ಮಡಿಕೇರಿ ಮೇ 17 NEWS DESK : ನಗರದ ಮಹಾಬೋಧಿ ಪತ್ತಿನ ಸಹಕಾರ ಸಂಘದ ವತಿಯಿಂದ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ನಗರದ ಕಾಫಿಕೃಪಾ ಕಟ್ಟಡದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಸಂಘದ ಅಧ್ಯಕ್ಷರಾದ ಎಸ್. ಸಿ. ಸತೀಶ್, ಅಂಬೇಡ್ಕರ್ ಅವರ ಜೀವನ ಚರಿತ್ರೆ, ಅವರು ಅನುಭವಿಸಿದ ಕಷ್ಟ, ದಲಿತರ ಏಳಿಗೆಗೆ ಕೈಗೊಂಡ ಕಾರ್ಯ, ಸಂವಿಧಾನ ರಚನೆಯ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಹೆಚ್.ಎಸ್.ಗಣಪತಿ, ನಿರ್ದೇಶಕರಾದ ಹೆಚ್.ಎಸ್ ಪ್ರತಾಪ್, ಜಯಪ್ಪ ಹಾನಗಲ್, ಶಾರದ ನಾಗರಾಜ್, ಗೀತಾ ಜನಾರ್ಧನ್, ಗಾಯತ್ರಿ ನರಸಿಂಹ, ರಾಜು, ದೇವಕಿ ಉಪಸ್ಥಿತರಿದ್ದರು.
ಲೇಖಕ: admin
ವಿರಾಜಪೇಟೆ ಮೇ 17 NEWS DESK : ಭಗವದ್ಗೀತೆಯಲ್ಲಿನ ಜೀವನ ಮೌಲ್ಯ ಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ಭೂ ಸೇನೆಯ ನಿವೃತ್ತ ಕ್ಯಾಪ್ಟನ್ ಬಿ.ವಿ.ಭವಾನಿ ಶಂಕರ್ ಬೋರ್ಕಾರ್ ಅಭಿಪ್ರಾಯಪಟ್ಟರು. ಬೇಟೋಳಿ ರಾಮನಗರದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಸಭಾಂಗಣದಲ್ಲಿ ಜರುಗಿದ ಕೊಡಗು ಬಾಲವಲೀಕಾರ್ ರಾಜಾಪುರ ಸಾರಸ್ವತ ಬ್ರಾಹ್ಮಣ ಸಮಾಜದ ಮಕ್ಕಳ ವೈದಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಏನನ್ನಾದರೂ ಕಲಿಯಬೇಕಾದರೆ ಮೊದಲು ಆತನಲ್ಲಿ ಶ್ರದ್ಧೆ ಹಾಗೂ ಕಲಿಯುವ ಆಸಕ್ತಿ ಇರಬೇಕು. ಇದರೊಂದಿಗೆ ಕಲಿಯುವ ಸಂದರ್ಭದಲ್ಲಿ ಏಕಾಗ್ರತೆಯು ಅತಿ ಮುಖ್ಯವಾಗಿದ್ದು. ಗುರುಗಳು ಬೋಧಿಸಿದ್ದನ್ನು ಉತ್ತಮ ರೀತಿಯಲ್ಲಿ ಶ್ರವಣ ಮಾಡಿಕೊಳ್ಳಬೇಕು. ಶ್ರವಣ ಮಾಡಿಕೊಂಡದ್ದನ್ನು ಮನದಲ್ಲಿ ಮೇಲಿಂದ ಮೇಲೆ ಮನನ ಮಾಡಿಕೊಳ್ಳಬೇಕು. ಮನನ ಮಾಡಿಕೊಂಡ ನಂತರ ಅದನ್ನು ಅನುಷ್ಠಾನಗೊಳಿಸಬೇಕು. ಈ ರೀತಿ ಕಲಿತಂತಹ ಸಂದರ್ಭದಲ್ಲಿ ಮಾತ್ರ ಕಲಿತಂತಹ ವಿಚಾರವೂ ನಮ್ಮಲ್ಲಿ ಉಳಿಯುತ್ತದೆ. ಕಲಿಕೆಯ ಮೊದಲ ಹಂತವೇ ಏಕಾಗ್ರತೆ. ಮನಸ್ಸು ಚಂಚಲವಾಗಿದ್ದರೆ ಏನನ್ನು ಕಲಿಯಲು ಸಾಧ್ಯವಿಲ್ಲ.…
ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ದೇವಸ್ಥಾನವು ಕರ್ನಾಟಕದ ಹಾಸನ ಜಿಲ್ಲೆಯ ಅರಸಿಕೆರೆ ತಾಲ್ಲೂಕಿನ ಯಾದಪುರ ಗ್ರಾಮದಲ್ಲಿರುವ ಪ್ರಸಿದ್ಧ ಹಿಂದೂ ದೇವಾಲಯವಾಗಿದೆ. ಯಾದಪುರವು ಅರಸಿಕೆರೆಯಿಂದ 8 ಕಿಲೋ ಮೀಟರ್ ದೂರದಲ್ಲಿದೆ. ಈ ದೇವಾಲಯವು ಬೆಟ್ಟದ ಮೇಲಿದ್ದು ಶಿವನಿಗೆ ಸಮರ್ಪಿತವಾಗಿದೆ. 1101 ಮೆಟ್ಟಿಲುಗಳನ್ನು ಹೊಂದಿರುವ ಬೆಟ್ಟವನ್ನು ಉತ್ತರ ದಕ್ಷಿಣವಾಗಿ ಎರಡು ಕಡೆಯಿಂದ ಹತ್ತಬಹುದು. ಬೆಟ್ಟದ ಮೇಲೆ ಸಿದ್ದೇಶ್ವರ ಸ್ವಾಮಿಯ ಪಾದವನ್ನು ಕಾಣಬಹುದು. ಈ ಬೆಟ್ಟದ ತುದಿಯಲ್ಲಿ ಒಂದು ಗೋಪುರವಿದೆ. ಅಲ್ಲೇ ಪಕ್ಕದಲ್ಲಿ ಗಂಗಮ್ಮ ಕೊಳ ಇದೆ. ಬೆಟ್ಟದ ಕೆಳಗೆ ಒಂದು ಬಸವಣ್ಣನ ಗುಡಿ ಇದೆ. ಇತಿಹಾಸ :: ಹಿಂದೆ ಈ ಪ್ರಾಂತ್ಯ ಮೊದಲು ಅರಣ್ಯವಾಗಿತ್ತು. ಸಿದ್ಧರು ಅನೇಕ ವರ್ಷ ತಪಸ್ಸು ಮಾಡಿ ಸಿದ್ದಿಯಾದ ಸ್ಥಳವೇ ಯಾದಪುರವಾಯಿತೆಂದು ಪ್ರಚಲಿತದಲ್ಲಿ ಇದೆ. ಒಂದು ದಂತಕಥೆಯ ಪ್ರಕಾರ, ಒಮ್ಮೆ ಒಬ್ಬ ಸನ್ಯಾಸಿಯು ಈ ಹಳ್ಳಿಯ ಮೂಲಕ ಹಾದು ಹೋಗುತ್ತಿದ್ದಾಗ ಓರ್ವ ಮಹಿಳೆಯು ತನ್ನ ಮಗುವನ್ನು ಕಳೆದುಕೊಂಡು ದುಃಖಿಸುತ್ತಿರುತ್ತಾಳೆ. ಆಕೆಯ ಮಗುವಿನ ಸಾವಿಗೆ ಕಾರಣ ತಿಳಿದಾಗ ಗ್ರಾಮಸ್ಥರು ಎದುರಿಸುತ್ತಿರುವ ಆರೋಗ್ಯ ಸಮಸ್ಯೆಗಳ…
ಬೇಕಾಗುವ ಪದಾರ್ಥಗಳು :: ಚಿಕನ್- ಅರ್ಧ ಕೆಜಿ, ಪುದೀನ- 1 ಬಟ್ಟಲು, ಈರುಳ್ಳಿ- 1, ಅರಿಶಿನ ಪುಡಿ- ಸ್ವಲ್ಪ, ಗರಂ ಮಸಾಲ ಪುಡಿ- ಅರ್ಧ ಚಮಚ, ಕಾಳು ಮೆಣಸಿನ ಪುಡಿ- ಕಾಲು ಚಮಚ, ಕರಿಬೇವು- ಸ್ವಲ್ಪ, ಚಕ್ರಮೊಗ್ಗು- 1, ದಾಲ್ಚಿನ್ನಿ ಅಥವಾ ಚಕ್ಕೆ – ಸ್ವಲ್ಪ, ಲವಂಗ – 5, ಏಲಕ್ಕಿ- 2, ಶುಂಠಿ- ಸ್ವಲ್ಪ, ಬೆಳ್ಳುಳ್ಳಿ- ಸ್ವಲ್ಪ, ಹಸಿ ಮೆಣಸಿನಕಾಯಿ- 5, ಕೊತ್ತಂಬರಿ ಸೊಪ್ಪು- ಸ್ವಲ್ಪ ಅಡುಗೆ ಎಣ್ಣೆ – ಸ್ವಲ್ಪ, ಉಪ್ಪು- ರುಚಿಗೆ ತಕ್ಕಷ್ಟು ಮಾಡುವ ವಿಧಾನ :: ಒಂದು ಮಿಕ್ಸಿ ಜಾರ್’ಗೆ ಪುದೀನ, ಕೊತ್ತಂಬರಿ ಸೊಪ್ಪು, ಹಸಿ ಮೆಣಸಿನ ಕಾಯಿ, ಶುಂಠಿ ಹಾಗೂ ಬೆಳ್ಳುಳ್ಳಿ ಸ್ವಲ್ಪ ನೀರು ಹಾಕಿ ನುಣ್ಣಗೆ ರುಬ್ಬಿಟ್ಟುಕೊಲ್ಳಿ. ಈಗ ಒಲೆ ಮೇಲೆ ಒಂದು ಬಾಣಲೆ ಇಟ್ಟು ಅದಕ್ಕೆ ಎಣ್ಣೆ ಹಾಕಿ ಚಕ್ಕೆ, ಲವಂಗ, ಕಾಳು ಮೆಣಸು, ಪಲಾವ್ ಎಲೆ, ಚಕ್ಕೆ, ಚಕ್ರಮೊಗ್ಗು, ಹಾಗೆ ಸಣ್ಣದಾಗಿ ಕತ್ತರಿಸಿಕೊಂಡಿರುವ ಈರುಳ್ಳಿ ಹಾಕಿ ಫ್ರೈ ಮಾಡಿಕೊಳ್ಳಿ. ಈರುಳ್ಳಿ ಹಾಕಿ 2 ನಿಮಿಷ ಫ್ರೈ…
