ಲೇಖಕ: admin

ಮಡಿಕೇರಿ NEWS DESK ಆ.18 : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅಧ್ಯಯನ ನಡೆಸುವ ಮೂಲಕ ಅದಕ್ಕೆ ಒದಗಿ ಬಂದಿರುವ ಅಪಾಯವನ್ನು ತಪ್ಪಿಸಿ ಸಂರಕ್ಷಿಸುವತ್ತ ಮುಂದಾಗಬೇಕೆ0ದು ಸಮಾಜ ಸೇವಕ ಹಾಗೂ ಸಾಹಿತಿ ನಾಪಂಡ ಮುದ್ದಪ್ಪ ಅವರು ಕರೆ ನೀಡಿದ್ದಾರೆ. ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಂಡಿರುವ ಹೆಬ್ಬಾಲೆ ಪ್ರೌಢಶಾಲೆಯ ಮೇಲ್ಚಾವಣಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮೂಲ ಆಶಯಗಳನ್ನು ಅರಿತು ಅದರಂತೆ ನಡೆಯುವ ಮೂಲಕ ಅದರ ಮೌಲ್ಯವನ್ನು ಗೌರವಿಸಬೇಕು. ಕಳೆದ ಹಲವು ವರ್ಷಗಳಿಂದಲೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನು ನಡೆಸದೇ ಚುನಾಯಿತ ಸರಕಾರಗಳು ನಿರ್ಲಕ್ಷ್ಯ ವಹಿಸಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ಮಾಡುತ್ತಿರುವ ಅಪಚಾರವಾಗಿದೆ ಎಂದು ಮುದ್ದಪ್ಪ ವಿಷಾದಿಸಿದರು. ಹೆಬ್ಬಾಲೆಯ ಮಾಜಿ ಯೋಧ ಹೆಚ್.ಎಸ್.ಕೃಷ್ಣಪ್ಪ ಅವರು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಅಗತ್ಯವಿದ್ದಷ್ಟೇ ಬಳಸಬೇಕು. ವಿದ್ಯೆಗಿಂತಲೂ ಮುಖ್ಯವಾಗಿ ಉತ್ತಮ ಸಂಸ್ಕಾರಗಳನ್ನು ಹೊಂದಬೇಕು. ದೇಶಸೇವೆಗೆ ಸದಾ ಕಟಿಬದ್ಧರಾಗಿರಬೇಕು ಎಂದು ಕರೆ ನೀಡಿದರು. ಸಮಾಜ ಸೇವಕ ಹಾಗೂ ಉದ್ಯಮಿ ನಾಪಂಡ ಮುತ್ತಪ್ಪ ಅವರು ಮಾತನಾಡಿ ವಿದ್ಯಾರ್ಥಿಗಳು…

Read More

ಮಡಿಕೇರಿ NEWS DESK ಆ.18 : ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಭಾಗವಹಿಸಿದ್ದ ವೇದಿಕೆಯನ್ನು ಹೋಮ-ಹವನದ ಮೂಲಕ ಶುದ್ಧೀಕರಣ ಮಾಡಿದ ಪ್ರಕರಣಕ್ಕೆ ಸಂಬ0ಧಿಸಿದ0ತೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ಧನ್ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಂ.ಎಸ್.ವೀರೇ0ದ್ರ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇಂತಹ ಕೃತ್ಯಗಳು ಖಂಡನೀಯವಾಗಿದ್ದು, ಭಾರತ ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಗೌರವ ತೋರುವ ಬೆಳವಣಿಗೆಯಾಗಿದೆ. ಜಾತಿವಾದಿ ಹಾಗೂ ಕೋಮುವಾದಿ ಮನಸ್ಥಿತಿಯ ಕೆಲವರು ನಡೆಸಿರುವ ಈ ಕೃತ್ಯ ಜಗತ್ತಿನ ಮುಂದೆ ಭಾರತ ತಲೆತಗ್ಗಿಸುವಂತಾಗಿದೆ ಎಂದು ಆರೋಪಿಸಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 80 ವರ್ಷಗಳಾದರೂ ಜಾತಿವಾದಿಗಳಿಂದ ಸಂವಿಧಾನದ ಆಶಯಗಳಿಗೆ ಧಕ್ಕೆ ತರುವಂತಹ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಘಟನೆಗಳು ಈ ಹಿಂದೆ ಜನಸಾಮಾನ್ಯರ ಮೇಲೂ ನಡೆದಿದ್ದು, ಇದೀಗ ಪ್ರಜಾಪ್ರಭುತ್ವ ವ್ಯವಸ್ಥೆಯ…

