ಮಡಿಕೇರಿ ಮೇ 13 NEWS DESK : ಸರ್ಕಾರದ ಆದೇಶದಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯ ಪರಿಷ್ಕøತ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿ ಅವರ ಅನುಮೋದನೆಯಂತೆ ಕೊಡಗು ಜಿಲ್ಲೆಯ ಮಡಿಕೇರಿ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ-1 ಮತ್ತು 32- ಸಹಾಯಕಿಯರು ಹುದ್ದೆ ಸೇರಿದಂತೆ ಒಟ್ಟು 45 ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ವೆಬ್ಸೈಟ್ ವಿಳಾಸ: https://karnemakaone.kar.nic.in/abcd/ ಮೂಲಕ ಅರ್ಹ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಜೂನ್ 6 ರ ಸಂಜೆ 5.30 ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ನಲ್ಲಿ ಸಲ್ಲಿಸಿದ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ…
ಲೇಖಕ: admin
ಮಡಿಕೇರಿ NEWS DESK ಮೇ 12 : ದೋಣಿ ಮಗುಚಿದ ಪರಿಣಾಮ ಇಬ್ಬರು ಯುವಕರು ನೀರುಪಾಲಾದ ಘಟನೆ ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಕೂರುಳಿ ಬಳಿಯ ಕಡಿಯತ್ತೂರು ದೋಣಿ ಕಡವು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಭಾಗಮಂಡಲ ಸಮೀಪದ ಚೇರಂಬಾಣೆಯ ಪಾಕ ಗ್ರಾಮದ ಮುಕ್ಕಾಟಿ ವಿಠಲ ಎಂಬುವವರ ಪುತ್ರ ಅಯ್ಯಪ್ಪ (18)ಹಾಗೂ ಐವತ್ತೋಕ್ಲು ಗ್ರಾಮದ ಪರಮೇಶ್ ಎಂಬುವವರ ಪುತ್ರ ಗಿರೀಶ್ (16) ಸಾವನ್ನಪ್ಪಿರುವ ದುರ್ದೈವಿಗಳು. ಸ್ನೇಹಿತರೊಂದಿಗೆ ಅಯ್ಯಪ್ಪ ಹಾಗೂ ಗಿರೀಶ್ ಅವರುಗಳು ಎಮ್ಮೆಮಾಡು ಕೂರುಳಿ ಬಳಿಯ ಕಡಿಯತ್ತೂರು ದೋಣಿ ಕಡವು ಗ್ರಾಮಕ್ಕೆ ತೆರಳಿದ್ದರು. ಕೂರುಳಿ ಕಡೆಯಿಂದ ಕಡಿಯತ್ತೂರು ಗ್ರಾಮಕ್ಕೆ ದೋಣಿಯಲ್ಲಿ ಸಾಗುವಾಗ ದೋಣಿ ಮಗುಚಿ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಹೊಳೆಯಲ್ಲಿ ಮುಳುಗಿದ ಯುವಕರಿಗಾಗಿ ಶೋಧ ಕಾರ್ಯ ನಡೆಸಿದ ಸಂದರ್ಭ ಗಿರೀಶ್ ನ ಮೃತದೇಹ ಪತ್ತೆಯಾಗಿ ಹೊರತೆಗೆಯಲಾಗಿದೆ. ಅಯ್ಯಪ್ಪನ ಮೃತದೇಹದ ಪತ್ತೆಕಾರ್ಯ ಮುಂದುವರೆದಿದೆ. ಘಟನೆಗೆ ಸಂಬಂಧಿಸಿದಂತೆ ನಾಪೋಕ್ಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಮೇ 12 NEWS DESK : ರಾಷ್ಟ್ರೀಯ ಜನಗಣತಿಯ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಇಂದು ಪಾಡಿನಾಡ್ ನ ಕಕ್ಕಬೆಯಲ್ಲಿ ಮಾನವ ಸರಪಳಿ ನಿರ್ಮಿಸಿ ಜನಜಾಗೃತಿ ಮೂಡಿಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಕಕ್ಕಬೆ ಜಂಕ್ಷನ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಕೊಡವ ಲ್ಯಾಂಡ್ ಪರ ಘೋಷಣೆಗಳನ್ನು ಕೂಗಿದ ಸದಸ್ಯರು ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ಅವರು 2025-26ರ ರಾಷ್ಟ್ರೀಯ ಜನಗಣತಿಯಲ್ಲಿ ಆದಿಮಸಂಜಾತ ಕೊಡವರಿಗೆ ಪ್ರತ್ಯೇಕ “ಕೋಡ್ ಮತ್ತು ಕಾಲಮ್” ಅನ್ನು ಸೇರಿಸಲು ಕೇಂದ್ರ ಗೃಹ ಮಂತ್ರಾಲಯ ರಿಜಿಸ್ಟ್ರಾರ್ ಜನರಲ್ ಮತ್ತು ಭಾರತದ ಜನಗಣತಿ ಆಯೋಗವನ್ನು ಒತ್ತಾಯಿಸುವುದಾಗಿ ತಿಳಿಸಿದರು. 1871-72 ರಿಂದ 1931 ರವರೆಗೆ ಜನಗಣತಿಯು ನಿಖರ ಮತ್ತು ವೈಜ್ಞಾನಿಕವಾಗಿತ್ತು. ಕೊಡವರನ್ನು ಕೊಡವಲ್ಯಾಂಡ್ನ ಏಕ-ಜನಾಂಗೀಯ,…
ಮಡಿಕೇರಿ ಮೇ 12 NEWS DESK : ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿ ನಾಗರಹೊಳೆ ಅರಣ್ಯ ಪ್ರದೇಶದಲ್ಲಿರುವ ಅತ್ತೂರು ಕೊಲ್ಲಿ ಹಾಡಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಧರಣಿ ನಿರತರು-ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು. ಅರಣ್ಯ ವ್ಯಾಪ್ತಿ ನಿವಾಸಿಗಳು, ತಾವುಗಳು ಶತಮಾನಗಳಿಂದ ಇಲ್ಲಿ ವಾಸವಾಗಿದ್ದು ತಮಗೆ ಅರಣ್ಯ ರಕ್ಷಣೆ ಹಕ್ಕಿನಡಿ ಹಕ್ಕುಪತ್ರ ನೀಡಬೇಕೆಂದು ಬೇಡಿಕೆ ಇಟ್ಟರೆ, ಅರಣ್ಯಾಧಿಕಾರಿಗಳು ಸೂಕ್ತ ಕಾನೂನು ರೀತಿಯ ಪ್ರಕ್ರಿಯೆ ಆಗಬೇಕೆಂದು ವಾದ ಮಂಡಿಸಿದರು. ಎರಡೂ ಕಡೆಯವರ ವಾದವನ್ನು ಆಲಿಸಿದ ಶಾಸಕರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಮ್ಮ ಪ್ರಕ್ರಿಯೆ ಪೂರ್ಣಗೊಳಿಸುವುದರೊಂದಿಗೆ ಅರಣ್ಯ ನಿವಾಸಿಗಳಿಗೆ ತೊಂದರೆ ಮಾಡಬಾರದು ಹಾಗೂ ಅವರ ದಿನನಿತ್ಯದ ಕೆಲಸಗಳಿಗೆ ಯಾವುದೇ ರೀತಿಯ ಅಡತಡೆಗಳ ಆಗಬಾರದು ಎಂದು ಸೂಚಿಸಿದರು. ಅದೇ ರೀತಿ ಅರಣ್ಯ ನಿವಾಸಿಗಳು ತಮ್ಮ ಹಕ್ಕಿಗಾಗಿ ಹೋರಾಟ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಆದರೆ ಎಲ್ಲರೂ ಕಾನೂನಾತ್ಮಕವಾಗಿ ಮಾಡಬೇಕು ಮತ್ತು ಹೊರಗಿನವರು ಬಂದು ಇವರ ಹೋರಾಟದ ಹಾದಿ…
