ಮಡಿಕೇರಿ ಜೂ.18 NEWS DESK : ಖಾಸಗಿ ಜಮೀನುಗಳಲ್ಲಿರುವ ಎಲ್ಲಾ ಕಾಡಾನೆಗಳನ್ನು ಸೆರೆ ಹಿಡಿದು ಅರಣ್ಯ ಆವಾಸಸ್ಥಾನಗಳಿಗೆ ಸ್ಥಳಾಂತರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಎನ್ವಿರಾನ್ಮೆಂಟ್ ಅಂಡ್ ಹೆಲ್ತ್ ಫೌಂಡೇಶನ್ನ ಸ್ಥಾಪಕ ಕರ್ನಲ್ ಚೆಪ್ಪುಡಿರ ಮುತ್ತಣ್ಣ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಕಾಫಿ ತೋಟಗಳಲ್ಲಿ ಕಾಡಾನೆಗಳ ಹಾವಳಿ ಮೀತಿಮಿರಿದ್ದು, ಮುಂದಿನ ದಿನಗಳಲ್ಲಿ ಕಾರ್ಮಿಕರ ಕೊರತೆ ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಅರಣ್ಯ ಸಚಿವರು ಕ್ರಮ ಕೈಗೊಳ್ಳಬೇಕು ಎಂದರು. ಕಾಡಾನೆಗಳ ನಿಯಂತ್ರಣಕ್ಕೆ ಅವುಗಳಿಗೆ ಆಹಾರ ಮತ್ತು ನೀರಿನ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು. ತಂತಿ ಬೇಲಿಗಳ ರೂಪದಲ್ಲಿ ಬ್ಯಾರಿಕೇಡ್ಗಳ ಆವರಣಗಳನ್ನು ರಚಿಸಬೇಕು. ನೀರು ಲಭ್ಯತೆ ಇರುವ ಅರಣ್ಯ ಪ್ರದೇಶಗಳಿಗೆ ಕಾಡಾನೆಗಳನ್ನು ಬಿಡಬೇಕು, ಅರಣ್ಯ ಗಡಿಯಲ್ಲಿರುವ ಬ್ಯಾರಿಕ್ಯಾಡ್ ಗಳನ್ನು ಮೇಲ್ದರ್ಜೆಗೇರಿಸಿ ನಿರ್ವಹಣೆಗೆ ಆಯಾ ಗಾಮ ಪಂಚಾಯತ್ ಗಳ ಸಹಭಾಗಿತ್ವ ಪಡೆದುಕೊಳ್ಳಬೇಕು, ಕಾಡಾನೆಗಳ ಸುರಕ್ಷಿತ ತಾಣಗಳನ್ನು ತೆರೆಯಬೇಕು ಮತ್ತು ಆನೆ ಕಾರಿಡಾರ್ ಗಳನ್ನು ನಿರ್ಮಿಸಬೇಕು ಎಂದು ಆಗ್ರಹಿಸಿದರು. ಹುಲಿ ಸುರಕ್ಷಿತ ಪ್ರದೇಶದ ಹೊರವಲಯದಲ್ಲಿರುವ ಏಳು ವರ್ಷ ಮೇಲ್ಪಟ್ಟ…
ಲೇಖಕ: admin
ಮಡಿಕೇರಿ ಜೂ.18 NEWS DESK : ಕೊಡಗು ಪತ್ರಕತ೯ರ ಸಂಘ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಕೊಡಗಿನ ಯುವ ಯೋಗಪಟು ಮದೆನಾಡಿನ ಸಿಂಚನಾಳ ಯೋಗ ಪ್ರದಶ೯ನವನ್ನು ಗಿನ್ನೀಸ್ ವಿಶ್ವದಾಖಲೆಗೆ ಸೇಪ೯ಡೆ ಮಾಡುವ ಕಾಯ೯ಕ್ರಮ ಜೂ.21 ರಂದು ವಿಶ್ವಯೋಗ ದಿನಾಚರಣೆಯಂದು ಮಡಿಕೇರಿಯಲ್ಲಿ ಆಯೋಜಿತವಾಗಿದೆ. ನಗರದ ಪತ್ರಿಕಾಭವನ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ಮದೆನಾಡಿನ ಬಿಜಿಎಸ್ ಪಬ್ಲಿಕ್ ಶಾಲೆಯ 6ನೇ ತರಗತಿ ವಿದ್ಯಾಥಿ೯ನಿ ಸಿಂಚನಾಳ ಯೋಗಪ್ರದಶ೯ನವನ್ನು ಗಿನ್ನೀಸ್ ದಾಖಲೆಗೆ ಸೇಪ೯ಡೆಗೊಳಿಸುವ ನಿಟ್ಟಿನಲ್ಲಿ ಡಿಂಬಾಸನ ಯೋಗ ಆಯೋಜಿಸಲಾಗಿದೆ. 30 ನಿಮಿಷ 5 ಸೆಕೆಂಡ್ ಗಳ ಕಾಲ ಸಿಂಚನಾ ಡಿಂಬಾಸನ ಯೋಗ ಭಂಗಿಯಲ್ಲಿರುವ ಮೂಲಕ ಗಿನ್ನೀಸ್ ವಿಶ್ವದಾಖಲೆ ಮಾಡಲಿದ್ದು, ಪರಿಣಿತರು ಈ ಸಂಬಂಧಿತ ದಾಖಲೆ ಮಾಡಿಕೊಳ್ಳಲಿದ್ದಾರೆ. ಈ ಮೂಲಕ ಸಿಂಚನಾಳ ಯೋಗ ಪ್ರತಿಭೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜೂ.18 NEWS DESK : ಬೆಂಗಳೂರು ನಗರ ಪಶ್ಚಿಮ ವಲಯದ ಜಂಟಿ ಪೊಲೀಸ್ ಆಯುಕ್ತ ಸಿ.ವಂಶಿ ಕೃಷ್ಣ ವಿಧಾನಸೌಧದ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿದರು.
