ಲೇಖಕ: admin

ಮಡಿಕೇರಿ ಮೇ 16 NEWS DESK : ಹೆಬ್ಬಾಲೆ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಸಂಭ್ರಮದಿಂದ ನಡೆಯಿತು. ಭೀಮ ರಥೋತ್ಸವವನ್ನು ರಾಜ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಗಳನ್ನು ಜನರಿಗೆ ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶ ಕಂಡ ಅಪ್ರತಿಮ ನಾಯಕ. ಅಂಬೇಡ್ಕರ್ ಅವರು ಯಾವುದೇ ಒಂದು ಜಾತಿಗೆ ಸೀಮಿತವಾದ ವ್ಯಕ್ತಿಯಲ್ಲ ಎಲ್ಲಾ ಜಾತಿಯ ಜನರು ಗೌರವಿಸುವಂತಾಗಬೇಕು ಎಂದರು. ಮುಖ್ಯ ಭಾಷಣಕಾರರಾಗಿ ಮಾತನಾಡಿದ ಡಾ. ಜೆ.ಸೋಮಣ್ಣ, ಬಹುಜನರ ನಾಯಕ ಡಾ. ಬಿ.ಆರ್.ಅಂಬೇಡ್ಕರ್ ಅವರು ಬಾಲ್ಯದಿಂದಲೂ ಅನೇಕ ಕಷ್ಟಗಳನ್ನು ಅನುಭವಿಸುವ ಮೂಲಕ ತಮ್ಮ ಜನಕ್ಕೆ ಆಗುತ್ತಿದ್ದ ದೌರ್ಜನ್ಯ ದಬ್ಬಾಳಿಕೆ ಕಣ್ಣಿಂದಲೇ ನೋಡಿದರು. ತಾನು ಕೂಡ ಅನುಭವಿಸಿದರು ಶಾಲೆಯಲ್ಲಿ ಓದುವಾಗ ಹೊರಗಡೆ ಕೂತು ಪಾಠ ಕೇಳುತ್ತಿದ್ದರು ಈ ತಾರತಮ್ಯವನ್ನು ಪಣತೊಟ್ಟು ಪೋಷಿತ ಸಮುದಾಯಗಳಿಗೆ ಸಮಾನ ಹಕ್ಕುಗಳನ್ನು ಕೊಡಿಸುವ ಮೂಲಕ ಸಮಾಜದಲ್ಲಿ ಎಲ್ಲರಂತೆ ಸಮಾನವಾಗಿ ಬದುಕಲು ಭಾರತದ…

Read More

ವಿರಾಜಪೇಟೆ ಮೇ 16 NEWS DESK : ಬೇಟೋಳಿ ರಾಮನಗರದ ಶ್ರೀ ಪುದುಪಾಡಿ ಅಯ್ಯಪ್ಪ ಸಭಾಭವನದಲ್ಲಿ ಮಕ್ಕಳ ವೈದಿಕ ಶಿಬಿರಕ್ಕೆ ಚಾಲನೆ ನೀಡಲಾಯಿತು. ಶ್ರೀ ಗಣಪತಿ ಹಾಗೂ ಶ್ರೀ ಪುದುಪಾಡಿ ಅಯ್ಯಪ್ಪ ದೇವಸ್ಥಾನದಲ್ಲಿ ಕಾರ್ಯಕ್ರಮವು ಯಶಸ್ವಿಯಾಗಲಿ ಎಂದು ಪುರೋಹಿತರು ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ನಂತರ ಸಭಾ ಭವನದಲ್ಲಿ ಪುದುಪಾಡಿ ಅಯ್ಯಪ್ಪ ದೇವಸ್ಥಾನದ ಉಪಾಧ್ಯಕ್ಷ  ಬಿ.ಜಿ.ನಂದ ಬೋರ್ಕರ್ ಹಾಗೂ ಗೀತಾ ಬೋರ್ಕರ್ ದಂಪತಿಗಳು ಶಿಬಿರವನ್ನು ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಅರ್ಚಕ ರಾಜೇಶ್ ಭಟ್  ಶಿಬಿರದ ದಿನಚರಿ ಹಾಗೂ ಶಿಬಿರಾರ್ಥಿಗಳು ಪಾಲಿಸ ಬೇಕಾದ ವಿಧಾನಗಳ ಬಗ್ಗೆ ಮಾಹಿತಿಯನ್ನು ನೀಡಿದರು. ವೈದಿಕ ವಿಧಾನಗಳನ್ನು ವಿವರಿಸಿದರು. ಒಟ್ಟು ಹದಿನೈದು ಮಕ್ಕಳು  ಶಿಬಿರದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್, ವೇಣುಗೋಪಾಲ್ ಭಟ್, ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಪಿ.ಸಂತೋಷ್, ಶೈಲೇಶ್ ಕಾಮತ್, ಶಾಂತಿಭೂಷಣ್ ಬೋರ್ಕರ್, ಜ್ಯೋತಿ, ಆಡಳಿತ ಮಂಡಳಿಯ ಸರ್ವ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಬಿರವು ಒಟ್ಟು ನಾಲ್ಕು ದಿವಸಗಳ ಕಾಲ…

