ಮಡಿಕೇರಿ ಮೇ 19 NEWS DESK : ಅರಣ್ಯ ಹಕ್ಕು ಕಾಯ್ದೆಯಡಿ ಪರಿಶಿಷ್ಟ ಪಂಗಡದ 8 ವೈಯಕ್ತಿಕ ಹಾಗೂ 8 ಸಮುದಾಯ ಹಕ್ಕುಗಳ ಅರ್ಜಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯಲ್ಲಿ ಅನುಮೋದನೆ ದೊರೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ ಪರಿಶಿಷ್ಟ ಪಂಗಡದ 8 ವೈಯಕ್ತಿಕ ಹಾಗೂ 8 ಸಮುದಾಯ ಹಕ್ಕುಗಳಿಗೆ ಅನುಮೋದನೆ ನೀಡಲಾಯಿತು. ಈ ಕುರಿತು ಮಾತನಾಡಿದ ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಪರಿಶಿಷ್ಟ ಪಂಗಡದ 8 ವೈಯಕ್ತಿಕ ಹಾಗೂ 8 ಸಮುದಾಯ ಸಂಪನ್ಮೂಲ ಅರ್ಜಿಗಳಿಗೆ ಉಪ ವಿಭಾಗ ಮಟ್ಟದಲ್ಲಿ ಅನುಮೋದನೆ ದೊರೆತಿದ್ದು, ಜಿಲ್ಲಾ ಮಟ್ಟದಲ್ಲಿ ಅನುಮೋದಿಸಬೇಕಿದೆ ಎಂದು ಕೋರಿದರು. ಪೊನ್ನಂಪೇಟೆ ತಾಲ್ಲೂಕಿನ ಪರಿಶಿಷ್ಟ ಪಂಗಡದ ಕಾಡುಕುರುಬ ಸಮಾಜದ ತಿತಿಮತಿಯ ದೊಡ್ಡರೇಷ್ಮೆ ಹಡ್ಲುವಿನ ಸ್ವಾಮಿ ಬಿ.ಕೆ ಬಿನ್ ಕಾಳ, ನಾಲ್ಕೇರಿ ಗ್ರಾ.ಪಂ.ನ ಗೋಳಿಗದ್ದೆಯ ಪರಿಶಿಷ್ಟ ಪಂಗಡದ ಜೇನುಕುರುಬ ಜೆ.ಬೋಜಿ, ಜೆ.ಆರ್.ಸಣ್ಣಪ್ಪ ಬಿನ್ ಪೌತಿ…
ಲೇಖಕ: admin
ಮಡಿಕೇರಿ ಮೇ 19 NEWS DESK : ಕೊಡಗು ವಿಶ್ವವಿದ್ಯಾಲಯ ಸಂಯೋಜಿತ ಕಾಲೇಜುಗಳಲ್ಲಿ 2025-26ನೇ ಸಾಲಿನಲ್ಲಿ ವಿವಿಧ ಪದವಿ ಕಾರ್ಯಕ್ರಮಗಳಿಗೆ ಪ್ರವೇಶಾತಿ ಆರಂಭಗೊಂಡಿದ್ದು, ಜಿಲ್ಲೆಯ ಮತ್ತು ನೆರೆಯ ಜಿಲ್ಲೆ, ರಾಜ್ಯಗಳ ಆಸಕ್ತ ವಿದ್ಯಾರ್ಥಿಗಳು ಯಾವುದೇ ಗೊಂದಲ ಹಾಗೂ ಆತಂಕವಿಲ್ಲದೆ ಕೊಡಗು ವಿಶ್ವವಿದ್ಯಾಲಯದ ಪದವಿ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯಬಹುದೆಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳು 4ನೇ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿದ್ದು, ವಿಶ್ವವಿದ್ಯಾಲಯದ ಅಸ್ತಿತ್ವ ಹಾಗೂ ಮುಂದುವರೆಕೆಯಲ್ಲಿ ಯಾವುದೇ ಗೊಂದಲವಿಲ್ಲ. ತನ್ನ ಸ್ವಂತ ಸಂಪನ್ಮೂಲದಲ್ಲಿ ವಿಶ್ವವಿದ್ಯಾಲಯದ ಆಡಳಿತವು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಯಾವುದೇ ಪ್ರಸ್ತಾವನೆ ರಾಜ್ಯ ಸರಕಾರದ ಮುಂದೆ ಇಲ್ಲ ಎಂಬುದನ್ನು ಹಲವು ಬಾರಿ ಸಂಬಂಧಿಸಿದ ಸರಕಾರ ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು. ಕೊಡಗು ಜಿಲ್ಲೆ ಚಾರಿತ್ರಿಕವಾಗಿ, ಸಾಂಸ್ಕೃತಿಕವಾಗಿ, ಭೌಗೋಳಿಕವಾಗಿ ವಿಶಿಷ್ಟ ಹಿನ್ನೆಲೆಯುಳ್ಳ ಜಿಲ್ಲೆಯಾಗಿದ್ದು, ಅತೀ ಹೆಚ್ಚು ಮಳೆ ಬೀಳುವ ಗುಡ್ಡಗಾಡು ಪ್ರದೇಶವಾಗಿದೆ.…
ಮಡಿಕೇರಿ ಮೇ 19 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಮೇ 25 ರಂದು ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಉಪಾಧ್ಯಕ್ಷ ಶಂಕರ ನಾರಾಯಣ, ಕೊಡಗು ಜಿಲ್ಲಾ ಕಿವುಡರ ಸಂಘದ ವತಿಯಿಂದ ಕೊಡಗು ಕಿವುಡ ಜಾಗೃತಿ ದಿನವನ್ನು ಆಚರಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಹಣಕಾಸಿನ ನೆರವು ಅಗತ್ಯ ಇದೆ. ಅಂದಾಜು ವೆಚ್ಚ ರೂ.50,000 ಖರ್ಚಗುವ ಸಾಧ್ಯತೆ ಇದೆ ಆದ್ದರಿಂದ ಪ್ರಾಯೋಜಕತ್ವ ಅಥವಾ ದೇಣಿಗೆಯನ್ನು ಪಡೆಯಲು ನಿರ್ಧರಿಸಲಾಗಿದ್ದು, ಆಸಕ್ತರು “KODAGU DISTRICT DEAF ASSOCIATION” -Union Bank of India, SB ಖಾತೆ ಸಂಖ್ಯೆ 520101254608758, IFSC ಕೋಡ್ UBIN 0900087 ಸಹಕರಿಸುವಂತೆ ಮನವಿ ಮಾಡಿದರು. ಸಾರ್ವಜನಿಕರ ಕೊಡುಗೆಯು ಕಾರ್ಯಕ್ರಮವನ್ನು ಆಯೋಜಿಸುವಲ್ಲಿ ಮಾತ್ರವಲ್ಲದೆ ಕೊಡಗಿನಲ್ಲಿ ಕಿವುಡ ಸಮುದಾಯ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿಯೂ ನಮಗೆ ಸಹಾಯ ಮಾಡುತ್ತದೆ. ಸಂಘದ ಉದ್ದೇಶವನ್ನು ಬೆಂಬಲಿಸುವಂತೆ ಶಂಕರ ನಾರಾಯಣ ಕೋರಿದ್ದಾರೆ.
