ಲೇಖಕ: admin

ವಿರಾಜಪೇಟೆ ಜು.22 NEWS DESK : ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಜನಗಣತಿ ಹಾಗೂ ಕ್ಷೇತ್ರ ಮರು ವಿಂಗಡಣೆ ಪ್ರಕ್ರಿಯೆಯಿಂದ ಮಹಿಳಾ ಮೀಸಲಾತಿಯನ್ನು ಬೇರ್ಪಡಿಸುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರಕಾರ ಮಂಡಿಸಬೇಕು. ಸಂಸತ್ತು ಹಾಗೂ ರಾಜ್ಯ ವಿಧಾನಸಭೆಗಳ ಕ್ಷೇತ್ರಗಳ ಆಧಾರದ ಮೇಲೆಯೇ ಮುಂದಿನ ಚುನಾವಣೆಯಿಂದ ಶೇ.33ರ ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆ ವತಿಯಿಂದ ವಿರಾಜಪೇಟೆಯಲ್ಲಿ ಪೋಸ್ಟರ್  ಬಿಡುಗಡೆ ಹಾಗೂ ಸಹಿ ಸಂಗ್ರಹ ಅಭಿಯಾನ ನಡೆಸಿತು. ವಿರಾಜಪೇಟೆಯಲ್ಲಿ ಸಂಘಟನೆಯ ಕಛೇರಿಯಲ್ಲಿ ಜಾಗೃತಿ  ಪೋಸ್ಟರ್ ಗಳನ್ನು ಬಿಡುಗಡೆ ಮಾಡಿದ ಮುಖಂಡರು, ಬಳಿಕ ಸಾರ್ವಜನಿಕರು, ವಿದ್ಯಾರ್ಥಿನಿಯರು ಹಾಗೂ ಮಹಿಳೆಯರಿಂದ ಸಹಿ ಸಂಗ್ರಹಿಸುವ ಮೂಲಕ ಕೇಂದ್ರ ಸರಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು. ರಾಜಕೀಯದಲ್ಲಿ ಮಹಿಳೆಯರ ಸಮಾನ ಪ್ರಾತಿನಿಧ್ಯ ಮತ್ತು ಶೇ.33 ಮೀಸಲಾತಿಯ ಅಗತ್ಯತೆಯನ್ನು ಸಾರುವ ವಿಶೇಷ ಪೋಸ್ಟರ್ ಗಳನ್ನು ಬಿಡುಗಡೆ ಮಾಡಲಾಯಿತು. ಮುಂಬರುವ ಚುನಾವಣೆಗಳಿಂದಲೇ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳ ಕ್ಷೇತ್ರಗಳ ಆಧಾರದ ಮೇಲೆ ಶೇಕಡಾ 33…

Read More

ಮಡಿಕೇರಿ ಜು.22 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರತಿಷ್ಠಿತ “ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ ಕೊಡಗು ಜಿಲ್ಲೆಯ ಪುರುಷ ಲೇಖಕರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿದ್ದ ದಿ. ಬಿ.ಎಸ್ ಗೋಪಾಲಕೃಷ್ಣರವರ ಜ್ಞಾಪಕಾರ್ಥ ಅವರ ಪುತ್ರ ಅನಂತಶಯನ ಮತ್ತು ಸಹೋದರರು ಪುರುಷ ಲೇಖಕರನ್ನು ಪ್ರೋತ್ಸಾಹಿಸುವ ಸಲುವಾಗಿ ಈ ದತ್ತಿ ಸ್ಥಾಪನೆ ಮಾಡಿರುತ್ತಾರೆ. 2026-27ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಲೇಖಕರು ತಾವು ರಚಿಸಿದ ಪುಸ್ತಕದ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಿ ತಕ್ಕದ್ದು. 2021ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಿತಕ್ಕದ್ದು. ಸ್ಪರ್ಧೆಗೆ ಪುಸ್ತಕ ಕಳುಹಿಸುವ ಲೇಖಕ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು. ಓರ್ವ ಲೇಖಕ ಒಂದು ಕೃತಿಯನ್ನು ಮಾತ್ರ ಕಳುಹಿಸತಕ್ಕದ್ದು. ಲಕೊಟೆಯ ಮೇಲೆ “ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಲೇಖಕರಿಗೆ ಮಾತ್ರ ಅವಕಾಶ. ಪುಸ್ತಕಗಳನ್ನು ಕಳುಹಿಸಲು ಕೊನೆಯ ದಿನಾಂಕ 02.08.2026. :: ಕಳುಹಿಸಬೇಕಾದ…

