ಗುಂಡ್ಲುಪೇಟೆ NEWS DESK ಜು.2 : ಚಾಮರಾಜನಗರದ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ 5 ಹುಲಿಗಳನ್ನು ವಿಷವಿಟ್ಟು ಕೊಂದು ಹಾಕಿದ ಘಟನೆಯ ಬೆನ್ನಲ್ಲೇ ಮತ್ತೊಂದು ಅಮಾನವೀಯ ಕೃತ್ಯ ನಡೆದಿದೆ. ಸುಮಾರು 20 ಕೋತಿಗಳು ಅಸಹಜ ರೀತಿಯಲ್ಲಿ ಸಾವನ್ನಪ್ಪಿರುವ ಪ್ರಕರಣ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ ಬೆಳಕಿಗೆ ಬಂದಿದೆ. ವಿಷ ಪ್ರಾಶನದಿಂದ ಕೋತಿಗಳು ಮೃತಪಟ್ಟಿರುವ ಕುರಿತು ಶಂಕೆ ವ್ಯಕ್ತವಾಗಿದೆ. ರಸ್ತೆ ಬದಿ ಎರಡು ಚೀಲಗಳಲ್ಲಿ ಕೋತಿಗಳ ಮೃತದೇಹಗಳು ಕಂಡು ಬಂದಿದ್ದು, ಸಾರ್ವಜನಿಕರು ನೀಡಿದ ಮಾಹಿತಿ ಹಿನ್ನೆಲೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕೋತಿಗಳಿಗೆ ವಿಷವಿಟ್ಟು ಕೊಂದು ಹಾಕಿರುವ ಶಂಕೆ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹುಲಿ ಮತ್ತು ಕೋತಿಗಳ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪರಿಸರವಾದಿಗಳು ಹಾಗೂ ವನ್ಯಜೀವಿ ಪ್ರೇಮಿಗಳು ಕಠಿಣ ಶಿಕ್ಷೆಯ ಮೂಲಕ ಮಾನವನ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದ್ದಾರೆ.
ಲೇಖಕ: admin
ಮಡಿಕೇರಿ ಜು.2 NEWS DESK : ಚೆಟ್ಟಿಮಾನಿ ಅಂಗನವಾಡಿಯಲ್ಲಿ ಎಲ್ ಕೆ ಜಿ ಪ್ರಾರಂಭೋತ್ಸವ ಹಾಗೂ ಅಂಗನವಾಡಿ ನಿವೃತ್ತ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷ ದಿನೇಶ್ ಮಾತನಾಡಿ, ಮಕ್ಕಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು. ಪೂರ್ವಭಾವಿ ಸಭೆಯಲ್ಲಿ ಹೆಚ್ಚುವರಿ ಕೊಠಡಿಯ ಬೇಡಿಕೆಯನ್ನು ಸಲ್ಲಿಸಿದ್ದು, ಅದನ್ನು ನೆರವೇರಿಸುವುದಾಗಿ ಭರವಸೆ ನೀಡಿದರು. ಮಾದರಿ ಎಲ್ ಕೆ ಜಿ ಕೇಂದ್ರವಾಗಿ ಚೆಟ್ಟಿಮಾನಿ ಕೇಂದ್ರವನ್ನು ಮಾರ್ಪಾಡಲಿಸಲು ಗ್ರಾ.ಪಂ ವತಿಯಿಂದ ಸಹಕಾರ ನೀಡುವುದಾಗಿ ತಿಳಿಸಿದರು. ಗ್ರಾ.ಪಂ ಸದಸ್ಯರಾದ ಹ್ಯಾರಿಸ್ ಮಾತನಾಡಿ, ಯಾವುದೇ ಯೋಜನೆಗಳನ್ನು ಇಲಾಖೆ ತಂದರು ನಮ್ಮ ಗ್ರಾಮ ಪಂಚಾಯತಿಯ ಅಂಗನವಾಡಿ ಕಾರ್ಯಕರ್ತೆಯರು ಬಹಳ ಶಿಸ್ತಿನಿಂದ ಯೋಜನೆಯ ಯಶಸ್ವಿಗೆ ಶ್ರಮಿಸುತಿದ್ದಾರೆಂದು ಹರ್ಷ ವ್ಯಕ್ತಪಡಿಸಿದರು. ಈ ಹೊಸ ಆಲೋಚನೆಗೆ ಗ್ರಾಮ ಪಂಚಾಯತಿಯ ಮತ್ತು ವೈಯಕ್ತಿಕ ಸಹಕಾರ ಸದಾ ಇರುವುದಾಗಿ ತಿಳಿಸಿದರು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಎಲ್ ಕೆ ಜಿ ಯನ್ನು ಅಂಗನವಾಡಿಯಲ್ಲಿ ಪ್ರಾರಂಭಿಸುತ್ತಿರುವುದು ಇಲಾಖೆ…
