ಮಡಿಕೇರಿ ಜು.8 NEWS DESK : ಬಿಳಿಗೇರಿ ಹಾಗೂ ಅರ್ವತ್ತೋಕ್ಲು ಪ್ಲಾಂಟರ್ಸ್ ಕ್ಲಬ್ ವತಿಯಿಂದ ಜು.12 ಮತ್ತು 13 ರಂದು 5ನೇ ವರ್ಷದ ಹಿಂದೂ ಕಪ್ ಮುಕ್ತ ಕೆಸರುಗದ್ದೆ ಕ್ರಿಕೆಟ್, ಓಟ, ವಾಲಿಬಾಲ್, ಹಗ್ಗಜಗ್ಗಾಟ ಹಾಗೂ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಗಳು ನಡೆಯಲಿವೆ. ಬಿಳಿಗೇರಿ ಅರ್ವತ್ತೋಕ್ಲು ಗ್ರಾಮದ ತುಂತಾಜಿರ ಚಂದ್ರಶೇಖರ್, ರಂಜಿತ್, ದಯಾನಂದ, ತಿಮ್ಮಯ್ಯ ಹಾಗೂ ಧರ್ಮಾವತಿ ಅವರ ಗದ್ದೆಯಲ್ಲಿ ನಡೆಯಲಿರುವ ಸ್ಪರ್ಧೆಗಳು ಜು.12 ರಂದು ಬೆಳಿಗ್ಗೆ 9 ಗಂಟೆಗೆ ಉದ್ಘಾಟನೆಗೊಳ್ಳಲಿವೆ. ಜು.12 ರಂದು ಕ್ರಿಕೆಟ್ ಮತ್ತು ವಾಲಿಬಾಲ್ ಪಂದ್ಯಾವಳಿ, ಜು.13 ರಂದು ಹಗ್ಗಜಗ್ಗಾಟ, ಕೆಸರುಗದ್ದೆ ಓಟ, ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಮತ್ತು ಮಹಿಳೆಯರು ಹಾಗೂ ಪುರುಷರಿಗೆ ವಿಶೇಷ ಸ್ಪರ್ಧೆಗಳು ನಡೆಯಲಿವೆ. ಹಿಂದೂ ಬಾಂಧವ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ಲಬ್ ಆಡಳಿತ ಮಂಡಳಿ ಮನವಿ ಮಾಡಿದೆ. ಕ್ರಿಕೆಟ್, ವಾಲಿಬಾಲ್ ಹಾಗೂ ಹಗ್ಗಜಗ್ಗಾಟದಲ್ಲಿ ಭಾಗವಹಿಸುವ ಆಸಕ್ತ ತಂಡಗಳು ಮುಂಗಡ ಹಣವನ್ನು ಪಾವತಿಸಿ ಜು.10ರ ಒಳಗೆ ತಂಡದ ಹೆಸರು ನೋಂದಾಯಿಸಿಕೊಳ್ಳುವಂತೆ ಆಯೋಜಕರು…
ಲೇಖಕ: admin
ಬೇರೆ ಬೇರೆ ವಿಷಯಗಳಲ್ಲಿ ಪದವಿ ಪಡೆದಿರುವವರಿಗೂ ಬ್ಯಾಂಕ್ ಉದ್ಯೋಗ ಕೈಬೀಸಿ ಕರೆಯುತ್ತದೆ. ಇಂಥ ವಿಶೇಷ ಪದವಿಗಳೊಂದಿಗೆ ವಿಶೇಷ ಅಧಿಕಾರಿ (ಸ್ಪೆಷಲಿಸ್ಟ್ ಆಫೀಸರ್) ಹುದ್ದೆಗೆ ನೇಮಕ ಮಾಡಿಕೊಳ್ಳುತ್ತಿದೆ. ಒಂದು ಕಾಲದಲ್ಲಿ ಕಾಮರ್ಸ್ ಪದವಿ ಓದಿದವರು, ಕೃಷಿ ಪದವಿ ಅಧ್ಯಯನ ಮಾಡಿದವರಿಗಷ್ಟೇ ಬ್ಯಾಂಕುಗಳಲ್ಲಿ ಉದ್ಯೋಗ ಎನ್ನುವಂತಿತ್ತು. ಆದರೆ, ಈಗ ಇವೆರಡರ ಜೊತೆಗೆ, ಕಾನೂನು, ಎಂಜಿನಿಯರಿಂಗ್, ಮಾರ್ಕೆಟಿಂಗ್, ಮ್ಯಾನೇಜ್ಮೆಂಟ್ ಸೇರಿದಂತೆ ಬೇರೆ ಬೇರೆ ವಿಷಯಗಳಲ್ಲಿ ಪದವಿ ಪಡೆದಿರುವವರಿಗೂ ಬ್ಯಾಂಕ್ ಉದ್ಯೋಗ ಕೈಬೀಸಿ ಕರೆಯುತ್ತಿದೆ. ಇಂಥ ವಿಶೇಷ ಪದವಿಗಳೊಂದಿಗೆ ವಿಶೇಷ ಅಧಿಕಾರಿ (ಸ್ಪೆಷಲಿಸ್ಟ್ ಆಫೀಸರ್) ಹುದ್ದೆಗೆ ನೇಮಕ ಮಾಡಿಕೊಳ್ಳುತ್ತಿದೆ. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್- ಐಬಿಪಿಎಸ್) ದೇಶದ 11 ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಇಂಥ ಸ್ಪೆಷಲ್ ಆಫೀಸರ್ಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕ ಮಾಡಿಕೊಳ್ಳುವುದಾಗಿ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 21 ಅರ್ಜಿ ಸಲ್ಲಿಕೆಗೆ ಕೊನೆ ದಿನ. ಆನ್ಲೈ ನ್ ಮೂಲಕ (https://www.ibps.in) ಅರ್ಜಿ…
