ಮಡಿಕೇರಿ NEWS DESK ಸೆ.10 : ಮಡಿಕೇರಿಯ ಕೊಡಗು ವಿದ್ಯಾಲಯದಲ್ಲಿ ಪ್ಲೇಹೋಮ್, ಕಿಂಡರ್ಗಾರ್ಟನ್ ಹಾಗೂ 1ನೇ ತರಗತಿಯ ಪುಟಾಣಿ ಮಕ್ಕಳು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು, ಸಡಗರದಿಂದ ಆಚರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿ ಮೊಣ್ಣಂಡ ಶೋಭಾ ಸುಬ್ಬಯ್ಯ, ಪ್ರಾಂಶುಪಾಲರಾದ ಸುಮಿತ್ರಾ ಕೆ.ಎಸ್., ಆಡಳಿತ ಮುಖ್ಯಸ್ಥರಾದ ರವಿ ಪಿ. ಹಾಗೂ ಸಂಯೋಜಕಿ ಭಾರತಿ ಕೆ.ಕೆ. ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ಲೇಹೋಮ್ನಿಂದ 1ನೇ ತರಗತಿಯವರೆಗಿನ ಮಕ್ಕಳು ಶ್ರೀಕೃಷ್ಣ ಹಾಗೂ ರಾಧೆಯ ವೇಷಭೂಷಣಗಳಲ್ಲಿ ಕಂಗೊಳಿಸಿ, ನೃತ್ಯ, ರ್ಯಾಂಪ್ ವಾಕ್ ಹಾಗೂ ಶ್ರೀಕೃಷ್ಣನ ಕುರಿತಾದ ಸುಮಧುರ ಗೀತೆಗಳ ಮೂಲಕ ಎಲ್ಲರ ಗಮನ ಸೆಳೆದರು. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿದ್ದ ಕಾಳಿಂಗ ಮರ್ಧನದ ನೃತ್ಯ ಹಾಗೂ ಭಕ್ತ ಕನಕದಾಸರ ‘ಕನಕನ ಕಿಂಡಿ’ ಕುರಿತ ನಾಟಕವನ್ನು ಮಕ್ಕಳು ಮನೋಜ್ಞವಾಗಿ ಪ್ರದರ್ಶಿಸಿದರು. ಮುಖ್ಯ ಅತಿಥಿ ಮೊಣ್ಣಂಡ ಶೋಭಾ ಸುಬ್ಬಯ್ಯ, ಮಕ್ಕಳ ಪ್ರತಿಭೆಯನ್ನು ಶ್ಲಾಘಿಸಿ, ಶ್ರೀಕೃಷ್ಣ ಜನ್ಮಾಷ್ಟಮಿಯ ಮಹತ್ವ ಹಾಗೂ ಶ್ರೀಕೃಷ್ಣನ ಜೀವನ ಸಂದೇಶಗಳನ್ನು ವಿವರಿಸಿದರು. ವಿದ್ಯಾರ್ಥಿಗಳಾದ ಗ್ರಹಿತ್, ಯುಧ್ವಿತಾ ಹಾಗೂ…
ಲೇಖಕ: admin
ಮಡಿಕೇರಿ NEWS DESK ಸೆ.10 : ಮಡಿಕೇರಿಯ ಕೊಡಗು ವಿದ್ಯಾಲಯದಲ್ಲಿ ಪ್ಲೇಹೋಮ್, ಕಿಂಡರ್ಗಾರ್ಟನ್ ಹಾಗೂ 1ನೇ ತರಗತಿಯ ಪುಟಾಣಿ ಮಕ್ಕಳು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು, ಸಡಗರದಿಂದ ಆಚರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿ ಮೊಣ್ಣಂಡ ಶೋಭಾ ಸುಬ್ಬಯ್ಯ, ಪ್ರಾಂಶುಪಾಲರಾದ ಸುಮಿತ್ರಾ ಕೆ.ಎಸ್., ಆಡಳಿತ ಮುಖ್ಯಸ್ಥರಾದ ರವಿ ಪಿ. ಹಾಗೂ ಸಂಯೋಜಕಿ ಭಾರತಿ ಕೆ.ಕೆ. ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ಲೇಹೋಮ್ನಿಂದ 1ನೇ ತರಗತಿಯವರೆಗಿನ ಮಕ್ಕಳು ಶ್ರೀಕೃಷ್ಣ ಹಾಗೂ ರಾಧೆಯ ವೇಷಭೂಷಣಗಳಲ್ಲಿ ಕಂಗೊಳಿಸಿ, ನೃತ್ಯ, ರ್ಯಾಂಪ್ ವಾಕ್ ಹಾಗೂ ಶ್ರೀಕೃಷ್ಣನ ಕುರಿತಾದ ಸುಮಧುರ ಗೀತೆಗಳ ಮೂಲಕ ಎಲ್ಲರ ಗಮನ ಸೆಳೆದರು. