ಮಡಿಕೇರಿ ಆ.7 NEWS DESK : ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು ಎಂದು ವೈದ್ಯರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು.ಇಂದು ಮಳೆ ಕಾರಣದಿಂದ ಕೊಪ್ಪಳದ ಕಾರ್ಯಕ್ರಮಕ್ಕೆ ಹೋಗಿಲ್ಲ. ಆದ್ದರಿಂದ ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ, ಇಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ ಎಂದು ಹೇಳಿದರು. ಆಸ್ಪತ್ರೆಯಲ್ಲಿ ವಾಹನ ನಿಲುಗಡೆಗೆ ಹಣ ಪಡೆಯುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು. ವಾಣಿ ವಿಲಾಸ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್ ಗೆ ಸಹ ಭೇಟಿ ನೀಡಿದ್ದು, ವಾಣಿ ವಿಳಾಸದಲ್ಲಿ ಒಂದು ದಿನಕ್ಕೆ 40 ಕ್ಕೂ ಹೆಚ್ಚು ಹೆರಿಗೆಗಳಾಗುತ್ತವೆ. ಬೇರೆ ಬೇರೆ ರಾಜ್ಯದ ಜನರು ಇಲ್ಲಿ ಚಿಕಿತ್ಸೆಗಾಗಿ ಬರುತ್ತಾರೆ. ಜನ ದಟ್ಟಣೆ ಹೆಚ್ಚಿರುವುದರಿಂದ ಆಸ್ಪತ್ರೆಯ ಹಾಸಿಗೆಗಳನ್ನು ಹೆಚ್ಚು ಮಾಡಬೇಕಿದೆ. ವೈದ್ಯರ ಹುದ್ದೆಗಳನ್ನು ಸಹ ಭರ್ತಿ ಮಾಡಲಾಗುವುದು. ವಿಕ್ಟೋರಿಯಾ…
ಲೇಖಕ: admin
ಬೆಂಗಳೂರು ಆ.7 NEWS DESK : ಬೆಂಗಳೂರಿನ ಲಾಲ್ಬಾಗ್ನಲ್ಲಿ ಆಯೋಜಿಸಿದ್ದ “ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನ”ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಸ್ವಾತಂತ್ರ್ಯ ಸೇನಾನಿಗಳಿಗೆ ನಮಿಸಿದರು. ತೋಟಗಾರಿಕೆ ಇಲಾಖೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಶ್ರೀ ವಚನಾನಂದ ಸ್ವಾಮಿಗಳು, ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಕಿತ್ತೂರು ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
ಕುಶಾಲನಗರ ಆ.7 NEWS DESK : ಸಮಾಜ ಸೇವೆಯ ಹೆಸರಿನಲ್ಲಿ ಪ್ರಾರಂಭವಾದ ಸಂಸ್ಥೆಗಳು ಮೂಲ ಉದ್ದೇಶದ ಗುರಿಯನ್ನು ತಲುಪಬೇಕು ಎಂದು ಮದರ್ ರೂಟ್ ಸಂಸ್ಥೆಯ ಅಧ್ಯಕ್ಷೆ ಟಿ.ಬಿ.ಅನಿತಾ ತಿಳಿಸಿದರು. ಕುಶಾಲನಗರ ತಾಲೂಕಿನ ನಲವತ್ತೆಕರೆ ಬರಡಿಗ್ರಾಮದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಸಮಾಜ ಸೇವೆಯ ಉದ್ದೇಶವನ್ನು ಹೊಂದಿದ ಮದರ್ ರೂಟ್ ಫೌಂಡೇಶನ್ ಸೇವಾ ಸಂಸ್ಥೆಯೊಂದು ಅಸ್ಥಿತ್ವಕ್ಕೆ ಬಂದಿದೆ. ಸಂಸ್ಥೆ ವೃದ್ಧಾಶ್ರಮ, ಅನಾಥಾಶ್ರಮ, ಬಾಲಕಾರ್ಮಿಕರ ಪುನರ್ವಸತಿ ಕೇಂದ್ರ ಮತ್ತು ಮಹಿಳೆಯರ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸುವುದರ ಜೊತೆಗೆ ವಿವಿಧ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಸದುದ್ದೇಶಗಳನ್ನು ಹೊಂದಿರುವ ಸಂಸ್ಥೆಯಾಗಿದೆ ಎಂದು ಹೇಳಿದರು. ಸಂಸ್ಥೆಯ ಬೆಳವಣಿಗೆಗೆ ಕೃಷಿ ಉತ್ಪನ್ನಗಳು ಮತ್ತು ಮಾರಾಟ ಸೇರಿದಂತೆ ವಿವಿಧ ವಸ್ತುಗಳ ತಯಾರಿಸಿ ಮಾರ್ಕೆಟಿಂಗ್ ಮಾಡಲಾಗುವುದು, ಬಂದ ಲಾಭದಲ್ಲಿ ಒಂದು ಭಾಗವನ್ನು ಸಂಸ್ಥೆಯ ಬೆಳವಣಿಗೆಗೆ ವಿನಿಯೋಗ ಮಾಡಲಾಗುವುದು ಎಂದು ತಿಳಿಸಿದರು. ನಮ್ಮ ಸಂಸ್ಥೆ ಜಾತ್ಯಾತೀತ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದರು. ಈಗಾಗಲೆ ಸಂಸ್ಥೆಗೆ ಪದಾಧಿಕಾರಿಗಳ ನೇಮಕಮಾಡಲಾಗಿದ್ದು, ಪದಾಧಿಕಾರಿಗಳು…
