ಮಡಿಕೇರಿ ಜೂ.10 NEWS DESK : ಪ್ರಧಾನಮಂತ್ರಿಗಳಾಗಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡ ಬಳಿಕ ಕೈಗೊಂಡ ದೂರದೃಷ್ಟಿಯ ಯೋಜನೆಗಳು ಹಾಗೂ ಜನಪರ ಕಾರ್ಯಕ್ರಮಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನ ಹೆಚ್ಚಿರುವುದಾಗಿ ಬಿಜೆಪಿ ಮುಖಂಡ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ. ಮಡಿಕೇರಿಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯವರು ರಾಷ್ಟ್ರದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ ಪರಿಣಾಮ, ರಾಷ್ಟ್ರವ್ಯಾಪಿ ಗುಣಮಟ್ಟದ ರಸ್ತೆಗಳ ನಿರ್ಮಾಣವಾಗಿದೆ. ಸುಲಲಿತ ಸಂಚಾರದಿಂದ ಇಂಧನ ಉಳಿತಾಯವು ಸಾಧ್ಯವಾಗಿದೆ ಎಂದರು. ಜನಪರವಾದ ಹತ್ತಾರು ಯೋಜನೆಗಳನ್ನು ಜಾರಿಗೆ ತಂದ ಮೋದಿಯವರು, ಸರ್ಕಾರಿ ಸೌಲಭ್ಯಗಳ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಹಾಕುವ ಕ್ರಾಂತಿಕಾರಕ ಚಿಂತನೆಯನ್ನು ಜಾರಿಗೆ ತರುವ ಮೂಲಕ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿದ್ದಾರೆ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಯೋಜನೆಗಳ ಹಣ ಮಧ್ಯವರ್ತಿಗಳ ಮೂಲಕ ಸೋರಿ ಹೋಗಿ ಉದ್ದೇಶಿತ ಗುರಿ ಸಾಧನೆ ಸಾಧ್ಯವಾಗುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯಕ್ಕೂ ಕೇಂದ್ರದ ಬಿಜೆಪಿ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ರಸ್ತೆ, ರೈಲ್ವೆ, ನಗರಾಭಿವೃದ್ಧಿ, ಇಂಧನ…
ಲೇಖಕ: admin
ಮಡಿಕೇರಿ ಜೂ.10 NEWS DESK : ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ 8 ಮಂದಿ ಪತ್ರಕರ್ತ ಸದಸ್ಯರು ಅತ್ಯುತ್ತಮ ವರದಿಗಳಿಗೆ ನೀಡಲಾಗುವ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗಳಿಗೆ ಆಯ್ಕೆಯಾಗಿದ್ದಾರೆ. ಸಂಘದ ಸದಸ್ಯರುಗಳಿಗೆ ಅತ್ಯುತ್ತಮ ವರದಿಗಳಿಗೆ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿ ಘೋಷಣೆಯಾಗಿದ್ದು, ಪತ್ರಕರ್ತೆ ವನಿತಾ ಚಂದ್ರಮೋಹನ್ ಅವರ ತಾಯಿ ಅಯಿನಮಂಡ ಲೀಲಾವತಿ ಗಣಪತಿ ಅವರು ತಮ್ಮ ಪತಿ ದಿ. ಅಯಿನಮಂಡ ಗಣಪತಿ ಅವರ ಸ್ಮರಣಾರ್ಥ ಅತ್ಯುತ್ತಮವಾದ ಮಾನವೀಯ ವರದಿಗೆ ಶಕ್ತಿ ವರದಿಗಾರ ಕೆ ಕೆ ನಾಗರಾಜ ಶೆಟ್ಟಿ ಅವರ ಜಿಲ್ಲೆಯಲ್ಲಿ ಮುಚ್ಚುವ ಹಂತಕ್ಕೆ ತಲುಪಿರುವ ರೇಷ್ಮೆ ಇಲಾಖೆ ಎಂಬ ವರದಿ ಆಯ್ಕೆಯಾಗಿದೆ. ಪತ್ರಕರ್ತ ಎಂ.