ಲೇಖಕ: admin

ಮಡಿಕೇರಿ ಮೇ 23 NEWS DESK : ಸರ್ಕಾರಿ ಶಾಲೆಗಳ ಶೈಕ್ಷಣಿಕ ಪ್ರಗತಿ, ಶಾಲಾ ಅಭಿವೃದ್ಧಿ ಹಾಗೂ ಬಲವರ್ಧನೆಗಾಗಿ ಸರ್ಕಾರ ರೂಪಿಸಿರುವ “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಎಂಬ ವಿನೂತನ ಪರಿಕಲ್ಪನೆಯ ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಶ್ರೋಯೋಭಿವೃದ್ಧಿಗಾಗಿ ಶಾಲೆಯಲ್ಲಿ ಕಲಿತ ಹಿರಿಯ ವಿದ್ಯಾರ್ಥಿಗಳು, ಪೋಷಕರು, ನಾಗರಿಕರು ಹಾಗೂ ದಾನಿಗಳು ಹೆಚ್ಚಿನ ಸಹಕಾರ ಮತ್ತು ಪ್ರೋತ್ಸಾಹ ನೀಡಬೇಕು ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಅಭಿವೃದ್ಧಿ) ಸಿ.ರಂಗಧಾಮಪ್ಪ ಮನವಿ ಮಾಡಿದ್ದಾರೆ. ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ಅಭಿಯಾನ (ಮಧ್ಯಾಹ್ನದ ಬಿಸಿಯೂಟ ಯೋಜನೆ) ವತಿಯಿಂದ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ರೂಪುರೇಷೆ ಕುರಿತು ಸಮುದಾಯದ ಸಹಭಾಗಿತ್ವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಏರ್ಪಡಿಸಿದ್ದ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಹಿರಿಯ/ ಹಳೆಯ ವಿದ್ಯಾರ್ಥಿಗಳು, ಸಂಘ- ಸಂಸ್ಥೆಗಳು,…

Read More

ಮಡಿಕೇರಿ ಮೇ 22 NEWS DESK : ಸುಂಟಿಕೊಪ್ಪದ ಬ್ಲೂಬಾಯ್ಸ್ ಯುವಕ ಸಂಘದ ವತಿಯಿಂದ ನಡೆಯುತ್ತಿರುವ ಡಿ ಶಿವಪ್ಪ ಸ್ಮಾರಕ ರಾಜ್ಯಮಟ್ಟದ ಗೋಲ್ಡ್ ಕಪ್ ಪಂದ್ಯಾವಳಿಯ ಫೈನಲ್ ಪಂದ್ಯಾವಳಿ ಹಾಗೂ ಸಮಾರೋಪ ಸಮಾರಂಭವು ಮೇ 25 ರಂದು ನಡೆಯಲಿದೆ. ಸುಂಟಿಕೊಪ್ಪದ ಸರ್ಕಾರಿ ಶಾಲಾ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಅಂತಿಮ ಪಂದ್ಯಾವಳಿಯನ್ನು ಸುಂಟಿಕೊಪ್ಪದ ಬೆಟ್ಟಗೇರಿ ಗ್ರೂಪ್ ಆಫ್ ಎಸ್ಟೇಟ್‍ನ ಡಿ.ವಿನೋದ್ ಶಿವಪ್ಪ ಉದ್ಘಾಟಿಸಲಿದ್ದು, ಡಿ. ವಿಶಾಲ್ ಶಿವಪ್ಪ ಬಹುಮಾನ ವಿತರಣೆ ಮಾಡಲಿದ್ದಾರೆ. ಸಂಜೆ 4.30 ಗಂಟೆಗೆ ನಡೆಯುವ ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್. ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಶಾಸಕರು ಮತ್ತು ಕೆಎಸ್‍ಎಫ್‍ಎ ಅಧ್ಯಕ್ಷ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ.ಹರಿಸ್, ನಟ ಅಭಿಷೇಕ್ ಅಂಬರೀಶ್, ನಟಿ ಶುಭ್ರ…

Read More

ಮಡಿಕೇರಿ ಮೇ 22 NEWS DESK : ಕಾಡಾನೆಗಳಿಗೆ ಪುನರ್ವಸತಿ ಕಲ್ಪಿಸಿದಲ್ಲಿ ಮುಂದಿನ 2 ವರ್ಷಗಳಲ್ಲಿ ಕಾಡಾನೆ ಉಪಟಳ ನಿಯಂತ್ರಣಕ್ಕೆ ಬರಲಿದೆ ಎಂದು ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಸಂಕೇತ್ ಪೂವಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಿಸಿದಂತೆ ಭದ್ರಾ ಸಾಫ್ಟ್ ಏರಿಯಾ ಲಿಸ್ಟ್ ನಲ್ಲಿ ಕಾಡಾನೆಗಳಿಗೆ ಪುನರ್ವಸತಿ ಕಲ್ಪಿಸಲು 2ರಿಂದ 3 ವರ್ಷಗಳು ಬೇಕಾಗಬಹುದು ಎಂದರು. ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ದೇವರಪುರದಲ್ಲಿ ವ್ಯಕ್ತಿಯೊಬ್ಬರನ್ನು ಕಾಡಾನೆ ಬಲಿ ಪಡೆದ ದುರ್ಘಟನೆಯನ್ನು ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ಕಾಡಾನೆ ಸೆರೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿಸಿದರು. ರಾಜ್ಯದ ಏಳೆಂಟು ಜಿಲ್ಲೆಗಳಲ್ಲಿ ಮಾನವ ವನ್ಯಜೀವಿ ಸಂಘರ್ಷವಿದೆ. ಕಾಡಾನೆ ಹಾವಳಿಯಿಂದಾಗಿ ರಾಜ್ಯದಲ್ಲೇ ಅತೀ ಹೆಚ್ಚು ಜೀವಹಾನಿ ಕೊಡಗು ಜಿಲ್ಲೆಯಲ್ಲಿ ಆಗುತ್ತಿದೆ. ಕಾಡಿನಲ್ಲಿರುವ ಆನೆಗಳಿಗಿಂತಲೂ ಹೆಚ್ಚಾಗಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳಿಂದ ಸಮಸ್ಯೆಯಾಗುತ್ತಿದೆ. ಸಮಸ್ಯೆ ಪರಿಹಾರಕ್ಕೆ ಎಲ್ಲಾ ಪಕ್ಷಗಳು,…

Read More

ಮಡಿಕೇರಿ ಮೇ 22 NEWS DESK : ಕೇಂದ್ರ ಸಂಸದೀಯ ಸ್ಥಾಯಿ ಸಮಿತಿ ತಂಡದ ಸದಸ್ಯರು ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಜನರಲ್ ತಿಮ್ಮಯ್ಯ ಅವರ ಹುಟ್ಟು, ಬೆಳವಣಿಗೆ, ವಿದ್ಯಾಭ್ಯಾಸ, ಸೇನಾ ಕ್ಷೇತ್ರದಲ್ಲಿನ ಸಾಧನೆ, ಮತ್ತಿತರ ಬಗ್ಗೆ ಮಾಹಿತಿ ಪಡೆದರು. ತಂಡದಲ್ಲಿ ಲೋಕಸಭೆ ಮತ್ತು ರಾಜ್ಯ ಸಭೆ ಸದಸ್ಯರು ಇದ್ದರು. ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಗೌಡಂಡ ತಿಮ್ಮಯ್ಯ ಅವರು ಜನರಲ್ ತಿಮ್ಮಯ್ಯ ಅವರ ಜೀವನ ಚರಿತ್ರೆ ಕುರಿತು ಮಾಹಿತಿ ನೀಡಿದರು.

