ಮಡಿಕೇರಿ ಜು.3 NEWS DESK : ಆಷಾಢ ಮಾಸದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಆಷಾಡ ಮಾಸದ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ಮಾಡಲಾಗಿರುವ ವ್ಯವಸ್ಥೆಯನ್ನ ಸಂಸದ ಯದುವೀರ್ ಖುದ್ದು ಪರಿಶೀಲನೆ ನಡೆಸಿದರು. ಈ ವೇಳೆ ಪ್ರಾಧಿಕಾರದ ಕಾರ್ಯದರ್ಶಿ ರೂಪ ದರ್ಶನದ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದರು.
ಲೇಖಕ: admin
ವಿರಾಜಪೇಟೆ ಜು.3 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿರಾಜಪೇಟೆ ತಾಲೂಕು, ಕೃಷಿ ಕಾರ್ಯಕ್ರಮದಡಿಯಲ್ಲಿ ಅಮ್ಮತಿ ವಲಯದ ಚೆಂಬೆಬೆಳ್ಳೂರು ಕಾರ್ಯಕ್ಷೇತ್ರದ ವತಿಯಿಂದ ಸರಕಾರಿ ಪ್ರೌಢಶಾಲೆ ದೇವಣಗೇರಿ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ವಲಯ ಅರಣ್ಯ ಅಧಿಕಾರಿ ರಾಘವ ಮಾತನಾಡಿ, ಪರಿಸರ ಸಂರಕ್ಷಣೆ ಹೇಗೆ ಮಾಡಬೇಕು ಎಂದು ಮಾಹಿತಿ ನೀಡಿದರು. ಪರಿಸರ ಉಳಿವಿಗಾಗಿ ನಾವು ಸದಾ ಪ್ರಯತ್ನ ಪಡಬೇಕು ಮತ್ತು ಅಳಿವಿನಂಚಿನಲ್ಲಿರುವ ವಿವಿಧ ತಳಿಯ ಗಿಡಗಳನ್ನು ಹೇಗೆ ಉಳಿಸಬೇಕು ಎಂದು ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಿನ ಯೋಜನಾಧಿಕಾರಿ ಪಿ.ಹರೀಶ್ ಮಾತನಾಡಿ, ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಒಂದಾಗಿದೆ. ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕು. ಹಣ್ಣಿನ ಗಿಡಗಳನ್ನು ನಾಟಿ ಮಾಡುವುದರಿಂದ ಶುದ್ಧವಾದ ಗಾಳಿ ಮತ್ತು ಹಣ್ಣು ಸಿಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸರಕಾರಿ…
ಮಡಿಕೇರಿ ಜು.3 NEWS DESK : ಮಡಿಕೇರಿ ನಗರದ 3ನೇ ವಾರ್ಡ್ನ ತ್ಯಾಗರಾಜ ಕಾಲೋನಿಗೆ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಹಾಗೂ ಉಪಾಧ್ಯಕ್ಷ ಮಹೇಶ್ ಜೈನಿ ಅವರು ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಿದರು. ತ್ಯಾಗರಾಜ ಕಾಲೋನಿಯ ಸಾರ್ವಜನಿಕರ ಸಮಸ್ಯೆಗಳು ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯ ಬಗ್ಗೆ ನಗರಸಭೆಯ ಮಾಸಿಕ ಸಭೆಯಲ್ಲಿ ನಾಮನಿರ್ದೇಶಿತ ಸದಸ್ಯ ಎಂ.ಎಂ.ಮೊಹಮ್ಮದ್ ಯಾಕುಬ್ ಅವರು ಗಮನ ಸೆಳೆದು ಸ್ಥಳಕ್ಕೆ ಭೇಟಿ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭ ಮಾತನಾಡಿದ ಮೊಹಮ್ಮದ್ ಯಾಕುಬ್, ತ್ಯಾಗರಾಜ ಕಾಲೋನಿಯಲ್ಲಿ ಆಶ್ರಯ ಮನೆ ನಿರ್ಮಾಣಗೊಂಡು ಸುಮಾರು 30 ವರ್ಷ ಕಳೆದಿದ್ದರು ಸಮರ್ಪಕವಾದ ರಸ್ತೆ ವ್ಯವಸ್ಥೆ ಇಲ್ಲದಾಗಿದೆ. ಬರೆ ಕುಸಿಯುವ ಹಂತದಲ್ಲಿದ್ದು, ನಿವಾಸಿಗಳು ಭಯದಲ್ಲಿ ಜೀವನ ಸಾಗಿಸುತ್ತಿದ್ದಾರೆ ಎಂದರು. ಮತ್ತೊಂದು ಭಾಗದಲ್ಲಿ ಮಳೆಯಿಂದ ಬರೆ ಕುಸಿದಿದ್ದು, ರಸ್ತೆಯಲ್ಲಿ ನಡೆದಾಡಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ 2023ರಲ್ಲಿ ಸಾರ್ವಜನಿಕರು ಅರ್ಜಿಯ ಮೂಲಕ ನಗರಸಭೆಗೆ ಮನವಿ…