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿದ್ದ ಕಾಳಿಂಗ ಮರ್ಧನದ ನೃತ್ಯ ಹಾಗೂ ಭಕ್ತ ಕನಕದಾಸರ ‘ಕನಕನ ಕಿಂಡಿ’ ಕುರಿತ ನಾಟಕವನ್ನು ಮಕ್ಕಳು ಮನೋಜ್ಞವಾಗಿ ಪ್ರದರ್ಶಿಸಿದರು. ಮುಖ್ಯ ಅತಿಥಿ ಮೊಣ್ಣಂಡ ಶೋಭಾ ಸುಬ್ಬಯ್ಯ, ಮಕ್ಕಳ ಪ್ರತಿಭೆಯನ್ನು ಶ್ಲಾಘಿಸಿ, ಶ್ರೀಕೃಷ್ಣ ಜನ್ಮಾಷ್ಟಮಿಯ ಮಹತ್ವ ಹಾಗೂ ಶ್ರೀಕೃಷ್ಣನ ಜೀವನ ಸಂದೇಶಗಳನ್ನು ವಿವರಿಸಿದರು. ವಿದ್ಯಾರ್ಥಿಗಳಾದ ಗ್ರಹಿತ್, ಯುಧ್ವಿತಾ ಹಾಗೂ…
ಮಡಿಕೇರಿ NEWS DESK ಸೆ.10 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಅವರು ಪುನರಾಯ್ಕೆಯಾಗಿದ್ದಾರೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ನಡೆಸಿದ ಸಮೀಕ್ಷೆಯಲ್ಲಿ ಧರ್ಮಜ ಉತ್ತಪ್ಪ ಅವರೊಂದಿಗೆ ಹಿರಿಯ ಕಾಂಗ್ರೆಸ್ ಮುಖಂಡರಾದ ನಾಪಂಡ ಮುತ್ತಪ್ಪ ಹಾಗೂ ಕೆ.ಎಂ. ಲೋಕೇಶ್ ಅವರು ಸ್ಪರ್ಧೆಯಲ್ಲಿದ್ದರು. ಅಂತಿಮವಾಗಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಬಹುಮತದ ಅಭಿಪ್ರಾಯದ ಆಧಾರದ ಮೇಲೆ ಧರ್ಮಜ ಉತ್ತಪ್ಪ ಅವರನ್ನು ಮತ್ತೊಮ್ಮೆ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.2023ರಲ್ಲಿ ಧರ್ಮಜ ಉತ್ತಪ್ಪ ಅವರು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ನೇತೃತ್ವಕ್ಕೆ ಪಕ್ಷದೊಳಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಇದೀಗ ಮತ್ತೊಮ್ಮೆ ಜಿಲ್ಲಾಧ್ಯಕ್ಷ ಸ್ಥಾನವನ್ನು ನೀಡಲಾಗಿದೆ. ಪುನರಾಯ್ಕೆಯ ಕುರಿತು ಹರ್ಷ ವ್ಯಕ್ತಪಡಿಸಿರುವ ಧರ್ಮಜ ಉತ್ತಪ್ಪ ಅವರು, ತಮ್ಮ ಮೇಲೆ ವಿಶ್ವಾಸವಿಟ್ಟು ಮತ್ತೊಮ್ಮೆ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವ ಕಾಂಗ್ರೆಸ್…
ಮಡಿಕೇರಿ NEWS DESK ಸೆ.10 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಅವರು ಪುನರಾಯ್ಕೆಯಾಗಿದ್ದಾರೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ನಡೆಸಿದ ಸಮೀಕ್ಷೆಯಲ್ಲಿ ಧರ್ಮಜ ಉತ್ತಪ್ಪ ಅವರೊಂದಿಗೆ ಹಿರಿಯ ಕಾಂಗ್ರೆಸ್ ಮುಖಂಡರಾದ ನಾಪಂಡ ಮುತ್ತಪ್ಪ ಹಾಗೂ ಕೆ.