ಲೇಖಕ: admin

ಕುಶಾಲನಗರ ಜು.11 NEWS DESK : ಹನ್ನೆರಡನೇ ಶತಮಾನದಲ್ಲಿ ಬೇರು ಬಿಟ್ಟಿದ್ದ ಮೇಲು ಕೀಳು, ವರ್ಣ ಬೇಧ, ವರ್ಗ ಬೇಧ, ಅಸಮಾನತೆ, ಬಡವ – ಬಲ್ಲಿದ, ಜಾತಿ ಪದ್ಧತಿಯ ನಿವಾರಣೆಯ ಭಾಗವಾಗಿ ಅನುಭವ ಮಂಟಪದಲ್ಲಿ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿದ್ದ ಹಡಪದ ಅಪ್ಪಣ್ಣ ಅವರನ್ನು ನೇಮಿಸುವ ಮೂಲಕ ಬಸವಣ್ಣನವರ ಬಳಿ ಬರುವ ಎಲ್ಲರೂ ಹಡಪದ ಅಪ್ಪಣ್ಣ ನವರ ಮೂಲಕವೇ ಭೇಟಿಯಾಗಬೇಕೆಂಬ ಆಶಯಕ್ಕೆ ಅನುಗುಣವಾಗಿ ಸತ್ಯ ಶುದ್ದ ಕಾಯಕ ಪ್ರಜ್ಞೆಯ ಹಡಪದ ಅಪ್ಪಣ್ಣ 114 ಕ್ಕೂ ಹೆಚ್ಚು ವಚನಗಳನ್ನು ರಚಿಸುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು ಎಂದು ಕೊಡಗು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹೇಂದ್ರಕುಮಾರ್ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಳ ಜಾತಿಯವರನ್ನು ಕೀಳಾಗಿ ಕಾಣುತ್ತಾ ಮೂಢನಂಬಿಕೆ ಹಾಗೂ ಶೋಷಣೆಯನ್ನು ಬಿತ್ತುವ…

Read More

ಭಾಗಮಂಡಲ ಜು.11 NEWS DESK : ಮಡಿಕೇರಿಯಿಂದ ತಲಕಾವೇರಿ ಸಂಚಾರಕ್ಕೆ ಉತ್ತಮ ರಸ್ತೆಗಳ ನಿರ್ಮಾಣವಾಗಬೇಕಾಗಿದೆ. ಕುಂದಚೇರಿ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಕೊಡಗು, ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಕುಂದಚೇರಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ  ಶರತ್ ಪದಕಲ್ಲು ಮನವಿ ಸಲ್ಲಿಸಿದರು. ಕುಂದಚೇರಿ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಗ್ರಾಮದ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ವಿಧಾನ ಸಭಾ ಅಧ್ಯಕ್ಷ ಕೆ.ಜಿ ಬೋಪಯ್ಯ, ಮಾಜಿ ಸಚಿವ ಅಪ್ಪಚ್ಚು ರಂಜನ್, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗೇಶ್ ಕುಂದಾಲ್ಪಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್, ಅಶ್ವಿನ್ ಕಾಂಗಿರ, ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ, ಮನುಮುತ್ತಪ್ಪ, ವಿ.ಎಸ್.ಎಸ್.ಎನ್ ಅಧ್ಯಕ್ಷ  ಶ್ರೀಧರ್, ನಿರ್ದೇಶಕರುಗಳು, ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು,  ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಇದ್ದರು. ಈ ಸಂದರ್ಭ ಸಿಂಗತೂರು ಗ್ರಾಮದ ಬಹು ವರ್ಷಗಳ ಬೇಡಿಕೆಯ ಮಹಾವಿಷ್ಣು ದೇವಸ್ಥಾನದ ಜೀರ್ಣೋದ್ಧಾರದ ವ್ಯವಸ್ಥೆಯನ್ನುವ ವೀಕ್ಷಿಸಿದ ಸಂಸದರು, ಜೀರ್ಣೋದ್ಧಾರ…