ಮಡಿಕೇರಿ ಮೇ 12 NEWS DESK : ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯು ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ನಡೆಯಿತು. ವಿರಾಜಪೇಟೆ ತಾಲ್ಲೂಕು ಆಡಳಿತಾಧಿಕಾರಿ ಹಾಗೂ ಜಿಂ.ಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬೀ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ಮುಂದಿನ ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗುತ್ತಿದ್ದು, ಮುಂಜಾಗ್ರತೆಯಾಗಿ ಸಾಂಕ್ರಮಿಕ ರೋಗಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಲಜೀವನ್ ಮಿಷನ್ ಬ್ಯಾಚ್ 1, ಬ್ಯಾಚ್ 2 ಹಾಗೂ ಬ್ಯಾಚ್ 3 ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಪಶು ಪಾಲನೆ ಇಲಾಖೆಯಿಂದ ರಾಸುಗಳಿಗೆ ಕಾಲು-ಬಾಯಿ ಜ್ವರ ಹಾಗೂ ಚರ್ಮಗಂಟು ರೋಗದ ಲಸಿಕೆ ನೀಡಲಾಗುತ್ತಿದೆ ಎಂದು ಪಶುಪಾಲನೆ ಇಲಾಖೆಯ ಸಹಾಯಕ ನಿರ್ದೇಶರಾದ ಗಿರೀಶ್ ಮಾಹಿತಿ ನೀಡಿದರು ಸಣ್ಣ ಅಥವಾ ಅತೀ ಸಣ್ಣ ರೈತರಿಗೆ ಉಪ ಕಸುಬಾಗಿ ಹಸು ಸಾಕಾಣಿಕೆಗೆ ಹೆಚ್ಚು ಒತ್ತು…
ಮಡಿಕೇರಿ ಮೇ 12 NEWS DESK : ಗೌತಮ ಬುದ್ಧನ ಸಂದೇಶಗಳು ಇಡೀ ಮಾನವಕುಲಕ್ಕೆ ಮಾನವೀಯತೆಯ ಮಾರ್ಗದರ್ಶಿಯಾಗಿದೆ ಎಂದು ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಗೌತಮ ಬುದ್ಧ ಇಡೀ ವಿಶ್ವಕ್ಕೆ ಶಾಂತಿ, ಸಹನೆ, ಸಹಭಾಳ್ವೆ, ಸಹೋದರತೆಯನ್ನು ಬಿತ್ತಿದರು. ಭಾರತದಲ್ಲಿ ಹುಟ್ಟಿ ಬೆಳೆದ ಗೌತಮ ಬುದ್ಧರು ಇಡೀ ವಿಶ್ವಕ್ಕೆ ಶಾಂತಿಯ ಸಂದೇಶ ಪಸರಿಸಿದ್ದಾರೆ ಎಂದು ವಿನಾಯಕ ನರ್ವಡೆ ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೇರಿಕ ಭೇಟಿ ಸಂದರ್ಭದಲ್ಲಿ ‘ಯುದ್ಧದ ನಾಡಿನಿಂದ ಬಂದಿಲ್ಲ, ಬುದ್ಧನ ನಾಡಿನಿಂದ ಬಂದಿದ್ದೇನೆ’ ಎಂಬ ಸಂದೇಶ ಸಾರಿದ್ದರೂ ಎಂಬುದನ್ನು ಯಾರೂ ಮರೆಯುವಂತಿಲ್ಲ. ಆ ನಿಟ್ಟಿನಲ್ಲಿ ಇಡೀ ಭಾರತ ದೇಶ ಶಾಂತಿ ಸಹಭಾಳ್ವೆ, ಸಹೋದರತ್ವಕ್ಕೆ ಹೆಸರಾಗಿದೆ ಎಂದು ಉಪ ವಿಭಾಗಾಧಿಕಾರಿ ನುಡಿದರು. ಭಗವಾನ್ ಬುದ್ಧರ 2587 ನೇ…