ಮಡಿಕೇರಿ ಜು.8 NEWS DESK : ಸೋಮವಾರಪೇಟೆ ಹೋಬಳಿ ಗರ್ವಾಲೆ ಗ್ರಾಮದ ಅಂಗನವಾಡಿ ಕೇಂದ್ರದ ಮೇಲೆ ತೀವ್ರ ಮಳೆಗಾಳಿಯಿಂದ ಮರ ಬಿದ್ದ ಪರಿಣಾಮ ಅಂಗನವಾಡಿಯ ಮೆಲ್ಚಾವಣಿ ಹಾನಿಯಾಗಿದ್ದು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿದ್ದಾರೆ.
ಮಡಿಕೇರಿ ಜು.8 NEWS DESK : ಕೆ ನಿಡುಗಣೆ ಗ್ರಾಮ ಪಂಚಾಯಿತಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪಂಚಾಯಿತಿ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದರು. ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯೊಂದಿಗೆ ಗ್ರಾ.ಪಂ ವ್ಯಾಪ್ತಿಯ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. ಇದೇ ಸಂದರ್ಭ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿ, ಕೆ.ನಿಡುಗಣೆ ಗ್ರಾ.ಪಂ ನ 23 ಬಸವ ವಸತಿ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆ( ಹೆಚ್ಚುವರಿ ) ಯೋಜನೆಯಡಿ ಕಾಮಗಾರಿ ಆದೇಶ ಪತ್ರ ವಿತರಣೆ ಮಾಡಿದರು. ನಂತರ ಗೋ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಾರ್ವತಿ, ಸದಸ್ಯರಾದ ಜಾನ್ಸನ್ ಪಿಂಟೋ, ಎಂ.ಡಿ.ಬೋಪಣ್ಣ , ಜಾನ್ಸಿ ಮಾದಪ್ಪ ಮತ್ತು ಮಡಿಕೇರಿ ತಾಲ್ಲೂಕು ಗ್ಯಾರೆಂಟಿ ಸಮಿತಿ ಅಧ್ಯಕ್ಷ ಮಂದ್ರಿರ ಮೊಹನ್ ದಾಸ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೊಕ್ಕಲೇರ ಸುಜು ತಿಮ್ಮಯ್ಯ, ಬಗರ್ ಹುಕುಂ ಸದಸ್ಯರಾದ ರೂಪ ಮತ್ತು ಹರಿಪ್ರಸಾದ್, ತಾಲ್ಲೂಕು ಕಾರ್ಯನಿರ್ವಣಧಿಕಾರಿ ಶೇಕರ್, ತಹಶೀಲ್ದರ್ ಪ್ರವೀಣ್ ಮತ್ತು…
ಮಡಿಕೇರಿ NEWS DESK ಜು.8 : ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಪೊನ್ನಪ್ಪಸಂತೆ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ಮುಂಜಾನೆ ಈ ಘಟನೆ ನಡೆದಿದ್ದು, ಸುಮಾರು 50 ವರ್ಷದ ಮೃತ ವ್ಯಕ್ತಿಯನ್ನು ಮಾನಸಿಕ ಅಸ್ವಸ್ಥನೆಂದು ಹೇಳಲಾಗಿದೆ. ಕಾಡಾನೆ ಮೊದಲು ಸೈಕಲ್ ನಲ್ಲಿ ಬರುತ್ತಿದ್ದ ಸ್ಥಳೀಯ ಗ್ರಾಮಸ್ಥ ಅಜಯ್ ಎಂಬುವವರ ಮೇಲೆ ದಾಳಿ ಮಾಡಲು ಮುಂದಾಗಿದೆ. ಅಜಯ್ ಅವರು ಸೈಕಲ್ ನ್ನು ಬಿಟ್ಟು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಇದೇ ಸಂದರ್ಭ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. *ರಾಜೀನಾಮೆಗೆ ಆಗ್ರಹ* ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ಸರಣಿ ಸಾವುಗಳಾಗುತ್ತಿದ್ದು, ಇದಕ್ಕೆ ಅರಣ್ಯ ಇಲಾಖೆಯ ವೈಫಲ್ಯವೇ ಪ್ರಮುಖ ಕಾರಣವಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಆರೋಪಿಸಿದ್ದಾರೆ. ಅರಣ್ಯ ಸಚಿವ ಈಶ್ವರ ಖಂಡ್ರೆ,…
