ಮಡಿಕೇರಿ ಜು.1 NEWS DESK : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 9.76 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 61.09 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1418.25 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 848.64 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 12.05 ಮಿ.ಮೀ. ಕಳೆದ ವರ್ಷ ಇದೇ ದಿನ 66.55 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2033.56 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1227.23 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 106.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1414.55 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 889.55 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.85 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…
ಲೇಖಕ: admin
ಹೈದರಾಬಾದ್ ಜು.1 NEWS DESK : ಸಿಗಾಚಿ ಇಂಡಸ್ಟ್ರೀಸ್ನ ಪಾಶಮೈಲಾರಂನಲ್ಲಿರುವ ಔಷಧ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35 ಕ್ಕೆ ಏರಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಅವಶೇಷಗಳಿಂದ 31 ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಮೂವರು ಸಾವನ್ನಪ್ಪಿದ್ದಾರೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿತೋಷ್ ಪಂಕಜ್ ಪಿಟಿಐಗೆ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ಅಂತಿಮ ಹಂತ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದರು. ತೆಲಂಗಾಣ ರಾಸಾಯನಿಕ ಕಾರ್ಖಾನೆ ಸ್ಫೋಟದಲ್ಲಿ ಮೃತಪಟ್ಟ ಕನಿಷ್ಠ ಎಂಟು ಜನರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಗಾಯಗೊಂಡ ಸುಮಾರು ಹನ್ನೆರಡು ಜನರಿಗೆ ಐವತ್ತು ಸಾವಿರ ರೂಪಾಯಿಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.
ಮಡಿಕೇರಿ ಜು.1 NEWS DESK : ಪ್ರಸಕ್ತ(2025-26) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿರುತ್ತವೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ಅರ್ಜಿಯನ್ನು ರೈತ ಸಂಪರ್ಕ ಕೇಂದ್ರದಿಂದ ಪಡೆದು ತಮ್ಮ ಅರ್ಜಿಯೊಂದಿಗೆ ಪಹಣಿ(ಆರ್ಟಿಸಿ), ಆಧಾರ್ ಕಾರ್ಡ್ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ, ರೂ.100ರ ಛಾಪಾಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೋರಿದೆ. ಕೃಷಿ ಉಪಕರಣಗಳಾದ ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂಬಿಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು…
