ಮಡಿಕೇರಿ ಮೇ 3 NEWS DESK : ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲೆಯಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ವಹಿಸಿಕೊಂಡರು. ಬೆನೆಡಿಕ್ಟ್ ಆರ್ ಸಲ್ಡಾನರ ನಿವೃತ್ತಿಯಿಂದ ತೆರವಾಗಿದ್ದ ಹುದ್ದೆಗೆ ಆಡಳಿತ ಮಂಡಳಿ ಆದೇಶದ ಮೇರೆಗೆ ಅಧಿಕಾರ ವಹಿಸಿಕೊಂಡಿದ್ದಾರೆ. ವೀಣಾ ಅವರು ಈ ಹಿಂದೆ ಆಂಗ್ಲ ವಿಭಾಗದ ಉಪನ್ಯಾಸಕರಾಗಿ ಮುಖ್ಯಸ್ಥರಾಗಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಓ.ಎಸ್ ಹಾಗೂ ಕೊಡಗು ವಿಶ್ವವಿದ್ಯಾಲಯದ ಬಿ.ಓ.ಇ ಆಗಿ ಸೇವೆ ಸಲ್ಲಿಸಿದ್ದಾರೆ. ಇದರೊಂದಿಗೆ ಕಾವೇರಿ ಕಾಲೇಜಿನ ಐ.ಕ್ಯೂ.ಎ.ಸಿ. ಸಂಯೋಜಕರಾಗಿ ಐದು ವರ್ಷ ಸೇವೆ ಸಲ್ಲಿಸಿದ್ದಾರೆ. ಕೊಡವ ಭಾಷೆಯ ಕವಿತೆಗಳನ್ನು ಆಂಗ್ಲ ಭಾಷೆಗೆ ಭಾಷಾಂತರವನ್ನು ಮಾಡಿದ್ದಾರೆ. ಇವರು ವಿರಾಜಪೇಟೆ ಸಮೀಪದ ನಾಂಗಾಲ ಗ್ರಾಮದ ವಕೀಲರಾದ ಕುಪ್ಪಂಡ ರವೀಂದ್ರ ಅವರ ಪತ್ನಿ.
ಲೇಖಕ: admin
ಮಡಿಕೇರಿ ಮೇ 3 NEWS DESK : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳಾಗಿದ್ದು, ಆ ದಿಸೆಯಲ್ಲಿ ಗ್ರಾ.ಪಂ ಗಳಿಗೆ ಸರ್ಕಾರ ಹೆಚ್ಚಿನ ಅಧಿಕಾರ ನೀಡಿದ್ದು, ಅದನ್ನು ನಿಯಮಾನುಸಾರ ಬಳಸುವಂತಾಗಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆಯ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ ಅವರು ತಿಳಿಸಿದ್ದಾರೆ. ತಾಲ್ಲೂಕಿನ ಹೊದ್ದೂರು ಗ್ರಾ.ಪಂ ಸಭಾಂಗಣದಲ್ಲಿ 2026-27 ನೇ ಸಾಲಿನ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆ ತಯಾರಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಗ್ರಾ.ಪಂ ಅಭಿವೃದ್ಧಿಗೆ ಕಾನೂನಿನ ಅಧಿಕಾರ ಚಲಾಯಿಸಬೇಕು. ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು ಎಂದು ಅವರು ನುಡಿದರು. ಪಂಚಾಯತ್ ರಾಜ್ ವ್ಯವಸ್ಥೆ ಬಲಿಷ್ಠವಾಗಿರಬೇಕು. ಆ ಮೂಲಕ ಗ್ರಾಮಗಳ ಅಭಿವೃದ್ಧಿ ಆಗಬೇಕು ಎಂದು ಡಿ.