ಮಡಿಕೇರಿ ಮೇ 12 NEWS DESK : ನಗರದ ಶ್ರೀ ಮುತ್ತಪ್ಪ ದೇವಾಲಯದಲ್ಲಿರುವ ಶ್ರೀ ಭಗವತಿ ದೇವಿಯ ವಾರ್ಷಿಕ ಪೊಂಗಾಲ ಉತ್ಸವವು ಮೇ 18 ರಂದು ನಡೆಯಲಿದೆ ಎಂದು ಶ್ರೀ ಮುತ್ತಪ್ಪ ಮಹಿಳಾ ವೇದಿಕೆಯ ಅಧ್ಯಕ್ಷೆ ಶಾರದ ರಾಮನ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಪುರಾತನ ದೇವಾಲಯಗಳಲ್ಲೊಂದಾದ ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಪಾರ್ವತಿ, ಸರಸ್ವತಿ, ಮಹಾಲಕ್ಷ್ಮಿ, ದುರ್ಗಿ ಸಂಕಲ್ಪದಲ್ಲಿರುವ ಶ್ರೀ ಭಗವತಿ ದೇವಿಗೆ ಪೊಂಗಾಲ ಸೇವೆಯನ್ನು ಬೆಳಿಗ್ಗೆ 8.30ಕ್ಕೆ ನಡೆಸಲು ಉದ್ದೇಶಿಸಲಾಗಿದ್ದು, ಈ ಬಾರಿ ವಿಜೃಂಭಣೆಯಿಂದ ಉತ್ಸವ ನಡೆಸಲಾಗುವುದು. ಇದು ಕೇವಲ ಮಹಿಳೆಯರು ಮಾತ್ರ ನಡೆಸುವ ಪುಣ್ಯ ಕಾರ್ಯವಾಗಿದ್ದು, ಪೊಂಗಾಲ ಸಮರ್ಪಣೆಯಿಂದ ಮನೆಯಲ್ಲಿ ಆರೋಗ್ಯ ಶಾಂತಿ, ನೆಮ್ಮದಿ ನೆಲೆಸುವ ನಂಬಿಕೆ ಇದೆ ಎಂದರು. ಇಟ್ಟಿಗೆ ಅಥವಾ ಕಲ್ಲುಗಳನ್ನು ಜೋಡಿಸಿ ಒಲೆಯನ್ನು ಹಾಕಿ ಸೌದೆಗಳನ್ನು ಜೋಡಿಸಿ ಸಿದ್ಧಪಡಿಸಿದ ನಂತರ ಅರ್ಚಕರು ನೀಡಿದ ಕರ್ಪೂರದಾರತಿಯಿಂದ ಒಲೆ ಉರಿಸಿ, ಹೊಸ ಮಡಿಕೆಯಲ್ಲಿ ನೀರು ತುಂಬಿಸಿ, ಪೊಂಗಾಲ ತಯಾರಿಕೆ ಮಾಡಲಾಗುತ್ತದೆ ಎಂದು…
ಲೇಖಕ: admin
ಮುಂಬೈ ಮೇ 12 NEWS DESK : ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು ಕೊಹ್ಲಿ ಅಧಿಕೃತವಾಗ ನಿವೃತ್ತಿ ಘೋಷಿಸಿದ್ದಾರೆ. 14 ವರ್ಷಗಳ ತಮ್ಮ ಟೆಸ್ಟ್ ಕೆರಿಯರ್ಗೆ ವಿರಾಮ ಇಟ್ಟಿರುವ ಕಿಂಗ್ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ ಮಾತ್ರ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಇದಕ್ಕೂ ಮುನ್ನ 2024 ರಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದ ಬೆನ್ನಲ್ಲೇ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದರು. ಟೀಮ್ ಇಂಡಿಯಾ ಪರ 123 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅವರು 210 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 16608 ಎಸೆತಗಳನ್ನು ಎದುರಿಸಿರುವ ಕೊಹ್ಲಿ ಒಟ್ಟು 9230 ರನ್ ಕಲೆಹಾಕಿದ್ದಾರೆ. ಇದರ ನಡುವೆ 30 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ. ಹಾಗೆಯೇ ಭಾರತ ಟೆಸ್ಟ್ ತಂಡವನ್ನು 68 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 40 ಪಂದ್ಯಗಳಲ್ಲಿ ಜಯ…
