ಲೇಖಕ: admin

ಕುಶಾಲನಗರ ಜೂ.28 NEWS DESK : ಜಿಲ್ಲೆಯಲ್ಲಿ ಕಾರ್ಡಿಯಾಲಜಿ ಯೂನಿಟ್ ತೆರೆಯಲು ಸರ್ಕಾರದ ಆದೇಶವಾಗಿದ್ದು, ಆದಷ್ಟು ಬೇಗನೇ ಜಿಲ್ಲೆಯಲ್ಲಿ ಕಾರ್ಡಿಯಾಲಜಿ ಯೂನಿಟ್ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡರವರು ತಿಳಿಸಿದರು. ಕುಶಾಲನಗರ ಸೈರಸ್ ಆಸ್ಪತ್ರೆಯಲ್ಲಿ ಮಾಧ್ಯಮ ಸ್ಪಂದನದ ವತಿಯಿಂದ ಏರ್ಪಡಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಾರಕ್ಕೆ 400-450ರೋಗಿಗಳು ಚಿಕಿತ್ಸೆಗಾಗಿ ಹೊರಗೆ ತೆರಳುತ್ತಿದ್ದಾರೆ. ಆದ್ದರಿಂದ ಜಿಲ್ಲೆಯ ಜನತೆಗೆ ಅನುಕೂಲವಾಗುವ ದೃಷ್ಟಿಯಿಂದ ಹಂತಹಂತವಾಗಿ ಎಲ್ಲಾ ವೈದ್ಯಕೀಯ ಸೌಲಭ್ಯಗಳನ್ನು ಕೊಡುವ ಕೆಲಸಕ್ಕೆ ಸರ್ಕಾರ ಮುಂದಾಗಲಿದೆ ಎಂದರು.  ಮಾಧ್ಯಮ ಸ್ಪಂದನದಿಂದ ಯಶಸ್ವಿ ರಕ್ತದಾನ ಶಿಬಿರ ಆಯೋಜಿಸಿದ್ದಾರೆ‌. ರಕ್ತದಾನ ಮಾಡುವ ಮೂಲಕ ಅದೆಷ್ಟೋ ಜೀವಗಳನ್ನು ಉಳಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದೀರಾ. ಮಾಧ್ಯಮ ಮಿತ್ರರ ಸಮಾಜಮುಖಿ ಕೆಲಸಗಳಿಗೆ ಸದಾ ನನ್ನ ಸಹಕಾರ ಇರಲಿದೆ ಎಂದರು. ಮಾಧ್ಯಮ ಸ್ಪಂದನದ ಸಂಸ್ಥಾಪಕರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಸುವ ಜವಾಬ್ದಾರಿ ಶಾಸಕರ ಹೆಗಲ ಮೇಲಿದೆ. ಈ ದಿಸೆಯಲ್ಲಿ ಯುವ…

Read More

ಮಡಿಕೇರಿ ಜೂ.27 NEWS DESK : ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ನೀಡಿದರು. ಕೆ.ಬಾಡಗ ಗ್ರಾಮದಲ್ಲಿ ಶಾಸಕರ ವಿಶೇಷ 47 ಲಕ್ಷ ಅನುದಾನದಲ್ಲಿ ನಿರ್ಮಾಣವಾದ ತಾಯಿ ಭೂಮಿ ಪೈಸಾರಿ ಹಾಡಿ, ನಾಣಚ್ಚಿ ಗದ್ದೆ ಹಾಡಿ ಹಾಗೂ ಕೋಡಂಗೆ ಭಾಗದ ವಿವಿಧ ಅಭಿವೃದ್ಧಿ ರಸ್ತೆಯನ್ನು ಶಾಸಕರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು, ಸರಕಾರ ಹಾಗೂ ತಾನು ಜನಸಾಮಾನ್ಯರ ಮೂಲಭೂತ ಸೌಲಭ್ಯಗಳಲ್ಲಿ ಒಂದಾದ ರಸ್ತೆಯ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದ್ದು, ಕಳೆದ ಹಲವಾರು ದಶಕಗಳಿಂದ ಅಭಿವೃದ್ಧಿ ಕಾಣದೆ ಜನಸಾಮಾನ್ಯರ ಬಳಕೆಗೆ ಯೋಗ್ಯವಲ್ಲದ ರಸ್ತೆಗಳನ್ನು ಉತ್ತಮಗೊಳಿಸುವತ್ತ ಗಮನಹರಿಸಿರುವುದಾಗಿ ತಿಳಿಸಿದರು. ಸಾರ್ವಜನಿಕರು ಸಲ್ಲಿಸಿದ ಬೇಡಿಕೆಗೆ ಅನುಸಾರ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿತ್ತು, ಜನರ ಮೂಲಭೂತ ಸೌಲಭ್ಯ ಪೂರೈಕೆಗೆ ತಾವು ಸದಾ ಬದ್ಧರಾಗಿರುವುದಕ್ಕೆ ತಿಳಿಸಿದರು. ಗ್ರಾಮೀಣ ಜನತೆಯು ಆರ್ಥಿಕವಾಗಿ ಸದೃಢವಾಗಲು ಕೃಷಿ ಚಟುವಟಿಕೆಗಳೊಂದಿಗೆ ಉತ್ತಮ ರಸ್ತೆಯ ಸೌಲಭ್ಯದ ಅವಶ್ಯಕತೆಯನ್ನು ಮನಗಂಡಿರುವ ತಾವು, ರಸ್ತೆ ಕುಡಿಯುವ ನೀರು ಹಾಗೂ…

