ಮಡಿಕೇರಿ ಆ.6 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೊಟ್ಟೋಳಿ ಗ್ರಾಮದ ಆಶ್ರಯ ಕಾಲೋನಿ ವ್ಯಾಪ್ತಿಯಲ್ಲಿ ರೂ.20 ಲಕ್ಷಗಳ ಅನುದಾನದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಅಂಗನವಾಡಿ ಕಟ್ಟಡ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಚಾಲನೆ ನೀಡಿದರು. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಮಕ್ಕಳ ಕಲಿಕೆಗೆ ಅಂಗನವಾಡಿ ಕೇಂದ್ರಗಳು ಬುನಾದಿ ಆಗಿದೆ. ಇಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಅಂಗನವಾಡಿ ಸ್ಥಳೀಯ ಮಕ್ಕಳ ವಿದ್ಯಾರ್ಜನೆಗೆ ಪೂರಕವಾಗುವಂತಾಗಲಿ ಎಂದು ಹಾರೈಸಿದರು. ಶೀಘ್ರದಲ್ಲೇ ಅಂಗನವಾಡಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಮುಂದಿನ ಶಾಲೆಯಿಂದ ಈ ಭಾಗದ ಪುಟಾಣಿ ಮಕ್ಕಳ ವಿದ್ಯಾರ್ಜನೆಗೆ ಇದು ಸಹಕಾರಿಯಾಗಲಿದೆ ಎಂದು ಹೇಳಿದರು. ನಿವಾಸಿಗಳು ತಮ್ಮ ಮಕ್ಕಳ ವಿದ್ಯಾಭ್ಯಾಸ ಕಡೆಗೆ ಹೆಚ್ಚಿನ ಗಮನ ನೀಡುವುದು ಇಂದಿನ ಅವಶ್ಯಕತೆಯಾಗಿದ್ದು, ಪುಟಾಣಿ ಮಕ್ಕಳ ವಿದ್ಯಾರ್ಜನೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲು ಸರಕಾರ ಹಾಗೂ ತಾನು ಬದ್ಧರಿರುವುದಾಗಿ ಇದೇ ಸಂದರ್ಭದಲ್ಲಿ ಹೇಳಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್…
ಲೇಖಕ: admin
ವಿರಾಜಪೇಟೆ ಆ.6 NEWS DESK : ವಿರಾಜಪೇಟೆ ತಾಲ್ಲೂಕಿನ ಕದನೂರಿನ ಸುಬೇದಾರ್ ಮೇಜರ್ ಕೈಬುಲಿರ ಡಾಲಿ ಅವರ ಅತ್ಯುತ್ತಮ ಸೇವೆಗಾಗಿ ಭಾರತೀಯ ಸೇನೆ ಜಿಒಸಿ-ಇನ್-ವೆಸ್ಟ್ರನ್ ಕಮಾಂಡ್ ಪುರಸ್ಕಾರ ನೀಡಿ ಗೌರವಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕದನೂರು ಗ್ರಾಮದ ಮಾಜಿ ಸೈನಿಕ, ಹವಲ್ದಾರ್ ಎಂ.ಕೆ.ಸಲಾಂ, ಕೈಬುಲಿರ ಡಾಲಿ ಅವರು ದೇಶದ ವಿವಿಧ ಭಾಗದಲ್ಲಿ ಕರ್ತವ್ಯ ನಿರ್ವಹಿಸಿ ಕಾರ್ಗಿಲ್ ಯುದ್ಧದಲ್ಲಿ ತನ್ನ ಅಮೂಲ್ಯ ಸೇವೆಯನ್ನು ತಾಯಿನಾಡಿಗಾಗಿ ನೀಡಿದ್ದರು. ಈ ಪುರಸ್ಕಾರದಿಂದ ಪ್ರಸಕ್ತ ಸುಬೆದಾರ್ ರ್ಯಾಂಕ್ ನಿಂದ ಸುಬೇದಾರ್ ಮೇಜರ್ ರ್ಯಾಂಕ್ ಗೆ ಬಡ್ತಿ ಹೊಂದಿದ್ದಾರೆ ಎಂದರು. ಪ್ರಸ್ತುತ ಜಮ್ಮು ಕಾಶ್ಮೀರದ ಉದಂಪುರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಬೇದಾರ್ ಮೇಜರ್ ಡಾಲಿ ಅವರು 10.3.1996 ರಲ್ಲಿ ಭಾರತಿಯ ಸೇನೆಗೆ ಪಾದಾರ್ಪಣೆ ಮಾಡಿ ಎರಡು ವರ್ಷಗಳ ಬಳಿಕ ಮದ್ರಾಸ್ ಎಂಜಿನಿಯರ್ ರೆಜಿಮೆಂಟ್ನಲ್ಲಿ ಪೊಸ್ಟಿಂಗ್ ಪಡೆದುಕೊಂಡರು. ಇವರು ಕೈಬುಲಿರ ವಿಠಲ ಹಾಗೂ ನಿಲಮ್ಮ ಅವರ ಪುತ್ರ. ಮುಂದೆ ಇವರ ಅತ್ಯುತ್ತಮ ಸೇವೆ ಭಾರತಾಂಭೆಯ ರಕ್ಷಣೆಗೆ ಒದಗಿ ರಾಷ್ಟ್ರ, ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸುವಂತಾಗಬೇಕು…
ಕಾರ್ಕಳ ಆ.6 NEWS DESK : ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕ್ರಿಯೇಟಿವ್ ಕೆಸರ್ಡೊಂಜಿ ದಿನ’ ಹಸಿರಿನೊಡನೆ ಕಲಿಕೆಯ ಕಾರ್ಯಕ್ರಮ ನಡೆಯಿತು. ಹಿರ್ಗಾನ ಗ್ರಾಮದ ಬೆಂಗಾಲ್ ಗದ್ದೆಯಲ್ಲಿ ನಡೆದ ನಡೆದ ಕಾರ್ಯಕ್ರಮವನ್ನು ಬೆಂಗಳೂರು ಫೆಡರೇಷನ್ ಆಫ್ ಕ್ವಾರಿ ಮತ್ತು ಕ್ರಷರ್ ಓನರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷರಾದ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರಕೃತಿಯ ಮಹತ್ವ, ಸಾಂಸ್ಕೃತಿಕ ಪರಂಪರೆಯ ಹಿನ್ನೆಲೆ ಮತ್ತು ಯುವ ಪೀಳಿಗೆಗೆ ಉತ್ತಮವಾದ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಅಗತ್ಯಗಳ ಬಗ್ಗೆ ಜಾಗೃತಿ ಮೂಡಿಸಿದರು. “ಕೆಸರಿನಲ್ಲಿ ಆಡೋದು ಕೇವಲ ಆಟವಲ್ಲ, ಅದು ಒಂದು ಅನುಭವ, ಜೀವನಕ್ಕೆ ಪಾಠ ಕಲಿಸುವ ಕ್ರಿಯೆ”ಎಂದು ತಿಳಿಸಿದರು. ಸಹ ಸಂಸ್ಥಾಪಕರಾದ ಡಾ.ಗಣನಾಥ ಶೆಟ್ಟಿ. ಬಿ. ಪ್ರಾಸ್ತಾವಿಕ ಮಾತನಾಡಿ, ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿರುವ ಉದ್ದೇಶಗಳ ಬಗ್ಗೆ ತಿಳಿಸಿದರು. ಸರ್ವರನ್ನು ಸ್ವಾಗತಿಸಿದರು. ಸ್ಥಳ ದಾನಿ ಯೋಗೀಶ್ ಕಿಣಿ, ಶಿಕ್ಷಕರು, ಸ.ಕಿ.ಪ್ರಾ ಶಾಲೆ ಪಲಾಯಿ ಬಾಕ್ಯಾರು, ತೆಳ್ಳಾರು…
ಮಡಿಕೇರಿ ಆ.6 NEWS DESK : ವಿರಾಜಪೇಟೆ ತಾಲೂಕು ಕೊಟ್ಟೋಳ್ಳಿ ಗ್ರಾಮದ ಕೆ.ಬೋಯಿಕೇರಿ ಆಶ್ರಯ ಕಾಲೋನಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ನಿವಾಸಿಗಳ ಕುಂದು ಕೊರತೆಗಳನ್ನು ಆಲಿಸಿದ ಶಾಸಕರು, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರ ಹಾಗೂ ತಾನು ಜನರ ಏಳಿಗೆಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದು, ಇದರ ಸದುಪಯೋಗವನ್ನು ಕಾಲೋನಿ ನಿವಾಸಿಗಳು ಪಡೆದುಕೊಳ್ಳಬೇಕು ಎಂದು ಹೇಳಿದರು. ಆಶ್ರಯ ಕಾಲೋನಿ ಮಕ್ಕಳೊಂದಿಗೆ ಸಂವಾದ ನಡೆದ ಶಾಸಕರು, ಎಲ್ಲರೂ ವಿದ್ಯಾವಂತರಾಗಿ ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಉತ್ತಮ ಸಾಧನೆ ಮಾಡುವಂತಾಗಲಿ ಎಂದು ಹಾರೈಸಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ನಡಿಕೇರಿಯಂಡ ಮಹೇಶ್, ಪಂಚಾಯಿತಿ ಅಧ್ಯಕ್ಷರಾದ ಜೇಫ್ರಿ ಉತ್ತಪ್ಪ, ಕೆಡಿಪಿ ಸದಸ್ಯರಾದ ಮಾಳೆಟೀರ ಪ್ರಶಾಂತ್, ಪಂಚಾಯತಿ ಸದಸ್ಯರಾದ ಇಸ್ಮಾಯಿಲ್, ಪವಿತ್ರ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮಡಿಕೇರಿ ಆ.6 NEWS DESK : ವಿರಾಜಪೇಟೆ ತಾಲೂಕು ಪೆರಂಬಾಡಿಯಲ್ಲಿರುವ ಎಸ್ ಇ ಎ ಮಹಿಳಾ ಕಾಲೇಜಿನ ನೂತನ ಗ್ರಂಥಾಲಯವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮನುಷ್ಯನ ಜೀವನದಲ್ಲಿ ವಿದ್ಯಾಭ್ಯಾಸ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಸಿಗುವ ಜ್ಞಾನದೊಂದಿಗೆ ಇಂತಹ ಗ್ರಂಥಾಲಯಗಳಲ್ಲಿ ಲಭ್ಯವಿರುವ ಪ್ರಪಂಚದ ಎಲ್ಲಾ ಇತಿಹಾಸ ಹಾಗೂ ವಿದ್ಯಮಾನಗಳ ಪುಸ್ತಕಗಳನ್ನು ಓದುವ ಅಭಿರುಚಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಜೀವನದಲ್ಲಿ ಸಾಧಿಸಲು ಅಥವಾ ತಮ್ಮ ಗುರಿಯನ್ನು ತಲುಪಲು ಅಪಾರ ಜ್ಞಾನದ ಅವಶ್ಯಕತೆ ಇದ್ದು ಇಂತಹ ಜ್ಞಾನವನ್ನು ಪಡೆದುಕೊಳ್ಳುವಲ್ಲಿ ಗ್ರಂಥಾಲಯಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರು. ಈ ಸಂದರ್ಭ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಹನೀಫ್, ತಾಲೂಕು ಘಟಕದ ಅಧ್ಯಕ್ಷರಾದ ರಫೀಕ್, ಪುರಸಭೆ ಸದಸ್ಯರಾದ ಮತೀನ್, ಜಾಲಿಲ್, ಬಶೀರ್ ಹಾಜಿ, ಇಸ್ಮಾಯಿಲ್ ಮುಸ್ಲಿಯಾರ್, ಅರ್ಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಫಾತಿಮಾ, ಹಾಗೂ ಪಕ್ಷದ ಪ್ರಮುಖರು…
ಕುಶಾಲನಗರ ಆ.6 NEWS DESK : ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಪರಿಸರ ಸಂರಕ್ಷಣೆ ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಶಿಕ್ಷಣ ಸಬಲೀಕರಣಕ್ಕೆ ಆದ್ಯತೆ ನೀಡುವುದು ಬಹಳ ಮುಖ್ಯವಾಗಿದೆ’ ಎಂದು ತುಮಕೂರಿನ ಪರಿಸರ ಪ್ರೇಮಿ ಹಾಗೂ ಸೈಕ್ಲಿಸ್ಟ್ ಮಹಾಲಿಂಗಯ್ಯ ಕುಶಾಲನಗರದಲ್ಲಿ ಹೇಳಿದರು. ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಉಳಿವು ಮತ್ತು ಪರಿಸರ ಬಗ್ಗೆ ಜಾಗೃತಿ ಮೂಡಿಸಲು ಸೈಕಲ್ ಮೂಲಕ ರಾಜ್ಯ ಪರ್ಯಟನೆ ಕೈಗೊಂಡಿರುವ ಮಹಾಲಿಂಗಯ್ಯ ಮಾತನಾಡಿ, ನಾವು ಗಿಡ- ಮರಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಯೊಂದಿಗೆ ದೇಶವನ್ನು ಹಸಿರಿನಿಂದ ಸಮೃದ್ಧಗೊಳಿಸಿ ಕಂಗೊಳಿಸುವುದು ಸೇರಿದಂತೆ ರಾಜ್ಯದಲ್ಲಿರುವ ಕನ್ನಡ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು ಮನವಿ ಮಾಡಿದರು. ಬೈಸಿಕಲ್ ಜಾಥಾದ ಮೂಲಕ ರಾಜ್ಯಾದ್ಯಂತ ಸಂಚರಿಸುತ್ತಿರುವ ಮಹಾಲಿಂಗಯ್ಯ ಅವರು ಬುಧವಾರ ಬೆಳಿಗ್ಗೆ ಕೊಡಗು ಸಂಚಾರ ಪೂರೈಸಿ ಮೈಸೂರು ಜಿಲ್ಲೆಗೆ ತೆರಳುವ ಸಂದರ್ಭದಲ್ಲಿ ಕುಶಾಲನಗರದಲ್ಲಿ ಪ್ರವಾಸಿ ಮಂದಿರದ ಬಳಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ನಮ್ಮ ಸುತ್ತಲಿನ ಪರಿಸರ ಸಂರಕ್ಷಣೆ ಜತೆಗೆ ಪ್ರತಿ ಗ್ರಾಮ ಮತ್ತು ಊರುಗಳಲ್ಲಿಯೂ…