Read More

ಮಡಿಕೇರಿ ಜು.11 NEWS DESK : ಭಾರತ ಸರ್ಕಾರದ ಕೇಂದ್ರೀಯ ರೇಷ್ಮೆ ಮಂಡಳಿಗೆ 2024-25ನೇ ಸಾಲಿನ ನೇಮಕಾತಿ ಅಧಿಸೂಚನೆಗನ್ವಯ ಮಗ್ಗುಲ ಗ್ರಾಮದ ಕೆ.ಬಿ.ಭರತ್ ವಿಜ್ಞಾನಿಯಾಗಿ ಆಯ್ಕೆಯಾಗಿದ್ದಾರೆ. ಇವರು ಪ್ರಸ್ತುತ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ರೇಷ್ಮೆ ಕೃಷಿಯಲ್ಲಿ ಎಂ.ಎಸ್ಸಿ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕಗಳನ್ನು ಪಡೆದು, ಆಂಧ್ರ ಪ್ರದೇಶದ ರಾಜ ಮಂಡ್ರಿಯ ಐ ಟಿ ಸಿ ಲಿಮಿಟೆಡ್ ಅಗ್ರಿ ಬಿಸಿನೆಸ್ ಡಿವಿಷನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಭರತ್ ಮಗ್ಗುಲ ಗ್ರಾಮದ ದಿ. ಕುಪ್ಪಚ್ಚಿರ ಭೀಮಯ್ಯ ಮತ್ತು ಕವಿತಾ ದಂಪತಿಯ ಪುತ್ರ.

Read More

ಮಡಿಕೇರಿ ಜು.11 NEWS DESK : ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಬಂಧವು ಸಂವೇದನಾಶೀಲವಾದುದು, ಮನುಷ್ಯನಿಗಿರುವಷ್ಟೇ ಸ್ವಾತಂತ್ರ್ಯ ಮತ್ತು ಸಮಾನ ಹಕ್ಕುಗಳು ಈ ಭೂಮಿಯಲ್ಲಿ ಜೀವಿಸುತ್ತಿರುವ ಪ್ರಾಣಿ ಸಂಕುಲಕ್ಕೂ ಇದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪೆÇ್ರ. ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಿಸಿದರು. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್, ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ ಕೊಡಗು ಹಾಗೂ ಕೊಡಗು ವಿಶ್ವವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಕೇಂದ್ರ ಆವರಣದಲ್ಲಿ “ವಿಶ್ವ ಪ್ರಾಣಿ-ಜನ್ಯರೋಗಗಳ” ದಿನದ ಅಂಗವಾಗಿ “ವನ್ಯಜೀವಿ: ಪ್ರಾಣಿಜನ್ಯರೋಗಗಳು” ವಿಷಯದ ಕುರಿತು ನಡೆದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಾಣಿಗಳು ಮತ್ತು ಮನುಷ್ಯರ ನಡುವೆ ಹರಡುವ ಪ್ರಾಣಿಜನ್ಯ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತೀ ವರ್ಷ ಜು.6 ರಂದು ಪ್ರಾಣಿಜನ್ಯ ದಿನವನ್ನು ಆಚರಣೆ ಮಾಡಲಾಗುತ್ತದೆ. ಪಶುವೈದ್ಯಕೀಯ ವೃತ್ತಿಯು ಪ್ರಾಣಿಗಳ ಆರೋಗ್ಯ ಮತ್ತು ಯೋಗಕ್ಷೇಮ ಹಾಗೂ ಸಾರ್ವಜನಿಕ ಆರೋಗ್ಯದ ರಕ್ಷಣೆಗೆ ಮೀಸಲಾಗಿರುವ ಒಂದು ಉದಾತ್ತ…