ನಾಪೋಕ್ಲು ಮೇ 12 NEWS DESK : ಮಲ್ಮ ಹಾಕಿ ಕ್ಲಬ್ ಹಾಗೂ ಕುಂಜಿಲ ಕಕ್ಕಬ್ಬೆ ಪಂಚಾಯತಿ ವತಿಯಿಂದ ಕಕ್ಕಬ್ಬೆ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಗ್ರಾಮೀಣ ಕೀಡಾಕೂಟದ ಹಾಕಿ ಪಂದ್ಯದಲ್ಲಿ ಪ್ರಥಮ ಸ್ಥಾನ ಮರಂದೋಡ ತಂಡ ಗಳಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ದ್ವಿತೀಯ ಸ್ಥಾನವನ್ನು ಕುಂಜಿಲ ತಂಡ ಗಳಿಸಿತು. ಥ್ರೋಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನೂ ನಾಲಡಿ ತಂಡ ಗಳಿಸಿದರೆ ದ್ವಿತೀಯ ಸ್ಥಾನವನ್ನು ಕುಂಜಿಲ ತಂಡ ಗಳಿಸಿತು.ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನು ಕುಂಜಿಲ ತಂಡ ಹಾಗೂ ದ್ವಿತೀಯ ಸ್ಥಾನವನ್ನು ಯವಕಪಾಡಿ ತಂಡಗಳು ಪಡೆದುಕೊಂಡವು. ಕ್ರೀಡಾಕೂಟದಲ್ಲಿ ಮಲ್ಮ ಸಂಘದ ಅಧ್ಯಕ್ಷ ಮಾದಂಡ ಸಂದೇಶ ವಹಿಸಿದ್ದರು. ಅತಿಥಿಗಳಾಗಿ ಅಂಜಪರವಂಡ ಕುಶಾಲಪ್ಪ, ಬಡಕದ ಸುರೇಶ್, ಚಂಡಿರ ರಾಲಿ ಗಣಪತಿ, ಬೋಳಿಯಾಡಿರ ಸಂತು ಸುಬ್ರಮಣಿ, ಕಲಿಯಂಡ ಸಂಪನ್ ಅಯ್ಯಪ್ಪ, ಪಂಚಾಯತಿ ಪಿ.ಡಿ.ಓ.ಅಶೋಕ್, ಚೊಯಮಂಡ ಹರೀಶ್ ಮೊನ್ನಪ್ಪ, ಸೌಕ ವೈಕೂಲ್, ಮಾಮು ಕುಂಜಿಲ, ಪರದಂಡ ಸದಾನಾಣಯ್ಯ, ಕುಡಿಯರ ದಿಲೀಪ್, ಮಾದಂಡ ಜಗ ಸೇರಿದಂತೆ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದು ವೇದಿಕೆಯಲ್ಲಿದ್ದ ಗಣ್ಯರು ವಿಜೇತ ತಂಡಗಳಿಗೆ…
ನಾಪೋಕ್ಲು ಮೇ 12 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಮಕ್ಕಂದೂರು ಗ್ರಾಮದ ಕುಂಭ ಗೌಡನ ಐನ್ ಮನೆಯಲ್ಲಿ ಮೇ 17 ರಂದು ಐನ್ ಮನೆ ಜಂಬರ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕುಂಭ ಗೌಡರಿಗೆ ಲಿಂಗರಾಜರು ಕೊಡ ಮಾಡಿದ್ದ ನಿರೂಪದ ಅನಾವರಣ, ಅಕಾಡೆಮಿ ಪ್ರಕಟಿತ ಪುಸ್ತಕಗಳ ಬಿಡುಗಡೆ ಅರೆ ಭಾಷೆ ಸುಪ್ರಭಾತದ ಧ್ವನಿ ಸುರುಳಿ ಬಿಡುಗಡೆ, ಕುಂಭ ಗೌಡನ ಕುಟುಂಬದ ಲಾಂಛನ ಬಿಡುಗಡೆ, ಸಾಧಕರಿಗೆ ಸನ್ಮಾನ ಹಾಗೂ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾಗಿದ್ದ ಕ್ರೀಡಾಕೂಟ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿವೆ. ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕುಂಭ ಗೌಡನ ಕುಟುಂಬದ ಪಟ್ಟದಾರ ಕೆ.ಕೆ.ಓಂಕಾರಪ್ಪ ಉದ್ಘಾಟಿಸಲಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ್ ಡಾ.ಮಂತರ್ ಗೌಡ ಸಾಧಕರು ಸನ್ಮಾನಿಸಲಿದ್ದಾರೆ. ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ ಪುಸ್ತಕಗಳ ಬಿಡುಗಡೆ ಮಾಡಲಿದ್ದಾರೆ. ಸಾಹಿತಿ ಏ.ಕೆ.ಹಿಮಕರ ಅರೇಬಾಷೆ ಕುಟುಂಬಗಳ ಐನ್ ಮನೆ ಹಾಗೂ ಕುಂಭ…
ಮಡಿಕೇರಿ ಮೇ 12 NEWS DESK : ಬಿಟ್ಟಂಗಾಲದ ಪೆಗ್ಗಿರಿಕಾಡು ಎಂಬಲ್ಲಿ ಸಾಕಿದ ಹಸು ದಾಳಿಯಿಂದ ತೀವ್ರ ಗಾಯಗೊಂಡು ಮೃತಪಟ್ಟಿದ್ದ ದಯಾನಂದ ಅವರ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಶಾಸಕರೊಂದಿಗೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಮೇ 12 NEWS DESK : ವಿಶ್ವಾದ್ಯಂತ ಪ್ರಖ್ಯಾತವಾಗಿರುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಡಗಿನ ಹಲವರು ತಮ್ಮ ಛಾಪು ಮೂಡಿಸಿದ್ದು, ಇಂತಹ ಕ್ರೀಡಾಕೂಟಗಳು ಯುವಕರ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್, ಸುಂಟಿಕೊಪ್ಪ ಸಂತ ಅಂತೋಣಿಯವರ ದೇವಾಲಯದ ಸಂಯುಕ್ತಾಶ್ರಯದಲ್ಲಿ ಸುಂಟಿಕೊಪ್ಪದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ 14ನೇ ವರ್ಷದ ಪಂದ್ಯಾವಳಿಯ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಸಮುದಾಯಗಳ ವತಿಯಿಂದ ಆಯೋಜನೆಗೊಳ್ಳುತ್ತಿರುವ ಕ್ರಿಕೆಟ್ ಪಂದ್ಯಾಟಗಳು ಅದ್ಭುತ ಯಶಸ್ಸು ಕಾಣುವುದು ಮಾತ್ರವಲ್ಲದೆ, ಸಮುದಾಯದ ಯುವಕರನ್ನು ಒಟ್ಟುಗೂಡಿಸಿ ಒಗ್ಗಟ್ಟು ಪ್ರದರ್ಶಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಬಣ್ಣಿಸಿದರು. ಕ್ರೀಡೆಯು ಸದಾ ಮನೋಲ್ಲಾಸಕ್ಕೆ ಕಾರಣವಾಗಿದ್ದು, ಕ್ರೀಡೆಯಲ್ಲಿ ಯುವಕರು ತಮ್ಮನ್ನು ತಾವು ತೊಡಗಿಸಿಕೊಳ್ಳುವುದರಿಂದ ಇತರ ದುಶ್ಚಟಗಳಿಂದ ದೂರ ಉಳಿಯಲು ಸಹಕಾರಿಯಾಗಲಿದೆ. ಮಾತ್ರವಲ್ಲ ತಮ್ಮ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳಲು ಕ್ರೀಡೆಯು…
