ಮಡಿಕೇರಿ ಮೇ 13 NEWS DESK : ಮಡಿಕೇರಿ 66/11ಕೆ.ವಿ ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ಈ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲಿ ಮೇ, 14 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮಡಿಕೇರಿ ನಗರ, ರಾಜಸೀಟ್, ಗದ್ದಿಗೆ, ಕೋಟೆ, ಕುಂಡಾಮೇಸ್ತ್ರಿ, ಓಂಕಾರೇಶ್ವರ, ಜಿ.ಟಿ ರಸ್ತೆ, ಕೆಎಸ್ಆರ್ಟಿಸಿ, ಮೇಕೇರಿ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳತ್ಮನೆ, ಬೆಟ್ಟಗೇರಿ, ಚೆಟ್ಟಿಮಾನಿ, ಚೇರಂಬಾಣೆ, ಮಕ್ಕಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ. ಸೋಮವಾರಪೇಟೆ :: ಸೋಮವಾರಪೇಟೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಐಗೂರು ಫೀಡರ್ನಲ್ಲಿ ಮೇ, 14 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಫೀಡರ್ ನಿರ್ವಾಹಣಾ ಕಾಮಗಾರಿ ನಡೆಸಬೇಕಿದೆ. ಆದ್ದರಿಂದ ವಿದ್ಯುತ್ ಸರಬರಾಜಿನಲ್ಲಿ…
ಲೇಖಕ: admin
ಮಡಿಕೇರಿ ಮೇ 13 NEWS DESK : ಸುಂಟಿಕೊಪ್ಪದ ಬ್ಲೂಬಾಯ್ಸ್ ಯುವಕ ಸಂಘದ ವತಿಯಿಂದ ಮೇ 16 ರಿಂದ 25ರ ವರೆಗೆ ಡಿ ಶಿವಪ್ಪ ಸ್ಮಾರಕ ರಾಜ್ಯಮಟ್ಟದ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ.ಎಂ.ಆಲಿಕುಟ್ಟಿ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಂಟಿಕೊಪ್ಪದ ಸರ್ಕಾರಿ ಶಾಲಾ ಮೈದಾನದಲ್ಲಿ 26ನೇ ವರ್ಷದ ನಾಕೌಟ್ ಮಾದರಿಯ ಫುಟ್ಬಾಲ್ ಪಂದ್ಯಾವಳಿ ನಡೆಯಲಿದ್ದು, ಗೋಲ್ಡ್ ಕಪ್ ಕಪ್ಗಾಗಿ 25 ತಂಡಗಳ ನಡುವೆ ಹಣಾಹಣಿ ನಡೆಯಲಿದೆ ಎಂದರು. ಪಂದ್ಯಾವಳಿಯ ಪ್ರಥಮ ಮತ್ತು ದ್ವಿತೀಯ ವಿಜೇತ ತಂಡಕ್ಕೆ ಡಿ.ವಿನೋದ್ ಶಿವಪ್ಪ ಮತ್ತು ಅವರ ಪುತ್ರ ವಿಶಾಲ್ ಶಿವಪ್ಪ ಅವರು ಡಿ.ಶಿವಪ್ಪ ಸ್ಮರಣಾರ್ಥವಾಗಿ 1 ಲಕ್ಷ ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನವಾಗಿ 50 ಸಾವಿರ ನಗದು ಮತ್ತು ಟ್ರೋಫಿ ಜೊತೆಗೆ ವೈಯಕ್ತಿಕ ಬಹುಮಾನವನ್ನು ನೀಡಲಿದ್ದಾರೆ ಎಂದು ಹೇಳಿದರು. ಪ್ರತಿ ನಿತ್ಯ ಮಧ್ಯಾಹ್ನ 3 ಗಂಟೆಯಿಂದ ಎರಡು ಪಂದ್ಯಾವಳಿ ನಡೆಯಲಿದ್ದು, ಭಾನುವಾರ 3 ಪಂದ್ಯ ಆಯೋಜಿಸಲಾಗಿದೆ.…