ಮಡಿಕೇರಿ ಜು.3 NEWS DESK : ಕರ್ನಾಟಕ ಸಾಹಿತ್ಯ ಅಕಾಡೆಮಿಯ ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ:ಅರ್ಧ ಶತಮಾನ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಸೆಷ್ಟಂಬರ್ ತಿಂಗಳಿನಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಆ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 50 ವರ್ಷ ವಯಸ್ಸುಳ್ಳ ಪರಿಶಿಷ್ಟ ಜಾತಿಗೆ ಸೇರಿದ ರಾಜ್ಯದ ಎಲ್ಲಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ, 20 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ಸೈಟ್ https://sahithyaacademy.karnataka.gov.in ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಜು.2 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಜು.6 ರಂದು ಬೆಳಗ್ಗೆ 10.30 ಗಂಟೆಗೆ ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್ ರಾಂ ಅವರ 39ನೇ ಪುಣ್ಯಸ್ಮರಣೆ ಕಾರ್ಯಕ್ರಮವು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿ ಇರುವ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.
ಮಡಿಕೇರಿ ಜು.3 NEWS DESK : ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ವತ್ತೆಕರೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಯತ್ನಿಸಿದ ಸಂದರ್ಭ ಬಿದ್ದು ಗಾಯಗೊಂಡ ಕಾರ್ಮಿಕ ಮಹಿಳೆ ಕವಿತಾ (40) ಅವರ ಮನೆಗೆ ಶಾಸಕರ ಡಾ.ಮಂತರ್ ಗೌಡ ಭೇಟಿ ನೀಡಿದರು. ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಶಾಸಕರು, ಮಹಿಳೆಯ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಅಲ್ಲದೆ ವೈಯಕ್ತಿಕವಾಗಿ ಧನ ಸಹಾಯ ನೀಡಿದರು. ಈ ಸಂದರ್ಭ ಸ್ಥಳೀಯ ಕಾಂಗ್ರೆಸ್ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಜು.2 NEWS DESK : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ 2025-26 ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭಿಸಲಾಗಿದ್ದು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2025-26ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯವಾಕ್ಯದೊಂದಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ. ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ (ಬಿ.ಎ, ಬಿಕಾಂ, ಬಿಲಿಬ್ ಐಎಸ್ಸಿ, ಬಿಬಿಎ, ಬಿಸಿಎ, ಬಿಎಸ್ಸಿ, ಬಿಎಸ್ಡಬ್ಲ್ಯೂ) ಹಾಗು ಸ್ನಾತಕೋತ್ತರ ಪಿಜಿ. ಕೋರ್ಸ್ಗಳಾದ (ಎಂಎ, ಎಂಎ-ಪತ್ರಿಕೋದ್ಯಮ, ಎಂಕಾಂ, ಎಂಬಿಎ, ಎಂಲಿಬ್ಐಎಸ್ಸಿ, ಎಂಎಸ್ಸಿ, ಎಂಸಿಎ, ಎಂಎಸ್ಡಬ್ಲೂ) (ಪಿಜಿ ಡಿಪ್ಲೋಮಾ ಪ್ರೋಗ್ರಾಮ್ಸ್ ಸರ್ಟಿಫಿಕೇಟ್ ಪ್ರೋಗ್ರಾಮ್ಸ್) ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.…