Read More

ಮಡಿಕೇರಿ ಮೇ 22 NEWS DESK : ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇದಿಸುವಿಕೆ ಮತ್ತು ನಿವಾರಿಸುವಿಕೆ)-2013 ರ ಕಾಯ್ದೆಗೆ ಸಂಬಂದಿಸಿದಂತೆ ಸಂಪನ್ಮೂಲ ವ್ಯಕ್ತಿಗಳಾದ ಪಿಯಾಲಿ ಬೋಪಣ್ಣ ಅವರು ವಿಡಿಯೊ ಸಂವಾದ ಮೂಲಕ ಮಾಹಿತಿ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಏರ್ಪಡಿಸಲಾಗಿದ್ದ ವಿಡಿಯೊ ಸಂವಾದದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅನುಷ್ಠಾನ ಅಧಿಕಾರಿಗಳು, ಸ್ಥಳೀಯ ದೂರು ನಿವಾರಣ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಆಂತರಿಕ ದೂರು ನಿವಾರಣ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಇತರರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಮೇ 22 NEWS DESK : ಸೋಮವಾರಪೇಟೆ 66/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾರ್ಗ ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್2 ಶಾಂತಳ್ಳಿ ಮಾರ್ಗದಲ್ಲಿ ಮೇ, 23 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಯಡೂರು, ತಲ್ತಾರೆಶೆಟ್ಟಳ್ಳಿ, ಕಿರಗಂದೂರು, ತಾಕೇರಿ, ಗಿಜಗನಮನೆ, ತೊಳೂರುಶೆಟ್ಟಳ್ಳಿ, ಕೂತಿ, ಹೊಸಬೀಡು, ಕಲ್ಕಂದೂರು, ಬಸವನಕಟ್ಟೆ, ನಗರಳ್ಳಿ, ಹೆಮನಗದ್ದೆ, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹೆಗ್ಗಡಮನೆ, ಹರಗ, ಕುಂಬಾರಗಡಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ಮಡಿಕೇರಿ ಮೇ 22  NEWS DESK : ಕೊಡವ ಸಾಹಿತ್ಯ ರಚನೆಕಾರ, ಸಂಗೀತ ನಿರ್ದೇಶಕ, ಹಾಡುಗಾರ, ಹಿರಿಯ ಕಲಾವಿದ ಚೆಕ್ಕೆರ ತ್ಯಾಗರಾಜ ಅಪ್ಪಯ್ಯ ಅವರನ್ನು ಕೊಡಗು ಕಲಾವಿದರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಮೈಸೂರು ಕೊಡವ ಸಮಾಜದಲ್ಲಿ ನಡೆದ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಕಲಾವಿದರ ಸಂಘದ ಅಧ್ಯಕ್ಷ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ಕಲಾವಿದರ ಕಲಾ ಸೇವೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಸನ್ಮಾನ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಚೆಕ್ಕೆರ ತ್ಯಾಗರಾಜ ಅವರ ಕಲಾ ಸೇವೆ ಅಪಾರವಾಗಿದ್ದು, ಇತರರಿಗೆ ಮಾದರಿಯಾಗಿದೆ ಎಂದರು. ಸಂಘದ ವತಿಯಿಂದ ಮೊದಲ ಬಾರಿಗೆ ಚೆಕ್ಕೆರ ತ್ಯಾಗರಾಜ ಅವರನ್ನು ಗುರುತಿಸಿ ಸನ್ಮಾನಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಗುವುದು. ಈ ಕಾರ್ಯಕ್ರಮ ನಿರಂತರವಾಗಿ ನಡೆಯಲಿದ್ದು, ಇದಕ್ಕೆ ಸರ್ವ ಕಲಾಭಿಮಾನಿಗಳು ಸಹಕರಿಸಬೇಕೆಂದು ಮನವಿ ಮಾಡಿದರು. ಹಿರಿಯ ಕಲಾವಿದ ಹಾಗೂ ಆಯೋಜಕ ನೆರವಂಡ ಉಮೇಶ್ ಅವರು ಮಾತನಾಡಿ ತ್ಯಾಗರಾಜ ಅವರಂತೆ ಅವರ ತಂದೆ ಅಪ್ಪಯ್ಯ ಅವರು…

