ವಿರಾಜಪೇಟೆ ಜು.10 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ 51ನೇ ಜನ್ಮದಿನವನ್ನು ವಿರಾಜಪೇಟೆಯ ವಿ. ಬಾಡಗ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಆಚರಿಸಲಾಯಿತು. ವಿ.ಬಾಡಗದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ವಿ. ಬಾಡಗದ ಹಿರಿಯ ಕಾಂಗ್ರೆಸ್ ಮುಖಂಡರಾದ ಕಂಜಿತಂಡ ಗಿಣಿ ಮೊಣ್ಣಪ್ಪ, ಶಾಸಕರ ಹುಟ್ಟುಹಬ್ಬವನ್ನು ಜನೋಪಯೋಗಿ ಕಾರ್ಯ ಚಟುವಟಿಕೆಗಳ ಮೂಲಕ ಆಯೋಜಿಸಲು ನಿರ್ಧರಿಸಿದ ಹಿನ್ನೆಲೆಯಲ್ಲಿ ವಿ. ಬಾಡಗದ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಆಚರಿಸಿದ್ದು ಹೆಚ್ಚು ಸಂತೋಷ ಮೂಡಿಸಿದೆ ಎಂದು ಹೇಳಿದರು. ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಕೊಂಗಂಡ ಕಾಶಿ ಕಾರ್ಯಪ್ಪ, ಮಳವಂಡ ದೇವಯ್ಯ, ಕಂಜಿತಂಡ ಪೂವಣ್ಣ, ಚೇಮೀರ ಧವನ್, ಮುಲ್ಲೆಂಗಡ ಪ್ರಧಾನ್, ತೀತಿಮಾಡ ಈಶ್ವರ, ಕಂಜಿತಂಡ ಚಂಗಪ್ಪ ಸೇರಿದಂತೆ ಶಾಲಾ ಶಿಕ್ಷಕರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಜು.10 NEWS DESK : ಕರ್ನಾಟಕ ರಾಜ್ಯದ ಪದವಿ ಶಿಕ್ಷಣದಿಂದ ವಂಚಿತರಾಗಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಸರ್ಟಿಫಿಕೆಟ್ ಕೋರ್ಸ್ಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿಗೆ ಕರ್ನಾಟಕ ರಾಜ್ಯದ ಪದವಿ ಶಿಕ್ಷಣದಿಂದ ವಂಚಿತರಾಗಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ/ಸರ್ಟಿಫಿಕೆಟ್ ಕೋರ್ಸ್ಗಳಿಗೆ https://minority.ksouportal.com (ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪೋರ್ಟಲ್) https://dom.karnataka.gov.in (ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು) ಅಥವಾ ವಿದ್ಯಾರ್ಥಿಯು ನೇರವಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆಡ್ಮಿಷನ್ ಲಿಂಕ್ (hಣಣಠಿs://miಟಿoಡಿiಣಥಿ.ಞsouಠಿoಡಿಣಚಿಟ.ಛಿom) ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲ್ಲಿಸಬಹುದು. ವಿದ್ಯಾರ್ಥಿಯು ಖುದ್ದಾಗಿ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ವಿಶ್ವವಿದ್ಯಾನಿಲಯದ ಕೇಂದ್ರ ಕಚೇರಿ ಮೈಸೂರು ಅಥವಾ ತಮ್ಮ ಜಿಲ್ಲೆಯ ಹತ್ತಿರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರಗಳಿಗೆ ಭೇಟಿ ನೀಡಬಹುದು ಅಥವಾ…
