ಲೇಖಕ: admin

ಮಡಿಕೇರಿ NEWS DESK ಮೇ 21 : ವಿದ್ಯುತ್ ಮಾರ್ಗದ ದುರಸ್ತಿ ಮತ್ತು ನಿರ್ವಹಣೆಯ ನೆಪದಲ್ಲಿ ಅನಿಯಮಿತ ವಿದ್ಯುತ್ ಕಡಿತಗೊಳಿಸುತ್ತಿರುವ ಕ್ರಮವನ್ನು ವಿರೋಧಿಸಿ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಎಚ್ಚರಿಕೆ ನೀಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಚೇಂಬರ್ ಆಫ್ ಕಾಮರ್ಸ್ನ ನಗರಾಧ್ಯಕ್ಷ ಸಂತೋಷ್ ಅನ್ವೇಕರ್ ಅವರು ಕಳೆದ ನಾಲ್ಕೆöÊದು ದಿನಗಳಿಂದ ಯಾವುದೇ ಮಾಹಿತಿ ನೀಡದೆ ಗಂಟೆಗಟ್ಟಲೆ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಇದರಿಂದ ವರ್ತಕರಿಗೆ ಭಾರೀ ನಷ್ಟವಾಗುತ್ತಿದೆ ಮತ್ತು ಸಾರ್ವಜನಿಕರ ಕೆಲಸ, ಕಾರ್ಯಗಳಿಗೆ ತೊಂದರೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿದ್ಯುತ್ ಮಾರ್ಗದ ದುರಸ್ತಿ ಮತ್ತು ನಿರ್ವಹಣೆಯ ಕಾರಣ ನೀಡಿ ವ್ಯಾಪಾರದ ಸಂದರ್ಭದಲ್ಲೇ ವಿದ್ಯುತ್ ಕಡಿತ ಮಾಡಲಾಗುತ್ತಿದ್ದು, ವ್ಯಾಪಾರಸ್ಥರು ಕಷ್ಟ, ನಷ್ಟ ಅನುಭವಿಸುತ್ತಿದ್ದಾರೆ. ಸಮಸ್ಯೆಯನ್ನು ಶೀಘ್ರ ಬಗೆಹರಿಸಿ ಅನಿಯಮಿತ ವಿದ್ಯುತ್ ಕಡಿತಕ್ಕೆ ಕಡಿವಾಣ ಹಾಕದಿದ್ದಲ್ಲಿ ಚೇಂಬರ್ ಆಫ್ ಕಾಮರ್ಸ್ ನೇತೃತ್ವದಲ್ಲಿ ಸಮಸ್ತ ವರ್ತಕರು ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Read More

ಲಂಡನ್ ಮೇ 21 NEWS DESK : ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ. ಬೂಕರ್ ಪ್ರಶಸ್ತಿ 50 ಸಾವಿರ ಪೌಂಡ್‌ (ಅಂದಾಜು 57.28 ಲಕ್ಷ ರೂ.) ಒಳಗೊಂಡಿದೆ. ಇದೇ ಅನುವಾದಿತ ಕೃತಿಗೆ ‘ಪೆನ್ ಟ್ರಾನ್ಸ್‌ಲೇಟ್ಸ್’ ಪ್ರಶಸ್ತಿಯೂ ಸಿಕ್ಕಿತ್ತು. 1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕನ್ನು ಆಧಾರಿಸಿ ಈ ಕತೆಯನ್ನು ಬರೆಯಲಾಗಿತ್ತು. ಮೇ 21ರಂದು ಲಂಡನ್‌ನಲ್ಲಿ ಟೇಟ್ ಮಾಡರ್ನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಪ್ರಶಸ್ತಿಯನ್ನು ಘೋಷಿಸಲಾಯಿತು. ಸಿಎಂ ಸಿದ್ದರಾಮಯ್ಯ ಅಭಿನಂದನೆ :: …

Read More

ಮಡಿಕೇರಿ ಮೇ 20 NEWS DESK  : ಮಡಿಕೇರಿ ತಾಲ್ಲೂಕಿನ ತ್ರೈಮಾಸಿಕ ಕೆಡಿಪಿ ಸಭೆಯು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಮೇ 23 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