ನಾಪೋಕ್ಲು ಮೇ 19 NEWS DESK : ಕಕ್ಕುಂದ ಕಾಡು ಶ್ರೀ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಶಿಲಾನ್ಯಾಸವನ್ನು ನೆರವೇರಿಸಲಾಯಿತು. ಉಡುಪಿಯ ಸದಾಶಿವ ಉಪಾಧ್ಯಾಯ, ಕಾರ್ಕಳದ ರೋಹಿತ ಹಾಗೂ ಅರ್ಚಕ ಸುಧೀರ್ ಕುಮಾರ ಪೂಜಾ ವಿಧಿ ವಿಧಾನಗಳೊಂದಿಗೆ ಶಿಲನ್ಯಾಸವನ್ನು ನೆರವೇರಿಸಿದರು. ವಾಸ್ತು ವಿನ್ಯಾಸಕ್ಕೆ ಅನುಗುಣವಾಗಿ ಜೀರ್ಣೋದ್ಧಾರ ಮಾಡಿ ದೇವರ ಅನುಗ್ರಹ ಪಡೆಯುವ ಉದ್ದೇಶದಿಂದ ಕಕ್ಕುಂದ ಕಾಡಿನ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯ ತತ್ಪರವಾಗಿದೆ. ತೀರ್ಥರೂಪಿಣಿಯಾದ ಕಾವೇರಿ ನದಿಯು ಹರಿಯುವ ನಾಪೋಕ್ಲು ಸಮೀಪದ ಕಕ್ಕುಂದಕಾಡು ಎಂಬಲ್ಲಿ 25 ವರ್ಷಗಳ ಹಿಂದೆ ಸತ್ಯನಾರಾಯಣ ಪೂಜೆಯೊಂದಿಗೆ ಆರಂಭವಾದ ಈ ಕ್ಷೇತ್ರ ನಂತರ ಸಂಕೀರ್ಣವಾದ ಸ್ಥಳದಲ್ಲಿ ವೆಂಕಟೇಶ್ವರ ದೇವರು, ಗಣಪತಿ ಹಾಗೂ ನವಗ್ರಹ ದೇವತೆಗಳ ಆರಾಧನೆ ನಡೆಯುತ್ತಿದೆ. ಈ ದೇವಾಲಯದ ನಿರ್ಮಾಣ ಕಾಲದಲ್ಲಿ ತತ್ಕಾಲಕ್ಕೆ ಬೇಕಾದ ಕನಿಷ್ಠ ಅವಶ್ಯಕತೆ ಯೋಜನೆಯಲ್ಲಿ ಗರ್ಭಗುಡಿ, ತೀರ್ಥ ಮಂಟಪ, ಗಣಪತಿ ದೇವರಗುಡಿ ಇತ್ಯಾದಿಗಳನ್ನು ನಿರ್ವಹಿಸಿದ್ದು ಇದು ದೇವಾಲಯಗಳ ವಾಸ್ತು ವಿನ್ಯಾಸಕ್ಕೆ ಹೊರತಾಗಿದೆ. ಅಂತೆಯೇ ವಾಸ್ತು ತಜ್ಞ ಉಡುಪಿ…
*ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ – 2025* *ನೇರವಾಗಿ ಆನ್ ಲೈನ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳಲು ಲಿಂಕ್ ಈ ಕೆಳಗಿನಂತಿದೆ :* https://schedulecastesurvey.karnataka.gov.in/selfdeclaration *ದಯವಿಟ್ಟು ಮುದ್ರಿಸಿ ಹಂಚಿಕೆ ಮಾಡಿ ಮತ್ತು ಎಲ್ಲೆಡೆ ಪ್ರಚುರಪಡಿಸಿ.*
ಮಡಿಕೇರಿ ಮೇ 19 NEWS DESK : ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದಕ್ಕಾಗಿ ಮಿತಿ ಮೀರಿ ಸಾಲ ಮಾಡಿ ವಿವಿಧ ಕ್ಷೇತ್ರಗಳನ್ನು ದಿವಾಳಿ ಮಾಡಿರುವುದೇ ರಾಜ್ಯ ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆಯಾಗಿದೆ ಎಂದು ಮೈಸೂರು- ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2013 