Read More

ಮಡಿಕೇರಿ ಜೂ.27 NEWS DESK : ಮರದಿಂದ ಬಿದ್ದು ಗಾಯಗೊಂಡಿದ್ದ ಕಾಳ ಅವರ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ  ಆರೋಗ್ಯ ವಿಚಾರಿಸಿದರು. ಕೆಲ ತಿಂಗಳ ಹಿಂದೆ ಕೆಲಸ ಮಾಡುತ್ತಿದ್ದ ಸಂದರ್ಭ ಮರದಿಂದ ಬಿದ್ದು ಸೊಂಟ ಭಾಗಕ್ಕೆ ತೀವ್ರವಾದ ಗಾಯಗಳೊಂದಿಗೆ ಕಾಳ ರವರು ಆಸ್ಪತ್ರೆಗೆ ಸೇರಿದ್ದರು. ಚಿಕಿತ್ಸೆಗೆ ಪೂರ್ಣ ಸಹಕಾರ ನೀಡಿದ್ದ ಶಾಸಕರು, ಕಾಳ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಶೀಘ್ರವಾಗಿ ಗುಣಮುಖರಾಗಿ ಬರುವಂತೆ ಹಾರೈಸಿದರು. ಯಾವುದೇ ರೀತಿಯಾದ ತೊಂದರೆ ಆದಲ್ಲಿ ತನ್ನನ್ನು ಸಂಪರ್ಕಿಸುವಂತೆ ಈ ಸಂದರ್ಭದ ಶಾಸಕರು ತಿಳಿಸಿದರು.

Read More

ಮಡಿಕೇರಿ ಜೂ.27 NEWS DESK : ಮಡಿಕೇರಿ ಇನ್ನರ್ ವೀಲ್  ಸಂಸ್ಥೆಯ ನೂತನ ಅಧ್ಯಕ್ಷೆಯಾಗಿ ರಶ್ಮಿ ಪ್ರವೀಣ್ ಮತ್ತು ಕಾಯ೯ದಶಿ೯ಯಾಗಿ ಮೃಣಾಲಿನಿ ಚಿಣ್ಣಪ್ಪ ಆಯ್ಕೆಯಾಗಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ಜು.1 ರಂದು ಬೆಳಗ್ಗೆ 11.30 ಗಂಟೆಗೆ ಇನ್ನರ್ ವೀಲ್ ಸಂಸ್ಥೆಯ 51ನೇ ಅಧ್ಯಕ್ಷೆಯಾಗಿ ರಶ್ಮಿ ಪ್ರವೀಣ್ , ಕಾಯ೯ದಶಿ೯ಯಾಗಿ ಮೃಣಾಲಿನಿ ಚಿಣ್ಣಪ್ಪ ಅಧಿಕಾರ ಸ್ವೀಕರಿಸಲಿದ್ದು, ಇನ್ನರ್ ವೀಲ್ ಸಂಸ್ಥೆಯ ಸ್ಥಾಪಕಾಧ್ಯಕ್ಷೆ ಡಾ. ಜಯಲಕ್ಷ್ಮಿ ಪಾಟ್ಕರ್ ಪದಗ್ರಹಣ ನೆರವೇರಿಸಲಿದ್ದಾರೆ.