ಮಡಿಕೇರಿ ಮೇ 13 NEWS DESK : ಆಡಳಿತ ಪಕ್ಷ ಕಾಂಗ್ರೆಸ್ ರಾಜಕೀಯ ದುರುದ್ದೇಶದಿಂದ ಪೊಲೀಸರ ಮೇಲೆ ಒತ್ತಡ ಹೇರಿ, ಬಿಜೆಪಿ ಮಂದಿಯನ್ನು ಗುರಿ ಮಾಡಿ ಪ್ರಕರಣಗಳನ್ನು ದಾಖಲಿಸುತ್ತಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಆರೋಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ರಾಜಾಸೀಟು ರಸ್ತೆಯಲ್ಲಿ ವಾಹನಗಳ ನಿಲುಗಡೆ ಶುಲ್ಕ ವಸೂಲಿಗೆ ಸಂಬಂಧಿಸಿದಂತೆ ಬಿಜೆಪಿ ನಗರಾಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ ವಿರುದ್ಧ ಮೊಕದ್ದಮೆ ದಾಖಲಿಸಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು. ವಾಹನಗಳ ನಿಲುಗಡೆ ಶುಲ್ಕ ವಸೂಲಾತಿ ಕುರಿತು ದೂರು ಬಂದ ಹಿನ್ನೆಲೆ ನಗರಸಭಾ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಗುತ್ತಿಗೆ ನಿಯಮಕ್ಕೆ ವಿರುದ್ಧವಾಗಿ ಗಾಂಧಿ ಮೈದಾನದಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡಿ ಶುಲ್ಕ ವಸೂಲಿ ಮಾಡುತ್ತಿರುವುದು ಮತ್ತು ನಿಗಧಿತ ದರಕ್ಕಿಂತ ಅಧಿಕ ಶುಲ್ಕ ವಸೂಲಾತಿಯಲ್ಲಿ ತೊಡಗಿರುವುದು ಕಂಡು ಬಂದಿದೆ. ಸಹಜವಾಗಿಯೇ ನಗರಸಭಾ ಆಡಳಿತ ಮಂಡಳಿ…
ನವದೆಹಲಿ ಮೇ 13 NEWS DESK : ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಪಂಜಾಬ್ನ ಆದಮ್ಪುರ ವಾಯುನೆಲೆಗೆ ಭೇಟಿ ನೀಡಿದ್ದು, ಯೋಧರೊಂದಿಗೆ ಮಾತುಕತೆ ನಡೆಸಿದ್ದಾರೆ. ಇಂದು ಬೆಳಿಗ್ಗೆ, ಎಎಫ್ಎಸ್ ಆದಮ್ಪುರ ಹೋಗಿ ನಮ್ಮ ವೀರ ಯೋಧರು ಮತ್ತು ಸೈನಿಕರನ್ನು ಭೇಟಿಯಾದೆ. ಧೈರ್ಯ, ದೃಢನಿಶ್ಚಯ ಮತ್ತು ನಿರ್ಭಯತೆಯನ್ನು ಸಾರುವವರೊಂದಿಗೆ ಇರುವುದು ಬಹಳ ವಿಶೇಷ ಅನುಭವವಾಗಿತ್ತು. ನಮ್ಮ ಸಶಸ್ತ್ರ ಪಡೆಗಳು ನಮ್ಮ ರಾಷ್ಟ್ರಕ್ಕಾಗಿ ಮಾಡುತ್ತಿರುವ ಸೇವೆಗೆ ಇಡೀ ದೇಶ ಅವರಿಗೆ ಶಾಶ್ವತವಾಗಿ ಕೃತಜ್ಞವಾಗಿದೆ ಎಂದು ಮೋದಿ ಹೇಳಿದ್ದಾರೆ.
