ಮಡಿಕೇರಿ ಜು.10 NEWS DESK : ಕುತಂತ್ರದಿಂದ ಕೊಡವರ ಹತ್ಯೆಯಾದ ದೇವಟ್ ಪರಂಬು ಸ್ಮಾರಕ ಪ್ರದೇಶದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ದೇವಟ್ ಪರಂಬುವಿಗೆ ತೆರಳಿದ ಪ್ರಮುಖರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ಕೊಡವಲ್ಯಾಂಡ್ ಪರ ಹಕ್ಕೊತ್ತಾಯ ಮಂಡಿಸಿದರು. ವಿಶ್ವಾಸಘಾತುಕ “ಕೆಳದಿ/ಪಾಲೇರಿ ರಾಜ ಪರಿವಾರದ ಅಧೀನದಲ್ಲಿದ್ದ ಕೊಡಗು ರಾಜ್ಯವನ್ನು ಪರಾಕ್ರಮಿ ಕೊಡವರು ಹೈದರ್ ಮತ್ತು ಟಿಪ್ಪುವಿನ ಆಕ್ರಮಣದಿಂದ 32ಕ್ಕೂ ಹೆಚ್ಚು ಬಾರಿ ಕಾಪಾಡಿದರು. ಈ ಸೋಲಿನ ಸೇಡು ತೀರಿಸಿಕೊಳ್ಳಲು, ಟಿಪ್ಪು ಕೊಡವ ಜನಾಂಗವನ್ನು ವಂಚನೆಯ ಮೂಲಕ ಸಂಪೂರ್ಣವಾಗಿ ನಾಶಮಾಡಲು ಸಂಚು ಹೂಡಿದನು. ಟಿಪ್ಪು ಸಂಚಿನಿಂದ ದೇವಟ್ ಪರಂಬುವಿನಲ್ಲಿ ನಡೆದ ನರಮೇಧದ ಸ್ಮರಣಾರ್ಥ ಅಂತರರಾಷ್ಟ್ರೀಯ ಸ್ಮಾರಕ ನಿರ್ಮಾಣ ಮಾಡಬೇಕು ಹಾಗೂ ಕೊಡವರ ನರಮೇಧವನ್ನು ವಿಶ್ವ ರಾಷ್ಟ್ರಸಂಸ್ಥೆ ಯುಎನ್ಒ ಅಂತರರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಎಂದು ನಾಚಪ್ಪ ಇದೇ ಸಂದರ್ಭ ಒತ್ತಾಯಿಸಿದರು. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು, ಆದಿಮಸಂಜಾತ ಏಕ-ಜನಾಂಗೀಯ ಕೊಡವ…
ಲೇಖಕ: admin
ವಿರಾಜಪೇಟೆ ಜು.10 NEWS DESK : ವಿರಾಜಪೇಟೆಯ ಮಗ್ಗುಲದಲ್ಲಿರುವ ಭಾರತೀಯ ವೈದ್ಯಕೀಯ ಸಂಘ ಮತ್ತು ಕೊಡಗು ವೈದ್ಯಕೀಯ ಕಾಲೇಜು ವತಿಯಿಂದ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಕಂಜಿತಂಡ ಸುನಿಲ್ ಮುದ್ದಯ್ಯ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಳೆದ 30 ವರ್ಷಗಳಲ್ಲಿ ಆರೋಗ್ಯ ಮತ್ತು ಸಾಮಾಜಿಕ ಸೇವೆಗೆ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಮಡಿಕೇರಿಯ ಕಾಲೇಜು ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಡಾ.ಸುನಿಲ್ ಮುದ್ದಯ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಡಿಕೇರಿಯ ಕೋಯಿಮ್ಸ್ನ ನಿರ್ದೇಶಕ ಮತ್ತು ಡೀನ್ ಡಾ. ಎ.ಕೆ.ಲೋಕೇಶ್ ಮತ್ತು ಐಎಂಎ ಅಧ್ಯಕ್ಷ ಡಾ.