Read More

ಮಡಿಕೇರಿ ಜೂ.27 NEWS DESK : ಕೊಡಗು ಪತ್ರಕತ೯ರ ಸಂಘದ ವತಿಯಿಂದ ನೀಡಲಾಗುವ 2025 ನೇ ವಷ೯ದ ಅತ್ಯುತ್ತಮ ವರದಿಗಳಿಗಾಗಿನ   ಪ್ರಶಸ್ತಿಗಳು ಘೋಷಣೆಯಾಗಿದೆ. ಶಕ್ತಿ ಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ. ಅನಂತಶಯನ ಅವರು  ಅತ್ಯುತ್ತಮ ಮಾನವೀಯ ವರದಿಗಾಗಿ ತಮ್ಮ  ಮಾತ್ರಶ್ರೀ   ರಾಜಲಕ್ಷ್ಮಿ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ದತ್ತಿ    ಪ್ರಶಸ್ತಿಯು  ಶಕ್ತಿ ಪತ್ರಿಕೆಯಲ್ಲಿ ಪ್ರಕಟಿತ  .ನಿಸ್ವಾಥ೯ ಸೇವೆ ಮೂಲಕ  ಮೂಕಪ್ರಾಣಿಗಳಿಗೆ  ಆಸರೆಯಾದ ಭವಾನಿ ಎಂಬ.ಶೀಷಿ೯ಕೆಯ ವರದಿಗಾಗಿ ಅಶ್ರಫ್ ಕರಡ ಇವರಿಗೆ ಲಭಿಸಿದೆ. ಸಮಾಜಸೇವಕ ನಾಪಂಡ ಮುತ್ತಪ್ಪ ಅನರು ಮಾತ್ರಶ್ರೀ     ನಾಪಂಡ ಬೋಜಮ್ಮ ಅವರ ಹೆಸರಿನಲ್ಲಿ    ಸ್ಫಾಪಿಸಿರುವ   ಅತ್ಯುತ್ತಮ  ರಾಜಕೀಯ ವರದಿಗಾಗಿನ ದತ್ತಿ  ಪ್ರಶಸ್ತಿಯು ಸಂಯುಕ್ತಕನಾ೯ಟಕ ಪತ್ರಿಕೆಯಲ್ಲಿ ಪ್ರಕಟವಾದ  ಜನಸಂಖ್ಯೆಯೇ ಕೊಡಗು ಎಂ.ಪಿ. ಸ್ಥಾನಕ್ಕೆ ಉರಳಾಯಿತೇ ಎಂಬ  ಶೀಷಿ೯ಕೆಯ ವರದಿಗಾಗಿ ಎಸ್ .ಜಿ. ಉಮೇಶ್ ಅವರಿಗೆ ಸಂದಿದೆ. ಸಮಾಜಸೇವಕ ನಾಪಂಡ ಮುದ್ದಪ್ಪ ಅವರು ದೃಷ್ಯ ವಾಹಿನಿಯಲ್ಲಿ ಪ್ರಸಾರವಾದ ಕೊಡಗಿನ ಜ್ವಲಂತ ಸಮಸ್ಯೆಗಳಿಗೆ ಸಂಬಂಧಿಸಿದ  ಅತ್ಯುತ್ತಮ…