ನಾಪೋಕ್ಲು ಜು.10 NEWS DESK : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಡಿಕೇರಿ ಹಾಗೂ ಸೋಮವಾರಪೇಟೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆ ಆಗ್ರಹಿಸಿದೆ. ಕಾರ್ಮಿಕ ಸಂಘಟನೆಗಳ ಅಖಿಲ ಭಾರತ ಮುಷ್ಕರದ ಹಿನ್ನಲೆಯಲ್ಲಿ ಶಿರಸ್ತೇದಾರ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನರ್ದೇಶಕರ ಮೂಲಕ ಸರ್ಕಾರಕ್ಕೆ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು. ಈ ಸಂದರ್ಭ ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ಸಿ.ಯು.ಪವಿತ್ರ, ಕಾರ್ಯದರ್ಶಿ ಎಂ.ಆಶಾಲತಾ, ಉಪಾಧ್ಯಕ್ಷೆ ವನಜ, ಕ್ಷೇಮ ನಿಧಿ ಅಧ್ಯಕ್ಷೆ ಸುಮತಿ, ಸೋಮಾರಪೇಟೆಯ ಅಧ್ಯಕ್ಷರಾದ ಧನಲಕ್ಷ್ಮಿ, ಕಾರ್ಯದರ್ಶಿ ತಾರಲೋಬೋ ಹಾಗೂ ಮಡಿಕೇರಿ ತಾಲ್ಲೂಕು ಮತ್ತು ಸೋಮವಾರಪೇಟೆ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜು.10 NEWS DESK : ಮಡಿಕೇರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಗೆ ಒಳಪಟ್ಟಂತೆ 13 ಅಂಗನವಾಡಿ ಕಾರ್ಯಕರ್ತೆ ಹುದ್ದೆ ಮತ್ತು 32 ಅಂಗನವಾಡಿ ಸಹಾಯಕಿ ಹುದ್ದೆಗೆ ಜು.8 ರಂದು ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನೆ, ಮಡಿಕೇರಿ ಚೈನ್ಗೇಟ್ ಹತ್ತಿರದಲ್ಲಿರುವ ಕಚೇರಿ ಪ್ರಕಟಣಾ ಫಲಕದಲ್ಲಿ ಪ್ರಕಟಿಸಿದೆ. ಈ ಬಗ್ಗೆ ಸಂಬಂಧಿಸಿದವರಿಗೆ ಆಕ್ಷೇಪಣೆ ಇದ್ದಲ್ಲಿ ಜುಲೈ, 15 ರ ಕಚೇರಿ ವೇಳೆ 5.30 ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿ ದೂ.ಸಂ.08272-295087 ನ್ನು ಸಂಪರ್ಕಿಸಬಹುದು ಎಂದು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಜು.10 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವು ಜುಲೈ, 10 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೆ.ಎಸ್.ದೊರೇಶ್, ತಾಲ್ಲೂಕು ಅಧ್ಯಕ್ಷರಾದ ಎಂ.ಟಿ.ಮಧು, ಕುಶಾಲನಗರ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಕೆ.ಎ.ಸೌಮ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕೊಡಗು ಜಿ.ಪಂ.ಸಿಇಒ ಆನಂದ ಪ್ರಕಾಶ ಮೀನಾ, ಜಿಲ್ಲಾ…
ವಿರಾಜಪೇಟೆ ಜು.10 NEWS DESK : ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ವಿರಾಜಪೇಟೆಯಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಹಾಗೂ ನಾನಾ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ವಿರಾಜಪೇಟೆಯ ಕಾರು ನಿಲ್ದಾಣದಲ್ಲಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಯಿತು. ವಿರಾಜಪೇಟೆಯ ಮಾರಿಯಮ್ಮ ದೇವಾಲಯದ ಬಳಿಯಿಂದ ಮೆರವಣಿಗೆಯಲ್ಲಿ ಸಾಗಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಿ ಕಾರು ನಿಲ್ದಾಣದಲ್ಲಿ ಜಮಾವಣೆಗೊಂಡರು. ನಂತರ ಮಾತನಾಡಿದ ಸಿ.ಐ.ಟಿ.ಯು ಪ್ರಧಾನ ಕಾರ್ಯದರ್ಶಿ ಎ.