ಮಡಿಕೇರಿ NEWS DESK ಜೂ.5 : ಕಳೆದ ಒಂದು ವರ್ಷದಲ್ಲಿ ಕೊಡಗು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಮತ್ತು ಸಮಸ್ಯೆಗಳಿಗೆ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ನಿರೀಕ್ಷೆಗೂ ಮೀರಿ ಸ್ಪಂದಿಸಿದ್ದಾರೆ ಎಂದು ವಿರಾಜಪೇಟೆ ಮಂಡಲ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಶ್ಲಾಘಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 11 ವರ್ಷಗಳನ್ನು ಪೂರೈಸಿದೆ. ಯದುವೀರ್ ಒಡೆಯರ್ ಅವರು ಸಂಸದರಾಗಿ ಒಂದು ವರ್ಷ ಪೂರೈಸಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಸಂಸದರು ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಸಂಸದ ಯದುವೀರ್ ಅವರು ಕೊಡಗಿನ ಬಗ್ಗೆ ಕಾಳಜಿ ವಹಿಸದೆ ಮೈಸೂರಿಗೆ ಸೀಮಿತವಾಗಿದ್ದಾರೆ ಎಂದು ಕೆಲವರು ನೀಡಿರುವ ಹೇಳಿಕೆ ಖಂಡನೀಯ. ಮುಂಬರುವ ಜಿ.ಪಂ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳು ಹಾಗೂ ಪತ್ರಕರ್ತರ ಸೋಗಿನ ರಾಜಕಾರಣಿಗಳು ಕಾಂಗ್ರೆಸ್ ನಾಯಕರನ್ನು ಮೆಚ್ಚಿಸುವುದಕ್ಕಾಗಿ ಸಂಸದರ ಕುರಿತು ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಂಸದರು ಕೊಡಗು…
ಲೇಖಕ: admin
ಮಡಿಕೇರಿ ಜೂ.4 NEWS DESK : ಪಿಂಚಣಿ ಅದಾಲತ್ನ ಮುಂದಿನ ಸಭೆಯು ಜೂ.9 ರಂದು ಮಧ್ಯಾಹ್ನ 12 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ, ಸಿದ್ದಾಪುರ ರಸ್ತೆ ಅಶೋಕ್ ಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಪೋಸ್ಟಲ್ ಪಿಂಚಣಿ ಸಂಬಂಧಿಸಿದ ಎಲ್ಲಾ ತರಹದ ಅಹವಾಲುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ಅಹವಾಲುಗಳಿದ್ದಲ್ಲಿ ‘ಪಿಂಚಣಿ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಜೂನ್, 06 ರೊಳಗೆ ತಲುಪುವಂತೆ ಕಳುಹಿಸಲು ಕೋರಿದೆ. ನಂತರ ಜೂ.9 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಜೂ.4 NEWS DESK : ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ, ಉದ್ಯೋಗ, ಆರೋಗ್ಯ, ನೀರಾವರಿ, ಕೈಗಾರಿಕೆ, ವಿದ್ಯುತ್, ಆರ್ಥಿಕ, ಹೀಗೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದರು ಎಂದು ಸಾಹಿತಿ ಹಾಗೂ ಆಕಾಶವಾಣಿ ನಿವೃತ್ತ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಸ್ಮರಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಬುಧವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ‘ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141 ನೇ ಜನ್ಮದಿನೋತ್ಸವ ಹಾಗೂ ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದ ಶ್ರೇಷ್ಠ ರಾಜರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಮೇಲ್ಪಂಕ್ತಿಯಿಂದ ಕೂಡಿತ್ತು, ಆಡಳಿತದಲ್ಲಿ ಜನರು ಪಾಲ್ಗೊಳ್ಳುವಂತೆ ಮಾಡಿದ್ದರು ಎಂದು ನುಡಿದರು.…
ಮಡಿಕೇರಿ ಜೂ.4 NEWS DESK : ವಿರಾಜಪೇಟೆ ಹೋಬಳಿಯ ಆರ್ಜಿ ಗ್ರಾಮದ ಮನೆ ಹಾನಿ ಪ್ರದೇಶಕ್ಕೆ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಡಿಕೇರಿ ಜೂ.4 NEWS DESK : ಕೊಡಗು ಪ್ರೆಸ್ ಕ್ಲಬ್ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜೂ.8 ರಂದು ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ ಎಂದು ಕೊಡಗು ಪ್ರೆಸ್ ಕ್ಲಬ್ನ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ. ನಂತರ 11.30 ಗಂಟೆಗೆ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಅಂದಿನ ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ(ಪರೀಕ್ಷಾಂಗ) ಮೇಚಿರ ರವಿಶಂಕರ್ ನಾಣಯ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಬಿ.ಆರ್.ಸವಿತಾ ರೈ, ಮಡಿಕೇರಿ ತಾಲೂಕಿನ…