Read More

ಮಡಿಕೇರಿ ಜೂ.27 NEWS DESK : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಆಶ್ರಯದಲ್ಲಿ ಜಾನಪದ ಲೋಕ ಸಹಯೋಗದೊಂದಿಗೆ ಎರಡು ದಿನಗಳ ಕಾಲ ನಡೆಯಲಿರುವ ನಾನೂ ನಾಯಕಿ-2026 ಶಿಬಿರದಲ್ಲಿ ಕೊಡಗು ಜಿಲ್ಲೆಯಿಂದ ಐದು ಮಂದಿ ಮಹಿಳಾ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ. ರಾಮನಗರದ ಜಾನಪದ ಲೋಕ ಬಯಲು ರಂಗಮಂದಿರದಲ್ಲಿ 350 ಕ್ಕೂ ಅಧಿಕ ಮಹಿಳಾ ಪ್ರತಿನಿಧಿಗಳು ಭಾಗವಹಿಸಿದ್ದು,  ಕೊಡಗು ಜಿಲ್ಲೆಯಿಂದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ನೇತೃತ್ವದಲ್ಲಿ ಐದು ಮಂದಿ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ.  ಎರಡು ದಿನಗಳ ಕಾಲ ನಡೆಯಲಿರುವ  ಶಿಬಿರದಲ್ಲಿ ನಾಯಕತ್ವದ ವಿಷಯಗಳ ಬಗ್ಗೆ 8 ಅಧಿವೇಶನಗಳು ಜರುಗಲಿದ್ದು  ರಾಜ್ಯದ ವಿವಿಧಡೆಗಳ  ಸಂಪನ್ಮೂಲ ವ್ಯಕ್ತಿಗಳು ಉಪನ್ಯಾಸ ನೀಡಲಿದ್ದಾರೆ. ಎರಡನೇ ದಿನ ನಡೆಯುವ ಅಧಿವೇಶನದಲ್ಲಿ ಶರಣ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಅಧ್ಯಕ್ಷರಾದ ಕೆ ಎಸ್ ಮೂರ್ತಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದ 30ಕ್ಕೂ ಅಧಿಕ ಶೈಕ್ಷಣಿಕ ಜಿಲ್ಲೆಗಳ ಪ್ರತಿನಿಧಿಗಳು ಶಿಬಿರದಲ್ಲಿ ಭಾಗವಹಿಸಿದ್ದಾರೆ  ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ…

Read More

ಮಡಿಕೇರಿ ಜೂ.27 NEWS DESK : ಆದರ್ಶ ಆಡಳಿತಗಾರ, ನಾಡಪ್ರಭು ಕೆಂಪೇಗೌಡರು ಬೆಂಗಳೂರನ್ನು ಮಾದರಿ ನಗರವನ್ನಾಗಿ ನಿರ್ಮಿಸಿದ್ದರು, ಆದರೆ ಇಂದು ಬೆಂಗಳೂರು ಮಿತಿಮೀರಿ ಬೆಳೆದಿದ್ದು, ಸುಸ್ಥಿರ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಬೇಕಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆಂಪೇಗೌಡರು ಅಂದಿನ ಆಡಳಿತ ಅವಧಿಯಲ್ಲಿ ಬೆಂಗಳೂರು ಪ್ರಾಂತ್ಯದಲ್ಲಿ ನೂರಾರು ಕೆರೆ-ಕಟ್ಟೆಗಳನ್ನು ನಿರ್ಮಿಸಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಂಡಿದ್ದರು, ಆದರೆ ಇಂದು ಬೆಂಗಳೂರು ಹೆಚ್ಚಿನ ವೇಗದ ಬೆಳವಣಿಗೆಯಿಂದ ಸುಸ್ಥಿರ ಅಭಿವೃದ್ಧಿ ಆಗುತ್ತಿದೆಯೇ ಎಂಬ ಬಗ್ಗೆ ಯೋಚಿಸಬೇಕಿದೆ ಎಂದು ಶಾಸಕರು ನುಡಿದರು. ಎಲ್ ನಿನೋ ಪರಿಣಾಮದಿಂದ ಮಳೆಯಾಗುತ್ತಿಲ್ಲ, ಎಲ್ಲೋ ಸಮುದ್ರ ಪ್ರದೇಶದಲ್ಲಿ ಎಲ್ ನಿನೋ ಆಗಿರುವುದಕ್ಕೆ ಜಿಲ್ಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಸಾಕಷ್ಟು ಪ್ರಮಾಣದಲ್ಲಿ ಮಳೆ ಕಡಿಮೆಯಾಗಿದೆ,…

