ಸೋಮವಾರಪೇಟೆ ಜೂ.23 NEWS DESK : ಭಾರತೀಯ ಪುರಾತನ ಪದ್ಧತಿಗಳಲ್ಲಿ ಯೋಗಕ್ಕೆ ವಿಶೇಷ ಸ್ಥಾನಮಾನವಿದೆ. ಯೋಗವನ್ನು ಇಂದು ವಿದೇಶೀಗರು ಹೆಚ್ಚು ಅಭ್ಯಾಸ ಮಾಡುತ್ತಿದ್ದಾರೆ. ಆದರೆ ಭಾರತೀಯರು ಮಹತ್ವ ಅರಿಯುವಲ್ಲಿ ವಿಫಲರಾಗುತ್ತಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಅಭಿಪ್ರಾಯಿಸಿದರು. ಶ್ರೀ ರವಿಶಂಕರ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ಸೋಮವಾರಪೇಟೆ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯೋಗವು ಮನಸ್ಸು, ದೇಹ, ಉಸಿರಿನ ಹೊಂದಾಣಿಕೆಯಾಗಿದೆ. ಇದರ ಅಭ್ಯಾಸದಿಂದ ಜೀವನ ಸುಗಮವಾಗುತ್ತದೆ ಎಂದು ಅಭಿಪ್ರಾಯಿಸಿದರು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶಿಕ್ಷಕಿ ರಾಗಿಣಿ ಪ್ರಾಣಾಯಾಮದ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯಿಂದ ಪ್ರತಿನಿತ್ಯ ಯೋಗಾಭ್ಯಾಸ, ಆನಂದೋತ್ಸವ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಶಾಲಾ ಕಾಲೇಜುಗಳಲ್ಲಿ ಯೋಗದ ಮಹತ್ವದ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಹಾನಗಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಯಶಾಂತ್ ಕುಮಾರ್, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯೆ…
ಲೇಖಕ: admin
ಸೋಮವಾರಪೇಟೆ ಜೂ.23 NEWS DESK : ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ವತಿಯಿಂದ ಉದ್ಯಮಿ ಹಾಗೂ ದಾನಿಗಳಾದ ಹರಪಳ್ಳಿ ರವೀಂದ್ರ ಹುಟ್ಟು ಹಬ್ಬದ ಅಂಗವಾಗಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ಸಂಘದ ಅಧ್ಯಕ್ಷ ಹೆಚ್.ಎ.ನಾಗರಾಜ್, ರವೀಂದ್ರ, ಹೆಚ್.ಬಿ.ರಾಜಪ್ಪ, ಒಕ್ಕಲಿಗರ ಯುವವೇದಿಕೆ ಅಧ್ಯಕ್ಷ ಕೆ.ಬಿ.ಸುರೇಶ್ ಇದ್ದರು.
