ಲೇಖಕ: admin

ಮಡಿಕೇರಿ NEWS DESK ಮೇ 4 : ಕೊಡಗು ಜಿಲ್ಲೆಯ ಕುಂಜಿಲದ OXFORD ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅಧಿಕ ಅಂಕ ಗಳಿಸಿರುವ ವಿದ್ಯಾರ್ಥಿಗಳ ವಿವರ ಇಲ್ಲಿದೆ >> ಅಫ್ರಾ ಫರ್ವಿನ್ ಕೆ.ಎಸ್ (ಶೇ.95.52), ಪಿ.ಹೆಚ್.ಶಾಹಿಲ್ (ಶೇ.80.32), ಪಿ.ಹೆಚ್.ಅಮೀರ್ (ಶೇ.79.52), ಅಹಮ್ಮದ್ ಅಶ್ಫಾ (ಶೇ.75.52), ಫಾತಿಮಾ ಶಹದೀಯ (ಶೇ.75.04), ಮಹವಿಯಾ ಪಿ.ಹೆಚ್ (ಶೇ.74.56), ಜಮ್ಶಿರಾ ಪಿ.ಆರ್ (ಶೇ.73.12), ಎ.ಎನ್.ನಫಿಯಾ (ಶೇ.71.36), ಅಫ್ರಿನಾ ಎಂ.ಹೆಚ್ (ಶೇ.69.60), ಶಾಹಿದ್ ಮಿಶಾಲ್ (ಶೇ.66.08), ಮೊಹಮ್ಮದ್ ಶಹದ್ (ಶೇ.62.23), ಇಝ್ಮಾ ಫಾತಿಮಾ ಬಿ.ಐ (ಶೇ.61.12), ಅಫ್ರಿದ್ ಸಿ.ಎ (ಶೇ.57.28) ಹಾಗೂ ಆಸಿಯತಲ್ ಮಿರ್ಝ (ಶೇ.50.40)

Read More

*ಅರ್ಜಿ ಆಹ್ವಾನ* *ಕಂಪ್ಯೂಟರ್ ಅತಿಥಿ ಉಪನ್ಯಾಸಕರು* ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಬಸವನಹಳ್ಳಿ, ಸೋಮವಾರಪೇಟೆ ತಾಲ್ಲೂಕು, ಕೊಡಗು ಜಿಲ್ಲೆ, ಮಡಿಕೇರಿ *ವಿದ್ಯಾರ್ಹತೆ* : MCA/ B.E in COMPUTER SCIENCE / M Sc in COMPUTER SCIENCE, ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. *ಅರ್ಜಿ ಸಲ್ಲಿಸುವ ದಿನಾಂಕ :* 6/5/2025 ರಿಂದ 15/5/2025 ರವರೆಗೆ, *ಅರ್ಜಿ ಸಲ್ಲಿಸಬೇಕಾದ ಸ್ಥಳ :* ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು, ಬಸವನಹಳ್ಳಿ, *ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ* : 9845659909 ಪ್ರಾಂಶುಪಾಲರು, *ವೇತನ* 18,150, *ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಇರುತ್ತದೆ.*

