ಮಡಿಕೇರಿ ಮೇ 20 NEWS DESK : ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗುವ ರಾಜ್ಯ ಪ್ರಶಸ್ತಿಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸೋಮವಾರಪೇಟೆ ಪೊಲೀಸ್ ಠಾಣಾಧಿಕಾರಿ ಮುದ್ದು ಮಹದೇವ ಹಾಗೂ ವಿಶೇಷ ಮಕ್ಕಳ ಘಟಕದ ಕಲ್ಯಾಣಾಧಿಕಾರಿ ಹೆಡ್ ಕಾನ್ಸ್ ಟೇಬಲ್ ಸುಮತಿ ಅವರು ಭಾಜನರಾಗಿದ್ದಾರೆ. ಕರ್ನಾಟಕ ಪೊಲೀಸ್ ಡಿಜಿ ಹಾಗೂ ಐಜಿಪಿ ಅವರು ಇದೇ ಮೊದಲ ಭಾರಿಗೆ ಈ ಪ್ರಶಸ್ತಿಯನ್ನು ಘೋಷಿಸಿದ್ದು, ಮೊದಲ ವರ್ಷವೇ ಕೊಡಗಿನ ಅಧಿಕಾರಿಗಳು ಪ್ರಶಸ್ತಿ ಪಡೆಯುತ್ತಿರುವುದು ವಿಶೇಷ. ಮೇ 21ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಲೇಖಕ: admin
ಮಡಿಕೇರಿ ಮೇ 20 NEWS DESK : ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಕಾನೂನು ಪದವೀಧರರಿಗೆ 2025-26ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ತರಬೇತಿ ಪಡೆಯಲು ಸರ್ಕಾರಿ ಆದೇಶದಂತೆ ಅಭ್ಯರ್ಥಿಗಳು ವರ್ಗ-1 ಮತ್ತು ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ:3,50,000 ಹಾಗೂ ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ:2,50,000 ಒಳಪಟ್ಟಿರಬೇಕು. ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪ್ರವರ್ಗ-1ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಲಯಮಾನುಸಾರ ಇತರೆ ವರ್ಗಗಳಲ್ಲಿ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದು 02 ವರ್ಷದ ಒಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅರ್ಜಿದಾರರ ವಯಸ್ಸು ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದೊಳಗಿರಬೇಕು, ಪ್ರವರ್ಗ 2ಎ, 3ಎ, 3ಬಿ ರ ಅಭ್ಯರ್ಥಿಗಳಿಗೆ 38 ವರ್ಷದೊಳಗಿರಬೇಕು. ಅಭ್ಯರ್ಥಿಯು ತನ್ನ ಹೆಸರನ್ನು…
ಮಡಿಕೇರಿ ಮೇ 20 NEWS DESK : ಸೋಮವಾರಪೇಟೆ 66/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾರ್ಗ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್2 ಶಾಂತಳ್ಳಿ ಮಾರ್ಗದಲ್ಲಿ ಮೇ, 21 