ಗೋಣಿಕೊಪ್ಪ ಮೇ 23 NEWS DESK : ಹನ್ನೆರಡನೇ ಶತಮಾನದ ಶಿವಶರಣ ಬಸವೇಶ್ವರರ ಚಿಂತನೆಗಳು ಸಾರ್ವಕಾಲಿಕ ಎಂದು ಮಡಿಕೇರಿಯ ಸಂತ ಜೋಸೆಫರ ಕಾಲೇಜಿನ ಉಪನ್ಯಾಸಕಿ ಜಯಲಕ್ಷ್ಮಿ ಹೇಳಿದರು. ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಸವೇಶ್ವರರ ಕುರಿತು ಉಪನ್ಯಾಸ ನೀಡಿದ ಅವರು, 12 ನೇ ಶತಮಾನದಲ್ಲಿ ಘಟಿಸಿದ ಸಮಾನತೆ, ಸ್ತ್ರೀ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವದ ಆಶಯಗಳು 21 ನೇ ಶತಮಾನದ ಈವರೆಗೂ ಹಾಗೂ ಯಾವತ್ತಿಗೂ ಶ್ರೇಷ್ಠವಾದ ವಿಚಾರಗಳಾಗಿವೆ. ಅಂದು ಸಮಾಜದಲ್ಲಿದ್ದ ಅಸಮತೆ ಹಾಗೂ ಅನ್ಯಾಯಗಳ ವಿರುದ್ಧ ಜನರ ಜೀವಪರವಾದ ನಿಲುವು ಕೈಗೊಂಡು ಹೋರಾಡಿದ ಕ್ರಾಂತಿಕಾರಿ ಬಸವೇಶ್ವರರ ಆದರ್ಶಗಳನ್ನು ಎಲ್ಲರೂ ಅರಿಯುವ ಮೂಲಕ ಶಾಂತಿ – ಸಮಾನತೆಯ ನಾಡು ಕಟ್ಟಲು ಕಂಕಣ ಬದ್ದರಾಗಬೇಕೆಂದು ಜಯಲಕ್ಷ್ಮಿ ಕರೆಕೊಟ್ಟರು. ಇದೇ ಸಂದರ್ಭ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ವಚನಗಳನ್ನು ಪಠಿಸಲಾಯಿತು. ಅರಣ್ಯ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಬಿ.ಎನ್.ಸತೀಶ್, ಡಾ.ನಿಂಗರಾಜು ದಳವಾಯಿ, ಡಾ.ಸಿದ್ಧಾರೂಢ ಸಿಂಗಡಿ, ಮಣಿಕಂಠ ಇದ್ದರು.
ಲೇಖಕ: admin
ಮಡಿಕೇರಿ ಮೇ 23 NEWS DESK : ಭಾರತದ ಜಮ್ಮು ಕಾಶ್ಮೀರದಲ್ಲಿ ಪಾಕ್ ಪ್ರಚೋದಿತ ಭಯೋತ್ಪಾದಕರು ಧರ್ಮದ ಹೆಸರಿನಲ್ಲಿ ನಡೆಸಿದ ಪೈಶಾಚಿಕ ಕೃತ್ಯದಿಂದ ಅಮಾಯಕ ಮಹಿಳೆಯರ ಸಿಂಧೂರ ಅಳಿಸಿ ಹೋದುದಕ್ಕೆ ಪ್ರತೀಕಾರವಾಗಿ ಕೇಂದ್ರ ಸರ್ಕಾರ ನಡೆಸಿದ ‘ಆಪರೇಷನ್ ಸಿಂಧೂರ’ದ ಯಶಸ್ಸಿನ ಹಿನ್ನೆಲೆ ಸಿಂಧೂರ ವಿಜಯೋತ್ಸವ ಸಮಿತಿ ವತಿಯಿಂದ ಮಡಿಕೇರಿಯಲ್ಲಿ ‘ಸಿಂಧೂರ ವಿಜಯೋತ್ಸವ’ ನಡೆಯುತ್ತಿದ್ದು, ಇದರ ಭಾಗವಾಗಿ ನಗರದಲ್ಲಿ ತಿರಂಗಾ ಯಾತ್ರೆ ನಡೆಯಿತು. ನಗರದ ಎವಿ ಶಾಲೆಯ ಬಳಿಯ ಬನ್ನಿ ಮಂಟಪದಿಂದ ಗಾಂಧಿ ಮೈದಾನದವರೆಗೆ ನಡೆದ ಯಾತ್ರೆಯಲ್ಲಿ ಜಿಲ್ಲಾ ವ್ಯಾಪ್ತಿಯ ಸಹಸ್ರಾರು ದೇಶ ಪ್ರೇಮಿಗಳು, ಮಹಿಳೆಯರು,ಸಂಘ ಸಂಸ್ಥೆಗಳ ಪ್ರಮುಖರು, ಸದಸ್ಯರುಗಳು ರಾಷ್ಟ್ರ ಧ್ವಜ ಹಿಡಿದು ಪಕ್ಷ ಬೇಧ ಮರೆತು ಮೆರವಣಿಗೆ ನಡೆಸಿದರು. ಸೈನ್ಯಾಧಿಕಾರಿಗಳು, ಸೈನಿಕರು ತಮ್ಮ ಸಮವಸ್ತ್ರಗಳೊಂದಿಗೆ ಮುಂಚೂಣಿಯಲ್ಲಿ ಪಾಲ್ಗೊಂಡಿದ್ದರು.