ಮಡಿಕೇರಿ ಜೂ.4 NEWS DESK : ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿನಲ್ಲಿ ಹೆಚ್ಚು ಅಂಕ ಗಳಿಸಿದರೆ ಮಾತ್ರ ಸಾಲದು, ಉತ್ತಮ ಸಂಸ್ಕೃತಿಯನ್ನು ಕೂಡ ಮೈಗೂಡಿಸಿಕೊಳ್ಳಬೇಕು ಎಂದು ಹಿಂದೂ ಮಲಯಾಳಿ ಸಂಘದ ಸ್ಥಾಪಕಾಧ್ಯಕ್ಷ ಕೆ.ಎಸ್.ರಮೇಶ್ ಅವರು ಕರೆ ನೀಡಿದ್ದಾರೆ. ಮಡಿಕೇರಿ ಹಿಂದೂ ಮಲಯಾಳಿ ಸಂಘದ ವತಿಯಿಂದ ನಗರದಲ್ಲಿ ನಡೆದ 1 ರಿಂದ 10ನೇ ತರಗತಿಯವರೆಗಿನ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷಣ ಎಲ್ಲರಿಗೂ ಅಗತ್ಯವಿದೆ, ಶಿಕ್ಷಣದೊಂದಿಗೆ ಮಕ್ಕಳು ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು. ಪೋಷಕರು ತಮ್ಮ ಮಕ್ಕಳಿಗೆ 10ನೇ ತರಗತಿಯಿಂದಲೇ ಮನೆ ಕೆಲಸದಿಂದ ಆರಂಭಗೊಂಡು ಎಲ್ಲಾ ಚಟುವಟಿಕೆಗಳನ್ನು ಮನವರಿಕೆ ಮಾಡಿಕೊಡಬೇಕು. ದೈಹಿಕ ಮತ್ತು ಮಾನಸಿಕವಾಗಿ ವಿಕಸನ ಹೊಂದಲು ಮಾರ್ಗದರ್ಶನ ಮಾಡಬೇಕೆಂದು ಕೆ.ಎಸ್.ರಮೇಶ್ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ವಿ.ಧರ್ಮೇಂದ್ರ ಅವರು ಪೋಷಕರು ತಮ್ಮ ಆಸೆ ಆಕಾಂಕ್ಷೆಗಳನ್ನು ಮನವರಿಕೆ ಮಾಡುವ ಭರದಲ್ಲಿ ಮಕ್ಕಳಿಗೆ ಮಾನಸಿಕ ಒತ್ತಡ…
ಬೆಂಗಳೂರು ಜೂ.4 NEWS DESK : ಮೊದಲ ಬಾರಿ ಐಪಿಎಲ್ ಚಾಂಪಿಯನ್ಸ್ ಆಗಿ ಬೆಂಗಳೂರಿಗೆ ಆಗಮಿಸಿದ ಬೆಂಗಳೂರು ರಾಯಲ್ ಚಾಲೆಂಜರ್ಸ್ (RCB) ತಂಡವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಸರ್ಕಾರದ ಪರವಾಗಿ ಸ್ವಾಗತಿಸಿದರು. ಆರ್ಸಿಬಿ ತಂಡಕ್ಕೆ ರಾಜ್ಯ ಸರ್ಕಾರ ಇಂದು ವಿಧಾಸೌಧದ ಮುಂದೆ ಭವ್ಯವಾದ ಅಭಿನಂದನಾ ಸಮಾರಂಭ ಆಯೋಜಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರು ಮತ್ತು ಶಾಸಕರು ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಜತ್ ಪಟಿದಾರ್ ನೇತೃತ್ವದ ತಂಡವನ್ನು ಸನ್ಮಾನಿಸಲಿದ್ದಾರೆ. ಐಪಿಎಲ್ ಕಪ್ ಜಯಿಸಿ ತವರಿಗೆ ಮರಳಿರುವ RCB ತಂಡಕ್ಕೆ ಬೆಂಗಳೂರಿನಲ್ಲಿ ಅಭಿಮಾನಿಗಳಿಂದಲೂ ಅದ್ದೂರಿ ಸ್ವಾಗತ ದೊರೆತಿದೆ.
ಮಡಿಕೇರಿ ಜೂ.4 NEWS DESK : ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ, ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ, ಹೀಗೆ ವಿವಿಧ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 30 ಕೊನೆಯ ದಿನವಾಗಿದೆ. ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ www.kaad.karnataka.gov.in, ಸವಿತಾ ಸಮಾಜ ಅಭಿವೃದ್ಧಿ ನಿಗಮ www.kssd.karnataka.gov.in, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ www.dbcdc.karnataka.gov.in, ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ https://kvldcl.karnataka.gov.in, ಕರ್ನಾಟಕ ಮಡಿವಾಳ…
ಮಡಿಕೇರಿ ಜೂ.4 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ನಗರಸಭೆ ಮಡಿಕೇರಿ, ವಕೀಲರ ಸಂಘ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲಾ ಸಮಿತಿ, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಜೂ.5 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ಗಾಂಧಿ ಭವನದಲ್ಲಿ ವಿಶ್ವ ಪರಿಸರ ದಿನಾಚರಣೆ ‘ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸಿ’ ವಿಷಯದಡಿ ಕಾರ್ಯಕ್ರಮ ನಡೆಯಲಿದೆ. ಜೂ.5 ರಂದು ಬೆಳಗ್ಗೆ 10 ಗಂಟೆಗೆ ಗಾಂಧಿ ಭವನ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ. ನಂತರ ಬೆಳಗ್ಗೆ 10.30 ಗಂಟೆಗೆ ಗಾಂಧಿ ಭವನದಲ್ಲಿ…
ಮಡಿಕೇರಿ ಜೂ.4 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 8 ಗ್ರಾಮ ಪಂಚಾಯತ್ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ(1), ಪೊನ್ನಂಪೇಟೆ ತಾಲ್ಲೂಕಿನ ನಾಲ್ಕೇರಿ(1), ಕೆ.ಬಾಡಗ(1), ನಿಟ್ಟೂರು(1), ಬಲ್ಯಮಂಡೂರು(1), ಕಿರುಗೂರು (1), ಮಡಿಕೇರಿ ತಾಲ್ಲೂಕಿನ ಹಾಕತ್ತೂರು (1), ಕರಿಕೆ(1). ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in ಲಿಂಕ್ನ ಮೂಲಕ ಅರ್ಜಿ ಸಲ್ಲಿಸಲು ಜೂನ್, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ care@blsinternational.net ಈ-ಮೇಲ್ ಐಡಿಯನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ.






