. ಇದರಿಂದಾಗಿ ಹೋಬಳಿ ವ್ಯಾಪ್ತಿಯಲ್ಲಿ ನದಿ ದಡದಲ್ಲಿರುವ ಗದ್ದೆ ತೋಟಗಳು ಮುಳುಗಡೆಯಾಗಿ…

Read More

ನಾಪೋಕ್ಲು ಜೂ.25 NEWS DESK : ಪೇರೂರು ಗ್ರಾಮದಲ್ಲಿ ನಿರಂತರ ಕಾಡಾನೆಗಳ ಹಾವಳಿಯಿಂದ ರೈತರು ತೀವ್ರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಗ್ರಾಮದಲ್ಲಿ ಕಾಡಾನೆಗಳ ಹಿಂಡು ದಾಂಧಲೆ ನಡೆಸಿದ್ದು, ಅಡಿಕೆ, ಕಾಫಿ, ಬಾಳೆ ಗಿಡಗಳನ್ನು ನಾಶಪಡಿಸಿವೆ. ಕಾಡಾನೆಗಳ ಹಾವಳಿಯಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬಲ್ಲಮ್ಮವಟ್ಟಿ ಗ್ರಾಮ ಪಂಚಾಯಿತಿಯ ಪೇರೂರು ಗ್ರಾಮದ ನಿವಾಸಿ ಮಣವಟ್ಟೀರ ದಯ ಚಿಣ್ಣಪ್ಪ ಅವರ ತೋಟಗಳಲ್ಲಿ ದಾಳಿ ನಡೆಸಿರುವ ಕಾಡಾನೆಗಳ ಹಿಂಡು ಅಡಿಕೆ, ಕಾಫಿ, ಬಾಳೆ ಗಿಡಗಳನ್ನು ಧ್ವಂಸಗೊಳಿಸಿವೆ. ಅಲ್ಲದೆ ಕೃಷಿ ಪರಿಕರ ಮತ್ತು ಫಸಲುಗಳಿಗೆ ಹಾನಿ ಉಂಟು ಮಾಡಿದೆ. ಪಂದೇಟು ಕಾಲೋನಿ ಸೇರಿದಂತೆ ಗ್ರಾಮದ ಹಲವೆಡೆ ನಾಲ್ಕಾರು ಕಾಡಾನೆಗಳು ಅಡ್ಡಾಡುತ್ತಿದ್ದು, ಶಾಲಾ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಗೆ ಆತಂಕ ಎದುರಾಗಿದೆ. ಬಲ್ಲಮಾವಟಿ ಗ್ರಾಮ ಪಂಚಾಯಿತಿ ಸದಸ್ಯ ಮಚ್ಚುರ ರವೀಂದ್ರ ಸೇರಿದಂತೆ ಇನ್ನಿತರ ತೋಟದಲ್ಲೂ ಕೃಷಿ ಗಿಡಗಳನ್ನು ಕಾಡಾನೆಗಳು ಹಾಳುಗೆಡವಿದೆ. ಗ್ರಾಮದಲ್ಲಿ ಕಾಡಾನೆಗಳ ಉಪಟಳವನ್ನು ತಡೆಗಟ್ಟಲು ಇಲಾಖೆ ಮುಂದಾಗಬೇಕು ಹಾಗೂ ಸೂಕ್ತ ನಷ್ಟ ಪರಿಹಾರವನ್ನು ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ವರದಿ : ದುಗ್ಗಳ…

Read More