ಮಡಿಕೇರಿ ಜು.2 NEWS DESK : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 19.06 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 27.41 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1437.30 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 876 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.33 ಮಿ.ಮೀ. ಕಳೆದ ವರ್ಷ ಇದೇ ದಿನ 33.23 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2053.89 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1280.46 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 9.35 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 31.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1423.90 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 921.15 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 21.46 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…
ನಾಪೋಕ್ಲು ಜೂ.2 NEWS DESK : ಕೊಳಕೇರಿ ಗ್ರಾಮದ ಬೊಮ್ಮಂಜಕೇರಿ ಸುತ್ತಮುತ್ತಲಿನ ತೋಟಗಳಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು, ದಾಂಧಲೆ ಮಾಡಿ ಬಾರಿ ನಷ್ಟ ಉಂಟು ಮಾಡಿದೆ. ಗ್ರಾಮದ ಅಚ್ಚಂಡಿರ, ಪುಳ್ಳೆರ, ಮಲೆಯರ, ತಂಬಂಡ, ಬಿದ್ದಾಟಂಡ, ಅಚ್ಚಪಂಡ ತೋಟಗಳಲ್ಲಿ ದಾಂಧಲೆ ನಡೆಸಿದ್ದು, ತೆಂಗು, ಅಡಿಕೆ, ಕಾಫಿ ಗಿಡಗಳನ್ನು ನಾಶಪಡಿಸಿ ರೈತರು ಅಪಾರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಒಂದು ಮರಿಯಾನೆ ಸೇರಿದಂತೆ ಏಳು ಕಾಡಾನೆಗಳು ಅಡ್ಡಾಡುತ್ತಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಬೆಳಿಗ್ಗೆ ಎಂಟು ಆನೆಗಳು ಬೊಳ್ಳನಮಂಡ ಪೊನ್ನಪ್ಪ ಅವರ ತೋಟದಲ್ಲಿ ಪ್ರತ್ಯಕ್ಷವಾಗಿದೆ. ಅರಣ್ಯ ಸಂರಕ್ಷಣಾಧಿಕಾರಿ ಕಾಳೇಗೌಡ, ಅರಣ್ಯ ರಕ್ಷಕ ಸಿಬ್ಬಂದಿ, ಸ್ಥಳಕ್ಕೆ ಆಗಮಿಸಿ ಕಾಡಾನೆಗಳನ್ನು ಕಾಡಿಗಟ್ಟಲು ಪ್ರಯತ್ನಿಸಿದ್ದರೂ ಸಫಲರಾಗಿಲ್ಲ. ಈ ಸಂದರ್ಭ ಗ್ರಾಮಸ್ಥರಾದ ಪುಳ್ಳೆರ ವಿನು, ಸೋಮಯ್ಯ, ಅಚ್ಚಂಡಿರ ಅಪ್ಪಸ್ವಾಮಿ, ಗಣೇಶ, ತಂಬಂಡ ಮುತ್ತಪ್ಪ, ರವಿ, ಮಲೆಯರ ಅಪ್ಪಚ್ಚು, ಅಶೋಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದು, ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿರುವ ಕಾಡಾನೆಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ನಷ್ಟ ಸಂಭವಿಸಿದ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು…