ಆರ್.ಪಾಟೀಲ ಅವರು ಹೇಳಿದರು. ಜನರ ಪ್ರತಿನಿಧಿಗಳು ಜನರೇ ಆಗಿದ್ದಾರೆ. ಆದ್ದರಿಂದ ಸ್ಥಳೀಯವಾಗಿಯೇ ಶಾಲೆ, ಆಸ್ಪತ್ರೆ, ಅಂಗನವಾಡಿ ಮತ್ತಿತರ ಅಗತ್ಯ ಹುದ್ದೆಗಳ ನೇಮಕವೂ ಆಗಬೇಕು ಎಂದು ಸಲಹೆ ಮಾಡಿದರು. ಕಾನೂನಿನ ಅಧಿಕಾರ ಹಸ್ತಾಂತರ ಆಗಬೇಕು. ಗ್ರಾಮ ಸಭೆಯ ನಿರ್ಣಯವೇ ಅಂತಿಮ ಆಗಬೇಕು.…
ಮಡಿಕೇರಿ ಮೇ 3 NEWS DESK : ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ಮೇ 5 ರಂದು ಸಂಜೆ 5 ಗಂಟೆಗೆ ಏರ್ಪಡಿಸಲಾಗಿದೆ. 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 29 ಮತ್ತು 30 ರಂದು ಕುಶಾಲನಗರ ತಾಲೂಕಿನ ಸುಂಟಿಕೊಪ್ಪದಲ್ಲಿ ನಡೆಯಲಿದೆ. ಆ ಸಮ್ಮೇಳನದ ಲಾಂಛನವನ್ನು ಕೂಡ ಈ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್ ವಹಿಸಲಿದ್ದಾರೆ. ಸಂಸ್ಥಾಪನಾ ದಿನದ ಕುರಿತು ಭಾಗಮಂಡಲ ಕಾವೇರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಬಿ ಬಿ ಶಿವಪ್ಪ ಉಪನ್ಯಾಸ ನೀಡಲಿದ್ದಾರೆ ಸಮ್ಮೇಳನದ ಲಾಂಛನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಬಿಡುಗಡೆಗೊಳಿಸಲಿದ್ದಾರೆ. ಸಂಸ್ಥಾಪನಾ ದಿನದ ಅಂಗವಾಗಿ ಕನ್ನಡ ನಾಡು ನುಡಿ ಗಾಗಿ ಸೇವೆ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾ ಅಧ್ಯಕ್ಷರಾದ…
ಮಡಿಕೇರಿ ಮೇ 15 NEWS DESK : ಕೊಡಗು ಜಿಲ್ಲಾ ಕುಲಾಲ(ಕುಂಬಾರ)ರ ಸಂಘದ ನೇತೃತ್ವದಲ್ಲಿ ಕ್ರೀಡೋತ್ಸವ ಪ್ರಯುಕ್ತ ಸಮ್ಮಿಲನ-2026 ಕಾರ್ಯಕ್ರಮ ಮೇ 16 ಮತ್ತು 17 ರಂದು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಕೆ.ದಾಮೋದರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕ್ರೀಡೋತ್ಸವದಲ್ಲಿ ಜಿಲ್ಲಾ ವ್ಯಾಪ್ತಿಯ 5ಸಾವಿರಕ್ಕೂ ಹೆಚ್ಚಿನ ಕುಲಬಾಂಧವರು ಭಾಗವಹಿಸುವ ನಿರೀಕ್ಷೆ ಇದೆ. ಇದು ಕೇವಲ ಒಂದು ಕ್ರೋಡೋತ್ಸವದ ಸಮ್ಮಿಲನ ಮಾತ್ರವಲ್ಲ. ಬದಲಿಗೆ ನಮ್ಮ ಸಮಾಜದ ಸ್ವಾಭಿಮಾನದ ಸಂಕೇತ. ನಮ್ಮ ಸಂಘಟನೆಯ ಈ ಹೆಜ್ಜೆಯು ಮುಂದಿನ ಪೀಳಿಗೆಗೆ ಮಾರ್ಗದರ್ಶಕವಾಗಲಿದೆ ಎಂದು ಹೇಳಿದರು. ಕ್ರೀಡಾಧ್ಯಕ್ಷ ಶಾಂತಕುಮಾರ್ ಮಾತನಾಡಿ, ಮೇ 16 ರಂದು ಬೆಳಿಗ್ಗೆ 7ಗಂಟೆಗೆ ಓಂಕಾರೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ ಕ್ರೀಡಾ ಜ್ಯೋತಿ ತಂದು ಕ್ರೀಡೋತ್ಸವಕ್ಕೆ ಚಾಲನೆ ನೀಡಲಾಗುವುದು. ಕ್ರಿಕೆಟ್ ಪಂದ್ಯಾಟದಲ್ಲಿ ವಿಜೇತ ತಂಡಕ್ಕೆ 20ಸಾವಿರ ರೂ., ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 10 ಸಾವಿರ ರೂ. ನಗದು ಹಾಗೂ…
ಮಡಿಕೇರಿ ಮೇ 3 NEWS DESK : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಗೌಡ ಕುಟುಂಬಗಳಿಗೆ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತವಾಗಿರುವ ಕ್ರೀಡಾಕೂಟದ ಕ್ರಿಕೆಟ್ ಪಂದ್ಯಾವಳಿಗೆ ಇಂದು ವಿಧ್ಯುಕ್ತ ಚಾಲನೆ ನೀಡಲಾಯಿತು. ಹಾಸನದ ಅಬಕಾರಿ ಇಲಾಖೆ ಉಪ ಆಯುಕ್ತರಾದ ನಂಗಾರು ಸುಮಿತ್ರ ನಿಂಗರಾಜು ಅವರು ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಪಂದ್ಯಾವಳಿಗೆ ಉತ್ತಮ ಸ್ಪಂದನೆ ದೊರಕಿರುವುದು ಸಂತೋಷದ ವಿಚಾರ. ಎಲ್ಲ ಕುಟುಂಬಗಳನ್ನು ಬೆಸೆಯಲು ಈ ಕ್ರೀಡಾಕೂಟ ಸಹಕಾರಿಯಾಗಲಿದೆ. ಯಾವುದೇ ವಯಸ್ಸಿನ ಮಿತಿ ಇಲ್ಲದೆ ಹಿರಿಯರು ಕಿರಿಯರು ಎನ್ನುವ ಭೇದ ಭಾವವಿಲ್ಲದೆ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದು, ಪಂದ್ಯಾವಳಿ ಯಶಸ್ಸನ್ನು ಕಾಣಲೆಂದು ಹಾರೈಸಿದರು. ಇದೇ ಸಂದರ್ಭ ಕೊಡಗು ಗೌಡ ಯುವ ವೇದಿಕೆ ಆಡಳಿತ ಮಂಡಳಿ ಹಾಗೂ ಕೊಡಗು ಕಾರ್ಯನಿರತ ಪತ್ರಕರ್ತರ ಸಂಘದ ನಡುವೆ ಉದ್ಘಾಟನಾ ಪಂದ್ಯ ನಡೆಯಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕಾರ್ಯನಿರತ ಪತ್ರಕರ್ತರ ಸಂಘ ಐದು ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕೆ…