ಮಂಗಳೂರು ಮೇ 17 NEWS DESK : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ಮಾರ್ಟ್ಸಿಟಿ ಮಂಗಳೂರು ಇವರ ಆಶ್ರಯದಲ್ಲಿ ಸುಮಾರು 36 ಕೋಟಿ ರೂ. ವೆಚ್ಚದಲ್ಲಿ ಉರ್ವದಲ್ಲಿ ನಿರ್ಮಾಣಗೊಂಡ ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿದರು. ಈ ಸಂದರ್ಭ ಸ್ಪೀಕರ್ ಯು.ಟಿ. ಖಾದರ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಐವನ್ ಡಿಸೋಜ, ಜಿಲ್ಲಾಧಿಕಾರಿ ಮಲೈ ಮುಗಿಲನ್, ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.
ಸುಂಟಿಕೊಪ್ಪ ಮೇ 17 NEWS DESK : ಸುಂಟಿಕೊಪ್ಪದಲ್ಲಿ ಹತ್ತು ದಿನಗಳ ಕಾಲ ನಡೆಯಲಿರುವ 26ನೇ ವರ್ಷದ ಡಿ.ಶಿವಪ್ಪ ಸ್ಮಾರಕ ರಾಜ್ಯ ಮಟ್ಟದ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿಗೆ ಡಿ.ಶಿವಪ್ಪ ಅವರ ಮೊಮ್ಮಗ ವಿಶಾಲ್ ಶಿವಪ್ಪ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಧ್ವಜಾರೋಹಣ ನೇರವೇರಿಸಿ ಚೆಂಡನ್ನು ಒದೆಯುವ ಮೂಲಕ ಚಾಲನೆ ನೀಡಿದರು. ಸುಂಟಿಕೊಪ್ಪ ಜಿ.ಯಂ.ಪಿ.ಶಾಲಾ ಮೈದಾನದಲ್ಲಿ ಬ್ಲೂ ಬಾಯ್ಸ್ ಯುವಕ ಸಂಘದ 39ನೇ ವರ್ಷ ಹಾಗೂ ಡಿ. ಶಿವಪ್ಪ ಸ್ಮಾರಕ 26ನೇ ವರ್ಷದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಮೊದಲ ದಿನದ ಪಂದ್ಯ ಅತಿಥೇಯ ಬ್ಲೂ ಬಾಯ್ಸ್ ಯೂತ್ ಕ್ಲಬ್ ಮತ್ತು ಪನ್ಯ ಎಫ್.ಸಿ. ಪನ್ಯ ತಂಡದ ನಡುವೆ ಮೊದಲ ಪಂದ್ಯ ನಡೆಯಿತು, ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರುಗಳಾದ ಪ್ರಸಾದ್ ಕುಟ್ಟಪ್ಪ, ಶಬ್ಬಿರ್, ರಫೀಕ್ ಖಾನ್, ವಸಂತಿ, ಮಾಜಿ ಅಧ್ಯಕ್ಷ ಕೆ.ಇ.ಕರೀಂ ಹಾಗೂ ಬ್ಲೂಬಾಯ್ಸ್ ಯೂತ್ ಕ್ಲಬ್ ಆಲಿಕುಟ್ಟಿ, ಗೌರವಧ್ಯಕ್ಷ ಟಿ.ವಿ.ಪ್ರಸನ್ನ, ಬಿ.ಕೆ.ಪ್ರಶಾಂತ್, ಕುಶಾಲನಗರ ಉದ್ಯಮಿ ಬ್ಲೆಸ್ಜಿಕ್ರಾಸ್ತ,…
ನಾಪೋಕ್ಲು ಮೇ 17 NEWS DESK : ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ರಜಾ ದಿನಗಳನ್ನು ಸದುಪಯೋಗ ಪಡಿಸಿಕೊಳ್ಳಲು ಬೇಸಿಗೆ ಶಿಬಿರ ಸಹಕಾರಿಯಾಗಿದೆ ಎಂದು ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯ ಎಂ.ಬಿ.