Read More

ಮಡಿಕೇರಿ ಮೇ 16 NEWS DESK :  ಕೆಸರಿನ ಓಕುಳಿಯ ಹಬ್ಬವೆಂದೇ ಖ್ಯಾತಿ ಪಡೆದಿರುವ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಬೋಡ್ ನಮ್ಮೆ ಮೇ 17 ಹಾಗೂ 18ರಂದು  ನಡೆಯಲಿದೆ ಎಂದು ತಕ್ಕಮುಖ್ಯಸ್ಥರು ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ, ಭದ್ರಕಾಳಿ ಹಾಗೂ ಮಾರಮ್ಮ ದೇವರ ಅಭಿವೃದ್ಧಿ ಸಮಿತಿ ಅಧ್ಯಕ್ಷ  ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಇತಿಹಾಸ ಪ್ರಸಿದ್ಧದ ಹಳ್ಳಿಗಟ್ಟು ಬೋಡ್ ನಮ್ಮೆ ಕೆಸರಿನ ಓಕುಳಿಯ ಹಬ್ಬವೆಂದೇ ಖ್ಯಾತಿಯನ್ನು ಹೊಂದಿದ್ದು, ಕಲ್ಲಿನ ಆನೆ ದೇವಸ್ಥಾನಕ್ಕೆ ಮುಖ ಮಾಡಿ ನಿಂತಿರುವ ದಕ್ಷಿಣ ಭಾರತದ ಏಕೈಕ ದೇವಸ್ಥಾನ ಕೂಡ ಇದಾಗಿದೆ. ಮೇ 17 ರಂದು ಗುಂಡಿಯತ್ ಅಯ್ಯಪ್ಪ ದೇವರ ಅವುಲ್ ಪೂಜೆ ಹಾಗೂ ರಾತ್ರಿ ಮನೆಕಳಿ ನಡೆಯಲಿದ್ದು, ಮೇ 18ರಂದು ಸಂಜೆ ಕುದುರೆ, ಮೊಗ ಹಾಗೂ ಪರಸ್ಪರ ಕೆಸರಿನ ಎರಚಾಟ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಹಬ್ಬದ ಆಚರಣೆ: ಮೇ 17ರಂದು ಬೆಳಿಗ್ಗೆ ಹಬ್ಬದ ವಿವಿಧ ಆಚರಣೆಗಳನ್ನು ನಡೆಸುವ…