ಪುತ್ತೂರು ಮೇ 12 NEWS DESK : ಭಾರತೀಯ ಜ್ಞಾನ ಪರಂಪರೆಯು ಅತ್ಯಂತ ಹೆಚ್ಚು ಅವಜ್ಞೆಗೊಳಗಾಗಿದೆ ಮತ್ತು ನಮ್ಮವರಿಂದಲೇ ನಿರಾಕರಿಸಲ್ಪಟ್ಟಿದೆ. ಅಧರ್ಮವನ್ನು ಧರ್ಮ ಎಂದು ಬಿಂಬಿಸುವ ಕೆಲಸಗಳು ನಡೆಯುತ್ತಿವೆ. ಇದರಿಂದಾಗಿ ನಾವು ಕಳೆದುಕೊಂಡದ್ದು ಅಪಾರ ಎಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕಾರ್ಯನಿರ್ವಹಣಾಧಿಕಾರಿ ಹಾಗೂ ಶ್ರೀರಾಮ ಪದವಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್.ಕೆ.ಎನ್ ಹೇಳಿದರು. ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಸಂಯುಕ್ತ ಆಶ್ರಯದಲ್ಲಿ ನಡೆದ ಭಾರತೀಯ ಜ್ಞಾನ ಪರಂಪರೆ ಪರಿಚಯ ಮತ್ತು ಅವಲೋಕನ ಎನ್ನುವ ಎರಡು ದಿನಗಳ ಶೈಕ್ಷಣಿಕ ಕಾರ್ಯಾಗಾರದ ಮುಖ್ಯ ಅತಿಥಿಗಳಾಗಿ ಅವರು ಮಾತಾಡಿದರು. ಕಳೆದುಕೊಂಡಿರುವುದನ್ನು ಅಲ್ಲಿಯೇ ಹುಡುಕಬೇಕು, ಆಗ ನಮಗೆ ಪ್ರೇರಣೆ ಸಿಗಬಹುದು. ಆ ಬಳಿಕ ಏನು ಮಾಡಬೇಕೆಂಬುದನ್ನು ವಿಮರ್ಶಿಸಬೇಕು ಹಾಗಾಗಿ ಆ ಪ್ರೇರಣೆ ತುಂಬುವ ಕೆ¯ಸವನ್ನು ಇಲ್ಲಿ ಮಾಡಲಾಗುತ್ತಿದೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕಿ ಡಾ.ಸುಧಾ.ಎಸ್.ರಾವ್ ಮಾತನಾಡಿ ನಮ್ಮತನದ ಬಗ್ಗೆ ಹೆಮ್ಮೆ ಮೂಡುವಂತಹ ಶೈಕ್ಷಣಿಕ…
ಮಡಿಕೇರಿ ಮೇ 12 NEWS DESK : ರಾಜ್ಯ ಸರ್ಕಾರ ಹಳೇ ಮೈಸೂರು ಭಾಗಕ್ಕೆ ಘೋಷಣೆ ಮಾಡಿದಂತೆ ಕೊಡಗು ಜಿಲ್ಲೆಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯಕ್ಕೆ ಕುಡಿಯುವ ನೀರನ್ನು ಒದಗಿಸುತ್ತಿರುವ ಕಾವೇರಿ ನಾಡು ಕೊಡಗಿನ ಬಗ್ಗೆ ರಾಜ್ಯ ಸರ್ಕಾರ ಮಲತಾಯಿ ಧೋರಣೆ ತೋರುವುದು ಸರಿಯಲ್ಲ. ಹಳೇ ಮೈಸೂರು ಭಾಗದ ಗಡಿಯಲ್ಲಿರುವ ಕೊಡಗು ಜಿಲ್ಲೆಗೂ ಅಗತ್ಯ ಅನುದಾನ ನೀಡಲಿ ಎಂದು ಆಗ್ರಹಿಸಿದ್ದಾರೆ ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ಹಳೇ ಮೈಸೂರು ಭಾಗದ ಹೆಚ್.