ನಾಪೋಕ್ಲು ಜು.5 NEWS DESK : ಪೆರಾಜೆ ಶಕ್ತಿ ಕೇಂದ್ರದಲ್ಲಿ ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ ವಿಶ್ವ ಪರಿಸರ ದಿನವನ್ನು ಆಚರಣೆ ಮಾಡಲಾಯಿತು. ಪೆರಾಜೆ ದೇವಸ್ಥಾನದ ಉಳ್ಳಾಕುಲ ಸ್ಥಾನದ ಪರಿಸರದಲ್ಲಿ ಸಾಗುವನಿ, ಮಹಾಗನಿ, ಬಿಲ್ವ ಪತ್ರೆ ಗಿಡ ನೆಟ್ಟು ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ಆಡಳಿತ ಮುಖ್ಯಸ್ಥ ಜಿತೇಂದ್ರ ನಿಡ್ಯಮಲೆ, ಗ್ರಾಮಾಂತರ ಮಂಡಲದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಪೆರಾಜೆ ಪಂಚಾಯತ್ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಸೋಮವಾರಪೇಟೆ ಜು.2 NEWS DESK : ತಾಯಿಯ ಗರ್ಭದಲ್ಲೇ ಮಕ್ಕಳ ಆರೋಗ್ಯ ಪ್ರಾರಂಭವಾಗಿರುತ್ತದೆ. ಮಕ್ಕಳ ಆರೋಗ್ಯದಲ್ಲಿ ಅವರು ಬೆಳೆಯುವ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸುಪರ್ಣ ಕೃಷ್ಣಾನಂದ ಹೇಳಿದರು. ಇನ್ನರ್ ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಚೌಡ್ಲು ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಹದಿಹರೆಯದಲ್ಲಿ ಮಾನಸಿಕ ಆರೋಗ್ಯದ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಬೆಳೆಯುತ್ತಿರುವ ಮಕ್ಕಳು ನೋಡಿ ಕಲಿಯುವುದೇ ಹೆಚ್ಚು. ಮನೆಯಲ್ಲಿ ಪೋಷಕರು, ಶಾಲಾ ಕಾಲೇಜಿನಲ್ಲಿ ಶಿಕ್ಷಕರನ್ನು ನೋಡಿ ಕಲಿಯುತ್ತಾರೆ. ಮಕ್ಕಳ ಬೆಳವಣಿಗೆಯಲ್ಲಿ ಇಬ್ಬರ ಪಾತ್ರ ಪ್ರಮುಖವಾದುದು ಎಂದು ಹೇಳಿದರು. ತಮ್ಮ ಕೆಲಸವನ್ನು ತಾವೇ ಮಾಡಿಕೊಳ್ಳುವುದು, ಹಿರಿಯರು, ಪೋಷಕರು ಮತ್ತು ಶಿಕ್ಷಕರನ್ನು ಗೌರವಿಸುವುದು, ಅವರ ಮಾತು ಕೇಳುವುದು. ತಮ್ಮನ್ನು ತಾವು ಕಾಪಾಡಿಕೊಳ್ಳುವುದು, ಒಳ್ಳೆಯ ಅಲೋೀಚನೆ ಮಾಡುವುದು ಇಂತಹವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ವಿದ್ಯಾರ್ಥಿಗಳು ಮಾನಸಿಕ ಆರೋಗ್ಯವಂತರು ಎಂದು ಗುರುತಿಸಲಾಗುತ್ತದೆ ಎಂದು ಹೇಳಿದರು. ಕಾರಣವಿಲ್ಲದೆ ಚಿಂತೆ, ದು:ಖ…
ಸುಂಟಿಕೊಪ್ಪ ಜು.2 NEWS DESK : ಗುಂಡುಗುಟ್ಟಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಿಸಲಾಯಿತು. ಸ್ಥಳೀಯ ಮುತ್ತಿನ ತೋಟದ ಮಾಲೀಕರಾದ ರಾಜೇಂದ್ರ ಹಾಗೂ ಸಾಧನ ಅವರು ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ನೀಡಿದ ಟ್ರ್ಯಾಕ್ ಶೂಟ್ಅನ್ನು ವಿತರಿಸಿದರು. ಇದೇ ವೇಳೆ ಮುತ್ತಿನ ತೋಟದ ವ್ಯವಸ್ಥಾಪಕ ಪ್ರದೀಪ್ ಮಕ್ಕಳಿಗೆ ಸಮವಸ್ತ್ರವನ್ನು ವಿತರಿಸಿದರು. ತೋಟದ ಮಾಲೀಕರಾದ ರಾಜೇಂದ್ರ ಮಾತನಾಡಿ ಈ ಭಾಗದಲ್ಲಿ ಹೆಚ್ಚಾಗಿ ಕೂಲಿಕಾರ್ಮಿಕರ ಮಕ್ಕಳೇ ವಿದ್ಯಾಭ್ಯಾಸಕ್ಕೆ ಬರುತ್ತಿದ್ದಾರೆ ಅವರ ಭವಿಷ್ಯದ ದೃಷ್ಟಿಯಿಂದ ಮಕ್ಕಳಲ್ಲಿ ಇನ್ನಷ್ಟು ಓದಿನಲ್ಲಿ ಆಸಕ್ತಿ ಮೂಡುವ ದೃಷ್ಟಿಯಿಂದ ನಮ್ಮಿಂದಾದ ಸಣ್ಣ ಸಹಾಯ ಮಾಡುತ್ತಿದ್ದೇವೆ ಎಂದರು. ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕಿ ಗೌರಮಣಿ ಮತ್ತು ಶಿಕ್ಷಕಿ ಪೂರ್ಣಿಮಾ ಇದ್ದರು.
ಮಡಿಕೇರಿ NEWS DESK ಜು.1 : ಪ್ರಜಾತಂತ್ರ ವ್ಯವಸ್ಥೆಗೆ ವಿವಿಧ ಕಾಲಘಟ್ಟಗಳಲ್ಲಿ ಎದುರಾದ ಸಂಕಷ್ಟಗಳ ಸಂದರ್ಭಗಳಲ್ಲಿ ಪತ್ರಿಕಾ ಕ್ಷೇತ್ರ ಅದಕ್ಕೆ ಎದುರಾಗಿ ಕಾರ್ಯನಿರ್ವಹಿಸುವ ಮೂಲಕ ‘ಪ್ರಜಾಪ್ರಭುತ್ವ’ ವ್ಯವಸ್ಥೆಯ ಸಂರಕ್ಷಣೆಗೆ ಶ್ರಮಿಸಿರುವುದಾಗಿ ಸಮಾಜ ಸೇವಕ ತೇಲಪಂಡ ಶಿವಕುಮಾರ್ ನಾಣಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆದ ‘ಪತ್ರಿಕಾ ದಿನಾಚರಣೆ’ ಹಾಗೂ ವಾರ್ಷಿಕ ಪ್ರಶಸ್ತಿ ಪದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಪತ್ರಕರ್ತರ ಸಂಘದ ‘ಸ್ವಾಸ್ಥ್ಯ, ಸುಂದರ, ಸಮಾಜ’ ಎನ್ನುವ ಘೋಷವಾಕ್ಯದಂತೆ ಪತ್ರಿಕಾ ಕ್ಷೇತ್ರವು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಮೂಲಕ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಸದಾ ಶ್ರಮಿಸುತ್ತಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬಲ ತುಂಬುವ ಮತ್ತು ಬೆಂಬಲವನ್ನು ನೀಡುವ ಕಾರ್ಯದ ಮೂಲಕ ಸುಂದರ ಸಮಾಜ ನಿರ್ಮಾಣ ಸಾಧ್ಯವಿದೆ ಎಂದರು. ಪ್ರಸ್ತುತ ವ್ಯವಸ್ಥೆಯಲ್ಲಿ ಬಂಡವಾಳಶಾಹಿಗಳು, ಅಧಿಕಾರಸ್ಥರಿಂದ ನಿರಂತರವಾಗಿ ಅಧಿಕಾರದ ದುರ್ಬಳಕೆ ನಡೆಯುತ್ತಿದೆ. ಸ್ವಾತಂತ್ರ್ಯವನ್ನು ಪಡೆದು ಎಪ್ಪತ್ತೈದು ವರ್ಷಗಳು ಕಳೆದಿರುವ ಈ ದಿನಗಳಲ್ಲಿ ಸಮಬಾಳು, ಸಮಪಾಲು ಎನ್ನುವುದು…
ಮಡಿಕೇರಿ ಜು.1 NEWS DESK : ಮನೆ ಹಾಗೂ ಕಟ್ಟಡ ನಿರ್ಮಾಣ ಮಾಡಬೇಕಾದರೆ ಪ್ರಾರಂಭಿಕ ಪ್ರಮಾಣಪತ್ರ (ಸಿಸಿ) ಮತ್ತು ಸ್ವಾಧಿನಾನುಭವ ಅಥವಾ ವಾಸ ಯೋಗ್ಯ ಪ್ರಮಾಣ ಪತ್ರ (ಒಸಿ) ಪಡೆದುಕೊಳ್ಳುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಈ ನಿಯಮ ಗ್ರಾ.ಪಂ ವ್ಯಾಪ್ತಿಗೂ ಅನ್ವಯಿಸಲಿದೆ ಎಂದು ಸರ್ಕಾರ ಹೇಳಿದ್ದು, ಇದನ್ನು ತೀವ್ರವಾಗಿ ವಿರೋಧಿಸುವುದಾಗಿ ನಂಜರಾಯಪಟ್ಟಣ ಗ್ರಾ.