ಮೈಸೂರು ಜು. 24 NEWS DESK : ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ದಿವಾಳಿಯತ್ತ ಸಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಸಣ್ಣ ವ್ಯಾಪಾರಿಗಳ ಮೇಲೆ ತೆರಿಗೆ ಬ್ರಹ್ಮಾಸ್ತ್ರ ಬಿಟ್ಟಿದೆ. ಜಿಎಸ್ಟಿ ನೋಟಿಸ್ ನೀಡುವ ಮೂಲಕ ವ್ಯಾಪಾರಿಗಳ ಹೊಟ್ಟೆ ಮೇಲೆ ಪೆಟ್ಟು ನೀಡುವ ಯೋಜನೆಯಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಎಂದು ದೂರಿದ್ದಾರೆ. ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಂಸದರು, ವಾಣಿಜ್ಯ ಇಲಾಖೆಯ ಈ ನಡೆ ಖಂಡನೀಯ, ಇದನ್ನು ಯಾರೂ ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ವ್ಯಾಪಾರಿಗಳಿಗೆ ನೀಡಿದ ಜಿಎಸ್ಟಿ ತೆರಿಗೆ ನೋಟಿಸ್ ನೀಡುವ ನಿರ್ಧಾರ ಕೇಂದ್ರ ಸರ್ಕಾರದ್ದಲ್ಲ. ಇದು ರಾಜ್ಯ ಸರ್ಕಾರದ ತೀರ್ಮಾನ. ಬೇಕರಿ, ಕಾಂಡಿಮೆಂಟ್ ಸೇರಿದಂತೆ ಸಣ್ಣ ವ್ಯಾಪಾರಿಗಳನ್ನೂ ಜಿಎಸ್ಟಿ ವ್ಯಾಪ್ತಿಗೆ ತರುವ ಮೂಲಕ ಏಕಾಏಕಿಯಾಗಿ ಲಕ್ಷಾಂತರ ರೂ. ತೆರಿಗೆ ಸಂಗ್ರಹಿಸುವ ಇರಾದೆ ರಾಜ್ಯ ಸರ್ಕಾರದ್ದಾಗಿದೆ. ಈ ರೀತಿಯ ನೋಟಿಸು ಜಾರಿ ಮಾಡಿ ವ್ಯಾಪಾರಿಗಳನ್ನ ಆತಂಕಕ್ಕೆ ದೂಡಿರುವ ವಾಣಿಜ್ಯ ತೆರಿಗೆ ಇಲಾಖೆಯ ನಡೆ ಖಂಡನಾರ್ಹ ಎಂದು ಹೇಳಿದ್ದಾರೆ.…
ಲೇಖಕ: admin
ಮಡಿಕೇರಿ ಜು.24 NEWS DESK : ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಂಠಿ ಬೆಳೆಯಲ್ಲಿ ಬೆಂಕಿ ರೋಗ ಕಾಣಿಸಿಕೊಂಡಿದ್ದು, ರೈತರು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದಿದ್ದರೆ ಶೇ.60-70ರಷ್ಟು ಇಳುವರಿ ನಷ್ಠ ಅನುಭವಿಸಬೇಕಾಗುತ್ತದೆ ಎಂದು ಬೆಂಗಳೂರು ತೋಟಗಾರಿಕೆ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ಬಿ.ಎಸ್.ಹರೀಶ್ ತಿಳಿಸಿದರು. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಮೈಸೂರು ತೋಟಗಾರಿಕೆ ಮಹಾವಿದ್ಯಾಲಯ, ಮೈಸೂರು ಕೃಷಿ ತಂತ್ರಜ್ಞರ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಮಹಾವಿದ್ಯಾಲಯದ ಆವರಣದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳ ರೈತರಿಗೆ “ಶುಂಠಿ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿಗಳು” ಕುರಿತು ಆಯೋಜಿಸಿದ್ದ ರೈತರ ತರಬೇತಿ, ಸಂವಾದ ಹಾಗೂ ವಸ್ತುಪ್ರದರ್ಶನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು. ಶುಂಠಿ ಬೆಳೆಯಲ್ಲಿ ಈಗಾಗಲೆ ಬೆಂಕಿ ರೋಗ ಕಾಣಿಸಿಕೊಂಡಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ. ಸರಿಯಾದ ನಿರ್ವಹಣೆ ಕ್ರಮ ಅನುಸರಿಸಿದರೆ ರೋಗವನ್ನು ನಿಯಂತ್ರಣ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ವಿಷಯ ತಜ್ಞರ ಸಲಹೆ ಪಡೆದು ರೋಗ ಬಂದಿರುವ ಮಳೆ ಹೆಚ್ಚಿರುವ ಪ್ರದೇಶದಲ್ಲಿ 6 ರಿಂದ…
