ಲೇಖಕ: admin

ಕರ್ಕಾಳ ಮೇ 24 NEWS DESK : ದೇಶದ ಪ್ರತಿಷ್ಠಿತ ಆರ್ಕಿಟೆಕ್ಚರ್ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ.(ಬಿ. ಆರ್ಕ್ )2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಮೋಹಿತ್-99.4093359 ಪರ್ಸೆಂಟೈಲ್ ನೊಂದಿಗೆ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಎರಡರಲ್ಲೂ ಆರನೇ ರ‍್ಯಾಂಕ್ ಗಳಿಸಿ ವಿಶಿಷ್ಟಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ತೇಜಸ್ ವಿ ನಾಯಕ್   (AIR 101), ಟಿ ಪ್ರದೀಪ್ (AIR  117), ಮೋನಿಕಾ ಕೆ ಎ (AIR 140), ಸುಧಾಂಶು ಪಾಲೇಕರ್ (AIR 268), ಪ್ರತಿಕ್ ಎನ್ ಶೆಟ್ಟಿ (AIR  362), ತ್ರಿಶ್ಲಾ ಗಾಂಧಿ (AIR 423), ರೋಹಿತ್ ಜಿ ಬಿ – (AIR 461), ಸಾಚಿ ಶಿವಕುಮಾರ್ -(AIR 484), ಚಿನ್ಮಯಿ ಆರ್-(AIR 519), ಮನೋಜ್ ಎಂ ಆರ್ -(AIR   846), ಚೇತನ್ ಗೌಡ -(AIR 867), ಆಕಾಶ್ ದೇವಾಡಿಗ -(AIR 980) ಕೆಟಗರಿ ವಿಭಾಗದಲ್ಲಿ ರ‍್ಯಾಂಕ್ ಗಳಿಸಿದ್ದಾರೆ. 500 ರ‍್ಯಾಂಕ್ ಒಳಗೆ 10 ಮಂದಿ,…

Read More

ಮಡಿಕೇರಿ ಮೇ 24 NEWS DESK : ಕೊಡಗು ಜಿಲ್ಲೆಯಲ್ಲಿ ಮೇ, 26 ರಿಂದ 31 ರವರೆಗೆ ನಡೆಯುವ “2025ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2” ಅನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪ್ರೌಢಶಾಲೆ, ಕುಶಾಲನಗರ, ಸೋಮವಾರಪೇಟೆ, ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಆದೇಶಿಸಿರುತ್ತೇನೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದಾಗಿದೆ. ಉಳಿದಂತೆ…

Read More

ಮಡಿಕೇರಿ ಮೇ 23 NEWS DESK : ಕೊಡಗು ಜಿಲ್ಲೆಯಲ್ಲಿ ಮುಂಗಾರು ಸಂದರ್ಭದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದ್ದಾರೆ. ನಗರದ ಸೆಸ್ಕ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅಧ್ಯಕ್ಷರು ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಹೆಚ್ಚಿನ ಮಳೆಯಾಗುವ ಹಿನ್ನೆಲೆ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕಕ್ಕೆ ಹಾನಿಯಾಗುವುದು ಕಂಡು ಬರುತ್ತದೆ. ಆದ್ದರಿಂದ ಆಯಾಯ ಸಂದರ್ಭದಲ್ಲಿಯೇ ವಿದ್ಯುತ್ ಕಂಬ ಹಾಗೂ ಪರಿವರ್ತಕರಗಳ ಬದಲಾವಣೆಗೆ ಕ್ರಮವಹಿಸಲಾಗುತ್ತದೆ ಎಂದು ಹೇಳಿದರು. ಕಳೆದ ಬಾರಿ ಮುಂಗಾರು ಅವಧಿಯಲ್ಲಿ 4 ಸಾವಿರಕ್ಕೂ ಹೆಚ್ಚು ಕಂಬಗಳು ಹಾನಿಯಾಗಿತ್ತು, ಹಾಗೆಯೇ ಹಲವು ವಿದ್ಯುತ್ ಪರಿವರ್ತಕಗಳು ಹಾನಿಯಾಗಿದ್ದವು, ಆ ಸಂದರ್ಭದಲ್ಲಿ 24 ಗಂಟೆಯೊಳಗೆ ಸರಿಪಡಿಸುವ ಕಾರ್ಯ ನಡೆದಿತ್ತು ಎಂದು ಇದೇ ಸಂದರ್ಭದಲ್ಲಿ ವಿವರಿಸಿದರು. ಮುಂಗಾರು ಸಂದರ್ಭದಲ್ಲಿ ವಿದ್ಯುತ್ ಅವಘಡಗಳನ್ನು ತಪ್ಪಿಸಿ, ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಹೆಚ್ಚಿನ ಲೈನ್‍ಮೆನ್ ಹಾಗೂ ಗ್ಯಾಂಗ್‍ಮೆನ್‍ಗಳನ್ನು ನಿಯೋಜಿಸಲಾಗಿದೆ ಎಂದರು. ವಿದ್ಯುತ್ ಪೂರೈಕೆಯಲ್ಲಿ…