Read More

ಕುಶಾಲನಗರ ಜೂ.27 NEWS DESK  :  ಕುಶಾಲನಗರದ ರಥ ಬೀದಿಯಲ್ಲಿರುವ ಶ್ರೀ ಚೌಡೇಶ್ವರಿ ದೇವಿ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ವಾರ್ಷಿಕೋತ್ಸವ ಅಂಗವಾಗಿ ದೇವಾಲಯದಲ್ಲಿ  ಹೋಮ ಹವನ  ಸೇರಿದಂತೆ ಪೂಜಾ ಕೈಂಕರ್ಯಗಳು ನಡೆದವು.   ಕುಶಾಲನಗರ ದೇವಾಲಯ ಒಕ್ಕೂಟ ಸಮಿತಿಯ ಪ್ರತಿನಿಧಿಗಳು ಫಲ ತಾಂಬೂಲದೊಂದಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಸಮುದಾಯ ಭಾಂಧವರು ಕಾವೇರಿ ನದಿಗೆ ತೆರೆಳಿ ನದಿಯಲ್ಲಿ ಗಂಗಾಪೂಜೆ,  ನಂತರ ಕಾವೇರಿ ನದಿಯಿಂದ ಕಳಸ ಹೊತ್ತು ಭಕ್ತಾದಿಗಳು ನಗರದ ಮುಖ್ಯ ರಸ್ತೆಯಲ್ಲಿ  ಮೆರವಣಿಗೆ ಮೂಲಕ ಸಾಗಿ ದೇವಾಲಯಕ್ಕೆ ತೆರಳಿದರು. ಮಧ್ಯಾಹ್ನ ದೇವಾಲಯದಲ್ಲಿ  ದೇವಿಗೆ ಪೂಜಾ ಕೈಂಕರ್ಯಗಳು ಜರುಗಿ ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಅನ್ನಸಂರ್ತಪಣೆ ಕಾರ್ಯಕ್ರಮ ನಡೆಯಿತು.  ಪೂಜಾ ಕಾರ್ಯಗಳನ್ನು ದೇವಸ್ಥಾನದ ಅರ್ಚಕ  ಪ್ರಸನ್ನ ಕುಮಾರ್ ನೆರವೇರಿಸಿದರು. ವಾರ್ಷಿಕೋತ್ಸವ ಅಂಗವಾಗಿ ಮಡಿಲಕ್ಕಿ ಕೊಡುವ ಕಾರ್ಯಕ್ರಮವನ್ನು ದೇವಸ್ಥಾನದ ವತಿಯಿಂದ ಆಯೋಜಿಸಲಾಗಿತ್ತು. ದೇವಾಂಗ ಸಂಘದ ಅಧ್ಯಕ್ಷರಾದ ಡಿ.ವಿ. ರಾಜೇಶ್,  ಉಪಾಧ್ಯಕ್ಷರಾದ ಡಿ. ಆರ್. ಸೋಮಶೇಖರ್  ಡಿ.ವಿ.ಚಂದ್ರು,  ಪ್ರಧಾನ ಕಾರ್ಯದರ್ಶಿ ಡಿ.ಆರ್. ಕೃಷ್ಣಕುಮಾರ್, ಖಜಾಂಚಿ ಡಿ.ಜಿ. ಪ್ರದೀಪ್, …

