ಲೇಖಕ: admin

ಮಡಿಕೇರಿ NEWS DESK ಮೇ.21 : ಮುಂಗಾರು ಸಂದರ್ಭ ಮಡಿಕೇರಿ ನಗರದಲ್ಲಿ ಹೆಚ್ಚಿನ ಎಚ್ಚರ ವಹಿಸುವಂತೆ ಶಾಸಕರಾದ ಡಾ.ಮಂತರ್‌ಗೌಡ ಅವರು ಸಲಹೆ ನೀಡಿದ್ದಾರೆ. ನಗರದ ನಗರಸಭೆ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ನಗರದ ವಿವಿಧ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಸಂದರ್ಭದಲ್ಲಿ ಕಾಳಜಿ ವಹಿಸಬೇಕು. ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರ ವಹಿಸಬೇಕು ಎಂದರು. ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ರಾಜ ಕಾಲುವೆಯಲ್ಲಿ ಕಸ ಕಡ್ಡಿ ಸೇರದಂತೆ ಕಾಲ ಕಾಲಕ್ಕೆ ಸ್ವಚ್ಚಗೊಳಿಸಬೇಕು. ಸಹಾಯವಾಣಿ ಆರಂಭ ಹೀಗೆ ಮುಂಗಾರು ಸಂಬಂಧ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಂತಾಗಬೇಕು. ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ರಾಜಾಸೀಟು ಮತ್ತು ಜನರಲ್ ತಿಮ್ಮಯ್ಯ ಮುಖ್ಯರಸ್ತೆ ಅಭಿವೃದ್ಧಿ ಪಡಿಸಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಪಾದಚಾರಿ ದಾರಿ, ಚರಂಡಿ, ವಾಹನಗಳ ಪಾರ್ಕಿಂಗ್ ಹೀಗೆ ಎಲ್ಲವನ್ನೂ ಒಳಗೊಂಡ ರಸ್ತೆ ಅಭಿವೃದ್ಧಿ ಪಡಿಸಲು ಮುಂದಾಗಲಾಗಿದೆ ಎಂದು ಶಾಸಕರು ತಿಳಿಸಿದರು. ಫಾರ್ಮ್ ನಂ.3…

Read More

ಮಡಿಕೇರಿ NEWS DESK ಮೇ 21 : ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ‘ಇಂದಿರಾ ಕ್ಯಾಂಟೀನ್’ನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಬುಧವಾರ ಉದ್ಘಾಟಿಸಿದರು. ಸಾರ್ವಜನಿಕರಿಗೆ ಒಳಿತಾಗುವ ನಿಟ್ಟಿನಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ಆರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದು ಶಾಸಕರು ಸಲಹೆ ಮಾಡಿದರು. ಹಲವು ವರ್ಷಗಳಿಂದ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕಿತ್ತು. ಆದರೆ ಈಗ ಚಾಲನೆ ನೀಡಲಾಗಿದೆ ಎಂದರು. ನಗರಾಭಿವೃದ್ಧಿ ಮತ್ತು ಪೌರಾಡಳಿತ ಸಚಿವರು ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಅವಕಾಶ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಬೇಡಿಕೆಗೆ ತಕ್ಕಂತೆ ಆಸ್ಪತ್ರೆ ಆವರಣದಲ್ಲಿ ಆರಂಭಿಸಲಾಗಿದೆ ಎಂದು ಡಾ.ಮಂತರ್ ಗೌಡ ಅವರು ಹೇಳಿದರು. ಇಂದಿರಾ ಕ್ಯಾಂಟೀನ್‌ನಲ್ಲಿ ಸ್ವಚ್ಛತೆ ಹಾಗೂ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರವು ಸಹ ಉಪಾಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟಕ್ಕೆ ಹಣವನ್ನು ಭರಿಸಲಿದ್ದು, ಸಾರ್ವಜನಿಕರಿಗೆ ಒಳಿತಾಗುವ…

Read More

ಮಡಿಕೇರಿ ಮೇ 21 NEWS DESK : ಕಣಿವೆಯ ಪುರಾಣ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ದೇವಾಲಯದ ಆವರಣದಲ್ಲಿ ಲೋಕ ಕಲ್ಯಾಣದ ಹಿತದೃಷ್ಟಿಯಿಂದ ಶ್ರೀ ಶ್ರೀಕಾಂತಾನಂದ ಸರಸ್ವತಿ ಮಹಾರಾಜ್ ನೇತೃತ್ವದಲ್ಲಿ ಕೋಟಿಗೂ ಅಧಿಕ ರುದ್ರ ಜಪ ಪಾರಾಯಣ ಮಂಗಳವಾರ ರಾತ್ರಿಯಿಂದ ಬುಧವಾರ ಮಧ್ಯಾಹ್ನದವರೆಗೂ ಜರುಗಿತು. ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಋತ್ವಿಕರು ನಿರಂತರವಾಗಿ ಜಪ ಪಾರಾಯಣ ಮಾಡುವ ಮೂಲಕ ಭಕ್ತಿ ಭಾವ ಮೆರೆದರು. ಇದರ ಅಂಗವಾಗಿ ದೇವಾಲಯದಲ್ಲಿ ಶ್ರೀ ರಾಮಲಿಂಗೇಶ್ವರ ದೇವರಿಗೆ ಬಗೆ ಬಗೆಯ ಪುಷ್ಪಗಳಿಂದ ವಿಶೇಷವಾದ ಅಲಂಕಾರ ಹಾಗೂ ಪೂಜೆ ದೇಗುಲದ ಪ್ರಧಾನ ಅರ್ಚಕ ರಾಘವೇಂದ್ರ ಭಟ್ ನೆರವೇರಿಸಿದರು. ಬಳಿಕ ದೇವಾಲಯದ ಆವರಣದಲ್ಲಿ ದೇವತಾ ಸಮಿತಿ ಅಧ್ಯಕ್ಷ ಕೆ.ಎನ್.ಸುರೇಶ್ ಉಪಸ್ಥಿತಿಯಲ್ಲಿ ಚಂಡಿಕಾ ಹೋಮ ಜರುಗಿತು. ಈ ಸಂದರ್ಭ ಮಾತನಾಡಿದ ಶ್ರೀ ಕಾಂತಾರಾಜ ಮಹಾರಾಜ್, ದೇಶದಲ್ಲಿ ಹಾಗೂ ವಿಶ್ವದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಾನವರಲ್ಲಿ ಅಶಾಂತಿ, ಅತೃಪ್ತಿ, ಅಸಹನೆ ನಿರಂತರವಾಗಿದೆ. ಹಾಗಾಗಿ ಮನುಷ್ಯ ಮನುಷ್ಯರಲ್ಲಿ ದ್ವೇಷ, ಅಸೂಯೆ, ಮತ್ಸರಗಳು ನಡೆಯುತ್ತಿವೆ. ಹಾಗಾಗಿ ಮಾನವ ಕುಲ ಹಾಗೂ…

Read More

ಮಡಿಕೇರಿ ಮೇ 21 NEWS DESK : ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ಮೇ 23 ರಿಂದ 26ರ ವರೆಗೆ ಮಡಿಕೇರಿಯಲ್ಲಿ ಮಾವು ಮತ್ತು ಹಲಸು ಹಣ್ಣಿನ ಮೇಳ ನಡೆಯಲಿದೆ ಎಂದು ಕೊಡಗು ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕೊಡಗು ಜಿಲ್ಲಾ ಹಾಪ್‌ಕಾಮ್ಸ್ ನ ಮುಖ್ಯ ಕಚೇರಿಯ ಆವರಣದಲ್ಲಿ ಅತ್ಯಪರೂಪದ ವಿವಿಧ ಬಗೆಯ ಮಾವು ಮತ್ತು ಹಲಸಿನ ಹಣ್ಣಿನ ಮೇಳ ನಡೆಯಲಿದೆ. ಬೆಳೆಗಾರರಿಗೆ ತಾವು ಬೆಳೆದ ಹಣ್ಣುಗಳ ಮಾರಾಟಕ್ಕೆ ಅನುವು ಮಾಡಿಕೊಡುವ ಮತ್ತು ವಿವಿಧ ತಳಿಯ, ವಿಭಿನ್ನ ರುಚಿಯ ಮಾವು, ಹಲಸನ್ನು ಗ್ರಾಹಕರಿಗೆ ಪರಿಚಯಿಸುವ ಉದ್ದೇಶದಿಂದ ಮೇಳವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಮೇ 23 ರಂದು ಬೆಳಗ್ಗೆ 10.30 ಗಂಟೆಗೆ ನಡೆಯುವ ಮೇಳವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ಜಿ.ಪಂ…