ನಾಪೋಕ್ಲು ಆ.7 NEWS DESK : ದೆಹಲಿಯಲ್ಲಿ ಆ.15 ರಂದು ನಡೆಯುವ ಸ್ವಾತಂತ್ರೋತ್ಸವಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿರುವ ಯಶಸ್ವಿ ರೈ ಅವರನ್ನು ಕಾಂತೂರು ಗ್ರಾಮ ಪಂಚಾಯತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯತಿ ಅಧ್ಯಕ್ಷ ಕುಶನ್ ರೈ, ಉಪಾಧ್ಯಕ್ಷರಾದ ಬಿ.ಎಸ್.ರೇಖಾ, ಪಿ.ಡಿ.ಓ ಚಂದ್ರಮೌಳಿ, ಸದಸ್ಯರಾದ ವಿಜು ತಿಮ್ಮಯ, ಸೌಮ್ಯ ಸತೀಶ್, ರೀತಾ ಸುದರ್ಶನ್, ಸುಮಾ ಸುಂದರಿ, ಪುಷ್ಪ, ದಿವ್ಯ ಮಿತ್ತೂರ್, ಯಶ್ವಿನ್, ರಘು, ಹೀರ ಸುಬ್ಬಯ್ಯ, ಶೃತಿ, ಲತ, ಶರ್ಮಿಳಾ, ಮೀನಾಕ್ಷಿ ದೇವಯ್ಯ ಮತ್ತು ಸಿಬ್ಬಂದಿಗಳಾದ ನಿರೂಪ, ಶಶಿ, ಲಿಖಿತ, ಕೋಮಲ, ದಿನೇಶ ಮತ್ತು ತಾಯಿ ಜಯಂತಿ ರೈ ಹಾಜರಿದ್ದರು. ಯಶಸ್ವಿ ರೈ ಕಾಂತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಡಗ ಗ್ರಾಮದ ನಿವಾಸಿ ಬಿ.ಬಿ.ಜಯಂತಿ ಮತ್ತು ಲವಕುಮಾರ್ ದಂಪತಿಗಳ ದ್ವಿತೀಯ ಪುತ್ರ ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಆ.7 NEWS DESK : ನಾಪೋಕ್ಲು ಹಿಂದೂ ಮಲಯಾಳಿ ಸಂಘದ ವತಿಯಿಂದ ಸಮಸ್ತ ಹಿಂದು ಬಾಂಧವರಿಗಾಗಿ ಜಿಲ್ಲಾಮಟ್ಟದ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಆ.17ರಂದು ಸಮೀಪದ ಹಳೆ ತಾಲೂಕಿನ ಜಿಎಂಪಿ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ನಾಪೋಕ್ಲು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಕೆ.ಅನಿಲ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಹಗ್ಗಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ ಸ್ಪರ್ಧೆಯನ್ನು ಉದ್ಘಾಟಿಸಲಾಗುವುದು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ನಾಪೋಕ್ಲು ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಘವೇಂದ್ರ ,ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ಅಧ್ಯಕ್ಷ ಎ.ಕೆ.ಚಂದ್ರ, ಕಾಫಿ ಬೆಳೆಗಾರರಾದ ಅಪ್ಪಚೆಟ್ಟೋಳಂಡ ನವೀನ್ ಅಪ್ಪಯ್ಯ, ಚೀಯಕಪೂವಂಡ ಎಸ್. ಮಂಜುನಾಥ್ (ಕಟ್ಟಿ)ಹಾಗೂ ವಕೀಲ ಕೋಡಿಮಣಿಯಂಡ ಕುಟ್ಟಪ್ಪ ಉಪಸ್ಥಿತರಿರುವರು ಎಂದರು. ಸಮಾರೋಪ ಸಮಾರಂಭ ಕಾರ್ಯಕ್ರಮವು ಸಂಜೆ 4 ಗಂಟೆಗೆ ಜರುಗಲಿದ್ದು, ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಕೆ.ಕೆ.ಅನಿಲ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಹಾಗೂ ಶಾಸಕರಾದ ಎ ಎಸ್ ಪೊನ್ನಣ್ಣ…
