ಮಡಿಕೇರಿ ಜು.3 NEWS DESK : ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಸಲುವಾಗಿ ಇಲಾಖಾ ವೆಬ್ಸೈಟ್: www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಯು ಕೊಡಗು ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು 03 ಅಥವಾ 05 ವರ್ಷಗಳ ಒಳಗಡೆ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪ್ರಾಸಿಕ್ಯೂಟ್ ಬಳಿ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಬಿಟ್ಟು ಹೋಗಬಾರದು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರಿ ಸಿಕ್ಕಿದಲ್ಲಿ ಮಾತ್ರ ನಿಯಮಾನುಸಾರ ಸಡಿಲಗೊಳಿಸಲಾಗುವುದು. ಒಂದು ವೇಳೆ ತರಬೇತಿ ಬಿಟ್ಟು ಹೋದಲ್ಲಿ ಅಂತವರ ಶಿಷ್ಯ ವೇತನವನ್ನು ನಿಯಮಾನುಸಾರ ವಸೂಲಿ ಮಾಡಲಾಗುವುದು.…
ಲೇಖಕ: admin
ಕುಶಾಲನಗರ ಜು.4 NEWS DESK : ವಚನ ಸಾಹಿತ್ಯವನ್ನು ಶೋಧಿಸಿ, ಸಂರಕ್ಷಿಸಿ, ಅಚ್ಚುಹಾಕಿಸಿ ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡುವ ಮೂಲಕ ಕನ್ನಡ ನಾಡನ್ನು ಕೈಲಾಸ ಮಾಡಿದ ಕೀರ್ತಿ ಫ.ಗು.ಹಳಕಟ್ಟಿ ಅವರಿಗೆ ಸಲ್ಲುತ್ತದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಸಿ.ಸೋಮಶೇಖರ್ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಕೊಡಗು ವಿವಿ ವತಿಯಿಂದ ಚಿಕ್ಕ ಅಳುವಾರದ ವಿವಿಯ ಕಾವೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಚನ ಸಾಹಿತ್ಯ ಪಿತಾಮಹ, ಸಚೇತನ ವಿಶ್ವವಿದ್ಯಾಲಯ, ವಚನ ಗುಮ್ಮಟ ಫ.ಗು.ಹಳಕಟ್ಟಿ ಅವರ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ನಾಡಿನ ಯುಜನಾಂಗ ಹಾಗೂ ಎಲ್ಲರೂ ವಚನ ಸಾಹಿತ್ಯವನ್ನು ಅಧ್ಯಯನ ಮಾಡುವ ಮೂಲಕ ಮಾನವೀಯತೆಯನ್ನು ಮೈಗೂಡಿಸಿಕೊಳ್ಳಬೇಕು. ಅಂತಹ ವಚನ ಸಾಹಿತ್ಯವನ್ನು ಸಂರಕ್ಷಿಸಿದವರು ಫ.ಗು. ಹಳಕಟ್ಟಿ. ತಾಳೆ ಗರಿಯಲ್ಲಿದ್ದ ವಚನದ ಕಟ್ಟುಗಳನ್ನು ಸಂಗ್ರಹಿಸಲು ಅಪಾರ ಶ್ರಮಿಸಿದ ಇವರು, ಶಾಲೆಗಳು ಹಾಗೂ ಸಹಕಾರಿ ಸಂಘಗಳನ್ನು ತೆರೆದು ಅಪಾರ ಮಂದಿ ಕನ್ನಡಿಗರಿಗೆ ಹೊಸ ಬದುಕು ಕೊಟ್ಟ ಅಪ್ಪಟ…