ದೆಹಲಿ ಜೂ.18 NEWS DESK : ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು.
ಮಡಿಕೇರಿ ಜೂ.18 NEWS DESK : ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ನವದೆಹಲಿ ಅವರು ಧರ್ತಿ ಆಬ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಮತ್ತು ಪಿಎಂ-ಜನಮನ್ ಯೋಜನೆಯಡಿ ಎವಾರ್ನೆಸ್ ಮತ್ತು ಬೆನಿಪಿಟ್ ಸ್ಯಾಚುರೇಷನ್ ಕ್ಯಾಂಪ್ಸ್ ಎಂಬ ಅಭಿಯಾನವನ್ನು ಜೂನ್, 30 ರವರೆಗೆ ಆಯೋಜಿಸಲು ತೀರ್ಮಾನಿಸಲಾಗಿದ್ದು, ಈ ಅಭಿಯಾನವು ಬುಡಕಟ್ಟು ಸಮುದಾಯದವರಿಗೆ ಡಿಎ-ಜೆಜಿಯುಎ ಯೋಜನೆ ಮತ್ತು ಪಿಎಂ-ಜನ್ಮನ್ ಯೋಜನೆಯ ಕುರಿತು ಸಮುದಾಯದವರಿಗೆ ಅರಿವು ಮೂಡಿಸಲು ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಲು ಬೇಕಾಗುವ ದಾಖಲಾತಿಗಳನ್ನು ಒದಗಿಸಲು ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಗ್ರಾಮ ಮಟ್ಟದಲ್ಲಿ ಶಿಬಿರ ಆಯೋಜಿಸುವಂತೆ ತಿಳಿಸಿದ್ದಾರೆ. ನೀಡಬೇಕಾಗಿರುವ ಸೌಲಭ್ಯಗಳ ವಿವರ: ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನಿವಾಸ ಪ್ರಮಾಣ ಪತ್ರ(ಡೊಮೆಸ್ಟಿಕ್ ಸರ್ಟಿಫಿಕೇಟ್), ಸಾಮಾಜಿಕ ಭದ್ರತಾ ಯೋಜನೆಗಳು-ವೃದ್ದಾಪ್ಯ ಪಿಂಚಣಿ, ವಿಧವಾ ಪಿಂಚಣಿ, ದಿವ್ಯಾಂಗ ಪಿಂಚಣಿ, ರೇಷನ್ ಕಾರ್ಡ್, ಆಯುಷ್ಮಾನ್ ಭಾರತ್ ಕಾರ್ಡ್(ಪಿಎಂ-ಜೆಎವೈ), ಸಿಕಲ್ ಸೆಲ್ ಅನೀಮಿಯಾ ಕುರಿತು ಜಾಗೃತಿ ಮೂಡಿಸುವುದು ಮತ್ತು ತಪಾಸಣೆ…
ಮಡಿಕೇರಿ ಜೂ.18 NEWS DESK : ರೈತರ ಜೀವನಾಡಿಯಾಗಿರುವ ಭತ್ತ ಕೃಷಿ ಕ್ಷೇತ್ರವನ್ನು ಉತ್ತೇಜಿಸುವ ಉದ್ದೇಶದಿಂದ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ‘ಯಂತ್ರಶ್ರೀ’ ಎಂಬ ಯಾಂತ್ರೀಕೃತ ಭತ್ತ ಬೇಸಾಯವನ್ನು ಅನುಷ್ಠಾನಗೊಳಿಸಿದೆ. ಈ ಮೂಲಕ ರೈತರಿಗೆ ಭತ್ತ ಬೇಸಾಯ ಮಾಡಲು ಪ್ರೋತ್ಸಾಹ ನೀಡುತ್ತಿದ್ದು, ವ್ಯವಸಾಯ ಚಟುವಟಿಕೆಯಲ್ಲಿ ಬೀಜದಿಂದ ಬೀಜದವರೆಗೆ ಸಂಪೂರ್ಣ ಯಂತ್ರೋಪಕರಣಗಳ ಬಳಕೆಯಿಂದ ಈ ಹಿಂದೆಗಿಂತ ಅಧಿಕ ಇಳುವರಿ ಪಡೆಯುವಂತಾಗಿದೆ. ಯಂತ್ರಶ್ರೀ ಯೋಜನೆಯ ಮೂಲಕ ಇದುವರೆಗೆ 96 ತಾಲೂಕುಗಳಲ್ಲಿ 44,119 ರೈತರನ್ನು ಪ್ರೇರೇಪಿಸಿ ಸುಮಾರು 1,00,254 ಎಕ್ರೆ ಪ್ರದೇಶಗಳಲ್ಲಿ ಕೃಷಿ ಭೂಮಿಯನ್ನು ಹದಗೊಳಿಸುವುದರಿಂದ ಮೊದಲ್ಗೊಂಡು ಕೊಯ್ಲೋತ್ತರದವರೆಗೆ ಸಂಪೂರ್ಣ ಯಾಂತ್ರೀಕೃತಗೊಳಿಸುವಲ್ಲಿ ರೈತರಿಗೆ ಪ್ರೋತ್ಸಾಹ ನೀಡಲಾಗಿದೆ.
