*ನಮ್ಮ ಪ್ರೀತಿಯ ತಂದೆ ನಂದಿನೆರವಂಡ ಉತ್ತಪ್ಪ ಅವರ ನಿಧನದ ಸಂದರ್ಭದಲ್ಲಿ ಅವರಿಗೆ ನನ್ನ ಗೌರವಪೂರ್ವಕ ನಮನಗಳು* 2025 ರ ಮೇ 22 ರಂದು 93 ವರ್ಷ ವಯಸ್ಸಿನ ನನ್ನ ಪ್ರೀತಿಯ ತಂದೆ ನಂದಿನೆರವಂಡ ಉತ್ತಪ್ಪ ಅವರು ನಿಧನರಾದರು ಎಂದು ಘೋಷಿಸಲು ನನಗೆ ತುಂಬಾ ನೋವಾಗಿದೆ. ಕೊಡವಲ್ಯಾಂಡ್ ಸ್ವಾಯತ್ತತೆ ಮತ್ತು ಕೊಡವ ಸ್ವ-ನಿರ್ಣಯ ಹಕ್ಕುಗಳಿಗಾಗಿ ನಮ್ಮ ಹೋರಾಟದ ಉದ್ದಕ್ಕೂ ಅವರು ದೃಢವಾಗಿ ನಿಂತರು. ಇದಕ್ಕಾಗಿ ಅವರು ಅಧಿಕಾರಿಗಳಿಂದ ತೀವ್ರ ಚಿತ್ರಹಿಂಸೆ ಮತ್ತು ಕಿರುಕುಳವನ್ನು ಅನುಭವಿಸಿದರು. ಹಲವಾರು ಪ್ರಕರಣಗಳಲ್ಲಿ ನನ್ನನ್ನು ಸಿಲುಕಿಸಿದರೂ, ಅಧಿಕಾರಿಗಳು ಸುಳ್ಳು ಪ್ರಕರಣಗಳನ್ನು ಹೂಡಿದರು ಮತ್ತು ಲೆಕ್ಕವಿಲ್ಲದಷ್ಟು ಸಂದರ್ಭಗಳಲ್ಲಿ ಅವರನ್ನು ಕ್ರೂರವಾಗಿ ಹಿಂಸಿಸಿದರು. ಅವಮಾನ ಮತ್ತು ಸಂಕಟಗಳ ಹೊರತಾಗಿಯೂ, ಅವರು ಸಿಎನ್ಸಿಯ ಉದಾತ್ತ ಉದ್ದೇಶವನ್ನು ಬೆಂಬಲಿಸುತ್ತಲೇ ಇದ್ದರು. ಸಿಎನ್ಸಿ ಮತ್ತು ಕೊಡವ ಸಾಂವಿಧಾನಿಕ ಬೇಡಿಕೆಗಳು ಇಂದು ಸಾಧಿಸಿದ್ದು, ಅವುಗಳು ಬಾನೆತ್ತರಕ್ಕೆ ತಲುಪಿರುವುದು ನನ್ನ ತಂದೆಯ ಅಮೂಲ್ಯ ಕೊಡುಗೆಗಳಿಂದಾಗಿ. ಪ್ರತಿಕೂಲ ಪರಿಸ್ಥಿತಿಗಳಲ್ಲಿಯೂ ಈ ಉದ್ದೇಶವನ್ನು ಬೆಂಬಲಿಸುವಲ್ಲಿ ಅವರ ಹೃತ್ಪೂರ್ವಕ ಪ್ರಯಾಣವು ಇತರರು ಅನುಸರಿಸಬೇಕಾದ ಆದರ್ಶವಾದವಾಗಿದೆ. ಅವರ…
ಲೇಖಕ: admin
ನಾಪೋಕ್ಲು ಮೇ 22 NEWS DESK : ಹೋಬಳಿ ವ್ಯಾಪ್ತಿಯಲ್ಲಿ ನಿತ್ಯ ಮಳೆಯಾಗುತ್ತಿದ್ದು, ರೈತರು ಬಿರುಸಿನ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿತ್ಯ ಮಳೆಯಾಗುತ್ತಿರುವುದರಿಂದ ನದಿ ತೋಡುಗಳಲ್ಲಿ ನೀರಿನ ಪ್ರಮಾಣ ಏರಿಕೆ ಯಾಗಿದೆ. ತೋಟಗಳಲ್ಲಿ ತೇವಾಂಶವಿದ್ದು, ರೈತರು ರಾಸಾಯನಿಕ ಗೊಬ್ಬರಗಳನ್ನು ಕಾಫಿ ತೋಟಗಳಿಗೆ ಹಾಕುತ್ತಿದ್ದಾರೆ. ಅಲ್ಲಲ್ಲಿ ಭತ್ತದ ಬಿತ್ತನೆಗೆ ಸಿದ್ಧತೆಗಳಾಗುತ್ತಿವೆ ಸಮೀಪದ ಕುಯ್ಯಂಗೇರಿ ಗ್ರಾಮದಲ್ಲಿ ಗದ್ದೆ ಉಳುಮೆಗೆ ತೊಡಗಿರುವ ದೃಶ್ಯ ಕಂಡು ಬಂತು. ಕೃಷಿಕರಾದ ಕುಯ್ಯಂಗೇರಿಯ ಚಿಲ್ಲನ ಕುಮಾರಪ್ಪ ಮಾತನಾಡಿ, ಇತ್ತೀಚಿನ ಮಳೆಯಿಂದಾಗಿ ಭೂಮಿ ಹದಗೊಂಡಿದೆ. ಉಳುಮೆಗೆ ಇದು ಸಕಾಲ ಈಗ ಉಳುಮೆ ಮಾಡುವುದರಿಂದ ಹುಲ್ಲು ಹಾಗೂ ಕಳೆ ಗಿಡಗಳು ನಾಶವಾಗಿ ಬಿತ್ತನೆ ಮಾಡಲು ಅನುಕೂಲವಾಗಲಿದೆ ಎಂದು ಹಳೆಯ ಸಾಂಪ್ರದಾಯಿಕ ಪದ್ಧತಿಯಂತೆ ಸಾವಯವ ಗೊಬ್ಬರ ಹಾಗೂ ಧನಗಳನ್ನು ಬಳಸಿ ಬೇಸಾಯ ಮಾಡುತ್ತಿದ್ದರು ಎಂದು ಅಭಿಪ್ರಾಯಪಟ್ಟರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಮೇ 22 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಮೇ, 23 ರಂದು ನಡೆಯಬೇಕಿದ್ದ ಮಡಿಕೇರಿ ತಾಲ್ಲೂಕಿನ ತ್ರೈಮಾಸಿಕ ಕೆಡಿಪಿ ಸಭೆಯನ್ನು ಮುಂದೂಡಲಾಗಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶೇಖರ್ ತಿಳಿಸಿದ್ದಾರೆ.
ಮಡಿಕೇರಿ ಮೇ 22 NEWS DESK : ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಮಡಿಕೇರಿ (ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇದರ ಅಂಗ ಸಂಸ್ಥೆ) ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. (ಸಹಕಾರ ಸಂಘ, ಸಂಸ್ಥೆ, ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಮಾತ್ರ). ಇತ್ತೀಚಿನ ಕಾಯಿದೆ ತಿದ್ದುಪಡಿ ಅನ್ವಯ ಕೆಸಿಎಸ್ ನಿಯಮ 17(ಎ)(ಬಿ) ಪ್ರಕಾರ ಪದೋನ್ನತಿ ಹೊಂದಬೇಕಾದರೆ ಕಡ್ಡಾಯವಾಗಿ ಡಿಸಿಎಂ ಕೋರ್ಸ್ ಪಡೆಯಬೇಕಾಗುತ್ತದೆ. ಕೋರ್ಸ್ ಅವಧಿ 6 ತಿಂಗಳು ಪ್ರತಿ ವರ್ಷ ಜನವರಿ-ಜೂನ್ ಮತ್ತು ಜುಲೈ-ಡಿಸೆಂಬರ್ರವರೆಗೆ ಎರಡು ಅಧಿವೇಶನಗಳು ಪದೋನ್ನತಿ ಮತ್ತು ವಾರ್ಷಿಕ ಬಡ್ತಿಗೆ ಉಪಯುಕ್ತ ಅಧ್ಯಯನ ಸಾಹಿತ್ಯ ನೀಡಲಾಗುವುದು. 