Read More

ಸುಂಟಿಕೊಪ್ಪ, ಜು.22 NEWS DESK :  ನಾವು ಮಾನವ ಸೇರಿದಂತೆ ಎಲ್ಲಾ ಜೀವಿಗಳ ಅಗತ್ಯತೆಗಳನ್ನು ಪೂರೈಸಲು ಮತ್ತು ಮುಂದಿನ ಭವಿಷ್ಯದ ಬಳಕೆಗಾಗಿ ನೀರನ್ನು ಉಳಿಸುವ ಅಭ್ಯಾಸವನ್ನು ಮಾಡಿದರೆ ಮಾತ್ರ ಜಲ ಸಂರಕ್ಷಣೆ ಸಾಧ್ಯ. ಈ ದಿಸೆಯಲ್ಲಿ ನಾವು ವೈಜ್ಞಾನಿಕ ಕ್ರಮದಲ್ಲಿ ನೀರಿನ ಸಂರಕ್ಷಣೆಗೆ‌ ವಿಶೇಷ ಗಮನಹರಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿಯೂ ಆದ ಪರಿಸರ ಕಾರ್ಯಕ್ರಮಗಳ ಸಂಘಟಕರೂ ಆದ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಹೇಳಿದರು. ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ವತಿಯಿಂದ ಸುಂಟಿಕೊಪ್ಪ ಹೋಬಳಿಯ ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆ ಮತ್ತು ಪಾವನಿ ಇಕೋ ಕ್ಲಬ್ ಆಶ್ರಯದಲ್ಲಿ ರಾಷ್ಟ್ರೀಯ ಆವಿಷ್ಕಾರ ಸಪ್ತಾಹ: 2026 ಅಂಗವಾಗಿ “ನೀರಿನ ಸಂರಕ್ಷಣೆ” ಕುರಿತು ಏರ್ಪಡಿಸಿದ್ದ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ “ಉತ್ತಮ ಭವಿಷ್ಯಕ್ಕಾಗಿ ಜಲ ಸಂರಕ್ಷಣೆ” ಕುರಿತು ಮಾಹಿತಿ ನೀಡಿದರು. ನಾವು ಯಾವುದೇ…

Read More

ಮಡಿಕೇರಿ ಜು.22 NEWS DESK : 2024, 2025, ಹಾಗೂ 2026ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ , ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ, ಸ್ನಾತಕೋತ್ತರ ಪದವೀಧರರಿಗೆ ಪ್ರತಿ ತಿಂಗಳು ರೂ.3,000 ಗಳು ಹಾಗೂ ಡಿಪ್ಲೋಮಾ ಪಡೆದವರಿಗೆ ರೂ.1500 ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ ಮತ್ತು ಈಗಾಗಲೇ ನೋಂದಾಯಿಸಿಕೊಂಡು ಹಣ ಪಡೆಯತ್ತಿರುವ ಫಲಾನುಭವಿಗಳು, ಪ್ರತಿ ತಿಂಗಳಿಗೊಮ್ಮೆ ಸ್ವಯಂ ಘೋಷಣೆಯನ್ನು ಮಾಡಿಕೊಳ್ಳಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 1800–599-7154 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ…

Read More

ಮಡಿಕೇರಿ ಜು.22 NEWS DESK : ಕಾನೂನು ಸೇವಾ ಪ್ರಾಧಿಕಾರವು ದುರ್ಬಲರಿಗೆ ಅಗತ್ಯ ನೆರವು ನೀಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬ ದ್ಯೇಯದಂತೆ ಪ್ರಾಧಿಕಾರವು ಕಾರ್ಯನಿರ್ವಹಿಸುತ್ತಾ ಬಂದಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಡಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಹೇಳಿದ್ದಾರೆ. ನಗರದ ಲಯನ್ಸ್ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಮಡಿಕೇರಿ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಆಯೋಜಿತ ಸ್ನೇಹಾಶ್ರಯ ಸಮಿತಿ ಮತ್ತು ಓಡಿಪಿ ಸಂಸ್ಥೆಗಳ 18ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಎಚ್.ಐ.ವಿ. ಪೀಡಿತ ಮಕ್ಕಳ ಆರೋಗ್ಯ ಸಂರಕ್ಷಣೆ ನಿಟ್ಟಿನಲ್ಲಿ ಉಭಯ ಸಂಸ್ಥೆಗಳು ಮಹತ್ತರ ಪಾತ್ರ ವಹಿಸಿರುವುದನ್ನು ಶ್ಲಾಘಿಸಿದ ಶುಭ ಅವರು, ಸಮಾಜದ ವಿವಿಧ ಸೇವಾ ಸಂಸ್ಥೆಗಳು ಇಂತಹ ಕಾರ್ಯಕ್ಕೆ ಕೈಜೋಡಿಸಿ ಸಹಕಾರ ನೀಡಬೇಕೆಂದು ಕರೆ ನೀಡಿದರು. ಎಚ್.ಐ.ವಿ. ಪೀಡಿತರಿಗೆ ಕಾನೂನು ಸೇವೆಯ ನೆರವು ನೀಡಲು ಪ್ರಾಧಿಕಾರ ಸದಾ ಸಿದ್ಧವಿದೆ ಎಂದು ಹೇಳಿದ…