ಶ್ಯಾಮ್ ಮತ್ತು ಅನೇಕ ಪ್ರಖ್ಯಾತ ವೈದ್ಯರು, ಶಿಕ್ಷಣ ತಜ್ಞರು ಮತ್ತು ಆರೋಗ್ಯ ಕ್ಷೇತ್ರದ ತಜ್ಞರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಮಡಿಕೇರಿ ಜು.10 NEWS DESK : ಮಡಿಕೇರಿ ನಗರದ ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾನ್ವೆಂಟ್ ಜಂಕ್ಷನ್ ನಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಯಾಣಿಕರ ತಂಗುದಾಣವನ್ನು ಜು.11 ರಂದು ಉದ್ಘಾಟಿಸಲಾಗುವುದು ಎಂದು 17ನೇ ವಾರ್ಡ್ ನ ನಗರಸಭಾ ಸದಸ್ಯ ಅರುಣ್ ಶೆಟ್ಟಿ ಅವರು ತಿಳಿಸಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಪ್ರಯಾಣಿಕರ ತಂಗುದಾಣವನ್ನು ಉದ್ಘಾಟಿಸಲಿದ್ದಾರೆ. ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಪೌರಾಯುಕ್ತ ಹೆಚ್.ಆರ್.ರಮೇಶ್, ಸದಸ್ಯ ಮುಸ್ತಫ, ಮೂಡ ಅಧ್ಯಕ್ಷ ಬಿ.ವೈ.ರಾಜೇಶ್, ಬಿಜೆಪಿ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಶಕ್ತಿ ದಿನಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್, ಟೌನ್ ಬ್ಯಾಂಕ್ ನಿರ್ದೇಶಕರು ಹಾಗೂ ನಗರಸಭಾ ಸ್ಥಾಯಿ ಸಮಿತಿಯ ಮಾಜಿ ಸದಸ್ಯರಾದ ಪ್ರತಿಭಾ ಶೆಟ್ಟಿ, ಜಿಲ್ಲಾಧಿಕಾರಿಗಳು ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಮಡಿಕೇರಿ ಜು.10 NEWS DESK : ಮಾಯಮುಡಿ ಗ್ರಾಮ ವ್ಯಾಪ್ತಿಯಲ್ಲಿ ಸರಕಾರ ಅನುಮೋದಿಸಿದ ಶಾಲೆಗೆ, ಕೊಠಡಿಗಳನ್ನು ನಿರ್ಮಿಸುವ ಉದ್ದೇಶದಿಂದ ರೂ.79 ಲಕ್ಷದ ಕಾಮಗಾರಿಗೆ ಚಾಲನೆ ದೊರೆಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರದ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಈ ಶಾಲೆಯ ಹಳೆ ವಿದ್ಯಾರ್ಥಿ. ಹಾಗಾಗಿ ಸಚಿವರು ಈ ಶಾಲೆಯ ಅಭಿವೃದ್ಧಿಗೆ ತಮ್ಮ ವಿಶೇಷ ಅನುದಾನದ ಮೂಲಕ ರೂ.79 ಲಕ್ಷ ನೀಡಿರುವುದನ್ನು ನೀಡಿರುವುದಾಗಿ ತಿಳಿಸಿದರು. ಕ್ಷೇತ್ರದ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ, ತಾನು ಹಾಗೂ ಸರಕಾರ ಮಕ್ಕಳ ವಿದ್ಯಾರ್ಜನೆ ಕಡೆಗೆ ಹೆಚ್ಚಿನ ಗಮನವನ್ನು ನೀಡುತ್ತಿದ್ದು, ಪೋಷಕರು ಹಾಗೂ ಶಿಕ್ಷಕರು ಮಕ್ಕಳ ವಿದ್ಯಾಭ್ಯಾಸ ಉನ್ನತಿಗಾಗಿ ಶ್ರಮಿಸಬೇಕೆಂದು ಕರೆ ನೀಡಿದರು. ಸಾಲು ಕೊಠಡಿಯಲ್ಲಿ ಮಕ್ಕಳಿಗೆ ಬೇಕಾದ ಎಲ್ಲಾ ಆಧುನಿಕ ಸೌಲತ್ತುಗಳನ್ನು ಒದಗಿಸಲು ಸರಕಾರ ಬದ್ಧವಾಗಿದೆ ಎಂದು ಇದೇ ಸಂದರ್ಭ ಶಾಸಕರು ಹೇಳಿದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್…