6 ತಿಂಗಳ ಅವಧಿಯಲ್ಲಿ (5+5=10) 2 ಸಂಪರ್ಕ ತರಗತಿಗಳು ಹೈಬ್ರಿಡ್ ಮಾದರಿಯಲ್ಲಿ ಆಫ್ಲೈನ್, ಆನ್ಲೈನ್ ತರಗತಿಗಳು ಸಹಕಾರ ವಾರಪತ್ರಿಕೆಯನ್ನು ನೀಡಲಾಗುವುದು. ಈಗಾಗಲೇ ರಾಜ್ಯದಲ್ಲಿ ಸುಮಾರು 30,000 ಸಹಕಾರಿ ಉದ್ಯೋಗಿಗಳು ತರಬೇತಿ ಪಡೆದಿದ್ದಾರೆ. ಸಹಕಾರ ಕ್ಷೇತ್ರದ ಅರಿವಿಗೆ ನಿಮಗೀಗ ಸುವರ್ಣಾವಕಾಶ. ಅರ್ಜಿ ಫಾರಂ ಕರ್ನಾಟಕ ಇನ್ಸ್ಟಿಟ್ಯೂಟ್…
ಮಡಿಕೇರಿ ಮೇ 22 NEWS DESK : ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಮಡಿಕೇರಿ (ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇದರ ಅಂಗ ಸಂಸ್ಥೆ) ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೋರ್ಸ್ ಅವಧಿ 6 ತಿಂಗಳು. ಪ್ರತಿ ವರ್ಷ ಜನವರಿ-ಜೂನ್ ಮತ್ತು ಜುಲೈ-ಡಿಸೆಂಬರ್ವರೆಗೆ ಎರಡು ಅಧಿವೇಶನಗಳು. ಕನಿಷ್ಠ ಪ್ರವೇಶ ಶುಲ್ಕ. ಪ್ರವೇಶ ಪಡೆದ ಎಲ್ಲಾ ಅಭ್ಯರ್ಥಿಗಳಿಗೂ ಶಿಷ್ಯವೇತನ ನೀಡಲಾಗುವುದು. ರಿಯಾಯಿತಿ ದರದಲ್ಲಿ ಅಧ್ಯಯನ ಸಾಹಿತ್ಯ ನೀಡಲಾಗುವುದು. ಹೈಬ್ರಿಡ್ ಮಾದರಿಯಲ್ಲಿ ಆಫ್ಲೈನ್/ ಆನ್ಲೈನ್ ತರಗತಿಗಳನ್ನು ನಡೆಸಲಾಗುವುದು. ಸಹಕಾರ ಸಂಘ / ಬ್ಯಾಂಕ್ ನೇಮಕಾತಿ ಪರೀಕ್ಷೆಗೆ ಅನುಕೂಲಕರ. ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲಕರ. ವಿದ್ಯಾರ್ಹತೆ; ಕನಿಷ್ಠ ಎಸ್ಎಸ್ಎಲ್ಸಿ, ಗರಿಷ್ಠ ಯಾವುದೇ ಪದವಿ/ಇತರೆ. ವಿಶೇಷವಾಗಿ ನಾಯಕತ್ವ (Leadership, Motivational Speech) ಬೆಳೆಸಿಕೊಳ್ಳಲು ಚರ್ಚಾ ಸ್ಪರ್ಧೆಯೊಂದಿಗೆ ಕಲಿಕೆ. ಕನಿಷ್ಠ ಶುಲ್ಕದೊಂದಿಗೆ ತ್ರೈಮಾಸಿಕ ಕಂಪ್ಯೂಟರ್ ಬೇಸಿಕ್ ತರಬೇತಿ ನೀಡಲಾಗುವುದು. 69 ವರ್ಷಗಳ ಶೈಕ್ಷಣಿಕ ಅನುಭವ, ಸುಸಜ್ಜಿತ ಗ್ರಂಥಾಲಯ, ನುರಿತ…