ಹಮೀದ್ ಹೇಳಿದರು. ವಾಟೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆ, ಗ್ರಾಮ ಪಂಚಾಯಿತಿ ಅರಿವು ಕೇಂದ್ರ, ಗ್ರಾಮ ಪಂಚಾಯಿತಿ ಹೊದ್ದೂರು ಸಂಯುಕ್ತ ಆಶ್ರಯದಲ್ಲಿ ಓದುವ ಬೆಳಕು ಕಾರ್ಯಕ್ರಮದಡಿಯಲ್ಲಿ ಆಯೋಜಿಸಲಾಗಿದ್ದ ಹತ್ತು ದಿನದ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಾಲೆಯ ಮುಖ್ಯ ಶಿಕ್ಷಕ ಕುಮಾರಸ್ವಾಮಿ ಮಾತನಾಡಿ, ಹಿಂದಿನ ದಿನಗಳಲ್ಲಿ ರಜಾ ಅವಧಿಯಲ್ಲಿ ಮಕ್ಕಳು ಸಂಬಂಧಿಕರ ಮನೆಗಳಿಗೆ, ಸಮಾರಂಭಗಳಿಗೆ ತೆರಳಿ ಸಂಸ್ಕೃತಿ, ಆಚಾರ, ವಿಚಾರಗಳನ್ನು ತಿಳಿದುಕೊಳ್ಳುತ್ತಿದ್ದರು. ಆದರೆ ಇದೀಗ ಟಿವಿ, ಮೊಬೈಲ್ ನಿಂದಾಗಿ ದಾರಿತಪ್ಪುತ್ತಿರುವ ಮಕ್ಕಳನ್ನು ಸರಿದಾರಿಗೆ ತರಲು ಬೇಸಿಗೆ ಶಿಬಿರವು ಸಹಕಾರಿಯಾಗಿದೆ ಈ ಶಿಬಿರದಲ್ಲಿ ಮಕ್ಕಳಿಗೆ ಚಟುವಟಿಕೆ ಮೂಲಕ ಜ್ಞಾನ ತುಂಬ ಕೆಲಸವನ್ನು ಮಾಡಲಾಗುತ್ತಿದೆ ಎಂದರು. ಎಸ್ ಡಿಎಂ ಸಿ ಸದಸ್ಯ…
ಮಡಿಕೇರಿ ಮೇ 17 NEWS DESK : ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್, ಬೆಂಗಳೂರು ಇವರು 12 ತಿಂಗಳುಗಳ ಅಪ್ರೆಂಟಿಸ್(ಶಿಶಿಕ್ಷು) ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಎಸ್ಎಸ್ಎಲ್ಸಿಯೊಂದಿಗೆ ಐಟಿಐ ವಿಭಾಗದ ಫಿಟ್ಟರ್, ಟರ್ನರ್, ಮೆಷಿನಿಷ್ಟ್, ಎಲೆಕ್ಟ್ರಿಷಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಕಾರ್ಪೆಂಟರ್, ಫೌಂಡ್ರಿಮೆನ್, ಶೀಟ್ ಮೆಟಲ್ವರ್ಕರ್, ಟೂಲ್ ಅಂಡ್ ಡೈ ಮೇಕರ್, ಸಿಎನ್ಸಿ ಪ್ರೋಗ್ರಾಮರ್ ಕಮ್ ಆಪರೇಟರ್, ಮೆಕಾನಿಕ್ ರೆಫ್ರಿಜರೇಷನ್ ಮತ್ತು ಏರ್ ಕಂಡಿಷ್ನಿಂಗ್ ಟ್ರೇಡ್ನಲ್ಲಿ ತೇರ್ಗಡೆ ಹೊಂದಿರಬೇಕು. ತರಬೇತಿ ಅವಧಿಯಲ್ಲಿ ಸರ್ಕಾರಿ ನಿಯಮಾನುಸಾರ ಸ್ಟೈಫಂಡ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಜೂನ್, 02 ಕೊನೆಯ ದಿನವಾಗಿದೆ. ನಿಗಧಿತ ಅರ್ಜಿ ನಮೂನೆಯೊಂದಿಗೆ ಎಸ್ಎಸ್ಎಲ್ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಪ.ಜಾತಿ, ಪ.ಪಂಗಡ, ಓಬಿಸಿ, ಅಂಗವಿಕಲ ಸರ್ಟಿಫಿಕೇಟ್, ಆಧಾರ್ ಕಾರ್ಡ್ ಮತ್ತು ಪಾನ್ಕಾರ್ಡ್ ಜೆರಾಕ್ಸ್ ಪ್ರತಿ, ಎನ್ಟಿಸಿ ಪ್ರಮಾಣ ಪತ್ರ ಮತ್ತು ಒಂದು ಪಾಸ್ಪೋರ್ಟ್ ಭಾವಚಿತ್ರ ಸಲ್ಲಿಸಬೇಕು. ಅಭ್ಯರ್ಥಿಯು https://apprenticeshipindia.gov.in/candidate-registration ಈ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಮತ್ತು ನೋಂದಣಿ ಸಂಖ್ಯೆಯನ್ನು…
