ಲೇಖಕ: admin

ಸೋಮವಾರಪೇಟೆ ಜು.3 NEWSDESK : ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿಯಲ್ಲಿ ಕಳೆದ 36 ವರ್ಷಗಳ ಕಾಲ ವಾಹನ ಚಾಲಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಬಿ.ಕೆ.ಗೋಪಾಲ್ ಅವರನ್ನು ತಾಲ್ಲೂಕು ಪಂಚಾಯಿತಿ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಇಒ ಪರಮೇಶ್‍ಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳಾದ ಶ್ರೀನಿವಾಸ್, ರಾಕೇಶ್ ಸೇರಿದಂತೆ ಕಚೇರಿ ಸಿಬ್ಬಂದಿಗಳು ಹಾಜರಿದ್ದರು.

Read More

ಮಡಿಕೇರಿ ಜು.3 NEWS DESK  : ಕರ್ನಾಟಕ ವಿಕಾಸ ರಂಗದ ಜಿಲ್ಲಾಧ್ಯಕ್ಷರಾಗಿ ಪಿ.ಎಸ್.ವೈಲೇಶ ನೇಮಕಗೊಂಡಿದ್ದಾರೆ.  ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಯ ಸಂವರ್ಧನೆಗಾಗಿ, ನೆಲ-ಜಲದ ರಕ್ಷಣೆಗಾಗಿ ಶ್ರಮಿಸುವ ಧ್ಯೇಯೋದ್ಧೇಶಗಳೊಂದಿಗೆ ಕರ್ನಾಟಕ “ವಿಕಾಸರಂಗ” ರಾಜ್ಯಮಟ್ಟದಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಕೊಡಗು ಜಿಲ್ಲಾಧ್ಯಕ್ಷರಾಗಿ ಪಿ.ಎಸ್.ವೈಲೇಶ ಅವರನ್ನು ನೇಮಕ ಮಾಡಲಾಗಿದೆಯೆಂದು ಕರ್ನಾಟಕ ವಿಕಾಸ ರಂಗದ ಸಂಸ್ಥಾಪಕರು ಮತ್ತು ರಾಜ್ಯಾಧ್ಯಕ್ಷರಾದ ವ.ಚ.ಚನ್ನೇಗೌಡರು ತಿಳಿಸಿದ್ದಾರೆ.

Read More

ಮಡಿಕೇರಿ ಜು.10 NEWS DESK : ಗುರು ಪೂರ್ಣಿಮೆ (ಪೂರ್ಣಿಮೆ), ಶಿಷ್ಯನ ಜೀವನದಲ್ಲಿ ಅತ್ಯಂತ ಮುಖ್ಯವಾದ ದಿನವಾಗಿದ್ದು, ಗುರು ಮತ್ತು ಗುರು ತತ್ವವನ್ನು (ತತ್ವ) ಆಚರಿಸುವ ದಿನವಾಗಿದೆ. ಮೋಕ್ಷ (ವಿಮೋಚನೆ) ಯ ಮಾರ್ಗವನ್ನು ತೋರಿಸುವ ಜೊತೆಗೆ ನಮ್ಮ ಕೈ ಹಿಡಿದು ಅದರತ್ತ ನಮ್ಮನ್ನು ಕರೆದೊಯ್ಯುವ ಗುರುವಿಗೆ ನಮ್ಮ ಕೃತಜ್ಞತೆಯನ್ನು ಸಲ್ಲಿಸುವ ದಿನ ಇದು. ಗುರು-ಶಿಷ್ಯ ವಂಶದ ಸ್ಥಾಪಕ ಆದಿ ಗುರು ಋಷಿ ವ್ಯಾಸರನ್ನು ಈ ದಿನದಂದು ಪೂಜಿಸಲಾಗುತ್ತದೆ. ಆದ್ದರಿಂದ, ಇದನ್ನು ವ್ಯಾಸ ಪೂರ್ಣಿಮೆ ಎಂದೂ ಕರೆಯಲಾಗುತ್ತದೆ. ಈ ವರ್ಷ, ಗುರು ಪೂರ್ಣಿಮೆಯನ್ನು ಜುಲೈ 10, 2025 ರ ಗುರುವಾರದಂದು ಆಚರಿಸಲಾಗುತ್ತದೆ. ಗುರು ದೇವರ ಭೌತಿಕ ಅಭಿವ್ಯಕ್ತಿ. ಹಿಂದೂ ಸಂಸ್ಕೃತಿಯು ಗುರುವನ್ನು ದೇವರಿಗಿಂತ ಉನ್ನತ ಪೀಠದಲ್ಲಿ ಇರಿಸಿದೆ; ಏಕೆಂದರೆ ಗುರುವು ಅನ್ವೇಷಕನಿಗೆ ದೇವರ ಸಾಕ್ಷಾತ್ಕಾರಕ್ಕಾಗಿ ಆಧ್ಯಾತ್ಮಿಕ ಅಭ್ಯಾಸವನ್ನು ಕಲಿಸುತ್ತಾನೆ, ಅದನ್ನು ಅವನಿಂದ ಮಾಡಿಸುತ್ತಾನೆ ಮತ್ತು ದೇವರನ್ನು ಅರಿತುಕೊಳ್ಳಲು ಅವನಿಗೆ ಸಹಾಯ ಮಾಡುತ್ತಾನೆ. ಗುರುವು ಜೀವಿತಾವಧಿಯಲ್ಲಿ ನಿರಂತರವಾಗಿ ಶಿಷ್ಯರಿಗೆ ವಿವಿಧ ರೀತಿಯಲ್ಲಿ ಮಾರ್ಗದರ್ಶನ ನೀಡುತ್ತಾನೆ…