ಕುಶಾಲನಗರ ಜು.4 NEWS DESK : ಕುಶಾಲನಗರ ರಥ ಬೀದಿಯಲ್ಲಿ ಲಾರಿ ಸಂಚಾರದಿಂದ ಹಲವು ಬಾರಿ ಟ್ರಾಫಿಕ್ ಜಾಮ್ ಆಗಿರುವುದರಿಂದ ಆ ರಸ್ತೆಯಲ್ಲಿ ಎಲ್ಲ ಮಾದರಿಯ ಲಾರಿ ಸಂಚಾರದಿಂದ ಮುಕ್ತಗೊಳಿಸಲು ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಕುಶಾಲನಗರದ ಡಿವೈಎಸ್ಪಿ ಚಂದ್ರಶೇಖರ್ ಅವರಿಗೆ ಮನವಿ ಸಲ್ಲಿಸಿದೆ. ಕುಶಾಲನಗರ ಚೇಂಬರ್ ನ ಅಧ್ಯಕ್ಷ ಕೆ.ಎಸ್.ನಾಗೇಶ್ ನೇತೃತ್ವದಲ್ಲಿ ಮನವಿ ಸಲ್ಲಿಸಿ, ಸಂಚಾರ ನಿಯಮಗಳನ್ನು ತಿಳಿಸುವ ನಾಮ ಫಲಕವನ್ನು ಅವಶ್ಯವಿರುವ ಕಡೆಗಳಲ್ಲಿ ಅಳವಡಿಸಲು ಮನವಿ ಮಾಡಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ಡಿವೈಎಸ್ಪಿ ಚಂದ್ರಶೇಖರ್, ವರ್ತಕರಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ನಾಮಫಲಕ ಅಳವಡಿಸಲು ನಮ್ಮದೇ ಆದ ನಿಯಮಗಳು ಇವೆ. ಅದರಂತೆ ಬೋರ್ಡ್ ಗಳನ್ನು ಮಾಡಿಸಲು ದಾನಿಗಳು ಮುಂದಾದರೆ ಖಂಡಿತ ಮಾಡೋಣ ಎಂದು ತಿಳಿಸಿದರು. ಜಿಲ್ಲಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ಕುಶಾಲನಗರ ಸ್ಥಾನೀಯ ಸಮಿತಿಯ ಉಪಾಧ್ಯಕ್ಷ ಎಂ.ಡಿ.ರಂಗಸ್ವಾಮಿ, ನಿಕಟ ಪೂರ್ವ ಅಧ್ಯಕ್ಷ ರವೀಂದ್ರ.ವಿ.ರೈ, ಕಾರ್ಯದರ್ಶಿ ಚಿತ್ರ ರಮೇಶ್, ಖಜಾಂಚಿ ಎನ್.ವಿ.ಬಾಬು, ನಿರ್ದೇಶಕರಾದ ಕೆ.ಜೆ.ಸತೀಶ್, ಅಬ್ದುಲ್ ರಶೀದ್, ಬಿ.ಎನ್.ಅಂಜನ್, ಜನಾರ್ಧನ…
ವಿರಾಜಪೇಟೆ ಜು.4 NEWS DESK : ಕಕ್ಕಬ್ಬೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮೂವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿ, ನಿವೃತ್ತರಾದ ಪಿ.ಯು.ಗೋಪಾಲ ಅವರನ್ನು ಯೂನಿಯನ್ ಬ್ಯಾಂಕ್ ಶಾಖೆಯ ವತಿಯಿಂದ ಬೋಳ್ಕೊಡಲಾಯಿತು. ಬ್ಯಾಂಕ್ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಶಾಖೆಯ ಬ್ಯಾಂಕ್ ವ್ಯವಸ್ಥಾಪಕರಾದ ಅಂತೋನಿ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಕೊಡಗು ವಲಯದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನೌಕರರ ಸಂಘದ ಕಾರ್ಯದರ್ಶಿ ಜೇಮ್ಸ್ ಮೆನೇಜಸ್, ಸಿಬ್ಬಂದಿಗಳಾದ ಸಜಿತ್, ಹೇಮಾವತಿ, ದೇಚಮ್ಮ ಹಾಜರಿದ್ದರು.
