ಲೇಖಕ: admin

ಮಡಿಕೇರಿ NEWS DESK ಜೂ.27 : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಮಹಿಳಾ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಸಸಿಗಳನ್ನು ನೆಟ್ಟು ಪರಿಸರ ರಕ್ಷಣೆಗೆ ಕರೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿಕಲಾ ಅವರು ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ, ಮುಂದಿನ ಪೀಳಿಗೆಯ ಸುಂದರ ಭವಿಷ್ಯಕ್ಕಾಗಿ ಪರಿಸರ ರಕ್ಷಣೆಯ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು. ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪವಿತ್ರ ಎಸ್., ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಚೇತನ್ ಕೋಚನ, ನಗರಸಭೆಯ ಮಾಜಿ ಅಧ್ಯಕ್ಷೆ ಜುಲೇಕಾಬಿ, ಉಪಾಧ್ಯಕ್ಷೆ ಲೀಲಾ ಶೇಷಮ್ಮ, ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಮೂಡ ಸದಸ್ಯೆ ಮಿನಾಜ್ ಪ್ರವೀಣ್, ಪ್ರಮುಖರಾದ ಧನಲಕ್ಷಿö್ಮ ಪನ್ನು, ಹರಿಣಾಕ್ಷಿ, ರೇವತಿ ರಮೇಶ್, ಪ್ರೇಮ ನಿಂಗಪ್ಪ, ಪ್ರೇಮ ಕಷ್ಣಪ್ಪ, ವಿಮಲ, ರೈಸ ಖಾನ್, ತಾಜುನ್ನಿಸ,…

Read More

ಮಡಿಕೇರಿ NEWS DESK ಜೂ.27 : ಕುಶಾಲನಗರದ ಪ್ರವಾಸಿತಾಣ ನಿಸರ್ಗಧಾಮ ಸಮೀಪದ ಮಳಿಗೆಯೊಂದರಲ್ಲಿ ನಡೆದಿರುವ ಮತಾಂತರ ಪ್ರಕರಣಕ್ಕೆ ಸಂಬoಧಿಸಿದoತೆ, ಕೇಂದ್ರೀಯ ತನಿಖಾ ದಳದ ಮೂಲಕ ಉನ್ನತ ಮಟ್ಟದ ತನಿಖೆ ನಡೆಸಿ ಈ ಕೃತ್ಯದ ಮೂಲವನ್ನು ಬಯಲಿಗೆಳೆಯಬೇಕೆಂದು ಕುಶಾಲನಗರ ಹಿಂದೂ ಸುರಕ್ಷಾ ಸಮಿತಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದೂ ಸುರಕ್ಷಾ ಸಮಿತಿಯ ಕುಶಾಲನಗರದ ಸಂಚಾಲಕ ಬಿ.ಅಮೃತರಾಜ್ ಅವರು, ನಿಸರ್ಗಧಾಮದ ಮಳಿಗೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆೆ ಹಾಗೂ ಆಕೆಯ ಮಗನನ್ನು ಕೇರಳದ ಮಲಪ್ಪುರಂ ಜಿಲ್ಲೆಯ ಮಂಜೇರಿ ಗ್ರಾಮದಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ. ಹೊರ ರಾಜ್ಯದಲ್ಲಿ ಘಟನೆ ನಡೆದಿರುವ ಹಿನ್ನೆಲೆ, ಇಲ್ಲಿನ ಪೊಲೀಸ್ ಇಲಾಖೆ ಎನ್‌ಐಎ ಸಹಕಾರದೊಂದಿಗೆ ಕೇರಳದಲ್ಲಿ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಪ್ರಸ್ತುತ ಬೆಳಕಿಗೆ ಬಂದಿರುವ ಮತಾಂತರ ಪ್ರಕರಣದ ಮಾದರಿಯಲ್ಲೆ ನಿಸರ್ಗಧಾಮ ವ್ಯಾಪ್ತಿಯಲ್ಲಿ ಐದಾರು ಪ್ರಕರಣಗಳು ನಡೆದಿರುವ ಬಗ್ಗೆ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಎಲ್ಲಾ…