Read More

ಕಣಿವೆ ಮೇ 16 NEWS DESK  : ವಿದ್ಯಾರ್ಥಿಗಳು ಕ್ರೀಡೆಗೆ ತೋರುವ ಆಸಕ್ತಿಗಿಂತಲೂ ಮಿಗಿಲಾಗಿ ಗ್ರಂಥಾಲಯದಲ್ಲಿನ ಪುಸ್ತಕಗಳನ್ನು ಅಭ್ಯಸಿಸಲು ಹೆಚ್ಚು ಒತ್ತು ನೀಡಬೇಕೆಂದು ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಹೇಳಿದರು.   ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಅಂತರ ಕಾಲೇಜು ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕ್ರೀಡೆ, ಸಾಹಿತ್ಯ, ಸಾಂಸ್ಕ್ರತಿಕ ಚಟುವಟಿಕೆಗಳು ಕೂಡ ಮುಖ್ಯ. ಆದರೆ, ಇವೆಲ್ಲಕ್ಕಿಂತಲೂ ವಿದ್ಯಾರ್ಥಿ ಅವಧಿಯಲ್ಲಿ ತರಗತಿಗಳ ಪಠ್ಯದ ವ್ಯಾಸಾಂಗವೂ ಅಷ್ಟೇ ಮುಖ್ಯವಾದ ಅಂಶವಾಗಬೇಕು ಎಂದರು. ವಿವಿ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಹಾಗೂ ಸಾಂಸ್ಕ್ರತಿಕ ಉತ್ಸವಗಳನ್ನು ಏರ್ಪಡಿಸುವ ಇರಾದೆಯನ್ನು ಕುಲಪತಿಗಳು ವ್ಯಕ್ತಪಡಿಸಿದರು. ಕಾಲೇಜು ಪ್ರಾಂಶುಪಾಲ ಡಾ.ಪುಟ್ಟರಾಜು ಮಾತನಾಡಿ, ಕುಲಪತಿಗಳ ಕರೆಯಂತೆ ವಿದ್ಯಾರ್ಥಿಗಳು ಕ್ರೀಡೆಗಳಿಗೆ ಕೊಡುವ ಪ್ರಾಮುಖ್ಯತೆಯನ್ನು ಪುಸ್ತಕಗಳ ಓದಿಗೆ ನೀಡುವ ಮೂಲಕ ಹೆಚ್ಚು ಜ್ಞಾನಾರ್ಜನೆ ಹೊಂದುವುದು ವಿದ್ಯಾರ್ಥಿಗಳ ಜೀವನದ ಅತ್ಯಂತ ಮಹತ್ತರ ಸಾಧನೆಯಾಗಿದೆ. ಜ್ಞಾನದ ಮುಂದೆ ಎಲ್ಲವೂ ಗೌಣ ಎಂದು ಪ್ರಾಂಶುಪಾಲರು ಅಭಿಪ್ರಾಯಿಸಿದರು. ಕಾಲೇಜಿನ ದೈಹಿಕ ಶಿಕ್ಷಣ…

Read More

ಮಡಿಕೇರಿ ಮೇ 16 NEWS DESK : ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು 24 ತಿಂಗಳುಗಳು ಕಳೆದಿದ್ದು, ಅರ್ಹ  ಫಲಾನುಭವಿಗಳು ಇದರಿಂದ ಉತ್ತಮ ಬದುಕು ಕಟ್ಟಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದರು. ನಗರದ ಜಿ.ಪಂ. ಕೆಡಿಪಿ ಸಭಾಂಗಣದಲ್ಲಿ  ಜಿಲ್ಲಾ ಮಟ್ಟದ ನಭೆ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ. ಬಡ ಜನರ ಶ್ರೇಯೋಭಿವೃದ್ಧಿಗಾಗಿ ಪಂಚ ಗ್ಯಾರಂಟಿಗಳು ಸಹಕಾರಿಯಾಗಿದೆ ಎಂದರು. ಅನ್ನಭಾಗ್ಯ ಯೋಜನೆಯಡಿಯಲ್ಲಿ ಪಡಿತರ ವಿತರಣೆಯಾಗುತ್ತಿದೆ. ಆದರೆ ಕೆಲ ಕಡೆಗಳಲ್ಲಿ ಪಡಿತರ ಪಡೆದು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇಂತಹ ಪ್ರಕರಣಗಳ ಬಗ್ಗೆ ಸೂಕ್ತ ಮಾಹಿತಿ ಪಡೆದು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸದಸ್ಯರಾದ ಕಾಳಿಮಾಡ ಪ್ರಶಾಂತ್  ಮಾತನಾಡಿ, ಈ ಹಿಂದಿನ ಸಭೆಯಲ್ಲಿ ಜಿಲ್ಲೆಯ ಸಿ.ಐ.ಟಿ ಕಾಲೇಜಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಮಾಡುವಂತೆ ತಿಳಿಸಲಾಗಿತ್ತು,…

Read More

ವಿರಾಜಪೇಟೆ ಮೇ 16 NEWS DESK : ವಿರಾಜಪೇಟೆಯ ಆರ್ಜಿ ಗ್ರಾಮದ ಕಲ್ಲುಬಾಣೆಯ ಯುವ ತಂಡದ ಮುಂದಾಳತ್ವದಲ್ಲಿ ಕಳೆದ ಎರಡು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳು ಹಾಗೂ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸಿಕೊಂಡು ಬರುತ್ತಿರುವ ಕಲ್ಲುಬಾಯ್ಸ್ ತಂಡದ ವತಿಯಿಂದ ‘ಕಲ್ಲುಬಾಯ್ಸ್ -3 ನ್ಯಾಷನಲ್ ಲೆವೆಲ್ ಕಾಲ್ಚೆಂಡು ಪಂದ್ಯಾವಳಿ ನವೆಂಬರ್ ತಿಂಗಳಲ್ಲಿ ವಿರಾಜಪೇಟೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ರಹೀಮ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾಲ್ಚೆಂಡು ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಮೊದಲನೇ ಬಹುಮಾನ ಒಂದುವರೆ ಲಕ್ಷ ರೂ ನಗದು ಮತ್ತು ಟ್ರೋಫಿ ಎರಡನೇ ಬಹುಮಾನ ಒಂದು ಲಕ್ಷ ರೂ ನಗದು ಮತ್ತು ಟ್ರೋಫಿ, ಮೂರನೇ ಬಹುಮಾನ 40,000 ರೂ ನಗದು ಮತ್ತು ಟ್ರೋಫಿ, ನಾಲ್ಕನೇ ಬಹುಮಾನ 20,000 ರೂ ನಗದು ಮತ್ತು ಟ್ರೋಫಿ ಮತ್ತು ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9482731092 ಸಂಪರ್ಕಿಸುವಂತೆ ಕೋರಿದ್ದಾರೆ.

Read More

ಕಾರ್ಕಳ ಮೇ 16 NEWS DESK : ಇನ್ಸ್ಟಿಟ್ಯೂಟ್‍ ಆಫ್ ಕಂಪನಿ ಸೆಕ್ರೆಟರಿ ಆಫ್‍ ಇಂಡಿಯಾ (CSEET )ರವರು 3 ಮೇ, 2025 ರಲ್ಲಿ ನಡೆಸಿದ CSEET  ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಮಿಥುನ ಶ್ರೀ 164 ಮತ್ತು ಸುವರ್ಣ ಹರ್ಷಲ್ ವೈ 162 ಅಂಕಗಳೊಂದಿಗೆ ವಿಶಿಷ್ಟ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಹಾರಿಕ ಗೌಡ ಆರ್.ಬಿ.(153), ಇಯಾನ್‍ ಪೌಲ್(147), ಬಸವ ಪ್ರಸಾದ್‍ ಕಾಜಿ(142), ಪೂರ್ಣ ಭಟ್ ಕೆ.ಎಲ್ (141), ಸೃಜನ್ ಎಸ್.ಭಟ್ (140), ಲಿಖಿತ್‍ ರೆಡ್ಡಿ ಹೆಚ್.ಎಂ(140), ರಕ್ಷಿತಾ ಆರ್.ಕಾಮತ್(135), ರೇಷ್ಮಾ ಜಿ.ಕೆ.(135) ಅಭಿಷೇಕ್ ಉಮಾದಿ(131), ಕೀರ್ತಿ ಪೈ(129), ಶ್ರದ್ಧಾ ಪಿ.ಅಂಗಡಿ(125), ಹೆಚ್.ಎ.ಅದನ್ ಬೆಳ್ಳಿಯಪ್ಪ(125), ಪ್ರಭವ್ ಜಿ.ಶೆಟ್ಟಿ(121), ಆರ್ಯ ಬಿ.ವಿ(120), ಅಪ್ಸರ್ ಪಾಹಿಮ್(120), ಧನ್ಯಶ್ರೀ ಶೆಟ್ಟಿ(119), ಸೌರವ್‍ ರವಿ ಶೇಟ್(116), ಪೃಥ್ವಿ ಜಾ ಜಿ(115), ಸಾತ್ವಿಕ್ ಯು.ಆರ್(114), ಕನಿಷ್ಕ ಸೇನ್.ಎಸ್.(113), ಸಪಲಿಗ ಸ್ವಾತಿ ತಿಮ್ಮಪ್ಪ(111), ಶ್ರೀಕಾರ್ ದುಬೀರ(111), ವಜ್ರ ಗೌಡ(110), ಶ್ರೇಯಸ್ ವಿ.ರೆಡ್ಡಿ (110), ಅನನ್ಯ ರಾಜೇಶ್ (109,…