ಮಡಿಕೇರಿ ಜು.10 NEWS DESK : ಮಾಯಮುಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಯ ನೂತನ ಕೊಠಡಿಗಳನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಇಂದಿನ ಯುಗದಲ್ಲಿ ಸ್ಥಳೀಯ ಭಾಷೆಯೊಂದಿಗೆ ಆಂಗ್ಲ ಭಾಷೆಯು ಅತ್ಯಂತ ಮಹತ್ವ ಪಡೆದಿದ್ದು, ಮಕ್ಕಳು ಚಿಕ್ಕದರಿಂದಲೇ ಆಂಗ್ಲ ಭಾಷೆ ಕಲಿತುಕೊಂಡಲ್ಲಿ ಮುಂದಿನ ದಿನಗಳಲ್ಲಿ ಅವರ ಭವಿಷ್ಯಕ್ಕೆ ಒಳ್ಳೆಯದಾಗಲಿದೆ ಎಂದು ಹೇಳಿದರು. ಮಕ್ಕಳು ಮಾತೃಭಾಷೆಯೊಂದಿಗೆ ಆಂಗ್ಲವನ್ನು ಕಲಿತುಕೊಂಡು ತಮ್ಮ ಮುಂದಿನ ಭವಿಷ್ಯದಲ್ಲಿ ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾನಂಡ ಪ್ರತ್ಯು, ವಲಯ ಕಾಂಗ್ರೆಸ್ ಅಧ್ಯಕ್ಷ ಟಾಟು ಮೊಣ್ಣಪ್ಪ, ಸ್ಥಳೀಯ ಪ್ರಮುಖರು, ಪಕ್ಷದ ಪ್ರಮುಖರು ಶಾಲೆಯ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಹಾಗೂ ಸ್ಥಳೀಯ…
ವಿರಾಜಪೇಟೆ ಜು.10 NEWS DESK : ವಿರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ನ ಕೃಷಿ ಕಾರ್ಯಕ್ರಮದಡಿಯಲ್ಲಿ ವಿರಾಜಪೇಟೆ ವಲಯದ ಬಿಟ್ಟಂಗಾಲ ಕಾರ್ಯಕ್ಷೇತ್ರದ ಬಿ.ಶೆಟ್ಟಿಗೇರಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಾದ ಸುಜಾತ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪವಲಯ ಅರಣ್ಯಾಧಿಕಾರಿ ಶ್ರೀಧರ್ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪರಿಸರ ಸಂರಕ್ಷಣೆ ಸಲುವಾಗಿ ಉತ್ತಮವಾದ ಕಾರ್ಯಕ್ರಮ ಮಾಡುತ್ತಿರುವುದು ಶ್ಲಾಘನೀಯ ಎಂದರು. ಜನಸಂಖ್ಯೆ ಹೆಚ್ಚಾದಂತೆ ಅರಣ್ಯ ಸಂಖ್ಯೆ ಕೂಡ ಕಡಿಮೆಯಾಗುತ್ತದೆ. ಗಿಡ ನೆಡುವಿಕೆಯಿಂದ ಅರಣ್ಯ ಸಂರಕ್ಷಿಸಬಹುದು, ಪರಿಸರವು ನಮಗೆ ಆಹಾರ, ನೀರು, ಗಾಳಿ ಮತ್ತು ಇತರ ಅಗತ್ಯ ಸಂಪನ್ಮೂಲಗಳನ್ನು ಒದಗಿಸುತ್ತದೆ ಎಂದರು. ಬಿಟ್ಟಂಗಾಲ ಒಕ್ಕೂಟದ ಅಧ್ಯಕ್ಷ ರಂಜನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ, ಎಲೆಗಳನ್ನು ಗುರುತಿಸುವ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕರಾದ ವಸಂತ್,…
ಮಡಿಕೇರಿ ಜು.10 NEWS DESK : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 19.55 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 7.54 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1652.92 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1017.09 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 31.25 ಮಿ.ಮೀ. ಕಳೆದ ವರ್ಷ ಇದೇ ದಿನ 11.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2375.59 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1496.53 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 11.05 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 11.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1567.15 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1047.55 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 7.98 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…
ಸೋಮವಾರಪೇಟೆ ಜು.10 NEWS DESK : ಜಾತ್ಯಾತೀತ ರಾಷ್ಟ್ರದಲ್ಲಿ ಜಾತಿಯನ್ನು ವಿಜ್ರಂಭಿಸಲಾಗುತ್ತಿದೆ ಎಂದು ಸ್ವತಂತ್ರ ಬಸವಲಿಂಗ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು. ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಗುರುಪೂರ್ಣಿಮೆಯ ಅಂಗವಾಗಿ ಆಯೋಜಿಸಲಾಗಿದ್ದ ಗುರುವಂದನಾ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಇರುವ ಬೃಹತ್ ರಾಷ್ಟ್ರದ ಭಾರತ ಮಾತೆ ಎಲ್ಲಾ ಜಾತಿ, ಜನಾಂಗದವರನ್ನು ತನ್ನೊಡಲಲ್ಲಿ ಇಟ್ಟುಕೊಂಡು ಸಲಹುತ್ತಿದ್ದಾಳೆ, 12ನೇ ಶತಮಾನದಲ್ಲೂ ಬಸವಣ್ಣಾರಾದಿಯಾಗಿ ಎಲ್ಲಾ ಶಿವಶರಣರು ಜಾತಿಯ ವಿರುದ್ಧ ಹೋರಾಡಿ ಎಲ್ಲಾರು ಒಂದೇ ಎಂದು ಪ್ರತಿಪಾದಿಸಿದರು. ಆದರೆ ಇಂದು ಏನಾಗಿದೆ ಎಲ್ಲೆಲ್ಲೂ ಜಾತಿ ಮೇಳೈಸಿದೆ ಎಲ್ಲಾ ರಂಗಗಳಲ್ಲೂ ಜಾತಿ, ಜಾತಿ ಎಂದು ವಿಷಾದಿಸಿದರು. ಸಮಾಜವನ್ನು ತಿದ್ದಿ, ತೀಡಬೇಕಾದ ಧಾರ್ಮಿಕ ಕ್ಷೇತ್ರವು ಇದಕ್ಕೆ ಹೊರತಾಗಿಲ್ಲ ಎಂದರು. ಈ ದೇಶದ ಸಂಸ್ಕೃತಿ, ಆಚಾರ, ವಿಚಾರಗಳನ್ನು ಪಾಲಿಸುತ್ತಿರುವುದು, ಉಳಿಸುತ್ತಿರುವುದು, ಮಾತೆ ಭಾರತಾಂಬೆಗೆ ಗೌರವ ಸಲ್ಲಿಸುತ್ತಿರುವುದು ಭಾರತೀಯ ಜನತಾ ಪಕ್ಷ. ಆದ್ದರಿಂದ ನಾನು ಅಭಿಮಾನಿಯಾಗಿದ್ದೇನೆ ಎಂದು ಹೆಮ್ಮೆ ವ್ಯಕ್ತಪಡಿಸಿದರು. ಇಂದು ಸಮಾಜದ ಯಾವುದೇ ಕ್ಷೇತ್ರದಲ್ಲಿಯಾದರೂ ತನ್ನದೇ ಗುರುವನ್ನು ಹೊಂದಿದೆ ಅವರ…
