ಮಡಿಕೇರಿ ಜೂ.7 NEWS DESK : ನಗರದ ಕೊಡಗು ವಿದ್ಯಾಲಯದಲ್ಲಿ ವಿದ್ಯಾರಂಭ ಕಾರ್ಯಕ್ರಮ ನಡೆಯಿತು. ನೂತನ ಶೈಕ್ಷಣಿಕ ವರ್ಷಕ್ಕೆ ಶಾಲೆಯ ಪ್ರಾಂಶುಪಾಲರಾದ ಕೆ.ಎಸ್. ಸುಮಿತ್ರಾ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಅತ್ಯಧಿಕ ಮೊಬೈಲ್ ಫೋನ್ ಬಳಕೆ ಮಾಡದಂತೆ ಎಚ್ಚರ ವಹಿಸಿ ಎಂದು ತಿಳಿಸಿದರು. ಮೊಬೈಲ್ ಮಕ್ಕಳ ಶಾರೀರಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ತೊಂದರೆ ಉಂಟು ಮಾಡುತ್ತದೆ. ವಿದ್ಯಾರ್ಥಿಗಳು ಪುಸ್ತಕಪಠನ, ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಬೇಕು ಎಂದು ಕಿವಿಮಾತು ಹೇಳಿದರು. ಶಾಲಾ ಶೈಕ್ಷಣಿಕ ಸಂಯೋಜಕಿ ಭಾರತಿ ಮಕ್ಕಳಿಗೆ ಅಕ್ಷರಭ್ಯಾಸ ಮಾಡಿದರು. ಕಾರ್ಯಕ್ರಮದಲ್ಲಿ ಪೋಷಕವೃಂದ, ಶಿಕ್ಷಕ ವೃಂದದವರು ಭಾಗವಹಿಸಿದ್ದರು. ಶಿಕ್ಷಕಿ ಬಿ.ಎಂ.ಶೃತಿ ನಿರೂಪಿಸಿದರು. ನಳಿನಿ ಕಿರಣ್ ವಂದಿಸಿದರು. ಕೊಡಗು ವಿದ್ಯಾಲಯ ಶಿಕ್ಷಕ ವೃಂದದವರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.
ಲೇಖಕ: admin
ಮಡಿಕೇರಿ ಜೂ.7 NEWS DESK : ಕೊಡಗು ಜಿಲ್ಲೆಯಾದ್ಯಂತ ನೆಲೆಸಿರುವ ಬಲಿಜ ಸಮಾಜ ಬಾಂಧವರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿಗೆ ಪೂರಕವಾಗಿ ‘ಶ್ರೀ ಯೋಗಿನಾರಾಯಣ ಕೊಡಗು ಜಿಲ್ಲಾ ಬಲಿಜ’ ಸಂಘವನ್ನು ಅಸ್ತಿತ್ವಕ್ಕೆ ತಂದು ನೋಂದಣಿ ಮಾಡಲಾಗಿದೆಯೆಂದು ಸಂಘದ ಜಿಲ್ಲಾಧ್ಯಕ್ಷರಾದ ಟಿ.ಜಿ.ಗಣೇಶ್ ನಾಯ್ಡು ಮೂರ್ನಾಡು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು 35 ಸಾವಿರ ಬಲಿಜ ಸಮಾಜ ಬಾಂಧವರು ನೆಲೆಸಿದ್ದಾರೆ. ಇವರಲ್ಲಿ ಶಿಕ್ಷಣದ ಜಾಗೃತಿಯೊಂದಿಗೆ, ಅವರ ಸಮಸ್ಯೆಗಳಿಗೆ ಸ್ಪಂದಿಸಿ, ಕಷ್ಟ ಸುಖಗಳಿಗೆ ನೆರವಾಗುವ ಉದ್ದೇಶದಿಂದ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದೆಯೆಂದರು. ಸಂಘದ ಮುಖೇನ ಸಮಾಜ ಬಾಂಧವರಿಗೆ ಯೋಗ್ಯ ಶಿಕ್ಷಣವನ್ನು ಒದಗಿಸುವ ನಿಟ್ಟಿನ ಪ್ರಯತ್ನ, ಅವರ ಸಂಕಷ್ಟಗಳಿಗೆ ಸ್ಪಂದಿಸಿ ನೆರವಾಗುವುದು, ಆರ್ಥಿಕ ಅಭಿವೃದ್ಧಿಗೆ ಪೂರಕ ಬೆಂಬಲ ಮತ್ತು ಪ್ರೋತ್ಸಾಹವನ್ನು ನೀಡುವುದು, ಎಲೆ ಮರೆಯ ಕಾಯಿಯಂತಿರುವ ಸಮಾಜದ ಪ್ರತಿಭಾವಂತರನ್ನು ಗುರುತಿಸಿ ಬೆಳಕಿಗೆ ತರುವುದು ಹಾಗೂ ಸಮುದಾಯದ ಒಳಗಿನ ಯಾವುದೇ ಭಿನ್ನಾಭಿಪ್ರಾಯ ಗುಂಪುಗಾರಿಕೆಗಳನ್ನು ಇಲ್ಲವಾಗಿಸಿ ಸದೃಢವಾಗಿ ಬಲಿಜ ಸಮಾಜವನ್ನು ಕಟ್ಟುವುದು ಸಂಘದ ಪ್ರಮುಖ…
ಮಡಿಕೇರಿ ಜೂ.7 NEWS DESK : ಕೊಡಗು ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಎನ್ಸಿಸಿ ಘಟಕ, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳೊಂದಿಗೆ ಅರಣ್ಯ ಇಲಾಖೆಯ ಸಹಯೋಗದಲ್ಲಿ ನಡೆದ ಕಾಯ೯ಕ್ರಮದಲ್ಲಿ ವಿದ್ಯಾರ್ಥಿಗಳು ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಗಿಡ ನೆಟ್ಟರು. ಶಾಲೆಯ ಪ್ರಾಂಶುಪಾಲೆ ಕೆ.ಎಸ್.ಸುಮಿತ್ರ, ಆಡಳಿತಾಧಿಕಾರಿ ಪಿ.ರವಿ, ಎನ್ಸಿಸಿ ಅಧಿಕಾರಿ ಮೇಜರ್ ದಾಮೋದರ್, ಅರಣ್ಯಾಧಿಕಾರಿಗಳಾದ ಅಭಿಷೇಕ್ ಐಎಫ್ಎಸ್ ಹಾಗೂ ಲತಾ (ಎಸಿಎಫ್), ಎನ್ಸಿಸಿ ಸಿಬ್ಬಂದಿ ರಮೇಶ್ ಮತ್ತು ಶಾಲಾ ಶಿಕ್ಷಕ ವೃಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮಡಿಕೇರಿ ಜೂ.7 NEWS DESK : ಕಾಡಾನೆ ದಾಳಿಗೆ ಸಿಲುಕಿದ ಬೆಳೆಗಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಪ್ರವೀಣ್ ಅವರ ಮಾವ, ಕರಡಿಗೋಡು ನಿವಾಸಿ ಕುಕ್ಕುನೂರು ಪುರುಷೋತ್ತಮ (78) ಎಂಬುವವರೇ ಮೃತ ದುರ್ದೈವಿ. ಶುಕ್ರವಾರ ಸಂಜೆ ಸುಮಾರು 6.30 ಗಂಟೆ ವೇಳೆಗೆ ಮನೆಯ ಸಮೀಪದ ತೋಟಕ್ಕೆ ತೆರಳಿದ್ದವರು ನಂತರ ಮನೆಗೆ ಬಂದಿರಲಿಲ್ಲ. ಇದರಿಂದ ಗಾಬರಿಗೊಂಡ ಕುಟುಂಬದ ಸದಸ್ಯರು ತೋಟದಲ್ಲಿ ಹುಡುಕಾಟ ನಡೆಸಿದಾಗ ಪುರುಷೋತ್ತಮ ಅವರು ಕಾಡಾನೆ ತುಳಿತಕ್ಕೆ ಸಿಲುಕಿ ಮೃತಪಟ್ಟಿರುವುದು ಕಂಡು ಬಂದಿದೆ. ಅಲ್ಲದೆ ಕಾಡಾನೆಯೊಂದು ತೋಟ ವ್ಯಾಪ್ತಿಯಲ್ಲಿ ಓಡಾಡುತ್ತಿರುವುದು ಗೋಚರಿಸಿದೆ. ಮಾಹಿತಿ ತಿಳಿದ ತಕ್ಷಣ ಅರಣ್ಯ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು. ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸಂಕೇತ್ ಪೂವಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಲ್ಲದೆ ಸೂಕ್ತ ಪರಿಹಾರ ದೊರಕಿಸಿ ಕೊಡುವ ಭರವಸೆ ನೀಡಿದರು. ಇಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ…
ಮಡಿಕೇರಿ ಜೂ.7 NEWS DESK : ಪಾಲಿಬೆಟ್ಟದಲ್ಲಿ ಸುಮಾರು 2.97 ಕೋಟಿ ರೂ.ಗಳಲ್ಲಿ ನಿರ್ಮಾಣವಾದ ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿರಾಜಪೇಟೆ ತಾಲೂಕಿನಲ್ಲಿ ನಿರ್ಮಾಣಗೊಂಡ ವಿದ್ಯಾರ್ಥಿ ನಿಲಯವು, ಸುತ್ತಮುತ್ತಲಿನ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂಥ ವಾತಾವರಣ ನಿರ್ಮಿಸಲಿದೆ ಎಂದು ಹಾರೈಸಿದರು. ಇಲ್ಲಿ ವಿದ್ಯಾರ್ಥಿನಿಯರಿಗೆ ಬೇಕಾದಂತಹ ಎಲ್ಲಾ ಮೂಲಭೂತ ಸೌಕರ್ಯವೂ ಸದಾ ಒದಗುವಂತೆ ನೋಡಿಕೊಳ್ಳುವುದು ಪ್ರಥಮ ಆದ್ಯತೆ ಆಗಿರಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿನಿಯರಿಗೆ ಸುರಕ್ಷೆ ಹಾಗೂ ಉತ್ತಮ ವಾತಾವರಣ ಇರುವಂತೆ ನೋಡಿಕೊಳ್ಳಬೇಕು ಎಂದು ಶಾಸಕರು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ವಿರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಜಾನ್ಸನ್, ಕೆಡಿಪಿ ಸದಸ್ಯರಾದ ಗಣೇಶ್, ಪಾಲಿಬೆಟ್ಟ ವಲಯ ಅಧ್ಯಕ್ಷ…
ಮಡಿಕೇರಿ ಜೂ.7 NEWS DESK : ಗೋಣಿಕೊಪ್ಪ ಮೈಸೂರು ರಸ್ತೆಯಲ್ಲಿ ನೂತನವಾಗಿ ಆರಂಭಗೊಂಡ ಎಂ.ಆರ್.ಪಿ.ಎಲ್ ಪೆಟ್ರೋಲ್ ಬಂಕ್ ಅನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಈ ಹಿಂದಿನಿಂದಲೂ ಇವರದೇ ಒಡೆತನದ ಇನ್ನೊಂದು ಪೆಟ್ರೋಲ್ ಬಂಕ್, ಈಗಾಗಲೇ ವಾಹನ ಸವಾರರಿಗೆ ಸೇವೆ ಒದಗಿಸುವಲ್ಲಿ ಉತ್ತಮ ಹೆಸರನ್ನು ಮಾಡಿದ್ದು, ಈ ಕ್ಷೇತ್ರದಲ್ಲಿ ತಮ್ಮ ಉದ್ಯಮವನ್ನು ವಿಸ್ತರಿಸಿ ಜನರಿಗೆ ಮತ್ತಷ್ಟು ಸೇವೆ ನೀಡುವಂತಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಪೆಟ್ರೋಲ್ ಬಂಕ್ ಮಾಲೀಕರ ಕುಟುಂಬಸ್ಥರು ಹಾಗೂ ಪ್ರಮುಖರು ಉಪಸಿತರಿದ್ದರು.