Read More

ಮಡಿಕೇರಿ ಮೇ 22 NEWS DESK : ಮಡಿಕೇರಿಯ ಶ್ರೀಕೋಟೆ ಮಹಾಗಣಪತಿ ದೇವಾಲಯದಲ್ಲಿ ಚಿನ್ನದ ಕಿರೀಟ ಸಮರ್ಪಣೆ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಇಂದು ಮುಂಜಾನೆ ಶ್ರೀಕೋಟೆ ಮಹಾಗಣಪತಿ ದೇವರಿಗೆ ಅಭಿಷೇಕ, 21 ತೆಂಗಿನಕಾಯಿಗಳ ಗಣ ಹೋಮ, 10 ಸಹಸ್ರ ದುವಾರ್ಂಕುರ, ಒಂದು ಸಹಸ್ರ ಎಕ್ಕ ಸಮರ್ಪಣೆ ಮತ್ತು ಪೂರ್ಣಾಹುತಿ ಜರುಗಿತು. ಮಹಾಮಂಗಳಾರತಿಯ ನಂತರ ಭಕ್ತರಿಗೆ ಅನ್ನ ಸಂತರ್ಪಣೆಯಾಯಿತು. ಮೇ 21 ರಂದು ಸಂಜೆ ಭಜನೆ ಹಾಗೂ ವಿಶೇಷ ಪೂಜೆಯ ಮೂಲಕ ವಾರ್ಷಿಕೋತ್ಸವವನ್ನು ಆರಂಭಿಸಲಾಯಿತು. ಎರಡು ದಿನಗಳ ಪೂಜಾ ಕೈಂಕರ್ಯಗಳಲ್ಲಿ ಅಪಾರ ಸಂಖ್ಯೆಯ ಭಕ್ತರ ಪಾಲ್ಗೊಂಡಿದ್ದರು. ಶ್ರೀ ಕೋಟೆ ಮಹಾಗಣಪತಿ ದೇವಾಲಯ ದಸರಾ ಮಂಟಪ ಸಮಿತಿಯ ಅಧ್ಯಕ್ಷ ಬಿ.ವಿ.ಅರವಿಂದ್, ಶ್ರೀ ಓಂಕಾರೇಶ್ವರ ದೇವಾಲಯ ಸಮಿತಿಯ ಅಧ್ಯಕ್ಷ ಚುಮ್ಮಿ ದೇವಯ್ಯ ಮತ್ತಿತರ ಪ್ರಮುಖರು ಹಾಜರಿದ್ದರು.

Read More

ಮಡಿಕೇರಿ ಮೇ 22 NEWS DESK : ಕೊಡಗು ಪತ್ರಕರ್ತರ ಸಂಘ ಸೋಮವಾರಪೇಟೆ ತಾಲ್ಲೂಕು ಘಟಕದ ವತಿಯಿಂದ ಮೇ 25 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ಸೋಮವಾರಪೇಟೆ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಹಿರಿಯ ವಕೀಲರು ಮತ್ತು ನೋಟರಿ ಈಶ್ವರಚಂದ್ರ ವಿದ್ಯಾಸಾಗರ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸೋಮವಾರಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್.ಹರೀಶ್ ಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಉದ್ಯಮಿ ಬಿ.ಸಂಜೀವ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಟಿ.ಅನಿಲ್, ಉದ್ಯಮಿ ಗಿರೀಶ್ ಮಲ್ಲಪ್ಪ ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಮೇ 22 NEWS DESK : ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು  ಆಚರಿಸಲಾಯಿತು. ಕಚೇರಿಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಚೇರಿಯ ಅಧಿಕಾರಿ ಸಿಬ್ಬಂದಿಯವರಿಗೆ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ ಬಿ.ಪಿ.ದಿನೇಶ್ ಕುಮಾರ್‌  ಭಯೋತ್ಪಾದನಾ ವಿರೋಧಿ ಪ್ರತಿಜ್ಞೆಯನ್ನು ಬೋಧಿಸಿದರು.

Read More