Read More

ಮಡಿಕೇರಿ NEWS DESK ಮೇ 3 : ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕೊಂಗಣ ಬಿ.ಶೆಟ್ಟಿಗೇರಿ ಗ್ರಾಮದ ಕಾಫಿ ತೋಟದ ಮನೆಯೊಂದರಲ್ಲಿ ಇತ್ತೀಚೆಗೆ ನಡೆದ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪ್ರದೀಪ್ ಕೊಯ್ಲಿ ಎಂಬುವವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಮುಗುಟಗೇರಿ ಗ್ರಾಮದ ಅನಿಲ್ ಎನ್.ಎಸ್.(25), ಸೋಮವಾರಪೇಟೆ ತಾಲ್ಲೂಕಿನ ಅಬ್ಬೂರುಕಟ್ಟೆಯ ದೀಪಕ್(21), ನೇರುಗಳಲೆಯ ಸ್ವೀಫನ್ ಡಿಸೋಜ(26), ಹಿತ್ತಲಮಕ್ಕಿಯ ಕಾರ್ತಿಕ್ ಹೆಚ್.ಎಂ.(27) ಹಾಗೂ ಪೊನ್ನಂಪೇಟೆಯ ನಲ್ಲೂರು ಗ್ರಾಮದ ಹರೀಶ್ ಪಿ.ಎಸ್.(29) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರ ಬಳಯಿಂದ 13.03 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನ, 2 ಮೊಬೈಲ್, ಮೃತ ವ್ಯಕ್ತಿಯ ಮೊಬೈಲ್ ಮತ್ತು ಮೃತ ವ್ಯಕ್ತಿಗೆ ಸೇರಿದ ಆಸ್ತಿ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಿ.ಶೆಟ್ಟಿಗೇರಿ ಗ್ರಾಮದ ಕಾಫಿ ತೋಟದ ಮನೆಯಲ್ಲಿ ವಾಸವಿದ್ದ ಕಣ್ಣೂರು ಜಿಲ್ಲೆಯ ಪ್ರದೀಪ್ ಕೊಯ್ಲಿಯವರನ್ನು ಇದೇ ಏ.23 ರಂದು ಹಗ್ಗದಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ…

Read More

ಸಿದ್ದಾಪುರ ಮೇ 3 NEWS DESK : ಅಂಚೆಮನೆ ಕುಟುಂಬದ ವತಿಯಿಂದ ಅಭ್ಯತ್ ಮಂಗಲದ ಐನ್ ಮನೆಯಲ್ಲಿ ಹರಿಸೇವೆ ಶ್ರದ್ಧಾಭಕ್ತಿಯಿಂದ ನಡೆಯಿತು. ಅಂಚೆಮನೆ ಪಟ್ಟೆದಾರ ಗಣೇಶ್ ಅವರ ಸಮ್ಮುಖದಲ್ಲಿ ನಡೆದ ಹರಿಸೇವೆಯಲ್ಲಿ ವಿವಿಧ ಕೈಂಕರ್ಯಗಳನ್ನು ನಾರಾಯಣ ದಾಸ ಹಾಗೂ ಮುಕ್ಕಾಟಿ ಲಿಂಗಪ್ಪ ನಡೆಸಿಕೊಟ್ಟರು. 10 ಕುಟುಂಬ 18 ಗೋತ್ರಾದ ಕುಟುಂಸ್ಥರು ಪಾಲ್ಗೊಂಡು ಸಂಭ್ರಮಿಸಿದರು. ಕುಟ್ಟಪ್ಪ, ಪುಷ್ಪಾವತಿ, ಗಾನಾವತಿ ಮತ್ತಿತರ ಪ್ರಮುಖರು ಹಾಜರಿದ್ದರು.