ಮಡಿಕೇರಿ ಮೇ 22 NEWS DESK : ಅಮೃತ ಯುವ ಮೊಗೇರ ಅಮ್ಮತಿ ಹೋಬಳಿ ವತಿಯಿಂದ 3ನೇ ವರ್ಷದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯದಲ್ಲಿ ಡೋಮಿನೇಟರ್ ಇಲೆವೆನ್ ಮಾರ್ಗೋಳ್ಳಿ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಫ್ರೆಂಡ್ಸ್ ಇಲೆವೆನ್ ಉಡುಪಿ ರನ್ನರ್ಸ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಮೊಗೇರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಒಟ್ಟು 36 ತಂಡಗಳು ಚಾಂಪಿಯನ್ ಟ್ರೋಫಿಗಾಗಿ ಸೆಣಸಾಡಿದವು. ಮೊದಲ ಸೆಮಿ ಫೈನಲ್ ಪಂದ್ಯವು ಡೋಮಿನೇಟರ್ ಇಲೆವೆನ್ ಮಾರ್ಗೋಲ್ಲಿ ಹಾಗೂ ಶ್ರೀ ವಿನಾಯಕ ಮಕ್ಕಂದೂರು ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಡೋಮಿನೇಟರ್ ಇಲೆವೆನ್ ಮಾರ್ಗೋಲ್ಲಿ ತಂಡ 22 ರನ್ ಗಳ ಭರ್ಜರಿ ಜಯದೊಂದಿಗೆ ಫೈನಲ್ ಗೆ ಲಗ್ಗೆ ಇಟ್ಟಿತು. ದ್ವಿತೀಯ ಸೆಮಿ ಫೈನಲ್ ಪಂದ್ಯವು ಫ್ರೆಂಡ್ಸ್ ಇಲೆವೆನ್ ಉಡುಪಿ ಹಾಗೂ ಟೀಮ್ 18 ಚಿಕ್ಕಮಗಳೂರು ನಡುವೆ ನಡೆದ ಪಂದ್ಯದಲ್ಲಿ ಫ್ರೆಂಡ್ಸ್ ಇಲೆವೆನ್ ಉಡುಪಿ ತಂಡವು 19 ರನ್ ಗಳ ಜಯ ಸಾದಿಸಿ ಫೈನಲ್ ಗೆ…
ಸುಂಟಿಕೊಪ್ಪ ಮೇ 22 NEWS DESK : ಡಿ.ಶಿವಪ್ಪ ಸ್ಮಾರಕ 26ನೇ ವರ್ಷದ ರಾಜ್ಯ ಮಟ್ಟದ ಗೋಲ್ಡ್ ಕಪ್ ಫುಟ್ಬಾಲ್ ಟೂರ್ನಿಯ 5ನೇ ದಿನ ನಡೆದ ಪಂದ್ಯಾವಳಿಯಲ್ಲಿ ಟಿಡಿಎಲ್ ಎಫ್.ಸಿ.ಬೈಲುಕೊಪ್ಪ ಹಾಗೂ ಬೆಟ್ಟಗೇರಿ ಎಫ್.ಸಿ.ಸುಂಟಿಕೊಪ್ಪ ತಂಡಗಳು ಮುಂದಿನ ಸುತ್ತಿಗೆ ಅರ್ಹತೆ ಪಡೆಯಿತು. ಜಿಯಂಪಿ ಶಾಲಾ ಮೈದಾನದಲ್ಲಿ ಬ್ಲೂಬಾಯ್ಸ್ ಯೂತ್ ಕ್ಲಬ್ ವತಿಯಿಂದ 39ನೇ ವರ್ಷದ ಆಯೋಜಿಸಲಾಗಿರುವ ಪುಟ್ಬಾಲ್ ಮೊದಲನೇ ಪಂದ್ಯಾವಳಿಯು ಟಿಡಿಎಲ್ ಎಫ್.ಸಿ ಬೈಲುಕೊಪ್ಪ ಹಾಗೂ ವಿಜಯನಗರ ಮೈಸೂರು ತಂಡಗಳ ನಡುವೆ ನಡೆದು ಪಂದ್ಯಾವಳಿಯ ಮೊದಲಾರ್ಧದಲ್ಲಿ ಟಿಡಿಎಲ್ ಎಫ್.ಸಿ ಬೈಲುಕೊಪ್ಪ ತಂಡದ ಮುನ್ನಡೆ ಆಟಗಾರ ಸ್ಜಿಗ್ಮಾ 13ನೇ ತನ್ನಗೆ ದೊರೆತ ಉತ್ತಮ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಎದುರಾಳಿ ತಂಡಕ್ಕೆ 1 ಗೋಲು ಬಾರಿಸುವ ಮೂಲಕ ತಂಡಕ್ಕೆ ಮುನ್ನಡೆಯನ್ನು ಒದಗಿಸಿದರು. ದ್ವಿತೀಯಾರ್ಧದ 1ನೇ ನಿಮೀಷದಲ್ಲಿ ಟಿಡಿಎಲ್ ಎಫ್.