Read More

ಮಡಿಕೇರಿ ಮೇ 21 NEWS DESK : ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‍ಸಿ) ಮೂಲಕ ಜರುಗುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕೊಡಗಿನ ಯುವಕ ಮೂವೆರ ಲೋಚನ್ ಬೋಪಣ್ಣ ಇಂಡಿಯನ್ ಫಾರೆಸ್ಟ್ ಸರ್ವೀಸ್ (ಐಎಫ್‍ಎಸ್)ನಲ್ಲಿ ರಾಷ್ಟ್ರಮಟ್ಟದಲ್ಲಿ 69ನೇಯ ರ‍್ಯಾಂಕ್ ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ತೋರಿದ್ದಾರೆ. ಇವರು ಈ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಎರಡನೇ ಪ್ರಯತ್ನದಲ್ಲಿ ಯಶಸ್ಸು ಕಂಡಿದ್ದಾರೆ. ಲೋಚನ್ ಬೋಪಣ್ಣ ಮೂಲತಃ ಪೇರೂರು ಬಲ್ಲಮಾವಟಿಯ ನಿವಾಸಿ ಮಡಿಕೇರಿ ದೇಚೂರುವಿನಲ್ಲಿ ನೆಲೆಸಿರುವ ಮೂವೇರ ಸುರೇಶ್ ಹಾಗೂ ಅನು ದೇಚಮ್ಮ (ತಾಮನೆ ಅರಮಣಮಾಡ) ದಂಪತಿಯ ಪುತ್ರ. ಈ ಹಿಂದೆ ಮಡಿಕೇರಿ ಕಾನ್ವೆಂಟ್, ಕೇಂದ್ರೀಯ ವಿದ್ಯಾಲಯ, ಕೊಡಗು ವಿದ್ಯಾಲಯದಲ್ಲಿ ಆರಂಭಿಕ ಶಿಕ್ಷಣ ಪೂರೈಸಿದ್ದ ಲೋಚನ್ 8ನೇ ತರಗತಿಯಿಂದ ಪಿಯುಸಿಯನ್ನು ಮೈಸೂರಿನ ರಾಮಕೃಷ್ಣ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ್ದರು. ನಂತರ ಬಿಎಸ್‍ಸಿ ಅಗ್ರಿಕಲ್ಚರಲ್ ಪದವಿಯನ್ನು ಧಾರವಾಡ ವಿಶ್ವವಿದ್ಯಾನಿಲಯದ ಮೂಲಕ ಗಳಿಸಿದ್ದರು. ಮೈಸೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗದ ಸಂದರ್ಭ ಬೆಸ್ಟ್ ಔಟ್‍ಸ್ಟಾಂಡಿಂಗ್ ವಿದ್ಯಾರ್ಥಿ ಎಂಬ ಸಾಧನೆಗೂ ಪಾತ್ರವಾಗಿದ್ದ ಲೋಚನ್‍ಗೆ ಆ ಸಂದರ್ಭ ಮೆಡಿಕಲ್…

Read More

ಸುಂಟಿಕೊಪ್ಪ ಮೇ 20 NEWS DESK : ಡಿ.ಶಿವಪ್ಪ ಸ್ಮಾರಕ 26ನೇ ವರ್ಷದ ರಾಜ್ಯ ಮಟ್ಟದ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿಯ 5ನೇ ದಿನ ನಡೆದ ಪಂದ್ಯಾವಳಿಯಲ್ಲಿ ಸಿಟಿಜನ್ ಉಪ್ಪಳ ಹಾಗೂ ಅಶೋಕ ಎಫ್.ಸಿ ಮೈಸೂರು ತಂಡಗಳು ಮುಂದಿನ ಸುತ್ತಿಗೆ ಅರ್ಹತೆ ಪಡೆಯಿತು. ಜಿಯಂಪಿ ಶಾಲಾ ಮೈದಾನದಲ್ಲಿ ಬ್ಲೂಬಾಯ್ಸ್ ಯೂತ್ ಕ್ಲಬ್ ವತಿಯಿಂದ 39ನೇ ವರ್ಷದ ಆಯೋಜಿಸಲಾಗಿರುವ ಪುಟ್ಬಾಲ್ ಮೊದಲನೇ ಪಂದ್ಯಾವಳಿಯು ನೇತಾಜಿ ಎಫ್.ಸಿ ಮಂಡ್ಯ ಹಾಗೂ ಸಿಟಿಜನ್ ಉಪ್ಪಳ ತಂಡಗಳ ನಡುವೆ ನಡೆಯಬೇಕಿದ್ದ ಪಂದ್ಯಾವಳಿಯಲ್ಲಿ ನೇತಾಜಿ ಎಫ್.ಸಿ ಮಂಡ್ಯ ತಂಡವು ಬಾರದ ವಾಕ್‍ಓವವರ್ ಹಿನ್ನಲೆಯಲಿಸಿಟಿಜನ್ ಉಪ್ಪಳ ತಂಡ ಮುಂದಿನ ಸುತ್ತಿಗೆ ಪ್ರವೇಶ ಪಡೆಯಿತು. ದ್ವಿತೀಯ ಪಂದ್ಯಾವಳಿಯು ಆಶೋಕಎಫ್.ಸಿ ಮೈಸೂರು ಹಾಗೂ ಪೈಟರ್ಸ್ ಎಫ್.ಸಿ. ಕುತೂಪರಂಬು ತಂಡಗಳ ನಡುವೆ ನಡೆದು ಪ್ರಥಮಾರ್ಧದಲ್ಲಿ ಪೈಟರ್ಸ್ ಎಫ್.ಸಿ. ಕುತೂಪರಂಬು ತಂಡದ ಆಟಗಾರ 2ನೇ ನಿಮೀಷದಲ್ಲಿ ಶಬೀಬ್ ಅವರು ಎಸಗಿದ ತಪ್ಪಿನಿಂದ ಸ್ವಯಂ ಗೋಲುಗಳಿಸುವುದರೊಂದಿಗೆದುರಾಳಿ ಮೈಸೂರು ತಂಡಕ್ಕೆ ಮುನ್ನಡೆ ಸುಲಭವಾಗಿ ದೊರೆಯಿತು. ದ್ವೀತಿಯಾರ್ಧದಲ್ಲಿ ಮೈಸೂರು ಆಶೋಕ…

