ಲೇಖಕ: admin

ಮಡಿಕೇರಿ ಮೇ 6 NEWS DESK : ಹಿಂಬದಿಯಿಂದ ಗುಂಡು ಹೊಡೆದು ಕಾಫಿ ಬೆಳೆಗಾರನನ್ನು ಕೊಲೆ ಮಾಡಿರುವ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟಳ್ಳಿ ಸಮೀಪದ ಅಭ್ಯತ್ ಮಂಗಲ ಗ್ರಾಮದಲ್ಲಿ ನಡೆದಿದೆ. ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣದ ನಿವಾಸಿ ಕೊಳಂಬೆ ವಿನು(50) ಎಂಬುವವರೇ ಹತ್ಯೆಗೀಡಾದ ವ್ಯಕ್ತಿ.  ಕೊಳಂಬೆ ವಿನು ಅವರು ಇಂದು ಅಭ್ಯತ್ ಮಂಗಲ ಗ್ರಾಮದ ತೋಟದಲ್ಲಿದ್ದ ಪೈಪುಗಳನ್ನು ಇಬ್ಬರು ಕಾರ್ಮಿಕರ ಸಹಕಾರದಿಂದ ಗೋದಾಮಿಗೆ ಸಾಗಿಸಿ ದಾಸ್ತಾನು ಮಾಡುವ ಕೆಲಸದಲ್ಲಿ ನಿರತರಾಗಿದ್ದರು. ಈ ಸಂದರ್ಭ ಅಪರಿಚಿತರು ಹಿಂಬದಿಯಿಂದ ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗಿದೆ. ಗುಂಡಿನ ಸದ್ದು ಕೇಳಿ ಕಾರ್ಮಿಕರು ಸ್ಥಳ್ಕಾಗಮಿಸಿದ ಸಂದರ್ಭ ಕೊಳಂಬೆ ವಿನು ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಈ ಕೃತ್ಯಕ್ಕೆ ಆಸ್ತಿ ವೈಷಮ್ಯ ಕಾರಣ ಎಂದು ಹೇಳಲಾಗುತ್ತಿದೆಯಾದರೂ ನಿಖರ ಕಾರಣ ತಿಳಿದುಬಂದಿಲ್ಲ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,…

Read More

ಮಡಿಕೇರಿ ಮೇ 6 NEWS DESK : ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಕೆ.ಬಾಡಗ, ನಾಲ್ಕೇರಿ ಹಾಗೂ ಪಾಲಿಬೆಟ್ಟ ಗ್ರಾಮ ಪಂಚಾಯಿತಿಗಳಿಗೆ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ಸಿ.ನಾರಾಯಣಸ್ವಾಮಿ ಭೇಟಿ ನೀಡಿ ಚುನಾಯಿತ ಸದಸ್ಯರುಗಳ ಸಮಾಲೋಚನೆ ಸಭೆ ನಡೆಸಿದರು. ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪವಾಗಿ ಬಳಸಿಕೊಂಡು ಗ್ರಾಮ ಪಂಚಾಯಿತಿಗಳ ಅಭಿವೃದ್ದಿಗೆ ಶ್ರಮಿಸಿ ಎಂದು ಡಾ.ಸಿ.ನಾರಾಯಣಸ್ವಾಮಿ ತಿಳಿಸಿದರು. ಕೆ.ಬಾಡಗ ಹಾಗೂ ನಾಲ್ಕೇರಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಾಡಿಗಳಿದ್ದು, ಇಲ್ಲಿನ ಜನರ ಜೀವನ ಮಟ್ಟ ಸುಧಾರಿಸುವಲ್ಲಿ ಕ್ರಮವಹಿಸಿ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಕೆ.ಬಾಡಗ ಗ್ರಾ.ಪಂ.ಅಧ್ಯಕ್ಷ ರಿತೇಶ್ ಬಿದ್ದಪ್ಪ ಮಾತನಾಡಿ, ಚಿಕ್ಕ ಗ್ರಾಮ ಪಂಚಾಯಿತಿಯಾದರೂ ಸಹ ಸರ್ಕಾರದ ವಿವಿಧ ಯೋಜನೆಗಳ ಅನುದಾನವನ್ನು ಉತ್ತಮವಾಗಿ ಬಳಸಿಕೊಂಡು ಅಭಿವೃದ್ಧಿಯನ್ನು ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು. ಸಹಾಯಕ ನಿರ್ದೇಶಕ (ಗ್ರಾ.ಉ) ಎಂ.ಡಿ.ಶ್ರೀನಿವಾಸ್ ಮಾತನಾಡಿ, ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ತೋಡು ಅಭಿವೃದ್ಧಿ ಕೆರೆ ಅಭಿವೃದ್ಧಿ ಕಾಂಕ್ರೀಟ್ ರಸ್ತೆ ಹಾಗೂ ಹಲವು ವೈಯಕ್ತಿಕ ಸೌಲಭ್ಯಗಳನ್ನು ನೀಡುವಲ್ಲಿ ಉತ್ತಮವಾಗಿ ಪ್ರಗತಿ ಸಾಧಿಸಿ,…