Read More

ಮಡಿಕೇರಿ ಜು.11 NEWS DESK : ಕುಶಾಲನಗರದ ಅತ್ತೂರು ಜ್ಞಾನಗಂಗಾ ವಸತಿಶಾಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಮಂತ್ರಿಮಂಡಲದ ಪದಗ್ರಹಣ ಹಾಗೂ ಗುರು ಪೂರ್ಣಿಮಾ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಶಾಲಾ ಚುನಾವಣೆಯ ಮೂಲಕ ಆಯ್ಕೆಯಾದ ಶಾಲಾ ನಾಯಕಿ 10ನೇ ತರಗತಿಯ ಟಿ.ಎಸ್.ಶ್ರೀನಿಧಿ ಹಾಗೂ ಉಪನಾಯಕ 9ನೇ ತರಗತಿಯ ಎಂ.ಶಶಾಂಕ್ ಸೇರಿದಂತೆ ಮಂತ್ರಿಮಂಡಲದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರಾದ ಎಸ್.ಎಂ.ಸತ್ಯಸುಲೋಚನ ಪ್ರಮಾಣ ವಚನ ಬೋಧಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಟಿ.ಕೆ.ಸುಧೀರ್ ಅವರು ನಾಯಕರಾಗಿ ಆಯ್ಕೆಯಾದವರಿಗೆ ಜವಾಬ್ದಾರಿಗಳು ಹೆಚ್ಚುತ್ತದೆ, ಪ್ರತಿಯೊಬ್ಬರು ತಮ್ಮ ಕರ್ತವ್ಯವನ್ನು ಶಿಸ್ತಿನಿಂದ ಪಾಲಿಸಬೇಕು. ಅಲ್ಲದೆ ನಾಯಕರಿಗೆ ಇರಬೇಕಾದ ಜವಾಬ್ದಾರಿಗಳೇನು ಎಂದು ತಿಳಿದುಕೊಂಡು ಅದನ್ನು ಪಾಲಿಸಬೇಕು ಎಂದು ಕರೆ ನೀಡಿದರು. ಪರಿಶ್ರಮ, ಪ್ರಾಮಾಣಿಕತೆ, ಕರ್ತವ್ಯನಿಷ್ಠೆಯನ್ನು ಅಳವಡಿಸಿಕೊಂಡರೆ ಉತ್ತಮ ನಾಯಕನಾಗಲು ಸಾಧ್ಯವೆಂದು ಅಭಿಪ್ರಾಯಪಟ್ಟ ಅವರು, ಆಯ್ಕೆಯಾದವರೆಲ್ಲರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಎಂದು ಶುಭ ಕೋರಿದರು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಬಿ.ಎಸ್.ನಿಂಗಪ್ಪ ಅವರು ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕ್ತಿ…

Read More

ಮಡಿಕೇರಿ ಜು.11 NEWS DESK : ಭಾಗಮಂಡಲ ಕೆವಿಜಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023-25ನೇ ಸಾಲಿನ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಸುಳ್ಯ ಕೆವಿಜಿ ಐಟಿಐ ನಿವೃತ್ತ ಪ್ರಾಂಶುಪಾಲ ಚಿದಾನಂದ ಗೌಡ ಬಾಳಿಲ, ವಿದ್ಯಾರ್ಥಿಗಳಿಗೆ ಸಂಸ್ಥೆ ಬೆಳೆದು ಬಂದ ಬಗ್ಗೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳು ಗೌರವಯುತವಾಗಿ ಬಾಳಲು ಅನುಸರಿಸಬೇಕಾಗಿರುವ ಯಶಸ್ಸಿನ ಸೂತ್ರದ ಬಗ್ಗೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಕೆ.ವಿ.ಶ್ರೀಕಾಂತ್, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು. ಈ ಸಂದರ್ಭ ಪ್ರತಿಯೊಂದು ವಿಭಾಗದ ಒಬ್ಬ ಅತ್ಯುತ್ತಮ ವಿದ್ಯಾರ್ಥಿಯನ್ನು ಗೌರವಿಸಲಾಯಿತು. ಕಚೇರಿ ಅಧೀಕ್ಷಕ ಸಿ.ಕೆ.ವಿನೋದ್  ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಿರಿಯ ತರಬೇತಿ ಅಧಿಕಾರಿ ಪುನೀತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಿರಿಯ ತರಬೇತಿ ಅಧಿಕಾರಿ ಕೃಷ್ಣಮೂರ್ತಿ ಜೆ.ಸ್ವಾಗತಿಸಿದರು ಮತ್ತು ಕೆ.ಜಿ.ಜಯಪ್ರಕಾಶ್ ವಂದಿಸಿದರು.