Read More

ಮಡಿಕೇರಿ ಜೂ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಾಡಪ್ರಭು ಕೆಂಪೇಗೌಡರ ಜಯಂತಿಯು ಜೂ.27 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಶಾಸಕರಾದ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿ.ಪಂ.ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಹರಪಳ್ಳಿ ರವೀಂದ್ರ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್.ಎಂ.ಚಂಗಪ್ಪ, ಕೊಡಗು ಜಿಲ್ಲಾ ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಆನಂದ್ ಕರಂದ್ಲಾಜೆ, ಕೊಡಗು ಗೌಡ ವಿದ್ಯಾನಿಧಿ ಅಧ್ಯಕ್ಷರಾದ ಅಂಬೆಕಲ್ ನವೀನ್, ಕೊಡಗು…

Read More

ಕಾರ್ಕಳ ಜೂ.26 NEWS DESK : ವಿದ್ಯಾರ್ಥಿಗಳು ಕಲಿಕೆ ಮಾತ್ರವಲ್ಲದೆ ಅನೇಕ ಮೌಲ್ಯಗಳು, ಶಿಸ್ತು, ಆತ್ಮವಿಶ್ವಾಸವನ್ನು ಮೈಗೂಡಿಸಿಕೊಳ್ಳಬೇಕೆಂಬ ಸದುದ್ದೇಶದಿಂದ ಪ್ರಾರಂಭವಾದ ಕ್ರಿಯೇಟಿವ್ ಸಂಸ್ಥೆಯ ವಿನೂತನ ಪರಿಕಲ್ಪನೆ ಕ್ರಿಯೇಟಿವ್ ಸ್ಫೂರ್ತಿ ಮಾತು ಕಾರ್ಯಕ್ರಮದ 15 ಸರಣಿ ಕಾರ್ಯಕ್ರಮವು ಸಪ್ತಗಿರಿ ವೇದಿಕೆಯಲ್ಲಿ ನಡೆಯಿತು. ಖ್ಯಾತ ವಾಗ್ಮಿಗಳು, ರಾಷ್ಟ್ರೀಯ ಜೆಸಿಐ ತರಬೇತುರಾರರಾದ ಕೆ.ರಾಜೇಂದ್ರ ಭಟ್ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅನೇಕ ಸಾಮಥ್ರ್ಯಗಳಿವೆ ಅದನ್ನು ಶೋಧಿಸಿ ಹೊರತೆಗೆದಾಗ ಅವರಿಗೆ ತಮ್ಮ ಸಾಮಥ್ರ್ಯದ ಅರಿವು ಉಂಟಾಗುತ್ತದೆ. ಓದು ಅನ್ನುವುದು ಭಾವನಾತ್ಮಕವಾದಾಗ ಅದು ಸಾರ್ಥಕತೆಯನ್ನು ಪಡೆಯುತ್ತದೆ ತಾಳ್ಮೆ ವಿದ್ಯಾರ್ಥಿಯನ್ನು ಉತ್ತುಂಗ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ನಿರ್ಭೀತಿಯಿಂದ ಕೆಲಸ ಕಾರ್ಯಗಳನ್ನು ಮಾಡಿದಾಗ ಯಶಸ್ಸನ್ನು ಕಾಣಲು ಸಾಧ್ಯ. ಸರಳ ಜೀವನ ಶೈಲಿಯನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕೆಂದು ವಿವಿಧ ಪ್ರಾತ್ಯಕ್ಷಿಕೆ ಗಳ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಕಾಲೇಜಿನ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿಯವರು ಸಂಸ್ಥೆಯಲ್ಲಿ ನಡೆಯುವ ಪಾಠ ಪ್ರವಚನಗಳು ಹಾಗೂ ಶೈಕ್ಷಣಿಕ ವರ್ಷದಲ್ಲಿ ನಡೆಯುವ ಅನೇಕ ಕಾರ್ಯಕ್ರಮಗಳ ಬಗ್ಗೆ…