ಬೆಂಗಳೂರು ಜು.24 NEWS DESK : ಬೆಲ್ಜಿಯಂ ದೇಶದ ರಾಯಭಾರಿಯವರಾದ H.E. ಡಿಡ್ಯಾರ್ ವ್ಯಾಂಡೆರ್ ಹಾಸ್ಸೇಲ್ಟ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದರು. ತಮ್ಮ ನಿವಾಸ ಕಾವೇರಿಯಲ್ಲಿ ತಮ್ಮ ದೇಶದ ನಿಯೋಗದೊಂದಿಗೆ ಬೆಲ್ಜಿಯಂ ರಾಯಭಾರಿ ಹಲವು ಪ್ರಮುಖ ದ್ವಿಪಕ್ಷೀಯ ವಿಷಯಗಳ ಕುರಿತು ಗಂಭೀರ ಚರ್ಚೆ ನಡೆಸಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಸರಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಜು.23 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯ ಟ್ರಸ್ಟ್ ಸಮಿತಿಯ ನೂತನ ಅಧ್ಯಕ್ಷರಾಗಿ ಎಸ್.ಸಿ.ಹರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎಸ್.ಪ್ರಕಾಶ್, ಉಪಾಧ್ಯಕ್ಷರಾಗಿ ಎಂ.ವಿ.ಲೋಕೇಶ್ ಹಾಗೂ ಖಜಾಂಚಿಯಾಗಿ ಪೂಜಾರಿ ಉಮೇಶ್ ಆಯ್ಕೆಯಾಗಿದ್ದಾರೆ.
ಸೋಮವಾರಪೇಟೆ ಜು.23 NEWS DESK : ಸಿದ್ದಗಂಗಾ ಮಠದ ಪರಮ ಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ಗಳಿಗೆ ಗುರುಪೂರ್ಣಿಮೆ ಹಾಗೂ ಜನ್ಮ ವರ್ಧಂತಿ ಅಂಗವಾಗಿ ಕೊಡಗು ಜಿಲ್ಲಾ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ವತಿಯಿಂದ ಗುರುವಂದನೆ ಸಲ್ಲಿಸಲಾಯಿತು. 63ನೇ ಸಂವತ್ಸರಕ್ಕೆ ಸಿದ್ಧಲಿಂಗ ಸ್ವಾಮೀಜಿ ಕಾಲಿರಿಸುತಿರುವ ಸಂದರ್ಭದಲ್ಲಿ ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸಿಬ್ಬಂದಿಗಳು, ಭಕ್ತರಲ್ಲಿ ಸಂತಸ ಮನೆ ಮಾಡಿತ್ತು. ಮುಂಜಾನೆಯೇ ನಾಡಿನ ಹಲವು ಮಠಾಧೀಶರುಗಳು ಆಗಮಿಸಿ ಶ್ರೀಗಳಿಗೆ ಪಾದಪೂಜೆ ನೆರವೇರಿಸಿ, ಪುಷ್ಪಾರ್ಚನೆಗೈದು ಶುಭಹಾರೈಸಿ, ಆಶೀರ್ವಾದ ಪಡೆದರು. ರಾಜ್ಯದ ಮಂತ್ರಿಗಳು ವಿವಿಧ ಗಣ್ಯರು ಮಠಕ್ಕೆ ಆಗಮಿಸಿ ಶುಭಕೋರಿದರು. ಕೊಡಗು ಜಿಲ್ಲೆಯ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ತಂಡ ಸಿದ್ದಗಂಗಾ ಮಠಕ್ಕೆ ತೆರಳಿ ಸಿದ್ಧಲಿಂಗ ಸ್ವಾಮೀಜಿಗಳಿಗೆ ಕೊಡಗಿನ ಜೇನು, ಕಾಫಿಪುಡಿ, ಕಾಳುಮೆಣಸು ನೀಡಿ ಶುಭಕೋರುವುದರೊಂದಿಗೆ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭ ಕೊಡಗಿನ ಮಳೆ, ಬೆಳೆ ಹಾಗೂ ಇಲ್ಲಿನ ಪರಿಸ್ಥಿತಿಯ ಬಗ್ಗೆ ಕೇಳಿ ತಿಳಿದುಕೊಂಡರು. ಬಿಡುವಿಲ್ಲದ ಮಳೆಯಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತಾಪಿ ವರ್ಗದ ಬಗ್ಗೆ ಮರುಕ…