Read More

ಮಡಿಕೇರಿ ಜು.3 NEWS DESK : ನಾಪೋಕ್ಲು ಚೋನಕೆರೆ ನಿವಾಸಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೊಂಬಂಡ ಕೆ.ಗಣೇಶ್(78) ಇಂದು ನಿಧನರಾದರು. ಅಂತ್ಯಕ್ರಿಯೆ ನಾಳೆ (ಜು.4)  ರಂದು ಮೃತರ ಸ್ವಗೃಹದಲ್ಲಿ ಜರುಗಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಜು.2 : ಐತಿಹಾಸಿಕ ಮಡಿಕೇರಿ ದಸರಾದ ಆಕರ್ಷಣೆಗಳಲ್ಲಿ ಒಂದಾದ ದಶಮಂಟಪಗಳ ಸಮಿತಿಯ ನೇತೃತ್ವವನ್ನು 2025ರಲ್ಲಿ ಶ್ರೀ ಕೋಟೆ ಮಹಾಗಣಪತಿ ದೇವಾಲಯದ ದಸರಾ ಸಮಿತಿ ವಹಿಸಿಕೊಳ್ಳುತ್ತಿದ್ದು, ಅಧ್ಯಕ್ಷರಾಗಿ ಬಿ.ಎಂ.ಹರೀಶ್ ಅಣ್ವೇಕರ್ ಆಯ್ಕೆಯಾಗಿದ್ದಾರೆ. ನಗರದ ಲಯನ್ಸ್ ಸಭಾಂಗಣದಲ್ಲಿ ನಡೆದ ಶ್ರೀ ಕೋಟೆ ಮಹಾಗಣಪತಿ ಸಮಿತಿಯ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕೋಟೆ ಶ್ರೀ ಮಹಾಗಣಪತಿ ದಸರಾ ಮಂಟಪ ಸಮಿತಿಯ ಅಧ್ಯಕ್ಷರಾಗಿ ವಿಘ್ನೇಶ್ ಸಿ.ಯು ಆಯ್ಕೆಗೊಂಡರು.  ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಅದ್ದೂರಿ ದಸರಾ ಆಚರಣೆಯ ಕುರಿತು ಚರ್ಚಿಸಿದರು. ಇದೇ ಸಂದರ್ಭ ಮಡಿಕೇರಿ ನಗರ ಸಂಚಾರಿ ಪೊಲೀಸ್ ಠಾಣೆಯಿಂದ ಕುಶಾನಗರಕ್ಕೆ ವರ್ಗಾವಣೆಗೊಂಡ ಎಎಸ್‌ಐ ನಂದ ಐ.ಪಿ ಅವರನ್ನು ಸಮಿತಿ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. *ಪುಸ್ತಕ ಬಿಡುಗಡೆ* 49ನೇ ವರ್ಷದ ದಸರಾ ಆಚರಣೆಯ ಸಂಭ್ರಮದಲ್ಲಿರುವ ಶ್ರೀ ಕೋಟೆ ಮಹಾಗಣಪತಿ ದಸರಾ ಸಮಿತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ದಸರಾ ವಂತಿಗೆ ಸಂಗ್ರಹದ ಪುಸ್ತಕವನ್ನು ಬಿಡುಗಡೆಗೊಳಿಸಿತು.