Read More

ಮಡಿಕೇರಿ ಮೇ 21 NEWS DESK : ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕೊಡಗಿನ ದೇವರಪುರ ಗ್ರಾಮದಲ್ಲಿ ನಡೆದಿದೆ. ತೋಟದ ಕಾರ್ಮಿಕ ಅಣ್ಣಯ್ಯ (41) ಎಂಬುವವರೇ ಮೃತ ದುರ್ದೈವಿ. ತೋಟಕ್ಕೆ ಕೆಲಸಕ್ಕೆಂದು ತೆರಳುತ್ತಿದ್ದಾಗ ಎದುರಾದ ಕಾಡಾನೆ ದಾಳಿ ಮಾಡಿದೆ. ಕಿರಿದಾದ ರಸ್ತೆಯಲ್ಲಿ ಅಣ್ಣಯ್ಯ ಓಡಲು ಯತ್ನಿಸಿದರಾದರೂ ಕಾಡಾನೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ. ದೇವರಪುರ ಗ್ರಾಮದ ಅಯ್ಯಪ್ಪ ದೇವಾಲಯದಲ್ಲಿ ವಾರ್ಷಿಕ ಬೇಡು ಹಬ್ಬ ಆಚರಣೆಗೆ ತಯಾರಿ ನಡೆಸುತ್ತಿರುವಾಗಲೇ ಕಾಡಾನೆ ದಾಳಿಯಾಗಿದೆ. ಊರಿನಲ್ಲಿ ಹಬ್ಬದ ಸಂಭ್ರಮದ ಬದಲು ಅಣ್ಣಯ್ಯ ಅವರ ಸಾವಿನ ಶೋಕ ಮಡುಗಟ್ಟಿದೆ. ಸ್ವಲ್ಪ ಹೊತ್ತಿನವರೆಗೆ ಮೃತದೇಹವನ್ನು ತೆಗೆಯಲು ಕೂಡ ಕಾಡಾನೆ ಬಿಡಲಿಲ್ಲ ಎಂದು ತಿಳಿದು ಬಂದಿದೆ. ಗ್ರಾಮಸ್ಥರ ಸಹಕಾರದಿಂದ ಅರಣ್ಯ ಸಿಬ್ಬಂದಿಗಳು ಕಾಡಾನೆಯನ್ನು ಕಾಡಿಗಟ್ಟಿದ್ದು, ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. ಕಾಡಾನೆ ಹಾವಳಿ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ಗ್ರಾಮಸ್ಥರು ಒತ್ತಾಯಿಸಿದರು.

Read More

ಮಡಿಕೇರಿ ಮೇ 20 NEWS DESK : ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ‘ಇಂದಿರಾ ಕ್ಯಾಂಟೀನ್’ನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು ಸಾರ್ವಜನಿಕರಿಗೆ ಒಳಿತಾಗುವ ನಿಟ್ಟಿನಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ಆರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು. ಹಲವು ವರ್ಷಗಳಿಂದ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕಿತ್ತು. ಆದರೆ ಈಗ ಚಾಲನೆ ನೀಡಲಾಗಿದೆ ಎಂದರು. ನಗರಾಭಿವೃದ್ಧಿ ಮತ್ತು ಪೌರಾಡಳಿತ ಸಚಿವರು ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಅವಕಾಶ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಬೇಡಿಕೆಗೆ ತಕ್ಕಂತೆ ಆಸ್ಪತ್ರೆ ಆವರಣದಲ್ಲಿ ಆರಂಭಿಸಲಾಗಿದೆ ಎಂದು ಅವರು ಹೇಳಿದರು. ಇಂದಿರಾ ಕ್ಯಾಂಟೀನ್‍ನಲ್ಲಿ ಸ್ವಚ್ಛತೆ ಹಾಗೂ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರವು ಸಹ ಉಪಾಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟಕ್ಕೆ ಹಣವನ್ನು ಭರಿಸಲಿದ್ದು, ಸಾರ್ವಜನಿಕರಿಗೆ ಒಳಿತಾಗುವ ನಿಟ್ಟಿನಲ್ಲಿ…