Read More

ಮಡಿಕೇರಿ ಮೇ 23 NEWS DESK :  ತೂಚಮಕೇರಿ ಪೆಮ್ಮಂಡ ಕುಟುಂಬಸ್ಥರ ವತಿಯಿಂದ ಜೂ.7 ಮತ್ತು 8 ರಂದು ನಡೆಯಲಿರುವ ಕೊಡವ ಕುಟುಂಬಗಳ ನಡುವಿನ ತೋಕ್ ನಮ್ಮೆ-2025 ಗುಂಡು ಹೊಡೆಯುವ ಸ್ಪರ್ಧೆಯ ಲಾಂಛನವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಬಿಡುಗಡೆ ಮಾಡಿದರು. ಬೆಂಗಳೂರಿನ ವಿಧಾನಸೌಧದ ತಮ್ಮ ಕಚೇರಿಯಲ್ಲಿ  ಬಿಡುಗಡೆಗೊಳಿಸಿ ಆಯೋಜಕರಿಗೆ ಶುಭಹಾರೈಸಿದರು. ಈ ಸಂದರ್ಭ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಸ್ಪರ್ಧಾ ಕೂಟದ ಆಯೋಜಕರು ಹಾಜರಿದ್ದರು.

Read More

ಮಡಿಕೇರಿ ಮೇ 23 NEWS DESK : ಹತ್ತನೇ ತರಗತಿ ಪರೀಕ್ಷೆಯ ಉತ್ತರ ಪತ್ರಿಕೆಯ ಮರು ಮೌಲ್ಯ ಮಾಪನದಲ್ಲಿ ಮೈಸೂರಿನ ಶ್ರೀರಾಮಕೃಷ್ಣ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಮಡಿಕೇರಿಯ ತನ್ಮಯಿ ಎಂ.ಎನ್ 625 ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾನೆ. ಮೊದಲು ಫಲಿತಾಂಶ ಪ್ರಕಟವಾದಾಗ ತನ್ಮಯಿಗೆ ಒಟ್ಟು 622 ಅಂಕ ದೊರೆತ್ತಿತ್ತು. ಮರು ಮೌಲ್ಯ ಮಾಪನದಲ್ಲಿ 625 ಅಂಕಗಳು ಲಭಿಸಿದೆ. ತನ್ಮಯಿ ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಹಾಗೂ ಸೌಮ್ಯ ದಂಪತಿಯ ಪುತ್ರ.

