ವಿರಾಜಪೇಟೆ ಜ.23 NEWS DESK : ಕೇರಳದ ಇರಿಟ್ಟಿ ಸಮೀಪದ ಉಳಿಕ್ಕಲ್ನ ವಾಯತ್ತೂರು ಕಾಲಿಯಾರ್ (ಕೊಡಗಿನ ಶ್ರೀ ಆದಿ ಬೈತೂರಪ್ಪ) ದೇವಸ್ಥಾನದಲ್ಲಿ ವಾರ್ಷಿಕ ಉತ್ಸವದ ಸಲುವಾಗಿ ಕೊಡಗಿನ ಪುಗ್ಗೆರ ಕುಟುಂಬದ ಎತ್ತು ಪೋರಾಟ್ ಹಾಗೂ ಅಕ್ಕಿ ಅಳೆಯುವ ಶಾಸ್ತ್ರ ನಡೆಯಿತು. ಊಟು ಹಬ್ಬದ ಅಕ್ಕಿಯನ್ನು ಕೊಡಗಿನಿಂದ ದೇವಸ್ಥಾನಕ್ಕೆ ತರಲಾಯಿತು. ಕೊಡಗಿನ ಐತಿಹಾಸಿಕ ಪುಗ್ಗೇರಮನೆಯಿಂದ ಬೈತೂರುವಿಗೆ ಕಾಲಿಯಾರ್ ಊಟು ಉತ್ಸವಕ್ಕಾಗಿ ಅಕ್ಕಿ ತರಲಾಗುತ್ತದೆ. ದೇವಸ್ಥಾನದಲ್ಲಿ ಅಕ್ಕಿ ಹಾಗೂ ಎತ್ತುಗಳೊಂದಿಗೆ ಆಗಮಿಸಿದ ಕೊಡವರನ್ನು ಸಂಪ್ರದಾಯದಂತೆ ಬರಮಾಡಿಕೊಂಡರು. ಕೊಡಗಿನಿಂದ ತಂದ ಅಕ್ಕಿಯನ್ನು ದೊಡ್ಡ ಅಳೆದ ಬಳಿಕ ಕೊಡಗು-ಮಲೆಯಾಳರ ಅಪರೂಪದ ಸಂಗಮವಾಗಿರುವ ವಾಯತ್ತೂರು ಉತ್ಸವ ಆರಂಭವಾಗಲಿದೆ. ಗುರುವಾರದಂದು ಶ್ರೀ ಭೂತಬಲಿ, ವಿಶೇಷ ಪೂಜೆ, ನೈವೇದ್ಯ, ಪುಗ್ಗೆರ ಮನೆಯವರ ಪೂಜಾ ಕೈಂಕರ್ಯಗಳು, ಸಂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಇಂದು (ಸೆ.23) ಬೆಳಿಗ್ಗೆ (ಇಂದು)ಕೊಡಗಿನವರಿಂದ ಮೆರವಣಿಗೆ, ವಿವಿಧ ಸಾಂಪ್ರದಾಯಿಕ ಕಾರ್ಯಕ್ರಮಗಳು, (9 ಊಟ್) ನಾಡಿನ ಎತ್ತು ಪೋರಾಟ, ಅಕ್ಕಿ ಅಳೆಯುವುದು, ರಾತ್ರಿ 8.30 ಗಂಟೆಗೆ ಪುಗ್ಗೆರ ಕುಟುಂಬದ ವಿಶೇಷ…
ಲೇಖಕ: admin
ಕುಶಾಲನಗರ, ಜ.22 NEWS DESK : ಪ್ರಸಕ್ತ ಸಾಲಿನಲ್ಲಿ ಪ್ರತಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷಾ ಫಲಿತಾಂಶವನ್ನು ಉತ್ತಮ ಪಡಿಸಲು ಶಿಕ್ಷಣ ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಜತೆಗೂಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಅಭಿವೃದ್ಧಿ ) ರೂ ಆದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಹೇಳಿದರು. ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯಲ್ಲಿ ಶಿಕ್ಷಣ ಇಲಾಖೆ ಮತ್ತು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ( ಡಿ.ಎಸ್ಇ.ಆರ್.ಟಿ.) ವತಿಯಿಂದ ಶಿಕ್ಷಕ ಶಿಕ್ಷಣ ಯೋಜನೆಯಡಿ ಇಲಾಖೆಯ ಅನುಷ್ಠಾಆಧಿಕಾರಿಗಳು ಹಾಗೂ ಜಿಲ್ಲಾ ಸರ್ಕಾರಿ ಪ್ರೌಢಶಾಲೆ ಮತ್ತು ಅನುದಾನಿತ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಗುರುವಾರ ರಾಜ್ಯ ಮಟ್ಟದ ಎಸ್ಎಸ್ಎಲ್ಸಿ ಪೂರ್ವ…