ಮಡಿಕೇರಿ ಜು.10 NEWS DESK : ಸಾಮಾಜಿಕ ಸೇವಾ ಸಂಸ್ಥೆಯಾಗಿ ವಿಶ್ವದಲ್ಲಿ ಪ್ರಮುಖ ಸ್ಥಾನ ಪಡೆದಿರುವ ರೋಟರಿ ಸಂಸ್ಥೆಯು ವಿನೂತನ ಸೇವಾ ಕಾಯ೯ಯೋಜನೆಗಳೊಂದಿಗೆ ಜನಮಾನಸದಲ್ಲಿ ಸದಾ ಸ್ಮರಣೀಯವಾಗಿರಬೇಕೆಂದು ರೋಟರಿ ಜಿಲ್ಲೆ 3181 ನ ಮಾಜಿ ಗವನ೯ರ್ ಹೆಚ್.ಆರ್.ಕೇಶವ್ ಕರೆ ನೀಡಿದ್ದಾರೆ. ನಗರದ ಕೊಡವ ಸಮಾಜ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನ 2025-26 ನೇ ಸಾಲಿನ ಅಧ್ಯಕ್ಷರಾಗಿ ರತ್ನಾಕರ್ ರೈ ಮತ್ತು ಕಾಯ೯ದಶಿ೯ಯಾಗಿ ಕ್ಯಾರಿ ಕಾಯ೯ಪ್ಪ ಅವರಿಗೆ ಪದಗ್ರಹಣ ನೆರವೇರಿಸಿ ಅವರು ಮಾತನಾಡಿದರು. ಒಳಿತಿಗಾಗಿ ಒಗ್ಗೂಡು ಎಂಬ ಸಂದೇಶದಡಿಯಲ್ಲಿ ಈ ವಷ೯ ರೋಟರಿ ಸಂಸ್ಥೆಗಳು ಕಾಯ೯ನಿವ೯ಹಿಸಲಿದೆ. ಪ್ರತೀ ರೋಟರಿ ಸಂಸ್ಥೆಯೂ ಹೊಸ ಚಿಂತನೆ ಅಳವಡಿಸಿಕೊಂಡು ಜನರ ಮನಸ್ಸಿನಲ್ಲಿ ಸದಾ ಸ್ಮರಣೀಯವಾಗುವಂಥ ಕಾಯ೯ಯೋಜನೆ ಜಾರಿಗೊಳಿಸುವ ನಿಟ್ಟಿನಲ್ಲಿ ಕಾಯ೯ಪ್ರವೖತ್ತವಾಗಬೇಕು. ಎಂದು ಸಲಹೆ ನೀಡಿದ ಕೇಶವ್, ರೋಟರಿ ಸಂಸ್ಥೆಗಳು ನೀಡುವ ನೆರವಿನ ಯೋಜನೆಗಳು ಸತ್ಪಾತ್ರರಿಗೆ ದೊರಕುವಂಥೆ ಗಮನ ಹರಿಸಬೇಕು. ಯಾವುದೇ ಯೋಜನೆ ಅಗತ್ಯವುಳ್ಳವರಿಗೆ ದೊರಕದೆ ವ್ಯಥ೯ವಾಗಬಾರದೆಂದು ನುಡಿದರು. ಮಹಿಳೆಯರ ಸದಸ್ಯತ್ವ ಹೆಚ್ಚಿಸುವ ನಿಟ್ಟಿನಲ್ಲಿ…
ನವದೆಹಲಿ ಜು.10 NEWS DESK : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಆರಂಭಿಕ ಮಾಹಿತಿಯ ಪ್ರಕಾರ, ಭೂಕಂಪದ ಕೇಂದ್ರಬಿಂದು ಹರಿಯಾಣದ ಜಜ್ಜರ್ನಿಂದ ಈಶಾನ್ಯಕ್ಕೆ 4 ಕಿ.ಮೀ ದೂರದಲ್ಲಿದ್ದು, 14 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ವೇಳೆ ಜನರು ಭಯಭೀತರಾಗಿ ಮನೆ-ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ. ದೆಹಲಿ, ನೋಯ್ಡಾ, ಗುರುಗ್ರಾಮ್, ಗಾಜಿಯಾಬಾದ್ ಗಳಲ್ಲಿ ಭೂಕಂಪದ ಅನುಭವವಾಗಿದೆ. ಹರಿಯಾಣದ ರೋಹ್ಟಕ್ನಲ್ಲೂ ಪರಿಣಾಮ ಎದುರಿಸಲಾಗಿದ್ದು, ರಸ್ತೆಗಳಲ್ಲಿ ವಾಹನಗಳು ಅಲುಗಾಡಿದ ಅನುಭವವಾಗಿದೆ.