ಎನ್. ಚಂದ್ರಮೋಹನ್ ಅವರು ತಮ್ಮ ತಂದೆ, ತಾಯಿ ಎಂ. ನಾರಾಯಣ ಮತ್ತು ಎನ್. ಪದ್ಮಾವತಿ ದಂಪತಿಗಳ ಸ್ಮರಣಾರ್ಥ ಅತ್ಯುತ್ತಮ ತನಿಖಾ ವರದಿಗೆ ಚಂದ್ರಮೋಹನ್ ಅವರ ಶಕ್ತಿಯಲ್ಲಿ ಪ್ರಕಟಗೊಂಡ ‘ಹಾರಂಗಿ ಅಣೆಕಟ್ಟೆ ಅಂಚಿನಲ್ಲಿ ಗಣಿಗಾರಿಕೆ ತಂದಿರುವ ಆತಂಕ’ ತನಿಖಾ ವರದಿ ಆಯ್ಕೆಯಾಗಿದೆ. ಮಾಜಿ ಸಚಿವರು ಎಂ. ಪಿ.…
ಮಡಿಕೇರಿ ಜೂ.10 NEWS DESK : ವಿಧಾನ ಪರಿಷತ್ ಸದಸ್ಯರೊಬ್ಬರು ಸಮಾಜಪರ ಚಿಂತನೆವುಳ್ಳ ಸ್ವಾಭಿಮಾನಿ, ಅಂಬೇಡ್ಕರ್ವಾದಿ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಹಗುರವಾಗಿ ಮಾತನಾಡಿರುವುದು ಸರಿಯಲ್ಲ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ರಾಜಶೇಖರ್, ಬಿಜೆಪಿ ತನ್ನ ಕೋಮುವಾದದ ಅಜೆಂಡಾದಿಂದ ಸೋಲು ಕಂಡಿದೆ. ರಾಜಕೀಯದಲ್ಲಿ ಪರ, ವಿರೋಧ ಸಹಜ, ಆದರೆ ಅದು ಪ್ರಗತಿಪರವಾಗಿರಬೇಕು ಮತ್ತು ಜನಪರವಾಗಿರಬೇಕು. ಅನವಶ್ಯಕ ಆಕ್ಷೇಪಾರ್ಹ ಪದ ಬಳಕೆ ಶೋಭೆ ತರುವುದಿಲ್ಲ ಎಂದು ಹೇಳಿದರು. ಪ್ರಿಯಾಂಕ್ ಖರ್ಗೆ ಅವರ ಹೆಸರಿಗೆ, ವಕ್ತಿತ್ವಕ್ಕೆ ಹಾಗೂ ಕುಟುಂಬಕ್ಕೆ ಧಕ್ಕೆ ತಂದಿರುವ ಕರ್ನಾಟಕ ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರ ನಡೆ ಖಂಡನೀಯ ಎಂದರು. ನಾರಾಯಣಸ್ವಾಮಿ ಅವರು ಸಂವಿಧಾನ ಬದ್ಧ ಹುದ್ದೆಗೆ ಚ್ಯುತಿ ತರುವ ರೀತಿಯಲ್ಲಿ ನಡೆದುಕೊಂಡು ಆ ಹುದ್ದೆಯ ಘನತೆಗೆ…
ಮಡಿಕೇರಿ ಜೂ.10 NEWS DESK : ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಜೂ.11 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10.45 ಗಂಟೆಗೆ ಕುಶಾಲನಗರದ ಇಂದಿರಾ ಕ್ಯಾಂಟೀನ್ ಭೇಟಿ ಹಾಗೂ ಪರಿಶೀಲನೆ ಮಾಡಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ನಗರಾಭಿವೃದ್ದಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ಕುಶಾಲನಗರದಲ್ಲಿ ‘ನೂತನ ಪುರಸಭಾ ಕಚೇರಿ ಕಟ್ಟಡ’ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 