ಲೇಖಕ: admin

ಚೆಟ್ಟಳ್ಳಿ NEWS DESK ಜೂ.12 : ಚೆಟ್ಟಳ್ಳಿ ಕಾಫಿ ಸಂಶೋಧನಾ ಉಪ ಕೇಂದ್ರದ ಮುಖ್ಯಸ್ಥರಾಗಿ ಕಾಫಿ ಮಂಡಳಿಯ ಜಂಟಿ ನಿರ್ದೇಶಕರಾದ(ಸಂಶೋಧನೆ) ಡಾ.ಸಿ.ವಬಾಬು ಅಧಿಕಾರ ಸ್ವೀಕಾರಿಸಿದ್ದಾರೆ. ಈ ಹಿಂದೆ ಉಪ‌ನಿರ್ದೇಶಕ ಡಾ.ಜೀನಾ ದೇವಸಿಯಾ ಅವರು ಕೇಂದ್ರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಚಿಕ್ಕಮಗಳೂರಿಗೆ ವರ್ಗಾವಣೆಗೊಂಡ ನಂತರ ಡಾ.ಸಿ. ಬಾಬು ರವರನ್ನು ನೇಮಕ ಮಾಡಲಾಗಿದೆ.  2012ರಲ್ಲಿ ಚಿಕ್ಕಮಂಗಳೂರಿನ ಕಾಫಿ ಸಂಶೋದನಾ ಕೇಂದ್ರದಲ್ಲಿ ವಿಜ್ಞಾನಿಗಳಾಗಿ ಸೇವೆ ಸಲ್ಲಿಸಿದ. ಡಾ. ಬಾಬೋವು ಅವರು 2017ರಲ್ಲಿ ಹಿರಿಯ ವಿಜ್ಞಾನಿಗಳಾಗಿ ಕೇರಳದ ವೈನಾಡಿನಲ್ಲಿ ಸೇವೆ ಸಲ್ಲಿಸಿದರು. 2019ರಲ್ಲಿ ತಮಿಳುನಾಡಿನ ಕಾಫಿ ಸಂಶೋದನಾ ಕೇಂದ್ರದಲ್ಲಿ ಉಪನಿದೇಶಕರಾಗಿ ಸೇವೆಸಲ್ಲಿಸಿ 2022ರಲ್ಲಿ ಕೇಂದ್ರದ ಬೇಸಾಯ ಶಾಸ್ತ್ರ ವಿಭಾಗಿಯ ಮುಖ್ಯಸ್ಥರಾಗಿ 2025ಯಲ್ಲಿ ಚಿಕ್ಕಮಗಳೂರಿನ ಕಾಫಿ ಮಂಡಳಿಯಲ್ಲಿ ಜಂಟಿ‌ ನಿದೇಶಕರಾಗಿ ಸೇವೆಸಿದ್ದು ಚೆಟ್ಟಳ್ಳಿ ಕಾಫಿ ಸಂಶೋದನಾ ಉಪಕೇಂದ್ರವನ್ನು ಅಭಿವ್ರದ್ದಿ ಪಡಿಸುವ ನಿಟ್ಟಿನಲ್ಲಿ ಕೇಂದ್ರದ ಮುಖ್ಯಸ್ಥರಾಗಿ ಕಾಫಿ‌ಮಂಡಳಿ ನೇಮಕ ಮಾಡಿದೆ.

