ಮಡಿಕೇರಿ ಜೂ.9 NEWS DESK : ಇತ್ತೀಚಿನ ಕಾಲಘಟ್ಟದಲ್ಲಿ ಅತೀ ವೇಗವಾಗಿ ಹರಡುತ್ತಿರುವ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಬೇಕಾದರೆ, ಸಾಮಾಜಿಕ ಜಾಲತಾಣದಲ್ಲಿ ಪತ್ರಿಕಾ ಮಾಧ್ಯಮ ಹಿಡಿತ ಸಾಧಿಸುವ ಅನಿವಾರ್ಯತೆ ಇದೆ ಎಂದು ಕೊಡಗು ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ(ಪರೀಕ್ಷಾಂಗ) ಮೇಚಿರ ರವಿಶಂಕರ್ ನಾಣಯ್ಯ ಅಭಿಪ್ರಾಯಪಟ್ಟರು. ನಗರದ ಪತ್ರಿಕಾ ಭವನದಲ್ಲಿ ನಡೆದ ಕೊಡಗು ಪ್ರೆಸ್ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿಂದಿನ ಕಾಲದಲ್ಲಿ ಬದುಕಿನ ಮೌಲ್ಯಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿತ್ತು. ಬದಲಾದ ಕಾಲಘಟ್ಟದಲ್ಲಿ ಮಾನವೀಯ ಮೌಲ್ಯಗಳನ್ನು ಮರೆತಿರುವುದು ಸಮಾಜದ ಅನೇಕ ಸಮಸ್ಯೆಗಳಿಗೆ ಕಾರಣವಾಗಿದೆ. ಜನರಲ್ಲಿ ಮತ್ತೆ ಮೌಲ್ಯಗಳನ್ನು ಮೂಡಿಸುವಲ್ಲಿ ಪತ್ರಿಕಾ ಮಾಧ್ಯಮದ ಪಾತ್ರ ಮಹತ್ತರವಾಗಿದೆ. ಮನೆಯೇ ಮೊದಲ ಪಾಠ ಶಾಲೆ ಎಂಬ ಮಾತಿನಂತೆ ಪೋಷಕರು ಮಕ್ಕಳಿಗೆ ಎಳೆ ವಯಸ್ಸಿನಿಂದಲೇ ಜೀವನದ ಮೌಲ್ಯಗಳನ್ನು ಕಲಿಸಿಕೊಡಬೇಕು ಎಂದರು. ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಆಧಾರಸ್ತಂಭ ಇದ್ದಂತೆ. ಈ ವೃತ್ತಿಯನ್ನು ಜವಾಬ್ದಾರಿಯುತವಾಗಿ ನಿಷ್ಠೆಯಿಂದ ನಿಭಾಯಿಸುವುದು ಕಷ್ಟಕರ. ಸಾಮಾಜಿಕ ಬದಲಾವಣೆಯನ್ನು ತರುವ ಮತ್ತು ಜನಾಭಿಪ್ರಾಯ ರೂಪಿಸುವ ಜವಾಬ್ದಾರಿ…
ಲೇಖಕ: admin
ಮಡಿಕೇರಿ ಜೂ.9 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಗೋಣಿಕೊಪ್ಪಲು ಪಂಚಾಯಿತಿ ಹಳೆ ಕಟ್ಟಡದ ಸಭಾಂಗಣದಲ್ಲಿ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳನ್ನು ವಿತರಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಇಂದಿನ ಕಾಲಘಟ್ಟದಲ್ಲಿ ಹಿರಿಯರನ್ನು ಗೌರವಿಸುವುದು ಮತ್ತು ಹಿರಿಯರಿಗೆ ಬೇಕಾದ ಎಲ್ಲಾ ಸೌಕರ್ಯ-ಸೌಲತ್ತುಗಳನ್ನು ಕಲ್ಪಿಸುವುದು ನಮ್ಮೆಲ್ಲರ ಪ್ರಮುಖ ಆದ್ಯತೆ ಆಗಿರಬೇಕು. ನಮ್ಮ ಹಿರಿಯರು ಕಟ್ಟಿದ ನಾಡಿನಲ್ಲಿ ನಾವೆಲ್ಲ ಇಂದು ಜೀವಿಸುತ್ತಿದ್ದು, ಅದನ್ನು ಉಳಿಸಿ ಬೆಳೆಸುವಂತಹ ಜವಾಬ್ದಾರಿ ನಮ್ಮೆಲ್ಲರ ಮೇಲೆ ಇದೆ ಎಂಬುದನ್ನು ಪ್ರತಿಯೊಬ್ಬರು ಅರಿತುಕೊಂಡಲ್ಲಿ ನಾಡಿನ ಎಲ್ಲಾ ಹಿರಿಯ ಜೀವಿಗಳಿಗೆ ನಾವು ನ್ಯಾಯ ಒದಗಿಸಿದಂತೆ ಆಗುತ್ತದೆ ಎಂದು ಹೇಳಿದರು. ಸರ್ಕಾರ ಹಿರಿಯ ನಾಗರಿಕರ ಅನುಕೂಲಕೆಂದು ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ಇದರ ಸದುಪಯೋಗ ಎಲ್ಲಾ ಹಿರಿಯರಿಗೆ ತಲುಪುವಂತೆ ಆಗಲು ನಾವೆಲ್ಲರೂ ಶ್ರಮ ವಹಿಸಬೇಕೆಂದು ಕರೆ ನೀಡಿದರು. ಈ ಸಂದರ್ಭ ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷ…