ಮಡಿಕೇರಿ ಮೇ 13 NEWS DESK : ಮಹಾಮೈತ್ರಿ ಬುದ್ಧ ವಿಹಾರದ ಪದಾಧಿಕಾರಿಗಳು ಹಾಗೂ ದಲಿತ ಸಂಘರ್ಷ ಸಮಿತಿಯ ಪ್ರಮುಖರು ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಬಳಿಯ ದಂಡಳ್ಳಿ ಮಾದ್ರೆ ಗ್ರಾಮದಲ್ಲಿ ಅರಳಿ ಗಿಡ ನೆಟ್ಟು ಬುದ್ಧ ಪೂರ್ಣಿಮೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಮಹಾಮೈತ್ರಿ ಬುದ್ಧ ವಿಹಾರ ನಿರ್ಮಾಣ ಮಾಡಲು ಹೊರಟಿರುವ ಮಾದ್ರೆ ಗ್ರಾಮದ ಜಾಗದಲ್ಲಿ ಭಗವಾನ್ ಗೌತಮ ಬುದ್ಧರ ಜನ್ಮದಿನದ ಅಂಗವಾಗಿ ಬೋಧಿವೃಕ್ಷದ ಸಂಕೇತವಾದ ಅರಳಿ ಗಿಡ ನೆಟ್ಟು ಬುದ್ಧ ಸಂದೇಶವನ್ನು ಸ್ಮರಿಸಿದರು. ಮಹಾಮೈತ್ರಿ ಬುದ್ಧ ವಿಹಾರದ ಸಂಯೋಜಕರು ಹಾಗೂ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಜೆ.ಆರ್.ಪಾಲಾಕ್ಷ ಅವರು ಮಾತನಾಡಿ ಭಗವಾನ್ ಬುದ್ಧ ಮಹಾಮೈತ್ರಿ ಟ್ರಸ್ಟ್ ವತಿಯಿಂದ ಈ ಜಾಗದಲ್ಲಿ ಅಂಬೇಡ್ಕರ್ ಭವನ ಹಾಗೂ ಬುದ್ಧ ವಿಹಾರ ಧ್ಯಾನ ಮಂದಿರವನ್ನು ಸ್ಥಾಪಿಸಲಾಗುವುದು. ಆ ಮೂಲಕ ಜನರಲ್ಲಿ ವೈಚಾರಿಕತೆಯ ಪ್ರಜ್ಞೆ ಮೂಡಿಸಲಾಗುವುದು. ಭಗವಾನ್ ಬುದ್ಧರ ಆಶಯದಂತೆ ವೃದ್ಧಾಶ್ರಮವನ್ನು ನಿರ್ಮಿಸಿ ವಯೋವೃದ್ಧರ ಆರೈಕೆ ಮಾಡಲಾಗುವುದು ಮತ್ತು ಸಮಾಜಕ್ಕೆ ಜನಸೇವೆಯ ಸಂದೇಶವನ್ನು ನೀಡಲಾಗುವುದು. ಜನಪರ ಕಾರ್ಯಕ್ರಮ…
ನಾಪೋಕ್ಲು ಮೇ 13 NEWS DESK : ಮೊಬೈಲ್ ವೈದ್ಯಕೀಯ ಘಟಕವನ್ನು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ವಿರಾಜಪೇಟೆಯ ತಮ್ಮ ಕಚೇರಿ ಆಭರಣದಲ್ಲಿ ಉದ್ಘಾಟಿಸಿದರು. ಬಳಿಕ ಘಟಕದ ವಾಹನವನ್ನು ಚಾಲನೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಬೆಂಗಳೂರು ಮೂಲದ ಟ್ರಾನ್ಸ್ ಫಾರ್ಮಿಂಗ್ ಟುಮಾರೊ ಫೌಂಡೇಶನ್ (ಟಿಟಿಎಫ್) ಎನ್ಜಿಎನ್ ಆನಂದ ರಾವ್, ಸಂಸ್ಥಾಪಕ ಆಸ್ಟೆರ್ ವಾಲೆಂಟಿಯರ್ಸ್ ಹಾಗೂ ಸೊಲ್ಯೂಷನ್ಸ್ ಅವರ ಸಹಯೋಗದಲ್ಲಿ ಮೊಬೈಲ್ ಮೆಡಿಕಲ್ ಯೂನಿಟನ್ನು ಕೊಡಗಿಗೆ ಕಲ್ಪಿಸಿಕೊಟ್ಟಿದ್ದಾರೆ. ಈ ಘಟಕವು ಕೊಡಗಿನ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಳಿಗಳಲ್ಲಿ ಸಂಚರಿಸಲಿದ್ದು, ಜನರಿಗೆ ಉಚಿತ ವೈದ್ಯಕೀಯ ತಪಾಸಣೆ ನಡೆಸುತ್ತದೆ. ಇದು ಅಧಿಕ ರಕ್ತದೊತ್ತಡ, ಮಧುಮೇಹ, ಬಿಎಂಐ, ತೂಕ, ಈ.