Read More

ಮಡಿಕೇರಿ NEWS DESK ಜೂ.12 : ವಯೋವೃದ್ಧರು ಹಾಗೂ ಆಶ್ರಯ ಇಲ್ಲದವರಿಗೆ ಆಶ್ರಯ ನೀಡಿ ಸಂತೈಸುತ್ತಿರುವ ಮಡಿಕೇರಿಯ ವಿಕಾಸ್ ಜನತಾ ಸೇವಾ ಟ್ರಸ್ಟ್ ನ ವ್ಯವಸ್ಥಾಪನಾ ಸಮಿತಿಯ ನೂತನ ನಿರ್ದೇಶಕರುಗಳಾಗಿ ಓಂ ಪ್ರಕಾಶ್ ರಾತ್ಹೊರೆ, ರಾಜೀವ್, ಪ್ರಸಾದ್ ಕೆ.ಬಿ ಹಾಗೂ ಮಲ್ಲಿಗೆ ಗೋಪಾಲ್ ಆಯ್ಕೆಯಾಗಿದ್ದಾರೆ. ಟ್ರಸ್ಟ್ ನ ಅಧ್ಯಕ್ಷ ನವೀನ್, ಗೌರವಾಧ್ಯಕ್ಷ ಪ್ರಸನ್ನ ಭಟ್ ಹಾಗೂ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷೆ ಮಿನಾಜ಼್ ಪ್ರವೀಣ್ ಅವರ ಸಮ್ಮುಖದಲ್ಲಿ ನೂತನ ನಿರ್ದೇಶಕರುಗಳ ಆಯ್ಕೆ ಪ್ರಕಿಯೆ ನಡೆಯಿತು ಎಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಕೋಚನ ಚೇತನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಜೂ.12 : ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಗ್ರಾಹಕರಿಗಾಗಿ ಮಳೆಗಾಲದ ವಿಶೇಷ ಖರೀದಿ ಉತ್ಸವ ಮುಂಗಾರು ಮೇಳವನ್ನು ಘೋಷಿಸಿದೆ. ಈ ಮೇಳವು ಜೂನ್ 13ರಿಂದ ಜೂನ್ 22ರವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಮುಕ್ತವಾಗಿದೆ. ಮೇಳದ ಅಂಗವಾಗಿ ಚಿನ್ನದ ಸರಗಳ ತಯಾರಿಕೆ ಶುಲ್ಕ ಕೇವಲ 8%ರಿಂದ, ಹಾಗೂ ಆಂಟಿಕ್ ಆಭರಣಗಳ ತಯಾರಿಕೆ ಶುಲ್ಕ 12%ರಿಂದ ಆರಂಭವಾಗುತ್ತದೆ. ಜೊತೆಗೆ EF & VVS ಗುಣಮಟ್ಟದ ವಜ್ರಾಭರಣಗಳು ಅತ್ಯಂತ ಕಡಿಮೆ ದರದಲ್ಲಿ ಲಭ್ಯವಿದ್ದು, ಇತರೆ ಆಯ್ದ ಆಭರಣಗಳ ಖರೀದಿಯ ಮೇಲೂ ಆಕರ್ಷಕ ರಿಯಾಯಿತಿಗಳನ್ನು ಪಡೆಯಬಹುದು. ಇದಲ್ಲದೆ, ಹಳೆಯ 916 ಹಾಲ್‌ಮಾರ್ಕ್ ಚಿನ್ನವನ್ನು ಯಾವುದೇ ಕಡಿತವಿಲ್ಲದೆ ಪ್ರಸ್ತುತ ಚಿನ್ನದ ದರದಲ್ಲಿ ಮೌಲ್ಯಮಾಪನ ಮಾಡಿ ಹೊಸ ಆಭರಣಗಳಿಗೆ ವಿನಿಮಯ ಮಾಡಿಕೊಳ್ಳುವ ಸುವರ್ಣಾವಕಾಶವೂ ಗ್ರಾಹಕರಿಗಾಗಿ ಕಲ್ಪಿಸಲಾಗಿದೆ. ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರ ಅಭಿರುಚಿಗೆ ತಕ್ಕ ವಿಶೇಷ ಆಭರಣಗಳ ವಿಶಾಲ ಸಂಗ್ರಹ, ಇಂದಿನ ಟ್ರೆಂಡಿಂಗ್ ಡಿಸೈನ್‌ಗಳ ಅದ್ಭುತ ಕಲೆಕ್ಷನ್‌ಗಳೊಂದಿಗೆ ನಿಮ್ಮ ಕನಸಿನ ಆಭರಣಗಳನ್ನು ಆಯ್ಕೆಮಾಡುವ ಅವಕಾಶ ಈ ಮುಂಗಾರು…

Read More

ಮಡಿಕೇರಿ NEWS DESK ಜೂ.12 : ಮಡಿಕೇರಿ ತಾಲ್ಲೂಕಿನ ನಾಪೋಕ್ಲುವಿನ ಬೇತು ಗ್ರಾಮದ ನಿವಾಸಿ ಮೂಟೇರಿ ಎನ್.ಗಣೇಶ (78) ಅವರು ಗುರುವಾರ ಬೆಳಿಗ್ಗೆ ನಿಧನ ಹೊಂದಿದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಗುರುವಾರ ಸಂಜೆ ಅಂತ್ಯಕ್ರಿಯೆ ನಡೆಯಿತು.