ಸುಂಟಿಕೊಪ್ಪ ಜೂ.7 NEWS DESK : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸುಂಟಿಕೊಪ್ಪ ಪೊಲೀಸ್ ಠಾಣೆ ಆವರಣದಲ್ಲಿ ಗಿಡ ನೆಡುವುದರೊಂದಿಗೆ ವಿಶ್ವ ಪರಿಸರ ದಿನ ಆಚರಿಸಲಾಯಿತು. ಸುಂಟಿಕೊಪ್ಪ ಪೊಲೀಸ್ ಠಾಣೆ ಆವರಣದಲ್ಲಿ ಠಾಣಾಧಿಕಾರಿ ಮೋಹನ್ ರಾಜ್ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು. ಸುಂಟಿಕೊಪ್ಪ ನಾಡು ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೀಶಾ ನಾವು ಪರಿಸರವನ್ನು ಉಳಿಸಬೇಕೆಂದರೆ ಪ್ಲಾಸಿಕ್ ಬಳಕೆಯನ್ನು ಕಡಿಮೆ ಮಾಡಿಬೇಕು, ಪರಿಸರದಲ್ಲಿರುವ ಪಕ್ಷಿಗಳಿಗೆ ಮನೆಯ ಮುಂದೆ ನೀರನ್ನು ಇಡಬೇಕು ಎಂದು ಹೇಳಿದರು. ಈ ಸಂದರ್ಭ ಅಪರಾಧ ವಿಭಾಗದ ಸಬ್ಇನ್ಸ್ಪೇಕ್ಟರ್ ಭಾರತಿ, ಎಎಸ್ಐ ಸೈಮನ್ ಡಿ.ಕುನ್ಹ, ಪೇದೆ ಜಗದೀಶ್ ಪಾಲ್ಗೊಂಡಿದರು.
ಸುಂಟಿಕೊಪ್ಪ ಜೂ.9 NEWS DESK : ಸುಂಟಿಕೊಪ್ಪದಲ್ಲಿ ಮುಸ್ಲಿಂ ಬಾಂಧವರು ತ್ಯಾಗ, ಸಮಾನತೆ, ಸಹಬಾಳ್ವೆಯ ಸಂಕೇತವಾದ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಭಾಂದವರು ವಿಶೇಷ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭ ಹಾರೈಸಿಕೊಂಡರು. ಸುಂಟಿಕೊಪ್ಪ ಪಟ್ಟಣದ ಸುನ್ನಿ ಶಾಫಿ ಜುಮ್ಮ ಮಸ್ಜಿದ್ನಲ್ಲಿ ಇಬ್ರಾಹಿಂ ಯಾಸನಿ, ಸುನ್ನಿ ಹನಫಿ ಮುಸ್ಲಿಂ ಜಮಾಅತ್ ಮೌಲನಾ ಜುಬೇರ್, ಸುನ್ನಿ ಶಾಫಿ ಜುಮಾ ಮಸ್ಜಿದ್ ಧಾರ್ಮಿಕ ಧರ್ಮಗುರುಗಳಾದ ಇಸಾಂ ಬಾಕವಿ, ಮಸ್ಜಿದ್ ಮೌಲನಾ ಇನಾಂ, ಗದ್ದೆಹಳ್ಳದ ನೂರು ಜುಮ್ಮ ಮಸ್ಜಿದ್ ಮುಸ್ಲಿಯರ್ ಅಬ್ದುಲ್ ಅಜೀಜ್ ಸಖಾಫಿ ಅವರುಗಳು ಧಾರ್ಮಿಕ ಪ್ರವಚ ಪ್ರಾರ್ಥನೆಯನ್ನು ಸಲ್ಲಿಸಿದರು. ಸಲಾಫಿ ಮಸೀದಿಯಲ್ಲಿ ಬಕ್ರೀದ್ ಈದ್ಉಲ್ ಆಧಾ ಅಂಗವಾಗಿ ನಿಷಾದ್ ಸಲಾಯಿ ಅವರು ಧಾರ್ಮಿಕ ಪ್ರವಚನ ಹಾಗೂ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ಪುರುಷರು, ಮಹಿಳೆಯರು, ಮಕ್ಕಳು ಒಗ್ಗೂಡಿ ಪ್ರಾರ್ಥನೆಯನ್ನು ಸಲ್ಲಿಸಿದರು. ಸುಂಟಿಕೊಪ್ಪ ಠಾಣಾಧಿಕಾರಿ ಮೋಹನ್ ರಾಜ್, ಹಾಗೂ ಪೊಲೀಸ್ ಸಿಬ್ಬಂದಿಗಳು ಸೂಕ್ತ ಬಂದೋಬಸ್ತ್ ವಹಿಸಿದ್ದರು.