Read More

ವಿರಾಜಪೇಟೆ ಜೂ.26 NEWS DESK : ಬಿಳುಗುಂದ ಸರಕಾರಿ ಪ್ರೌಢಶಾಲೆಯಲ್ಲಿ ವಿಶೇಷ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ಪಿ.ಬಿ.ಶಿಲ್ಪಾ ಅವರಿಗೆ ಮಾರ್ಗದರ್ಶನ ನೀಡಿದ ಕನ್ನಡ ಶಿಕ್ಷಕಿ ಪಿ.ಎಸ್.ಭವ್ಯ ಅವರನ್ನು ಎಸ್.ಡಿ.ಎಂ.ಸಿ ಮತ್ತು ಶಾಲಾ ಸಿಬ್ಬಂದಿ ವತಿಯಿಂದ ಸನ್ಮಾನಿಸಲಾಯಿತು. ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಕನ್ನಡದಲ್ಲಿ 100 ಕ್ಕಿಂತ ಹೆಚ್ಚು ಅಂಕ ಗಳಿಸುವಂತೆ ಮಾಡಿದ ಶಿಕ್ಷಕಿಯ ಸೇವೆಯನ್ನು ಗುರುತಿಸಿ, ಶಾಲು ಹೊದಿಸಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಪೊನ್ನಂಪೇಟೆ ತಾಲೂಕಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿಯು ಭವ್ಯ ಅವರು ಈ ಸಾಧನೆಗಾಗಿ ಸನ್ಮಾನಿತರಾಗಿದ್ದಾರೆ. ಈ ಸಂದರ್ಭ ಎಸ್.ಡಿ.ಎಂ.ಸಿ ಅಧ್ಯಕ್ಷ ಇಸ್ಮಾಯಿಲ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಡಾ. ರವಿ.ಆರ್, ಅತಿಥಿಗಳಾದ ನಗರಾಜ್, ರಾಜೇಶ್, ಎಸ್.ಡಿ.ಪಿ.ಸಿ ಸದಸ್ಯ ರಶೀದ್ ಉಪಸ್ಥಿತರಿದ್ದರು. ಹಿರಿಯ ಶಿಕ್ಷಕಿ ಅರುಣ್ ಆನ್ಸಿ ಡಿಸೋಜಾ ಅವರು ಭವ್ಯ ಅವರ ಶ್ರಮವನ್ನು ಕೊಂಡಾಡಿದರು. ಈ ಸಂದರ್ಭ ಶಿಕ್ಷಕರಾದ ಲೀಲಾವತಿ…

Read More

ಕುಶಾಲನಗರ, ಜೂ.26 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಸಂಸ್ಥೆಯ ವತಿಯಿಂದ ಉಡುಪಿಯಲ್ಲಿ ಎಸ್‍ಎಸ್‍ಎಲ್‍ಸಿ ಪ್ರತಿಭಾನ್ವಿತ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಎಸ್‍ಎಸ್‍ಎಲ್‍ಸಿಯಲ್ಲಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ನೀಡಲ್ಪಟ್ಟ ರಾಜ್ಯ ಪುರಸ್ಕಾರಕ್ಕೆ ಕೊಡಗು ಜಿಲ್ಲೆಯಿಂದ ಭಾಜನರಾದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಬಿ.ದಿಶಾಳಿಗೆ ಸಂಸ್ಥೆಯ ರಾಜ್ಯ ಆಯುಕ್ತರಾದ ಶ್ರೀ ಪಿ.ಜಿ.ಆರ್.ಸಿಂಧ್ಯ ಸರ್ ಅವರು ರಾಜ್ಯ ಪುರಸ್ಕಾರ ನೀಡಿ ಪ್ರಶಸ್ತಿ ಪತ್ರ ವಿತರಿಸಿದರು. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಬಿ.ದಿಶಾ ಶೇ.95.36 ರಷ್ಟು ಅಂಕಗಳಿಸಿ ಶಾಲೆಗೆ ಕೀರ್ತಿ ತಂದು ರಾಜ್ಯ ಪ್ರತಿಭಾ ಪುರಸ್ಕಾರದಲ್ಲಿ ಪ್ರಶಸ್ತಿ ಗಳಿಸಿರುವುದನ್ನು ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಶ್ಲಾಘಿಸಿದ್ದಾರೆ. ವಿದ್ಯಾರ್ಥಿನಿ ದಿಶಾಳ ಪ್ರತಿಭಾ ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿರುವ ಭಾರತ್ ಸ್ಕೌಟ್ಸ್ & ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮತ್ತು ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ…

Read More

ಮಡಿಕೇರಿ ಜೂ.26 NEWS DESK : ಇತ್ತೀಚೆಗೆ ನಡೆದ ಮತಾಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆ ಹೊರತು ನಿಸರ್ಗಧಾಮ ಟೂರಿಸ್ಟ್ ಸೆಂಟರ್ (ಎನ್‍ಟಿಸಿ) ನ್ನು ಗುರಿ ಮಾಡಬಾರದು ಎಂದು ಇಲ್ಲಿನ ವರ್ತಕರು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಥಳೀಯ ವರ್ತಕ ಮುರಳಿ ಅಂಚೆಮನೆ ಅವರು ನಿಸರ್ಗಧಾಮ ಟೂರಿಸ್ಟ್ ಸೆಂಟರ್ ನಲ್ಲಿ 70 ಮಳಿಗೆಗಳಿದ್ದು, ಸುಮಾರು 300 ರಿಂದ 400 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದು ಕೇವಲ ಮುಸಲ್ಮಾನರ ವ್ಯಾಪಾರ ಕೇಂದ್ರವಲ್ಲ, ಇಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತರು, ಸೇಟುಗಳು ಸೇರಿದಂತೆ ಎಲ್ಲಾ ವರ್ಗದವರು ಒಗ್ಗಟ್ಟಿನಿಂದ ವ್ಯಾಪಾರ ಮಾಡುತ್ತಿದ್ದಾರೆ. ಕೇರಳದ ಒಂದು ಮುಸ್ಲಿಂ ಕುಟುಂಬ ಮಾತ್ರ ಇಲ್ಲಿ ಇದ್ದು, ಉಳಿದ ಮುಸಲ್ಮಾನರು ಸ್ಥಳೀಯರೇ ಆಗಿದ್ದಾರೆ. ಎಲ್ಲಾ ಧರ್ಮದವರ ಹಬ್ಬಗಳನ್ನು ಸಡಗರದಿಂದ ಆಚರಿಸುತ್ತೇವೆ. ಆದರೆ ಇತ್ತೀಚೆಗೆ ಮತಾಂತರ ಪ್ರಕರಣ ನಡೆದ ನಂತರ ಗೊಂದಲದ ವಾತಾವರಣ ಸೃಷ್ಟಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಧರ್ಮದ ಅಧಾರದ ಮೇಲೆ ಇಲ್ಲಿ ಕೆಲಸ ನೀಡುತ್ತಿಲ್ಲ, ಕೆಲಸ ಮಾಡಲು…