Read More

ಮಡಿಕೇರಿ ಜು.2 NEWS DESK : ನೆಲ್ಲಿಹುದಿಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ 7ನೇ ವಾರ್ಡ್‍ನ ಸರ್ವೇ ನಂಬರ್ 177/1 ರಲ್ಲಿ ಸಾರ್ವಜನಿಕ ಸ್ಮಶಾನಕ್ಕಾಗಿ ಜಾಗವನ್ನು ಮಂಜೂರು ಮಾಡಲು ತಾಲ್ಲೂಕು ಆಡಳಿತ ಉದ್ದೇಶಿಸಿದ್ದು, ಇದನ್ನು ವಿರೋಧಿಸಿ ನೆಲ್ಲಿಹುದಿಕೇರಿ ಮುಸ್ಲಿಂ ಜಮಾಅತ್ ಸಮಿತಿ ವತಿಯಿಂದ ಜು.4 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ಒ.ಎಂ.ಅಬ್ದುಲ್ಲ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಸ್ತುತ ಸಾರ್ವಜನಿಕ ಸ್ಮಶಾನಕ್ಕಾಗಿ ಗುರುತಿಸಿರುವ ಜಾಗವು 60 ಪ್ರವಾಹ ಪೀಡಿತ ಕುಟುಂಬಗಳು ವಾಸಿಸುತ್ತಿರುವ ಜನವಸತಿ ಪ್ರದೇಶದ ಸಮೀಪದಲ್ಲಿದೆ. ಇಲ್ಲಿ ಸ್ಮಶಾನ ನಿರ್ಮಾಣವಾದರೆ ಆರೋಗ್ಯ ಮತ್ತು ಪರಿಸರ ಮಾಲಿನ್ಯದ ಸಮಸ್ಯೆಗಳು ಎದುರಾಗಿ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಆದ್ದರಿಂದ ಆಡಳಿತ ವ್ಯವಸ್ಥೆ ಸ್ಮಶಾನಕ್ಕೆ ಪರ್ಯಾಯ ಜಾಗವನ್ನು ಗುರುತಿಸಲಿ ಎಂದು ಒತ್ತಾಯಿಸಿದ್ದಾರೆ. ಅಧಿಕಾರಿಗಳು ಸ್ಮಶಾನದ ಜಾಗವನ್ನು ಗುರುತಿಸುವ ಸಂದರ್ಭ ವೈಜ್ಞಾನಿಕ ಚಿಂತನೆ ಮಾಡಬೇಕು, ಪರಿಸರದ ಬಗ್ಗೆ ಕಾಳಜಿ ವಹಿಸಬೇಕು ಮತ್ತು ಸ್ಥಳೀಯ ನಿವಾಸಿಗಳ ಅಭಿಪ್ರಾಯವನ್ನು ಸಂಗ್ರಹಿಸಬೇಕು. ಆದರೆ ಇದು ಯಾವುದನ್ನೂ ಮಾಡದೆ…

Read More

ಮಡಿಕೇರಿ ಜು.2 NEWS DESK : ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಬೃಹತ್ ಕೊಡುಗೆಯಾದ ‘ವಚನ’ಗಳನ್ನು ಸಂರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಡಾ.ಫ.ಗು.ಹಳಕಟ್ಟಿ ಅವರ ದೂರದೃಷ್ಟಿ ಮತ್ತು ಮೌಲ್ಯಗಳು ಪ್ರತಿಯೊಬ್ಬರಿಗೂ ಮಾದರಿ ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಉಪನ್ಯಾಸಕ ಮಾರುತಿ ದಾಸಣ್ಣವರ್ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿಭವನದಲ್ಲಿ ಡಾ.ಫ.ಗು.ಹಳಕಟ್ಟಿ ಅವರ ಜನ್ಮದಿನದ ಪ್ರಯುಕ್ತ ನಡೆದ ವಚನ ಸಾಹಿತ್ಯ ಸಂರಕ್ಷಣೆ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಚನ ಸಂಶೋಧನೆ, ಸಂಗ್ರಹಣೆ, ಪರಿಷ್ಕರಣೆ, ಮುದ್ರಣ, ಪ್ರಕಾಶನ, ಪ್ರಚಾರ, ಪ್ರಸಾರ ಹಾಗೂ ಇಂಗ್ಲೀಷ್ ಭಾಷೆಗೆ ವಚನಗಳ ಅನುವಾದ ಇವುಗಳಲ್ಲಿ ತೊಡಗಿಸಿಕೊಂಡು ವಚನಗಳನ್ನು ಮುಂದಿನ ಪೀಳಿಗೆಗೆ ಕಟ್ಟಿಕೊಟ್ಟರು ಎಂದು ಮಾರುತಿ ದಾಸಣ್ಣವರ್ ವಿವರಿಸಿದರು. ವಚನ ಸಾಹಿತ್ಯ, ಅಂಕಣ ಬರಹಗಳು ಇಂತಹ ಅಮೂಲ್ಯ ಗ್ರಂಥಗಳನ್ನು ಸಂಗ್ರಹಿಸಿ ಪ್ರಕಟಿಸಿ, ನಾಡಿಗೆ ನೀಡಿದ ಡಾ.ಫ.ಗು.ಹಳಕಟ್ಟಿ ಅವರನ್ನು ಸದಾ ಸ್ಮರಿಸುವಂತಾಗಬೇಕು ಎಂದರು. ಶಿಕ್ಷಣ ನಂತರ ಆರಂಭದಲ್ಲಿ ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಫ.ಗು.ಹಳಕಟ್ಟಿ …