Read More

ಸೋಮವಾರಪೇಟೆ ಮೇ 3 NEWS DESK : ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಗೌಡಳ್ಳಿ ಬಿಜಿಎಸ್ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.88ರಷ್ಟು ಫಲಿತಾಂಶ ದೊರೆತ್ತಿದೆ. ಶಾಲೆಯ ವಿದ್ಯಾರ್ಥಿ ಕೆ.ಎಂ.ಸಹನಾ 625ಕ್ಕೆ 617 ಅಂಗಗಳಿಸುವ ಮೂಲಕ ತಾಲ್ಲೂಕಿನಲ್ಲಿ 5ನೇ ಸ್ಥಾನ ಗಳಿಸಿದ್ದಾರೆ. ಎ.ವಿ.ತೇಜಸ್ವಿನಿ 600, ಹೆಚ್.ಬಿ.ಶುಭೋಧಿನಿ 561 ಅಂಕಗಳನ್ನು ಗಳಿಸಿದ್ದಾರೆ. ಸೋಮವಾರಪೇಟೆ ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಗೆ ಶೇ.93.25 ರಷ್ಟು ಫಲಿತಾಂಶ ದೊರೆತ್ತಿದೆ. ಲಿಸ್ಮಾ ಡಯಸ್ 612, ಡಿ.ಆರ್. ಜಾಹ್ನವಿ 611, ತನಿಷಾ ರೈ 610 ಅಂಕಗಳಿಸಿದ್ದಾರೆ. ಸಂತ ಜೋಸೆಫರ ಅನುದಾನಿತ ಶಾಲೆಗೆ ಶೇ.80ರಷ್ಟು ಫಲಿತಾಂಶ ಲಭಿಸಿದೆ. ವೈಭವಿ 528, ವೈಷ್ಣವಿ 528, ರೇವತಿ 518, ಸಂಗೀತ 506 ಅಂಕಗಳಿಸಿದ್ದಾರೆ. ಸೋಮವಾರಪೇಟೆ ಓ.ಎಲ್.ವಿ. ಆಂಗ್ಲ ಮಾಧ್ಯಮ ಶಾಲೆಗೆ ಶೇ.98.88ರಷ್ಟು ಫಲಿತಾಂಶ ದೊರೆತ್ತಿದೆ. ಯು.ಎಂ.ಯಶ 618, ಕೆ.ಎಸ್.ಅಸ್ಮಿತಾ 610, ಆರ್.ಮಾನ್ಸಿ 608, ಬಿ.ಕೆ.ಸೋನು 604, ಎಸ್.ಕೆ.ಸೃಜನ್ 602, ಎಂ.ಪಿ.ಕಾರುಣ್ಯ 600 ರಷ್ಟು ಅಂಕಗಳಿಸಿದ್ದಾರೆ. ಸೋಮವಾರಪೇಟೆ ಜೂನಿಯರ್ ಕಾಲೇಜಿನ ಪ್ರೌಢಶಾಲೆಗೆ ಶೇ.73ರಷ್ಟು ಫಲಿತಾಂಶ ದೊರೆತ್ತಿದೆ. ರಿಶ್ಮಾ…

Read More

ಮಡಿಕೇರಿ ಮೇ 3 NEWS DESK : ಪರಿಶಿಷ್ಟ ಜಾತಿಯಲ್ಲಿನ ಒಳ ಮೀಸಲಾತಿ ವರ್ಗೀಕರಣ ಕುರಿತು ಮೇ 5 ರಿಂದ ನಡೆಯುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಸಂಬಂಧ ಸಮೀಕ್ಷೆ ಗಣತಿದಾರರಿಗೆ(ಶಿಕ್ಷಕರಿಗೆ) ತರಬೇತಿ ಕಾರ್ಯಾಗಾರವು ನಗರದ ಸಂತ ಜೋಸೆಫರ ಶಾಲಾ ಸಭಾಂಗಣದಲ್ಲಿ ಇಂದು ನಡೆಯಿತು. ಮಡಿಕೇರಿ ತಾಲ್ಲೂಕಿಗೆ ಸಂಬಂಧಪಟ್ಟಂತೆ ನಡೆದ ತರಬೇತಿಯಲ್ಲಿ 170 ಶಿಕ್ಷಕರು ಪಾಲ್ಗೊಂಡು ಮಾಹಿತಿ ಪಡೆದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಮಾತನಾಡಿ, ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಂಬಂದ ನ್ಯಾಯಮೂರ್ತಿ ಡಾ.ಎಚ್.ಎನ್.ನಾಗಮೋಹನದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗವು ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದ್ದು, ಈ ಸಂಬಂಧ ಸಮೀಕ್ಷೆಗೆ ನಿಯೋಜಿಸಿರುವ ಶಿಕ್ಷಕರು/ ಗಣತಿದಾರರು ಪರಿಶಿಷ್ಟ ಜಾತಿ ಕುಟುಂಬಗಳು ಹೇಳುವ ಮಾಹಿತಿಯನ್ನು ಮೊಬೈಲ್ ಆಪ್ ಮೂಲಕ ಭರ್ತಿ ಮಾಡಬೇಕು ಎಂದು ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಪ್ಪ ಮಾತನಾಡಿ, ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಸಂಬಂಧ ಸರ್ಕಾರದ ನಿರ್ದೇಶನವನ್ನು ಚಾಚೂ ತಪ್ಪದೇ…