Read More

ಕುಶಾಲನಗರ ಮೇ 6 NEWS DESK : ಕೇಂದ್ರ ಸರ್ಕಾರದ‌ ಕರಕುಶಲ ಮತ್ತು ಜವಳಿ ಮಂತ್ರಾಲಯ ಇಲಾಖೆಯ ಮೈಸೂರಿನ ‌ ಕರಕುಶಲ ವಿಸ್ತರಣಾ ಸೇವಾ ಕೇಂದ್ರದ ವತಿಯಿಂದ ಕುಶಾಲನಗರ ಪಟ್ಟಣದ ಕನ್ನಡ ಭಾರತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೇ 8 ರಿಂದ ಮೂರು ದಿನಗಳ ಕಾಲ ಕರಕುಶಲ ವಸ್ತುಗಳ ತಯಾರಿಕೆ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಬಿದಿರು ಕಲೆ, ಮರ ಕೆತ್ತನೆ, ಮಣ್ಣಿನ ಕಲಾಕೃತಿಗಳ ತಯಾರಿಕೆ ಸೇರಿದಂತೆ ಇನ್ನಿತರ ಕರಕುಶಲ ಕಲೆಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ನಿರುದ್ಯೋಗಿಗಳಿಗೆ ತರಬೇತಿ ಹಾಗೂ ಕರಕುಶಲ ಕಲೆಗಳ ಕುರಿತು ಪ್ರಾತ್ಯಕ್ಷಿಕೆ ನೀಡಲಾಗುವುದು ಎಂದು ಮೈಸೂರು ಕರಕುಶಲ ವಿಸ್ತರಣಾ ಕೇಂದ್ರದ ಸಹಾಯಕ ನಿರ್ದೇಶಕ ಎಸ್.ವಿನೋತ್ ಕುಮಾರ್ ತಿಳಿಸಿದ್ದಾರೆ. ಕರಕುಶಲ ಕಲೆಯ ಚಟುವಟಿಕೆಗಳ ಶ್ರೀಮಂತ ಪರಂಪರೆಯನ್ನು ಸಂರಕ್ಷಿಸುವ ದಿಸೆಯಲ್ಲಿ ಹಾಗೂ ಈ ಕಲೆಯನ್ನು ಉತ್ತೇಜಿಸುವ ಉದ್ದೇಶದಿಂದ ಪ್ರತಿ ಜಿಲ್ಲೆಗಳಲ್ಲಿ ಇಂತಹ ಶಿಬಿರಗಳನ್ನು ಸಂಘಟಿಸಲಾಗುತ್ತಿದೆ ಎಂದು ಶಿಬಿರದ ಜಿಲ್ಲಾ ಸಂಯೋಜಕರೂ ಆದ ರಾಜ್ಯ ಕರಕುಶಲ ಕುಶಲಕರ್ಮಿ ಪ್ರಶಸ್ತಿ ಪುರಸ್ಕೃತ ಜಿ.ಧರ್ಮಪ್ಪ ತಿಳಿಸಿದ್ದಾರೆ.…