ಮಡಿಕೇರಿ ಜ.22 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮವು ಜನವರಿ, 25 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಜ.22 NEWS DESK : ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹುತಾತ್ಮರ ದಿನ ಪ್ರಯುಕ್ತ ಪೂಜ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಜನವರಿ, 30 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆ ಕಚೇರಿಯಿಂದ ಮೆರವಣಿಗೆಯಲ್ಲಿ ಪೊಲೀಸ್ ಗೌರವ ರಕ್ಷೆಯೊಂದಿಗೆ ತೆಗೆದುಕೊಂಡು ಹೋಗಿ ಗಾಂಧಿ ಮಂಟಪದ ಆವರಣದಲ್ಲಿ ಇರಿಸಿ ಬೆಳಗ್ಗೆ 10.30 ಗಂಟೆಗೆ ಸರ್ವಧರ್ಮ ಪ್ರಾರ್ಥನೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.
ಮಡಿಕೇರಿ ಜ.22 NEWS DESK : ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯಸೌಧದಲ್ಲಿ ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲ್ಲೂಕಿನ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮಿಯೋಜನೆಯಲ್ಲಿ ಒಟ್ಟು 1.17 ಫಲಾನುಭವಿಗಳಿಗೆ ಸೆಪ್ಟೆಂಬರ್ ತಿಂಗಳವರೆಗೆ ಗೃಹ ಲಕ್ಷ್ಮಿ ಹಣ ಪಾವತಿಯಾಗಿದ್ದು, ಇನ್ನೂ 5 ತಿಂಗಳು ಬಾಕಿ ಇದೆ. ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಗೃಹ ಲಕ್ಷ್ಮಿ ಯೋಜನೆಯಡಿ ಸೆಪ್ಟೆಂಬರ್ ತಿಂಗಳವರೆಗೆ 720 ಹೊಸ ಫಲಾನುಭವಿಗಳು ಹೆಸರು ನೋದಾಯಿಸಿಕೊಂಡಿದ್ದು, ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ. ಐಟಿ ಮತ್ತು ಜಿಎಸ್ಟಿ ಪಾವತಿ ಮಾಡುತ್ತಿರುವ ಫಲನುಭವಿಗಳಲ್ಲಿ ಕೆಲವು ತಾಂತ್ರಿಕ ದೋಷಗಳು ಕಂಡುಬರುತ್ತಿದ್ದು, ಈ ಬಗ್ಗೆ ಸರ್ಕಾರದ ಗಮನ ತಂದು ಸಮಸ್ಯೆ ಬಗೆಹರಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಸರ್ಕಾರ ಹೊಸದಾಗಿ ಮಹಿಳೆಯರಿಗಾಗಿ ಗೃಹ ಲಕ್ಷ್ಮಿ ವಿವಿದ್ದೋದ್ದೇಶ ಸಹಕಾರ ಸಂಘವನ್ನು ರಚನೆ ಮಾಡಿದ್ದು, ಮೊದಲ ಹಂತದಲ್ಲಿ ಈಗಾಗಲೇ ತಾಲ್ಲೂಕಿನಲ್ಲಿ ಫಲಾನುಭವಿಗಳನ್ನು ಆಯ್ಕೆ…
ಮಡಿಕೇರಿ ಜ.22 NEWS DESK : ಕೊಡಗು ಜಿಲ್ಲೆಯ ವಿವಿಧೆಡೆ ಹುಲಿ ಮತ್ತು ಕಾಡಾನೆ ಉಪಟಳ ವ್ಯಾಪಕವಾಗಿದೆ. ಹುಲಿ ದಾಳಿಯಿಂದ ಹಸು ಮತ್ತು ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಕೊಟ್ಟಿಗೆಯಲ್ಲಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ತೀವ್ರ ಗಾಯಗೊಳಿಸಿರುವ ಘಟನೆ ಇಂದು ದಕ್ಷಿಣ ಕೊಡಗಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಪೋರಂಗಡ ಪೃಥ್ವಿ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮದಲ್ಲಿ ಆತಂಕ ಮೂಡಿದ್ದು, ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. *ಕಾಡಾನೆ ದಾಳಿ* ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಬಾಡಗ ಬಾಣಂಗಾಲ ಗ್ರಾಮದ ಮಟ್ಟ ಪೈಸಾರಿ ಬಳಿ ನಡೆದಿದೆ. ಸ್ಥಳೀಯ ನಿವಾಸಿ ದೇವರಾಜ (60) ಎಂಬುವವರೇ ಗಾಯಗೊಂಡಿರುವ ವ್ಯಕ್ತಿಯಾಗಿದ್ದು, ಇವರನ್ನು ವಿರಾಜಪೇಟೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇಂದು ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ.…
ಮಡಿಕೇರಿ ಜ.22 NEWS DESK : ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮ ಸ್ಥಳವಾದ ಅಯೋಧ್ಯೆಯಲ್ಲಿ, ಕೋಟ್ಯಂತರ ಹಿಂದೂ ಬಾಂಧವರ ನಿರೀಕ್ಷೆಯಂತೆ ‘ಶ್ರೀ ರಾಮ ಲಲ್ಲಾ’ನ ಪ್ರತಿಷ್ಠಾಪನೆಯೊಂದಿಗೆ, ಭವ್ಯ ಮಂದಿರ ಲೋಕಾರ್ಪಣೆಗೊಂಡ ಪುಣ್ಯದಿನದ ಅಂಗವಾಗಿ ನಗರದ ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಅನ್ನ ಪ್ರಸಾದ ವಿತರಣಾ ಕಾರ್ಯಕ್ರಮ ಭವ್ಯವಾಗಿ ನೆರವೇರಿತು. ಶ್ರೀರಾಮ ಲಲ್ಲಾನ ಮೂರ್ತಿಯೊಂದಿಗೆ ಮಂದಿರ ಅಯೋಧ್ಯೆಯಲ್ಲಿ ಭಕ್ತರಿಗೆ ತೆರೆದುಕೊಂಡಲ್ಲಿಂದ ನಗರದ ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿ ವರ್ಷಂಪ್ರತಿ ಅನ್ನದಾನದ ಸಂಕಲ್ಪದೊಂದಿಗೆ, ಅದನ್ನು ನಡೆಸಿಕೊಂಡು ಬರುತ್ತಿದೆ. ವರ್ಷಂಪ್ರತಿಯಂತೆ ಈ ಬಾರಿಯೂ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಸಹಸ್ರಾರು ಮಂದಿಗೆ ಅನ್ನ ಪ್ರಸಾದ ವಿತರಣೆÉ ಅತ್ಯಂತ ಶಿಸ್ತುಬದ್ಧವಾಗಿ, ಭಕ್ತಿಪೂರ್ವಕವಾಗಿ ನೆರವೇರಿತು. ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯ ಪದಾಧಿಕಾರಿಗಳು ಗುರುವಾರ ಬೆಳಗ್ಗೆ ಖಾಸಗಿ ಬಸ್ ನಿಲ್ದಾಣದ, ಅನ್ನ ಪ್ರಸಾದ ವಿತರಣಾ ಜಾಗದಲ್ಲಿ ಗಣಪತಿ ಹೋಮವನ್ನು ನಡೆಸಿ, ನಗರದ ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ಬಳಿಕ ಬೆ.11 ಗಂಟೆಯಿಂದ ಆರಂಭಗೊಂಡ…