ಮಡಿಕೇರಿ ಜು.1 NEWS DESK : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2025-26 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಸಿಖ್, ಪಾರ್ಸಿ, ಜೈನ್, ಬೌಧ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ.5000ಗಳ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ, 31 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿ ಪಡೆಯ ಬಯಸುವ ಅಭ್ಯರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು ಮತ್ತು ಕಚೇರಿ ದೂರವಾಣಿ ಸಂಖ್ಯೆ: 08272-220214 ಹಾಗೂ ಇಲಾಖಾ ವೆಬ್ಸೈಟ್ ತಿತಿತಿ.ಜom.ಞಚಿಡಿಟಿಚಿಣಚಿಞಚಿ.gov.iಟಿ ನಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯಗಳ ಮಾಹಿತಿಯನ್ನು ಪಡೆದು ಸದುಪಯೋಗ ಪಡಿಸಿಕೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.
ಮಡಿಕೇರಿ ಜು.1 NEWS DESK : ಜೂ.30ಕೊಡಗು ಜಿಲ್ಲೆಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಯ್ದೆಯಡಿ ಸುಮಾರು 12,629 ಮಂದಿ(9971 ಪುರುಷ ಮತ್ತು 2,658 ಮಹಿಳೆಯರು) ಕಾರ್ಮಿಕರು ಹೆಸರು ನೋಂದಾಯಿಸಿದ್ದಾರೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಕಾವೇರಿ ತಿಳಿಸಿದ್ದಾರೆ. ಮಡಿಕೇರಿ ತಾಲ್ಲೂಕಿನಲ್ಲಿ 3069(2424 ಪುರುಷ ಮತ್ತು 645 ಮಹಿಳೆ), ಸೋಮವಾರಪೇಟೆ ತಾಲ್ಲೂಕಿನಲ್ಲಿ 4146 ಮಂದಿ ಹೆಸರು ನೋಂದಾಯಿಸಿದ್ದು(3759 ಪುರುಷ ಮತ್ತು 387 ಮಹಿಳೆಯರು), ವಿರಾಜಪೇಟೆ ತಾಲ್ಲೂಕಿನಲ್ಲಿ 5414 ಮಂದಿ (3788 ಪುರುಷ ಮತ್ತು 1626 ಮಹಿಳೆಯರು) ಹೆಸರು ನೋಂದಾಯಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರು ಮಂಡಳಿಯಲ್ಲಿ ನೋಂದಣಿಯಾಗಲು ಸಹಾಯವಾಣಿ 155214 ಕರೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ. ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಪಿಂಚಣಿ ಸೌಲಭ್ಯದಡಿ ಮೂರು ವರ್ಷ ಸದಸ್ಯತ್ವದೊಂದಿಗೆ 60 ವರ್ಷ ಪೂರೈಸಿದ ಪಲಾನುಭವಿಗೆ ಮಾಸಿಕ ಪಿಂಚಣಿ ಸೌಲಭ್ಯ ದೊರೆಯಲಿದೆ. ಕುಟುಂಬ ಪಿಂಚಣಿ ಸೌಲಭ್ಯದಡಿ ಮೃತ ಪಿಂಚಣಿದಾರರ ಪತಿ/…
ಚೆಟ್ಟಳ್ಳಿ NEWS DESK ಜೂ.30 : ವಿರಾಜಪೇಟೆ ತಾಲ್ಲೂಕು ಬಿಟ್ಟಂಗಾಲದಲ್ಲಿರುವ ಪುಚ್ಚಿಮಾಂಡ ಐನ್ ಮನೆಗೆ ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ಐನ್ ಮನೆಯಲ್ಲಿ ನಡೆಯುತ್ತಿರುವ ಧಾರ್ಮಿಕ ಉತ್ಸವದಲ್ಲಿ ಪಾಲ್ಗೊಂಡರು. ಐನ್ ಮನೆಯಲ್ಲಿ ನಡೆಯುತ್ತಿರುವ ಶ್ರೀ ವಿಷ್ಣುಮೂರ್ತಿ ದೈವ ಕೋಲದಲ್ಲಿ ಭಾಗವಹಿಸಿ ಆಶೀರ್ವಾದ ಹಾಗೂ ಪ್ರಸಾದ ಪಡೆದರು. ಈ ಸಂದರ್ಭ ಪುಚ್ಚಿಮಾಂಡ ಕುಟುಂಬಸ್ಥರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಜೂ.30 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾಗಿ ಬರಹಗಾರ್ತಿ ಹಾಗೂ ಚಿತ್ರನಟಿ ಈರಮಂಡ ಹರಿಣಿ ವಿಜಯ್ ನೇಮಕಗೊಂಡಿದ್ದಾರೆ. ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಅವರಿಂದ ಹರಿಣಿ ಅವರು ಅಧಿಕಾರ ಸ್ವೀಕರಿಸಿದರು.
ಮೈಸೂರು, ಜೂ.30 NEWS DESK : ನಮ್ಮ ಮೈಸೂರಿನ ಕೆ.ಆರ್.