Read More

ಬೆಂಗಳೂರು NEWS DESK ಮೇ 20 : ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಮುಂದಿನ 5 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಸೇರಿದಂತೆ ಒಟ್ಟು 7 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ರಾತ್ರಿಯಲ್ಲಿ ಅತಿ ಹೆಚ್ಚು ಮಳೆ, ಆಲಿಕಲ್ಲು ಮಳೆ ಮತ್ತು ಬಲವಾದ ಗಾಳಿ ಬೀಸಲಿದೆ. ಎಲ್ಲಾ ಏಳು ಜಿಲ್ಲೆಗಳಲ್ಲಿ ದಿಢೀರ್ ಪ್ರವಾಹವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ತೇವಾಂಶದಿಂದ ಕೂಡಿದ ಮಣ್ಣು ಕುಸಿಯಲಿದೆ ಮತ್ತು ತಗ್ಗು ಪ್ರದೇಶಗಳಲ್ಲಿ ಪ್ರವಾಹ ಎದುರಾಗಲಿದೆ ಎಂದು ಮಾಹಿತಿ ನೀಡಿದೆ.

Read More

ಮಡಿಕೇರಿ NEWS DESK ಮೇ 20 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಶಿವಮೊಗ್ಗದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ತಂಡ ಹಾಕಿ ಫೈನಲ್ ಪಂದ್ಯದಲ್ಲಿ 6-0 ಗೋಲಿಗಳಿಂದ ಜಯಶಾಲಿಯಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.

Read More

ಮಡಿಕೇರಿ ಮೇ 20 NEWS DESK : ಕಾರ್ಪೋರೇಟ್ ಸಂಸ್ಥೆಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದು ಪಡಿಸಬೇಕೆಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಕಾರ್ಮಿಕ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಸಿಐಟಿಯು ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು ಹಾಗೂ ಕಾರ್ಮಿಕರು ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಪಿ.ಆರ್.ಭರತ್ ಮಾತನಾಡಿ, ಕೆಲಸದ ದೇಶದಲ್ಲಿ ಸುಮಾರು 50 ಕೋಟಿಯಷ್ಟು ದುಡಿಯುವ ವರ್ಗವಿದೆ. ಕಾರ್ಮಿಕರ ಹೋರಾಟದ ಫಲವಾಗಿ ಕೆಲಸದ ಸಮಯ 8 ಗಂಟೆ ಎಂದು ನಿಗದಿಯಾಗಿತ್ತು. ಆದರೆ ಕೇಂದ್ರ ಸರ್ಕಾರ ಕಾರ್ಪೋರೇಟ್ ಸಂಸ್ಥೆಗಳಿಗೆ ಲಾಭ ಮಾಡಿಕೊಡಲು 12 ಗಂಟೆ ದುಡಿಯಬೇಕು ಎಂದು ಹೇಳುತ್ತಿದೆ. ಇದು ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಿಕೊಳ್ಳುವ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಆರೋಪಿಸಿದರು. ಅಭಿವೃದ್ಧಿಯ ಹೆಸರಿನಲ್ಲಿ ಕಾರ್ಪೋರೇಟ್ ಕಂಪನಿಗಳ ಲಾಭಕ್ಕಾಗಿ ವೇತನ ಸಂಹಿತೆಯಲ್ಲಿ 4 ಕಾನೂನು, ಕೈಗಾರಿಕಾ ಬಾಂಧವ್ಯ ಸಂಹಿತೆಯಲ್ಲಿ…