ಸುಂಟಿಕೊಪ್ಪ ಜ.22 NEWS DESK : ಮಾದಾಪುರ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಛಾಪಾ ಕಾಗದ (ಸ್ಟ್ಯಾಂಪ್ ಪೇಪರ್) ಮಾರಾಟ ಕೇಂದ್ರವನ್ನು ಸಂಘದ ಅಧ್ಯಕ್ಷರಾದ ನಾಪಂಡ ಉಮೇಶ್ ಉತ್ತಪ್ಪ ಉದ್ಘಾಟಿಸಿದರು. ಮಾದಾಪುರ ಹೋಬಳಿ ಕೇಂದ್ರದಲ್ಲಿ ಕೃಷಿಕರಿಗೆ ಸಾಮಾನ್ಯ ಜನರಿಗೆ ಉಪಯೋಗಕ್ಕೆ ಬೇಕಾಗಿದ್ದ ಛಾಪ ಕಾಗದಕ್ಕಾಗಿ ಹತ್ತಾರು ಕಿ.ಮೀ. ದೂರ ಕ್ರಮಿಸಿ ತರಬೇಕಾಗಿದ್ದು ಇಲ್ಲಿ ಜನತೆಯ ಸಂಕಷ್ಟವನ್ನು ಮನಗಂಡ ಮಾದಾಪುರ ಕೃಷಿ ಪತ್ತಿನ ಸಹಕಾರ ಸಂಘದವರು ಛಾಪ ಕಾಗದ (ಸ್ಟ್ಯಾಂಪ್ ಪೇಪರ್) ಮಾರಾಟ ಕೇಂದ್ರವನ್ನು ತೆರೆಯಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷೆ ಪವಿತ್ರ ಹರೀಶ್, ನಿರ್ದೇಶಕರುಗಳಾದ ಬಿ.ಐ.ಮೊಣ್ಣಪ್ಪ, ಪಿ.ಪಿ.ತಿಲಕ್ಕುಮಾರ್, ಸಿ.ಎ.ತಮ್ಮಯ್ಯ, ಕುಟ್ಟಂಡ ಕುಟ್ಟಪ್ಪ, ಮುಕ್ಕಾಟಿರ ತಿಮ್ಮಯ್ಯ, ದೇಚಮ್ಮ ಸೋನು,ಕೆ.ಎ.ಲತೀಫ್, ನಾಗಂಡ ಭವಿನ್, ಗಿರೀಶ್ ಎಂ.ಆರ್., ಹೆಚ್.ಇ.ಭೀಮಯ್ಯ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎಸ್.ಕಾವೇರಪ್ಪ ಉಪಸ್ಥಿತರಿದ್ದರು.
ಮಡಿಕೇರಿ ಜ.22 NEWS DESK : ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರ್ ಕಛೇರಿಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸಭೆ ನಡೆಸಿದರು. ಬಗರ್ ಹುಕುಂ ಸಾಗುವಳಿಯ ಅರ್ಜಿಗಳ ವಿಲೇವಾರಿ ಕುರಿತು ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಸುಂಟಿಕೊಪ್ಪ 22 NEWS DESK : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮದ್ಯಪಾನ ಮುಕ್ತ ಸಮಾಜದಿಂದ ಮಾತ್ರ ರಾಮರಾಜ್ಯ ಸ್ಥಾಪನೆ ಎಂಬುದನ್ನು ಪ್ರತಿಪಾದಿಸಿದ್ದು, ಅವರ ತತ್ವ ಆದರ್ಶಗಳನ್ನು ಪಾಲಿಸುವಂತೆ ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಎಂ.ಬಿ.ಅಭಿಮನ್ಯುಕುಮಾರ್ ಹೇಳಿದರು. ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಮಡಿಕೇರಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನ ಕೇಂದ್ರ ರಾಯಿಲ ಉಜಿರೆ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಮತ್ತು ಪಗ್ರತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಸುಂಟಿಕೊಪ್ಪ ವಲಯದ ಎಲ್ಲಾ ಅಂಗ ಸಂಸ್ಥೆಗಳು ಆರಕ್ಷಕಠಾಣೆ ಪ್ರಾಥಮಿಕ ಆರೋಗ್ಯ ಕೆಂದ್ರ ನವಜೀವನ ಸಮಿತಿ, ಶೌರ್ಯ ವಿಪತ್ತು ನಿರ್ವಹಣ ಘಟಕ ಮಡಿಕೇರಿ ತಾಲೂಕು ಹಾಗೂ ಸ್ಥಳೀಯ ಸಂಸ್ಥೆಗಳ ನೆರವಿನೊಂದಿಗೆ 2040ನೇ ಮದ್ಯವರ್ಜನ ಶಿಬಿರದ ಉದ್ಘಾಟನೆಯನ್ನು ನೇರವೇರಿಸಿ ಅವರು ಮಾತನಾಡಿದರು. ಎಲ್ಲಾ ಕ್ಷೇತ್ರಗಳಲ್ಲಿ…