ಮಡಿಕೇರಿ ಜು.23 NEWS DESK : ಗಯಾನ ದೇಶದಲ್ಲಿ ಮೃತಪಟ್ಟ ಅನಿವಾಸಿ ಭಾರತೀಯ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮದ ನಿವಾಸಿ ಪಿ.ಬಿ.ಗಿರೀಶ ಬಾಬು (37) ಅವರ ಮೃತ ದೇಹವನ್ನು ಭಾರತಕ್ಕೆ ತರಲು ಕರ್ನಾಟಕ ಸರ್ಕಾರ ಆರ್ಥಿಕ ನೆರವು ನೀಡಿದೆ. ಬಡ ಕುಟುಂಬದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು 3.60 ಲಕ್ಷ ರೂ. ಬಿಡುಗಡೆ ಮಾಡಿದ್ದಾರೆ. ಪಿ.ಬಿ.ಗಿರೀಶ ಬಾಬು ಅವರು ದಕ್ಷಿಣ ಅಮೆರಿಕಾದ ಗಯಾನಾ ದೇಶದ ಶೆರಿಫ್ ಜನರಲ್ ಆಸ್ಪತ್ರೆಯಲ್ಲಿ ಸ್ಟಾಪ್ನರ್ಸ್ ಆಗಿ ಸುಮಾರು ಎರಡು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. 2025 ರ ಜುಲೈ 3 ರಂದು ಅನಾರೋಗ್ಯ ಕಾರಣದಿಂದ ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಪಿ.ಬಿ.ಗಿರೀಶ ಬಾಬು ಅವರು ಬಹು ಅನಿಯಮಿತ ರಕ್ತಸ್ರಾವದ ಹೃದಯಘಾತದಿಂದ 2025 ರ ಜು.14 ರಂದು ಸಾವನ್ನಪ್ಪಿದ್ದಾರೆ. ನಂತರ ಅನಿವಾಸಿ ಭಾರತೀಯ ಸಮಿತಿಯು ಆಸ್ಪತ್ರೆ ಹಾಗೂ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪಿ.ಬಿ.ಗಿರೀಶಬಾಬು ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ…
ಮಡಿಕೇರಿ ಜು.23 NEWS DESK : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಕೆಂದು ಒತ್ತಾಯಿಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಹಾರ್ವರ್ಡ್ ವಿದ್ವಾಂಸ, ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಜೋಶಿ ಅವರ ಸಮ್ಮುಖದಲ್ಲಿ ನಡೆಯಿತು. ನ್ಯಾಯಾಲಯವು ಮುಂದಿನ ವಿಚಾರಣೆಯನ್ನು 2025 ಆ.24 ಕ್ಕೆ ನಿಗಧಿ ಪಡಿಸಿತು. ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ನೇತೃತ್ವದಲ್ಲಿ ವಕೀಲರುಗಳಾದ ಕಿರಣ್ ನಾರಾಯಣ್, ಸತ್ಯ ಸಭರ್ವಾಲ್, ಪಲ್ಲಕ್ ಪಲ್ಲಕ್ ಬಿಷ್ಣೋಯ್, ಮಾಧಿಯಾ ನಯೀಮ್ ಹಾಗೂ ಅನನ್ಯ ದೀಕ್ಷಿತ್ ಉಪಸ್ಥಿತರಿದ್ದರು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಅರ್ಜಿದಾರ ಸಂಖ್ಯೆ-2 ಆಗಿದ್ದಾರೆ. ಕೇಂದ್ರ ಗೃಹ ಮಂತ್ರಾಲಯ, ಕೇಂದ್ರ ಕಾನೂನು ಮಂತ್ರಾಲಯ ಮತ್ತು ಕರ್ನಾಟಕ ರಾಜ್ಯವನ್ನು ಪ್ರತಿವಾದಿ ಸಂಖ್ಯೆ ಕ್ರಮವಾಗಿ 1, 2 ಮತ್ತು 3 ಎಂದು…
ಮಡಿಕೇರಿ ಜು.23 NEWS DESK : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮ್ಹಾನ್ಸ್ ಸಹಯೋಗದೊಂದಿಗೆ ಯುವ ಸ್ಪಂದನ ಮತ್ತು ಜೀವನ ಕೌಶಲ್ಯ ಕಾರ್ಯಕ್ರಮ ನಡೆಯಿತು. ನಗರದ ಸರ್ಕಾರಿ ಪದವಿ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯ ಕ್ಷೇತ್ರ ಸಂಪರ್ಕ ಅಧಿಕಾರಿ ಆರ್.ನವ್ಯ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯದ ಬಗ್ಗೆ ತರಬೇತಿ ನೀಡಿದರು. ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಪ್ರಸನ್ನ ಮಾತನಾಡಿ, ಯುವ ಜನರು ಸಮಾಜದ ಆಸ್ತಿಯಾಗಿ ಬೆಳೆಯಬೇಕು ಎಂದು ಕರೆ ನೀಡಿದರು. ಯುವ ಜನರು ಹಾದಿ ತಪ್ಪದೆ ಸರಿಯಾದ ಹಾದಿಯಲ್ಲಿ ನಡೆಯಬೇಕು. ದುಶ್ಚಟಗಳಿಗೆ ತುತ್ತಾಗಬಾರದು. ಸಮಾಜದಲ್ಲಿ ಯುವ ಜನರಿಗೆ ತಮ್ಮದೇ ಆದ ಸ್ಥಾನವಿದ್ದು, ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದು ಹೇಳಿದರು. ಉಪನ್ಯಾಸಕರಾದ ಡಾ. ಎಂ.ಎನ್.ಪ್ರಕಾಶ್ ಮಾತನಾಡಿ, ಯುವ ಜನರು ಮಾನಸಿಕ ಒತ್ತಡಕ್ಕೆ ತುತ್ತಾಗದೆ, ತಮ್ಮ ಬುದ್ದಿಮತ್ತೆಯನ್ನು ಹೆಚ್ಚಿಸಿಕೊಳ್ಳಬೇಕು. ಓದಿನ ಕಡೆ ಗಮನಹರಿಸಬೇಕು. ಕಲಿಕೆಯಲ್ಲಿ ಸದಾ ತೀವ್ರತೆ ಇರಬೇಕು. ಆ…
ಮಡಿಕೇರಿ ಜು.23 NEWS DESK : ರೋಟರಿ ಮಡಿಕೇರಿ ವತಿಯಿಂದ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ರಸ್ತೆಯ ನಗರಸಭಾ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು ಮತ್ತು ಕಲಿಕಾ ಸಲಕರಣೆಗಳನ್ನು ಉಚಿತವಾಗಿ ನೀಡಲಾಯಿತು. ಶಾಲಾ ಆವರಣದಲ್ಲಿ ಜು.19 ರಂದು ನಡೆದ ಸರಳ ಸಮಾರಂಭದಲ್ಲಿ ಈ ಶಾಲೆಯಲ್ಲಿ ಸೇವಾ ಮನೋಭಾವದಿಂದ ಸೇವೆ ಸಲ್ಲಿಸುತ್ತಿರುವ ಇಬ್ಬರು ಶಿಕ್ಷಕರಿಗೆ ರೋಟರಿ ವತಿಯಿಂದ ಗೌರವಧನವನ್ನು ಕೂಡ ವಿತರಿಸಲಾಯಿತು. ರೋ.ಡಾ.ಎಂ.ಜಿ.ಪಾಟ್ಕರ್ ಹಾಗೂ ರೋ.ಹೆಚ್.ಎಸ್.ಅನಂತ ಸುಬ್ಬರಾವ್ ಅವರು ಕಾರ್ಯಕ್ರಮದ ಪ್ರಾಯೋಜಕತ್ವವನ್ನು ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ರೋಜಿ, ರೋಟರಿ ಅಧ್ಯಕ್ಷೆ ರೋ.ಲಲಿತಾ ರಾಘವನ್, ಕಾರ್ಯದರ್ಶಿ ರೋ.ಬಿ.ಎಂ.ಸೋಮಣ್ಣ, ರೋ.ಡಾ.ಎಂ.ಜಿ.ಪಾಟ್ಕರ್, ಡಾ.ಜಯಲಕ್ಷ್ಮಿ ಪಾಟ್ಕರ್, ರೋ.ಹೆಚ್.ಎಸ್.ಅನಂತ ಸುಬ್ಬರಾವ್, ರೋಟರಿ ಸದಸ್ಯರು ಹಾಗೂ ನಗರಸಭಾ ಸದಸ್ಯೆ ಸಬಿತ ಉಪಸ್ಥಿತರಿದ್ದರು.
ಮಡಿಕೇರಿ ಜು.23 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯ ದಸರಾ ಉತ್ಸವ ಸಮಿತಿಯ ಜಂಟಿ ಅಧ್ಯಕ್ಷರುಗಳಾಗಿ ನಾಗರಾಜ್ ವಿಷ್ಣುಪ್ರಿಯ, ಕಿಶೋರ್ ಬಾಬು, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಲ್.ಸತೀಶ್ ಹಾಗೂ ಖಜಾಂಚಿಯಾಗಿ ಪವನ್ ಸಿ.ಎಸ್ ಆಯ್ಕೆಯಾಗಿದ್ದಾರೆ.