ಮಡಿಕೇರಿ ಆ.6 NEWS DESK : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 15.87 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.94 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2191.25 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2308.27 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 26.35 ಮಿ.ಮೀ. ಕಳೆದ ವರ್ಷ ಇದೇ ದಿನ 9.82 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3298.12 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3203.83 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.95 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 18.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1994.20 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2132.80 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.48 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…
ಮಡಿಕೇರಿ ಆ.6 NEWS DESK : ಬಾಣೆಮೊಟ್ಟೆ ಮತ್ತು ರಾಘವೇಂದ್ರ ದೇವಸ್ಥಾನ ಅಂಗನವಾಡಿ ಕೇಂದ್ರಗಳಲ್ಲಿ ಸ್ತನ್ಯಪಾನ ಮತ್ತು ಉಪಶಮನ ಆರೈಕೆ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು. ನಗರಸಭೆ ಸದಸ್ಯ ಎಸ್.ಸಿ.ಸತೀಶ್ ಮಾತನಾಡಿ, ಎರಡು ಕಾರ್ಯಕ್ರಮವು ಉತ್ತಮವಾದ ಸಂದೇಶವನ್ನು ಒಳಗೊಂಡಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಲು ಕರೆ ನೀಡಿದರು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಸ್ತನ್ಯಪಾನ ಸಪ್ತಾಹದ ಮಹತ್ವದ ಬಗ್ಗೆ, ಗರ್ಭಿಣಿ ಬಾಣಂತಿ ಮಗುವಿನ ಆರೈಕೆ ಪೌಷ್ಟಿಕ ಆಹಾರದ ಬಗ್ಗೆ ಹಾಗೂ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ವಿವರವಾಗಿ ತಿಳಿಸಿದರು. ‘ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್’ ನ ಶೋಭಾ ಮಾತನಾಡಿ, ಈ ಸಂಸ್ಥೆ ಸ್ವಯಂ ಸೇವಾ ಸಂಸ್ಥೆಯಾಗಿದ್ದು, 1984 ರಿಂದ ಸರ್ಕಾರ, ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಕಾರ್ಪೋರೇಟ್ ಸಂಸ್ಥೆಗಳು ಹಾಗೂ ಸಮುದಾಯದ ಸಹಭಾಗಿತ್ವದೊಂದಿಗೆ ರಾಜ್ಯಾದ್ಯಾಂತ ಆರೋಗ್ಯ, ಶಿಕ್ಷಣ, ಸಾಮಾಜಿಕ ಆರ್ಥಿಕ ಸಬಲೀಕರಣ ಕಾರ್ಯಕ್ರಮ ಮತ್ತು ತರಬೇತಿ ಹಾಗೂ ಸಂಶೋಧನೆ ಎಂಬ ನಾಲ್ಕು ಕ್ಷೇತ್ರಗಳಲ್ಲಿ…