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಯಡೂರು, ತಲ್ತಾರೆಶೆಟ್ಟಳ್ಳಿ, ಕಿರಗಂದೂರು, ತಾಕೇರಿ, ಗಿಜಗನಮನೆ, ತೊಳೂರುಶೆಟ್ಟಳ್ಳಿ, ಕೂತಿ, ಹೊಸಬೀಡು, ಕಲ್ಕಂದೂರು, ಬಸವನಕಟ್ಟೆ, ನಗರಳ್ಳಿ, ಹೆಮನಗದ್ದೆ, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹೆಗ್ಗಡಮನೆ, ಹರಗ, ಕುಂಬಾರಗಡಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ವಿರಾಜಪೇಟೆ ಮೇ 20 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ,ಸಿ ಟ್ರಸ್ಟ್ ವಿರಾಜಪೇಟೆ ತಾಲೂಕು, ವತಿಯಿಂದ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಹುದಿಕೇರಿ ಶ್ರೀ ಮಹಾದೇವರ ಪೆಗ್ಗೆರೆ ಕೆರೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿತು. ಗುದ್ದಲಿ ಪೂಜೆ ಬಳಿಕ ಮಾತನಾಡಿದ ಹುದಿಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಿವ್ಯ ಕಾವೇರಮ್ಮ, ಕೆರೆ ಅಭಿವೃದ್ಧಿಯಿಂದ ಸುತ್ತಮುತ್ತ ಇರುವ ಕೃಷಿಕರಿಗೆ, ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಅನುಕೂಲವಾಗಲಿದೆ ಮತ್ತು ಊರಿನ ವಾತಾವರಣ ಸುಂದರವಾಗಿರುತ್ತದೆ ಎಂದು ಹೇಳಿದರು. ಜಿಲ್ಲಾ ಜನ ಜಾಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷ ಅರುಣ್ ಬಾನಂಗಡ, ತಾಲೂಕಿನ ಯೋಜನಾಧಿಕಾರಿ ಪಿ.ಹರೀಶ್, ಚೀಪ್ ಎಲೆಕ್ಟ್ರಿಕಲ್ ಇನ್ಸ್ಪೆಕ್ಟರ್ ರೋಶನ್ ಅಪ್ಪಚ್ಚು, ಕೆರೆ ಸಮಿತಿ ಅಧ್ಯಕ್ಷ ಕರುಂಬಯ್ಯ, ಪಂಚಾಯತ್ ಸದಸ್ಯರಾದ ಶಿಲ್ಪ, ಶೆಟ್ಟಿಗೇರಿ ಒಕ್ಕೂಟದ ಅಧ್ಯಕ್ಷ ಸುಶೀಲ, ದೇವಸ್ಥಾನದ ಅರ್ಚಕ ಗುರುರಾಜ್, ವಲಯ ಮೇಲ್ವಿಚಾರಕ ನಾಗರಾಜ್, ಕೃಷಿ ಮೇಲ್ವಿಚಾರಕ ವಸಂತ್, ಸೇವಾ ಪ್ರತಿನಿಧಿ ಶಾಲಿನಿ, ಜಾಕೀರ, ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು, ಊರಿನ…
ಮಡಿಕೇರಿ ಮೇ 20 NEWS DESK : ಅಮ್ಮತ್ತಿ ಮತ್ತು ಕಾರ್ಮಾಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪರಿಶಿಷ್ಟರು, ಬಡವರು, ಹಿಂದುಳಿದವರು ಹಾಗೂ ಕಾರ್ಮಿಕರು ನಿವೇಶನದ ಬೇಡಿಕೆಯನ್ನು ಮುಂದಿಟ್ಟುಕೊಂಡು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 25ನೇ ದಿನಕ್ಕೆ ಕಾಲಿಟ್ಟಿದೆ. ಅಮ್ಮತ್ತಿ ನಾಡ ಕಚೇರಿ ಬಳಿ ಧರಣಿ ನಡೆಸುತ್ತಿರುವವರನ್ನುದ್ದೇಶಿಸಿ ಮಾತನಾಡಿದ ಸಿಪಿಐಎಂಎಲ್ ಪಕ್ಷದ ರಾಜ್ಯ ಸಂಯೋಜಕ ಡಿ.