ರಿಂದ 2018 ರವರೆಗೆ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರು ಅತಿಹೆಚ್ಚು ಸಾಲ ಮಾಡಿದ್ದರು. ಇದೀಗ 2023 ರಲ್ಲಿ ಅಧಿಕಾರಕ್ಕೆ ಬಂದಿರುವ ಅವರು ಈ ಹಿಂದಿನ ಸಾಲವನ್ನು ಮೀರಿ ಸಾಲವನ್ನು ಮಾಡಿದ್ದು, ರಾಜ್ಯದ ಪ್ರತಿ ವ್ಯಕ್ತಿಯ ಮೇಲೆ ತಲಾ 12 ಸಾವಿರ ರೂ. ಸಾಲದ ಹೊರೆ ಇದೆ ಎಂದು ಟೀಕಿಸಿದರು. ಮೇ 20 ರಂದು ರಾಜ್ಯ ಸರ್ಕಾರಕ್ಕೆ ಎರಡು ವರ್ಷಗಳು ತುಂಬಿತು ಎನ್ನುವ ಕಾರಣಕ್ಕಾಗಿ ಕಾಂಗ್ರೆಸ್ ಸಾಧನಾ ಸಮಾವೇಶ ಮಾಡಲು ಮುಂದಾಗಿದೆ. ಯಾವ ಸಾಧನೆಯನ್ನು ಜನರ ಮುಂದಿಟ್ಟು ಸಮಾವೇಶ ನಡೆಸುತ್ತೀರಿ ಎಂದು ಪ್ರಶ್ನಿಸಿದ ಪ್ರತಾಪ್ ಸಿಂಹ ಅನ್ನಭಾಗ್ಯದ ಅಕ್ಕಿಯನ್ನು ಕೇಂದ್ರದಿಂದ…
ಮಡಿಕೇರಿ ಮೇ 19 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ 2024-25ನೇ ಸಾಲಿನ ವಾರ್ಷಿಕೋತ್ಸವವು ಮೇ 20 ರಂದು ನಡೆಯಲಿದೆ. ಅಂದು ಪೂರ್ವಾಹ್ನ 10.30 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಅಲೂರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪಾಲ್ಗೊಳ್ಳಲಿದ್ದು, ಕೊಡಗು ವಿಶ್ವವಿದ್ಯಾಲಯದ ಕುಲಸಚಿವ (ಪರೀಕ್ಷಾಂಗ) ಪ್ರೊ.ಎಂ.ಸುರೇಶ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ಬಿ.ರಾಘವ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಪೋಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಜಯಂತಿ ರೈ ಘನ ಉಪಸ್ಥಿತರಿರಲಿದ್ದಾರೆ.
ಮಡಿಕೇರಿ ಮೇ 19 NEWS DESK : ಹುದಿಕೇರಿಯಲ್ಲಿ ನಡೆಯುತ್ತಿರುವ ಕೊಡವ ಕೌಟುಂಬಿಕ ಕ್ರಿಕೆಟ್ ನಮ್ಮೆಯ ಫೈನಲ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಚೆಕ್ಕೇರ ಕುಟುಂಬಸ್ಥರು ಹಾಗೂ ಪ್ರಮುಖರು ಉಪಸ್ಥಿತರಿದ್ದರು. ತಮ್ಮ ಅದ್ಭುತ ಬ್ಯಾಟಿಂಗ್ ಶೈಲಿ ಹಾಗೂ ಆಕರ್ಷಕ ಬೌಲಿಂಗ್ ಮೂಲಕ ಶಾಸಕರು ನೆರೆದ ಪ್ರೇಕ್ಷಕರ ಗಮನ ಸೆಳೆದರು. ಪುರುಷರ ವಿಭಾಗದಲ್ಲಿ ಅಚ್ಚಪಂಡ ಹಾಗೂ ನೆರವಂಡ, ಮಹಿಳಾ ವಿಭಾಗದಲ್ಲಿ ಓಡಿಯಂಡ ಮತ್ತು ಅರಮಣ ಮಾಡ ತಂಡಗಳ ನಡುವೆ ಹಣಾಹಣಿ ನಡೆಯಲಿದೆ.