Read More

ಮಡಿಕೇರಿ ಮೇ 6 NEWS DESK : ಜಮ್ಮು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಪಾಕಿಸ್ತಾನಿ ಪ್ರಚೋದಿತ ಉಗ್ರಗಾಮಿಗಳಿಂದ ದಾಳಿಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಇದರ ಜೊತೆಯಲ್ಲೆ ಕೊಡಗು ಜಿಲ್ಲೆಯಲ್ಲಿ ನಕಲಿ ದಾಖಲೆಗಳೊಂದಿಗೆ ಇರಬಹುದಾದ ಪಾಕಿಸ್ತಾನಿಗಳು ಹಾಗೂ ಬಾಂಗ್ಲಾದೇಶಿಗರನ್ನು ಗುರುತಿಸಿ ತಕ್ಷಣ ಹೊರಗಟ್ಟಬೇಕೆಂದು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಆಗ್ರಹಿಸಿದ್ದಾರೆ. ನಗರದಲ್ಲಿ ಕೊಡಗು ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಈಗಾಗಲೆ ಭಾರತ ಬಿಟ್ಟು ಹಿಂತೆರಳುವಂತೆ ಕೇಂದ್ರ ಸರ್ಕಾರ ಸ್ಪಷ್ಟ ಸೂಚನೆಗಳನ್ನು ನೀಡಿದೆ. ಅದರಂತೆಯೆ ಜಿಲ್ಲೆಯಲ್ಲಿ ಇರಬಹುದಾದ ಪಾಕಿಸ್ತಾನಿಗಳು ಹಾಗೂ ಬಾಂಗ್ಲಾದೇಶಿಗರ ದಾಖಲೆ ಪತ್ರಗಳನ್ನು ತೀವ್ರ ಪರಿಶೀಲನೆಗೆ ಒಳಪಡಿಬೇಕು. ನಿಯಮ ಉಲ್ಲಂಘಿಸಿ ನಕಲಿ ದಾಖಲೆಯೊಂದಿಗೆ ತಂಗಿದ್ದರೆ ಹೊರ ಕಳಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಮುಂದಾಗಬೇಕೆಂದರು. ನಿರಂತರವಾಗಿ ಭಯೋತ್ಪಾದಕರಿಗೆ ನೆರವು ನೀಡುತ್ತಾ ಭಾರತದ ನೆಲದಲ್ಲಿ ಕ್ಷೋಭೆಯನ್ನು ಉಂಟು ಮಾಡುತ್ತಿರುವ ಪಾಕಿಸ್ತಾನವನ್ನು ಭೂಪಟದಲ್ಲೆ ಇಲ್ಲದಂತೆ ಮಾಡಬೇಕೆಂದು ಅಪ್ಪಚ್ಚು ರಂಜನ್ ಅಸಮಾಧಾನ ವ್ಯಕ್ತಪಡಿಸಿದರು.…

Read More

ಮಡಿಕೇರಿ ಮೇ 6 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಮಹಿಳಾ ಸಾಹಿತಿಗಳಿಗೆ ಮೀಸಲಾಗಿ ಇಟ್ಟಿರುವ “ಶ್ರೀಮತಿ ವಿಜಯ ವಿಷ್ಣುಭಟ್ ದತ್ತಿ ಪ್ರಶಸ್ತಿ” ಗೆ ಜಿಲ್ಲೆಯ ಹಿರಿಯ ಸಾಹಿತಿ ಸ್ಮಿತಾ ಅಮೃತರಾಜ್ ರಚಿಸಿದ ಕಥಾ ಸಂಕಲನ “ಹಾಯ್ ಮೆಟಾಯ್” ಕೃತಿಯು ಪುರಸ್ಕೃತ ಗೊಂಡಿದೆ. ಜಿಲ್ಲೆಯ ಹಿರಿಯ ಸಾಹಿತಿಗಳಾದ ವಿಜಯ ವಿಷ್ಣುಭಟ್ ಸ್ಥಾಪಿಸಿರುವ ಈ ದತ್ತಿಯ ಮೊದಲ ಪ್ರಶಸ್ತಿ ಇದಾಗಿದ್ದು, ಈ ದತ್ತಿ ಪ್ರಶಸ್ತಿಯ ಆಯ್ಕೆಗಾಗಿ ಜಿಲ್ಲೆಯ ಬರಹಗಾರರ ಕೃತಿಗಳನ್ನು ಆಹ್ವಾನಿಸಿದಾಗ ಹತ್ತು ಸಾಹಿತಿಗಳು ತಮ್ಮ ಕೃತಿಗಳನ್ನು ಪ್ರಸ್ತುತಪಡಿಸಿದ್ದರು. ಜಿಲ್ಲೆಯ ಹಿರಿಯ ಮೂರು ಸಾಹಿತಿಗಳು ಪ್ರತ್ಯೇಕವಾಗಿ ಈ ಪುಸ್ತಕಗಳನ್ನು ಪರಿಶೀಲಿಸಿ ನೀಡಿದ ಅಂಕಗಳನ್ನು ಜಿಲ್ಲಾ ಸಮಿತಿ ಒಟ್ಟುಗೂಡಿಸಿ ಹತ್ತು ಜನ ಲೇಖಕರಲ್ಲಿ ಅತಿ ಹೆಚ್ಚು ಅಂಕ ಪಡೆದ “ಹಾಯ್ ಮೆಟಾಯ್” ಕೃತಿಯ ಲೇಖಕಿ ಸ್ಮಿತಾ ಅಮೃತ್ ರಾಜ್ ಸಂಪಾಜೆ ಪ್ರಶಸ್ತಿಗೆ ಪುರಸ್ತೃತಗೊಂಡಿದ್ದಾರೆ. ಮುಂದೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೊಡಗು ಜಿಲ್ಲಾ ಕನ್ನಡ…

Read More

ಬೆಂಗಳೂರು ಮೇ 6 NEWS DESK : ಶುದ್ದ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು ಎಂದು ಜಿಲ್ಲಾಧಿಕಾರಿಗಳಿಗೆ-ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಈ ಸೂಚನೆ ನೀಡಿದರು. ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು:: • ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು. ಕುಡಿಯುವ ನೀರಿನ ನಿರ್ವಹಣೆಗೆ ಯಾವುದೇ ಹಣಕಾಸಿನ ಕೊರತೆ ಇರುವುದಿಲ್ಲ. ಪಂಚಾಯತ್ ರಾಜ್ ಇಲಾಖೆಗೆ 60 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ. • ಜಿಲ್ಲೆಗಳಲ್ಲಿ ತುರ್ತು ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿ, ಟಾಸ್ಕ್ ಫೋರ್ಸ್ ನಿಂದ ಅನುಮೋದನೆ ಪಡೆದುಕೊಂಡು ಅನುಷ್ಠಾನಗೊಳಿಸಬೇಕು. • ಪ್ರತಿ ವರ್ಷ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸಲು ಯೋಜನೆ ರೂಪಿಸಬೇಕು. • ಅಗತ್ಯಬಿದ್ದರೆ…