ಸಿ.ಜಿ ಮುಂತಾದ ಪರೀಕ್ಷೆಗಳನ್ನು ನಡೆಸಲಿದ್ದು, ಇದು ಒಬ್ಬ ವೈದ್ಯರು, ನರ್ಸ್ ಹಾಗೂ ಚಾಲಕರ ತಂಡವನ್ನು ಒಳಗೊಂಡಿರುತ್ತದೆ. ಒಂದು ದಿವಸಕ್ಕೆ ಒಂದು ಗ್ರಾಮದಂತೆ ನಿರಂತರ 10 ವರ್ಷಗಳ ಅವಧಿಗೆ ಕಾರ್ಯ ನಿರ್ವಹಿಸಲಿದೆ. ಇದು ಕೊಡಗಿನ…
ಮಡಿಕೇರಿ ಮೇ 13 NEWS DESK : ಪೊನ್ನಂಪೇಟೆ ಭಾಗದ ಕೆ ಬಾಡಗ ಪಂಚಾಯಿತಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿದರು. ಶಾಸಕರನ್ನು ಬರಮಾಡಿಕೊಂಡ ಪಂಚಾಯತ್ ಸದಸ್ಯರು ಹಾಗೂ ಸ್ಥಳೀಯ ಪ್ರಮುಖರು ಮತ್ತು ಗ್ರಾಮಸ್ಥರು ತಮ್ಮ ಹಲವು ಅಭಿವೃದ್ಧಿ ಬೇಡಿಕೆಗಳನ್ನು ಶಾಸಕರ ಮುಂದಿಟ್ಟರು. ವಿಶೇಷವಾಗಿ ಕೆ.ಬಾಡಗ ಗ್ರಾಮ ಪಂಚಾಯಿತಿ ಈಗ ಕಾರ್ಯನಿರ್ವಹಿಸುತ್ತಿರುವ ಕಟ್ಟಡದ ಬದಲಾಗಿ, ಸೂಕ್ತ ನಿವೇಶನ ಗುರುತಿಸಿ ಅಥವಾ ಪರ್ಯಾಯ ಕಟ್ಟಡದ ವ್ಯವಸ್ಥೆ ಮಾಡಿಕೊಡಬೇಕೆಂದು ತಮ್ಮ ಪ್ರಮುಖ ಬೇಡಿಕೆಯನ್ನು ವಿವರಿಸಿದರು. ಇದೇ ಸಂದರ್ಭ ಗ್ರಾಮಸ್ಥರು ಕೂಡ ತಮ್ಮ ಮನವಿಯನ್ನು ಸಲ್ಲಿಸಿದರು. ಶಾಸಕರು ಪರಿಶೀಲಿಸಿ ಅಗತ್ಯ ಕ್ರಮಕ್ಕೆ ಸೂಚಿಸುವುದಾಗಿ ತಿಳಿಸಿದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಕೆ.ಬಾಡಗ ವಲಯ ಅಧ್ಯಕ್ಷ ಚಿಮಣ್ಣಮಾಡ ರವಿ, ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಕ್ಷದ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಮಡಿಕೇರಿ ಮೇ 13 NEWS DESK : ಕೊಡಗು ಜಿಲ್ಲೆಯ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ ಮಡಿಕೇರಿಗೆ 2025-26 ನೇ ಸಾಲಿನ ಪ್ರವೇಶಾತಿ ಆರಂಭವಾಗಿದೆ. ಎಸ್ಎಸ್ಎಲ್ಸಿ ಉತ್ತೀರ್ಣಗೊಂಡಿರುವ ಅಭ್ಯರ್ಥಿಗಳು ಮೇ 28 ರೊಳಗೆ ನೇರವಾಗಿ ಸಂಸ್ಥೆಗೆ ತೆರಳಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಕಚೇರಿ ವೇಳೆಯಲ್ಲಿ ಪಡೆದುಕೊಳ್ಳಬಹುದಾಗಿದೆ ಅಥವಾ ದೂರವಾಣಿ ಸಂಖ್ಯೆ 08272-298357 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಸುಂಟಿಕೊಪ್ಪ ಮೇ 13 NEWS DESK : ಜೀವನವನ್ನು ಕ್ರೀಡಾಸ್ಫೂರ್ತಿ ಯಿಂದ ತೆಗೆದುಕೊಂಡಾಗ ಈ ಜೀವನದ ಗೆಲುವು ಮತ್ತು ಸಾಧನೆ ನಮ್ಮದಾಗುತ್ತದೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಮತ್ತು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್, ಸಂತ ಅಂತೋಣಿಯವರ ಚರ್ಚ್ ಸಂಯುಕ್ತಾಶ್ರಯದಲ್ಲಿ ಆಯೋಜಿತ 14ನೇ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಮತ್ತು ಇತರ ಕ್ರೀಡಾಕೂಟಗಳು ಹಾಗೂ ಸಾಧಕರಿಗೆ ಅಭಿನಂದನಾ ಸಮಾರಂಭದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು ಮಕ್ಕಳು ಮತ್ತು ಯುವ ಸಮೂಹ ಸೋತು ಗೆಲ್ಲೂವ ಕ್ರೀಡಾ ಮನೋಬಾವವನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಸಂತ ಅಂತೋಣಿ ಚರ್ಚ್ ಧರ್ಮಗುರು ರೇ.ಫಾ.ವಿಜಯ ಕುಮಾರ್ ಆಶೀರ್ವಚನ ನೀಡಿ, ಕ್ರೀಡಾಕೂಟ ಯಶಸ್ವಿಯಾಗಿದೆ. ಸಂಘಟನೆಯಲ್ಲಿ ಶಕ್ತಿ ಇದೆ. ಸಮಾನಮನಸ್ಕರಾಗಿ ಕೆಲಸ ಮಾಡಿದರೆ ಯಶಸ್ಸು ಸಾಧ್ಯ ಎಂಬುದನ್ನು ಕ್ರೀಡಾಕೂಟ ನಿರೂಪಿಸಿದೆ ಎಂದು ಬಣ್ಣಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ ವಹಿಸಿದ್ದರು.…
ಸೋಮವಾರಪೇಟೆ ಮೇ 13 NEWS DESK : ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಮಾಜಿ ಶಾಸಕ ಅಪ್ಪಚ್ಚು ರಂಜನ್ ಭೇಟಿ ನೀಡಿ, ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ರೋಗಿಗಳಿಂದ ಮಾಹಿತಿ ಪಡೆದರು. ನಂತರ ಮಾತನಾಡಿದ ಅವರು, ನಾನು ಶಾಸಕನಾಗಿದ್ದ ಸಂದರ್ಭ 11 ತಜ್ಞ ವೈದ್ಯರು ಸೇರಿದಂತೆ ಅರವಳಿಕೆ ತಜ್ಞರು, ರೇಡಿಯಾಲಿಜಿಸ್ಟ್ ಕೆಲಸ ನಿರ್ವಹಿಸುತ್ತಿದ್ದರು. ಮಡಿಕೇರಿ ಮೆಡಿಕಲ್ ಕಾಲೇಜಿನಿಂದ ಹೆಚ್ಚುವರಿಯಾಗಿ ವೈದ್ಯರು ಆಸ್ಪತ್ರೆಯಲ್ಲಿ ಕೆಲಸ ಮಾಡಲು ಅವಕಾಶ ಮಾಡಲಾಗಿತ್ತು. ಆದರೆ ಈಗ 4 ವೈದ್ಯರು ಮಾತ್ರ ಇದ್ದಾರೆ. ರೋಗಿಗಳು ಸಾಲುಗಟ್ಟಿ ನಿಲ್ಲಬೇಕಾದ ಪರಿಸ್ಥಿತಿ ಇದೆ. ಸ್ಥಳೀಯ ಶಾಸಕ ಹೆಚ್ಚಿನ ಮುತುವರ್ಜಿ ವಹಿಸಿ ತಜ್ಞವೈದ್ಯರ ನೇಮಕ ಮಾಡಿಸಬೇಕಾಗಿದೆ ಎಂದು ಒತ್ತಾಯಿಸಿದರು. ಈ ಸಂದರ್ಭ ಬಿಜೆಪಿ ಪ್ರಮುಖರಾದ ಎಸ್.ಆರ್.ಸೋಮೇಶ್, ಶರತ್ಚಂದ್ರ, ಕಿಬ್ಬೆಟ್ಟ ಚಂದ್ರು, ಯೋಗೇಶ್, ಸುಧಾಕರ್ ಇದ್ದರು.