Read More

ಮಡಿಕೇರಿ ಜು.11 NEWS DESK : ಕೊಡಗಿನ ಕಾಫಿ ಬೆಳೆಗಾರರಿಗೆ ಹಾಗೂ ರೈತರಿಗೆ ಬೆಳೆಹಾನಿ ಪರಿಹಾರದ ಹಣವನ್ನು ಬಿಡುಗಡೆ ಮಾಡಲು ಶಾಸಕದ್ವಯರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾಫಿ ಮಂಡಳಿಯ ಸದಸ್ಯ ತಳೂರು ಎ.ಕಿಶೋರ್ ಕುಮಾರ್ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇತ್ತೀಚೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಬೆಳೆಗಾರರ ನಿಯೋಗದೊಂದಿಗೆ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜೆ.ದಿನೇಶ್ ಅವರನ್ನು ಭೇಟಿಯಾಗಿ ಬೆಳೆಗಾರರು ಅನುಭವಿಸುತ್ತಿರುವ ಕಷ್ಟನಷ್ಟದ ಬಗ್ಗೆ ಮನವಿ ಸಲ್ಲಿಸಿರುವುದು ಹಾಸ್ಯಾಸ್ಪದವಾಗಿದೆ. ಶಾಸಕರು ಮನವಿ ಸಲ್ಲಿಸುವುದನ್ನು ಬಿಟ್ಟು ಸರಕಾರದ ಮೇಲೆ ಒತ್ತಡ ಹೇರಿ ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ. ಇದೇ ಜು.3ರಂದು ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜೆ.ದಿನೇಶ್ ಅವರು ಚಿಕ್ಕಮಗಳೂರು, ಉಡುಪಿ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ, ಕಾಫಿ ಮಂಡಳಿಯ ಸದಸ್ಯರು ಹಾಗೂ ಮಂಡಳಿಯ ಸಿ.ಇ.ಒ ಕುರ್ಮರಾವ್ ಅವರೊಂದಿಗೆ ದೆಹಲಿಗೆ ತೆರಳಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ…

Read More

ಮಡಿಕೇರಿ ಜು.11 NEWS DESK  : ಕೊಡಗು ಜಿಲ್ಲಾ ಮೀನುಗಾರಿಕೆ ಇಲಾಖೆ ಆಶ್ರಯದಲ್ಲಿ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ ಕಾರ್ಯಕ್ರಮ ಕುಶಾಲನಗರದಲ್ಲಿ ನಡೆಯಿತು. ಇಂದಿರಾ ಬಡಾವಣೆಯಲ್ಲಿರುವ ಕೇರಳ ಸಮಾಜ ಕಟ್ಟಡದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರ ಉದ್ಘಾಟಿಸಿದರು. ಮೀನು ವಿಜ್ಞಾನಿ ಹೀರಾಲಾಲ್ ಚೌಧರಿ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿ ನಮಿಸಿದರು. ಮೀನು ತೊಟ್ಟಿಗೆ ಅಲಂಕಾರಿಕ ಮೀನುಗಳನ್ನು ಬಿಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅತಿಥಿಯಾಗಿ ಪಾಲ್ಗೊಂಡಿದ್ದ ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿದರು. ಬದುಕನ್ನು‌ ಕಟ್ಟಿಕೊಡುವ ಉದ್ಯಮವಾಗಿ ಮೀನು ಕೃಷಿ ಕ್ಷೇತ್ರ ಬೃಹದಾಕಾರವಾಗಿ ಬೆಳೆದುನಿಂತಿದೆ. ಬದಕನ್ನು ಹಸನಗೊಳಿಸುವುದರೊಂದಿಗೆ ರಾಜ್ಯ ಹಾಗೂ ರಾಷ್ಟ್ರದ ಅಭಿವೃದ್ಧಿಯಲ್ಲಿ‌ ಕೂಡ ತನ್ನದೇ ಆದ ಕೊಡುಗೆ ನೀಡುತ್ತಿದೆ. ಮನೆಯಂಗಳ, ಕೃಷಿ ಭೂಮಿಯಲ್ಲಿ ಮೀನು ಉತ್ಪಾದನೆ ಉದ್ದಿಮೆ ಸಾಹಸದೊಂದಿಗೆ ಲಾಭದಾಯಕ ಕೂಡ ಎಂದ ಅವರು, ಮೀನು ಕೃಷಿಯಲ್ಲಿ ತೊಡಗುವವರೊಂದಿಗೆ ಇಲಾಖೆ ಹಾಗೂ ಸರಕಾರ ಒತ್ತಾಸೆಯಾಗಿ ಸದಾ ಇರಬೇಕಿದೆ…