Read More

ಮಡಿಕೇರಿ ಜು.22 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಮಲ್ಲಿಕಾರ್ಜುನ ಸ್ವಾಮಿ ಅವರನ್ನು ಆತ್ಮೀಯವಾಗಿ ಗೌರವಿಸಲಾಯಿತು. ಇತ್ತೀಚೆಗೆ ನಿವೃತ್ತರಾದ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ನಗರದ ಎರಡು ಅಕಾಡೆಮಿ ಕಚೇರಿಗಳಲ್ಲಿ ಪ್ರತ್ಯೇಕವಾಗಿ ಶಾಲೂ, ಫಲ ತಾಂಬೂಲ ನೀಡಿ ಸನ್ಮಾನಿಸಲಾಯಿತು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಆತ್ಮೀಯವಾಗಿ ಗೌರವಿಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಮಾತನಾಡಿ,  ಅಕಾಡೆಮಿ ಕಾರ್ಯಕ್ರಮಗಳು, ಪ್ರಧಾನ ಸಮಾರಂಭಗಳು, ಕಾರ್ಯಾಗಾರಗಳು ಮತ್ತಿತರ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸಲಹೆ, ಸಹಕಾರ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ…

Read More

ಕುಶಾಲನಗರ ಜು.22 NEWS DESK : ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳ 2025-26ನೇ ಶೈಕ್ಷಣಿಕ ಸಾಲಿನ ಬಿಕಾಂ, ಬಿ.ಸಿ.ಎ, ಬಿಬಿಎ ಮತ್ತು ಬಿಎಸ್ಸಿ ಪದವಿಗಳ ತೃತೀಯ ವರ್ಷದ (ಆವರ್ತನ ಮತ್ತು ಪುನರಾವರ್ತನ) ಪರೀಕ್ಷೆಗಳ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಸ್ನಾತಕ ಪದವಿ ಪರೀಕ್ಷೆಗಳು ಮುಗಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನದಂತೆ ಕೇವಲ ಐದು ದಿನಗಳಲ್ಲಿ ಫಲಿತಾಂಶವನ್ನು ಪ್ರಕಟಿಸಿದೆ. ಇದೇ ಜೂನ್/ಜುಲೈ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ಕೊಡಗಿನ 24 ಕಾಲೇಜುಗಳ ಸುಮಾರು 6500 ವಿದ್ಯಾರ್ಥಿಗಳು ಹಾಜರಾಗಿದ್ದರು. ಕೊಡಗು ವಿಶ್ವವಿದ್ಯಾಲಯದ ಸ್ನಾತಕ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷೆಗಳ ಮೌಲ್ಯಮಾಪನ ಪ್ರಕ್ರಿಯೆಯನ್ನು ಘಟಕ ಮಹಾವಿದ್ಯಾಲಯವಾಗಿರುವ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವ್ಯವಸ್ಥಿತವಾಗಿ ಮೌಲ್ಯಮಾಪನ ಕೇಂದ್ರವನ್ನು ಸಿದ್ಧಪಡಿಸಿಕೊಂಡು, ಜಿಲ್ಲೆಯ ವಿವಿಧ ಸ್ನಾತಕ ಪದವಿ ಕಾಲೇಜುಗಳ ವಿಷಯವಾರು ಮೌಲ್ಯಮಾಪಕರು ಸಕ್ರಿಯವಾಗಿ ಭಾಗವಹಿಸಿ ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ…

Read More

ಮಡಿಕೇರಿ NEWS DESK ಜು.22 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಯು.ಟಿ.ಖಾದರ್ ಅವರನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಮಂಗಳೂರಿನಲ್ಲಿ ಭೇಟಿಯಾದರು . ಕುಶಾಲನಗರ ತಾಲ್ಲೂಕು ಆಸ್ಪತ್ರೆ ಮತ್ತು ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ಕೋರಿದರು.