Read More

ಮಡಿಕೇರಿ ಮೇ 6 NEWS DESK : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್, ಸುಂಟಿಕೊಪ್ಪ ಸಂತ ಅಂತೋಣಿಯವರ ದೇವಾಲಯದ ಸಂಯುಕ್ತಾಶ್ರಯದಲ್ಲಿ ಮೇ 9 ರಿಂದ 11ರ ವರೆಗೆ ಸುಂಟಿಕೊಪ್ಪದಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ, ವಿವಿಧ ಕ್ರೀಡಾಕೂಟ ಹಾಗೂ ಸಾಧಕರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಜಾನ್ಸ್‍ನ್ ಪಿಂಟೋ ಮಾತನಾಡಿ, ಸುಂಟಿಕೊಪ್ಪದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 14ನೇ ವರ್ಷದ ಪಂದ್ಯಾವಳಿಗೆ ಮೇ 9 ರಂದು ಚಾಲನೆ ದೊರೆಯಲಿದೆ ಎಂದರು. ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದು, ಮೈಸೂರು ಧರ್ಮಪ್ರಾಂತ್ಯದ ಆಡಳಿತಾಧಿಕಾರಿ, ಬೆಂಗಳೂರು ಮಹಾ ಧರ್ಮಪ್ರಾಂತ್ಯದ ವಿಶ್ರಾಂತ ಮಹಾಧರ್ಮಧ್ಯಕ್ಷರಾದ ಅತೀ ವಂದನೇಯ ಡಾ.ಬರ್ನಾಡ್ ಮೋರಾಸ್ ಆರ್ಶೀವಚನ ನೀಡಲಿದ್ದಾರೆ. ಧ್ವಜಾರೋಹಣವನ್ನು ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಧರ್ಮಗುರು ಫಾ.ವಿಜಯ್ ಕುಮಾರ್ ನೆರವೇರಿಸಲಿದ್ದಾರೆ. ಕ್ರಿಕೆಟ್…

Read More

ಕೊಡ್ಲಿಪೇಟೆ ಮೇ 6 NEWS DESK : ಧಾರ್ಮಿಕ ಸೇವಾ ಮಠ ಪರಂಪರೆಯಲ್ಲಿ ಕೊಡಗಿನ ರಾಜರ ಕೊಡುಗೆ ಅಪಾರವಾಗಿದ್ದು, ಕೊಡಗಿನ ರಾಜಾಳ್ವಿಕೆ ಕಾಲದಲ್ಲಿ 108 ಮಠಗಳು ಅಸ್ಥಿತ್ವದಲ್ಲಿದೆ. ಈ ಪೈಕಿ ಕಲ್ಲುಮಠವು ಅಸ್ಥಿತ್ವವನ್ನು ಉಳಿಸಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ತುಮಕೂರು ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಶ್ರೀ ಸಿದ್ದಲಿಂಗಸ್ವಾಮೀಜಿ ಹೇಳಿದರು. ಕೊಡ್ಲಿಪೇಟೆ ಸಮಿಪದ ಶ್ರೀ ಕಲ್ಲುಮಠದ ಮಠಾದೀಶ ಶ್ರೀ ಮಹಂತಸ್ವಾಮೀಗಳು ಮಠದ ಪೀಠಾಧ್ಯಕ್ಷರಾಗಿ 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸ್ವಾಗತ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಶ್ರೀಗಳ ಪೀಠೋಹಣದ ಸುವರ್ಣ ಮಹೋತ್ಸವ, ಶ್ರೀ ಬಸವೇಶ್ವರ ಜಯಂತಿ, ಡಾ.ಶಿವಕುಮಾರ ಸ್ವಾಮಿ ಜಯಂತಿ, ಶ್ರೀ ನಂಜುಂಡ ಸ್ವಾಮೀಜಿ ಸಂಸ್ಮರಣೋತ್ಸವ ಹಾಗೂ ಮಠದ ಶ್ರೀ ನಂಜುಂಡೇಶ್ವರ ವಿದ್ಯಾಸ್ಥೆಯ ೨೫ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮ ಧಾರ್ಮಿಕ ಸಮಾರಂಭದಲ್ಲಿ ಅವರು ಮಾತನಾಡಿದರು.  ಮಠ ಮಾನ್ಯಗಳು ಧಾರ್ಮಿಕ, ಆದ್ಯಾತ್ಮಿಕ, ಸಾಮಾಜಿಕ ಸೇವಾ ಪರಂಪರೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಹಿಂದೆ ಅಸ್ತಿತ್ವದಲ್ಲಿದ್ದ ಮಠಗಳು ಇಂದಿನ ಕಾಲಘಟ್ಟದಲ್ಲಿ ಕಡಿಮೆಯಾಗುತ್ತಿವೆ ಕೊಡಗಿನ ರಾಜಾಳ್ವಿಕೆ ಕಾಲದಲ್ಲಿ ನೂರಾರು ಮಠ ಪರಂಪರೆ…