Read More

ಮಡಿಕೇರಿ ಮೇ 23 NEWS DESK : ಕೊಡವಾಮೆ ಬಾಳೋ ಕಾರ್ಯಕ್ರಮದ ಪ್ರಮುಖ ರೂವಾರಿಗಳಲ್ಲಿ ಒಬ್ಬರು ಹಾಗೂ ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಅವರನ್ನು ಚಮ್ಮಟೀರ ಕುಟುಂಬಸ್ಥರು ಸನ್ಮಾನಿಸಿದರು. ಚಮ್ಮಟೀರ ಐನ್ ಮನೆಯಲ್ಲಿ ಕುಟುಂಬದ ಪಟ್ಟೆದಾರ ಡಿಕ್ಕಿ ಕುಶಾಲಪ್ಪ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪ್ರವೀಣ್ ಉತ್ತಪ್ಪ ಅವರನ್ನು ಕುಟುಂಬದ ಪ್ರಮುಖರು ಸನ್ಮಾನಿಸಿ ಗೌರವಿಸಿದರು. ಅಲ್ಲದೆ ಹತ್ತನೆ ತರಗತಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಚಮ್ಮಟೀರ ಮನಿಷ್ ಮುದ್ದಪ್ಪ, ಚಮ್ಮಟೀರ ಡೆನ್ ದೇವಯ್ಯ, ಚಮ್ಮಟೀರ ತರುಣ್ ತಿಮ್ಮಯ್ಯ ಅವರಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಚಮ್ಮಟೀರ ಪ್ರವೀಣ್ ಉತ್ತಪ್ಪ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಜಿಲ್ಲಾ ಹಾಗೂ ರಾಜ್ಯ ಪ್ರಶಸ್ತಿ, ಹಲವಾರು ಸನ್ಮಾನಗಳು ದೊರೆತಿದ್ದರೂ ಕುಟುಂಬಸ್ಥರಿಂದ ದೊರಕುವ ಸನ್ಮಾನ ಯಾವ ಪ್ರಶಸ್ತಿ ಪುರಸ್ಕಾರಗಳಿಗೂ ಕಡಿಮೆ ಇಲ್ಲ ಎಂದರು. ಪ್ರತಿ ವರ್ಷವೂ ಸಾಧನೆ…

Read More

ಮಡಿಕೇರಿ ಮೇ 23 NEWS DESK : ಪಾಕ್ ಪ್ರಚೋದಿತ ಭಯೋತ್ಪಾದಕರ ವಿರುದ್ಧ ನಡೆಸಿದ ಯಶಸ್ವಿ ಆಪರೇಷನ್ ಸಿಂಧೂರಕ್ಕೆ ಕಾರಣೀಭೂತರಾದ ಭಾರತೀಯ ಸೇನೆಯ ಯೋಧರಿಗೆ ಇಂದು ‘ಸಿಂಧೂರ ವಿಜಯೋತ್ಸವ’ದ ಮೂಲಕ ಮಡಿಕೇರಿಯಲ್ಲಿ ಗೌರವವನ್ನು ಸಲ್ಲಿಸಲಾಯಿತು. ಸಿಂಧೂರ ವಿಜಯೋತ್ಸವ ಸಮಿತಿ ವತಿಯಿಂದ ನಡೆದ ಸಿಂಧೂರ ವಿಜಯೋತ್ಸವ ಮೆರವಣಿಗೆಯಲ್ಲಿ ಸುರಿಯುತ್ತಿದ್ದ ಮಳೆಯ ನಡುವೆಯೂ ಸಾವಿರಾರರು ಮಂದಿ ಪಾಲ್ಗೊಂಡಿದ್ದರು. ನಗರದ ಎವಿ ಶಾಲೆಯ ಬಳಿಯ ಬನ್ನಿಮಂಟಪದಿಂದ ಗಾಂಧಿ ಮೈದಾನದವರೆಗೆ ಮೆರವಣಿಗೆ ಸಾಗಿತು. ‘ಭಾರತೀಯ ಸೈನ್ಯಕ್ಕೆ ಕೋಟಿ ಕೋಟಿ ನಮನ’ ಎನ್ನುವ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ರಾಷ್ಟ್ರಧ್ವಜಗಳೊಂದಿಗೆ ಸಾರ್ವಜನಿಕರು ಮುಂದೆ ಸಾಗಿದರು. ಭಾರತೀಯ ಸೈನ್ಯದ ನಿವೃತ್ತ ಅಧಿಕಾರಿಗಳು ಹಾಗೂ ಸೈನಿಕರು ತಮ್ಮ ಬಿರುದು ಬಾವಲಿಗಳೊಂದಿಗೆ ಹೆಜ್ಜೆ ಹಾಕಿದರು. ಮೆರವಣಿಗೆಯಲ್ಲಿದ್ದ 300 ಅಡಿ ಉದ್ದದ ರಾಷ್ಟ್ರಧ್ವಜ ಗಮನ ಸೆಳೆಯಿತು. ಗಾಂಧಿ ಮೈದಾನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕೊಟ್ಟುಕತ್ತೀರ ಸೋಮಣ್ಣ ಪೆಹಲ್ಗಾಮ್ ನಲ್ಲಿ ಅಮಾಯಕರನ್ನು ಹತ್ಯೆಗೈದು ಮಹಿಳೆಯರ…