ಸುಂಟಿಕೊಪ್ಪ ಮೇ 23 NEWS DESK : ಡಿ.ಶಿವಪ್ಪ ಸ್ಮಾರಕ 26ನೇ ವರ್ಷದ ರಾಜ್ಯ ಮಟ್ಟದ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿಯ 6ನೇ ದಿನ ನಡೆದ ಫುಟ್ಬಾಲ್ ಪಂದ್ಯಾವಳಿಯ ಹಣಾಹಣಿಯಲ್ಲಿ ಟಿಡಿಎಲ್ ಎಫ್.ಸಿ ಬೈಲುಕೊಪ್ಪ, ವಾಲ್ಪರಿ ಎಫ್.ಸಿ ತಮಿಳುನಾಡು, ಕ್ಯಾಲಿಕೆಟ್ ಎಫ್.ಸಿ.ಕ್ಯಾಲಿಕೆಟ್ ಹಾಗೂ ಟ್ರೇಡಿಷನಲ್ ಟೂರಿಸಂ ಎಫ್.ಸಿ.ತಿರುಚಿ ತಂಡಗಳು ಮುಂದಿನ ಸುತ್ತಿಗೆ ಅರ್ಹತೆ ಪಡೆಯಿತು. ಜಿಯಂಪಿ ಶಾಲಾ ಮೈದಾನದಲ್ಲಿ ಬ್ಲೂಬಾಯ್ಸ್ ಯೂತ್ ಕ್ಲಬ್ ವತಿಯಿಂದ 39ನೇ ವರ್ಷದ ಆಯೋಜಿಸಲಾಗಿರುವ ಫುಟ್ಬಾಲ್ ಮೊದಲನೇ ಪಂದ್ಯಾವಳಿಯು ವಾಲ್ಪರಿ ಎಫ್.ಸಿ ತಮಿಳುನಾಡು ಹಾಗೂ ಮೊಗ್ರೆಲ್ ಎಫ್.ಸಿ ಕುಂಬ್ಳೆ. ತಂಡಗಳ ನಡುವೆ ನಡೆದ ಪಂದ್ಯಾವಳಿಯ ಮೊದಲಾರ್ಧದಲ್ಲಿ ವಾಲ್ಪರಿ ಎಫ್.ಸಿ ತಮಿಳುನಾಡು ತಂಡದ ಮುನ್ನಡೆ ಆಟಗಾರ 3ನೇ ನಿಮೀಷದಲ್ಲಿ ಸಿಬಿನ್ ತನ್ನಗೆ ದೊರೆತ ಉತ್ತಮ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಎದುರಾಳಿ ತಂಡಕ್ಕೆ 1 ಗೋಲು ಬಾರಿಸುವ ಮೂಲಕ ತಂಡಕ್ಕೆ ಮುನ್ನಡೆಯನ್ನು ಒದಗಿಸಿದರು. 10ನೇ ನಿಮೀಷದಲ್ಲಿ ವಾಲ್ಪರಿ ಎಫ್.ಸಿ ತಂಡದ ಮತೋರ್ವ ಮುನ್ನಡೆ ಆಟಗಾರ ನಿಖಿಲ್ ಅಯ್ಯಪ್ಪ ಮತ್ತೊಂದು ಗೋಲು ಬಾರಿಸುವ…
ನಾಪೋಕ್ಲು ಮೇ 23 NEWS DESK : ತರಬೇತಿ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ಶಿಬಿರಾರ್ಥಿಗಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಬಹುದು ಎಂದು ನಿವೃತ್ತ ಶಿಕ್ಷಕಿ ಮಂಜಂಡ್ರ ರೇಖಾ ಉಲ್ಲಾಸ ಹೇಳಿದರು. ಕಕ್ಕಬ್ಬೆಯ ನಾಲಡಿ ಗ್ರಾಮದ ರಿವರ್ ಸ್ವಿಮ್ಮಿಂಗ್ ಕ್ಲಬ್ ವತಿಯಿಂದ ಮೇ 1 ರಿಂದ ನಾಲಡಿ ಅಂಬಲ ಹೊಳೆಯಲ್ಲಿ ಆಯೋಜಿಸಲಾಗಿದ್ದ ಈಜು ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಮಕ್ಕಳ ಶ್ರೇಯೋಭಿವೃದ್ಧಿಗೆ ಪೋಷಕರ ಸಹಕಾರ ಮುಖ್ಯವಾಗಿದ್ದು, ಇಂತಹ ತರಬೇತಿ ಶಿಬಿರಗಳ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳುವಂತಾಗಬೇಕು ಎಂದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರಿವರ್ ಸ್ವಿಮ್ಮಿಂಗ್ ಕ್ಲಬ್ ನ ಅಧ್ಯಕ್ಷ ಬೊಲಿಯಾಡಿರ ಸಂತು ಸಂತ್ರಮಣಿ, ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಶಿಷ್ಟವಾದ ಈಜು ತರಬೇತಿ ಶಿಬಿರವನ್ನು ನುರಿತ ತರಬೇತಿದಾರರಿಂದ ಆಯೋಜಿಸಲಾಗುತ್ತದೆ. ಕಳೆದ ನಾಲ್ಕು ವರ್ಷಗಳಿಂದ ಶಿಬಿರಕ್ಕೆ ಉತ್ತಮ ಪ್ರೋತ್ಸಾಹ ಇದೆ. ಈ ವರ್ಷ 45 ವಿದ್ಯಾರ್ಥಿಗಳು ಈಜು ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದು…
ನಾಪೋಕ್ಲು ಮೇ 23 NEWS DESK : ಬೇತು ಗ್ರಾಮದ ಚೆರಿಯಪರಂಬುವಿನಿಂದ ಕಕ್ಕುಂದ ಕಾಡು ಶ್ರೀ ವೆಂಕಟೇಶ್ವರ ದೇವಾಲಯ ಸಂಪರ್ಕ ಕಾಂಕ್ರೀಟ್ ರಸ್ತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಗ್ರಾಮಸ್ಥರ ಬೇಡಿಕೆಯಂತೆ ಶಾಸಕರ ಅನುದಾನ ರೂ.15 ಲಕ್ಷದಲ್ಲಿ ಬಾಳೆಯಡ ಕುಟುಂಬಸ್ಥರ ಮನೆಗಾಗಿ ಶ್ರೀ ವೆಂಕಟೇಶ್ವರ ದೇವಾಲಯ ರಸ್ತೆಗೆ ಸಂಪರ್ಕಿಸುವ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲಾಗಿದೆ. ಇದರಿಂದ ಗ್ರಾಮಸ್ಥರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ ಎಂದು ಗ್ರಾಮಸ್ಥರ ಪರವಾಗಿ ಶಾಸಕರಿಗೆ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಂಗಂಡ ಶಶಿ ಮಂದಣ್ಣ, ಕೆಡಿಪಿ ಸದಸ್ಯ ಕಲಿಯಂಡ ಕೌಶಿ ಕುಶಾಲಪ್ಪ, ಕಾಂಗ್ರೆಸ್ ವಲಯ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ, ಗ್ರಾಮಸ್ಥರಾದ ಅಪ್ಪಸ್ವಾಮಿ, ಅಬ್ದುಲ್ಲ, ಶಾಫಿ, ಅಣ್ಣಯ್ಯ, ಬಾಲೆಯಡ ಪ್ರಿಯ, ಇನ್ನಿತರರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಮೇ 23 NEWS DESK : ದೇಸಿ ಬೆಳೆಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮದಡಿ “ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳನ್ನು ಸಂಗ್ರಹಿಸಲು ಮತ್ತು ಸಂರಕ್ಷಿಸುವ ಉದ್ದೇಶದಿಂದ ಒಂದು ಸಮುದಾಯ ಬೀಜ ಬ್ಯಾಂಕ್ ಸ್ಥಾಪಿಸಲಾಗುವುದು ಎಂದು 2024 ರ ಆಯವ್ಯಯದಲ್ಲಿ ಪೋಷಣೆ ಮಾಡಲಾಗಿದೆ. ಆಯಾಯ ಪ್ರದೇಶದಲ್ಲಿ ರೈತರು ತಲೆಮಾರುಗಳಿಂದ ಬೆಳೆದ ಸಾಂಪ್ರದಾಯಿಕ ಪ್ರಭೇದಗಳು, ಸ್ಥಳೀಯ ಕೃಷಿ ಪದ್ದತಿ ಪ್ರದೇಶಕ್ಕೆ ಹೊಂದಿಕೊಂಡು ವಿಶಿಷ್ಟ ಗುಣಲಕ್ಷಣ ಹೊಂದಿರುವ ಬೆಳೆಗಳನ್ನು ದೇಸಿ ಬೆಳೆಗಳೆಂದು ಕರೆಯಲಾಗುತ್ತದೆ. ಈ ಕಾರ್ಯಕ್ರಮದಡಿ ಭತ್ತ, ರಾಗಿ, ಜೋಳ, ತೊಗರಿ, ಹುರುಳಿ, ಅವರೆ, ಅಲಸಂಡೆ, ಮಡಕಿಕಾಳು, ಹುಚ್ಚೆಳ್ಳು, ಕುಸುಬೆ, ಎಳ್ಳು, ನವಣೆ, ಸಾಮೆ, ಊದಲು, ಕೊರಲೆ, ಹಾರಕ, ಬರಗು, ಗೋಧಿ, ಮೆಣಸಿನಕಾಯಿ ಮತ್ತು ಸಲಹಾ ಸಮಿತಿಯು ಶಿಪಾರಸ್ಸು ಮಾಡುವ ಬೆಳೆ ಒಳಪಡಿಸಲಾಗಿದೆ. ಇತ್ತೀಚೆಗೆ ಕಣ್ಮರೆಯಾಗುತ್ತಿರುವ ದೇಸಿ ತಳಿಗಳನ್ನು ಮೂಲ ಸಮೀಕ್ಷೆಯ ಮೂಲಕ ಗುರುತಿಸಿ ಸಂರಕ್ಷಣೆ ಮಾಡುವ ಗುರಿ ಹೊಂದಲಾಗಿದೆ ಮತ್ತು ಹಿಂದಿನಿಂದಲೂ ಸಂರಕ್ಷಿಸಿ ದೇಸಿ ತಳಿ ಕೃಷಿ ಮಾಡುತ್ತಿರುವವರಿಗೆ ಬೆಂಬಲ…
ಬೆಂಗಳೂರು ಮೇ 23 NEWS DESK : ಕನ್ನಡ ಚಿತ್ರರಂಗದ ಹಿರಿಯ ನಟ ಡಾ. ಶಿವರಾಜ್ ಕುಮಾರ್ ದಂಪತಿಗಳು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಪರಸ್ಪರ ಆರೋಗ್ಯ ವಿಚಾರಿಸಿದ ಬಳಿಕ ಹಲವು ವಿಷಯಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಉಪಸ್ಥಿತರಿದ್ದರು.