ಸೋಮವಾರಪೇಟೆ ಜೂ.7 NEWS DESK : ಎಸ್ಎಸ್ಎಲ್ಸಿಯಲ್ಲಿ ಅತೀ ಹೆಚ್ಚು ಅಂಕಗಳೊಂದಿಗೆ ಕೊಡಗು ಜಿಲ್ಲೆಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಮೂವರು ವಿದ್ಯಾರ್ಥಿನಿಯರನ್ನು ರೋಟರಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಬೆಂಕಳ್ಳಿ-ಕೊತ್ನಳ್ಳಿ ಗ್ರಾಮದ ಸಿ.ಟಿ.ಸತೀಶ್ ಪ್ರಗತಿ ದಂಪತಿ ಪುತ್ರಿ ಸಿ.ಎಸ್.ಆದ್ವಿ 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಟಾಫರ್ನೊಂದಿಗೆ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಹೆತ್ತೂರು ಕೊಣಬನಹಳ್ಳಿಯ ಚಂದ್ರಕುಮಾರ್ ಶಿಲ್ಪ ದಂಪತಿ ಪುತ್ರಿ ಕೆ.ವಿ.ಪಂಚಮಿ 621 ಅಂಕಗಳೊಂದಿಗೆ ಜಿಲ್ಲೆಗೆ ದ್ವಿತೀಯ ಹಾಗು ರಾಜ್ಯಕ್ಕೆ ಮಟ್ಟದಲ್ಲಿ 5 ನೇ ಸ್ಥಾನ ಪಡೆದುಕೊಂಡಿದ್ದಾರೆ. ಚಿಕ್ಕತೋಳೂರು ಗ್ರಾಮದ ಸಿ.ಜೆ.ಸೋಮಶೇಖರ್ ಶೈಲಾ ದಂಪತಿ ಪುತ್ರಿ ಸಿ.ಎಸ್.ತೇಜಸ್ವಿನಿ 619 ಅಂಕಗಳೊಂದಿಗೆ ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ. ಮೂವರು ಸಾಧಕ ವಿದ್ಯಾರ್ಥಿನಿಯರಿಗೆ ರೋಟರಿ ಅಧ್ಯಕ್ಷ ಜೆ.ಕೆ.ಪೊನ್ನಪ್ಪ ಸಾಲು ಹೊದಿಸಿ ಸನ್ಮಾನಿಸಿದರು. ನಂತರ ಮಾತನಾಡಿದ ಅವರು, ಗ್ರಾಮೀಣ ಭಾಗದ ರೈತ ಕುಟುಂಬದ ಮಕ್ಕಳು ಇಂತಹ ಸಾಧನೆ ಮಾಡಿರುವುದು ನಮ್ಮೆಲ್ಲರಿಗೂ ಹೆಮ್ಮೆ ಎನಿಸಿದೆ.…
ಮಡಿಕೇರಿ ಜೂ.7 NEWS DESK : ಮಡಿಕೇರಿಯ ಸಿ.ಪಿ.ಸಿ ಲೇಔಟ್ನ ಮಸ್ಜಿದ್ ಉರ್ ರ್ರಹ್ಮಾ ಮಸೀದಿಯಲ್ಲಿ ಬಲಿದಾನ ಸಂಕೇತವಾದ ಬಕ್ರೀದ್ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆ ಮಸೀದಿಯಲ್ಲಿ ಮುಸಲ್ಮಾನ ಬಾಂಧವರು ಜಮಾಜ್ ಸಲ್ಲಿಸಿ, ಮಸ್ಜಿದ್ ಉರ್ ರ್ರಹ್ಮಾ ಮಸೀದಿಯ ಧರ್ಮಗುರು ಉಮ್ಮರ್ ಮೌಲವಿ, ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಮಾತನಾಡಿದ ಧರ್ಮಗುರು ಉಮ್ಮರ್ ಮೌಲವಿ, ತ್ಯಾಗ ಬಲಿದಾನ, ಮತ್ತು ಸಹನೆಯ ಪ್ರತೀಕರಾಗಿದ್ದ ಪ್ರವಾದಿ ಇಬ್ರಾಹಿಮರ ಚರಿತ್ರೆ ಮಾನವ ಕುಲಕ್ಕೆ ಮಾದರಿ. ಏಕ ದೇವತ್ವದ ಪ್ರತಿಪಾದಕರಾಗಿದ್ದ ಪ್ರವಾದಿ ಇಬ್ರಾಹಿಮರು ತಮ್ಮ ಜೀವನದುದ್ದಕ್ಕೂ ದೇವನ ಸಂಪ್ರೀತಿಗಾಗಿ ಬದುಕಿದ ಸಂತರು ಎಂದರು. ವಿಶ್ವಾಸಿಗಳು ಎಂದಿಗೂ ಕೋಮುವಾದಿಗಳಾಗಲು ಸಾಧ್ಯವಿಲ್ಲ. ಮಾನವೀಯ ಮೌಲ್ಯಗಳನ್ನು ಕಾಯ್ದುಕೊಳ್ಳುವವರಾಗಿದ್ದಾರೆ. ಪ್ರೀತಿ, ಕಾರುಣೆ, ಚಿಂತನೆ, ಸೇವಾ ಗುಣಗಳನ್ನು ತೋರುವವರಾಗಿದ್ದಾರೆ ಎಂದರು. ಇಂದು ಸಮಾಜದಲ್ಲಿ ಮಾದಕ ದ್ರವ್ಯಗಳ ವ್ಯಸನದ ದಾಸರಾಗಿರುವ ಯುವಕರನ್ನು ಇದರಿಂದ ವಿಮುಕ್ತಗೊಳಿಸಲು ನಾವು ಪ್ರಯತ್ನ ಮಾಡಬೇಕು, ಭಯೋತ್ಪಾದನೆ ಇಲ್ಲದಂತೆ ಮಾಡಬೇಕು, ಕೋಮುವಾದವನ್ನು ಬಿಟ್ಟು ಪರಸ್ಪರ ಎಲ್ಲರೂ ಪ್ರೀತಿ ವಿಶ್ವಾಸದಿಂದ ಇರಬೇಕು…
ಮಡಿಕೇರಿ ಜೂ.7 NEWS DESK : ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಕೊಡಗಿನಲ್ಲಿ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಿದರು. ವಿಶ್ವದಲ್ಲಿ ಶಾಂತಿ, ಸೌಹಾರ್ದತೆ ನೆಲಸಲಿ ಎಂದು ಸಮುದಾಯ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಸಿಹಿ ಹಂಚಿ ಶುಭಹಾರೈಸಿದರು. ಮಡಿಕೇರಿಯ ಸಿ.ಪಿ.ಸಿ ಲೇಔಟ್ನ ಮಸ್ಜಿದ್ ಉರ್ ರ್ರಹ್ಮಾ ಮಸೀದಿಯಲ್ಲಿ ತ್ಯಾಗ ಬಲಿದಾನ ಸಂಕೇತವಾದ ಬಕ್ರೀದ್ ಹಬ್ಬವನ್ನು ಶ್ರದ್ಧಾಭಕ್ತಿಯಯಿಂದ ಆಚರಿಸಲಾಯಿತು. ಮುಂಜಾನೆ ಮಸೀದಿಯಲ್ಲಿ ಮುಸಲ್ಮಾನ ಬಾಂಧವರು ಜಮಾಜ್ ಸಲ್ಲಿಸಿ, ಮಸ್ಜಿದ್ ಉರ್ ರ್ರಹ್ಮಾ ಮಸೀದಿಯ ಧರ್ಮಗುರು ಉಮ್ಮರ್ ಮೌಲವಿ, ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಮಾತನಾಡಿದ ಧರ್ಮಗುರು ಉಮ್ಮರ್ ಮೌಲವಿ, ತ್ಯಾಗ ಬಲಿದಾನ, ಮತ್ತು ಸಹನೆಯ ಪ್ರತೀಕರಾಗಿದ್ದ ಪ್ರವಾದಿ ಇಬ್ರಾಹಿಮರ ಚರಿತ್ರೆ ಮಾನವ ಕುಲಕ್ಕೆ ಮಾದರಿ. ಏಕ ದೇವತ್ವದ ಪ್ರತಿಪಾದಕರಾಗಿದ್ದ ಪ್ರವಾದಿ ಇಬ್ರಾಹಿಮರು ತಮ್ಮ ಜೀವನದುದ್ದಕ್ಕೂ ದೇವನ ಸಂಪ್ರೀತಿಗಾಗಿ ಬದುಕಿದ ಸಂತರು ಎಂದರು. ವಿಶ್ವಾಸಿಗಳು ಎಂದಿಗೂ ಕೋಮುವಾದಿಗಳಾಗಲು ಸಾಧ್ಯವಿಲ್ಲ. ಮಾನವೀಯ ಮೌಲ್ಯಗಳನ್ನು ಕಾಯ್ದುಕೊಳ್ಳುವವರಾಗಿದ್ದಾರೆ. ಪ್ರೀತಿ, ಕಾರುಣೆ,…
ಸೋಮವಾರಪೇಟೆ ಜೂ.7 NEWS DESK : ತಾಲ್ಲೂಕಿನ ಗರಗಂದೂರು ಡಿ ಚೆನ್ನಮ್ಮ ಎಜುಕೇಶನ್ ಸೊಸೈಟಿ ವತಿಯಿಂದ ಪ್ರೀ ನರ್ಸರಿ ಮತ್ತು ಎಲ್ಕೆಜಿ, ಯುಕೆಜಿ ತರಗತಿಗಳನ್ನು ಕಾಫಿ ಬೆಳೆಗಾರರಾದ ಮಚ್ಚಂಡ ಮಲ್ಲಿಕಾ ಬೋಪಣ್ಣ ಉದ್ಘಾಟಿಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕರ್ನಲ್ ಬಿಜಿವಿ ಕುಮಾರ್ ಮಾತನಾಡಿ, ಇಂದಿನ ಜೀವನಕ್ಕೆ ಆಂಗ್ಲ ಮಾಧ್ಯಮದ ಶಿಕ್ಷಣದ ಅಗತ್ಯತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಪೂರ್ವ ಪ್ರಾಥಮಿಕ ಎಲ್ಕೆಜಿ ಹಾಗೂ ಯು.ಕೆ.ಜಿ ತರಗತಿಗಳನ್ನು ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಡಿಸಿಪಿ ಬಿ.ಎ.ಪೂಣಚ್ಚ, ಜ್ಯೋತಿ ಬೆಳಗುವುದರ ಮೂಲಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣದ ಅವಶ್ಯಕತೆ ಇದೆ. ಜಗತ್ತಿನ ಸಂಪರ್ಕ ಭಾಷೆಯಾದ ಇಂಗ್ಲಿಷ್ ಭಾಷೆಯ ಮಹತ್ವ ಹೆಚ್ಚಾಗಿದೆ. ಮಾದಾಪುರದ ಸುತ್ತಲಿನ ಗ್ರಾಮೀಣ ಮಕ್ಕಳಿಗೆ ಅನುಕೂಲವಾಗುವಂತೆ ಆಂಗ್ಲ ಮಾಧ್ಯಮದ ಶಾಲೆಯನ್ನು ತೆರೆದಿರುವುದು ಉತ್ತಮ ಕಾರ್ಯ ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಸಿ.ಜಿ.ಮಂದಪ್ಪ, ಉಪನ್ಯಾಸಕ ರಾಜ ಸುಂದರಂ, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ರೀಟಾ,…






