ಮಡಿಕೇರಿ ಮೇ 5 NEWS DESK : ಕೊಡಗು ಗೌಡ ಯುವ ವೇದಿಕೆ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗೌಡ ಜನಾಂಗದ ನಡುವಿನ 3ನೇ ಆವೃತ್ತಿಯ ಟಿ-20 ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ (ಜಿಪಿಎಸ್) ಬಿಳಿಗೇರಿ ಪ್ಲಾಂಟರ್ಸ್ ಕ್ಲಬ್ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ದಿ ಎಲೈಟ್ ಕ್ರಿಕೆಟ್ ಕ್ಲಬ್ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಏ.20 ರಂದು ಆರಂಭಗೊಂಡ ಕ್ರಿಕೆಟ್ ಪಂದ್ಯಾವಳಿಯಲ್ಲಿ 10 ಫ್ರಾಂಚೈಸಿ ತಂಡಗಳು ಭಾಗವಹಿಸಿದ್ದವು. ಈ ಪೈಕಿ ಬಿಳಿಗೇರಿ ಪ್ಲಾಂಟರ್ಸ್ ಕ್ಲಬ್ ಹಾಗೂ ದಿ ಎಲೈಟ್ ಕ್ಲಬ್ ಫೈನಲ್ ಪಂದ್ಯಾವಳಿಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಯಿತು. ಅಂತಿಮ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಿ ಎಲೈಟ್ ಕ್ರಿಕೆಟ್ ಕ್ಲಬ್ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 142 ರನ್ ಕಲೆ ಹಾಕಿತು. ಆಟಗಾರ ಅಂಜನ್ 56 ಎಸೆತಗಳಲ್ಲಿ ಆಕರ್ಷಕ ಅರ್ಧ ಶತಕ ಸಿಡಿಸಿದರು. ಈ ಗುರಿಯನ್ನು ಬೆನ್ನತ್ತಿದ್ದ ಬಿಳಿಗೇರಿ ಪ್ಲಾಂಟರ್ಸ್ ಕ್ಲಬ್ 17 ಓವರ್…
ಲೇಖಕ: admin
ಮೈಸೂರು ಮೇ 5 NEWS DESK : ಮೈಸೂರು ಕೊಡವ ಸ್ಟುಡೆಂಟ್ ಅಸೋಸಿಯೇಷನ್ ವತಿಯಿಂದ ಆಯೋಜನೆಗೊಂಡಿದ್ದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಹಾಗೂ ಶಾಸಕ ಎ.ಎಸ್ ಪೊನ್ನಣ್ಣ ಅವರ ಪತ್ನಿ ಕಾಂಚನ್ ಪೊನ್ನಣ್ಣ ಭಾಗವಹಿಸಿ ವಿಜೇತರಿಗೆ ಪ್ರಶಸ್ತಿ ವಿತರಣೆ ಮಾಡಿದರು. ಮೈಸೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿನ ಕೊಡವ ವಿದ್ಯಾರ್ಥಿಗಳ ಒಕ್ಕೂಟದ ಈ ಪಂದ್ಯಾವಳಿಯ ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದ ಕಾಂಚನ್ ಪೊನ್ನಣ್ಣ, ಸಮುದಾಯದ ಯುವಕ-ಯುವತಿಯರ ಕ್ರೀಡಾ ಪ್ರತಿಭೆ ಮುನ್ನಲೆಗೆ ತರಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಲಿದೆ ಎಂದು ಬಣ್ಣಿಸಿದರು. ಈ ಸಂದರ್ಭದಲ್ಲಿ, ಪ್ರಶಸ್ತಿ ಪ್ರದಾನ ವೇದಿಕೆಯಲ್ಲಿ ಆಹ್ವಾನಿತ ಗಣ್ಯರು ಉಪಸ್ಥಿತರಿದ್ದರು.