ಮಡಿಕೇರಿ ಮೇ 17 NEWS DESK : ವಿರಾಜಪೇಟೆ-ಪೊನ್ನಂಪೇಟೆ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕ ವಾರ್ಷಿಕ ಆದಾಯ ಪ್ರವರ್ಗ-1, ಪ.ಜಾ/ಪ.ವರ್ಗ ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಮತ್ತು ಇತರೆ ರೂ.1 ಲಕ್ಷ, ಅರ್ಜಿಯನ್ನು http://shp.karnataka.gov.in/bcwd ನಲ್ಲಿ ಸಲ್ಲಿಸುವುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್, 16 ಕೊನೆಯ ದಿನವಾಗಿದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://bcwd.karnataka.gov.in ನ್ನು ನೋಡಬಹುದು. ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ದಾಖಲೆಗಳೊಂದಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ…
ಕುಶಾಲನಗರ ಮೇ 16 NEWS DESK : ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭಾದ ಕುಶಾಲನಗರ ತಾಲ್ಲೂಕು ಘಟಕದ ವತಿಯಿಂದ ತಾಲ್ಲೂಕು ಕೇಂದ್ರವಾದ ಕುಶಾಲನಗರ ಪಟ್ಟಣದಲ್ಲಿ ಮೇ 17 ರಂದು ಐದನೇ ವರ್ಷದ ಬಸವ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಪಟ್ಟಣದ ಬೈಚನಹಳ್ಳಿ ಶ್ರೀ ಮಾರಿಯಮ್ಮ ದೇವಸ್ಥಾನದಿಂದ ಸಂಜೆ 4 ಗಂಟೆಗೆ ಶ್ರೀ ಬಸವೇಶ್ವರರ ಭಾವಚಿತ್ರದೊಂದಿಗೆ ನಂದಿಧ್ವಜದೊಂದಿಗೆ ಪಟ್ಟಣದಲ್ಲಿ ಮೆರವಣಿಗೆ ಏರ್ಪಡಿಸಲಾಗಿದೆ ಎಂದು ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಂ.ಮಧುಸೂದನ್ ತಿಳಿಸಿದರು. ಮೆರವಣಿಗೆಯ ಬಳಿಕ ಸಂಜೆ 4.30 ರ ನಂತರ ಪಟ್ಟಣದ ಗಾಯತ್ರಿ ಕಲ್ಯಾಣ ಮಂದಿರದಲ್ಲಿ ಬಸವ ಜಯಂತಿಯ ವೇದಿಕೆ ಕಾರ್ಯಕ್ರಮ ನಡೆಯಲಿದೆ. ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಆಶಯ ನುಡಿಯಾಡಲಿದ್ದು, ವಿರಾಜಪೇಟೆಯ ಅರಮೇರಿ- ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ವಿವಿಧ ಮಠಾಧೀಶರಾದ ಕನ್ನಡ…