12.45 ಗಂಟೆಗೆ ಕೊಡಗು ಜಿಲ್ಲೆಯ ಇಂದಿರಾ ಕ್ಯಾಂಟೀನ್, ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವರ ಅಧ್ಯಕ್ಷತೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ನಂತರ ಮಧ್ಯಾಹ್ನ 3 ಗಂಟೆಗೆ ಪೌರಾಡಳಿತ ಮತ್ತು ಹಜ್ ಸಚಿವರ ಅಧ್ಯಕ್ಷತೆಯಲ್ಲಿ ಮೈಸೂರು ವಿಭಾಗದ ನಗರೋತ್ಥಾನ 3 ಮತ್ತು 4 ಹಾಗೂ ಇತರೆ ಯೋಜನೆಗಳ ಕುರಿತು’ ಪ್ರಗತಿ…
ಮಡಿಕೇರಿ ಜೂ.10 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ವಿವಿಧ ಯೋಗ ಸಂಸ್ಥೆ ಸಹಯೋಗದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಹಸಿರು ಯೋಗ, ಶ್ರಮದಾನ, ಸ್ವಚ್ಛತಾ ಅಭಿಯಾನ ಮತ್ತು ಸಸಿ ನೆಡುವ ಕಾರ್ಯಕ್ರಮವು ಮಂಗಳವಾರ ನಗರದ ಗಾಂಧಿ ಮೈದಾನ ಹಾಗೂ ಗಾಂಧಿ ಭವನದಲ್ಲಿ ನಡೆಯಿತು. ನಗರದ ಗಾಂಧಿ ಮೈದಾನದಲ್ಲಿ ಸ್ವಚ್ಚತಾ ಅಭಿಯಾನಕ್ಕೆ ನಗರಸಭಾ ಸದಸ್ಯರಾದ ಚಂದ್ರಶೇಖರ್ ಅವರು ಚಾಲನೆ ನೀಡಿದರು. ಬಳಿಕ ಗಾಂಧಿ ಮೈದಾನದಿಂದ ಗಾಂಧಿ ಭವನದವರೆಗೆ ಯೋಗದ ಮಹತ್ವ ಕುರಿತು ‘ಜಾಗೃತಿ ಜಾಥ’ ಜರುಗಿತು. ನಗರದ ಗಾಂಧಿ ಭವನದ ಆವರಣದಲ್ಲಿ ಗಿಡ ನೆಟ್ಟು ಅರಿವು ಮೂಡಿಸಲಾಯಿತು. ಜೊತೆಗೆ ಯೋಗ ಶಿಕ್ಷಕರಾದ ಮಹೇಶ್ ಅವರ ನೇತೃತ್ವದಲ್ಲಿ ಯೋಗ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ ಅವರು ಪ್ರತಿಯೊಬ್ಬರ ಆರೋಗ್ಯಕ್ಕೆ ಯೋಗ ಅತ್ಯಗತ್ಯ. ಆ ನಿಟ್ಟಿನಲ್ಲಿ ವಿವಿಧ ರೋಗಗಳಿಂದ ದೂರವಿರಲು ಪ್ರತೀ ನಿತ್ಯ ಅರ್ಧಗಂಟೆಯಾದರೂ ವ್ಯಾಯಾಮ ಮಾಡುವಂತಾಗಬೇಕು…
ಮಡಿಕೇರಿ ಜೂ.10 NEWS DESK : ದಿ ಕೂರ್ಗ್ ಡಿಸ್ಟ್ರಿಕ್ಟ್ ಮುಸ್ಲಿಂ ಅಸೋಸಿಯೇಷನ್ ನ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಿ ಸಂಘಟನೆಯನ್ನು ಸದೃಢಗೊಳಿಸಲಾಗುವುದು ಮತ್ತು ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಅಸೋಸಿಯೇಷನ್ ನ ಉಪಾಧ್ಯಕ್ಷ ಎರ್ಮು ಹಾಜಿ ತಿಳಿಸಿದ್ದಾರೆ. ನಗರದ ಕೂರ್ಗ್ ಕಮ್ಯೂನಿಟಿ ಹಾಲ್ ನಲ್ಲಿ ನಡೆದ ಅಸೋಸಿಯೇಷನ್ ನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಘದ ಅಭಿವೃದ್ಧಿಗೆ ಸದಸ್ಯರ ಸಂಖ್ಯೆ ಹೆಚ್ಚಾಗಬೇಕಾಗಿದೆ, ಸಮುದಾಯದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರೊಂದಿಗೆ ಚರ್ಚಿಸಿ ಸದಸ್ಯತ್ವವನ್ನು ಹೆಚ್ಚಿಸುವ ಕುರಿತು ಸಿದ್ದಾಪುರದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಮುಂದುವರಿದ ಭಾಗವಾಗಿ ಇಂದು ಪ್ರಮುಖರನ್ನು ಒಗ್ಗೂಡಿಸಿ ಸಭೆ ನಡೆಸಲಾಗಿದೆ. ಸಂಘದ ಸದಸ್ಯತ್ವ ಶುಲ್ಕ ರೂ.2,500 ಎಂದು ನಿಗಧಿಪಡಿಸಲಾಗಿದೆ. ಜಮಾಅತ್, ಮಸೀದಿಗೆ ಸಂಬಂಧಿಸಿದ ಸಂಘಟನೆಗಳ ಸದಸ್ಯರು ಸದಸ್ಯತ್ವ ಪಡೆದುಕೊಳ್ಳಬಹುದಾಗಿದೆ ಎಂದರು. ಸಮಾಜವನ್ನು ಸಾಮಾಜಿಕ ಪಿಡುಗುಗಳು ಕಾಡುತ್ತಿವೆ, ಯುವ ಸಮೂಹ ಮಾದಕ ವ್ಯಸನಿಗಳಾಗುತ್ತಿದ್ದಾರೆ. ಸಮುದಾಯದ ಯುವಕರನ್ನು ಮಾದಕ ವಸ್ತುಗಳ ಸೇವನೆಯಿಂದ ಮುಕ್ತರನ್ನಾಗಿಸುವುದು, ಅವರ ಕುಟುಂಬದವರನ್ನು ರಕ್ಷಿಸುವುದು, ಸಮುದಾಯದ ಕ್ರಿಕೆಟ್ ಪಂದ್ಯಗಳನ್ನು ವರ್ಷಂಪ್ರತಿ…
ಮಡಿಕೇರಿ ಜೂ.10 NEWS DESK : ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ, ಸ್ವ-ಆಡಳಿತ, ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು ಸೇರಿದಂತೆ ಕೊಡವರ ಪರವಾದ ಕಾನೂನು ಬದ್ಧ ಹಕ್ಕುಗಳ ಪ್ರತಿಪಾದನೆಯ ವಿಚಾರ ಸಂಕಿರಣ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜೂ.18ರಂದು ಮಡಿಕೇರಿ ಹೊರವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ನಡೆಯುವ ವಿಚಾರ ಸಂಕಿರಣದಲ್ಲಿ ಸುಪ್ರೀಂ ಕೋರ್ಟ್ ವಕೀಲ ವಿಕ್ರಮ್ ಹೆಗ್ಡೆ ಅವರು ಉಪನ್ಯಾಸ ನೀಡುವರು, ಇವರ ಪತ್ನಿ ಪ್ರಖ್ಯಾತ ಕಾನೂನು ತಜ್ಞೆ ಹಿಮಾ ಲಾರೆನ್ಸ್ ಉಪಸ್ಥಿತರಿರುವರು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಪ್ರಾದೇಶಿಕ ಸ್ವಾಯತ್ತತೆಯ ಬೇಡಿಕೆಗಳ ಕುರಿತು ತಾವು ಹೊಂದಿರುವ ಪರಿಣತಿಯ ಆಧಾರದಲ್ಲಿ ವಿಕ್ರಮ್ ಹೆಗ್ಡೆ ಅವರು ಉಪನ್ಯಾಸ ನೀಡಲಿದ್ದಾರೆ. ಸಾಂವಿಧಾನಿಕ ಕಾನೂನಿನಲ್ಲಿ ಅವರ ಹಿನ್ನೆಲೆ ಮತ್ತು ಸಿಎನ್ಸಿ ಪರವಾಗಿ ಕೊಡವ ಬಂದೂಕು ವಿನಾಯಿತಿ ಪ್ರಕರಣದಲ್ಲಿ ಅವರ ಪಾಲ್ಗೊಳ್ಳುವಿಕೆಯಿಂದ ಅವರ ಮೇಲಿನ ವಿಶ್ವಾಸಾರ್ಹತೆ ಹೆಚ್ಚಾಗಿದೆ. ಈ ವಿಚಾರ ಸಂಕಿರಣ ಮಾಹಿತಿಯುಕ್ತ ಮತ್ತು…