ಮಡಿಕೇರಿ NEWS DESK ಜೂ.23 : ಕೊಡಗು ಜಿಲ್ಲೆಯಾದ್ಯಂತ ಆರ್ದ್ರಾ ಮಳೆ ಉತ್ತಮವಾಗಿ ಸುರಿಯುತ್ತಿದೆ. ವಿವಿಧೆಡೆ ಗಾಳಿ ಸಹಿತ ಸಾಧಾರಣ ಮಳೆಯಾಗುತ್ತಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ ಕಳೆದ 24 ಗಂಟೆಗಳಲ್ಲಿ 4 ಇಂಚು ಮಳೆ ಸುರಿದಿದೆ. ಮಡಿಕೇರಿ ಸಮೀಪ ಕಗ್ಗೋಡ್ಲುವಿನಲ್ಲಿ ಮುಖ್ಯ ರಸ್ತೆಗೆ ಮರ ಬಿದ್ದು ಕೆಲಕಾಲ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇದೀಗ ಮರವನ್ನು ತೆರವುಗೊಳಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಗಾಳಿ ಮಳೆಯಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಮುಂದಿನ ದಿನಗಳಲ್ಲಿ ಮಳೆ ಬಿರುಸು ಪಡೆದುಕೊಳ್ಳುವ ಸಾಧ್ಯತೆಗಳಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಕಳೆದ 24 ಗಂಟೆಗಳಲ್ಲಿ 5 ಇಂಚು ಮಳೆಯಾಗಿದೆ. ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡAತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 68.54 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.55 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1142.47 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 529.05 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ…
ಸೋಮವಾರಪೇಟೆ ಜೂ.23 NEWS DESK : ಮಂಡಲ ಬಿಜೆಪಿ ವತಿಯಿಂದ ಕೊಡವ ಸಮಾಜದಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗಶಿಕ್ಷಕರಾದ ದೊಡ್ಡಮಳ್ತೆ ಪ್ರದೀಪ್ ಯೋಗದ ಮಹತ್ವದ ಬಗ್ಗೆ ತಿಳಿಸಿದರು. ಮಾಜಿ ಶಾಸಕ ಅಪ್ಪಚ್ಚು ರಂಜನ್, ಎಸ್.ಜಿ.ಮೇದಪ್ಪ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮನುಕುಮಾರ್ ರೈ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ತಾಲ್ಲೂಕು ಅಧ್ಯಕ್ಷ ಮೋಹಿತ್, ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತಾ ವಿರುಪಾಕ್ಷ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಮಲ್ಲಜ್ಜಿರ ಪ್ರವೀಣ್, ಎಸ್ಸಿ ಮೋರ್ಚಾ ತಾಲ್ಲೂಕು ಕಾರ್ಯದರ್ಶಿ ಪ್ರವೀಣ್ ಮತ್ತು ಪಕ್ಷದ ಕಾರ್ಯಕರ್ತರು ಯೋಗ ಮಾಡಿದರು.
ಸೋಮವಾರಪೇಟೆ ಜೂ.23 NEWS DESK : ನಿರಂತರ ಯೋಗಕೇಂದ್ರ ಹಾಗೂ ಆಯುರ್ವೇದ ಆಸ್ಪತ್ರೆ ವತಿಯಿಂದ ಮಾನಸ ಹಾಲ್ನಲ್ಲಿ ಅಂತರರಾಷ್ಟ್ರೀಯ ಯೋಗದಿನವನ್ನು ಆಚರಿಸಲಾಯಿತು. ಯೋಗಶಿಕ್ಷಕ ಕಿಬ್ಬೆಟ್ಟ ಗಣೇಶ್, ಆಸ್ಪತ್ರೆಯ ವೈದ್ಯಾಧಿಕಾರಿ ಶ್ವೇತ ಇದ್ದರು. ಸಾರ್ವಜನಿಕರು ಯೋಗಾಭ್ಯಾಸ ಮಾಡಿದರು.
ಗೋಣಿಕೊಪ್ಪ ಜೂ.23 NEWS DESK : ಅಂತಾರಾಷ್ಟ್ರೀಯ 11ನೇ ಯೋಗ ದಿನಾಚರಣೆಯನ್ನು ಚೆಟ್ಟಿಮಾನಿ, ಕುಂದಚೇರಿ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಆಚರಿಸಲಾಯಿತು. ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸಿ ಯೋಗದಿನಾಚರಣೆಯನ್ನು ಶಕ್ತಿ ಕೇಂದ್ರದ ಪ್ರಮುಖ್ ಶರತ್ ಪದಕಲ್ಲು ನೇತೃತ್ವದಲ್ಲಿ ಆಚರಿಸಲಾಯಿತು. ಯೋಗ ಗುರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕುದುಪಜೆ ಶಿವಕುಮಾರ್, ಪಂಚಾಯಿತಿ ಅಧ್ಯಕ್ಷ ದಿನೇಶ್ ಪೊಡನೊಳನ, ಯುವ ನಾಯಕ ತೇಜಸ್ (ಚಿಕ್ಕಿ), ಯುವ ಮುರ್ಚಾ ಅಧ್ಯಕ್ಷ ಪರಶುದರ, ಯೋಗಪಟು ಜಿತಿಕ ಕಿರಣ್, ಪದಕಲ್ಲು ಬೂತ್ ಅಧ್ಯಕ್ಷ ಪುರುಷೋತ್ತಮ(ಪುಂಡು), ಕುಂದಚೇರಿ ಬೂತ್ ಅಧ್ಯಕ್ಷ ಸುರೇಶ, ಸಿಂಗತೂರ್ ಬೂತ್ ಕಾರ್ಯದರ್ಶಿ ಸುಬ್ರಮಣಿ ಪಪ್ಪು, ಪದಕಲ್ಲು ಬೂತ್ ಕಾರ್ಯದರ್ಶಿ ಚಿದು ಅಮೆ, ಕುಂದಚೇರಿ ವಿ.ಎಸ್.ಎಸ್.ಎನ್ ನಿರ್ದೇಶಕ ಕೇದಂಬಾಡಿ ಜಯ ಪ್ರಕಾಶ್ ಮತ್ತು ಕಾರ್ಯಕರ್ತರು ಹಾಜರಿದ್ದರು.