Read More

ಮಡಿಕೇರಿ NEWS DESK ಆ.18 : ನಗರಸಭೆ ವ್ಯಾಪ್ತಿಯ ವಿವಿಧ ಶಾಲೆಗಳಾದ ಮೈಸೂರು ರಸ್ತೆಯ ಚರ್ಚ್ ಸಮೀಪದ ಶಾಲೆ, ಹಿಂದೂಸ್ತಾನಿ ಶಾಲೆ, ನಗರಸಭಾ ಹಿರಿಯ ಪ್ರಾಥಮಿಕ ಶಾಲೆ ಮತ್ತು ಎ.ವಿ. ಶಾಲೆಗಳ ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ ಮಾಡುವ ಮೂಲಕ ಮಡಿಕೇರಿ ನಗರ ಯುವ ಕಾಂಗ್ರೆಸ್ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣಗೊಳಿಸಿತು. ಸ್ವಾತಂತ್ರ‍್ಯ ದಿನಾಚರಣೆ ಸಮಾಜದ ಪ್ರತಿಯೊಬ್ಬರಿಗೂ ಸ್ಪಂದಿಸುವ ಹಾಗೂ ಅಗತ್ಯವಿರುವವರಿಗೆ ನೆರವಾಗುವ ದಿನವಾಗಬೇಕು. ಮಳೆ ಹಾಗೂ ಬಿಸಿಲಿನಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳ ದೈನಂದಿನ ಅಗತ್ಯಗಳಿಗೆ ಸ್ಪಂದಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುವ ಪ್ರಯತ್ನ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೋಮಣ್ಣ, ನಗರಸಭಾ ಮಾಜಿ ಉಪಾಧ್ಯಕ್ಷ ಟಿ.ಎಂ.ಅಯ್ಯಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುದಯ್ ನಾಣಯ್ಯ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ರಾಹುಲ್ ಮಾರ್ಷಲ್…

Read More

ಮಡಿಕೇರಿ NEWS DESK ಆ.18 : ನಗರಸಭೆ ವ್ಯಾಪ್ತಿಯ ವಿವಿಧ ಶಾಲೆಗಳಾದ ಮೈಸೂರು ರಸ್ತೆಯ ಚರ್ಚ್ ಸಮೀಪದ ಶಾಲೆ, ಹಿಂದೂಸ್ತಾನಿ ಶಾಲೆ, ನಗರಸಭಾ ಹಿರಿಯ ಪ್ರಾಥಮಿಕ ಶಾಲೆ ಮತ್ತು ಎ.ವಿ. ಶಾಲೆಗಳ ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ ಮಾಡುವ ಮೂಲಕ ಮಡಿಕೇರಿ ನಗರ ಯುವ ಕಾಂಗ್ರೆಸ್ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣಗೊಳಿಸಿತು. ಸ್ವಾತಂತ್ರ‍್ಯ ದಿನಾಚರಣೆ ಸಮಾಜದ ಪ್ರತಿಯೊಬ್ಬರಿಗೂ ಸ್ಪಂದಿಸುವ ಹಾಗೂ ಅಗತ್ಯವಿರುವವರಿಗೆ ನೆರವಾಗುವ ದಿನವಾಗಬೇಕು. ಮಳೆ ಹಾಗೂ ಬಿಸಿಲಿನಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳ ದೈನಂದಿನ ಅಗತ್ಯಗಳಿಗೆ ಸ್ಪಂದಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುವ ಪ್ರಯತ್ನ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೋಮಣ್ಣ, ನಗರಸಭಾ ಮಾಜಿ ಉಪಾಧ್ಯಕ್ಷ ಟಿ.ಎಂ.ಅಯ್ಯಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುದಯ್ ನಾಣಯ್ಯ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ರಾಹುಲ್ ಮಾರ್ಷಲ್…