ಸೋಮವಾರಪೇಟೆ ಜು.8 NEWS DESK : ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಶ್ರದ್ಧೆ ಇದ್ದರೆ ಗುರಿ ಸಾಧಿಸಬಹುದೆಂದು ಮಾಜಿ ಕ್ರೀಡಾಸಚಿವ ಎಂ.ಪಿ. ಅಪ್ಪಚುರಂಜನ್ ತಿಳಿಸಿದರು. ಯಡವನಾಡು ಆಶ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಿಸಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣ ಬಹಳ ಮುಖ್ಯ, ಶಿಕ್ಷಣವಿಲ್ಲದೆ ಬದುಕು ಕಷ್ಟಕರವೆಂದರು. ಜೀವನದಲ್ಲಿ ಶಿಸ್ತು ಮತ್ತು ಶ್ರದ್ಧೆಯನ್ನು ಮೈಗೂಡಿಸಿಕೊಂಡರೆ ಎಂತಹ ಕಠಿಣ ಶಿಕ್ಷಣವಾದರೂ ಪಡೆದುಕೊಳ್ಳಬಹುದೆಂದರು. ಈ ಸಂದರ್ಭ ಶಾಲೆಯ 185ವಿದ್ಯಾರ್ಥಿಗಳಿಗೂ ರಂಜನ್ ಸ್ವೆಟರ್ ವಿತರಿಸಿದರು. ಐಗೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಗೌರಮ್ಮ, ಸದಸ್ಯರುಗಳಾದ ಜಯಪ್ಪ, ಪ್ರಮೋದ್ ಪ್ರಮುಖರುಗಳಾದ ರಮೇಶ್, ವರದರಾಜ ಅರಸ್, ಮಲ್ಲಪ್ಪ, ಶಾಲೆಯ ಮುಖ್ಯ ಶಿಕ್ಷಕ ರಜನಿಕಾಂತ್ ಹಾಗೂ ಶಿಕ್ಷರು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಮಡಿಕೇರಿ ಜು.18 NEWS DESK : ವಿರಾಜಪೇಟೆ ನಗರದ ಒಂದನೇ ವಾರ್ಡಿನಲ್ಲಿ ನೂತನವಾಗಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಜನಸಾಮಾನ್ಯರಿಗೆ ಮೂಲಭೂತ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ನಿರ್ಮಿತಿ ಕೇಂದ್ರದ ಮೂಲಕ ಶಾಸಕರ ಅನುದಾನ ರೂ.10 ಲಕ್ಷದಲ್ಲಿ ಕುಡಿಯುವ ನೀರು ಘಟಕಕ್ಕೆ ಮಂಜೂರಾತಿ ನೀಡಿದ್ದರು. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಶುದ್ಧ ಕುಡಿಯುವ ನೀರು ಪ್ರತಿಯೊಬ್ಬನ ಅವಶ್ಯಕತೆಯಾಗಿದ್ದು, ಜನರು ಮಿತವಾಗಿ ನೀರನ್ನು ಬಳಸಿ ಎಂದು ಕರೆ ನೀಡಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಮಾಚಯ್ಯ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಪುರಸಭೆ ಸದಸ್ಯರು, ಹಿರಿಯ ಕಾಂಗ್ರೆಸ್ ಮುಖಂಡರು, ಪ್ರಮುಖರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಮಡಿಕೇರಿ ಜು.8 NEWS DESK : ಪೊನ್ನಂಪೇಟೆ ತಾಲ್ಲೂಕು ಹಾತೂರು ಬಳಿ ಇರುವ ಪ್ರಸಿದ್ಧ ವನಭದ್ರ ಕಾಳಿ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಕಾಂಚನ್ ಪೊನ್ನಣ್ಣ ದಂಪತಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಸ್ಥಳೀಯ ಗ್ರಾಮಸ್ಥರು ಹಾಗೂ ಪ್ರಮುಖರು ಶಾಸಕರ ಹೆಸರಿನಲ್ಲಿ ವಿಶೇಷ ಪೂಜೆ ಆಯೋಜನೆ ಮಾಡಿದ ಹಿನ್ನೆಲೆ ಶಾಸಕ ದಂಪತಿಗಳು, ದೇವಿಯ ಸನ್ನಿಧಾನದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ನೆರವೇರಿಸಿದರು. ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಅಧ್ಯಕ್ಷ ಕೊಕ್ಕಂಡ ರೋಷನ್, ಬೂತ್ ಅಧ್ಯಕ್ಷ ಪುಲಿಯಂಡ ರೋಷನ್, ಅಜ್ಜಿಕುಟ್ಟಿರ ಗಿರೀಶ್, ವಿರಾಜಪೇಟೆ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್, ಚಂಗಪ್ಪ, ಅರೋಗ್ಯ ರಕ್ಷಾ ಸಮಿತಿಯ ಸದಸ್ಯ ಕುಂದಾಚೀರ ಮಂಜು ದೇವಯ್ಯ, ಹರೀಶ್, ಕಾಂಗ್ರೆಸ್ ಮುಖಂಡರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಜು.8 NEWS DESK : ಮಡಿಕೇರಿ ನಗರ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಕಾಶ್ ಆಚಾರ್ಯ ಅವರು ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿ ಮಾಡಿ ಧನ್ಯವಾದಗಳನ್ನು ತಿಳಿಸಿದರು. ಈ ಸಂದರ್ಭ ಶಾಸಕರು ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು. ಮಡಿಕೇರಿ ನಗರ ಸಭೆಯ ನಾಮ ನಿರ್ದೇಶಿತ ಸದಸ್ಯರುಗಳಾದ ಮುದ್ದುರಾಜು, ಸದಾ ಮುತ್ತಪ್ಪ, ಜಗದೀಶ್ ಹಾಗೂ ಹೆಚ್.ಎಲ್.ಯೋಗೇಶ್ ಉಪಸ್ಥಿತರಿದ್ದರು.
ಮಡಿಕೇರಿ ಜು.8 NEWS DESK : ಶ್ರೀ ಕೋದಂಡ ರಾಮ ದೇವಾಲಯದ 51ನೇ ವರ್ಷದ ದಸರಾ ಉತ್ಸವದ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಆನಂದ್ ಸುಬ್ರಮಣಿ, ಕಾರ್ಯಧ್ಯಕ್ಷರಾಗಿ ಮಿಥುನ್ ಶೆಟ್ಟಿ ನೇಮಕಗೊಂಡಿದ್ದಾರೆ. ಗೌರವಧ್ಯಕ್ಷರಾಗಿ ಮಂಜುನಾಥ್, ಉಪಾಧ್ಯಕ್ಷರಾಗಿ ಗಿರೀಶ್ ಸುಬ್ರಮಣಿ, ಜೈಕುಮಾರ್, ಸಿದ್ದಿಕ್, ಪ್ರದಾನ ಕಾರ್ಯದರ್ಶಿಯಾಗಿ ವಿಜು ಖಜಾಂಚಿಯಾಗಿ ಶೇಖರ್, ಕಾರ್ಯದರ್ಶಿಯಾಗಿ ವಿಶ್ವ, ಪವನ್, ಸಹ ಕಾರ್ಯದರ್ಶಿಯಾಗಿ ತೇಜ, ಹರ್ಷ, ಸಂಘಟನಾ ಕಾರ್ಯದರ್ಶಿಯಾಗಿ ವಿಗ್ನೇಶ್, ನವೀನ್, ಅಲಂಕಾರ ಸಮಿತಿಗೆ ಹರೀಶ್, ಜೀವನ್, ಉತ್ಸವ ಸಮಿತಿಗೆ ಅಜಿತ್ ಮತ್ತು ತಂಡ ಆಯ್ಕೆಗೊಂಡರು. ಸಮಿತಿಯ ರಚನೆ ಬಳಿಕ ಮಾತನಾಡಿದ ಅಧ್ಯಕ್ಷರಾದ ಆನಂದ್ ಮಡಿಕೇರಿ ದಸರಾದಲ್ಲಿ ಪ್ರತಿ ವರ್ಷ ವಿನೂತನ ರೀತಿಯಲ್ಲಿ ಮಂಟಪ ತಯಾರಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿರುವ ಶ್ರೀ ಕೋದಂಡ ರಾಮ ದೇವಾಲಯವು ಈ ಬಾರಿಯೂ ಕೂಡ ಅದ್ದೂರಿ ದಸರಾ ಆಚರಿಸುವ ಮುಖಾಂತರ ಉತ್ತಮ ಮಂಟಪ ಹೊರತರುವಲ್ಲಿ ದೇವಾಲಯದ ಸರ್ವ ಸದಸ್ಯರು ಶ್ರಮಿಸಳಿದ್ದೇವೆ ಎಂದು ಅಭಿಪ್ರಾಯ ಹಂಚಿಕೊಂಡರು.






