ಲೇಖಕ: admin

ಕುಶಾಲನಗರ, ಮೇ 8 NEWS DESK  : 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದ ಭಕ್ತಿ ಭಂಡಾರಿ, ಕಾಯಕಯೋಗಿ ಬಸವಣ್ಣನವರು ನುಡಿದಂತೆ ಹಾಗೂ ಪ್ರತಿಪಾದನೆ ಮಾಡಿದ ಸಮ ಸಮಾಜ ನಿರ್ಮಾಣ ಕಾರ್ಯವು ಪ್ರಸ್ತುತ ಸಂದರ್ಭದಲ್ಲಿ ಬಹಳ ಅವಶ್ಯಕತೆ ಇದೆ ಎಂದು ಕೊಡಗು ವಿಶ್ವವಿದ್ಯಾಲಯಯ ಕನ್ನಡ ಉಪನ್ಯಾಸಕ ಡಾ ಜಮೀರ್ ಅಹ್ಮದ್ ಅಭಿಪ್ರಾಯಪಟ್ಟರು. ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದಲ್ಲಿ ಬಸವ ಸೇವಾ ಸಮಿತಿಯ ವತಿಯಿಂದ  ಗ್ರಾಮದ ಸಂತೆಮಾಳದ ಮಾರುಕಟ್ಟೆ ಪ್ರಾಂಗಣದಲ್ಲಿ ಏರ್ಪಡಿಸಿದ್ದ ಗ್ರಾಮಾಂತರ ಬಸವ ಜಯಂತಿ ಕಾರ್ಯಕ್ರಮದಲ್ಲಿ ಶರಣರ ವಚನ ಚಳವಳಿ ಕುರಿತು ಉಪನ್ಯಾಸ ನೀಡುತ್ತಾ, ಸಮಾಜದಲ್ಲಿನ ಅಸಮಾನತೆ, ಅಸ್ಪೃಶ್ಯತೆ, ಮೌಢ್ಯ ನಿವಾರಣೆಗೆ ಬಸವಣ್ಣನವರು ಸಾಮಾಜಿಕ ಕ್ರಾಂತಿ ನಡೆಸಿದರು ಎಂದರು. 12ನೇ ಶತಮಾನದ ಎಂದಾಗ ಪ್ರತಿಯೊಬ್ಬರೂ ನೆನಪಿಸಿಕೊಳ್ಳುವುದು ಅಂದಿನ ವಚನ ಸಾಹಿತ್ಯ ಚಳವಳಿ. ಅಂದು ಅನುಭವ ಮಂಟಪದಲ್ಲಿ ಎಲ್ಲ ವರ್ಗದವರಿಗೂ ಅದರಲ್ಲೂ ಮಹಿಳೆಯರಿಗೆ ಸಮಾನ ಸ್ಥಾನಮಾನ ನೀಡುವ ಮೂಲಕ ಸ್ತ್ರೀ ಸಮಾನತೆ ನಾಂದಿ ಹಾಡಿದರು. ಸಮಾಜದಲ್ಲಿ ಭಾತೃತ್ವ, ಸಮಾನತೆ, ಶಾಂತಿ, ನೆಮ್ಮದಿಯ ಸಂದೇಶವನ್ನು…