ನಾಪೋಕ್ಲು ಮೇ 5 NEWS DESK : ಪಾಡಿ ಇಗ್ಗುತ್ತಪ್ಪ ದೇವಾಲಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಭಕ್ತ ಜನಸಂಘವನ್ನು ಟ್ರಸ್ಟ್ ಎಂದು ಬದಲಾಯಿಸುವಂತೆ ಶ್ರೀ ಇಗ್ಗುತ್ತಪ್ಪ ಭಕ್ತ ಜನ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸಂಘದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ವಿವಿಧ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕ್ಷೇತ್ರ ವಾಸಕ್ಕೆ ಕಟ್ಟಡ ನಿರ್ಮಿಸುವ ಬಗ್ಗೆ ಹಾಗೂ ಇಗ್ಗು ತಪ್ಪದೇವರ ಮೂಲಸ್ಥಾನವಾದ ಮಲ್ಮ ಬೆಟ್ಟದಲ್ಲಿ ಕಾಡುಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸಿ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸೋಲಾರ್ ತಂತಿ ಬೇಲಿ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಚರ್ಚಿಸಲಾಯಿತು. ದೇವಾಲಯದಲ್ಲಿ ನಾಮಕರಣ, ಲಗ್ನಪತ್ರಿಕೆ ಮಾಡಿಸಲು ಆಸಕ್ತಿ ಹೊಂದಿದ ಭಕ್ತರು ಹೆಚ್ಚಿನ ಆಡಂಬರ ಮಾಡದೆ ದೇವಸ್ಥಾನದ ಕಟ್ಟು ಪಾಡುಗಳಿಗೆ ಒಳಪಟ್ಟು ಸರಳತೆಗೆ ಒತ್ತುನೀಡಿ ಆಚರಣೆ ಮಾಡುವಂತೆ ಸಭೆಯಲ್ಲಿ ಚರ್ಚಿಸಲಾಯಿತು. ವೇದಿಕೆಯಲ್ಲಿ ಆಡಳಿತ ಮಂಡಳಿ ಪದಾಧಿಕಾರಿಗಳಾದ, ಕಲ್ಯಾಣಂಡ ಟಿ.ಅಪ್ಪಣ್ಣ, ಬಟ್ಟೀರ ಚೋಂದಮ್ಮ ಮೇದಪ್ಪ, ಅಂಜಪರವಂಡ ಎ.ಕುಶಾಲಪ್ಪ, ಪರದಂಡ ಕೆ.ನಾಣಯ್ಯ, ಅನ್ನಾಡಿಯಂಡ ಪಿ.ದಿಲೀಪ್, ಅಲ್ಲಾರಂಡ ಎಸ್.ಅಯ್ಯಪ್ಪ, ಕುಲ್ಲೇಟಿರ…
ಸೋಮವಾರಪೇಟೆ ಮೇ 5 NEWS DESK : ತಾಲೂಕಿನ ಶಿರಂಗಾಲ ವಿಭಾಗದ ನಲ್ಲೂರಮ್ಮ ಹಾಗೂ ಬಸವೇಶ್ವರ ದೇವಾಲಯದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ವತಿಯಿಂದ ಮಂಜೂರಾದ 2 ಲಕ್ಷ ರೂ,ಗಳ ಡಿ.ಡಿ.ಯ ಮಂಜೂರಾತಿ ಪತ್ರವನ್ನು ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಗ್ರಾಮಸ್ಥರಿಗೆ ವಿತರಿಸಿದರು. ನಂತರ ಅವರು ಮಾತನಾಡಿ, ಶ್ರೀ ಕ್ಷೇತ್ರದಿಂದ ಸಮಾಜಮುಖಿಯಾಗಿ ಕೈಗೊಂಡ ಕಾರ್ಯಕ್ರಮಗಳಾದ ಶಿಕ್ಷಣ ಕ್ಷೇತ್ರದಲ್ಲಿ ಶಾಲೆಗಳಿಗೆ ಪೀಠೋಪಕರಣ, ಜ್ಞಾನದೀಪ ಶಿಕ್ಷಕರ ನೇಮಕ ಮಾಡುವುದು, ಉನ್ನತ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ನೀಡುವುದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ನೆರವಾಗುತ್ತಿದ್ದಾರೆ ಎಂದರು. ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ, ಗ್ರಾಮೀಣ ರೈತರಿಗೆ ಅನುಕೂಲವಾಗುವಂತೆ ಹಾಲು ಉತ್ಪಾದಕರ ಸಂಘಗಳಿಗೆ ಅನುದಾನ, ನಿರ್ಗತಿಕರಿಗೆ ಮಾಶಾಸನ, ವಿಶೇಷಚೇತನರಿಗೆ ಪರಿಕರಗಳ ವಿತರಣೆ ಸೇರಿದಂತೆ ಶ್ರೀ ಕ್ಷೇತ್ರದ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಈ ಸಂದರ್ಭ ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಎಂ.ಚೇತನ್, ಕಾರ್ಯದರ್ಶಿ ರವಿ, ಒಕ್ಕೂಟದ ಅಧ್ಯಕ್ಷೆ ಮಂಜುಳಾ, ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಮತ್ತಿತರರು ಇದ್ದರು.