Read More

ಯಲಹಂಕ ಮೇ 3 NEWS DESK : ಯಲಹಂಕದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 14 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು  ಲೋಕಾರ್ಪಣೆಗೊಳಿಸಿದರು.  ಈ ಸಂದರ್ಭ ಮಾತನಾಡಿದ ಅವರು, ಸಂವಿಧಾನದ ರಕ್ಷಣೆಯಾದರೆ ನಮ್ಮ ಹಕ್ಕುಗಳೂ ರಕ್ಷಣೆಯಾಗುತ್ತವೆ. ಸಂವಿಧಾನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಸಂವಿಧಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳವುದು ನಮ್ಮೆಲ್ಲರ ಕರ್ತವ್ಯ ಎಂದರು. ನಮ್ಮ ದೇಶ, ನಮ್ಮ ಸಮಾಜಕ್ಕೆ ಅವಶ್ಯವಾಗಿದ್ದಂತಹ ಅತ್ಯುತ್ತಮ ಸಂವಿಧಾನವನ್ನು ನೀಡಿದವರು ಬಾಬಾ ಸಾಹೇಬ್ ಅಂಬೇಡ್ಕರರು. ಈ ದೇಶದ ಸಾಮಾಜಿಕ ಪರಿಸ್ಥಿತಿ, ಜಾತಿ ವ್ಯವಸ್ಥೆ ಅಂಬೇಡ್ಕರ್ ಅವರಿಗೆ ಅರ್ಥ ಆದಷ್ಟು ಬೇರೆಯವರಿಗೆ ಆಗಿರಲಿಲ್ಲವೆಂದರೆ ಅದು ಅತಿಶಯೋಕ್ತಿಯಲ್ಲ. ಜಾತಿ ವ್ಯವಸ್ಥೆ ಇದ್ದಷ್ಟೂ ಕಾಲ ಮೀಸಲಾತಿ ಇರಲೇಬೇಕು ಎಂಬುದನ್ನು ಅವರು ಬಲವಾಗಿ ನಂಬಿದ್ದರು. ನಮ್ಮ ದೇಶದ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಆದರೆ ವರ್ಗಕ್ಕೆ ಚಲನೆಯಿದೆ. ನಮ್ಮ ಸಮಾಜದಲ್ಲಿ ಶ್ರೀಮಂತ ಬಡವನಾದರೂ,…

Read More

ಮಡಿಕೇರಿ ಮೇ 3 NEWS DESK : ರಾಷ್ಟ್ರೀಯ ಜನಗಣತಿಯ ಸಂದರ್ಭ ಆದಿಮಸಂಜಾತ ಬುಡಕಟ್ಟು ಜನಾಂಗ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ಅನ್ನು ಸೇರಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವ ಯೋಧ ಕುಲಕ್ಕಾಗಿ “ಸೋಶಿಯಲ್ ಎಂಜಿನಿಯರಿಂಗ್” ಪ್ರಕ್ರಿಯೆಯ ಭಾಗವಾಗಿ ಪ್ರತ್ಯೇಕ “ಕೋಡ್ ಮತ್ತು ಕಾಲಮ್” ಅನ್ನು ಸೇರಿಸಬೇಕೆಂದು ಒತ್ತಾಯಿಸಿ ಗೃಹಮಂತ್ರಿಗಳು ಹಾಗೂ ಅವರ ಅಧೀನದಲ್ಲಿ ಬರುವ ರಿಜಿಸ್ಟ್ರಾರ್ ಜನರಲ್ ಮತ್ತು ಸೆನ್ಸಸ್ ಕಮಿಷನರ್ ಆಫ್ ಇಂಡಿಯಾ (ಆರ್‍ಜಿಸಿಸಿಐ) ಇವರಿಗೆ ಸಿಎನ್‍ಸಿ ವತಿಯಿಂದ ಜ್ಞಾಪನಾ ಪತ್ರ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ರಾಷ್ಟ್ರೀಯ ಜನಗಣತಿ ಜೊತೆಗೆ ಜಾತಿವಾರು ಜನಗಣತಿ ನಡೆಸುವ ಬಗ್ಗೆ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಸ್ವಾಗತಾರ್ಹವಾಗಿದೆ. ಜನಗಣತಿಯಲ್ಲಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ಕೊಡವ ಸಮುದಾಯದ ನಿಖರವಾದ ಪ್ರಾತಿನಿಧ್ಯವನ್ನು ಖಚಿತಪಡಿಸುತ್ತದೆ. ಸೋಶಿಯಲ್ ಎಂಜಿನಿಯರಿಂಗ್ ಸರ್ಕಾರವು ಸಮುದಾಯದ ನಿರ್ದಿಷ್ಟ ಅಗತ್ಯಗಳನ್ನು ಅರ್ಥಮಾಡಿಕೊಳ್ಳಲು ಹಾಗೂ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ…