Read More

ಮಡಿಕೇರಿ NEWS DESK ಜು.22 -ಕಾನೂನು ಸೇವಾ ಪ್ರಾಧಿಕಾರವು ದುರ್ಬಲರಿಗೆ ಅಗತ್ಯ ನೆರವು ನೀಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬ ದ್ಯೇಯದಂತೆ ಪ್ರಾಧಿಕಾರವು ಕಾರ್ಯನಿರ್ವಹಿಸುತ್ತಾ ಬಂದಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಡಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಹೇಳಿದ್ದಾರೆ. ನಗರದ ಲಯನ್ಸ್ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಮಡಿಕೇರಿ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಆಯೋಜಿತ ಸ್ನೇಹಾಶ್ರಯ ಸಮಿತಿ ಮತ್ತು ಓಡಿಪಿ ಸಂಸ್ಥೆಗಳ 18 ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಎಚ್.ಐ.ವಿ. ಪೀಡಿತ ಮಕ್ಕಳ ಆರೋಗ್ಯ ಸಂರಕ್ಷಣೆ ನಿಟ್ಟಿನಲ್ಲಿ ಉಭಯ ಸಂಸ್ಥೆಗಳು ಮಹತ್ತರ ಪಾತ್ರ ವಹಿಸಿರುವುದನ್ನು ಶ್ಲಾಘಿಸಿದ ಶುಭ ಅವರು, ಸಮಾಜದ ವಿವಿಧ ಸೇವಾ ಸಂಸ್ಥೆಗಳು ಇಂತಹ ಕಾರ್ಯಕ್ಕೆ ಕೈಜೋಡಿಸಿ ಸಹಕಾರ ನೀಡಬೇಕೆಂದು ಕರೆ ನೀಡಿದರು. ಎಚ್.ಐ.ವಿ. ಪೀಡಿತರಿಗೆ ಕಾನೂನು ಸೇವೆಯ ನೆರವು ನೀಡಲು ಪ್ರಾಧಿಕಾರ ಸದಾ ಸಿದ್ಧವಿದೆ ಎಂದು ಹೇಳಿದ ನ್ಯಾಯಾಧೀಶರಾದ ಶುಭ,…

Read More

ಮಡಿಕೇರಿ NEWS DESK ಜು. 22- ರೋಟರಿ ವುಡ್ಸ್ ಸಂಸ್ಥೆಯ ವತಿಯಿಂದ ಜುಲೈ 26 ರಂದು ಕಾಗಿ೯ಲ್ ವಿಜಯ್ ದಿವಸ್ ಅಂಗವಾಗಿ ಯೋಧನಮನ ಕಾಯ೯ಕ್ರಮ ಆಯೋಜಿಸಲಾಗಿದೆ. ನಗರದ ರೋಟರಿ ಸಭಾಂಗಣದಲ್ಲಿ ಜು. 26 ರಂದು ಭಾನುವಾರ ಬೆಳಗ್ಗೆ 10.30 ಗಂಟೆಗೆ ಆಯೋಜಿತ ಕಾಗಿ೯ಲ್ ವಿಜಯ್ ದಿವಸ್ ಕಾಯ೯ಕ್ರಮವನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಆರ್.ಎಸ್. ಬಿಂದುಮಣಿ ಅವರು ಉದ್ಘಾಟಿಸಲಿದ್ದಾರೆ. ಕಾಯ೯ಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲೆ 3181 ನ ಕ್ಲಬ್ನಿ ವಿಸ್ತರಣಾ ಸಮಿತಿ ಅಧ್ಯಕ್ಷ  ಅನಿಲ್ ಹೆಚ್.ಟಿ, ರೋಟರಿ ವಲಯ 6 ರ ಸಹಾಯಕ ಗವನ೯ರ್ ಎಂ.ಡಿ. ರಂಗಸ್ವಾಮಿ, ವಲಯ ಸೇನಾನಿ ಕೆ.ವಸಂತ್ ಕುಮಾರ್ , ರೋಟರಿ ವುಡ್ಸ್ ಕಾಯ೯ದಶಿ೯ ಸ್ಮಿತಾಚಂಗಪ್ಪ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮ ದಲ್ಲಿ  ಸೈನಿಕ ದಂಪತಿಗೆ ಸನ್ಮಾನ ನೆರವೇರಲಿದೆ ಎಂದು ರೋಟರಿ ವುಡ್ಸ್ ಅಧ್ಯಕ್ಷೆ ಪ್ರಮೀಳಾ ಕೆ.ಶೆಟ್ಟಿ ತಿಳಿಸಿದ್ದಾರೆ.

Read More