ಮಡಿಕೇರಿ ಮೇ 3 NEWS DESK : ಸುಸಂಸ್ಕೃತ ಸಮಾಜ ನಿರ್ಮಾಣದಕ್ಕೆ ಬಂಟ ಸಮಾಜದ ಕೊಡುಗೆ ದೊಡ್ಡದಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ನ ಗುರುದೇವಾನಂದ ಸ್ವಾಮೀಜಿ ಬಣ್ಣಿಸಿದರು. ಕೊಡಗು ಜಿಲ್ಲಾ ಬಂಟರ ಭವನ ಟ್ರಸ್ಟ್ ಹಾಗೂ ಜಿಲ್ಲಾ ಬಂಟರ ಸಂಘದ ವತಿಯಿಂದ ಮಡಿಕೇರಿಯಲ್ಲಿ ಜರುಗಿದ ಬಂಟರ ಭವನ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಇಂದಿನ ಸಮಾಜಕ್ಕೆ ಸುಸಂಸ್ಕೃತ ಪ್ರಜೆಗಳ ಅಗತ್ಯವಿದೆ. ಮಕ್ಕಳಿಗೆ ಸಂಸ್ಕಾರ ಕಲಿಸುವ ಕಾರ್ಯವನ್ನು ಮನೆಯಿಂದಲೇ ಆರಂಭಿಸಬೇಕು. ಈ ವಿಚಾರದಲ್ಲಿ ಮಾತೆಯರಿಗೆ ಮಹತ್ತರ ಜವಾಬ್ದಾರಿ ಇದೆ ಎಂದರು. ನಾಡಿನ ವಿವಿಧೆಡೆ ಬಂಟರ ಭವನ ಇದೆ. ಆದರೆ ಕೊಡಗು ಜಿಲ್ಲೆಯಲ್ಲಿ ಸುಸಜ್ಜಿತವಾದ ಭವನ ಈವರೆಗೆ ಇರಲಿಲ್ಲ. ಉದ್ದೇಶಿತ ಯೋಜನೆ ಶೀಘ್ರವಾಗಿ ಈಡೇರಲು ಸಮುದಾಯ ಬಾಂಧವರೆಲ್ಲರು ಸಹೃದಯದಿಂದ ಸಂಘಟನೆ ಜೊತೆ ನಿಲ್ಲಬೇಕೆಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ನಾಡಿನಲ್ಲಿರುವ ಪ್ರಬಲ ಮತ್ತು ಪ್ರಭಾವಿ ಸಮುದಾಯಗಳಲ್ಲಿ ಬಂಟ ಸಮುದಾಯ…
ಮಡಿಕೇರಿ NEWS DESK ಮೇ 2 : ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆರ್ಥಿಕ ಸಹಕಾರ ನೀಡುವುದಾಗಿ ಭರವಸೆ ನೀಡಿದ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಮನ್ ಸುಖ್ ಮಾಂಡವಿಯಾ ಅವರು ಇದು ಕೊಡುಗೆಯಲ್ಲ, ಸರ್ಕಾರದ ಜವಾಬ್ದಾರಿ ಎಂದು ಹೇಳಿದರು. ನಾಪೋಕ್ಲುವಿನ ಚೆರಿಯಪರಂಬು ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ 26 ದಿನಗಳ ಕಾಲ ನಡೆದ ಹಾಕಿ ಉತ್ಸವ ಫೈನಲ್ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಹಿಂದೆ ಕೊಡವ ಕುಟುಂಬ ಹಾಕಿ ಕ್ರೀಡೆ ಬಗ್ಗೆ ಕೇಳಿದ್ದೆ. ಈಗ ನೋಡಿ ಸಂತೋಷವಾಯಿತು. ಅಂತರರಾಷ್ಟ್ರೀಯ ಒಲಂಪಿಕ್ ಕೌನ್ಸಿಲ್ ಕ್ರೀಡೆ ಒಂದು ಸಮುದಾಯದ ಒಗ್ಗೂಡುವಿಕೆಗೆ ಸಹಕಾರಿಯಾಗಬೇಕು ಎಂದಿದೆ. ಆದರೆ ಕೊಡವ ಸಮುದಾಯದ ಪೂರ್ವಜರು ಇದನ್ನು ಈ ಹಿಂದೆ ಮಾಡಿ ತೋರಿಸಿದ್ದಾರೆ ಇದು ಶ್ಲಾಘನೀಯ ಎಂದರು. 18 ಜನ ಒಲಂಪಿಯನ್ ನೀಡಿದ ಈ ಕೊಡವ ಭೂಮಿಗೆ ವಂದನೀಯ ಎಂದರು. ಕ್ರೀಡಾ ಪ್ರತಿಭೆಗಳಿರುವ ಕೊಡಗಿಗೆ ಪ್ರೋತ್ಸಾಹ ನೀಡುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಸಚಿವರು ಹೇಳಿದರು. ಕ್ರೀಡೆ…