ಎಸ್.ನಿರ್ವಾಣಪ್ಪ ನಿವೇಶನ ರಹಿತ ಬಡ ಕೂಲಿ ಕಾರ್ಮಿಕರು ದಬ್ಬಾಳಿಕೆಗೆ ಒಳಗಾಗುತ್ತಿದ್ದಾರೆ, ಲೈನ್ ಮನೆಗಳಲ್ಲಿ ವಾಸಿಸುತ್ತಿರುವ ಕಾರ್ಮಿಕರ ಬದುಕು ಶೋಚನೀಯವಾಗಿದೆ. ಆಡಳಿತ ವ್ಯವಸ್ಥೆ ಭೂ ಮಾಲೀಕರ ಪರವಾಗಿ ಭೂ ಸುಧಾರಣೆಗಳನ್ನು ಮಾಡುತ್ತಿದ್ದಾರೆ. ಬಡವರ ಪರವಾದ ಜವಾಬ್ದಾರಿಗಳನ್ನು ಮರೆತ್ತಿದ್ದಾರೆ. ಬಡವರು ಬೀದಿ ಪಾಲಾಗಲು ಮತ್ತು ಬಡವರಾಗಿಯೇ ಉಳಿಯಲು ಅಧಿಕಾರಿಗಳೇ ನೇರ ಕಾರಣವೆಂದು ಆರೋಪಿಸಿದರು. ಬಡವರಿಗೆ ಹಾಗೂ ಶ್ರಮಿಕ ವರ್ಗಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸರ್ಕಾರ ಬಡವರ ಧರಣಿ ಸತ್ಯಾಗ್ರಹವನ್ನು ನಿರ್ಲಕ್ಷಿಸದೆ ನಿವೇಶನ ಹಂಚಿಕೆಗೆ ಮುಂದಾಗಬೇಕು, ತಪ್ಪಿದಲ್ಲಿ ಜಿಲ್ಲೆಯಾದ್ಯಂತ ಬೃಹತ್ ಹೋರಾಟ ರೂಪಿಸುವುದಾಗಿ ಎಚ್ಚರಿಕೆ ನೀಡಿದರು. ಸಿಪಿಐಎಂಎಲ್ ನ…
ಮಡಿಕೇರಿ ಮೇ 20 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರಾದ ಪ್ರೊ. ಎಂ.ಸುರೇಶ ಉದ್ಘಾಟಿಸಿ, ಮಾತನಾಡಿ ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು. ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು. ಇತ್ತೀಚೆಗೆ ಉದ್ಯೋಗದಲ್ಲಿ ಹಿನ್ನಡೆ ಉಂಟಾಗುತ್ತಿದೆ. ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜ್ಜಿರ ಬಿ.ಅಯ್ಯಪ್ಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸ್ಪರ್ಧಾ ಮನೋಭಾವ ಕಡಿಮೆಯಾಗುತ್ತಿದ್ದು, ಅವಕಾಶಗಳು ಹೆಚ್ಚಿವೆ ಅವುಗಳನ್ನು ಬಳಸಿಕೊಳ್ಳುವಂತೆ ಸಲಹೆ ನೀಡಿದ ಅವರು, ಮನರಂಜನೆ ಬೇಕು ಆದರೆ ಹೆಚ್ಚಿನ ಗಮನ ಭವಿಷ್ಯದ ಬಗ್ಗೆ ಇರಬೇಕು ಎಂದು ಹೇಳಿದರು. ಈ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಲ್ಲಿ ಉನ್ನತ ಹುದ್ದೆಯಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದರು. ಇದೇ ಸಂದರ್ಭ ಕೊಡಗಿನ ಸಾಧಕರನ್ನು ಸ್ಮರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮೇಜರ್…
ಮಡಿಕೇರಿ ಮೇ 20 NEWS DESK : ಕೊಡಗಿನಲ್ಲಿ ಭಾರೀ ಮಳೆಯಾಗುವ ಸೂಚನೆ ದೊರೆತ್ತಿದ್ದು, ಹವಮಾನ ಇಲಾಖೆ ಇಂದು (ಮೇ 20) ಮತ್ತು ಮೇ 22 ರಂದು ರೆಡ್ ಅಲರ್ಟ್ ಘೋಷಿಸಿದೆ.