Read More

ಬೆಂಗಳೂರು ಮೇ 21 NEWS DEK : ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು. ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು.  3695 ಆನೆಗಳು ನಮ್ಮಲ್ಲಿವೆ ಎಂದರು. ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ ಎಂದು ಹೇಳಿದರು.

Read More

ಮಡಿಕೇರಿ ಮೇ 20 NEWS DESK :  ಪೊನ್ನಂಪೇಟೆ ತಾಲ್ಲೂಕು ದೇವರಪುರ ಗ್ರಾಮ ಪಂಚಾಯ್ತಿಗೆ ಸೇರಿರುವ ದೇವರಪುರ ಗ್ರಾಮದಲ್ಲಿ ಸ್ಥಳೀಯರು ಅಯ್ಯಪ್ಪ ಮತ್ತು ಭದ್ರಕಾಳಿ ಹೆಸರಿನಲ್ಲಿ ಕುಂಡೆ-ಬೇಡು (ಕುದುರೆ ಹಬ್ಬ) ಹಬ್ಬವನ್ನು ಹಲವಾರು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದ್ದು ಅದರಂತೆ ಈ ವರ್ಷ ಇಂದು (21) ಮತ್ತು 22 ರಂದು ನಡೆಯಲಿದ್ದು,  ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲೋಕಿನ ತಿತಿಮತಿ, ದೇವರಪುರ, ಪಾಲಿಬೆಟ್ಟ, ಸಿದ್ದಾಪುರ, ಗೋಣಿಕೊಪ್ಪ, ಕಾನೂರು, ಪೊನ್ನಂಪೇಟೆ, ಬಾಳೆಲೆ, ಕುಟ್ಟ ಗ್ರಾಮ ಪಂಚಾಯ್ತಿಗಳಿಗೆ ಒಳಪಡುವ ಪ್ರದೇಶಗಳಲ್ಲಿ ವಾಸಿಸುವ ಜೇನು ಕುರುಬ, ಕಾಡು ಕುರುಬ, ಬೆಟ್ಟ ಕುರುಬ ಮತ್ತು ಎರವ ಹಾಗೂ ಇತರೆ ಜನಾಂಗದ ಪುರುಷರು 5-6 ಜನರ ಗುಂಪು ಸೇರಿಕೊಂಡು ಕೈಗಳಲ್ಲಿ ಸಾಂಪ್ರದಾಯಿಕ ವಸ್ತುಗಳನ್ನು ಮತ್ತು ಇತರೇ ವಸ್ತುಗಳನ್ನು ಹಿಡಿದುಕೊಂಡು ಕುಣಿಯುತ್ತಾ ಹಬ್ಬ ಆಚರಿಸುವ ಪರಿಪಾಠವಿರುತ್ತದೆ. ಈ ಹಬ್ಬದ ಸಂದರ್ಭವನ್ನು ಕೆಲವರು ದುರುಪಯೋಗಪಡಿಸಿಕೊಂಡು ಮಧ್ಯಪಾನ ಮಾಡಿಕೊಂಡು ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರನ್ನು ಅವಾಚ್ಯ ಶಬ್ದಗಳಿಂದ ಬೈದು, ವಾಹನಗಳನ್ನು ಬಲವಂತವಾಗಿ ಅಡ್ಡಗಟ್ಟಿ ಸಾರ್ವಜನಿಕರಿಂದ ಬಲವಂತವಾಗಿ ದೇವರ…