ಚೆಟ್ಟಳ್ಳಿ ಜೂ.23 NEWS DESK : ರೈತರು ಬೆಳೆದ ವಿವಿಧ ಬಗೆಯ ಬೆಣ್ಣೆಹಣ್ಣುಗಳು ಹಾಗೂ ವಿವಿಧ ರೀತಿಯ ಖಾದ್ಯಗಳ ಪ್ರದರ್ಶನವು ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ಅಯೋಜಿಸಿದ ಬೆಣ್ಣೆ ಹಣ್ಣಿನ(ಬಟರ್ ಫ್ರೂಟ್) ವೈವಿಧ್ಯತೆಯ ಮೇಳ, ಕ್ಷೇತ್ರೋತ್ಸವ ಮತ್ತು ಪಾಲುದಾರರ ಸಭೆಯಲ್ಲಿ ಕೃಷಿಕರ ಗಮನ ಸೆಳೆದವು. ವಿದೇಶಿ ಹಣ್ಣಿನ ತಳಿಗಳಾದ ಫೀರೈಟೆ, ಪಿಂಕ್ ಕರ್ಟನ್, ಕ್ಯಾರ್ಮೆನ್ ಹ್ಯಾಸ್, ಡಿಗಾನಿಯಾ, ದೇಶೀಯ 78 ವಿಧದ ಹಣ್ಣುಗಳು ಹಾಗು ಕೇಂದ್ರದ ಸಂಶೋದಿತ ತಳಿಗಳಾದ ಅರ್ಕಾ ಸುಪ್ರೀಮ್, ಅರ್ಕಾ ಕೂರ್ಗ್ ರವಿ ಹಾಗೂ ಟಿಕೆಡಿ ಪ್ರದರ್ಶನಗೊಂಡರೆ ಮಹಿಳೆಯರು ತಯಾರಿಸಿದ ಬೆಣ್ಣೆ ಹಣ್ಣಿನ ಸೂಫ್ಲೆ, ಕೇಕ್, ಇಡ್ಲಿ, ಕಾಫಿ, ಸ್ಯಾಂಡ್ವಿಚ್, ಚಟ್ನಿ, ಬ್ರೆಡ್ ಸ್ಪೆಡ್,ಸ್ಟಾಟರ್ ಹೀಗೆ ಹಲವು ಬಗೆಯ ಖಾದ್ಯಗಳು ಪ್ರದರ್ಶನಗೊಂಡವು. ಪೊನ್ನಂಪೇಟೆಯ ಸಿಇಟಿ ಕಾಲೇಜಿನ ನಿರ್ದೇಶಕರು ಹಾಗೂ ಪ್ರಗತಿಪರ ಬೆಳೆಗಾರರಾದ ಕುಪ್ಪಂಡ ಎ.ಚಿಣ್ಣಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೊಡಗಿನವರು ಕಾಫಿ ಹಾಗೂ ಕರಿಮೆಣಸು ಬೆಳೆಯನ್ನು ಆದಾಯದ ಮೂಲವಾಗಿ ರೂಪಿಸಿ ಕೊಂಡಿದ್ದರು. ಆದರೆ ಕೊಡಗಿನ ಕಿತ್ತಳೆಗೆ ಹೆಚ್ಚಿನ…
ಮಡಿಕೇರಿ NEWS DESK ಜೂ.22 : ಮೈಸೂರಿನಿಂದ ಮಡಿಕೇರಿಗೆ ವಿವಾಹ ಮಾತುಕತೆಗಾಗಿ ತೆರಳುತ್ತಿದ್ದ ಮಿನಿ ಬಸ್ ಪಲ್ಟಿಯಾದ ಘಟನೆ ಹುಣಸೂರು-ಮಡಿಕೇರಿ ಹೆದ್ದಾರಿಯ ಕಲ್ಬೆಟ್ಟ ಜಂಕ್ಷನ್ನಲ್ಲಿ ಭಾನುವಾರ ನಡೆದಿದೆ. ಮಿನಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಮಿನಿ ಬಸ್ ಉರುಳಿ ಬಿದ್ದಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. 