Read More

ಸೋಮವಾರಪೇಟೆ ಜು.2 NEWS DESK : ಸೋಮವಾರಪೇಟೆ ತಾಲ್ಲೂಕು ದೊಡ್ಡಮಳ್ತೆ ಗ್ರಾಮ ಪಂಚಾಯಿತಿಯ ಜೇನಿಗರಕೊಪ್ಪ ಗ್ರಾಮ ಸಂಪರ್ಕ ರಸ್ತೆ ಮಳೆಯಿಂದ ಕುಸಿಯುತ್ತಿದ್ದು, ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಹಾಗೂ ಪಿಡಿಒ ಸ್ಮಿತಾ ಭೇಟಿ ನೀಡಿ ಪರಿಶೀಲಿಸಿದರು. ಕಂದಾಯ ಇಲಾಖೆಯ ಸಿಬ್ಬಂದಿಗಳು ಇದ್ದರು.

Read More

ಮಡಿಕೇರಿ ಜು.2 NEWS DESK : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್‍ನ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.9 ರಂದು ನಡೆಯಲಿದೆ. ನಗರದ ಕೊಡವ ಸಮಾಜದಲ್ಲಿ ಸಂಜೆ 6 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿಂದಿನ ಜಿಲ್ಲಾ ಗವರ್ನರ್ ರೋಟರಿಯನ್ ಹೆಚ್.ಆರ್.ಕೇಶವ್, ಅತಿಥಿಗಳಾಗಿ ವಲಯ 6ರ ಸಹಾಯಕ ಗವರ್ನರ್ ಧಿಲ್ಲನ್ ಚೆಂಗಪ್ಪ ಹಾಗೂ ಝೋನಲ್ ಲೆಫ್ಟಿನೆಂಟ್ ರೋಟರಿಯನ್ ಕೆ.ಸಿ.ಕಾರ್ಯಪ್ಪ ಪಾಲ್ಗೊಳ್ಳಲಿದ್ದಾರೆ. 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋಟರಿಯನ್ ಬಿ.ಎನ್.ರತ್ನಾಕರ್ ರೈ ಹಾಗೂ ಕಾರ್ಯದರ್ಶಿಯಾಗಿ ರೋಟರಿಯನ್ ಬಿ.ಕೆ.ಕಾರ್ಯಪ್ಪ ಅಧಿಕಾರ ಸ್ವೀಕರಿಸಲಿದ್ದಾರೆ.

Read More

ಮಡಿಕೇರಿ ಜು.2 NEWS DESK : ಪೊನ್ನಂಪೇಟೆಯ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ವಿಭಾಗದ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿನಿ ಶೈಲಜಾ 9.55 ಸಿಜಿಪಿಎ ಅಂಕಗಳೊಂದಿಗೆ 2021-25ನೇ ಶೈಕ್ಷಣಿಕ ಸಾಲಿನ ವಿಟಿಯು ಇಂಜಿನಿಯರಿಂಗ್ ಪದವಿಯಲ್ಲಿ ರಾಜ್ಯ ಮಟ್ಟದಲ್ಲಿ 3ನೇ ರ‍್ಯಾಂಕ್ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಬಸವರಾಜ್ ಅವರ ಮುಂದಾಳತ್ವದಲ್ಲಿ ವಿಭಾಗದ ಮುಖ್ಯಸ್ಥರಾದ ಡಾ.ರಾಮಕೃಷ್ಣ ಬಿ.ಬಿ ಹಾಗೂ ಅಧ್ಯಾಪಕರ ಸಮರ್ಥ ಮಾರ್ಗದರ್ಶನದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ವಿದ್ಯಾರ್ಥಿನಿ ಶೈಲಜಾ ಅವರ ಈ ಸಾಧನೆಗೆ ಕೊಡವ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಡಾ.ಎಂ.ಸಿ.ಕಾರ್ಯಪ್ಪ, ಉಪಾಧ್ಯಕ್ಷ ಕೆ.ಎಂ.ಚಿಣ್ಣಪ್ಪ, ಕಾರ್ಯದರ್ಶಿ ರಾಕೇಶ್ ಪೂವಯ್ಯ, ನಿರ್ದೇಶಕರುಗಳು, ಕಾಲೇಜಿನ ಪ್ರಾಂಶುಪಾಲರು, ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ಕಾಲೇಜು ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

Read More