Read More

ಮಡಿಕೇರಿ ಮೇ 8 NEWS DESK :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶಿವಶರಣೆ ಹೇಮಾರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವು ಮೇ, 10 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಂತರ್ ಗೌಡ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಧನಂಜಯ ಸರ್ಜಿ, ಸುಂಟಿಕೊಪ್ಪ ಕಾನ್‍ಬೈಲ್ ಸರ್ಕಾರಿ ಪ್ರೌಡ ಶಾಲೆ ಶಿಕ್ಷಕರಾದ ಎನ್.ಕೆ.ಮಾಲಾದೇವಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಮೇ 8 NEWS DESK : ಪ್ರಸಕ್ತ (2025-26ನೇ) ಸಾಲಿನ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಚರ್ ಅಸಿಸ್ಟೆಂಟ್‍ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್, ಅನುದಾನ ರಹಿತ ಕೋರ್ಸುಗಳಾದ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಚನ್ ಎಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ವಿಜ್ಯುವಲಿ ಇಂಪೇರ್ಡ್) ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ, ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕ್ ವೆಹಿಕಲ್ ಟೆಕ್ನಾಲಜಿ,  ಕರ್ನಾಟಕ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹಾಗೂ ಮೂಳೆ ಮತ್ತು ಕೀಲು ಅಂಗವಿಕಲತೆ-ಶೇ.40 ಮತ್ತು ಮೇಲ್ಪಟ್ಟು, ಕಿವುಡು ಮತ್ತು ಮೂಗು ಅಂಗವಿಕಲತೆ-60 ಡಿಬಿ ಮತ್ತು  ಮೇಲ್ಪಟ್ಟು, ಅಂಧತ್ವ- 6/60 ಅಥವಾ 20/200 ಸ್ನೆಲೆನ್-ಕ್ರ.ಸಂ. 6 ರ ಕೋರ್ಸಿಗೆ  ಈ ಅಂಗವೈಕಲ್ಯತೆಯ ಲಕ್ಷಣಗಳನ್ನು ಹೊಂದಿರಬೇಕು:  ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ರಾಷ್ಟ್ರ ಮಟ್ಟದ ವಿದ್ಯಾರ್ಥಿ ವೇತನದ ಆರ್ಥಿಕ…

Read More

ಮಡಿಕೇರಿ ಮೇ 8 NEWS DESK : ಭಾರತೀಯ ಸೇನೆಯಿಂದ ಉಗ್ರರ ನೆಲೆಗಳ ಮೇಲೆ ನಡೆಸಿದ ‘ಆಪರೇಷನ್ ಸಿಂಧೂರ್’ ದಾಳಿ ಯಶಸ್ವಿ ಹಿನ್ನೆಲೆಯಲ್ಲಿ  ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನ ಸಮಿತಿ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ನಗರದ  ಓಂಕಾರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಭಾರತೀಯ ಸೈನ್ಯಕ್ಕೆ ಶಕ್ತಿ ತುಂಬಲು ಮತ್ತು ದೇಶದ ಶಾಂತಿ, ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಪ್ರಮುಖರಾದ ಜಿ.ರಾಜೇಂದ್ರ, ಅಂಬೆಕಲ್ ಕುಶಾಲಪ್ಪ, ಚುಮ್ಮಿದೇವಯ್ಯ, ಪ್ರಕಾಶ್ ಆಚಾರ್ಯ ಸೇರಿದಂತೆ ಮತ್ತಿತರ ಪದಾಧಿಕಾರಿಗಳು ಹಾಜರಿದ್ದರು.

Read More

ನಾಪೋಕ್ಲು ಮೇ 8 NEWS DESK : ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಸಮಿತಿ ಸದಸ್ಯರ ಮಾಸಿಕ ಸಭೆ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರುಗಂದ ಗೌಡ ಸಮಾಜದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಮ್ಮು-ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಮೌನ ಸಂತಾಪ ಸೂಚಿಸಲಾಯಿತು. ನಂತರ ಹಲವಾರು ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಕ್ರಿಯಾ ಯೋಜನೆ ರೂಪಿಸಿದ್ದು, ಮುಂಬರುವ ದಿನಗಳಲ್ಲಿ ಒಕ್ಕೂಟದ ಸದಸ್ಯರು ಹಾಗೂ ಅವರ ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುವುದಾಗಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು. ಕಾರ್ಯದರ್ಶಿ ಕೇಕಡ ಪೂಜಾ ನಾಗೇಂದ್ರ ಸ್ವಾಗತಿಸಿ, ಕೊಡಪಾಲು ತೀರ್ಥ ಗಣಪತಿ ವಂದಿಸಿದರು. ವರದಿ : ದುಗ್ಗಳ ಸದಾನಂದ. 