ಮಡಿಕೇರಿ NEWS DESK ಮೇ 2 : ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಹಸ್ತ ಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕಾರ್ಯ ಯೋಜನೆ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಶನಿವಾರ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ದೇಶದಲ್ಲಿ ಸಾವಿರಾರು ವರ್ಷಗಳ ಇತಿಹಾಸವಿರುವ ವಿಜ್ಞಾನ, ಗಣಿತ, ಆರ್ಯುವೇದ, ತತ್ವಶಾಸ್ತ್ರ ಮತ್ತು ಸಾಹಿತ್ಯ ಸೇರಿದಂತೆ ಅಪಾರ ಸಂಪತ್ತು ಹಸ್ತಪ್ರತಿಗಳ ರೂಪದಲ್ಲಿ ಅಡಗಿದೆ. ಸಮಯ ಬದಲಾದಂತೆ, ಕಾಲ ಓಡಿದಂತೆ ಈ ಅಮೂಲ್ಯ ನಿಧಿ ಧೂಳು ಹಿಡಿದು, ಗೆದ್ದಲು ಪಾಲಾಗುತ್ತಿದೆ. ಇದರ ಹೊರತಾಗಿ ಕೆಲವು ವಿದೇಶಿ ವಸ್ತು ಸಂಗ್ರಹಾಲಯಗಳ ಪಾಲಾಗಿವೆ. ನಮ್ಮ ಪೂರ್ವಿಕರ ಆಸ್ತಿಯನ್ನು ಉಳಿಸಿಕೊಳ್ಳುವುದರ ಜೊತೆಗೆ ಭಾರತದ ಅಸ್ತಿತ್ವದ ಮರುಸ್ಥಾಪನೆ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ. ಹಸ್ತ ಪ್ರತಿಗಳನ್ನು ಸಂರಕ್ಷಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಸಂಸ್ಕೃತಿ ಸಚಿವಾಲಯ ʻಜ್ಞಾನ ಭಾರತಂʼ ಮಿಷನ್ ಯೋಜನೆಯನ್ನು ಜಾರಿಗೆ ತಂದಿದೆ. ಹಸ್ತಪ್ರತಿಗಳು ಕೇವಲ ಹಳೆಯ ಕಾಗದಗಳಾಗದೇ ಭಾರತೀಯ ಪರಂಪರೆಯ ಹುಟ್ಟು ಹಾಗೂ ಅದರ…
ಮಡಿಕೇರಿ NEWS DESK ಮೇ 2 : ಕ್ರೀಡೆಯಲ್ಲಿ ಕೊಡಗು ಜಿಲ್ಲೆ ಗಳಿಸಿದ ಯಶಸ್ಸು, ಕೀರ್ತಿ, ಸಾಧನೆ ಭಾರತ ದೇಶದ ಬೇರೆ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ ಎಂದು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ನವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊಡವ ಕೌಟುಂಬಿಕ ಹಾಕಿ ನಮ್ಮೆ 2026 ಚೇನಂಡ ಕಪ್ ಫೈನಲ್ ಪಂದ್ಯಾವಳಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಕೊಡಗು ದೇಶದಲ್ಲಿ ಪುಟ್ಟ ಜಿಲ್ಲೆಯಾಗಿದ್ದರೂ 18 ಒಲಂಪಿಯನ್ ಗಳನ್ನು ದೇಶಕ್ಕೆ ಕೊಡಗೆಯಾಗಿ ನೀಡಿದೆ.