Read More

ಮಡಿಕೇರಿ ಮೇ 21 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ‘ಮನೆಯಂಗಳದಲ್ಲಿ ಹಿರಿಯ ಪತ್ರಕರ್ತರಿಗೆ ಮನದುಂಬಿದ ನಮನ’ ಕಾರ್ಯಕ್ರಮದಡಿ ಮೂವರು ಹಿರಿಯ ಪತ್ರಕರ್ತರನ್ನು ಗುರುತಿಸಿ ಸನ್ಮಾನಿಸಲಾಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶನದಂತೆ ಹಿರಿಯ ಪತ್ರಕರ್ತ ವಿ.ಪಿ.ಸುರೇಶ್ ಅವರನ್ನು ಚಿತ್ತಾರ ವಾಹಿನಿ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಹಿರಿಯ ಪತ್ರಿಕೋದ್ಯಮಿ, ‘ಶಕ್ತಿ’ ಪ್ರಧಾನ ಸಂಪಾದಕರಾದ ಜಿ.ರಾಜೇಂದ್ರ ಅವರನ್ನು `ಶಕ್ತಿ’ ಕಚೇರಿಯಲ್ಲಿ ಮತ್ತು ಇನ್ನೋರ್ವ ಹಿರಿಯ ಪತ್ರಕರ್ತ ಬೈ. ಪ್ರಕಾಶ್ ಅವರನ್ನು, ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಸುಮಾರು 50 ವರ್ಷಗಳಿಗೂ ಹೆಚ್ಚು ಕಾಲ ಸ್ಥಳೀಯ ಪತ್ರಿಕೆಗಳ ವರದಿಗಾರರಾಗಿ, `ಪರಾಕ್ರಮ’ ಸಂಜೆ ದೈನಿಕದ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದ ವಿ.ಪಿ.ಸುರೇಶ್, ಪ್ರಸ್ತುತ ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದಾರೆ. ಸನ್ಮಾನಕ್ಕೂ ಮುನ್ನ ಸುರೇಶ್, ಪತ್ರಿಕೋದ್ಯಮದ ತಮ್ಮ ಅನುಭವಗಳು ಹಾಗೂ ಏಳುಬೀಳುಗಳನ್ನು ಹಂಚಿಕೊಂಡರು. `ಶಕ್ತಿ’ ಪ್ರಧಾನ ಸಂಪಾದಕರಾದ ಜಿ ರಾಜೇಂದ್ರ, ತಮ್ಮ ತಂದೆಯಿಂದ ಬಳುವಳಿಯಾಗಿ ಬಂದ ಪತ್ರಿಕೋದ್ಯಮದಲ್ಲಿ ಕಳೆದ 60ಕ್ಕೂ ಹೆಚ್ಚು ವರ್ಷ ಪತ್ರಿಕೆಯನ್ನು ಮುನ್ನಡೆಸಿದ ಅನುಭವನ್ನು…

Read More

ಮಡಿಕೇರಿ ಮೇ 21 NEWS DESK :  ಶಿವಮೊಗ್ಗದಲ್ಲಿ ಮೂರು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗಮಂಡಲದ ಮಿಲನ ಭರತ್ ಭರತನಾಟ್ಯ, ಕೂಚುಪುಡಿ ಮತ್ತು ಒಡಿಸ್ಸಿ ನೃತ್ಯ ಪ್ರಕಾರಗಳಲ್ಲಿ  ಸ್ಪರ್ಧಿಸಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ಗುರು ವಿದ್ವಾನ್ ರಾಜೇಶ್ ಆಚಾರ್ಯ ಅವರ ಮಾರ್ಗದರ್ಶನದಲ್ಲಿ ನೃತ್ಯಭ್ಯಾಸ ಮಾಡಿದ್ದು, ವಸ್ತ್ರ ವಿನ್ಯಾಸವನ್ನು ವಿದುಷಿ ಕಾವ್ಯಶ್ರೀ ಕಪಿಲ್ ಮಾಡಿದ್ದಾರೆ.

Read More