ಎಸ್. ರಸ್ತೆಯಲ್ಲಿರುವ ಇಎಸ್ಐ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು, ವೈದ್ಯರು, ಆಡಳಿತ ಮಂಡಳಿಯ ಅಧಿಕಾರಿಗಳು ತಾಳ್ಮೆಯಿಂದ ವರ್ತಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚನೆ ನೀಡಿದ್ದಾರೆ. “ಇಎಸ್ಐ ಆಸ್ಪತ್ರೆ ನಿತ್ರಾಣ” ಎಂಬ ಶೀರ್ಷಿಕೆಯಡಿ ಮಾಧ್ಯಮದಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಯದುವೀರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಇಎಸ್ಐ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವೈದ್ಯರು ಮತ್ತು ಆಡಳಿತ ಮಂಡಳಿಗೆ ತಾಳ್ಮೆಯಿಂದ ಇರುವಂತೆ ಸೂಚನೆ ನೀಡಲಾಯಿತು ಎಂದು ತಿಳಿಸಿದ್ದಾರೆ. ರೋಗಿಗಳಿಗೆ ಸೂಕ್ತ, ಸಮರ್ಪಕ, ಪರಿಣಾಮಕಾರಿ ಚಿಕಿತ್ಸೆ ನೀಡುವುದನ್ನು ಖಚಿತಪಡಿಸಕೊಳ್ಳಬೇಕು. ಎಲ್ಲಾ ಸಮಯದಲ್ಲೂ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಸೂಚನೆ ನೀಡಲಾಯಿತು ಎಂದು ಯದುವೀರ್ ಸ್ಪಷ್ಟಪಡಿಸಿದ್ದಾರೆ. ವೈದ್ಯಕೀಯ ಯಂತ್ರೋಪಕರಣಗಳು, ತಜ್ಞ ವೈದ್ಯರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು. ಖಾಲಿ ಇರುವ ವೈದ್ಯ-ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಸೂಕ್ತ…
ಮಡಿಕೇರಿ ಜೂ.30 NEWS DESK : ಹಾಟ್೯ ಲ್ಯಾಂಪ್ ಆಂಗ್ಲ ಅನುವಾದಿತ ಕೃತಿಯ ಮೂಲಕ ‘ಕನ್ನಡ’ ಸಾಹಿತ್ಯಿದ ಅಂತಃಶಕ್ತಿಯನ್ನು ವಿಶ್ವದ ಉದ್ದಗಲಕ್ಕೂ ಪಸರಿಸಿ ಬೂಕರ್ ಪ್ರಶಸ್ತಿಯ ಹಿರಿಮೆಯ ಗರಿಯನ್ನು ತಮ್ಮ ಮಡಿಗೇರಿಸಿಕೊಂಡ ಕೊಡಗಿನ ದೀಪಾಭಾಸ್ತಿ ಅವರಿಗೆ ಕೊಡಗು ಪತ್ರಕರ್ತರ ಸಂಘದ ವತಿಯಿಂದ ಆಯೋಜಿತ ಅಭಿವಂದನಾ ದೀಪಾ’ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಸಂಘಟನೆಗಳು ಅಭಿಮಾನ ಪೂರ್ವಕವಾದ ಗೌರವವನ್ನು ಅಪಿ೯ಸಿ ಸಂಭ್ರಮಿಸಿದರು. ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ ಸಭಾಂಗಣದಲ್ಲಿ ಕೊಡಗು ಪತ್ರಕರ್ತರ ಸಂಘದ ವತಿಯಿಂದ ಆಯೋಜಿತ ‘ಅಭಿವಂದನಾ ದೀಪ’ ಎಂಬ ವಿಶಿಷ್ಟ ಪೌರ ಸನ್ಮಾನ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಭಾನು ಮುಷ್ತಾಕ್ ಅವರ ಎದೆಯ ಹಣತೆ ಕೃತಿಯನ್ನು ಇಂಗಲೀಷ್ಗೆ ‘ಹಾರ್ಟ್ ಲ್ಯಾಂಪ್’ ಆಗಿ ಅನುವಾದಿಸಿ ಬೂಕರ್ ಪ್ರಶಸ್ತಿಯನ್ನು ದೀಪಾ ಭಾಸ್ತಿ ಅವರು ಪಡೆದಿರುವುದು ಜಿಲ್ಲೆಯ ಇತಿಹಾಸದಲ್ಲೇ ಐತಿಹಾಸಿಕ ಸಾಧನೆ. ಇಂತಹ ಸಾಧನೆಯ ಮೂಲಕ ದೀಪಾ ಭಾಸ್ತಿ ಅವರು ಕೊಡಗಿಗೆ ಹೆಮ್ಮೆಯನ್ನು ತಂದಿದ್ದಾರೆಂದು…
ಮಡಿಕೇರಿ ಜೂ.30 NEWS DESK : ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 ಅಡಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ವಸತಿ ರಹಿತ (ನಿವೇಶನ / ಕಚ್ಚಾ ಮನೆ ಹೊಂದಿರುವ) ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರದ https/pmay.urban.gov.in ದಲ್ಲಿ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ನಗರಸಭೆ ಮಡಿಕೇರಿ, ಪುರಸಭೆ ಕುಶಾಲನಗರ & ವಿರಾಜಪೇಟೆ ಹಾಗೂ ಪಟ್ಟಣ ಪಂಚಾಯಿತಿ ಸೋಮವಾರಪೇಟೆ & ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾರ್ಡುಗಳಲ್ಲಿ ಇದುವರೆಗೂ ವಸತಿ ಯೋಜನೆಗಳ ಸೌಲಭ್ಯ ಪಡೆಯದ ಎಲ್ಲಾ ವಸತಿ ರಹಿತ ಹಾಗೂ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ (ವಿಶೇಷವಾಗಿ ಸಪಾಯಿ ಕರ್ಮಚಾರಿಗಳು, ಬೀದಿ ಬದಿ ವ್ಯಾಪಾರಿಗಳು, ಪಿ.ಎಂ. ವಿಶ್ವಕರ್ಮ ಯೋಜನೆಯ ಫಲಾನುಭವಿಗಳು, ಕಟ್ಟಡ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಕೊಳಚೆ ಪ್ರದೇಶದ ನಿವಾಸಿಗಳು ಸೇರಿದಂತೆ) ವಸತಿ ಸೌಲಭ್ಯ ಪಡೆಯಲು ಜುಲೈ, 15 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.…