ಸೋಮವಾರಪೇಟೆ ಜು.4 NEWS DESK : ತಾಲ್ಲೂಕು ಒಕ್ಕಲಿಗರ ಪ್ರಗತಿಪರ ಮಹಿಳಾ ವೇದಿಕೆಯ ವಾರ್ಷಿಕ ಮಹಾಸಭೆಯು ಅಧ್ಯಕ್ಷೆ ಪೂರ್ಣಿಮಾ ಗೋಪಾಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.99.68 ರಷ್ಟು ಅಂಕ ಪಡೆದು ಜಿಲ್ಲೆಯಲ್ಲಿ ಟಾಫರ್ ಆಗಿದ್ದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸಿ.ಎಸ್.ಆದ್ವಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.95 ರಷ್ಟು ಅಂಕ ಪಡೆದ ಕೆ.ಎಂ.ಸೃಷ್ಟಿ ಅವರುಗಳನ್ನು ಸನ್ಮಾನಿಸಲಾಯಿತು. ಅಲ್ಲದೆ ಬೆಂಗಳೂರು ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ಕರುನಾಡ ಪ್ರಭು ಕೆಂಪೆಗೌಡ ಪ್ರಶಸ್ತಿ ಪುರಸ್ಕøತ ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ಕರ್ನಾಟಕ ಒಕ್ಕಲಿಗರ ವಿಕಾಸ ವೇದಿಕೆಯವರು ನೀಡುವ ಶ್ರೀಮತಿ ಯಶೋಧರಮ್ಮ ದಾಸಪ್ಪ ಪ್ರಶಸ್ತಿ ಪುರಸ್ಕøತ ಹಾನಗಲ್ಲು ಗ್ರಾಮದ ಸಾಹಿತಿ ಜಲಕಾಳಪ್ಪ, ಕೃಷಿ ಕ್ಷೇತ್ರದ ಸಾಧನೆಗಾಗಿ ಪ್ರಶಸ್ತಿ ಗಳಿಸಿದ ನಿರ್ಮಲ ಪ್ರಕಾಶ್ ಹಾಗೂ ಕಾಫಿ ರುಚಿ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಪಡೆದ ತಲ್ತಾರೆಶೆಟ್ಟಳ್ಳಿ ಗ್ರಾಮದ ಸಂಧ್ಯಾ ಕೃಷ್ಣಪ್ಪ ಅವರುಗಳನ್ನು ಸಭೆಯಲ್ಲಿ ಗೌರವಿಸಲಾಯಿತು. ಸಭೆಯಲ್ಲಿ ಕಾರ್ಯದರ್ಶಿ…
ಗೋಣಿಕೊಪ್ಪ ಜು.4 NEWS DESK : ಜಿಲ್ಲೆಯಲ್ಲಿ ತೀವ್ರಗೊಳ್ಳುತ್ತಿರುವ ಮಳೆಯಿಂದ ಉಂಟಾಗಬಹುದಾದ ಅನಾಹುತವನ್ನು ಎದುರಿಸಲು ಪೊಲೀಸರೊಂದಿಗೆ ಸ್ವಯಂಸೇವಕರು ಸಹ ಕೈಜೋಡಿಸಬೇಕು ಎಂದು ವಿರಾಜಪೇಟೆ ತಾಲ್ಲೂಕು ಡಿವೈಎಸ್ಪಿ ಮಹೇಶ್ಕುಮಾರ್ ಕರೆ ನೀಡಿದರು. ಗೋಣಿಕೊಪ್ಪ ಕೂರ್ಗ್ ಇಂಟರ್ನ್ಯಾಷನ್ ಸಭಾಂಗಣದಲ್ಲಿ ನಡೆದ ಪೊಲೀಸ್ ಠಾಣೆ ಮತ್ತು ಗ್ರಾಮ ಬೀಟ್ ವ್ಯಾಪ್ತಿಯ ಸ್ವಯಂಸೇವಕರ ಸಭೆಯಲ್ಲಿ ಮಾತನಾಡಿದರು. ಈಗಾಗಲೇ ಮೇ ತಿಂಗಳಲ್ಲಿ ಮಳೆ ಪ್ರಾರಂಭವಾಗಿ ಆಂತಕ್ಕವನ್ನು ಸೃಷ್ಟಿಸಿದೆ, ಮುಂದುವರೆದ ಭಾಗವಾಗಿ ಜುಲೈ ತಿಂಗಳಲ್ಲಿಯೂ ಮಳೆಯ ಪ್ರಮಾಣ ಅಧಿಕವಾಗಬಹುದು, ಈ ಹಿನ್ನೆಲೆ ಹೆಚ್ಚು ಅನಾಹುತಗಳು ಸಂಭವಿಸಬಹುದಾದ ಸಾಧ್ಯತೆಗಳಿದ್ದು, ಪ್ರಾಕೃತಿಕ ವಿಕೋಪ ಉಂಟಾದಲ್ಲಿ ಮುನ್ನೆಚ್ಚರಿಕೆಯ ಕ್ರಮ ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ. ಪೊಲೀಸರ ಈ ಕಾರ್ಯಕ್ಕೆ ಸಹಕಾರವಾಗಿ ಪೊಲೀಸ್ ಠಾಣಾ ವ್ಯಾಪ್ತಿಯ ಸ್ವಯಂಸೇವಕರು ಸಹಕಾರದ ಮನೋಭಾವವನ್ನು ವ್ಯಕ್ತಪಡಿಸಿ ಧೈರ್ಯ ಸೌರ್ಯದಿಂದ ಮೆರೆಯಬೇಕು ಎಂದು ಮನವಿ ಮಾಡಿದರು. ಗೋಣಿಕೊಪ್ಪ ವ್ಯಾಪ್ತಿಯಲ್ಲಿ, ಸಾಕಷ್ಟು ಹಳೆಯ ಕಟ್ಟಡಗಳು ಇವೆ ಅವುಗಳು ಶಿಥಿಲಗೊಂಡು ಆತಂಕಕಾರಿ ಬೆಳವಣಿಗೆಯಲ್ಲಿದೆ. ಈ ವಿಚಾರವಾಗಿ ಸ್ವಯಂಸೇವಕರು ಮುಂಜಾಗೃತರಾಗಬೇಕು ಎಂದು ಕರೆ ನೀಡಿದರು. ಪ್ರಾಕೃತಿ…
ಗೋಣಿಕೊಪ್ಪ ಜು.4 NEWS DESK : ಗೋಣಿಕೊಪ್ಪ ಲಯನ್ಸ್ ವಿದ್ಯಾಸಂಸ್ಥೆಯ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ನಡೆಯಿತು. ಲಯನ್ಸ್ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಪಿ.ಎನ್.ಪೆಮ್ಮಯ್ಯ ಮತ್ತು ಉಪಾಧ್ಯಕ್ಷ ಪಿ.ಧನು ಉತ್ತಯ್ಯ ಉಪಸ್ಥಿತಿಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ನಾಯಕರಿಗೆ ಬ್ಯಾಡ್ಜ್ಗಳನ್ನು ಲಯನ್ಸ್ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ವಿತರಿಸಿದರು. ಲಯನ್ಸ್ ಕಾಲೇಜಿನ ಪ್ರಾಂಶುಪಾಲರು ಸಿ.ಬಿ.ಲತಾ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. “ಶಿಸ್ತು ಮತ್ತು ಆತ್ಮವಿಶ್ವಾಸ ಉಳ್ಳವರಾಗಿ ನಾಯಕತ್ವ ಗುಣವನ್ನು ಮೈಗೂಡಿಸಿಕೊಂಡು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು” ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಗಾನ ಸಿ.ಎಸ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪಿ.ಡಿ ತಂಗಮ್ಮ ಮತ್ತು ವಿದ್ಯಾ ಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು. ಪ್ರಾರ್ಥನೆಯನ್ನು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ನಿರೂಪಣೆಯನ್ನು ಪ್ರೌಢಶಾಲೆಯ ಆರಾಧನಾ ಮತ್ತು ಅತಿಥಿಗಳ ಸ್ವಾಗತ ಮತ್ತು ವಂದನಾರ್ಪಣೆಯನ್ನು ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ದಾನಿಕ ದೇಚಮ್ಮ ಮತ್ತು ಭುವನ ಪೂವಯ್ಯ ನೆರವೇರಿಸಿದರು.