Read More

ಸುಂಟಿಕೊಪ್ಪ ಜೂ.11 NEWS DESK : ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ ಮಲೇರಿಯ ವಿರೋಧಿ ಮಾಸಾಚರಣೆ ನಡೆಯಿತು. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅವರು, ಮಲೇರಿಯಾ ಕಾಯಿಲೆ ಹರಡುವ ಬಗ್ಗೆ ಅದರ ರೋಗ ಲಕ್ಷಣಗಳ ಬಗ್ಗೆ ಮತ್ತು ನೀಡುವ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು. ಸಾರ್ವಜನಿಕರು ಮುಂಜಾಗೃತ ಕ್ರಮವಹಿಸುವ ಬಗ್ಗೆ ಅರಿವು ಮೂಡಿಸುವ ಅಗತ್ಯತೆ ಇದೆ ಎಂದು ಆರೋಗ್ಯ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರಿಗೆ ತಿಳಿಸಿದರು. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮೇರಾಜ್ ರೋಗ ಲಕ್ಷಣದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಗಾರದಲ್ಲಿ ಸು.ಪ್ರಾ.ಆ.ಕೇಂದ್ರದ ಸುರಕ್ಷಾಧಿಕಾರಿ, ಸಮುದಾಯ ಆರೋಗ್ಯ ಅಧಿಕಾರಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Read More

ಮಡಿಕೇರಿ ಜೂ.11 NEWS DESK : ದೇಶಭಕ್ತಿ, ಸಮಗ್ರತೆಯ ಪರಿಕಲ್ಪನೆ, ನಾಯಕತ್ವದ ಗುಣಗಳೊಂದಿಗೆ, ರಾಷ್ಟ್ರೀಯ ಸೇವೆಯ ಮೌಲ್ಯಗಳನ್ನು ಯುವ ಸಮೂಹದಲ್ಲಿ ಮೂಡಿಸುವ ಮೂಲಕ, ಅವರನ್ನು ಭವಿಷ್ಯಕ್ಕೆ ಸಜ್ಜುಗೊಳಿಸುವ ಕಾರ್ಯದಲ್ಲಿ ಸೈನಿಕ ಶಾಲೆಗಳು ಮಹತ್ವದ ಪಾತ್ರ ವಹಿಸಿರುವುದಾಗಿ ಕೇರಳ ಮತ್ತು ತಮಿಳುನಾಡಿನ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ತಿಳಿಸಿದರು. ಕೂಡಿಗೆಯ ಕೊಡಗು ಸೈನಿಕ ಶಾಲೆಯಲ್ಲಿ ಆಯೋಜಿತ ಪ್ರತಿಷ್ಠಿತ “ಪ್ರಿ ಸುಬ್ರೋಟೋ ಕಪ್-2026” ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ಗುಂಪು ಫುಟ್ಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ರಾಜ್ಯಪಾಲರು ಮಾತನಾಡಿದರು. ರಾಷ್ಟ್ರದ ವಿವಿಧೆsಡೆಗಳ ಸೈನಿಕ ಶಾಲೆಗಳ ಯುವ ಫುಟ್ಬಾಲ್ ಆಟಗಾರರು ಪಂದ್ಯಾವಳಿಯಲ್ಲಿ ಶಿಸ್ತಿನಿಂದ ಪಾಲ್ಗೊಂಡು ಪ್ರದರ್ಶಿಸಿರುವ ಕ್ರೀಡಾ ಮನೋಭಾವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಕೊಡಗು ಸೈನಿಕ ಶಾಲೆಯನ್ನು ಶ್ಲಾಘಿಸಿದರು. ಸೈನಿಕ ಶಾಲೆಗಳ ಮೂಲಕ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸಮಗ್ರ ಶಿಕ್ಷಣ, ಆಯೋಜಿಸುತ್ತಿರುವ ಕ್ರೀಡಾ ಚಟುವಟಿಕೆಗಳು ಹಾಗೂ ರಾಷ್ಟ್ರ ನಿರ್ಮಾಣದ ಗುರಿಯನ್ನು ಯುವ ಸಮೂಹದಲ್ಲಿ…