ಮಡಿಕೇರಿ ಜೂ.10 NEWS DESK : ಕಳೆದ ವರ್ಷ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ದಿನದಂದೇ ಧಾರುಣಾವಾಗಿ ಅಂತ್ಯಕಂಡ ಮೀನಾಳ ಕುಟುಂಬಕ್ಕೆ ಅಂದು ನೀಡಿದ್ದ ಭರವಸೆಯಂತೆ ಶಾಸಕ ಡಾ.ಮಂತರ್ ಗೌಡ ನೂತನ ಮನೆ ನಿರ್ಮಿಸಿ ಕೊಟ್ಟಿದ್ದು, ಪೋಷಕರಿಗೆ ಮನೆ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಸೂರ್ಲಬ್ಬಿ ಸರ್ಕಾರಿ ಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಮಡಿಕೇರಿ ತಾಲ್ಲೂಕು, ಗಾಳಿಬೀಡು ಗ್ರಾ.ಪಂ ವ್ಯಾಪ್ತಿಯ ಮುಟ್ಲು ಗ್ರಾಮದ ಉದಿಯಂಡ ಸುಬ್ರಮಣಿ ಹಾಗೂ ಜಾನಕಿ ದಂಪತಿಯ ಪುತ್ರಿ ಮೀನಾ (16) ಹತ್ಯೆ ನಂತರ ಕುಟುಂಬದ ಕಷ್ಟವನ್ನು ಅರಿತ ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಹಾಗೂ ಸ್ನೇಹಿತರ ಬಳಗ ಸೇರಿ ಕೊಂಡು ಸುಮಾರು 7 ಲಕ್ಷ ರೂ. ಮನೆ ನೀಡುವ ನುಡಿಯಂತೆ ಮನೆ ಹಸ್ತಾಂತರದೊಂದಿಗೆ ಬಾವುಕ ಕ್ಷಣಕ್ಕೆ ಸಾಕ್ಷಿಯಾದರು. ಮೀನಾ ಕುಟುಂಬ ಕೀ ಸ್ವೀಕರಿಸಿ ಭರವಸೆ ಈಡೇರಿಸಿಕೊಂಡ ಕ್ಷಣಕ್ಕೆ ಸಾಕ್ಷಿಯಾದರು. ಮನೆಯ ಗೋಡೆಯಲ್ಲಿ ಮೀನಾ ಭಾವಚಿತ್ರ ಎಲ್ಲರ ಕಣ್ಣಲ್ಲಿ ನೀರು ಜಾರುವಂತೆ ಮಾಡಿತು. ಗೃಹ ಸಚಿವ ಪರಮೇಶ್ವರ್ ಅವರೊಂದಿಗೆ…
ಸಿದ್ದಾಪುರ ಜೂ.10 NEWS DESK : ಮರಗಳ ಸಾಗಾಣಿಕೆಯನ್ನು ರದ್ದುಪಡಿಸಿ ಜಿಲ್ಲಾಧಿಕಾರಿ ಆದೇಶಿಸಿರುವ ಷರತ್ತಿಗೆ ಸಮಯಾವಕಾಶವನ್ನು ನೀಡುವಂತೆ ಕೊಡಗು ಜಿಲ್ಲೆಯ ಮರದ ವ್ಯಾಪಾರಿಗಳು ಹಾಗೂ ಕಾರ್ಮಿಕರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಜೂ.6 ರಿಂದ ಜುಲೈ 5 ರವರೆಗೆ ಎಲ್ಲಾ ರೀತಿಯ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಇದರಿಂದಾಗಿ ಮರದ ವ್ಯಾಪಾರಿಗಳು ಹಾಗೂ ಕೆಲಸಗಾರರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಮರದ ವ್ಯಾಪಾರಿಗಳು ತೋಟದಲ್ಲಿ ಕಡಿದು ಮರಗಳು ಮೃದು ಆಗಿದ್ದು, ತಕ್ಷಣವೇ ಸಾಗಿಸದಿದ್ದಲ್ಲಿ ಉಪಯೋಗಕ್ಕೆ ಬರುವುದಿಲ್ಲ, ಇದರಿಂದ ವ್ಯಾಪಾರಿಗಳಿಗೆ ತುಂಬಾ ನಷ್ಟ ಉಂಟಾಗಲಿದೆ ಕಡಿದ ಮರದ ನಾಟಗಳನ್ನು ಸಾಗಿಸಲು ಮುಂದಿನ 20-06-2025 ರವರೆಗೆ ಸಮಯಾವಕಾಶವನ್ನು ನೀಡಬೇಕೆಂದು ಮನವಿ ಮಾಡಿದರು. ಸಂಘದ ಅಧ್ಯಕ್ಷ ಸಮೀರ್, ಕಾರ್ಯದರ್ಶಿ ಹುರೈಸ್, ಸದಸ್ಯರಾದ ಮಹಮ್ಮದ್,ಹಂಸ,ಆಸೀಫ್, ಮುಸ್ತಫಾ, ಮುಂತಾದವರು ಪಾಲ್ಗೊಂಡಿದ್ದರು.