Read More

ಕುಶಾಲನಗರ ಮೇ 6 NEWS DESK : ದೇಶದ ಎಲ್ಲೆಡೆ ಹಿಂದುಗಳ ರಕ್ಷಣೆ ಸಂಬಂಧ ಶಕ್ತಿಯುತ ಜಾಗೃತ ಸಮಾಜ ನಿರ್ಮಾಣದ ಅಗತ್ಯತೆ ಇದೆ ಎಂದು ಮಾಜಿ ಶಾಸಕ ಕೆ.ಜಿ.ಬೋಪಯ್ಯ ಕರೆ ನೀಡಿದ್ದಾರೆ. ಕುಶಾಲನಗರದಲ್ಲಿ ನಡೆದ ಮಿಷನ್ ಮೋದಿ ಡೆಮಾಕ್ರಸಿ ಡೆವಲಪ್ಮೆಂಟ್ ಟ್ರಸ್ಟ್ ಆಶ್ರಯದಲ್ಲಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದುಗಳ ಹತ್ಯೆ ಹಾಗೂ ಹಿಂದೂ ಕಾರ್ಯಕರ್ತರ ಕಗ್ಗೊಲೆಯನ್ನು ಖಂಡಿಸಿ ನಡೆದ ಮೌನ ಮೆರವಣಿಗೆ ಮತ್ತು ಪ್ರತಿಭಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಶ್ಮೀರದಲ್ಲಿ ನಡೆದ ಉಗ್ರರ ಕೃತ್ಯವನ್ನು ಖಂಡಿಸಿದ ಬೋಪಯ್ಯ ಅಮಾಯಕ ಯುವಕ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಕಾರಣಕರ್ತರಾದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಒಂದು ತಿಂಗಳು ಕಳೆದರೂ ಇನ್ನೂ ಆರೋಪಿಗಳನ್ನು ಬಂಧಿಸಿಲ್ಲ ಎಂದ ಅವರು, ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹಿಸಿದರು. ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಒತ್ತಾಯಿಸಿದರು. ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹಿಂದುಗಳ ಹತ್ಯೆಗಳು…

Read More

ಮಡಿಕೇರಿ, ಮೇ 6 NEWS DESK : ನಗರದ ಅಶೋಕಪುರದ ಶ್ರೀ ವೀರಭದ್ರ, ಪಾಷಾಣ ಮೂರ್ತಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೇಮೋತ್ಸವ ನಡೆಯಿತು. ಪಂಜುರ್ಲಿ, ಕಲ್ಕುಡ, ಪಾಷಾಣ ಮೂರ್ತಿ, ಗುಳಿಗ, ಕೊರ್ತಿ, ಕಲ್ಲುರ್ಟಿ ಹಾಗೂ ಕೊರಗಜ್ಜ ದೈವಗಳ ಕೋಲಗಳು ನಡೆದವು. ನಗರ ಸೇರಿದಂತೆ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತರು ದೈವಗಳ ದರ್ಶನ ಪಡೆದರು. ಇದೇ ಸಂದರ್ಭ ಭಕ್ತರಿಗೆ ಅನ್ನಸಂತರ್ಪಣೆ ನಡೆಸಲಾಯಿತು. ದೇವಾಲಯ ಅರ್ಚಕ ರಾಜೇಶ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯ ನಡೆಯಿತು.

Read More