Read More

ಸೋಮವಾರಪೇಟೆ ಮೇ 8 NEWS DESK : ಗರಗಂದೂರು ಬಿ ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಬ್ರಹ್ಮಕಳಶೋತ್ಸವ ಮತ್ತು 15ನೇ ವಾರ್ಷಿಕ ಪೂಜೆ ಗ್ರಾಮಸ್ಥರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು. ಪಕ್ಕದ ಹಾರಂಗಿ ನದಿಯಿಂದ ಗಂಗೆಯನ್ನು ವಾದ್ಯಮೇಳದೊಂದಿಗೆ ಮೆರವಣಿಗೆಯಲ್ಲಿ ದೇವಾಲಯಕ್ಕೆ ತರಲಾಯಿತು. 21 ಮಹಿಳೆಯರು ಕಳಸವನ್ನು ಹೊತ್ತು ಮೆರವಣಿಗೆಯಲ್ಲಿ ತೆರಳಿದರು. ಬ್ರಹ್ಮಕಲಸದ ಪೂಜಾ ವಿಧಿವಿಧಾನಗಳನ್ನು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ನೆರವೇರಿಸಿದರು. ದೇವಾಲಯ ಸಮಿತಿ ಅಧ್ಯಕ್ಷ ಸಿ.ಕೆ.ರೋಹಿತ್, ಉಪಾಧ್ಯಕ್ಷ ಕೆ.ಡಿ.ವೀರಪ್ಪ, ಕಾರ್ಯದರ್ಶಿ ಲಿಖಿತ್ ದಾಮೋಧರ್, ಖಜಾಂಚಿ ಬಿ.ಇ.ಅಜಿತ್‍ಕುಮಾರ್ ಮತ್ತು ಗ್ರಾಮಸ್ಥರು ಇದ್ದರು.

Read More

ಕುಶಾಲನಗರ, ಮೇ 8 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆಗೆ‌ ಮುಂಬಡ್ತಿ ಹೊಂದಿದ ಎಂ.ಕೃಷ್ಣಪ್ಪ, ಸಂಸ್ಥೆಯಲ್ಲಿ ಉಪನ್ಯಾಸಕ ಹುದ್ದೆಯಿಂದ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಹುದ್ದೆಗೆ ನಿಯುಕ್ತಿಗೊಂದ ಸಿದ್ದೇಶ್ ಕುಮಾರ್ ಹಾಗೂ ಸಂಸ್ಥೆಯಲ್ಲಿ ಪ್ರಥಮ ದರ್ಜೆ ಸಹಾಯಕ ಹುದ್ದೆಯಿಂದ ಸೋಮವಾರಪೇಟೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಅಧೀಕ್ಷಕ ಹುದ್ದೆಗೆ‌ ಮುಂಬಡ್ತಿ ಹೊಂದಿರುವ ಸುಮ ಅವರಿಗೆ ಡಯಟ್ ಸಂಸ್ಥೆಯ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಸನ್ಮಾನಿತರನ್ನು ಸನ್ಮಾನಿಸಿ ಮಾತನಾಡಿದ ಡಯಟ್ ಸಂಸ್ಥೆಯ ಉಪ ನಿರ್ದೇಶಕ ( ಅಭಿವೃದ್ಧಿ) ಹಾಗೂ ಪ್ರಾಂಶುಪಾಲ ಎಂ.ಚಂದ್ರಕಾಂತ್ , ಸಂಸ್ಥೆಯಲ್ಲಿ ಸದಾ ಕ್ರಿಯಾಶೀಲ ವ್ಯಕ್ತಿತ್ವ ಹೊಂದಿರುವ ಕೃಷ್ಣಪ್ಪ, ಸಿದ್ದೇಶ್ ಕುಮಾರ್ ಮತ್ತು ಸುಮ ವಿದ್ಯಾರ್ಥಿ ವೃಂದ ಹಾಗೂ ಸಿಬ್ಬಂದಿಗಳ ಪ್ರೀತಿಗೆ ಪಾತ್ರರಾಗಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ…