Read More

ವಿರಾಜಪೇಟೆ ಜೂ.12 NEWS DESK : ವಿರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಅಮ್ಮತ್ತಿ ವಲಯದ ಚೆಂಬೆಬೆಳ್ಳೂರು ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ದೇವಣಗೇರಿ ಗ್ರಾಮದ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಬೀದಿ ನಾಟಕ ಕಾರ್ಯಕ್ರಮ ನಡೆಯಿತು. ಜನಜಾಗೃತಿ ಸಮಿತಿ ಸದಸ್ಯರಾದ ಮೂಕೊಂಡ ಶಶಿ ಸುಬ್ರಮಣಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬೀದಿ ನಾಟಕದ ಮುಖಾಂತರ ಜನರಿಗೆ ಮನಮುಟ್ಟುವಂತೆ ಜಾಗೃತಿಯನ್ನು ಮೂಡಿಸಬಹುದು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನೇಕ ಸಾಮಾಜಿಕ ಕಳಕಳಿ ಇರುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತಿದ್ದು, ಇದರ ಪ್ರಯೋಜನಗಳನ್ನು ಜನರು ಪಡೆದುಕೊಳ್ಳಿ, ಬೀದಿ ನಾಟಕಗಳಿಂದ ಜನರಿಗೆ ಜಾಗೃತಿಯು ಹೆಚ್ಚಾಗಿ ಮೂಡುತ್ತದೆ ಎಂದು ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಿಠಲ್ ಸಾಲಿಯಾನ್ ಮಾತನಾಡಿ, ನಿಸರ್ಗ ಕಲಾಭಿವೃದ್ಧಿ ಬೀದಿ ನಾಟಕ ಕಲಾತಂಡದವರು ತುಂಬಾ ಚೆನ್ನಾಗಿ ಸ್ವಚ್ಛತೆಯ ಬಗ್ಗೆ ಹಾಗೂ ನೀರಿನ ಸದ್ಬಳಕೆಯ ಬಗ್ಗೆ ಜಾಗೃತಿಯನ್ನು ಮೂಡಿಸಿದ್ದಾರೆ. ಔಷಧೀಯ ಸಸ್ಯ ಸಂಕುಲವಿರುವ…

Read More

ಕುಶಾಲನಗರ, ಜೂ.11 NEWS DESK : ಸೋಮವಾರಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ವತಿಯಿಂದ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಇಕೋ ಕ್ಲಬ್, ಎನ್ನೆಸ್ಸೆಸ್ , ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶಾಲಾ ಘಟಕಗಳ ಸಂಯುಕ್ತಾಶ್ರಯದಲ್ಲಿ “ವಿಶ್ವ ಪರಿಸರ ದಿನಾಚರಣೆ” ಅಂಗವಾಗಿ ಪರಿಸರ ಜಾಗೃತಿ ಅಭಿಯಾನ ವನ್ನು ಹಮ್ಮಿಕೊಳ್ಳಲಾಗಿತ್ತು. ಅಭಿಯಾನದ ಅಂಗವಾಗಿ ಏರ್ಪಡಿಸಿದ್ದ ಪರಿಸರ ಕಾರ್ಯಕ್ರಮದಲ್ಲಿ ಗಿಡನೆಟ್ಟು ಪರಿಸರ ಕಾರ್ಯಕ್ರಮಕ್ಕೆ ಚಾಲನೆ ನೀಡಿ “ಪರಿಸರ ಸಂರಕ್ಷಣೆ ಕುರಿತು ಮಾಹಿತಿ ನೀಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಿಠಲ ಎಸ್. ಸಾಲಿಯಾನ, ನಮ್ಮ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಗಿಡನೆಟ್ಟು ಬೆಳೆಸಿ ಅದನ್ನು ಪೋಷಿಸುವ ಮೂಲಕ ಪರಿಸರ ಕಾಪಾಡಬೇಕಿದೆ ಎಂದರು. ಪರಿಸರ ಸಂರಕ್ಷ ಣೆ ಎಂದರೆ ಕೇವಲ ಗಿಡ, ಮರಗಳನ್ನು ಬೆಳೆಸುವುದಷ್ಟೇ ಅಲ್ಲ. ನಿತ್ಯ ಜೀವನದಲ್ಲಿ ಅನುಸರಿಸಬೇಕಾದ ಹಲವಾರು ನಡವಳಿಕೆಗಳನ್ನು ಚಾಚೂ ತಪ್ಪದೆ ಪಾಲಿಸುವುದರಿಂದ ಪರಿಸರವನ್ನು ಉಳಿಸಬಹುದು…

Read More

ಮಡಿಕೇರಿ ಜೂ.11 NEWS DESK : ಸಾರ್ವಜನಿಕರ ಹಾಗೂ ಪರಿಸರದ ಹಿತದೃಷ್ಟಿಯಿಂದ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ಗಿಂತ ಕಡಿಮೆ ಪ್ರಮಾಣದ ಎಲ್ಲಾ ತರಹದ ಕುಡಿಯುವ ನೀರಿನ ಬಾಟಲಿಗಳನ್ನು ಈ ಪ್ರಕಟಣೆ ದಿನಾಂಕದಿಂದ ಮಾರಾಟ, ಖರೀದಿ ಹಾಗೂ ಶೇಖರಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈಗಾಗಲೇ ಸರ್ಕಾರದಿಂದ ನಿಷೇಧಿಸಿರುವ ಏಕ ಬಳಕೆ ಪ್ಲಾಸ್ಟಿಕ್ (ಕವರ್, ಇಯರ್ ಬಡ್ಸ್, ಸ್ಟ್ರಾ ಪೈಪ್, ಕ್ಯಾಂಡಿ ಮತ್ತು ಐಸ್ ಕ್ರೀಮ್ ಕಡ್ಡಿಗಳು, ಅಲಂಕಾರ ವಸ್ತುಗಳು, ಪ್ಯಾಕಿಂಗ್ ಸಾಮಾಗ್ರಿಗಳು, ಆಮಂತ್ರಣ ಪತ್ರಿಕೆಗಳು ಹಾಗೂ ಇತ್ಯಾದಿ) ಸಹ ನಿಷೇಧಿಸಿರುವುದರಿಂದ ಸಾರ್ವಜನಿಕರು, ಉದ್ದಿಮೆದಾರರು ಹಾಗೂ ಪ್ರವಾಸಿಗರು ಬಳಸದಂತೆ ಕೋರಲಾಗಿದೆ. ಆದರಿಂದ ಉದ್ದಿಮೆದಾರರು ತಕ್ಷಣದಿಂದ ಜಾರಿಗೆ ಬರುವಂತೆ 2 ಲೀಟರ್ ಗಿಂತ ಕಡಿಮೆ ಪ್ರಮಾಣದ ಎಲ್ಲಾ ತರಹದ ಕುಡಿಯುವ ನೀರಿನ ಬಾಟಲಿಗಳನ್ನು ಮಾರಾಟ ಹಾಗೂ ಸಂಗ್ರಹಿಸದಂತೆ ಹಾಗೆಯೇ ಸರ್ಕಾರದಿಂದ ನಿಷೇಧಿಸಿರುವ ಏಕ ಬಳಕೆ ಪ್ಲಾಸ್ಟಿಕ್ ಮಾರಾಟ ಮಾಡದಂತೆ, ಸಂಗ್ರಹಿಸುವುದನ್ನು ಕೂಡಲೇ ಸ್ಥಗಿತಗೊಳಿಸುವುದು ತಪ್ಪಿದ್ದಲ್ಲಿ ದಂಡ ವಿಧಿಸಲಾಗುವುದು ಹಾಗೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು…

Read More

ಮಡಿಕೇರಿ ಜೂ.11 NEWS DESK  : ಆಯುಷ್ ಇಲಾಖೆಯ ವತಿಯಿಂದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂ.21 ರಂದು ನಗರದ ಕಾವೇರಿ ಹಾಲ್ ನಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಆಯುಷ್ ಇಲಾಖಾ ಅಧಿಕಾರಿ ಡಾ. ಶೈಲಜಾ ಅವರು ಯೋಗ ದಿನಾಚರಣೆಯಂದು ಬೆಳಗ್ಗೆ 6.45 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ನಂತರ 7 ಗಂಟೆಯಿಂದ 8 ಗಂಟೆಯವರೆಗೆ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನಗೊಳ್ಳಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಕೂಡ ಪಾಲ್ಗೊಳ್ಳಲಿದ್ದು, ಯೋಗ ದಿನಾಚರಣೆಯ ಯಶಸ್ಸಿಗೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಹಕರಿಸುವಂತೆ ಮನವಿ ಮಾಡಿದರು. ಯೋಗ ದಿನಾಚರಣೆÉಗೆ ಪೂರ್ವಭಾವಿಯಾಗಿ ಜೂ.19 ರಂದು ಸಂಜೆ 5 ಗಂಟೆಗೆ ಯೋಗ ಪ್ರೊಟೋಕಾಲ್‍ನ ಪ್ರಕಾರ ಯೋಗಾಸನಗಳ ಪೂರ್ವಾಭ್ಯಾಸ ನಗರದ ಸರಕಾರಿ ಬಸ್ ಡಿಪೋ ಬಳಿಯ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ನಡೆಯಲಿದೆ. ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆಯಲ್ಲಿ ಜೂ.16 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ…

Read More