ಸೋಮವಾರಪೇಟೆ ಮೇ 5 NEWS DESK : ನಾವು ಪ್ರತಿಷ್ಠಾನದ ವತಿಯಿಂದ ಮಹಿಳಾ ಸಮಾಜದಲ್ಲಿ ನಡೆಯುತ್ತಿರುವ ಮಕ್ಕಳ ಬೇಸಿಗೆ ಶಿಬಿರದ ಶಿಬಿರಾರ್ಥಿಗಳು ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಪೊಲೀಸ್ ಇಲಾಖೆಯ ಆಡಳಿತ ಹಾಗೂ ಕರ್ತವ್ಯದ ಬಗ್ಗೆ ಇನ್ಸ್ಪೆಕ್ಟರ್ ಮುದ್ದು ಮಾದೇವ ಮಾಹಿತಿ ನೀಡಿದರು. ಮಕ್ಕಳ ವಿಶೇಷ ಪೊಲೀಸ್ ವೀಣಾ, ಪ್ರತಿಷ್ಠಾನದ ಸಂಸ್ಥಾಪಕ ಗೌತಮ್ ಕಿರಗಂದೂರು, ಕಾರ್ಯಕಾರಿ ನಿದೇಶಕಿ ಸುಮನ ಮ್ಯಾಥ್ಯು ಇದ್ದರು.
ನಾಪೋಕ್ಲು ಮೇ 5 NEWS DESK : ಕೊಡಗು ಜಿಲ್ಲಾ ಗೊಲ್ಲ ಸಮಾಜದ ವತಿಯಿಂದ ನಾಪೋಕ್ಲು ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪೊನ್ನುಕಂಡ ತಂಡ ಪ್ರಥಮ ಸ್ಥಾನಗಳಿಸಿತು. ಪೊನ್ನಾಟಿಯಂಡ ತಂಡ ದ್ವಿತೀಯ ಸ್ಥಾನ ಗಳಿಸಿತು. ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಆಚೀರ ತಂಡ ಪ್ರಥಮ ಸ್ಥಾನ ಗಳಿಸಿದರೆ, ಪೊನ್ನುಕಂಡ ತಂಡ ದ್ವಿತೀಯಸ್ಥಾನಗಳಿಸಿತು. ಮಹಿಳೆಯರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪೆÇಂಗೇರ ತಂಡ ಪ್ರಥಮ ಸ್ಥಾನವನ್ನು ಕೈಬಿಲಿರ ತಂಡ ದ್ವಿತೀಯ ಸ್ಥಾನವನ್ನುಗಳಿಸಿತು. ಕೊಡಗು ಜಿಲ್ಲಾ ಗೊಲ್ಲ ಸಮಾಜದ ಅಧ್ಯಕ್ಷ ಅರೆಯಂಡ ಎ.ಭೀಮಯ್ಯ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ಫೈನಲ್ ಕ್ರೀಡಾಕೂಟದ ಉದ್ಘಾಟನೆಯನ್ನು ಕೊಡವ ಭಾಷಿಕ ಒಕ್ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿ, ಗೊಲ್ಲ ಸಮುದಾಯವು ಚಿಕ್ಕ ಸಮುದಾಯವಾದರೂ ದೊಡ್ಡ ಮಟ್ಟದಲ್ಲಿ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಿರುವುದು ಸಂತಸ ತಂದಿದೆ. ಎಲ್ಲಾ ಸಮುದಾಯ ವರ್ಗದಲ್ಲೂ ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡು ಮುಂದೆ ಬರಬೇಕೆಂದು ಆಶಿಸಿದರು. ಒಗ್ಗಟ್ಟು, ಶಿಸ್ತು, ಪ್ರೀತಿ, ವಿಶ್ವಾಸ…
ವಿರಾಜಪೇಟೆ ಮೇ 5 NEWS DESK : ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯೆಯಾಗಿ ಬಿಜೆಪಿಯ ಹಿರಿಯ ಮುಖಂಡರಾದ ಮನೆಯಪಂಡ ಕಾಂತಿ ಸತೀಶ್ ಆಯ್ಕೆಯಾಗಿದ್ದಾರೆ. ವಿರಾಜಪೇಟೆಯ ಮನೆಯಪಂಡ ಕಾಂತಿ ಸತೀಶ್ ರವರು ಕೊಡಗು ಬಿಜೆಪಿ ಮಹಿಳಾ ಮೋಚಾ೯ದ ಅಧ್ಯಕ್ಷೆಯಾಗಿ ಕಾಯ೯ನಿವ೯ಹಿಸಿದ್ದರು. ಅಂತೆಯೇ, ಕೊಡಗು ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಪಂಚಾಯತ್ ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಹಾಗೂ ವೀರಾಜಪೇಟೆ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಇದೀಗ ಲೋಕಸಭಾ ಸದಸ್ಯ ಯದುವೀರ್ ಕೃಷ್ಣದತ್ತ ಒಡೆಯರ್ ಅಧ್ಯಕ್ಷರಾಗಿರುವ ಕೇಂದ್ರ ಸಕಾ೯ರಗಳ ಯೋಜನೆಗಳ ಅನುಷ್ಟಾನ ಸಂಬಂಧಿತ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಸದಸ್ಯೆಯಾಗಿ ನೇಮಕಗೊಂಡಿದ್ದಾರೆ.
ಸೋಮವಾರಪೇಟೆ NEWS DESK ಮೇ 4 : ಸೋಮವಾರಪೇಟೆ ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಸೋಮವಾರಪೇಟೆ ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿ ಆರೋಪಿಸಿದೆ. ಭಾನುವಾರ ಸೋಮವಾರಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಅರುಣ್ ಕೊತ್ನಳ್ಳಿ ಅವರು ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ ಸೂಕ್ತ ತನಿಖೆ ನಡೆಸಿ ಆಡಳಿತಾಧಿಕಾರಿಯನ್ನು ನೇಮಿಸಬೇಕು. ತಪ್ಪಿದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಸರ್ಕಾರಿ ಆಸ್ಪತ್ರೆಯ ಉಸ್ತುವಾರಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಹಾಗೂ ಆಡಳಿತ ವೈದ್ಯಾಧಿಕಾರಿ ವಹಿಸಿಕೊಂಡಿದ್ದಾರೆ. ಆದರೆ ಇವರುಗಳ ನಡುವಿನ ಹೊಂದಾಣಿಕೆಯ ಕೊರತೆಯಿಂದ ರೋಗಿಗಳು ಸೂಕ್ತ ಚಿಕಿತ್ಸೆ ಸಿಗದೆ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು. ಆಸ್ಪತ್ರೆಗೆ ಬೇಕಾದ ಎಲ್ಲಾ ತರಹದ ಸೌಲಭ್ಯಗಳು ಹಾಗೂ ಅನುದಾನವನ್ನು ಸರ್ಕಾರ ಸಕಾಲದಲ್ಲಿ ಪೂರೈಕೆ ಮಾಡುತ್ತಿದೆ. ಆದರೂ ಸಮನ್ವಯತೆಯ ಕೊರತೆಯಿಂದ ಸದುಪಯೋಗವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸ್ಕಾö್ಯನಿಂಗ್ ಯಂತ್ರವಿದ್ದರೂ ತಜ್ಞ ವೈದ್ಯರಿಲ್ಲ, ಎಕ್ಸರೆ ಲ್ಯಾಬ್ ಕಾರ್ಯನಿರ್ವಹಿಸುತ್ತಿಲ್ಲ. ರಕ್ಷಾಸಮಿತಿಯಲ್ಲಿ ಹಣವಿದ್ದರೂ ಲೇಖನ ಸಾಮಾಗ್ರಿಗಳನ್ನು…