ಮಡಿಕೇರಿ ಆ.7 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಕೆನರಾ ಬ್ಯಾಂಕ್, ಮೈನ್ ಬ್ರಾಂಚ್, ಮಡಿಕೇರಿ ಶಾಖೆ, ಮದೆ ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಕೇಂದ್ರ ಸರಕಾರದ ಆದೇಶದಂತೆ ಆಯಾಯ ಗ್ರಾಮದ ಬ್ಯಾಂಕ್ ಶಾಖೆ ಮುಖಾಂತರ ಪ್ರತೀ ವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಮದೆ ಗ್ರಾಮದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ನ ಎಜಿಎಂ ರಾಜೇಶ್ ಕುಮಾರ್ ವಿ. ಅವರು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭೀಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು, ವಾರ್ಷಿಕ 20 ರೂ. ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 2 ಲಕ್ಷಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ವಾರ್ಷಿಕವಾಗಿ 436 ರೂ. ಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ…
ಮೈಸೂರು, ಆ.7 NEWS DESK : ಸಾಂಸ್ಕೃತಿಕ ರಾಜಧಾನಿಯಲ್ಲಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸದಾ ಬೆಂಬಲ ನೀಡಲಿದೆ ಎಂಬ ಭರವಸೆಯನ್ನು ಕೇಂದ್ರ ಶಿಕ್ಷಣ ಸಚಿವರಾದ ಡಾ. ಸುಕಾಂತ ಮಜುಂದಾರ್ ನೀಡಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಈ ಕುರಿತು ಕೇಳಲಾದ ಪ್ರಶ್ನೆಗೆ ಕೇಂದ್ರ ಶಿಕ್ಷಣ ಸಚಿವರು ಸವಿವರವಾದ ಉತ್ತರ ನೀಡಿದ್ದಾರೆ ಎಂದು ಸಂಸದ ಯದುವೀರ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದರು ಹಲವಾರು ವಿವರಗಳನ್ನು ಹಂಚಿಕೊಂಡಿದ್ದಾರೆ. ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಪೂರ್ಣ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಸ್ವಾಯತ್ತತೆ ನೀಡಲಾಗಿಲ್ಲ, ಈ ಕೇಂದ್ರದ ಕಾರ್ಯಕ್ಷಮತೆ ಮತ್ತು ಸವಾಲುಗಳ ಹಾಗೂ ಕೇಂದ್ರದ ಸ್ವಾಯತ್ತತೆಗಾಗಿ ರಾಜ್ಯ ಸರ್ಕಾರ ಅಥವಾ ಕನ್ನಡ ಸಾಹಿತ್ಯ ಸಂಸ್ಥೆಗಳಿಂದ ಶಿಫಾರಸುಗಳನ್ನು ಸ್ವೀಕರಿಸಿದೆಯೇ ಮತ್ತು ಇದರ ಸ್ವಾಯತ್ತ ಸ್ಥಾನಮಾನಕ್ಕಾಗಿ ಪ್ರಸ್ತಾಪ ಇದೆಯೇ? ಎಂದು ಕೇಂದ್ರ ಶಿಕ್ಷಣ ಸಚಿವರಿಂದ ಉತ್ತರ…
ಮಡಿಕೇರಿ ಆ.6 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಬ್ಯಾಂಕ್ ಆಫ್ ಬರೋಡ ಮರಗೋಡು ಶಾಖೆ ಹಾಗೂ ಹೊಸ್ಕೇರಿ ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಹೊಸ್ಕೇರಿ ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ್ ನಾಯಕ್ ಅವರು ಮಾತನಾಡಿ, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆ ಮಾಡಿಸುವುದರ ಮೂಲಕ ಅದರ ಪ್ರಯೋಜನ ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಪ್ರಧಾನಮಂತ್ರಿ ಸುರಕ್ಷ ಭೀಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು, ವಾರ್ಷಿಕ 20 ರೂ. ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 2 ಲಕ್ಷ ರೂ. ಗಳ ವರೆಗಿನ ವಿಮಾ ಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ವಾರ್ಷಿಕವಾಗಿ 436 ರೂ.ಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇ ರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 2 ಲಕ್ಷ ರೂ. ಗಳ…
ಮಡಿಕೇರಿ ಆ.6 NEWS DESK : ಮಕ್ಕಂದರು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಮಕ್ಕಂದೂರು ಗ್ರಾಮದ ಅಂಗವಾಡಿ ಕೇಂದ್ರದಲ್ಲಿ ಎದೆ ಹಾಲಿನ ಮಹತ್ವ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಎದೆ ಹಾಲಿನ ಮಹತ್ವದ ಬಗ್ಗೆ ವಿವರಿಸಿದರು. ಪೌಷ್ಟಿಕ ಆಹಾರ ಸೇವನೆ, ವಾಯು ವಿಹಾರ, ಹೆಚ್ಚು ನೀರು ಸೇವನೆ, ಸ್ಥಳೀಯವಾಗಿ ಸಿಗುವ ಹಣ್ಣುಗಳು ಮತ್ತು ಸೊಪ್ಪುಗಳನ್ನು ಪ್ರತಿನಿತ್ಯ ಬಳಸಲು ಪ್ರೋತ್ಸಾಹಿಸಿದರು. ಭಾಗ್ಯಲಕ್ಷ್ಮಿ ಮಾತೃವಂದನ, ಎಫ್ಆರ್ಎಸ್, ಪೋಷಣ್ ಟ್ರ್ಯಾಕರ್, ಅಂಗನವಾಡಿಯಲ್ಲಿ ಸಿಗುವಂತಹ ಆಹಾರಗಳ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ಇಲಾಖೆಯ ಹಿರಿಯ ಪ್ರಾಥಮಿಕ ಸುರಕ್ಷಾ ಅಧಿಕಾರಿ ದೇವಕಿ ಅವರು ಪ್ರಾತ್ಯಕ್ಷಿಕೆ ಮೂಲಕ ಎದೆ ಹಾಲು ನೀಡುವ ಬಗ್ಗೆ ಮಾಹಿತಿ ನೀಡಿದರು. ಚುಚ್ಚುಮದ್ದು ಕಾರ್ಯಕ್ರಮಗಳ ಬಗ್ಗೆ ಇಲಾಖೆಯ ಸವಲತ್ತುಗಳ ಬಗ್ಗೆ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಸರೋಜಾ ಡಿಎಸ್, ಅಂಗನವಾಡಿ ಸಹಾಯಕಿ ಚಂದ್ರವತಿ,…
ಮಡಿಕೇರಿ ಆ.6 NEWS DESK : ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಆರು ತಿಂಗಳ ವರೆಗೆ ಕಡ್ಡಾಯವಾಗಿ ಎದೆಹಾಲು ಕುಡಿಸಬೇಕು. ಜೊತೆಗೆ 2 ವರ್ಷದವರೆಗೆ ಪೂರಕ ಆಹಾರದ ಜೊತೆಗೆ ಎದೆಹಾಲು ಕುಡಿಸುವಂತಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್ಸಿಹೆಚ್ ಅಧಿಕಾರಿ ಡಾ.ಮಧುಸೂದನ್ ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮಕ್ಕಳ ವಿಭಾಗದಿಂದ ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಕ್ಕಳ ಹೊರ ರೋಗಿ ವಿಭಾಗದಲ್ಲಿ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಎದೆಹಾಲಿನ ಮಹತ್ವ ಕುರಿತು ಆ.1 ರಿಂದ 7 ರವರೆಗೆ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ. ಎದೆ ಹಾಲಿನ ಮಹತ್ವ ಬಗ್ಗೆ ಹೆಚ್ಚಿನ ಅರಿವು ಮೂಡಿಸಿದರು ಸಹ ಮೂಡನಂಬಿಕೆಗೆ ಒಳಗಾಗುವುದು ತಪ್ಪುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಮಕ್ಕಳ ಬೆಳವಣಿಗೆಗೆ ಎದೆ ಹಾಲು ಅತ್ಯಮೂಲ್ಯವಾಗಿದೆ. ಎದೆ ಹಾಲಿನ ಮಹತ್ವ ಕುರಿತು ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ ಎಂದು ವಿವರಿಸಿದರು. ಜಿಲ್ಲೆಯಲ್ಲಿ…