ಕುಶಾಲನಗರ ಜೂ.7 NEWS DESK : ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಆರೋಗ್ಯ, ನೈರ್ಮಲ್ಯ , ವೈಯಕ್ತಿಕ ಸ್ವಚ್ಛತೆ ಹಾಗೂ ಶುಚಿತ್ವಕ್ಕೆ ಹೆಚ್ಚಿನ ಕಾಳಜಿ ವಹಿಸುವ ಮೂಲಕ ಸೊಳ್ಳೆಗಳ ಕಡಿತದಿಂದ ಬರುವ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಿದೆ ಎಂದು ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ ಬಿ.ಎಲ್. ಶ್ರೀನಿವಾಸ್ ಕರೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಕುಶಾಲನಗರ ತಾಲ್ಲೂಕು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ತಾಲ್ಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಮುಖ್ಯ ಶಿಕ್ಷಕರು, ಆರೋಗ್ಯ ಕಾರ್ಯಕ್ರಮದ ನೋಡಲ್ ಅಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ನೀಡಿ ಸಾಂಕ್ರಾಮಿಕ ರೋಗಗಳ ನಿವಾರಣೆಗೆ ಸಮುದಾಯದ ಸಹಕಾರ ಅಗತ್ಯ ಎಂದರು. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಇಕೋ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ( ಎನ್ನೆಸ್ಸೆಸ್…
ಮಡಿಕೇರಿ ಜೂ.9 NEWS DESK : ಪದಗಳ ತಜು೯ಮೆಗಿಂತ ಭಾವನೆಗಳನ್ನು ದಾಖಲಿಸುವ ಭಾವಾನುವಾದ ಪ್ರಕಾರವು, ಅನುವಾದ ಸಾಹಿತ್ಯದಲ್ಲಿ ಮಹತ್ವದ್ದಾಗಿರುತ್ತದೆ ಎಂದು ಪ್ರತಿಷ್ಟಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಮಡಿಕೇರಿಯ ಲೇಖಕಿ ದೀಪಾಭಾಸ್ತಿ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಪತ್ರಕತ೯ರ ಸಂಘದ ವತಿಯಿಂದ ನಗರದ ಲಾಲಿ ಪೆಟಲ್ ಸಭಾಂಗಣದಲ್ಲಿ ಆಯೋಜಿತ ಪತ್ರಕತೆ೯ ದೀಪಾಭಾಸ್ತಿಗೆ ಅಭಿನಂದನಾ ಸಮಾರಂಭ ಮತ್ತು ಸಂವಾದ ಕಾಯ೯ಕ್ರಮದಲ್ಲಿ ಪಾಲ್ಗೊಂಡು ದೀಪಾಭಾಸ್ತಿ ಮಾತನಾಡಿದರು. ಬಾನುಮುಷ್ತಾಕ್ ಅವರ ಎದೆಯ ಹಣತೆ ಕೃತಿ ಸೇರಿದಂತೆ 6 ಕಥಾಸಂಕಲನಗಳಲ್ಲಿನ 12 ಕಥೆಗಳನ್ನು ಆಯ್ಕೆ ಮಾಡಿ ಇಂಗ್ಲೀಷ್ ನಲ್ಲಿ ಬರೆದ ಹಾಟ್೯ ಲ್ಯಾಂಪ್ ಕೖತಿ ಸಂಬಂಧಿತ ಮಾಹಿತಿ ನೀಡಿದ ದೀಪಾಭಾಸ್ತಿ, ಕನ್ನಡದಿಂದ ಇಂಗ್ಲೀಷ್ ಗೆ ಅನುವಾದ ಮಾಡುವಾಗ ಖಂಡಿತವಾಗಿಯೂ ಪದಗಳನ್ನು ತಜು೯ಮೆ ಮಾಡಬಾರದು. ಇದರ ಬದಲಿಗೆ ಮೂಲಕೃತಿಯಲ್ಲಿನ ಪದಗಳ ಭಾವವನ್ನು ಅಥೈ೯ಸಿಕೊಂಡು ತನ್ನದೇ ಶೈಲಿಯಲ್ಲಿ ಭಾವಾನುವಾದ ಮಾಡಿದರಷ್ಟೇ ಅನುವಾದ ಸಾಹಿತ್ಯಕ್ಕೆ ಗಟ್ಟಿತನ ದೊರಕುತ್ತದೆ ಎಂದು ಅಭಿಪ್ರಾಯಪಟ್ಟರು. ಪಂಪ, ಕುವೆಂಪು ಸೇರಿದಂತೆ ಕನ್ನಡದ ಅನೇಕ ಸಾಹಿತಿಗಳ ಅತ್ಯಂತ ಶ್ರೇಷ್ಟ ಕೖತಿಗಳು ಇನ್ನಾದರೂ…
ಮಡಿಕೇರಿ ಜೂ.9 NEWS DESK : ಕ್ಯಾನ್ಸರ್ ಪೀಡಿತ ರೋಗಿಯ ನೆರವಿಗಾಗಿ ಮಡಿಕೇರಿಯ ವಿನುತಾ ವಸಂತ್ ಅವರು ರೋಟರಿ ವುಡ್ಸ್ ಮೂಲಕ ತಲೆಕೂದಲನ್ನು ನೀಡಿದರು. ರೋಟರಿ ಮಡಿಕೇರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲು, ಕಾಯ೯ದಶಿ೯ ಕಿರಣ್ ಕುಂದರ್ ಅವರುಗಳು ದಾನವಾಗಿ ನೀಡಲ್ಪಟ್ಟ ಕೂದಲನ್ನು ಪಡೆದು ಮಂಗಳೂರಿನ ರೋಗಿಗೆ ರವಾನಿಸಿದರು. ಸ್ವಾಥ೯ ರಹಿತ ಸೇವೆಗೆ ವಿನುತಾವಸಂತ್ ನಿದಶ೯ನವಾಗಿದ್ದಾರೆ. ಇವರ ಸೇವೆ ಆದಶ೯ಪ್ರಾಯವಾಗಿದೆ ಎಂದೂ ಹರೀಶ್ ಕಿಗ್ಗಾಲು ಶ್ಲಾಘಿಸಿದರು.
ನಾಪೋಕ್ಲು ಜೂ.7 NEWS DESK : ಕಿಡ್ನಿ ವೈಫಲ್ಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬೆಟ್ಟದ ಕಾಡುವಿನ ಯುವಕ ಕಿರಣ್ ಚಿಕಿತ್ಸೆಗಾಗಿ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದಿಂದ ಆರ್ಥಿಕ ನೆರವು ನೀಡಲಾಯಿತು. ಸಿದ್ದಾಪುರದ ನೆಲ್ಲಿಹುದಿಕೇರಿಯ ಬೆಟ್ಟದಕಾಡುವಿನ ತನಿಯಪ್ಪ ಮತ್ತು ಮೀನ ದಂಪತಿಗಳ ಪುತ್ರ ಕಿರಣ್ ಎರಡು ಕಿಡ್ನಿ ವೈಫಲ್ಯಗೊಂಡು ಚಿಕಿತ್ಸೆ ಪಡೆಯುತ್ತಿದ್ದು, ಇವರ ಚಿಕಿತ್ಸೆಗಾಗಿ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ನೇತೃತ್ವದಲ್ಲಿ ದಾನಿಗಳಿಂದ ಸಂಗ್ರಹಿಸಲಾದ ಮೊತ್ತವನ್ನು ಕಿರಣ್ ಪೋಷಕರಿಗೆ ಹಸ್ತಾಂತರಿಸಲಾಯಿತು. ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಜಿಲ್ಲಾಧ್ಯಕ್ಷ ಕೆ.ಕುಶಾಲಪ್ಪ ಮಾತನಾಡಿ, ಬಡತನ ತುಂಬಿದ ಕುಟುಂಬಕ್ಕೆ ನಾಡಿನ ದಾನಿಗಳಿಂದ ಸಂಗ್ರಹಗೊಂಡ ರೂ.52 ಸಾವಿರ ಧನ ಸಹಾಯವನ್ನು ನೀಡಲಾಗಿದೆ. ಮುಂದಿನ ಚಿಕಿತ್ಸೆಗಾಗಿ ಸುಮಾರು 15 ಲಕ್ಷ ದಷ್ಟು ಅಗತ್ಯ ಇದ್ದು, ನಾಡಿನ ಸಮಸ್ತ ಬಾಂಧವರು ಈ ಕುಟುಂಬಕ್ಕೆ ಸಹಾಯ ಹಸ್ತ ನೀಡುವಂತೆ ಮನವಿ ಮಾಡಿದರು. ಈ ಸಂದರ್ಭ ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಕೂಡಿಗೆ, ಪದಾಧಿಕಾರಿಗಳಾದ ಮಂಜು ಬೈಚನಹಳ್ಳಿ, ಯೋಗೀಶ್…