Read More

ಮಡಿಕೇರಿ ಜೂ.26 NEWS DESK : ನೆಲಜಿಯ “ಮಲ್ಮ ಕುಂದ್”(ಬೆಟ್ಟ) ವ್ಯಾಪ್ತಿಯಲ್ಲಿ ತಾವು ಖರೀದಿಸಿರುವ ಜಾಗದಲ್ಲಿನ ಎಲ್ಲಾ ನಿರ್ಮಾಣ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿದೆ. ಈ ಜಾಗವನ್ನು ಸ್ಥಳೀಯರಿಗೆ ಮಾರಾಟ ಮಾಡಲು ಸಿದ್ಧನಿದ್ದು, ಖರೀದಿಗೆ ಯಾರೂ ಮುಂದೆ ಬಾರದಿದ್ದಲ್ಲಿ ಅರಣ್ಯ ಇಲಾಖೆಯ ವಶಕ್ಕೆ ಒಪ್ಪಿಸುವುದಾಗಿ ಪ್ರಸಿದ್ಧ ಆಧ್ಯಾತ್ಮ ಗುರು ಶ್ರೀ ಎಂ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾವು ರೂಪಿಸಿದ್ದ ಯೋಜನೆಯ ಕುರಿತು ಆರೋಪಗಳು ಕೇಳಿ ಬಂದ ಹಿನ್ನೆಲೆ ಮತ್ತು ಸ್ಥಳೀಯರ ಭಾವನೆಗೆ ದಕ್ಕೆಯಾಗುತ್ತಿರುವುದರಿಂದ ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸಿದ್ದೇವೆ. ಭವಿಷ್ಯದ ದಿನಗಳಲ್ಲಿ ಕೊಡಗಿನಲ್ಲಿ ಯಾವುದೇ ಕೇಂದ್ರಗಳ ಸ್ಥಾಪನೆಗೆ ಮುಂದಾಗುವುದಿಲ್ಲ ಎಂದು ತಿಳಿಸಿದರು. ನೆಲಜಿಯ ಮಲ್ಮ ಬೆಟ್ಟದಿಂದ ಸುಮಾರು 2.50 ಕಿ.ಮೀ. ಕೆಳ ಭಾಗದಲ್ಲಿನ 58.90 ಎಕರೆ ಜಾಗವನ್ನು ತಾನು ಪ್ರಸಕ್ತ ಸಾಲಿನ 2026ರ ಏಪ್ರಿಲ್4 ರಂದು 6.25 ಕೋಟಿ ರೂ.ಗಳನ್ನು ನೀಡಿ ಖರೀದಿಸಿದ್ದೆ. ಈ ಜಾಗದ ಸುಮಾರು 10 ಎಕರೆ ಪ್ರದೇಶವನ್ನು ಕಾನೂನಿನಂತೆ ಭೂ ಪರಿವರ್ತನೆ ಮಾಡಿಕೊಳ್ಳುವ ಕಾರ್ಯ ನಡೆಯುತ್ತಿದೆ. ತಾನು…

Read More

ಮಡಿಕೇರಿ ಜೂ.26 NEWS DESK  : ನೀಟ್ ಪರೀಕ್ಷಾ ಹಗರಣಗಳಿಗೆ ಕೇಂದ್ರ ಸರಕಾರದ ಬೇಜವಾಬ್ದಾರಿಯ ಧೋರಣೆಗಳೆ ಪ್ರಮುಖ ಕಾರಣವಾಗಿದ್ದು, ಇದರಿಂದ ಲಕ್ಷಾಂತರ ಮಕ್ಕಳ ಬದುಕು ಹಾಳಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಲಾಗದ ಕೇಂದ್ರದ ವೈಫಲ್ಯತೆಗಳನ್ನು ಜನರ ಮುಂದಿಡುವ ಕಾರ್ಯವನ್ನು ಕಾಂಗ್ರೆಸ್ ದೇಶ ವ್ಯಾಪಿ ನಡೆಸುತ್ತಿದೆ. ಕಳೆದ ನೀಟ್ ಪರೀಕ್ಷೆಯಲ್ಲಿನ ಹಗರಣಗಳ ಬಳಿಕ, ನೀಟ್ ಮರುಪರೀಕ್ಷೆಯನ್ನು ಸೈನಿಕರನ್ನು ಒಳಗೊಂಡಂತೆ ದೊಡ್ಡ ಮಟ್ಟದ ಬಂದೋಬಸ್ತ್ ನೊಂದಿಗೆ ನಡೆಸುವ ಮೂಲಕ ಅದನ್ನೇ ಸಾಧನೆ ಎಂದು ಬಿಂಬಿಸುವ ಪ್ರಯತ್ನ ಕೇಂದ್ರದ ಬಿಜೆಪಿ ಸರಕಾರದಿಂದ ನಡೆದಿರುವುದಾಗಿ ಟೀಕಿಸಿದರು. ಕೇಂದ್ರದ ಬಿಜೆಪಿ ನೇತೃತ್ವದ ಎನ್‍ಡಿಎ ಅಧಿಕಾರಕ್ಕೆ ಬಂದ ಕಳೆದ ಒಂದು ದಶಕಗಳ ಅವಧಿಯಲ್ಲಿ ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಅಸಮರ್ಪಕತೆಯಿಂದ ರಾಷ್ಟ್ರವ್ಯಾಪಿ 6.50 ಕೋಟಿಗೂ ಹೆಚ್ಚಿನ ಮಕ್ಕಳು ಬಾಧಿತರಾಗಿದ್ದಾರೆ. ಪರೀಕ್ಷಾ ಹಗರಣಗಳಿಗೆ ಸಿಲುಕಿ ಸಂಕಷ್ಟಕ್ಕೆ ಒಳಗಾದ…