Read More

ಮಡಿಕೇರಿ NEWS DESK ಆ.18 : ನಗರಸಭೆ ವ್ಯಾಪ್ತಿಯ ವಿವಿಧ ಶಾಲೆಗಳಾದ ಮೈಸೂರು ರಸ್ತೆಯ ಚರ್ಚ್ ಸಮೀಪದ ಶಾಲೆ, ಹಿಂದೂಸ್ತಾನಿ ಶಾಲೆ, ನಗರಸಭಾ ಹಿರಿಯ ಪ್ರಾಥಮಿಕ ಶಾಲೆ ಮತ್ತು ಎ.ವಿ. ಶಾಲೆಗಳ ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ ಮಾಡುವ ಮೂಲಕ ಮಡಿಕೇರಿ ನಗರ ಯುವ ಕಾಂಗ್ರೆಸ್ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣಗೊಳಿಸಿತು. ಸ್ವಾತಂತ್ರ‍್ಯ ದಿನಾಚರಣೆ ಸಮಾಜದ ಪ್ರತಿಯೊಬ್ಬರಿಗೂ ಸ್ಪಂದಿಸುವ ಹಾಗೂ ಅಗತ್ಯವಿರುವವರಿಗೆ ನೆರವಾಗುವ ದಿನವಾಗಬೇಕು. ಮಳೆ ಹಾಗೂ ಬಿಸಿಲಿನಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳ ದೈನಂದಿನ ಅಗತ್ಯಗಳಿಗೆ ಸ್ಪಂದಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುವ ಪ್ರಯತ್ನ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೋಮಣ್ಣ, ನಗರಸಭಾ ಮಾಜಿ ಉಪಾಧ್ಯಕ್ಷ ಟಿ.ಎಂ.ಅಯ್ಯಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುದಯ್ ನಾಣಯ್ಯ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ರಾಹುಲ್ ಮಾರ್ಷಲ್…

Read More

ಮಡಿಕೇರಿ ಆ.17 NEWS DESK : ಶ್ರೀ ಕೋಟಿ ಮಹಾಗಣಪತಿ ದಸರಾ ದಶಮಂಟಪ ಸಮಿತಿ ವತಿಯಿಂದ 2026-27ನೇ ಸಾಲಿನ ದಸರಾ ದಶಮಂಟಪ ಸಮಿತಿಯ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಶ್ರೀ ಕೋಟೆ ಮಹಾಗಣಪತಿ ದೇವಾಲಯದ ಆವರಣದಲ್ಲಿ ನಡೆಯಿತು. ಕೋಟೆ ಮಹಾಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶ್ರೀ ಕರವಲೆ ಭಗವತಿ ದೇವಾಲಯದಿಂದ ಆಯ್ಕೆಯಾದ ನೂತನ ದಶಮಂಟಪ ಸಮಿತಿಯ ಪದಾಧಿಕಾರಿಗಳಿಗೆ ಅಧಿಕಾರವನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಂ. ಹರೀಶ್, ಕಳೆದ ಬಾರಿಯಂತೆ ಈ ಬಾರಿಯೂ ತಮ್ಮ ದೇವಾಲಯಕ್ಕೆ ಸಂಪೂರ್ಣ ಸಹಕಾರ ಮತ್ತು ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಇದೇ ವೇಳೆ 2026-27ನೇ ಸಾಲಿನ ದಶಮಂಟಪ ಸಮಿತಿ ಅಧ್ಯಕ್ಷ ಸಜನ್ ಪೂಣಚ್ಚ ಅವರಿಗೆ ಹಿಂದಿನ ಸಮಿತಿಯ ಎಲ್ಲಾ ದಾಖಲೆಗಳನ್ನು ಒಳಗೊಂಡ ಕಡತವನ್ನು ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷ ಮಹೇಶ್ ಶೈನಿ, ಸದಸ್ಯೆ ಸವಿತಾ ರಾಕೇಶ್, ನಗರ ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಉಮೇಶ್ ಸುಬ್ರಮಣಿ, ಕೋಟೆ ಗಣಪತಿ ಸಮಿತಿ…

Read More

ಮಡಿಕೇರಿ, ಆ.17 NEWS DESK : ಕೊಡವ ಜನಪದೀಯ ಸಾಹಿತ್ಯವನ್ನು ಜೀವಂತವಾಗಿಡುವ ಉದ್ದೇಶದಿಂದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕೊಡವ ಪುಸ್ತಕ ಪತ್ತಾಯ’ ಯೋಜನೆಯನ್ನು ವಿದ್ಯಾಸಂಸ್ಥೆಗಳು, ಐನ್‌ಮನೆಗಳು, ಸಂಘ-ಸಂಸ್ಥೆಗಳು ಹಾಗೂ ಸಮಾಜಗಳಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಹೇಳಿದರು. ಅರಮೇರಿ ಕಳಂಚೇರಿಯ ಶ್ರೀ ಶಾಂತಮಲ್ಲ ಸ್ವಾಮೀಜಿ ವಿದ್ಯಾಸಂಸ್ಥೆಯಲ್ಲಿ ಅಕಾಡೆಮಿಯ 17ನೇ ‘ಕೊಡವ ಪುಸ್ತಕ ಪತ್ತಾಯ’ ಅನಾವರಣ ಕಾರ್ಯಕ್ರಮವನ್ನು ಸಂಸ್ಥೆಯ ಸಂಸ್ಥಾಪಕರಾದ ಶಾಂತಮಲ್ಲ ಸ್ವಾಮೀಜಿಯವರ 29ನೇ ಗುರುಸ್ಮರಣೆಯ ಅಂಗವಾಗಿ ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗಿನ ನೆಲದಲ್ಲಿ ಅನಾದಿ ಕಾಲದಿಂದಲೂ ವಿಭಿನ್ನ ಸಂಸ್ಕೃತಿ ಹಾಗೂ ಸಂಸ್ಕಾರಯುತ ಸಾಮಾಜಿಕ ಬದುಕು ಬೆಳೆದು ಬಂದಿದೆ. ಸರ್ವರೂ ಸಹೋದರತೆ, ಸೌಹಾರ್ದತೆ ಹಾಗೂ ಸಮಾನತೆಯಿಂದ ಬದುಕು ರೂಪಿಸಿಕೊಂಡಿರುವುದು ದೇಶಕ್ಕೆ ಮಾದರಿಯಾಗಿದೆ. ಶಾಲಾ ಜೀವನದಲ್ಲೇ ಮಕ್ಕಳು ಇಂತಹ ಮೌಲ್ಯಗಳನ್ನು ಅರಿತುಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಶಾಲಾ ಪಠ್ಯದ ಜತೆಗೆ ಜೀವನ ಮೌಲ್ಯಗಳನ್ನು ತಿಳಿದುಕೊಳ್ಳಲು ಮಕ್ಕಳಿಗೆ ಪ್ರತಿದಿನ ಕನಿಷ್ಠ ಅರ್ಧ ಗಂಟೆಯಾದರೂ ಗ್ರಂಥಾಲಯದಲ್ಲಿ ಕತೆ, ಕಾದಂಬರಿ…

Read More

ಮಡಿಕೇರಿ, ಆ.17 NEWS DESK : ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಯನ್ಸ್ ಸಂಸ್ಥೆ ಮಡಿಕೇರಿ ವತಿಯಿಂದ ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಐವರು ಪೌರಕಾರ್ಮಿಕರನ್ನು ಗುರುತಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ. ಲೋಕೇಶ್ ಹಾಗೂ ಕರ್ನಾಟಕ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಎಸ್.ಆರ್. ಮೆಹರೋಜ್ ಖಾನ್ ಅವರು ಪೌರಕಾರ್ಮಿಕರನ್ನು ಗೌರವಿಸಿದರು. ಐವರು ಪೌರಕಾರ್ಮಿಕರಿಗೆ ಪ್ರಶಂಸನಾ ಪತ್ರ ನೀಡಿ, ಶಾಲು ಹೊದಿಸಿ ಸನ್ಮಾನಿಸಲಾಯಿತು. ಜೊತೆಗೆ ಪ್ರತಿಯೊಬ್ಬರಿಗೂ ತಲಾ ₹2,000 ನಗದು ಪ್ರೋತ್ಸಾಹಧನ ನೀಡಿ ಅವರ ನಿಸ್ವಾರ್ಥ ಸೇವೆಯನ್ನು ಗೌರವಿಸಲಾಯಿತು. ಮಳೆ, ಬಿಸಿಲು ಸೇರಿದಂತೆ ಪ್ರತಿಕೂಲ ಹವಾಮಾನದಲ್ಲಿಯೂ ಕರ್ತವ್ಯ ನಿರ್ವಹಿಸಿ ನಗರದ ಸ್ವಚ್ಛತೆ ಹಾಗೂ ಸೌಂದರ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಶ್ಲಾಘನೀಯವಾಗಿದೆ. ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆಯ ಹಿಂದೆ ಅವರ ಪರಿಶ್ರಮ ಮಹತ್ವದ ಪಾತ್ರ ವಹಿಸುತ್ತಿದ್ದು, ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿರುವುದು…