Read More

ಕುಶಾಲನಗರ ಮೇ 8 NEWS DESK : ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದಲ್ಲಿ ಬಸವ ಸೇವಾ ಸಮಿತಿಯ ವತಿಯಿಂದ  ಗ್ರಾಮಾಂತರ ಬಸವ ಜಯಂತಿ ಅಂಗವಾಗಿ ಆಕರ್ಷಕ ಮೆರವಣಿಗೆ ನಡೆಸಲಾಯಿತು. ಗ್ರಾಮದಲ್ಲಿ ಸಂಜೆ ವೇಳೆಗೆ ಅಲಂಕೃತ ಬೆಳ್ಳಿ ರಥದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರವನ್ನಿಟ್ಟು ಮೆರವಣಿಗೆ ಮೂಲಕ ಶೋಭಾಯಾತ್ರೆ ನಡೆಸಲಾಯಿತು. ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, 12 ನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರು ವಚನಗಳ ಮೂಲಕ ಸಮಾಜದಲ್ಲಿ ಅಸಮಾನತೆ, ಅಸ್ಪೃಶ್ಯತೆ, ಕಂದಾಚಾರ, ಮೂಢನಂಬಿಕೆಗಳ ವಿರುದ್ಧ ಜನಜಾಗೃತಿ ಮೂಡಿಸಿದರು.ಪ್ರತಿಯೊಬ್ಬರೂ ಬಸವಣ್ಣನವರ ತತ್ವ,ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದರು. ಶಿರಂಗಾಲ ಗ್ರಾಮ ದೇವಾಲಯ ಸಮಿತಿಯ ಕಾರ್ಯದರ್ಶಿ ಎಂಎಸ್.ಗಣೇಶ್ , ಶೋಭಾಯಾತ್ರೆಗೆ ಚಾಲನೆ ನೀಡಿದರು. ಗ್ರಾಮ ದೇವಾಲಯ ಸಮಿತಿಯ ಅಧ್ಯಕ್ಷ ಎಸ್.ಎಸ್.ಚಂದ್ರಶೇಖರ್, ಗ್ರಾಮ ಬಸವ ಸಮಿತಿಯ ಅಧ್ಯಕ್ಷ ಎಸ್.ಜೆ.ಉಮೇಶ್ , ಕಾರ್ಯದರ್ಶಿ ಎನ್.ಎಸ್.ಜಯಣ್ಣ, ಪ್ರಮುಖರಾದ ಎಸ್.ಎಚ್. ರಾಜಪ್ಪ, ಎಂ.ಎಸ್.ಶಿವಾನಂದ, ಎಸ್.ಪಿ.ಪರಮೇಶ್, ಎಸ್.ಆರ್.ಶಿವಲಿಂಗ, ಸಿದ್ದಲಿಂಗಪ್ಪ ಮತ್ತಿತರರು ಇದ್ದರು. ಮೆರವಣಿಗೆಯಲ್ಲಿ ಅಲಂಕೃತಗೊಳಿಸಲಾಗಿದ್ದ ಹೋರಿಯ ಮೆರವಣಿಗೆ ಗಮನ ಸೆಳೆಯಿತು.