ಸಿ. ಸಾಬು, ಕೇಂದ್ರ ಸರಕಾರವು ಕಾರ್ಮಿಕ ನೀತಿಗಳಿಗೆ ವಿರುದ್ದವಾಗಿ ಕಾನೂನುಗಳನ್ನು ಜಾರಿಗೆ ತಂದಿದೆ. ಇಂದು ರಾಜ್ಯಾದಾದ್ಯಂತ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿ ಮುಷ್ಕರ ನಡೆಯುತ್ತಿದೆ. ಬೆಲೆ ಏರಿಕೆಯಿಂದಾಗಿ ಕಾರ್ಮಿಕರ ಬದುಕು ಶೋಚನೀತ ಸ್ಥಿತಿಗೆ ತಲುಪಿದ್ದಾರೆ. ಸುಮಾರು 70 ವರ್ಷಗಳಿಂದ ಕಾರ್ಮಿಕರಿಗೆ ನಿಗದಿಗೊಳಿಸಿರುವ ದುಡಿಮೆಯ ಸಮಯ 8 ಗಂಟೆ. ಆದರೆ ಕೇಂದ್ರ ಸರಕಾರವು 8 ಗಂಟೆ ಬದಲು 12 ಗಂಟೆ ದುಡಿಯುವಂತೆ ಕಾನೂನು…
ಕುಶಾಲನಗರ ಜು.10 NEWS DESK : ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ವರ್ಗದಿಂದ ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಜೆ.ಸಿ.ಟಿ.ಯು ಹಾಗೂ ಎಸ್.ಕೆ.ಎಂ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರವು ಕಾರ್ಮಿಕ ವಿರೋಧಿ ನೀತಿಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಅಲ್ಲದೇ ಕಾರ್ಮಿಕರ ಹತ್ತಲವಾರು ಬೇಡಿಕೆಗಳನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಅವರು ಪಟ್ಟು ಹಿಡಿದರು. ನಂತರ ತಹಶಿಲ್ದಾರರ ಕಚೇರಿಗೆ ಮೆರವಣಿಗೆ ಸಾಗಿದ ಪ್ರತಿಭಟನಾಕಾರರು, ತಹಶಿಲ್ದಾರರ ಮೂಲಕ ಪ್ರಧಾನ ಮಂತ್ರಿಯವರಿಗೆ ಮನವಿ ಪತ್ರ ನೀಡಿದರು. ಸಿ.ಐ.ಟಿ.ಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರ ಕಾರ್ಮಿಕ ಆಗ್ರಹ, ಬೇಡಿಕೆಗಳನ್ನು ಈಡೇರಿಸಬೇಕು ಎಂದರು. ಈ ಸಂದರ್ಭ ವಿವಿಧ ಸಂಘಟನೆಗಳ ಪ್ರಮುಖರಾದ ಉದಯ್ ಕುಮಾರ್, ಜಮುನಾ, ಸಾವಿತ್ರಿ, ರಾಣಿ, ಲಲಿತಮ್ಮ, ರಘು, ಗಿರೀಶ್, ಕೃಷ್ಣಕುಮಾರ್, ಜಯರಾಮ್, ಯೋಗೇಶ್, ಜಯಣ್ಣ, ಮಂಜುನಾಥ್ ಹಾಗೂ ಐವತ್ತಕ್ಕೂ ಅಧಿಕ…
ದೆಹಲಿ ಜು.9 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವರಾದ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು. ಇದೇ ವೇಳೆ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಮಾಲೋಚನೆ ನಡೆಸಿದರು. ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಹಾಜರಿದ್ದರು.
ಮಡಿಕೇರಿ ಜು.9 NEWS DESK : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಜುಲೈ, 11 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಜು.11 ರಂದು ಬೆಳಗ್ಗೆ 11.30 ಗಂಟೆಗೆ ಮಡಿಕೇರಿಗೆ ಆಗಮಿಸಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ತಿಳಿಸಿದ್ದಾರೆ.
ಮಡಿಕೇರಿ ಜು.9 NEWS DESK : ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಜು.10 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, “ಸಾಮೂಹಿಕ ಸತ್ಯನಾರಾಯಣ” ಪೂಜೆ ಯಶಸ್ವಿಗೊಳಿಸಬೇಕಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.