ಎಂ. ಲೋಕೇಶ್ ಅವರು ಸ್ಪರ್ಧೆಯಲ್ಲಿದ್ದರು. ಅಂತಿಮವಾಗಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಬಹುಮತದ ಅಭಿಪ್ರಾಯದ ಆಧಾರದ ಮೇಲೆ ಧರ್ಮಜ ಉತ್ತಪ್ಪ ಅವರನ್ನು ಮತ್ತೊಮ್ಮೆ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.2023ರಲ್ಲಿ ಧರ್ಮಜ ಉತ್ತಪ್ಪ ಅವರು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ನೇತೃತ್ವಕ್ಕೆ ಪಕ್ಷದೊಳಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಇದೀಗ ಮತ್ತೊಮ್ಮೆ ಜಿಲ್ಲಾಧ್ಯಕ್ಷ ಸ್ಥಾನವನ್ನು ನೀಡಲಾಗಿದೆ. ಪುನರಾಯ್ಕೆಯ ಕುರಿತು ಹರ್ಷ ವ್ಯಕ್ತಪಡಿಸಿರುವ ಧರ್ಮಜ ಉತ್ತಪ್ಪ ಅವರು, ತಮ್ಮ ಮೇಲೆ ವಿಶ್ವಾಸವಿಟ್ಟು ಮತ್ತೊಮ್ಮೆ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವ ಕಾಂಗ್ರೆಸ್…
ಮಡಿಕೇರಿ, NEWS DESK ಸೆ.9: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಡ್ಲಿಪೇಟೆಯ ಬೆಸೂರು ಗ್ರಾಮದ ಶಿಕ್ಷಕಿ ಶ್ರೀಮತಿ ಸ್ನೇಹ ಬಸಮ್ಮ ಅವರು ತಮ್ಮ ತಂದೆ-ತಾಯಿಯವರ ಜ್ಞಾಪಕಾರ್ಥ ಸ್ಥಾಪಿಸಿರುವ ದಿ. ಗಂಗಮ್ಮ ರಾಚಪ್ಪ ದತ್ತಿನಿಧಿ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಬೆಳೆಸುವುದು ಹಾಗೂ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜಿಲ್ಲೆಯ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕೊಡಗು ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪ್ರತಿ ಕಾಲೇಜಿನಿಂದ ಗರಿಷ್ಠ ಇಬ್ಬರು ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬಹುದಾಗಿದೆ. “ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕಾವ್ಯಕೃಷಿ ಮಾಡಿದ ಮೇರು ವ್ಯಕ್ತಿತ್ವಗಳು” ಎಂಬ ವಿಷಯದ ಕುರಿತು ಎರಡು ಪುಟ ಮೀರದಂತೆ ಪ್ರಬಂಧವನ್ನು ಸ್ವಹಸ್ತಾಕ್ಷರದಲ್ಲಿ ಬರೆದು, ಸೆ.15, 2026ರೊಳಗೆ ಕೆಳಗಿನ ವಿಳಾಸಕ್ಕೆ ಅಂಚೆ, ವಾಟ್ಸಾಪ್ ಅಥವಾ ಇ-ಮೇಲ್ ಮೂಲಕ…
ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ ದಾಳಿ ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತ ಕ್ರಮವಾಗಿದೆ ಎಂದು ಮಾನವ ಬಂಧುತ್ವ ವೇದಿಕೆ ಕೊಡಗು ಜಿಲ್ಲಾ ಸಂಚಾಲಕ ಜೆ.ಎಲ್. ಜನಾರ್ಧನ್ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ದಲಿತ ಸಮುದಾಯದ ಪ್ರಮುಖ ಜನನಾಯಕರಾಗಿರುವ ಸತೀಶ್ ಜಾರಕಿಹೊಳಿ ಅವರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ ED ದಾಳಿ ನಡೆಸಲಾಗಿದೆ ಎಂದು ದೂರಿದ್ದಾರೆ. ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ದಲಿತರು, ಹಿಂದುಳಿದವರು ಹಾಗೂ ಹೋರಾಟಗಾರರನ್ನು ಸಂಘಟಿಸುವ ಕಾರ್ಯ ನಡೆಯುತ್ತಿದ್ದು, ಅವರ ರಾಜಕೀಯ ಮತ್ತು ಸಾಮಾಜಿಕ ಸಂಘಟನಾ ಚಟುವಟಿಕೆಗಳನ್ನು ಕುಗ್ಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬುದು ನಮ್ಮ ಆರೋಪವಾಗಿದೆ ಎಂದು ಜನಾರ್ಧನ್ ತಿಳಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರ ವ್ಯವಹಾರಗಳು ಕಾನೂನುಬದ್ಧವಾಗಿವೆ ಎಂದು ಅವರು ಸ್ಪಷ್ಟಪಡಿಸಿರುವ ಹಿನ್ನೆಲೆಯಲ್ಲಿ, ಅಂತರರಾಷ್ಟ್ರೀಯ ಹೂಡಿಕೆ ಹಾಗೂ ವ್ಯವಹಾರಗಳಿಗೆ ಸಂಬಂಧಿಸಿದಂತೆ…
ಮಡಿಕೇರಿ, NEWS DESK ಸೆ.9: ಅಧಿಕಾರಿಗಳು ಮಾನವೀಯತೆಯ ದೃಷ್ಟಿಕೋನದಿಂದ ಕರ್ತವ್ಯ ನಿರ್ವಹಿಸಬೇಕು.ಸಾರ್ವಜನಿಕರನ್ನು ಅನಗತ್ಯವಾಗಿ ಕಚೇರಿಗೆ ಅಲೆಸುವುದು ಅಥವಾ ಸತಾಯಿಸುವುದು ಸರಿಯಲ್ಲ ಎಂದು ಕರ್ನಾಟಕ ಲೋಕಾಯುಕ್ತ ಮಡಿಕೇರಿ ಡಿವೈಎಸ್ಪಿ ದಿನಕರ ಶೆಟ್ಟಿ ತಿಳಿಸಿದರು. ನಗರದ ತಾಲ್ಲೂಕು ತಹಶೀಲ್ದಾರರ ಕಚೇರಿಯಲ್ಲಿ ಬುಧವಾರ ನಡೆದ ಲೋಕಾಯುಕ್ತ ದೂರು ಅರ್ಜಿ ಸ್ವೀಕಾರ ಸಂದರ್ಭ ದೂರು ಅರ್ಜಿಗಳನ್ನು ಸ್ವೀಕರಿಸಿ, ದೂರುದಾರರ ಅಹವಾಲುಗಳನ್ನು ಆಲಿಸಿದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲೆದರೂ ನಡೆಯದ ಕೆಲಸ-ಮನವಿದಾರ ಬಾಲಕೃಷ್ಣ ಅವರು ಕಳೆದ ಮೂರು ವರ್ಷಗಳಿಂದ ಭೂಮಿ ದುರಸ್ತಿಗಾಗಿ ಕಚೇರಿಗೆ ಅಲೆಯುತ್ತಿದ್ದರೂ, ಇದುವರೆಗೆ ಸಮಸ್ಯೆ ಬಗೆಹರಿದಿಲ್ಲ ಎಂದು ದೂರಿದರು. ಮತ್ತೊಬ್ಬರು ತಮ್ಮ ಜಮೀನು ಒತ್ತುವರಿಯಾಗಿದ್ದು, ಸರ್ವೆ ನಡೆಸಿ ಸರಿಪಡಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ತಿಳಿಸಿದರು. ಇನ್ನೊಬ್ಬ ದೂರುದಾರರು ಜಮೀನಿನ ಖಾತೆ ಮಾಡಿಕೊಡುವಂತೆ ಹಲವು ಬಾರಿ ಮನವಿ ಮಾಡಿದರೂ ಕೆಲಸವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಭೂಮಿ ದುರಸ್ತಿ ಕಾರ್ಯ ಪೂರ್ಣಗೊಂಡಲ್ಲಿ ಕುಟುಂಬದ ಸದಸ್ಯರಿಗೆ ಜಮೀನಿನ ಪಾಲು ಮಾಡಲು ಅನುಕೂಲವಾಗಲಿದೆ.…
ಕುಶಾಲನಗರ, NEWS DESK ಸೆ. 9: ಕೊಡಗಿನಲ್ಲಿ ಗದ್ಯ ಹಾಗೂ ಕಾವ್ಯ ರಚನೆಯ ಮೂಲಕ ಸಾಹಿತ್ಯ ಕೃಷಿ ಮಾಡಿರುವ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ಅವರು ಕೊಡಗಿನ ಮೇರು ಸಾಹಿತಿಯಾಗಿ ರೂಪುಗೊಂಡು, ಯುವ ಸಾಹಿತಿಗಳಿಗೆ ಉತ್ತಮ ಮಾರ್ಗದರ್ಶನ ನೀಡುವ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕೊಡಗು ಜಿಲ್ಲಾ ಲೇಖಕರ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಟಿ.ಜಿ. ಪ್ರೇಮಕುಮಾರ್ ಬಣ್ಣಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು (ಕ.ಸಾ.ಪ.) ಹಾಗೂ ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕುಶಾಲನಗರದ ಕನ್ನಡ ಭಾರತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ (ಸೆ. 8ರಂದು) ತ್ರಿಭಾಷಾ ಸಾಹಿತಿ ದಿವಂಗತ ವಿ.ಎಸ್. ರಾಮಕೃಷ್ಣ ಅವರ ದತ್ತಿ ಕಾರ್ಯಕ್ರಮದ ಅಂಗವಾಗಿ ‘ವಿ.ಎಸ್. ರಾಮಕೃಷ್ಣ ಅವರ ಬದುಕು–ಬರಹ ಹಾಗೂ ಕೃತಿಗಳು’ ಕುರಿತು ಏರ್ಪಡಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಾಹಿತಿ ವಿ.ಎಸ್. ರಾಮಕೃಷ್ಣ ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ‘ಜೀವನ ದರ್ಶನ’…
ವಿರಾಜಪೇಟೆ, NEWS DESK ಸೆ.9 : ಕೃಷಿ ಚಟುವಟಿಕೆಯಲ್ಲಿ ರೈತರೊಂದಿಗೆ ದೊಡ್ಡ ದೊಡ್ಡ ಕಂಪನಿಗಳು ಕೈಜೋಡಿಸಿ, ಆಧುನಿಕ ಕೃಷಿ ಯಂತ್ರೋಪಕರಣಗಳನ್ನು ಕಡಿಮೆ ದರದಲ್ಲಿ ಒದಗಿಸಿದರೆ ಕೃಷಿಯನ್ನು ಮತ್ತಷ್ಟು ಲಾಭದಾಯಕವಾಗಿಸಬಹುದು ಎಂದು ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಪೂಜಾ ಸಜೇಶ್ ಅಭಿಪ್ರಾಯಪಟ್ಟರು. ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಕಾರ್ಯಾನುಭವ ಶಿಬಿರ ಹಾಗೂ ಕೃಷಿ ಇಲಾಖೆ, ಕೊಡಗು ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬೇಟೋಳಿ ಗ್ರಾಮದ ಪುದುಪಾಡಿ ಅಯ್ಯಪ್ಪ ಸಭಾಭವನದಲ್ಲಿ ಬುಧವಾರ ಆಯೋಜಿಸಿದ್ದ ರೈತರ ಬೆಳೆ ವಿಚಾರ ಸಂಕಿರಣವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಕೃಷಿ ಹೆಚ್ಚು ಲಾಭದಾಯಕವಾಗಿ ಉಳಿದಿಲ್ಲ. ಉನ್ನತ ಶಿಕ್ಷಣ ಪಡೆದ ಯುವ ಸಮುದಾಯ ಉದ್ಯೋಗಕ್ಕಾಗಿ ವಿದೇಶ ಹಾಗೂ ನಗರ ಪ್ರದೇಶಗಳತ್ತ ತೆರಳುತ್ತಿರುವುದರಿಂದ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆ ನಡೆಸುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳ ಬಳಕೆಯನ್ನು ಹೆಚ್ಚಿಸಬೇಕಾಗಿದೆ ಎಂದರು. ರೈತರಿಗೆ ಪೂರಕವಾಗುವ ಕೃಷಿ ಯಂತ್ರೋಪಕರಣಗಳನ್ನು ದೊಡ್ಡ ಕಂಪನಿಗಳು ಅಭಿವೃದ್ಧಿಪಡಿಸಿ…
ಮೈಸೂರು, NEWS DESK ಸೆ.09 : ಹಿರಿಯ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರ ‘ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿಗಳನ್ನು ಬುಧವಾರ ಬಿಡುಗಡೆಗೊಳಿಸಲಾಯಿತು. ತನ್ಮೂಲಕ ಅಭಿಮನ್ಯುವಿಗೆ ಅಕ್ಷರ ತೇರಿನ ಬೀಳ್ಕೊಡಿಗೆ ನೀಡಲಾಯಿತು. ಮೈಸೂರು ಕಲ್ಚರಲ್ ಅಸೋಸಿಯೇಷನ್, ಕರ್ನಾಟಕ ಅರಣ್ಯ ಇಲಾಖೆ ವನ್ಯಜೀವಿ ವಿಭಾಗ ವತಿಯಿಂದ ಮೈಸೂರಿನ ನಜರ್ ಬಾದ್ ನಲ್ಲಿರುವ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಭುಗೌಡ, ನಗರ ಕೇಂದ್ರ ಗ್ರಂಥಾಲಯ ಉಪ ನಿರ್ದೇಶಕ ಬಿ. ಮಂಜುನಾಥ್ ಪುಸ್ತಕಗಳನ್ನು ಬಿಡುಗಡೆಗೊಳಿಸಿದರು. ಖ್ಯಾತ ವನ್ಯಜೀವಿ ಛಾಯಾಗ್ರಾಹಕ ಕೃಪಾಕರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಪ್ರಾಣಿಗಳ ನಡವಳಿಕೆ ಬಗ್ಗೆ ಬರೆಯುವುದೇ ಒಂದು ಭಾವನಾತ್ಮಕ ಹಾಗೂ ಬಹು ದೀರ್ಘವಾದ ಪ್ರತಿಕ್ರಿಯೆಯಾಗಿದೆ. ಏಕೆಂದರೆ ನನ್ನ ವಿದೇಶಿ ಸ್ನೇಹಿತರೊಬ್ಬರು ಒಂದು ಪಕ್ಷಿಯ ಬಗ್ಗೆ 50 ವರ್ಷ ಅಧ್ಯಯನ ಮಾಡಿ ಅವುಗಳ ವರ್ತನೆಯ ಬಗ್ಗೆ ದಾಖಲಿಸಿದರು. ಆದರೂ ಅದು ಪೂರ್ಣಗೊಳ್ಳಲಿಲ್ಲ. ಇಂತಹ ಗಂಭೀರವಾದ ವಿಚಾರಗಳನ್ನು ಇಟ್ಟುಕೊಂಡು ರಮೇಶ್ ಉತ್ತಪ್ಪ…