ಮಡಿಕೇರಿ ಜೂ.10 NEWS DESK : ಬೂಕರ್ ಪ್ರಶಸ್ತಿ ವಿಜೇತೆ ದೀಪಾ ಭಾಸ್ತಿ ಅವರು ತಮ್ಮ ‘ಹಾರ್ಟ್ ಲ್ಯಾಂಪ್’ ಅನುವಾದ ಕೃತಿಯ ಮೂಲಕ, ಸಾಂಪ್ರದಾಯಿಕವಾದ ಅನುವಾದದ ಚೌಕಟ್ಟುಗಳನ್ನು ಮೀರಿ, ಸೃಜನಾತ್ಮಕವಾದ ಅನುವಾದದ ಹೊಸ ಪಥವನ್ನು ಸೃಷ್ಟಿಸಿದ್ದಾರೆಂದು ಹಾಸನ ಜಿಲ್ಲೆಯವರಾದ ಕವಿ ಮತ್ತು ಅನುವಾದಕಿಯಾದ ಜ.ನಾ.ತೇಜಶ್ರೀ ಅಭಿಪ್ರಾಯಿಸಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಮತ್ತು ಮಡಿಕೇರಿ ತಾಲ್ಲೂಕು ಕಸಾಪ ಸಂಯುಕ್ತಾಶ್ರಯದಲ್ಲಿ ನಗರದ ರೆಡ್ ಬ್ರ್ರಿಕ್ಸ್ನ ಸತ್ಕಾರ ಸಭಾಂಗಣದಲ್ಲಿ ಆಯೋಜಿತ ಸಮಾರಂಭದಲ್ಲಿ ಬೂಕರ್ ಪ್ರಶಸ್ತಿಗೆ ಪಾತ್ರರಾದ ದೀಪಾ ಭಾಸ್ತಿ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಕನ್ನಡದ ಖ್ಯಾತ ಸಾಹಿತಿ ನಾನು ಮುಷ್ತಾಕ್ ಮತ್ತು ಅವರ ಕೃತಿ ಎದೆಯ ಹಣತೆಯನ್ನು ಹಾರ್ಟ್ ಲ್ಯಾಂಪ್ ಆಗಿ ಅನುವಾದಿಸಿದ ದೀಪಾ ಭಾಸ್ತಿ ಅವರು, ಕನ್ನಡದಿಂದ ಇಂಗ್ಲೀಷ್ಗೆ ಮಾಡಿರುವ ಅನುವಾದದಲ್ಲಿ ‘ಕನ್ನಡದ ಭಾಷಾ ಸೌಂದರ್ಯವನ್ನು, ಚೆಲುವನ್ನು’ ಹಾಗೆಯೇ ಕಾಯ್ದುಕೊಂಡಿದ್ದಾರೆಂದು ತಿಳಿಸಿದರು. ಇಂಗ್ಲೀಷ್ ಭಾಷೆಗೆ ಅನುವಾದಿತ ಕೃತಿಗಳು ಲ್ಲಿಯವರೆಗೆ, ಆಯಾ ಭಾಷೆಗಳಲ್ಲಿನ ವಿಚಾರಗಳನ್ನು,…