Read More

ವಿರಾಜಪೇಟೆ  ಮಾ 15 NEWS DESK : ವಿರಾಜಪೇಟೆಯ ಬಾಳುಗೋಡುವಿನಲ್ಲಿರುವ ಏಕಲವ್ಯ ಮಾದರಿ ವಸತಿ ಶಾಲೆ/ಕಾಲೇಜಿನ (ಆಂಗ್ಲ ಮಾಧ್ಯಮ)2025-26 ನೇ ಸಾಲಿಗೆ ಪ್ರಥಮ ಪಿಯುಸಿ (ವಿಜ್ಞಾನ ಮತ್ತು ವಾಣಿಜ್ಯ ಶಾಸ್ತ್ರ) ಪ್ರವೇಶಾತಿಗಾಗಿ ಮತ್ತು 7 ನೇ ತರಗತಿಯಿಂದ 9 ನೇ ತರಗತಿಯವರೆಗೆ ಪರಿಶಿಷ್ಠ ಪಂಗಡ (ಎಸ್.ಟಿ) ವಿದ್ಯಾರ್ಥಿಗಳಿಂದ ನೇರ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 7-9 ನೇ ತರಗತಿವರೆಗಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದ್ದು, ಶಾಲಾ ಮಟ್ಟದಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ. 7 ತರಗತಿಗೆ 22 ವಿದ್ಯಾರ್ಥಿಗಳು, 8 ನೇ ತರಗತಿಗೆ 8 ವಿದ್ಯಾರ್ಥಿಗಳು, 9 ನೇ ತರಗತಿಗೆ 5 ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ ಅವಕಾಶವಿದೆ. ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ, ಊಟ, ಪುಸ್ತಕ, ಸಮವಸ್ತ್ರ ಎಲ್ಲವನ್ನು ಉಚಿತವಾಗಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 9828472732 ಸಂಖ್ಯೆಯನ್ನು ಸಂಪರ್ಕಿಸುವಂತೆ ಮತ್ತು ಪ್ರವೇಶಕ್ಕಾಗಿ ಶಾಲಾ ಕಛೇರಿಯನ್ನು ಸಂಪರ್ಕಿಸುವಂತೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಗೋಣಿಕೊಪ್ಪಲು, ಮೇ 16 NEWS DESK :  ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಒಟ್ಟು 36 ಯೂನಿಟ್ ರಕ್ತ ಸಂಗ್ರಹವಾಗಿರುವದಾಗಿ ಅಕ್ಷಯ ಚಾರಿಟೇಬಲ್ ಟೃಸ್ಟ್ ನ ಅಧ್ಯಕ್ಷ ಕೆ.ಕೆ.ಸೋಮಯ್ಯ ತಿಳಿಸಿದ್ದಾರೆ. ಗೋಣಿಕೊಪ್ಪಲಿನ ಅಕ್ಷಯ ಚಾರಿಟೇಬಲ್ ಟೃಸ್ಟ್ ಮತ್ತು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಗೋಣಿಕೊಪ್ಪಲು ಘಟಕದ ಸಂಯುಕ್ತ ಆಶ್ರಯದಲ್ಲಿ ಜರುಗಿದ ರಕ್ತದಾನ ಶಿಬಿರ ಯಶಸ್ವಿಯಾಗಿದ್ದು, ಕೊಡಗು ಜಿಲ್ಲೆಯಾದ್ಯಂತ ಸರಣಿ ರಕ್ತದಾನ ಶಿಬಿರವನ್ನು ಹಂತ ಹಂತವಾಗಿ ಹಮ್ಮಿಕೊಳ್ಳಲಾಗುವದು ಎಂದು ಹೇಳಿದರು. ಕರ್ನಾಟಕ ವನ್ಯ ಜೀವಿ ಮಂಡಳಿ ಸದಸ್ಯ ಹಾಗೂ ಕರ್ನಾಟಕ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಸಂಕೇತ್ ಪೂವಯ್ಯ ಹಾಗೂ ಗೋಣಿಕೊಪ್ಪಲು ಗ್ರಾ.ಪಂ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಜಂಟಿಯಾಗಿ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಯತಿರಾಜ್ ಮಾತನಾಡಿ, ಕೊಡಗಿನಲ್ಲಿ ತಿಂಗಳಿಗೆ 500 ಯೂನಿಟ್ ರಕ್ತದ ಅಗತ್ಯವಿದ್ದು, ರೋಗಿಗಳಿಗೆ ಜೀವದಾನ ನೀಡಲು ರಕ್ತ ಸಂಗ್ರಹ ಅಗತ್ಯ ಎಂದು ಹೇಳಿದರು. ಪ್ರತಿ ಮೂರು…