ಡಿ.ಕೋಟೆ, ಮೈಸೂರು ಹಾಗೂ ಚಾಮರಾಜನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಮಾರು 3600ಕೋಟಿ ರೂ.ಗಳಷ್ಟು ವಿಶೇಷ ಪ್ಯಾಕೇಜ್ ನ್ನು ಘೋಷಣೆ ಮಾಡಿದ್ದಾರೆ. ಇದರ ಪಕ್ಕದಲ್ಲೇ ಇರುವ ಕೊಡಗು ಜಿಲ್ಲೆ ಕೂಡ ಅಭಿವೃದ್ಧಿ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸುತ್ತಿದ್ದು, ಸ್ಥಳೀಯ ಸಮಸ್ಯೆಗಳ ಕುರಿತು ರಾಜ್ಯ ಸರ್ಕಾರ ಗಂಭೀರ…
ಮಡಿಕೇರಿ NEWS DESK ಮೇ 12 : ಹಿರಿಯ ಪತ್ರಕರ್ತ, ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಅವರು ‘ಕರ್ನಾಟಕ ಶಕ್ತಿ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೈಸೂರು ಪ್ರೆಸ್ ಕ್ಲಬ್ ವತಿಯಿಂದ ನಡೆದ 19ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ‘ಕರ್ನಾಟಕ ಶಕ್ತಿ’ ಪ್ರಶಸ್ತಿಯನ್ನು ಬಿ.ಜಿ.ಅನಂತಶಯನ ಅವರಿಗೆ ಗಣ್ಯರು ಪ್ರದಾನ ಮಾಡಿದರು.
ಮಡಿಕೇರಿ NEWS DESK ಮೇ 12 : ಮಡಿಕೇರಿ ನಗರದಲ್ಲಿ ಕೆಲವು ಬಿಜೆಪಿ ಪ್ರತಿನಿಧಿಗಳ ಗೂಂಡಾ ವರ್ತನೆ ಮುಂದುವರೆದಿದ್ದು, ಪಾರ್ಕಿಂಗ್ ವಿಚಾರದಲ್ಲಿ ಶುಲ್ಕ ವಸೂಲಾತಿ ಮಾಡುವವರ ಮೇಲೆ ಹಲ್ಲೆ ನಡೆದಿದೆ. ಅಕ್ರಮ ಮಳಿಗೆಗಳ ನಿರ್ಮಾಣದ ಆರೋಪ ಕೂಡ ಹಲ್ಲೆ ಮಾಡಿದವರ ಮೇಲೆ ಇದ್ದು ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೂಂಡಾ ವರ್ತನೆಯಲ್ಲಿ ತೊಡಗಿರುವವರು ಅಕ್ರಮ ಮಳಿಗೆಗಳನ್ನು ನಿರ್ಮಿಸಿ ಬಾಡಿಗೆಗೆ ನೀಡಿರುವ ಕುರಿತು ದೂರುಗಳಿದೆ. ಬಿಜೆಪಿ ಅಧಿಕಾರ ಕಳೆದುಕೊಂಡು ಎರಡು ವರ್ಷಗಳಾಗಿದೆ. ಆದರೆ ಕಳೆದ ಎರಡು ದಶಕಗಳಿಂದ ಮೈಗೂಡಿಸಿಕೊಂಡಿದ್ದ ರೌಡಿಸಂ, ಭ್ರಷ್ಟಾಚಾರ ಮತ್ತು ಅಕ್ರಮ ವ್ಯವಹಾರ ಕೆಲವರಿಂದ ಮುಂದುವರೆದಿದೆ. ಇದರ ಪರಿಣಾಮವಾಗಿ ರಾಜಾಸೀಟು ರಸ್ತೆಯಲ್ಲಿ ಪಾರ್ಕಿಂಗ್ ವಸೂಲಾತಿ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆದಿದ್ದು, ಹಲ್ಲೆ ಮಾಡಿದವರು ಪೊಲೀಸ್ ಅತಿಥಿಗಳಾಗಿದ್ದಾರೆ. ಇವರುಗಳು ನಗರದಲ್ಲಿ ಅಕ್ರಮ ಮಳಿಗೆಗಳನ್ನು ನಿರ್ಮಿಸಿಕೊಂಡಿದ್ದು, ಇದನ್ನು ಪ್ರಶ್ನಿಸಲು ಹೋದವರ ಮೇಲೆ ದಬ್ಬಾಳಿಕೆ…