Read More

ಮಡಿಕೇರಿ ಮೇ 7 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಗೆ ಕೋವಿಡ್-19 ಸಂಧರ್ಭದಲ್ಲಿ “ಆಕ್ಸಿಜನ್ ಫಾರ್ ಇಂಡಿಯಾ” ಕಾರ್ಯಕ್ರಮದಡಿಯಲ್ಲಿ ಅಮೇರಿಕಾದ ಮೀರಾ ವೆಲ್ಸ್, ಡಾ.ಶುಭಾ ವರ್ಮಾ ಮತ್ತು ತಂಡದವರು ಆಕ್ಸಿಜನ್ ಕಾನ್ಸಂಟ್ರೇಟರ್‍ಗಳನ್ನು ಕೊಡುಗೆಯಾಗಿ ನೀಡಲಾಗಿದ್ದು, ಈ ಸಂಬಂಧ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಗೆ ಡಾ.ಮೀರಾ ವೆಲ್ಸ್ ಅವರ ಪತಿ ಕೋರ್ಟ್‍ಲ್ಯಾಂಡ್ (ನಿರ್ದೇಶಕರು ಐಬಿಎಂ ಸಂಸ್ಥೆ)ನಿವೃತ ಐಎಎಸ್ ಅಧಿಕಾರಿಯಾದ ಎ.ಕೆ.ಮೊಣ್ಣಪ್ಪ ಮತ್ತು ಸ್ಥಳೀಯ ವೈದ್ಯರಾದ ಡಾ ಸಣ್ಣುವಂಡ ಕಾವೇರಪ್ಪ ಭೇಟಿ ನೀಡಿದರು. ಈ ಸಮಯದಲ್ಲಿ 2021 ರ ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ, ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ 1984 ರ ಬ್ಯಾಚ್‍ನ ಹಳೆಯ ವಿದ್ಯಾರ್ಥಿಗಳು, ದೇಶಾದ್ಯಂತ ಕೋವಿಡ್ ಪೀಡಿತ ಜನರನ್ನು ಬೆಂಬಲಿಸಲು ಆಕ್ಸಿಜನ್ ಫಾರ್ ಇಂಡಿಯಾ ಎಂಬ ಗುಂಪನ್ನು ರಚಿಸಿದರು. ಡಾ.ಶೋಭಾ ಚೊಟ್ಟೇರಾ, ಮಾಜಿ ಐಎಎಸ್ ಅಧಿಕಾರಿ ಎ.ಕೆ.ಮೊಣ್ಣಪ್ಪ, ನಾಪೋಕ್ಲುವಿನಿಂದ ಡಾ.ಸಣ್ಣುವಂಡ ಎಂ.ಕಾವೇರಪ್ಪ ಅವರನ್ನು ಸಂಪರ್ಕಿಸಿ ಕೊಡಗಿನಲ್ಲಿ ಆಮ್ಲಜನಕದ ಸಾಂದ್ರೀಕರಣದ ಅಗತ್ಯವಿದೆಯೇ ಎಂದು ವಿಚಾರಿಸಿದರು. ಇದರ…

Read More

ಮಡಿಕೇರಿ ಮೇ 7 NEWS DESK : ಕರ್ಣಂಗೇರಿ ಗ್ರಾಮದ ಚಂದ್ರಗಿರಿ ನಗರದಲ್ಲಿ ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವತಿಯಿಂದ ಮರು ನಿರ್ಮಿಸಲಾಗಿರುವ ಅಂಗನವಾಡಿ ಮತ್ತು ಸಾರ್ವಜನಿಕ ಗ್ರಂಥಾಲಯದ ಕಟ್ಟಡವನ್ನು ಇಂದು ಪೂಜೆಯ ಮೂಲಕ ಉದ್ಘಾಟಿಸಲಾಯಿತು. ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೋ, ಸಿ.ಡಿ.ಪಿ.ಒ ಸವಿತಾ, ಅಭಿವೃದ್ಧಿ ಅಧಿಕಾರಿ ಅನಿತಾ, ಬಿಲ್ ಕಲೆಕ್ಟರ್ ಪ್ರಜೀವಿತ್, ಅಂಗನವಾಡಿ ಕಾರ್ಯಕರ್ತೆ ಸುಮಿತ್ರ, ಆಶಾ ಕಾರ್ಯಕರ್ತೆ ಅನಿತಾ ರೈ, ಗುತ್ತಿಗೆದಾರ ಕವನ್, ಗ್ರಾಮಸ್ಥರು, ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಇದೇ ಸಂದರ್ಭ ಕಣರ್ಂಗೇರಿ ಗ್ರಾಮದಲ್ಲಿ ಅಳವಡಿಸಲಾಗಿರುವ ಹೈಮಾಸ್ಟ್ ಬೀದಿ ದೀಪವನ್ನು ಸಾಂಕೇತಿಕವಾಗಿ ಉದ್ಘಾಟಿಸಲಾಯಿತು.

Read More