Read More

ಮೈಸೂರು ಮೇ 16 NEWS DESK : ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕರನ್ನು ಹತ್ಯೆ ಮಾಡಿದ ಭಯೋತ್ಪಾದಕರನ್ನು ಮಟ್ಟ ಹಾಕಲು ಭಾರತೀಯ ಯೋಧರು ನಡೆಸಿದ “ಆಪರೇಷನ್‌ ಸಿಂಧೂರ” ಕಾರ್ಯಾಚರಣೆಗೆ ಬೆಂಬಲ ವ್ಯಕ್ತಪಡಿಸಿ ಮೈಸೂರಿನಲ್ಲಿ ತಿರಂಗಾ ಯಾತ್ರೆಯನ್ನು ಕೈಗೊಳ್ಳಲಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಸದ ಯದುವೀರ್‌, ಸೈನಿಕರ ಆತ್ಮಸ್ಥೈರ್ಯ ಹೆಚ್ಚಿಸಲು, ಅವರಿಗೆ ಬೆಂಬಲ ಸೂಚಿಸಲು, ಅವರ ಕುಟುಂಬ ಸದಸ್ಯರ ಜೊತೆಗೆ ನಾವೆಲ್ಲರೂ ಇದ್ದೇವೆ ಎಂಬುದನ್ನು ಈ ತಿರಂಗಾ ಯಾತ್ರೆಯ ಮೂಲಕ ಸೂಚಿಸಲಿದ್ದೇವೆ ಎಂದು ತಿಳಿಸಿದರು. ಈ ಯಾತ್ರೆಯಲ್ಲಿ ಭಾಗಿಯಾಗುವಂತೆ ಸರ್ವಧರ್ಮದ ಮುಖ್ಯಸ್ಥರನ್ನು, ಮುಖಂಡರನ್ನು ಆಹ್ವಾನಿಸಿದ್ದೇವೆ ಎಂದು ಯದುವೀರ್‌ ತಿಳಿಸಿದ್ದಾರೆ. ಎಲ್ಲರೂ ಬನ್ನಿ ಭಾಗವಹಿಸಿ ಮೈಸೂರು ಜಿಲ್ಲೆಯ ಎಲ್ಲ ಪ್ರಮುಖರು, ಉದ್ಯಮಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು, ನಿವೃತ್ತ ಯೋಧರ ಸಂಘದ ಸದಸ್ಯರು, ಯೋಧರ ಕುಟುಂಬ ಸದಸ್ಯರು, ನಾಗರಿಕರು ಎಲ್ಲರೂ ಈ ಯಾತ್ರೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಸಂಸದರು…

Read More