ಮಡಿಕೇರಿ ಮೇ 23 NEWS DESK : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಗೆ ಸೇರಿರುವ ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಲು 3 ‘ಡಿ’ ಗ್ರೂಪ್ ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರ ವಯೋಮಿತಿ 18 ವರ್ಷ ತುಂಬಿರಬೇಕು. 35 ವರ್ಷ ಮೀರಿರಬಾರದು. (ವಯಸ್ಸಿನ ಬಗ್ಗೆ ಶಾಲಾ ದಾಖಲೆ ನೀಡಬೇಕು), ದೇವಾಲಯದ ಹೊರಾಂಗಣದ ನೌಕರರು ‘ಡಿ’ ಗ್ರೂಪ್ ಹುದ್ದೆ-2(ಕಾವಲುಗಾರರು) ವೇತನ ರೂ.9,600 ಮತ್ತು ಇತರೆ. ದೇವಾಲಯದ ಕರ್ತವ್ಯದ ಅವಧಿ ಬೆಳಗ್ಗೆ 7.30 ರಿಂದ ಮಧ್ಯಾಹ್ನ 1 ಗಂಟೆ, ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ. ದೇವಾಲಯದ ಕೆಲಸ ಕಾರ್ಯಗಳು ಮುಜರಾಯಿ ಇಲಾಖೆ ಸೂಚಿಸಿದ ನಿಯಮಗಳು ಹಾಗೂ ಶಿಸ್ತು ಪಾಲನೆಗೆ ಒಳಪಟ್ಟಿರುತ್ತದೆ. ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಿಂದ ಪಡೆದ ದೇಹ ದಾಢ್ರ್ಯ ಪ್ರಮಾಣ ಪತ್ರ ಹಾಜರುಪಡಿಸುವುದು. ಯಾವುದೇ ಕ್ರಿಮಿನಲ್ ಮೊಕದ್ದಮೆ ಹಾಗೂ ನ್ಯಾಯಾಲಯದ ಆದೇಶದಂತೆ ಕಾರಾಗೃಹದ ಶಿಕ್ಷೆಗೆ ಒಳಪಟ್ಟಿರಬಾರದು. ಅರ್ಜಿ ಸಲ್ಲಿಸಲು…
ಮಡಿಕೇರಿ ಮೇ 23 NEWS DESK : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಸ್ವಚ್ಚ ಭಾರತ್ ಮಿಷನ್ 2.0ರ ಅಡಿಯಲ್ಲಿ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸಹಾಯ ಗುಂಪು (ಎಸ್ಎಚ್ಜಿ) ಸದಸ್ಯರ ನೇಮಕಾತಿಗಾಗಿ, ಆಸಕ್ತಿಯುಳ್ಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಮೂಲಕ 3 ವರ್ಷಗಳವರೆಗೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಜೊತೆಗೆ ಪೂರ್ಣಾವಧಿಗೆ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ನಲ್ಮ್-ಡೇ ಅಡಿಯಲ್ಲಿ ನೋಂದಾಯಿಸಿ ಎಸ್ಎಚ್ಜಿ ಸದಸ್ಯರಿಂದ ಸೋಮವಾರಪೇಟೆ ಪಟ್ಟಣ ಪಂಚಾಯಿತಿಯು “ಆಸಕ್ತಿಯ ಅಭಿವ್ಯಕ್ತಿ”ಯನ್ನು ಆಹ್ವಾನಿಸುತ್ತದೆ. ಷರತ್ತುಗಳಿಗೊಳಪಟ್ಟ ಆಯ್ಕೆ ಪ್ರಕ್ರಿಯೆ ಮತ್ತು ವೇತನಕ್ಕೆ ಸಂಬಂಧಿಸಿದ ವಿವರಗಳನ್ನು www.somwarpettown.mrc.gov.in/ ವೆಬ್ಸೈಟ್ನಲ್ಲಿ ಲಭ್ಯವಿದೆ. ನಲ್ಮ್-ಡೇ ಯೊಂದಿಗೆ ನೋಂದಾಯಿಸಿಕೊಂಡ ಆಸಕ್ತ ಸ್ವಸಹಾಯ ಗುಂಪು ಸದಸ್ಯರು ತಮ್ಮ ಆಸಕ್ತಿಯ ಅಭಿವ್ಯಕ್ತಿಯನ್ನು ನಲ್ಮ್-ಡೇ ಯ ಹಿಂಬರಹದೊಂದಿಗೆ ಮೇಲೆ ತಿಳಿಸಲಾದ ವೆಬ್ಸೈಟ್ನಲ್ಲಿ ಲಭ್ಯವಿರುವ ನಿಗದಿತ ನಮೂನೆಯಲ್ಲಿ ಮೇ, 29 ರ ಸಂಜೆ 5 ಗಂಟೆಯ ಒಳಗಾಗಿ itstaff_ulb_somwarpet@yahoo.com./ ka.somwarpet.tp@gmail.com ಗೆ ಅಥವಾ ಕಚೇರಿಯ ವೇಳೆಯಲ್ಲಿ ಖುದ್ದಾಗಿ ತಲುಪಿಸಬಹುದಾಗಿದೆ, ಕಾಲ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಆಸಕ್ತಿಯುಳ್ಳ…
ಮಡಿಕೇರಿ ಮೇ 23 NEWS DESK : 2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೊತ್ತನಳ್ಳಿಯ ಆದ್ವಿ ಮರುಮೌಲ್ಯಮಾಪನದಲ್ಲಿ 4 ಹೆಚ್ಚುವರಿ ಅಂಕ ಗಳಿಕೆಯೊಂದಿಗೆ ಶೇ. 99.68 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದಿದ್ದು, ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.