ಕುಶಾಲನಗರ ಮೇ 12 NEWS DESK : ಕೇಂದ್ರ ಸರ್ಕಾರದ ಕರಕುಶಲ ಮತ್ತು ಜವಳಿ ಮಂತ್ರಾಲಯ ಇಲಾಖೆಯ ಮೈಸೂರಿನ ಕರಕುಶಲ ವಿಸ್ತರಣಾ ಸೇವಾ ಕೇಂದ್ರದ ವತಿಯಿಂದ ಕುಶಾಲನಗರ ಪಟ್ಟಣದ ಕನ್ನಡ ಭಾರತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂರು ದಿನಗಳ ಕಾಲ ಏರ್ಪಡಿಸಿದ್ದ ಕರಕುಶಲ ವಸ್ತುಗಳ ತಯಾರಿಕೆ ಶಿಬಿರ ಹಾಗೂ ಜಾಗೃತಿ ಕಾರ್ಯಕ್ರಮ ಮುಕ್ತಾಯಗೊಂಡಿತು. ಶಿಬಿರದಲ್ಲಿ ಸಮಾರೋಪ ಭಾಷಣ ಮಾಡಿದ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿಯ ಸದಸ್ಯ ಎಂ.ಎನ್.ವೆಂಕಟನಾಯಕ್, ಇಂತಹ ಕಲಾ ಶಿಬಿರಗಳು ಜೀವನದಲ್ಲಿ ಕಲಾ ಉತ್ಸವದ ಸೆಲೆಯಾಗಿ ರೂಪುಗೊಳ್ಳಲು ಸಹಕಾರಿಯಾಗಿವೆ ಎಂದರು. ಕಲೆ, ಸಂಸ್ಕೃತಿ ಹಾಗೂ ಕರಕುಶಲ ಕಲೆಯಲ್ಲಿ ಶ್ರೀಮಂತಿಕೆಯನ್ನು ಹೊಂದಿರುವ ಭಾರತದಲ್ಲಿ ಕರಕುಶಲ ಕಲೆಯು ಪ್ರಾಚೀನ ಕಾಲದಿಂದಲೂ ಮನುಷ್ಯನಿಗೆ ಕರಗತವಾಗಿ ಬೆಳೆದುಬಂದಿದೆ ಎಂದರು. ಕಲಾ ಶಿಬಿರಗಳು ವಿದ್ಯಾರ್ಥಿಗಳು ಹಾಗೂ ನಿರುದ್ಯೋಗಿಗಳಲ್ಲಿ ಕರಕುಶಲ ಕಲೆಯನ್ನು ಕರಗತ ಮಾಡಿಕೊಂಡು ಉತ್ತಮ ಜೀವನ ಕಂಡುಕೊಳ್ಳಲು ಸಹಕಾರಿಯಾಗಿವೆ ಎಂದು ವೆಂಕಟನಾಯಕ್ ಅಭಿಪ್ರಾಯಪಟ್ಟರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ಕೆ.ಎಸ್.ರುದ್ರಪ್ಪ, ಇಂತಹ ಶಿಬಿರಗಳು…
ಮಡಿಕೇರಿ ಮೇ 12 NEWS DESK : ಕಟ್ಟೆಮಾಡು ಗ್ರಾಮದ ಬಿದ್ರುಪಣೆ ಕುಟುಂಬಸ್ಥರ ಐನ್ ಮನೆಯಲ್ಲಿ ಎರಡು ದಿನ ವೆಂಕಟರಮಣ ದೇವರ ಹರಿಸೇವೆ ಮತ್ತು ಪರಿವಾರ ದೈವಗಳ ನೇಮೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು. ಪ್ರತಿ ವರ್ಷದಂತೆ ಈ ವರ್ಷವೂ ನಡೆದ ದೈವ, ದೇವರ ಉತ್ಸವದಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ದೈವ, ದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸತ್ಯದೇವತೆ, ಪಾಷಾಣಮೂರ್ತಿ, ಕುಕ್ಕತ್ತಿಬಲ್ಲು, ವರ್ಣ ಪಂಜುರ್ಲಿ, ಕುಪ್ಪೆ ಪಂಜುರ್ಲಿ, ಗುಳಿಗ, ಧರ್ಮದೇವತೆಯ ಕೋಲಗಳು ನಡೆದವು. ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.