17 ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಮೈಸೂರಿನಿಂದ ಮಡಿಕೇರಿಗೆ ವಿವಾಹ ವಿಚಾರದ ಮಾತುಕತೆಗಾಗಿ ಸುಮಾರು 25 ಮಂದಿ ಇದ್ದ ಮಿನಿ ಬಸ್ ತೆರಳುತ್ತಿತ್ತು. ಈ ವೇಳೆ ಕಲ್ ಬೆಟ್ಟ ಜಂಕ್ಷನ್ ಬಳಿ ವಿರಾಜಪೇಟೆ ರಸ್ತೆ ಕಡೆಯಿಂದ ಬಂದ ಲಾರಿ ಮತ್ತು ಮಿನಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಬಸ್ ಉರುಳಿ ಬಿದ್ದಿದೆ. ಈ ನಡುವೆ ಪಿರಿಯಾಪಟ್ಟಣ ಕಡೆಯಿಂದ ಬರುತ್ತಿದ್ದ ಸುಳ್ಯ ಮೂಲದ ಕಾರು ಕೂಡ ಲಾರಿಗೆ ಡಿಕ್ಕಿಯಾಗಿದೆ. ಕಾರು ಜಖಂಗೊಂಡಿದ್ದು, ಕಾರ್ ಏರ್ ಬ್ಯಾಗ್ ಇದ್ದ ಕಾರಣ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕ ಮಂಜು, ಮೈಸೂರಿನ ಉಮೇಶ್, ರಂಜಿತಾ, ರೂಪಾ, ಜ್ಯೋತಿ,…
ಸುಂಟಿಕೊಪ್ಪ NEWS DESK ಜೂ.22 : ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಮ್ಮೆಗುಂಡಿ ತೋಟಕ್ಕೆ ಕಾಡಾನೆಗಳ ಹಿಂಡು ದಾಳಿ ಮಾಡಿದ್ದು, ಅಪಾರ ಬೆಳೆ ನಷ್ಟವಾಗಿದೆ. ಕಾಡಾನೆಗಳು ತೋಟಗಳಲ್ಲೇ ಬೀಡುಬಿಟ್ಟಿದ್ದು, ಕಾಫಿ, ಬಾಳೆ ಗಿಡ, ಕರಿಮೆಣಸು ಬಳ್ಳಿಗಳನ್ನು ನಾಶಪಡಿಸಿವೆ. ಎಮ್ಮೆಗುಂಡಿ ಗ್ರಾಮದ ಲೈನ್ ಮನೆ ಸಮೀಪ ಬೆಳೆದಿದ್ದ ಬಾಳೆ ಗಿಡಗಳನ್ನು ಕೂಡ ಧ್ವಂಸಗೊಳಿಸಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಸುತ್ತಮುತ್ತಲಿನ ತೋಟಗಳಲ್ಲಿ ಹಗಲು ವೇಳೆಯಲ್ಲಿಯೇ ಆನೆಗಳು ಕಂಡುಬರುತ್ತಿದ್ದು, ಕಾರ್ಮಿಕರು ಕೆಲಸ ಮಾಡಲು ಹಿಂಜರಿಯುತ್ತಿದ್ದಾರೆ. ಸುಂಟಿಕೊಪ್ಪದಿಂದ ಎಮ್ಮೆಗುಂಡಿ, ನಾಕೂರು ಶಿರಂಗಾಲ, ಮಳೂರು, ಕಾನ್ ಬೈಲ್, ಅಂದಗೋವೆ ಗ್ರಾಮಗಳ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನಗಳ ಸವಾರರು ಕೂಡ ಭಯದಿಂದ ಮುಂದೆ ಸಾಗಬೇಕಾಗಿದೆ. ವಿದ್ಯಾರ್ಥಿಗಳು ಕೂಡ ಆತಂಕವನ್ನು ಎದುರಿಸುತ್ತಿದ್ದಾರೆ. ಅರಣ್ಯ ಇಲಾಖೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕುಶಾಲನಗರ NEWS DESK ಜೂ. 22 : ಸಿಕಲ್ ಸೆಲ್ ( ಕುಡುಗೋಲು ) ಅನುವಂಶೀಯ ಕಾಯಿಲೆಯಾಗಿದ್ದು, ಆರಂಭಿಕ ಹಂತದಲ್ಲೇ ಇದನ್ನು ಪತ್ತೆ ಹಚ್ಚುವ ಹಾಗೂ ಸರಿಯಾದ ಚಿಕಿತ್ಸೆ ಪಡೆಯುವ ಮೂಲಕ ಜೀವವನ್ನು ಉಳಿಸಬಹುದು ಹಾಗೂ ರೋಗಿಗಳ ಆರೋಗ್ಯ ಸ್ಥಿತಿಯನ್ನು ಸುಧಾರಿಸಬಹುದು ಎಂದು ಕುಶಾಲನಗರ ತಾಲ್ಲೂಕು ಆರೋಗ್ಯಾಧಿಕಾರಿ ಡಾ ಇಂದೂಧರ್ ಹೇಳಿದರು. ಕುಶಾಲನಗರ ತಾಲ್ಲೂಕು ಆರೋಗ್ಯ ಇಲಾಖೆಯ ವತಿಯಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ “ಪಿಎಂ ಜನ್ ಮನ್ ಕಾರ್ಯಕ್ರಮ: 2025 ರಡಿ ತಾಲ್ಲೂಕಿನ ನಂಜರಾಯಪಟ್ಟಣದ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ “ವಿಶ್ವ ಸಿಕಲ್ ಸೆಲ್(ಕುಡುಗೋಲು) ದಿನಾಚರಣೆ” ನಡೆಯಿತು. ಸಿಕಲ್ ಸೆಲ್ ಕಾಯಿಲೆ ಕುರಿತು ಆಯೋಜಿಸಿದ್ದ ಆರೋಗ್ಯ ಜನಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಆದಿವಾಸಿ ಸಮುದಾಯದವರಲ್ಲಿ ಹೆಚ್ಚಾಗಿ ಕಂಡು ಬರುವ ಸಿಕಲ್ ಸೆಲ್ (ಕುಡುಗೋಲು) ಕಾಯಿಲೆಯನ್ನು 2047ರೊಳಗೆ ನಿರ್ಮೂಲನೆ ಮಾಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಈ ಕಾಯಿಲೆಯ ನಿರ್ಮೂಲನೆಗೆ ಹೆಚ್ಚಿನ ಜಾಗೃತಿ ಅಗತ್ಯ ಎಂದರು. ಸಿಕಲ್ ಸೆಲ್ ಕಾಯಿಲೆಯು ಆದಿವಾಸಿಗಳಲ್ಲಿ ಕಂಡು…