Read More

ಮಡಿಕೇರಿ ಜೂ.26 NEWS DESK : ಮಲ್ಮ ಬೆಟ್ಟ ಸಮೀಪದ ಜಾಗದಲ್ಲಿ ಆರಂಭಿಸಲಾದ ಯೋಜನೆಯನ್ನು ಜನ ವಿರೋಧದ ನಡುವೆ ಕೈಬಿಡಲಾಗಿದೆ ಎಂದು ಜಾಗದ ಮಾಲೀಕರು ನೀಡಿರುವ ಹೇಳಿಕೆ ಸ್ವಾಗತಾರ್ಹ. ಇವರು ಖರೀದಿಸಿರುವ ಭೂಮಿಯನ್ನು ಇತರರಿಗೆ ಮಾರಾಟ ಮಾಡುವ ಅಥವಾ ಅರಣ್ಯ ಇಲಾಖೆಗೆ ನೀಡುವ ನಿರ್ಧಾರದಿಂದ ಹಿಂದೆ ಸರಿದು ನೆಲಜಿಯ ಶ್ರೀ ಇಗ್ಗುತ್ತಪ್ಪ ದೇವಾಲಯಕ್ಕೆ ಹಸ್ತಾಂತರಿಸಲಿ ಎಂದು ಕೊಡವಾಮೆರ ಕೊಂಡಾಟ ಸಂಘಟನೆಯ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಾಗವನ್ನು ದೇವಾಲಯಕ್ಕೆ ನೀಡುವ ಮೂಲಕ ನೈಜ ಧರ್ಮ ಸಹಿಷ್ಣುತೆಯನ್ನು ಮೆರೆಯಲಿ ಎಂದು ತಿಳಿಸಿದರು. ದೊಡ್ಡ ಪ್ರಮಾಣದ ಮರಗಳ ಹನನ ಮಾಡಿ ಭೂಮಿಯನ್ನು ಬಗೆದಿದ್ದರೂ ಅರಣ್ಯ ಇಲಾಖೆ ಮತ್ತು ಜಿಲ್ಲಾಡಳಿತ ಮೌನಕ್ಕೆ ಶರಣಾಗಿವೆ. ಸಾಮಾನ್ಯ ರೈತರು ಒಂದೆರಡು ಕಾಫಿಗಿಡವನ್ನು ನೆಟ್ಟರೆ, ತಮ್ಮ ಅಗತ್ಯಕ್ಕೆ ಪೂರಕವಾಗಿ ಮರಕಡಿದರೆ ಓಡಿ ಬಂದು ಕ್ರಮ ಜರುಗಿಸುವ ಅರಣ್ಯ ಇಲಾಖೆ, ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಹಿಂದಿನ ಮರ್ಮದ ತನಿಖೆಯಾಗಬೇಕಾಗಿದೆ…

Read More