Read More

ಮಡಿಕೇರಿ ಮೇ 20 NEWS DESK : ಸಮಾಜದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2026ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ‘ಪದ್ಮ ವಿಭೂಷಣ’ ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ. ಕಲೆ(ಜನಪ್ರಿಯ ಕಲೆ, ಸಂಗೀತ, ಚಿತ್ರಕಲೆ, ವಾಸ್ತುಶಿಲ್ಪ, ಶಿಲ್ಪಕಲೆ, ಚಲನಚಿತ್ರ, ಛಾಯಾಗ್ರಹಣ ಮತ್ತಿತರ), ಸಮಾಜದ ಕಾರ್ಯ(ಸಮಾಜ ಸೇವೆ, ಧರ್ಮಾರ್ಥ ಸೇವೆ, ಸಮುದಾಯ ಯೋಜನೆಯ ನಿಮಿತ್ತದ ಕೊಡುಗೆ ಒಳಗೊಂಡಂತೆ), ಸಾರ್ವಜನಿಕ ವ್ಯವಹಾರ(ಕಾನೂನು ಮತ್ತು ಸಾರ್ವಜನಿಕ ಜೀವನ ರಾಜಕೀಯ ಇತ್ಯಾದಿ), ವಿಜ್ಞಾನ, ತಾಂತ್ರಿಕ, ತಂತ್ರಜ್ಞಾನ ಮತ್ತು ಇತರ ಗೌರವಾನ್ವಿತ ವೃತ್ತಿ (ಬಾಹ್ಯಾಕಾಶ, ಎಂಜಿನಿಯರಿಂಗ್, ಅಣುವಿಜ್ಞಾನ, ಮಾಹಿತಿ ತಂತ್ರಜ್ಞಾನ, ಸಂಶೋಧನೆ ಇತ್ಯಾದಿ), ವ್ಯಾಪಾರ ಮತ್ತು ಕೈಗಾರಿಕೆ(ಬ್ಯಾಂಕಿಂಗ್, ಆರ್ಥಿಕ ಚಟುವಟಿಕೆ, ಮ್ಯಾನೇಜ್‍ಮೆಂಟ್, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ವಾಣಿಜ್ಯ ಒಳಗೊಂಡಂತೆ), ವೈದ್ಯಕೀಯ(ವೈದ್ಯಕೀಯ ಸಂಶೋಧನೆ, ಆಯರ್ವೇದದಲ್ಲಿ ಕುಶಲತೆ, ಹೋಮಿಯೋಪತಿ, ಸಿದ್ದ, ಅಲೋಪತಿ, ನ್ಯಾಚುರೋಪತಿ ಮತ್ತಿತರ), ಸಾಹಿತ್ಯ ಮತ್ತು ಶಿಕ್ಷಣ(ಪತ್ರಿಕೋದ್ಯಮ, ಭೋದನೆ, ಪುಸ್ತಕ ಬರೆಯುವಿಕೆ, ಸಾಹಿತ್ಯ, ವೈದ್ಯ, ಶಿಕ್ಷಣ, ಅಭಿವೃದ್ಧಿ, ಶಿಕ್ಷಣ…

Read More

ಮಡಿಕೇರಿ ಮೇ 20 NEWS DESK : ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗುವ ರಾಜ್ಯ ಪ್ರಶಸ್ತಿಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸೋಮವಾರಪೇಟೆ ಪೊಲೀಸ್ ಠಾಣಾಧಿಕಾರಿ ಮುದ್ದು ಮಹದೇವ ಹಾಗೂ ವಿಶೇಷ ಮಕ್ಕಳ ಘಟಕದ ಕಲ್ಯಾಣಾಧಿಕಾರಿ ಹೆಡ್ ಕಾನ್ಸ್ ಟೇಬಲ್ ಸುಮತಿ ಅವರು ಭಾಜನರಾಗಿದ್ದಾರೆ. ಕರ್ನಾಟಕ ಪೊಲೀಸ್ ಡಿಜಿ ಹಾಗೂ ಐಜಿಪಿ ಅವರು ಇದೇ ಮೊದಲ ಭಾರಿಗೆ ಈ ಪ್ರಶಸ್ತಿಯನ್ನು ಘೋಷಿಸಿದ್ದು, ಮೊದಲ ವರ್ಷವೇ ಕೊಡಗಿನ ಅಧಿಕಾರಿಗಳು ಪ್ರಶಸ್ತಿ ಪಡೆಯುತ್ತಿರುವುದು ವಿಶೇಷ. ಮೇ 21ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

Read More