ನಾಪೋಕ್ಲು ಆ.6 NEWS DESK : ಮೂರ್ನಾಡು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘ ಹಾಗೂ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸ್ವಚ್ಛತಾ ಶ್ರಮದಾನ ನಡೆಯಿತು. ಮೂರ್ನಾಡಿನ ಸರಕಾರಿ ಪ್ರೌಢ ಶಾಲೆಗೆ ಸುಣ ಬಣ್ಣ ಹೊಡೆದು ಆವರಣದಲ್ಲಿದ್ದ ಮರ ಗಿಡಗಳನ್ನು ಕಡಿದು ಸ್ವಚ್ಛಗೊಳಿಸಲಾಯಿತು. ಸರಕಾರಿ ಪ್ರೌಢ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಎಸ್.ಎಂ.ದೇಚಮ್ಮ ಹರ್ಷ ವ್ಯಕ್ತಪಡಿಸಿ, ಸಂಘದಿಂದ ಉತ್ತಮ ಕೆಲಸ ಆಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಾಜಮುಖಿ ಕಾರ್ಯಕ್ರಮ ನಡೆಯುವಂತಾಗಲಿ ಎಂದು ಹಾರೈಸಿದರು. ಕಾಂತೂರು-ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಕುಶನ್ ರೈ ಮತ್ತು ಕೊಡಗು ಜಿಲ್ಲಾ ಶಾಲಾಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸಿ.ರಂಗಧಾಮಪ್ಪ, ತ್ರೀನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಸಜನ್ ಗಣಪತಿ, ಪದಾಧಿಕಾರಿಗಳು, ಸದಸ್ಯರು ಹಾಗೂ ನಿವೃತ್ತ ಶಿಕ್ಷಕ ಕೆ.ಪಿ.ಗುರುರಾಜು, ದೈಹಿಕ ಶಿಕ್ಷಣ ಶಿಕ್ಷಕರಾದ ಪಿ.ಬಿ.ಕಸ್ತೂರಿ, ಸಿಬ್ಬಂದಿಗಳು ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಆ.6 NEWS DESK : ರೋಟರಿ ಮಿಸ್ಟಿಹಿಲ್ಸ್ ಸಂಸ್ಥೆ ಹಾಗೂ ನಾಪೋಕ್ಲು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ಮಿಸ್ಟಿ ಹಿಲ್ಸ್ ಇಂಟರಾಕ್ಟ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ಇಂಟರಾಕ್ಟ್ ಕ್ಲಬ್ ನ ಅಧ್ಯಕ್ಷ ಬಿ.ಜಿ.ಅನಂತಶಯನ ಮಾತನಾಡಿ, ಇಂಟರಾಕ್ಟ್ ಕ್ಲಬ್ ವಿಶ್ವದಾದ್ಯಂತ ಹೆಸರುಗಳಿಸಿ ಸಮಾಜ ಸೇವೆಯನ್ನು ನಡೆಸುತ್ತಾ ಬಂದಿದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಸ್ವಾಮಿ ವಿವೇಕಾನಂದರು ಸಮಾಜದಲ್ಲಿ ಹೇಗೆ ಬದುಕಬೇಕೆಂಬುದನ್ನು ತಿಳಿಸಿದ್ದಾರೆ. ಅವುಗಳನ್ನು ತಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬೇಕೆಂದರು. ರೋಟರಿ ಕ್ಲಬ್ ಸದಸ್ಯ ರೊಟರಿಯನ್ ಮೋಹನ್ ಪ್ರಭು ಮಾತನಾಡಿ, ಸಂಸ್ಥೆಯ ಕಾರ್ಯ ವೈಖರಿಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಬಿ.ಎಂ.ಶಾರದ ಮಾತನಾಡಿ, ಇಂಟರಾಕ್ಟ್ ಕ್ಲಬ್ಬಿನ ಸದಸ್ಯರು ತಮ್ಮ ಕಾರ್ಯವೈಖರಿಗಳ ಮೂಲಕ ಎಲ್ಲರಿಗೂ ಮಾದರಿಯಾಗಿರಬೇಕು ಎಂದರು . ರೋಟರಿ ಕಬ್ಬಿನ ಸದಸ್ಯ ರತ್ನಾಕರ ರೈ ಮಾತನಾಡಿ ಕ್ಲಬ್…