ಸಿ ಬೈಲುಕೊಪ್ಪ ತಂಡದ ಚಂಗ್ಬಾ ಅವರು 1 ಗೋಲು ಬಾರಿಸುವ ಮೂಲಕ ತಂಡಕ್ಕೆ ಮತ್ತಷ್ಟು ಮುನ್ನಡೆಯನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು. ಎರಡು ತಂಡಗಳು ಬಿರುಸಿನ ಆಟವನ್ನು ಪ್ರದರ್ಶಿಸುವ ಮೂಲಕ…
ಮಡಿಕೇರಿ ಮೇ 22 NEWS DESK : ಕನ್ನಡದ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಬರೆದಿರುವ ಸಣ್ಣ ಕಥೆಗಳ ಸಂಗ್ರಹದ ‘ಹೃದಯ ದೀಪ’ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ‘ಹೃದಯ ದೀಪ’ದ ಅನುವಾದ ಕೃತಿ “ಹಾರ್ಟ್ ಲ್ಯಾಂಪ್’ ಗೆ ಅಂತರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ‘ಬುಕ್ಕರ್ ಪ್ರಶಸ್ತಿ’ ಲಭಿಸಿದ್ದು, ಇದರ ಅನುವಾದಕರು ಕೊಡಗು ಜಿಲ್ಲೆಯ ದೀಪಾ ಭಸ್ತಿ ಎನ್ನುವುದು ವಿಶೇಷ. ಬಾನು ಮುಷ್ತಾಕ್ ಅವರ ಕಥಾ ಸಂಕಲನ ‘ಹೃದಯ ದೀಪ’ವನ್ನು ದೀಪಾ ಭಸ್ತಿ ಅವರು ಸತತ 4 ತಿಂಗಳ ಪರಿಶ್ರಮದ ಮೂಲಕ ಇಂಗ್ಲೀಷ್ ಗೆ ಅನುವಾದ ಮಾಡಿದ್ದಾರೆ. ಮಡಿಕೇರಿ ನಗರದ ರೈಫಲ್ ರೇಂಜ್ ಬಡಾವಣೆಯಲ್ಲಿರುವ ತಮ್ಮ ಮನೆಯಲ್ಲೇ ಈ ಕಾರ್ಯ ಪೂರ್ಣಗೊಳಿಸಿದ್ದಾರೆ. ಬಾನು ಮುಷ್ಲಾಕ್ ಅವರೊಂದಿಗೆ ದೀಪ ಬಾಸ್ತಿ ಅವರು ಇಂಗ್ಲೆಂಡ್ನಲ್ಲಿ ಮಂಗಳವಾರ ತಡ ರಾತ್ರಿ ‘ಬುಕ್ಕರ್ ಪ್ರಶಸ್ತಿ’ಯನ್ನು ಸ್ವೀಕರಿಸಿದರು. ಪ್ರತಿಷ್ಠಿತ ಪ್ರಶಸ್ತಿ ಲಭಿಸಿದ ಕುರಿತು ಹರ್ಷ ವ್ಯಕ್ತಪಡಿಸಿದ ದೀಪಾ ಭಸ್ತಿ ಅವರ ತಂದೆ ಬಿ.ಎನ್.ಪ್ರಕಾಶ್ ತಮ್ಮ…
ಮಡಿಕೇರಿ ಮೇ.22 NEWS DESK : ಜಿಲ್ಲೆಯಲ್ಲಿ ಶುಂಠಿಯನ್ನು ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕುಗಳಲ್ಲಿ ಹೆಚ್ಚಾಗಿ ಬೆಳೆಯಲಾಗುತ್ತಿದ್ದು, ಈ ಸಂಬಂಧ ಕುಶಾಲನಗರ ಎಪಿಸಿಎಂಎಸ್ ಮತ್ತು ಸೋಮವಾರಪೇಟೆ ಎಪಿಸಿಎಂಎಸ್ ಇಲ್ಲಿ ಹಸಿಶುಂಠಿ ಖರೀದಿ ಕೇಂದ್ರ ಆರಂಭಿಸಲಾಗಿದೆ. ಪ್ರೂಟ್ಸ್ ಐಡಿ ಹೊಂದಿರುವ ರೈತರಿಂದ ಮಾತ್ರ ನೋಂದಣಿ ಮಾಡಿಸಿಕೊಂಡು ಗುಣಮಟ್ಟದ ಹಸಿಶುಂಠಿಯನ್ನು (ತೋಟಗಾರಿಕ ಪರಿಣಿತ ಅಧಿಕಾರಿಗಳಿಂದ ದೃಢೀಕರಿಸಿ) ಖರೀದಿ ಮಾಡಲಾಗುವುದು. ಪ್ರತಿ ಕ್ವಿಂಟಾಲ್ಗೆ ಎಫ್.ಎ.ಕ್ಯೂ ಗುಣಮಟ್ಟದ ಹಸಿಶುಂಠಿಗೆ ರೂ.2,445 ಮಾರುಕಟ್ಟೆ ಬೆಲೆಯನ್ನು ನಿಗದಿಪಡಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರಾದ ಹಂಪಣ್ಣ ತಿಳಿಸಿದ್ದಾರೆ.
ಮಡಿಕೇರಿ NEWS DESK ಮೇ.21 : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಸುಗಮ್ಯ ಯಾತ್ರಾ ಕಾರ್ಯಕ್ರಮದಡಿ ಎಲ್ಲಾ ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳು, ಉದ್ಯಾನವನಗಳು, ಗ್ರಂಥಾಲಯಗಳು, ಪ್ರವಾಸಿತಾಣಗಳಲ್ಲಿ ಅಡೆತಡೆ ರಹಿತ ವಾತಾವರಣ ಒಳಗೊಂಡಿರುವ ಮಾಹಿತಿಯನ್ನು ಕಲೆಹಾಕಿ ವಿಶೇಷ ಚೇತನ ಸ್ನೇಹಿ ವಾತಾವರಣ ಇರುವ ಬಗ್ಗೆ ಸೋಶಿಯಲ್ ಆಡಿಟ್ ಮಾಡಲು ಎಸ್ ಟು ಎಕ್ಸಸ್ ((Yes To Access) ಎಂಬ ಮೊಬೈಲ್ ಆ್ಯಪ್ನ್ನು ಅಭಿವೃದ್ಧಿ ಪಡಿಸಿದ್ದು ಜಿಲ್ಲೆಯಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಕಟ್ಟಡಗಳ ಸೋಶಿಯಲ್ ಆಡಿಟ್ ಮಾಡುವ ಸಂಬಂಧ ಇಂದು ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾಂಕೇತಿಕವಾಗಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಬುಧವಾರ ಚಾಲನೆ ನೀಡಿದರು. ಈ ಸಂದರ್ಭ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಡೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೆ.ಜಿ.ವಿಮಲ, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ಕಾರ್ಯಕ್ರಮ ವ್ಯವಸ್ಥಾಪಕರಾದ ಅಂಕಾಚಾರಿ ಹಾಗೂ ಕಚೇರಿ ಸಿಬ್ಬಂದಿಗಳು ಹಾಜರಿದ್ದರು.