ಮಡಿಕೇರಿ NEWS DESK ಮೇ 4 : ಲೋಕಸೇವಾ ಆಯೋಗದ ಐಎಎಸ್ ಮತ್ತು ಐಪಿಎಸ್ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಅನುಕೂಲವಾಗುವಂತೆ ಬೆಂಗಳೂರಿನ ಕರ್ನಾಟಕ ಆರ್ಯವೈಶ್ಯ ಮಹಾಸಭಾದ ವಾಸವಿ ಅಕಾಡೆಮಿ ಮಧ್ಯಮ ಹಾಗೂ ಬಡ ಕುಟುಂಬಗಳ ವಿದ್ಯಾರ್ಥಿಗಳಿಗಾಗಿ 7ನೇ ಬ್ಯಾಚ್ ನ ಉಚಿತ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ ಎಂದು ಕರ್ನಾಟಕ ಆರ್ಯವೈಶ್ಯ ಮಹಾಸಭಾದ ನಿರ್ದೇಶಕ ಬಿ.ಆರ್.ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಂಗಳೂರು ನಗರದ ವಿಜಯನಗರ ಬಡಾವಣೆಯ ಚಂದ್ರಾ ಲೇಔಟ್ ನಲ್ಲಿರುವ ವಾಸವಿ ಅಕಾಡೆಮಿ ಈಗಾಗಲೇ ಹಲವು ತಂಡಗಳಿಗೆ ಉತ್ತಮ ಶಿಕ್ಷಣ ನೀಡಿದೆ. ಇದೀಗ 2026ರಲ್ಲಿ ನಡೆಯುವ ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ಬರೆಯಲು ಇಚ್ಛಿಸುವ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಯಾವುದೇ ಪದವೀಧರರು ಯು.ಪಿ.ಎಸ್.ಸಿ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅವಕಾಶವಿದೆ. 2026ರಲ್ಲಿ ಪರೀಕ್ಷೆ ಬರೆಯುವ ಆಸಕ್ತ ವಿದ್ಯಾರ್ಥಿಗಳಿಗೆ ಮಾತ್ರ ತರಬೇತಿ ನೀಡಲಾಗುತ್ತಿದ್ದು, ಎಲ್ಲಾ ತರಗತಿಗಳು ಸಂಪೂರ್ಣ ಉಚಿತವಾಗಿರುತ್ತದೆ. ಯಾವುದೇ ಸಮುದಾಯದ ವಿದ್ಯಾರ್ಥಿಗಳು…
ಮಡಿಕೇರಿ NEWS DESK ಮೇ 4 : ಅತ್ಯುತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಶಿವಣ್ಣ ಎಸ್. ಅವರು ಇದೀಗ ತಮ್ಮನ್ನು ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಂಗಭೂಮಿ ಕಲಾವಿದರಾಗಿ ಮತ್ತು ಕಿರುತೆರೆ ನಟರಾಗಿ ಕಾಣಿಸಿಕೊಂಡಿರುವ ಶಿವಣ್ಣ ಅವರು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಇಲ್ಲಿಯವರೆಗೆ ಇವರು ಕೆಂಗಲ್ ಹನುಮಂತಯ್ಯ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ, ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ, ಪಂಪ ಪ್ರಶಸ್ತಿ ಹಾಗೂ ಕರುನಾಡು ನಿಧಿ ಪತ್ರಿಕೆಯ ಕರುನಾಡ ನಿಧಿ ಪ್ರಶಸ್ತಿಯನ್ನು ಪಡೆದಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಕುಟ್ಟಂದಿ ಗ್ರಾಮದ ಕೆ.ಬಿ ಪ್ರೌಢ ಶಾಲೆಯಲ್ಲಿ 30 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಶಿವಣ್ಣ ಎಸ್. ಅವರು ಇದೀಗ ನಿವೃತ್ತಿ ಜೀವನವನ್ನು ಸಾಗಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಪ್ರೀತಿಯ ಶಿಕ್ಷಕರಾಗಿ, ಶಿಕ್ಷಕರ ಆತ್ಮೀಯ ಸಹಪಾಠಿಯಾಗಿ ಗುರುತಿಸಿಕೊಂಡಿದ್ದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ ನೀಡಿದ್ದಾರೆ.…