ಪಂ ಅಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರ್ಕಾರದ ಹೊಸ ನಿಯಮದಿಂದ ಗ್ರಾಮೀಣ ಭಾಗದ ಕಡು ಬಡವರು, ಬಡವರು, ಕೂಲಿ ಕಾರ್ಮಿಕರು, ದುರ್ಬಲರು ಹಾಗೂ ವಸತಿ ರಹಿತ ಜನಸಾಮಾನ್ಯರು ಮನೆ ನಿರ್ಮಿಸಿಕೊಳ್ಳುವ ಸಂದರ್ಭ ಹಲವು ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಸ್ವಂತ ಸೂರು ಹೊಂದಬೇಕೆನ್ನುವ ಬಡವರ ಕನಸು ಕನಸಾಗಿಯೇ ಉಳಿಯಲಿದೆ. ಆದ್ದರಿಂದ ಸರ್ಕಾರ ಗ್ರಾಮೀಣ ಜನರ ಹಿತದೃಷ್ಟಿಯಿಂದ ನಿಯಮಕ್ಕೆ ತಿದ್ದುಪಡಿ ತಂದು ಗ್ರಾ.ಪಂ ವ್ಯಾಪ್ತಿಗೆ ಸರಳ ನಿಯಮಗಳನ್ನು ರೂಪಿಸಬೇಕೆಂದು ಒತ್ತಾಯಿಸಿದ್ದಾರೆ. ಒಂದು ವೇಳೆ ಸರ್ಕಾರ ನಿಯಮಗಳನ್ನು ಸಡಿಲಿಸದಿದ್ದರೆ ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಹೋರಾಟವನ್ನು ರೂಪಿಸುವುದಾಗಿ ಎಚ್ಚರಿಕೆ…
ಮಡಿಕೇರಿ ಜು.1 NEWS DESK : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕ ಮತ್ತು ಕನ್ನಡ ಭವನ ಕೊಡಗು ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ಜು.6 ರಂದು ಕೊಡಗು ಜಿಲ್ಲಾ ಚುಟುಕು ಕಾವ್ಯಶ್ರೀ ಪ್ರಶಸ್ತಿ ಪ್ರದಾನ ಮತ್ತು ಕೊಡಗು ಮಳೆಗಾಲ ಕವಿಗೋಷ್ಠಿ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಅಂದು ಅಪರಾಹ್ನ 2 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೇಂದ್ರ ಸಮಿತಿ ಸ್ಥಾಪಕ ಸಂಚಾಲಕರಾದ ಡಾ.ವಾಮನ್ ರಾವ್ ಬೇಕಲ್-ಸಂಧ್ಯಾರಾಣಿ ಟೀಚರ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಕನ್ನಡ ಭವನ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ವಹಿಸಲಿದ್ದಾರೆ. ಮುಖ್ಯತಿಥಿಗಳಾಗಿ ಲೇಖಕರು ಹಾಗೂ ಕವಯತ್ರಿ ಸ್ಮಿತಾ ಅಮೃತರಾಜ್, ಹಿಯರಿಂಗ್ ಸ್ವೀಚ್ ಹಾಗೂ ಇಂಪ್ಲಾಂಟ್ ಕ್ಲಿನಿಕ್ ಇಂಡಿಯಾ ಹಾಗೂ ಮರ್ಕರಾ ಪೋಸ್ಟ್ ಎಂ.ಡಿ ಹಾಗೂ ಪಿ.ಆರ್.ಮ್ಯಾನೇಜರ್ ಜೈರಸ್ ಥಾಮಸ್ ಅಲೆಗ್ಸಾಂಡರ್ ಕೊಡಗು ಕನ್ನಡ ಭವನ ಕೋಶಾಧಿಕಾರಿ ವಿನೋದ್ ಕುಡ್ತೇಕರ್, ಕಾರ್ಯದರ್ಶಿಗಳಾದ ವಸಂತ್ ಕೆರೆಮನೆ ಪಾಲ್ಗೊಳ್ಳಲಿದ್ದು, ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೊಡಗು…