ಮಡಿಕೇರಿ ಜೂ.18 NEWS DESK : ಪ್ರಸಕ್ತ (2025-26) ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ (ssp.postmatric.karnataka.gov.in) ನಲ್ಲಿ ಅರ್ಜಿ ಸಲ್ಲಿಸಲು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ(ಆದಾಯ ಮಿತಿ 2.50 ಲಕ್ಷ) ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿ (ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್ಪಿಸಿಐ ಮ್ಯಾಪಿಂಗ್ ಮಾಡಿಸಿರತಕ್ಕದು, ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ (ಕಡ್ಡಾಯ) , ಹಿಂದಿನ ವರ್ಷದ ಮಾಕ್ರ್ಸ್ಕಾರ್ಡ್ ಪ್ರತಿ, ಇತ್ತೀಚಿನ ಭಾವಚಿತ್ರ, ಅಧ್ಯಯನ/ ಬೋನಾಫೈಡ್ ಪ್ರಮಾಣ ಪತ್ರ (sstudy/bonofide certificate) ಮೆಟ್ರಿಕ್ ನಂತರದ ಕೋರ್ಸ್ಗಳಿಗೆ) ಶುಲ್ಕ ರಶೀದಿ (Frees Receipt) (ಮೆಟ್ರಿಕ್ ನಂತರದ ಕೋರ್ಸ್ಗಳಿಗೆ), ತಂದೆ/ತಾಯಿ/ಪೋಷಕರ ಆಧಾರ್ ಪ್ರತಿ ಈ ದಾಖಲಾತಿಗಳೊಂದಿಗೆ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು. ಆದಾಯ ಮಿತಿ…
ಮಡಿಕೇರಿ ಜೂ.18 NEWS DESK : ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇಲಾಖಾ ವತಿಯಿಂದ ನೀಡಲಾಗುವ ಪ್ರೋತ್ಸಾಹಧನ ಮಂಜೂರಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರೋತ್ಸಾಹಧನ ವಿವರ: ದ್ವಿತೀಯ ಪಿಯುಸಿ ರೂ.20 ಸಾವಿರ, ಪದವಿ ರೂ.25 ಸಾವಿರ, ಯಾವುದೇ ಪೋಸ್ಟ್ ಗ್ರ್ಯಾಜ್ಯುವೇಟ್ ಕೋರ್ಸ್ ಎಂ.ಎ, ಎಂ.ಎಸ್ಸಿ, ಇತ್ಯಾದಿ ರೂ.30 ಸಾವಿರ ಮತ್ತು ಕೃಷಿ, ಎಂಜಿನಿಯರಿಂಗ್, ವೆಟರ್ನರಿ, ಮೆಡಿಸಿನ್ ರೂ.35 ಸಾವಿರ. ಅರ್ಹತೆ: ವಿದ್ಯಾರ್ಥಿಗಳು ದ್ವಿತೀಯ, ಅಂತಿಮ ವರ್ಷದ ಪಿಯುಸಿಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಸಿಬಿಎಸ್ಸಿ ಮತ್ತು ಐಸಿಎಸ್ಇ ವತಿಯಿಂದ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರೂ ಸಹ ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನ ಪಡೆಯಲು ಅರ್ಹರಿರುತ್ತಾರೆ. ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್ ಕೋರ್ಸುಗಳಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು. ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಈ ಕೋರ್ಸ್ಗಳಿಗೆ ಸೆಮಿಸ್ಟರ್ ಪದ್ದತಿ ಇದ್ದಲ್ಲಿ ಎಲ್ಲಾ ಸೆಮಿಸ್ಟರ್ಗಳಲ್ಲಿ…
ನಾಪೋಕ್ಲು ಜೂ.18 NEWS DESK : ಗಾಳಿ ಸಹಿತ ಮಳೆಯಿಂದಾಗಿ ಹೋಬಳಿ ವ್ಯಾಪ್ತಿಯಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಅಲ್ಲಲ್ಲಿ ಮರಗಳು ಮುರಿದು ಬಿದ್ದ ಪರಿಣಾಮ ಮನೆಗಳಿಗೆ ಹಾನಿ ಸಂಭವಿಸಿದಲ್ಲದೆ, ಹಲವೆಡೆ ವಿದ್ಯುತ್ ಕಡಿತಗೊಂಡಿದೆ. ಎಮ್ಮೆಮಾಡು ಗ್ರಾಮದ ನಬೀಶ ಅವರ ವಾಸದ ಮನೆಗೆ ರಾತ್ರಿ ಬಾರೀ ಗಾತ್ರದ ಮರ ಬಿದ್ದು ಹಾನಿ ಸಂಭವಿಸಿದೆ. ಮನೆಯ ಚಾವಣಿಗೆ ಅಳವಡಿಸಿದ 5 ಸಿಮೆಂಟ್ ಶೀಟ್ ಹುಡಿಯಾಗಿರುವುದಲ್ಲದೆ ಗೋಡೆ ಬಿರುಕು ಬಿಟ್ಟು ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಪರಿವೀಕ್ಷಕ ರವಿಕುಮಾರ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದರು. ಕಕ್ಕಬೆ -ಕುಂಜಿಲ ಗ್ರಾಮದ ನಿವಾಸಿ ಕೆ.ಎಂ.ಮರಿಯಮ್ಮ ಅವರ ವಾಸದ ಮನೆ ಗೋಡೆ ಕುಸಿದು ಹಾನಿ ಸಂಭವಿಸಿದೆ. ಹೊದ್ದೂರು ಗ್ರಾಮ ಪಂಚಾಯತಿಯ ಕುಂಬಳಗಾಳು ಗ್ರಾಮದ ನಿವಾಸಿ ಕಲ್ಲೆಂಗಡ ಗಿರೀಶ್ ಎಂಬುವರ ತೋಟದ ಲೈನ್ ಮನೆಯ ಮೇಲೆ ಬಾರಿ ಗಾತ್ರದ ಮರ ಬಿದ್ದು ಹಾನಿ ಸಂಭವಿಸಿದೆ. ಮನೆ ಸಮೀಪದ ತೋಟದಲ್ಲಿದ್ದ ಬಾರಿ ಗಾತ್ರದ ಕಾಡು ಬೇವು ಮರ ಗಾಳಿ ಮಳೆಗೆ ಮುರಿದು…
ಮಡಿಕೇರಿ ಜೂ.18 NEWS DESK : ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬಾಳಲೆ ಸಮೀಪದ ಜಾಗಲೆ ಎಂಬಲ್ಲಿ ನಡೆದಿದೆ. ತೋಟದ ಲೈನ್ ಮನೆಯಲ್ಲಿ ವಾಸಿಸುತ್ತಿರುವ ಕಾಕು ಎಂಬುವರ ಪುತ್ರ ಕುಳ್ಳ ಎಂಬುವವರು ಕರಡಿ ದಾಳಿಗೆ ಒಳಗಾದವರು. ನೆನ್ನೆ ರಾತ್ರಿ ಮನೆಯ ಹೊರಗಡೆ ಬಂದಿದ್ದ ಸಂದರ್ಭ ಕುಳ್ಳ ಅವರ ಮೇಲೆ ಎರಗಿರುವ ಕರಡಿ ಮುಖದ ಭಾಗಕ್ಕೆ ಹೆಚ್ಚಿನ ಗಾಯಗೊಳಿಸಿದೆ. ಗೋಣಿಕೊಪ್ಪಲು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ.