ಮಡಿಕೇರಿ ಮೇ 20 NEWS DESK : ಭಾರತದ ಸಿಂಧೂರ ಜಮ್ಮು ಕಾಶ್ಮೀರದಲ್ಲಿ ಪಾಕ್ ಪ್ರಚೋದಿತ ಭಯೋತ್ಪಾದಕರು ಧರ್ಮದ ಹೆಸರಿನಲ್ಲಿ ನಡೆಸಿದ ಪೈಶಾಚಿಕ ಕೃತ್ಯದಿಂದ ಅಮಾಯಕ ಮಹಿಳೆಯರ ಸಿಂಧೂರ ಅಳಿಸಿ ಹೋದುದಕ್ಕೆ ಪ್ರತೀಕಾರವಾಗಿ ಕೇಂದ್ರ ಸರ್ಕಾರ ನಡೆಸಿದ ‘ಆಪರೇಷನ್ ಸಿಂಧೂರ’ದ ಯಶಸ್ಸಿನ ಹಿನ್ನೆಲೆಯಲ್ಲಿ ಮೇ 23 ರಂದು ನಗರದಲ್ಲಿ ‘ಸಿಂಧೂರ ವಿಜಯೋತ್ಸವ’ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಸಿಂಧೂರ ವಿಜಯೋತ್ಸವ ಸಮಿತಿ ಸಂಚಾಲಕ ಕೆ.ಕೆ.ದಿನೇಶ್ ಕುಮಾರ್ ಈ ಕುರಿತು ಮಾಹಿತಿ ನೀಡಿ, ಅಂದು ಬೆಳಗ್ಗೆ 10.30ರಿಂದ ನಗರದ ಎವಿ ಶಾಲೆಯ ಬಳಿಯ ಬನ್ನಿ ಮಂಟಪದಿಂದ ಪಕ್ಷ, ಧರ್ಮ ಭೇದವಿಲ್ಲದೆ ಆಯೋಜಿತ ಸಿಂಧೂರ ವಿಜಯೋತ್ಸವ ಗಾಂಧಿ ಮೈದಾನದವರೆಗೆ ನಡೆಯಲಿದೆ. ಇದರಲ್ಲಿ ಜಿಲ್ಲಾ ವ್ಯಾಪ್ತಿಯ ಸಹಸ್ರಾರು ದೇಶ ಪ್ರೇಮಿಗಳು ಪಾಲ್ಗೊಳ್ಳಲಿದ್ದಾರೆ. ಈ ಬೃಹತ್ ವಿಜಯೋತ್ಸವದ ಮೆರವಣಿಗೆಯಲ್ಲಿ 300 ಅಡಿ(100ಮೀ.)ಯ ಬೃಹತ್ ರಾಷ್ಟ್ರ ಧ್ವಜ ಕೊಂಡೊಯ್ಯಲಾಗುತ್ತದೆಂದು ತಿಳಿಸಿದರು. ಮುಂಚೂಣಿಯಲ್ಲಿ ನಿವೃತ್ತ ಸೇನಾಧಿಕಾರಿಗಳು :: ಸಿಂಧೂರ ವಿಜಯೋತ್ಸವದ ಮೆರವಣಿಗೆಯಲ್ಲಿ ಜಿಲ್ಲೆಯ ಮಾಜಿ ಸೈನ್ಯಾಧಿಕಾರಿಗಳು, ಸೈನಿಕರು ತಮ್ಮ ಸಮವಸ್ತ್ರಗಳೊಂದಿಗೆ ಪಾಲ್ಗೊಳ್ಳಲಿದ್ದಾರೆ. ಇವರು…
ಬೆಂಗಳೂರು ಮೇ 20 NEWS DESK : ಧಾರಕಾರ ಮಳೆಯಿಂದ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೇಟರ್ ಬೆಂಗಳೂರು ಪ್ರಾಧಿಕಾರದ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರಿಂದ ಪ್ರಾಧಿಕಾರದ ವಾರ್ ರೂಮ್ನಲ್ಲಿ ಮಾಹಿತಿ ಪಡೆದು, ಪರಿಹಾರೋಪಾಯಗಳ ಬಗ್ಗೆ ಸಲಹೆ, ಸೂಚನೆ ನೀಡಿದರು. ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಸರಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹಾಜರಿದ್ದು ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸಿದರು. ಹಾನಿಗೆ ಒಳಗಾಗಿರುವ ಪ್ರದೇಶಗಳ ಅಧಿಕಾರಿಗಳಿಗೆ ಅಗತ್ಯ ಕ್ರಮಗಳನ್ನು ಸರೋಪಾದಿಯಲ್ಲಿ ಕೈಗೊಳ್ಳುವಂತೆ ಕರೆಮಾಡಿ ಸೂಚಿಸಿದರು. ಶಾಸಕರಾದ ಎನ್.ಎ.ಹ್ಯಾರಿಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜ್, ನಜೀರ್ ಅಹ್ಮದ್, ಪರಿಷತ್ ಸದಸ್ಯರಾದ ಸೀತಾರಾಮ್, ಸುಧಾಮ್ದಾಸ್, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಡಿಕೇರಿ ಮೇ 20 NEWS DESK : ಮ್ಯಾನ್ಸ್ ಕಾಂಪೌಂಡ್ ಕ್ಲಬ್ (ಎಂಸಿಸಿ) ವತಿಯಿಂದ ಜಿಲ್ಲಾ ಫುಟ್ಬಾಲ್ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಫುಟ್ಬಾಲ್ ತರಬೇತಿ ಶಿಬಿರ ಸಮಾರೋಪಗೊಂಡಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಎಂಸಿಸಿ ಹಿರಿಯ ಆಟಗಾರರು, ಪೋಷಕರೂ ಆಗಿರುವ ಚಿನ್ನಪ್ಪ ಮಾತನಾಡಿ ಮಕ್ಕಳು ಮೊಬೈಲ್ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ ಮೈದಾನಕ್ಕಿಳಿದು ಆಟವಾಡಬೇಕು. ಕ್ರೀಡೆಯಲ್ಲಿ ಸಾಕಷ್ಟು ಅವಕಾಶಗಳಿದ್ದು, ಅದನ್ನು ಬಳಸಿಕೊಳ್ಳಬೇಕು. ತರಬೇತಿ ಶಿಬಿರದಲ್ಲಿ ಕಲಿತದ್ದನ್ನು ನಿರಂತರ ಅಭ್ಯಾಸ ಮಾಡಬೇಕೆಂದು ಕರೆ ನೀಡಿದರು. ಮತ್ತೋರ್ವ ಅತಿಥಿ, ಹಿರಿಯ ಫುಟ್ಬಾಲ್ ಆಟಗಾರ ರವಿ ಅವರು ಮಾತನಾಡಿ ಎಂಸಿಸಿ ಕ್ಲಬ್ ಮೂಲಕ ಆಡಿದ ಆಟಗಾರರು ರಾಜ್ಯ, ರಾಷ್ಟ್ರಮಟ್ಟದ ಆಟಗಾರರಾಗಿ ಹೊರ ಹೊಮ್ಮಿದ್ದಾರೆ. ಈಗಿನ ಮಕ್ಕಳಿಗೆ ಸಾಕಷ್ಟು ಅವಕಾಶಗಳಿದ್ದು, ಅದನ್ನು ಸದುಪಯೋಗ ಪಡಿಸಿಕೊಂಡು ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸುವಂತಾಗಬೇಕು. ಅಭ್ಯಾಸ ನಿರಂತರವಾಗಿರಬೇಕೆಂದು ಕಿವಿ ಮಾತು ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಉಪಾಧ್ಯಕ್ಷ, ಎಂಸಿಸಿ ಅಧ್ಯಕ್ಷ ಹಾಗೂ ತರಬೆತುದಾರರೂ ಆಗಿರುವ ಕ್ರಿಸ್ಟೋಫರ್;…