Read More

ಸುಂಟಿಕೊಪ್ಪ ಆ.17 NEWS DESK : ಕಿಡಗರಹಳ್ಳಿ ಬೈತುರಪ್ಪ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ಆಚರಿಸಲಾಯಿತು. ನಾಗರ ಪಂಚಮಿ ಅಂಗವಾಗಿ ದೇವಾಲಯದಲ್ಲಿ ವಿವಿಧ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ದೇವಾಲಯದ ಪ್ರಧಾನ ಅರ್ಚಕ ರಾಘವೇಂದ್ರ ಭಟ್ ಅವರು ಅಭಿಷೇಕ ಸೇರಿದಂತೆ ವಿಶೇಷ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಾಲಯದ ಪಾರುಪತ್ಯದಾರ ಅಕ್ಕಪಂಡ ಎ. ರಾಜೇಂದ್ರ, ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ನೂರಾರು ಭಕ್ತರು ಪಾಲ್ಗೊಂಡು ವಿಶೇಷ ಪೂಜೆಯಲ್ಲಿ ಭಾಗವಹಿಸಿದರು. ಭಕ್ತರು ನಾಗದೇವರಿಗೆ ಪೂಜೆ ಸಲ್ಲಿಸಿ, ಕುಟುಂಬದ ಸುಖ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.

Read More

ಮಡಿಕೇರಿ ಆ.17 NEWS DESK : ಕೊಡಗು ಪತ್ರಕರ್ತರ ಸಂಘದ ವತಿಯಿಂದ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಅಂಗವಾಗಿ ನೀಡಲಾಗುವ ವಾರ್ಷಿಕ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಅವರು ಪುತ್ರಿ ಡಾ. ಅನುಶ್ರೀ ಅವರ ‘ಹ್ಯಾಪಿಟೀತ್ ಡೆಂಟಲ್ ಕ್ಲಿನಿಕ್’ ಹೆಸರಿನಲ್ಲಿ ಸ್ಥಾಪಿಸಿರುವ ಮಾನವೀಯ ಮೌಲ್ಯಗಳನ್ನು ಒಳಗೊಂಡ ಅತ್ಯುತ್ತಮ ಛಾಯಾಚಿತ್ರ ಪ್ರಶಸ್ತಿಗೆ, ಶಕ್ತಿ ದಿನಪತ್ರಿಕೆಯಲ್ಲಿ ಪ್ರಕಟಗೊಂಡ ಉಪಸಂಪಾದಕ ಉಜ್ವಲ್ ರಂಜಿತ್ ಅವರ ‘ನೋವಿಂದ ನರಳುತ್ತಿರುವ ಗಜರಾಜ’ ಚಿತ್ರ ಆಯ್ಕೆಯಾಗಿದೆ. ಮಳೆಗಾಲದ ಪ್ರಕೃತಿ ಸೌಂದರ್ಯವನ್ನು ಬಿಂಬಿಸುವ ಅತ್ಯುತ್ತಮ ವೀಡಿಯೋಗ್ರಫಿಗಾಗಿ ನೀಡಲಾಗುವ ಪ್ರಶಸ್ತಿಗೆ ಕೊಡಗು ಚಾನೆಲ್‌ನ ಕ್ಯಾಮೆರಾಮನ್ ಹನೀಫ್ ಅವರ ವೀಡಿಯೋ ಆಯ್ಕೆಯಾಗಿದೆ. ಗುಂಡುಕುಟ್ಟಿ ಎಸ್ಟೇಟ್ ಮಾಲೀಕ ಜಿ.ಎಂ..ಮಹೇಂದ್ರ ಅವರು ತಮ್ಮ ತಂದೆ ಜಿ.ಎಂ. ಮೋಹನ್ ಹೆಸರಿನಲ್ಲಿ ನೀಡುವ ದತ್ತಿನಿಧಿ ಪ್ರಶಸ್ತಿ ಕಾಫಿ ಉದ್ಯಮದ ಕುರಿತ ವರದಿಗೆ ವಿನೋದ್ ಮೂಡಗಡ್ಡೆ ಅವರ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟಗೊಂಡ ಕಾಫಿ ಬೆಳೆಯಿಂದ ಹಸನಾದ ಕೃಷಿಕ ವರದಿ ಪ್ರಶಸ್ತಿ ಪಡೆದುಕೊಂಡಿದೆ. ದೇವನಹಳ್ಳಿಯ ಸಮಾಜಸೇವಕ ಮಂಡಿಬೆಲೆ…

Read More