ವಿರಾಜಪೇಟೆ ಮೇ 19 NEWS DESK : ವಿರಾಜಪೇಟೆಯ ಪೆರುಂಬಾಡಿ ಬಳಿ ಉನ್ನತೀಕರಣಗೊಳ್ಳುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕದ ಕಾಮಗಾರಿ ಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪರಿಶೀಲಿಸಿದರು. ಕಾಮಗಾರಿಯ ಕುರಿತು ವಿವರಣೆ ನೀಡಿದ ಶಾಸಕರು ತಾನು ಹಾಗೂ ಇತರ ಜನಪ್ರತಿನಿಧಿಗಳು ಚರ್ಚೆ ಮಾಡಿ ಈ ಕಾಮಗಾರಿ ತರುವಲ್ಲಿ ಯಶಸ್ವಿಯಾಗಿದ್ದು, ಸುಮಾರು 34 ಸಾವಿರಕ್ಕೂ ಅಧಿಕ ಮೆಟ್ರಿಕ್ ಟನ್ ಘನತ್ಯಾಜ್ಯವನ್ನು ವಿಲೇವಾರಿ ಮಾಡುವಲ್ಲಿ ಈ ಘಟಕ ಸಹಕಾರಿಯಾಗಲಿದೆ. ಮಾತ್ರವಲ್ಲ ದೀರ್ಘಕಾಲದ ಘನತಾಜ್ಯ ಸಮಸ್ಯೆಗೆ ಇದು ಪರಿಹಾರ ಒದಗಿಸಲಿದೆ ಎಂದು ಹೇಳಿದರು. ಈ ಘಟಕವು ಮೂರು ಹಂತದಲ್ಲಿ ಕಾರ್ಯ ನಿರ್ವಹಿಸಲಿದ್ದು, ಘನತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಇದು ಶಾಶ್ವತ ಪರಿಹಾರ ಒದಗಿಸಲಿದೆ ಎಂದು ಹೇಳಿದರು. ಎಲ್ಲರೂ ತಮ್ಮ ಮನೆಗಳಲ್ಲಿಯೇ ಒಣಕಸ ಮತ್ತು ಹಸಿ ಕಸವನ್ನು ಪ್ರತ್ಯೇಕಿಸಿ ನೀಡಿದಲ್ಲಿ ಅತ್ಯಂತ ಸುಲಭವಾಗಲಿದೆ ಮತ್ತು ಸಾರ್ವಜನಿಕರು ಶುಚಿತ್ವದ ಬಗ್ಗೆ ಜಾಗೃತರಾಗಿ ನಮ್ಮ ಈ ಪ್ರಯತ್ನದಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದರು. ಗುತ್ತಿಗೆದಾರರು ಮಳೆಗಾಲ ಪ್ರಾರಂಭವಾಗುವುದಕ್ಕೂ…
ಮಡಿಕೇರಿ ಮೇ 19 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಖಾಸಗಿ ಕಂಪನಿಯಾದ ಕಲ್ಯಾಣಿ ಮೋಟಾರ್ಸ್ ಇವರು ತಮ್ಮಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಕಾರ್ಯಕ್ರಮವು ಮೇ, 21 ರಂದು ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆ ಕಲ್ಯಾಣಿ ಮೋಟರ್ಸ್ ನಲ್ಲಿ ನಡೆಯಲಿದೆ. ಎಸ್ಎಸ್ಎಲ್ಸಿ, ಪಿಯುಸಿ ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ 18 ರಿಂದ 40 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, ಅಭ್ಯರ್ಥಿಗಳು 1 ಸೆಟ್ ರೆಸ್ಯೂಮ್ಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಡಿಕೇರಿ ದೂ.ಸಂ. 8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ ತಿಳಿಸಿದ್ದಾರೆ.