Read More

ಮಡಿಕೇರಿ ಮೇ 23 NEWS DESK : ಪ್ರಸಕ್ತ (2025-26) ಸಾಲಿಗೆ ಮಡಿಕೇರಿ ತಾಲ್ಲೂಕು ಪರಿಶಿಷ್ಟ ಪಂಗಡದ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆ, ಕರಿಕೆ ಮತ್ತು ಕಟ್ಟಪಳ್ಳಿ ಇಲ್ಲಿಗೆ 1 ರಿಂದ 5ನೇ ತರಗತಿ ವರೆಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉಚಿತ ಸಮವಸ್ತ್ರ, ಬ್ಯಾಗ್, ದಾಖಲಾತಿ(ಶುಲ್ಕ ರಹಿತ), ಲೇಖನ ಸಾಮಾಗ್ರಿ, ಹಾಸ್ಟೇಲ್ ಸೌಲಭ್ಯ, ಮೆನು ಚಾರ್ಟ್ ಪ್ರಕಾರ ಪೌಷ್ಠಿಕ ಆಹಾರ ಪೂರೈಕೆ, ನುರಿತ ಶಿಕ್ಷಕರಿಂದ ಬೋಧನೆ, ತಿಂಗಳಿಗೆ ಉಚಿತ “ಶುಚಿ ಸಂಭ್ರಮ ಕಿಟ್” (ಸೋಪು, ಪೇಸ್ಟ್, ಬ್ರಷ್, ತೆಂಗಿನಎಣ್ಣೆ), ಉಚಿತ ಆರೋಗ್ಯ ತಪಾಸಣೆ ಸೌಲಭ್ಯ ಇರುತ್ತದೆ. ಆಸಕ್ತ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕರು, ಪರಿಶಿಷ್ಟ ಪಂಗಡದ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆ ಕರಿಕೆ, ಕಟ್ಟಪಳ್ಳಿ ಇಲ್ಲಿಂದ ಅರ್ಜಿ ಪಡೆದುಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಅರ್ಜಿಸಲ್ಲಿಸುವಾಗ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ವಾಸಸ್ಥಳ ದೃಢೀಕರಣ ಪತ್ರ, ಜಾತಿ ಮತ್ತು…