Read More

ಸೋಮವಾರಪೇಟೆ ಜು.11 NEWS DESK : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಸೋಮವಾರಪೇಟೆ ತಾಲೂಕಿನ ಸರಕಾರಿ ಶಾಲೆಗಳಿಗೆ ನಿಯೋಜಿಸಲಾದ ಜ್ಞಾನದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರವನ್ನು ಯೋಜನಾ ಕಛೇರಿಯಲ್ಲಿ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಹಾಗೂ ತಾಲೂಕಿನ ಯೋಜನಾಧಿಕಾರಿಗಳಾದ  ಹನುಮಂತಪ್ಪ ಅಂಗಡಿ ಅವರು ವಿತರಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ನಿರ್ದೇಶಕಿ ಲೀಲಾವತಿ, ಕ್ಷೇತ್ರದಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದು, ಶಾಲೆಗಳಿಗೆ ಪೀಠೋಪಕರಣ ಒದಗಿಸಲಾಗಿದೆ, ಜ್ಞಾನದೀಪ ಶಿಕ್ಷಕರ ನೇಮಕ ಮಾಡುವುದು, ಉನ್ನತ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯ ವೇತನ ಪಾವತಿ ಮೂಲಕ ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ನೆರವಾಗಿದೆ ಹಾಗೂ ಕೇತ್ರದ ಹಲವಾರು ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳ ಕೊಡುಗೆಯ ಬಗ್ಗೆ ಮಾಹಿತಿ ನೀಡಿದರು. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ 1 ಶಾಲೆಗೆ, ವಿರಾಜಪೇಟೆ ತಾಲೂಕಿನ 8 ಶಾಲೆಗಳಿಗೆ ಹಾಗೂ ಸೋಮವಾರಪೇಟೆ ತಾಲೂಕಿನ 6 ಶಾಲೆಗಗಳಿಗೆ ಒಟ್ಟು 15 ಶಾಲೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಜ್ಞಾನದೀಪ ಶಿಕ್ಷಕರ ನೇಮಕಾತಿಯಾಗಿದೆ ಎಂದು…

Read More

ಸೋಮವಾರಪೇಟೆ ಜು.11 NEWS DESK : ಕೊಡ್ಲಿಪೇಟೆಯ ಎಸ್.ಕೆ.ಎಸ್ ಕಲ್ಲುಮಠ ಶಾಲೆಯಲ್ಲಿ ಗುರುಪೂರ್ಣಿಮೆಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ  ಶ್ರೀ ಶ್ರೀ ಮಹಾಂತ ಸ್ವಾಮೀಜಿ ಅವರ ನೇತೃತ್ವದಲ್ಲಿ ಶಾರದಾಂಬೆಗೆ ಪೂಜೆ ಸಲ್ಲಿಸಿ, ಶಾಲೆಗೆ ನೂತನವಾಗಿ ದಾಖಲಾದ ಎಲ್.ಕೆ.ಜಿ ಮಕ್ಕಳಿಗೆ ಅಕ್ಷರಾಭ್ಯಾಸ ನೆರವೇರಿತು. ನಂತರ ಮಾತನಾಡಿದ ಶ್ರೀ ಮಹಾಂತ ಸ್ವಾಮೀಜಿ ಮಕ್ಕಳ ಭವಿಷ್ಯ ಉಜ್ವಲವಾಗಲೆಂದು ಆಶೀರ್ವದಿಸಿದರು. ಸಂಸ್ಥೆಯ ಮುಖ್ಯೋಪಾಧ್ಯರಾದ ಹೆಚ್.ಎಂ.ಅಭಿಲಾಶ್ ಮಾತನಾಡಿದರು. ಶಾಲೆಯ ಭೋದಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 7ನೇ ತರಗತಿ ವಿದ್ಯಾರ್ಥಿನಿ  ಅಮೃತ ಪ್ರಾರ್ಥನೆ ಮಾಡಿದರು. ಶಿಕ್ಷಕಿ ಕೆ.ಜೆ.ಶೀಲಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸೌಭಾಗ್ಯ ಸ್ವಾಗತಿಸಿ, ವಂದಿಸಿದರು.

Read More