Read More

ಮಡಿಕೇರಿ ಜೂ.27 NEWS DESK : ಮಡಿಕೇರಿಯ ಜಿಲ್ಲಾ ನ್ಯಾಯಾಲಯ ಮತ್ತು ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಶುಕ್ರವಾರ ರಾತ್ರಿ 9.55ರ ಸಮಯದಲ್ಲಿ ಔಟ್ ಲುಕ್ ಮೇಲ್ ಮೂಲಕ ಸಂದೇಶ ರವಾನಿಸಲಾಗಿದೆ. ಜಿಲ್ಲಾ ನ್ಯಾಯಾಧೀಶರಿಗೆ ಈ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದ್ದು, ದುರ್ಗಾ ಸ್ಟಾಲಿನ್ ಎಂಬುವವರು ಪ್ರವಾದಿ ಅವರನ್ನು ಅವಹೇಳನ ಮಾಡಿದ್ದಾರೆ ಎಂದು ಸಂದೇಶದಲ್ಲಿ ಬರೆಯಲಾಗಿದೆ. ಮಾತ್ರವಲ್ಲದೆ ತಮಿಳುನಾಡು ಮಾಜಿ ಸಿ.ಎಂ ಸ್ಟಾಲಿನ್ ಅವರ ಬಗ್ಗೆಯೂ ಆರೋಪಗಳನ್ನು ಮಾಡಿರುವುದು ಕಂಡು ಬಂದಿದೆ. ಒಟ್ಟು 5 ಸಿಲಿಕಾನ್ ಬಾಂಬ್ ಇಡಲಾಗಿದೆ ಎಂದು ಉಲ್ಲೇಖಿಸಲಾಗಿದ್ದು, 5 ಸಿಲಿಕಾನ್ ಬಾಂಬ್ ಗಳ ಪೈಕಿ 3 ಬಾಂಬ್‍ಗಳ್ನು ರೆಕಾರ್ಡ್ ಕೊಠಡಿಯಲ್ಲಿ ಮತ್ತು 2 ಬಾಂಬ್ ಗಳನ್ನು ಕೋರ್ಟ್‍ನ ಮೊದಲ ಮಹಡಿಯ ಈ-ಸೇವಾ ಕೇಂದ್ರದಲ್ಲಿಡಲಾಗಿದೆ. ಮಧ್ಯಾಹ್ನ 2.20 ಗಂಟೆಗೆ ನ್ಯಾಯಾಧೀಶರನ್ನು ಕೋರ್ಟ್‍ನಿಂದ ಖಾಲಿ ಮಾಡಿಸಬೇಕು ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಕೋರ್ಟ್ ಅಧಿಕಾರಿಗಳು ಈ ಸಂದೇಶ ನೋಡಿದ ತಕ್ಷಣ ನ್ಯಾಯಾಧೀಶರ…

Read More

ಮಡಿಕೇರಿ NEWS DESK ಜೂ.27 : ಕುಶಾಲನಗರದ ನಿಸರ್ಗಧಾಮ ವ್ಯಾಪ್ತಿಯಲ್ಲಿ ನಡೆದಿರುವ ಮತಾಂತರ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೊಡಗು ಜಿಲ್ಲಾ ಮಹಿಳಾ ಬಿಜೆಪಿ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಹಿಳಾ ಬಿಜೆಪಿ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಅವರು, ಮಹಿಳೆಯೊಬ್ಬರು ಹಾಗೂ ಆಕೆಯ ಪುತ್ರನ ಮತಾಂತರ ಪ್ರಕರಣ ಖಂಡನೀಯವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಮತಾಂತರ ಪ್ರಕರಣವನ್ನು ವಿರೋಧಿಸಿ ಹಿಂದೂ ಸಂಘಟನೆಗಳ ವತಿಯಿಂದ ಜೂ.30 ರಂದು ಕುಶಾಲನಗರದಲ್ಲಿ ನಡೆಯುವ ಜನಾಂದೋಲನಕ್ಕೆ ಮಹಿಳಾ ಬಿಜೆಪಿ ಸಂಪೂರ್ಣ ಬೆಂಬಲವನ್ನು ನೀಡಲಿದೆ. ಅಮಾಯಕ ಹಿಂದೂ ಮಹಿಳೆಯರ ಮತಾಂತರವನ್ನು ಮತ್ತು ಹಿಂದೂಗಳ ಭಾವನೆಗೆ ಧಕ್ಕೆ ತರುವ ಯಾವುದೇ ಘಟನೆಗಳನ್ನು ಬಿಜೆಪಿ ಸಹಿಸುವುದಿಲ್ಲವೆಂದು ತಿಳಿಸಿದ್ದಾರೆ. ಪವಿತ್ರ ಭೂಮಿ ಕಾವೇರಿ ನಾಡು ಕೊಡಗಿನಲ್ಲಿ ಮತಾಂತರ ಮತ್ತು ಲವ್ ಜಿಹಾದ್ ನಂತಹ ವಿಷಬೀಜಗಳನ್ನು ಬಿತ್ತುತ್ತಿರುವವರನ್ನು ಪೊಲೀಸ್ ಇಲಾಖೆ ತಕ್ಷಣ ಪತ್ತೆ ಹಚ್ಚಬೇಕು. ಜಿಲ್ಲೆಯಲ್ಲಿ ಇಲ್ಲಿಯವರೆಗೆ ನಡೆದಿರುವ ಪ್ರಕರಣಗಳ ಕುರಿತು ರಾಜ್ಯ ಗೃಹ ಇಲಾಖೆ…

Read More