ಮಡಿಕೇರಿ ಮೇ 12 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು ಪಾರಾಣೆಯಲ್ಲಿ, ಮೂರ್ನಾಡು-ಬಲಮುರಿ -ಪಾರಾಣೆ-ನಾಪೋಕ್ಲು ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಸುಮಾರು 2.75 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿಗೆ ಪಾರಣೆಯ ನಾಯಕಂಡ ಮನೆಯ ಬಳಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗಿದ್ದು, ಇಂಜಿನಿಯರ್ ಹಾಗೂ ಗುತ್ತಿಗೆದಾರರು ಕಾಮಗಾರಿ ಮಾಡುವ ಸಂದರ್ಭದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವುದು ಅತಿ ಮುಖ್ಯ ಎಂದು ಹೇಳಿದರು. ಸಾರ್ವಜನಿಕರ ಅನುಕೂಲಕ್ಕಾಗಿ ತಾನು ಈ ರಸ್ತೆಯ ಅಭಿವೃದ್ಧಿಗೆ ಮುಖ್ಯಮಂತ್ರಿಗಳಲ್ಲಿ ವಿಶೇಷ ಅನುದಾನವನ್ನು ತಂದಿದ್ದು, ಇದರ ಸಂಪೂರ್ಣ ಸದುಪಯೋಗ ಈ ಭಾಗದ ಸಾರ್ವಜನಿಕರಿಗೆ ಹಾಗೂ ರಸ್ತೆಯನ್ನು ಬಳಿಸುವ ಎಲ್ಲಾ ಬಳಕೆದಾರರಿಗೆ ಲಭಿಸುವಂತಾಗಬೇಕು ಹಾಗೂ ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ವಿಶೇಷ ಗಮನಹರಿಸಬೇಕೆಂದು ತಾಕೀತು ಮಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್,…
ಉಡುಪಿ ಮೇ 12 NEWS DESK : ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಸೋಮವಾರ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಇಂದು (ಮೇ 12) ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ರಾಕೇಶ್ ಅವರ ಸಾವಿನ ವಿಚಾರವನ್ನು ನಟ ಹಾಗೂ ಅವರ ಆಪ್ತ ಶಿವರಾಜ್ ಕೆಆರ್ ಪೇಟೆ ಅವರು ಖಚಿತಪಡಿಸಿದ್ದಾರೆ. ರಾಕೇಶ್ ಅವರ ಸಾವು ಅವರ ಅಭಿಮಾನಿಗಳು ಹಾಗೂ ಆಪ್ತ ಬಳಗಕ್ಕೆ ಶಾಕ್ ನೀಡಿದ್ದು, ಸಾವಿಗೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ. ರಾಕೇಶ್ ಅವರು 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ಗೆ ಅವರು ಆಯ್ಕೆಯಾದರು. ರನ್ನರ್ ಅಪ್ ತಂಡದಲ್ಲಿ ಇದ್ದರು. ನಂತರದ ಸೀಸನ್ 3ನಲ್ಲಿ ವಿನ್ನರ್ ಆದರು. ಕನ್ನಡದ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿಯೂ ನಟಿಸಿದ್ದಾರೆ.…