ಮಡಿಕೇರಿ ಜು.3 NEWS DESK : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 49.44 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.55 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1486.74 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 893.60 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 60.30 ಮಿ.ಮೀ. ಕಳೆದ ವರ್ಷ ಇದೇ ದಿನ 18.08 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2114.19 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1278.54 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 52.25 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 10.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1476.15 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 931.95 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 35.07 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…
ಮಡಿಕೇರಿ ಜು.3 NEWS DESK : ಯೂರೋಪ್ನಲ್ಲಿ ಜು.8 ರಿಂದ 20ರ ವರೆಗೆ ನಡೆಯಲಿರುವ ಹಾಕಿ ಪಂದ್ಯಾವಳಿಯಲ್ಲಿ ಭಾರತ ಎ ಹಾಕಿ ತಂಡವೂ ಪಾಲ್ಗೊಳ್ಳುತ್ತಿದ್ದು, ತಂಡದಲ್ಲಿ ಕೊಡಗಿನವರಾದ ಯುವ ಆಟಗಾರ ಚಂದೂರ ಬಿ.ಪೂವಣ್ಣ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ಪೂವಣ್ಣ ಅವರೊಂದಿಗೆ ರಾಜ್ಯದ ಇಬ್ಬರು ಆಟಗಾರರಾದ ಹೆಚ್.ಎಸ್.ಮೋಹಿತ್ ಹಾಗೂ ಮೊಹಮದ್ ರಹೀಲ್ ಸ್ಥಾನ ಪಡೆದಿದ್ದಾರೆ. ಪೂವಣ್ಣ ಕಂಡಂಗಾಲದ ನಿವಾಸಿ ಚಂದೂರ ಎಸ್.ಪ್ರಭು (ಬಾಬಿ) ಹಾಗೂ ಅನಿಲ (ತಾಮನೆ ಮಲ್ಲೇಂಗಡ) ದಂಪತಿಯ ಪುತ್ರ. 20 ಆಟಗಾರರನ್ನು ಒಳಗೊಂಡ ಭಾರತ ತಂಡವನ್ನು ಹಾಕಿ ಇಂಡಿಯಾ ಪ್ರಕಟಿಸಿದ್ದು, ಹರಿಯಾಣದ ಸಂಜಯ್ ತಂಡವನ್ನು ಮುನ್ನಡೆಸಲಿದ್ದಾರೆ. ಉದಯೋನ್ಮುಖ ಆಟಗಾರರ ತಮಡ ಇದಾಗಿದ್ದು, ಭಾರತ ಪ್ರಾನ್ಸ್, ಐರ್ಲೆಂಡ್, ನೆದರ್ಲೇಂಡ್ ವಿರುದ್ಧ ತಲಾ 2 ಮತ್ತು ಇಂಗ್ಲೆಂಡ್ ಹಾಗೂ ಬೆಲ್ಜಿಯಂನೊಂದಿಗೆ ತಲಾ 1 ಪಂದ್ಯವನ್ನಾಡಲಿದೆ. ಭಾರತ ರಾಷ್ಟ್ರೀಯ ತಂಡದ ಸಹಾಯಕ ಕೋಚ್ ಶಿವೇಂದ್ರ ಸಿಂಗ್ ಈ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ತಂಡ ಜು.5 ರಂದು ತೆರಳಲಿದೆ. ಆರು ರಾಷ್ಟ್ರಗಳು ಭಾಗವಹಿಸಲಿದೆ.
ಸೋಮವಾರಪೇಟೆ ಜು.3 NEWS DESK : ಕಾಡಾನೆ ಭತ್ತದ ಗದ್ದೆಗೆ ನುಗ್ಗಿ ಕೃಷಿ ಫಸಲು ನಾಶಗೊಳಿಸಿರುವ ಘಟನೆ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕುಟ್ಟಪ್ಪ ಎಂಬುವರರ ಭತ್ತ ಸಸಿಮಡಿಯನ್ನು ಕಾಡಾನೆಗಳು ತಿಂದು ತುಳಿದು ನಾಶಪಡಿಸಿವೆ. ಭತ್ತ ನಾಟಿಗೆ ಗದ್ದೆಭೂಮಿಯನ್ನು ಉತ್ತು ಹದಪಡಿಸಲಾಗಿತ್ತು. ಅಂದೇ ಕಾಡಾನೆಗಳು ಸಸಿಯನ್ನು ತಿಂದು ನಷ್ಟ ಪಡಿಸಿದೆ.