ಮಡಿಕೇರಿ ಜೂ.7 NEWS DESK : ಪೊನ್ನಂಪೇಟೆ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿರುವ ಮಲ್ಲಂಗಡ ಕುಟುಂಬಸ್ಥರ ಐನ್ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿದರು. ಐನ್ ಮನೆ ಹಿರಿಯರು ಹಾಗೂ ಪ್ರಮುಖದೊಂದಿಗೆ ಮಾತನಾಡಿದ ಶಾಸಕರು, ಮಲ್ಲಂಗಡ ಐನ್ ಮನೆಯ ಇತಿಹಾಸದ ಬಗ್ಗೆ ತಿಳಿದುಕೊಂಡರು ಹಾಗೂ ಅಭಿವೃದ್ಧಿಗೆ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಮಲ್ಲಂಗಡ ಕುಟುಂಬಸ್ಥರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಜೂ.7 NEWS DESK : ಸಂಪಾಜೆ ಗ್ರಾಮದ ಪೇರಡ್ಕ-ಗೂನಡ್ಕ ಮೊಹಿಯುದ್ದಿನ್ ಜುಮ ಮಸ್ಜಿದ್ ನಲ್ಲಿ ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಖತೀಬ್ ನಹೀಮ್ ಫೈಜಿ ಅಲ್ ಮಹಬರಿ ಈದ್ ಸಂದೇಶ ನೀಡಿದರು. ಎಲ್ಲಾ ಸಮುದಾಯದವರು ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಲು ಕರೆ ನೀಡಿದರು. ನಂತರ ಎಲ್ಲರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಖಬರಸ್ಥಾನದಲ್ಲಿ ಮೃತಪಟ್ಟವರಿಗೆ ಪೇರಡ್ಕ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ನೆರೆವೇರಿಸಿದರು. ಪೇರಡ್ಕ-ಗೂನಡ್ಕ ಜಮಅತ್ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್, ಸಂಪಾಜೆ ಗ್ರಾ.ಪಂ ಮಾಜಿ ಅಧ್ಯಕ್ಷ ಹಾಗೂಎಂ.ಆರ್.ಡಿ.ಎ ಅಧ್ಯಕ್ಷ ಜಿ.ಕೆ.ಹಮೀದ್ ಗೂನಡ್ಕ, ಜಮಾತ್ ಉಪಾಧ್ಯಕ್ಷ ಟಿ.ಬಿ.ಹನೀಫ್ ತೆಕ್ಕಿಲ್ ಗೂನಡ್ಕ, ಕಾರ್ಯದರ್ಶಿ ಪಿ.ಕೆ.ಉಮ್ಮರ್ ಜಡ್ಜ್ ಗೂನಡ್ಕ, ಜೊತೆ ಕಾರ್ಯದರ್ಶಿ ಸಿನಾನ್ ಜಡ್ಜ್ ಗೂನಡ್ಕ, ಸದಸ್ಯರುಗಳಾದ ಮೊಯಿದು ದರ್ಕಾಸ್ ಗೂನಡ್ಕ,ಇಬ್ರಾಹಿಂ ಸೆಟ್ಯಡ್ಕ, ಬಾತಿಶ ತೆಕ್ಕಿಲ್ ಸೇಟ್ಯಡ್ಕ, ಉಸ್ಮಾನ್ ಪಾಂಡಿ ಗೂನಡ್ಕ, ಖಜಾಂಚಿ ತೆಕ್ಕಿಲ್ ಮೊಹಮದ್ ಕುಂಞಿ ಪೇರಡ್ಕ, ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಮುನೀರ್ ದಾರಿಮಿ ದರ್ಕಾಸ್ ಹಾಜರಿದ್ದರು.