Read More

ಮಡಿಕೇರಿ ಮೇ 23 NEWS DESK : ಪ್ರಸಕ್ತ (2025-26) ಸಾಲಿಗೆ ಮಡಿಕೇರಿ ತಾಲ್ಲೂಕು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖಾ ವ್ಯಾಪ್ತಿಗೊಳಪಡುವ ಪೆರಾಜೆಯ ಮೆಟ್ರಿಕ್ ಪೂರ್ವ ಬಾಲಕ ವಿದ್ಯಾರ್ಥಿ ನಿಲಯಕ್ಕೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಶೇ.75 ಸ್ಥಾನಗಳು ಪರಿಶಿಷ್ಟ ವರ್ಗ ಮತ್ತು ಉಳಿದ ಶೇ.25 ಸ್ಥಾನಗಳು ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲಭ್ಯವಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಆನ್‍ಲೈನ್ ಮೂಲಕ ಸಲ್ಲಿಸಬಹುದು. ವಿದ್ಯಾರ್ಥಿ ನಿಲಯದಲ್ಲಿ ಪೌಷ್ಠಿಕಯುಕ್ತ ಉಪಹಾರ ಹಾಗೂ ಊಟದ ವ್ಯವಸ್ಥೆ, ಉಚಿತ ವಸತಿ, ಲೇಖನ ಸಾಮಾಗ್ರಿಗಳು, ಸಮವಸ್ತ್ರ, ಶೂ ಮತ್ತು ಸಾಕ್ಸ್, ವೈದ್ಯಕೀಯ ತಪಾಸಣೆ, ಅಂಶಕಾಲಿಕ ಬೋಧಕರಿಂದ ವಿಶೇಷ ಬೋಧನಾ ವ್ಯವಸ್ಥೆ, ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ, ಶುಚಿ ಸಂಭ್ರಮ ಕಿಟ್ ನೀಡಲಾಗುವುದು. ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಪರಿಶಿಷ್ಟ ಪಂಗಡ ಇಲಾಖೆಯ ವೆಬ್‍ಸೈಟ್ https://tw.kar.nic.in ಮೂಲಕ ಆನ್‍ಲೈನ್…

Read More

ಮಡಿಕೇರಿ ಮೇ 23 NEWS DESK : ನಗರದಲ್ಲಿ ಅತ್ಯಪರೂಪದ ವಿವಿಧ ಬಗೆಯ ಮಾವು ಮತ್ತು ಹಲಸಿನ ಹಣ್ಣು ಘಮಘಮಿಸುತ್ತಿದೆ. ಜಿಲ್ಲಾಡಳಿತ, ತೋಟಗಾರಿಕಾ ಇಲಾಖೆ, ಜಿಲ್ಲಾ ಪಂಚಾಯತ್ ಮತ್ತು ಹಾಪ್ ಕಾಮ್ಸ್ ವತಿಯಿ0ದ ನಗರದ ಹಾಪ್ ಕಾಮ್ಸ್ ನಲ್ಲಿ ಮೇ 26ರ ವರೆಗೆ ನಡೆಯುವ `ಮಾವು ಮತ್ತು ಹಲಸು ಮೇಳವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಾವು ಮತ್ತು ಹಲಸು ಮೇಳದಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಜನರು ಬರುವುದರಿಂದ ಬಹಳ ಖುಷಿ ಪಡುತ್ತೇನೆ ಎಂದರು. ಮಾವು ಮತ್ತು ಹಲಸು ಮೇಳವನ್ನು ಈ ವರ್ಷವೂ ನಾಲ್ಕು ದಿನಗಳವರೆಗೆ ಏರ್ಪಡಿಸಲಾಗಿದೆ ಎಂದರು. ಮಾವಿನ ಹಣ್ಣುಗಳನ್ನು ಕೊಳ್ಳುವವರ ಸಂಖ್ಯೆ ಹೆಚ್ಚು ಇರುತ್ತದೆ ಹಾಗೂ ತೋಟಗಾರಿಕೆ ಇಲಾಖೆ ಮತ್ತು ಹಾಪ್ ಕಾಮ್ಸ್ ವತಿಯಿಂದ ಈ ಮೇಳ ನಡೆಯುತ್ತಿದೆ ಎಂದು ಹೇಳಿದರು. ಕೊಡಗಿನಲ್ಲಿ ಮಾವಿನ ಮೇಳ ಆಯೋಜಿಸಿರುವುದರಿಂದ ಜನರಿಗೆ ಬೇರೆ ಬೇರೆ ರೀತಿಯ ಮಾವಿನ ಹಣ್ಣುಗಳು ಸಿಗಲು ಸಾಧ್ಯವಾಗುತ್ತದೆ ಎಂದರು. ತೋಟಗಾರಿಕೆ ಇಲಾಖೆ ಉಪ…

Read More