ಪುಟ್ಟ ಜಿಲ್ಲೆ ಕ್ರೀಡೆಯಲ್ಲಿ ದೊಡ್ಡ ಸಾಧನೆ ಮಾಡಿದೆ ಎಂದರೆ ಅದು ನಮಗೆ ಹೆಮ್ಮೆಯ ವಿಚಾರ ಎಂದು ಹೇಳಿದರು.ಕ್ರೀಡಾ ತರಬೇತಿ ಕೇಂದ್ರ ಸ್ಥಾಪನೆಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರು 30 ಕೋಟಿ ರೂಗಳ ಅನುದಾನವನ್ನು ಬಜೆಟ್ ನಲ್ಲಿ ಒದಗಿಸಿದ್ದು ರಾಜ್ಯ ಸಭಾ ಸದಸ್ಯರಾದ ಅಜಯ್ ಮಾಕನ್ ರವರು ಈ ಯೋಜನೆಗೆ ವರ್ಷಕ್ಕೆ 5 ಕೋಟಿ ರೂಗಳಂತೆ ಒಟ್ಟು 15 ಕೋಟಿ ರೂಗಳನ್ನು ಒದಗಿಸುತ್ತಿದ್ದಾರೆ…
ಮಡಿಕೇರಿ ಮೇ 1 NEWS DESK : ಬರಹ : ಗೀತಾಂಜಲಿ ಎನ್.ಎಮ್ ಸೋಮವಾರಪೇಟೆ* ಬುದ್ಧ ಎಂದರೆ ಹಾಗೇ ಶಾಂತಿ, ಸಮಾಧಾನ, ಮಂದಹಾಸ, ಆತ್ಮ ಜ್ಞಾನ ಹಾಗೂ ಅಂತರಾಳದೊಳಗಿನ ಒಂದು ನೆಮ್ಮದಿಯ ಅನುಭವ. ಜೀವನ ಕೆಲವೊಮ್ಮೆ ಗೊಂದಲಗಳ ಗೂಡಾಗಿರುತ್ತದೆ ಅಂತಹ ಸಮಯದಲ್ಲಿ ಮನ ಸಾಂತ್ವನ,ಸಮಾಧಾನ ಬೇಡುತ್ತದೆ.ಹಾಗಾದಾಗ ಆ ಎಲ್ಲಾ ಗೊಂದಲಗಳ ಮಧ್ಯೆ ಮನಸಿಗೆ ತಂಪು ನೀಡಿ ಸಾಂತ್ವನವನ್ನು ಪಸರಿಸುವ ಒಂದು ನಿಶ್ಶಬ್ದದ ಶಕ್ತಿ ಎಂದರೆ ಅದು ಬುದ್ಧನ ತತ್ವಗಳು ಮತ್ತು ಚಿಂತನೆಗಳು ಎಂದರೆ ತಪ್ಪಿಲ್ಲ…! ಬುದ್ಧನ ಚಿಂತನೆಗಳು ಕೇವಲ ಧಾರ್ಮಿಕ ಮಿತಿಗಳಲ್ಲಿ ಸೀಮಿತವಾಗಿಲ್ಲ, ಅವು ಸಾಮಾಜಿಕ ಸಮಾನತೆ, ನೈತಿಕತೆ ಮತ್ತು ಮಾನವೀಯತೆಯ ಪರಿಕಲ್ಪನೆಗಳನ್ನು ಕೂಡ ಬಲಪಡಿಸುತ್ತವೆ. ಜಾತಿ-ಭೇದ ಮತ್ತು ಅಂಧ ಶ್ರದ್ಧೆಗಳ ವಿರುದ್ಧ ಧ್ವನಿಯಾಗಿದ್ದ ಅವರು ಸ್ಥಾಪಿಸಿದ ಬೌದ್ಧ ಧರ್ಮವು ಸಮಾಜದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿ ನವ ನವೀನ ಚಿಂತನೆಗಳಿಗೆ ದಾರಿಮಾಡಿಕೊಟ್ಟಿತು. ಮಾನವ ಜೀವನದ ಆಳವಾದ ಸತ್ಯಗಳನ್ನು ಅನ್ವೇಷಿಸಿ, ‘ಆಸೆಯೇ ದುಃಖಕ್ಕೆ ಮೂಲ’ವೆಂಬ ಸತ್ಯ ಸಂದೇಶ ಸಾರಿದ ಬುದ್ಧ, ದುಃಖದ ಮೂಲ…