ಗೋಣಿಕೊಪ್ಪ ಜು.4 NEWS DESK : ಗೋಣಿಕೊಪ್ಪ ಲಯನ್ಸ್ ವಿದ್ಯಾಸಂಸ್ಥೆಯ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ನಡೆಯಿತು. ಲಯನ್ಸ್ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಪಿ.ಎನ್.ಪೆಮ್ಮಯ್ಯ ಮತ್ತು ಉಪಾಧ್ಯಕ್ಷ ಪಿ.ಧನು ಉತ್ತಯ್ಯ ಉಪಸ್ಥಿತಿಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ನಾಯಕರಿಗೆ ಬ್ಯಾಡ್ಜ್ಗಳನ್ನು ಲಯನ್ಸ್ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ವಿತರಿಸಿದರು. ಲಯನ್ಸ್ ಕಾಲೇಜಿನ ಪ್ರಾಂಶುಪಾಲರು ಸಿ.ಬಿ.ಲತಾ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. “ಶಿಸ್ತು ಮತ್ತು ಆತ್ಮವಿಶ್ವಾಸ ಉಳ್ಳವರಾಗಿ ನಾಯಕತ್ವ ಗುಣವನ್ನು ಮೈಗೂಡಿಸಿಕೊಂಡು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು” ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಗಾನ ಸಿ.ಎಸ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪಿ.ಡಿ ತಂಗಮ್ಮ ಮತ್ತು ವಿದ್ಯಾ ಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು. ಪ್ರಾರ್ಥನೆಯನ್ನು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ನಿರೂಪಣೆಯನ್ನು ಪ್ರೌಢಶಾಲೆಯ ಆರಾಧನಾ ಮತ್ತು ಅತಿಥಿಗಳ ಸ್ವಾಗತ ಮತ್ತು ವಂದನಾರ್ಪಣೆಯನ್ನು ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ದಾನಿಕ ದೇಚಮ್ಮ ಮತ್ತು ಭುವನ ಪೂವಯ್ಯ ನೆರವೇರಿಸಿದರು.
ಮಡಿಕೇರಿ ಜು.3 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಕಥೆ ಮತ್ತು ಲಲಿತ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಕಥೆ ಮತ್ತು ಲಲಿತ ಪ್ರಬಂಧ ಸ್ವಂತ ರಚನೆಯಾಗಿರಬೇಕು. ಪ್ರಕಟಿತ ಮತ್ತು ಅನುವಾದಿತ ಬರಹಗಳಿಗೆ ಅವಕಾಶವಿಲ್ಲ. ಕಥೆ, ಲಲಿತ ಪ್ರಬಂಧ ಒಂದು ಸಾವಿರ ಪದಗಳನ್ನು ಮೀರಬಾರದು. ಹೊಸ ಆಲೋಚನೆ, ಹೊಸ ಹೊಳಹುಗಳ ಬರಹವಾಗಿರಬೇಕು. ಕಥಾ ವಿಭಾಗ ಹಾಗೂ ಲಲಿತ ಪ್ರಬಂಧ ವಿಭಾಗಗಳಲ್ಲಿ ಪ್ರಥಮ ಬಹುಮಾನ ರೂ.3 ಸಾವಿರ, ದ್ವಿತೀಯ ಬಹುಮಾನ ರೂ.2 ಸಾವಿರ, ತೃತೀಯ ಬಹುಮಾನ ರೂ.1 ಸಾವಿರ ಒಳಗೊಂಡಿದೆ. ಒಬ್ಬರೇ ಎರಡು ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದೆ. ಬರಹ ಕಳಿಸಲು ಆಗಸ್ಟ್, 4 ಅಂತಿಮ ದಿನವಾಗಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ತಿಳಿಸಿದ್ದಾರೆ.
ಮಡಿಕೇರಿ ಜು.3 NEWS DESK : ಕೊಡಗು ಜಿಲ್ಲೆಯಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ಗಾಳಿ ಮಳೆ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಬುಧವಾರ ರಾತ್ರಿಯಿಂದ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಕಳೆದ 24 ಗಂಟೆ ಅವಧಿಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯಲ್ಲಿ ದಾಖಲೆಯ 6 ಇಂಚು ಮಳೆಯಾಗಿದೆ. ಜಿಲ್ಲೆಯಲ್ಲಿ ಸರಾಸರಿ 49.44 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.55 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1486.74 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 893.60 ಮಿ.ಮೀ ಮಳೆಯಾಗಿತ್ತು. ನದಿ ಹಾಗೂ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಮರಗಳು ಬಿದ್ದು ವಿದ್ಯುತ್ ಮಾರ್ಗಗಳಿಗೆ ಹಾನಿಯಾಗಿದೆ. ರಸ್ತೆಗಳು ಹದಗೆಟ್ಟು ಕೆಸರುಮಯವಾಗಿದ್ದು, ವಾಹನ ಸಂಚಾರ ಕಷ್ಟಸಾಧ್ಯವಾಗಿದೆ. ಮಡಿಕೇರಿ ನಗರದಲ್ಲಿ ಕೊಡವ ಮಂದ್ ನಲ್ಲಿದ್ದ ಸುಮಾರು 200…