Read More

ಮಡಿಕೇರಿ ಮೇ 3 NEWS DESK : ಸೋಮವಾರಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್2 ಶಾಂತಳ್ಳಿ ಫೀಡರ್ ಮಾರ್ಗದಲ್ಲಿ ಮೇ, 05 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.  ಆದ್ದರಿಂದ ಯಡೂರು, ತಲ್ತಾರೆಶೆಟ್ಟಳ್ಳಿ, ಕಿರಗಂದೂರು, ತಾಕೇರಿ, ಗಿಜಗನಮನೆ, ತೊಳೂರುಶೆಟ್ಟಳ್ಳಿ, ಕೂತಿ, ಹೊಸಬೀಡು, ಕಲ್ಕಂದೂರು, ಬಸವನಕಟ್ಟೆ, ನಗರಳ್ಳಿ, ಹೆಮನಗದ್ದೆ, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹೆಗ್ಗಡಮನೆ, ಹರಗ, ಕುಂಬಾರಗಡಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್  ಕೋರಿದ್ದಾರೆ.

Read More

ಕೂಡಿಗೆ ಮೇ 3 NEWS DESK : ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ‌ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಗೊಂಡ ಪ್ರಾಂಶುಪಾಲ ಡಾ.ಕೆ.ಬಿ.ಬಸಪ್ಪ ಅವರಿಗೆ ಕಾಲೇಜು ವತಿಯಿಂದ ಬೀಳ್ಕೊಡಲಾಯಿತು. ಸುದೀರ್ಘ ಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ , ಮೂರು ವರ್ಷ ಒಂಭತ್ತು ತಿಂಗಳು ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಗೊಂಡ ಪ್ರಾಂಶುಪಾಲ ಡಾ ಕೆ.ಬಿ. ಬಸಪ್ಪ ಅವರನ್ನು ಕಾಲೇಜಿನ ಉಪನ್ಯಾಸಕರು ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಸನ್ಮಾನಿಸಿ ಗೌರವಿಸಿದರು. ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಮಂಜುಳಾ ಮಾತನಾಡಿ, ಕಾಲೇಜಿನ ಪ್ರಾಂಶುಪಾಲ ಡಾ.ಬಸಪ್ಪ ಮತ್ತು ಉಪನ್ಯಾಸಕರ ಸಮನ್ವಯತೆಯಿಂದ ಕಾಲೇಜಿನಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ಬರುತ್ತಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು. ಸೇವೆಯಲ್ಲಿ ಕರ್ತವ್ಯನಿಷ್ಠೆಯೊಂದಿಗೆ ಕಾರ್ಯನಿರ್ವಹಿಸಿ ಸರಳ ವ್ಯಕ್ತಿತ್ವದಲ್ಲಿ ಸಾರ್ಥಕತೆ ಕಂಡುಕೊಂಡು ನಿವೃತ್ತಿ ಹೊಂದುತ್ತಿರುವ ಬಸಪ್ಪ ಅವರ ಜೀವನ ಸುಖಮಯವಾಗಿರಲಿ ಎಂದು ಹಾರೈಸಿದರು. ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಪುಟ್ಟರಾಜು…

Read More